ನಿತ್ಯ ಭವಿಷ್ಯ
ಶ್ರಾವಣ ಸೋಮವಾರ ಜ್ಯೋತಿಷ್ಯ ವಾಣಿ ಸಮಸ್ಯೆಗಳಿಗೆ ಪರಿಹಾರ ಮಾರ್ಗದರ್ಶನ : 19/08/2019 ಸೋಮವಾರ
ಶ್ರೀ ಗುರು ರಾಘವೇಂದ್ರ ಸ್ವಾಮಿ ಅನುಗ್ರಹ ಶಕ್ತಿಯಿಂದ ನಿಮ್ಮ ಸರ್ವ ರೀತಿಯ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು PH:- 9900494333.
ಮೇಷ ರಾಶಿ
ನಿಮಗೆ ಈ ದಿನ ಕುಟುಂಬದಲ್ಲಿ ವಿವಾಹದ ಶುಭ ಕಾರ್ಯಗಳು ನಡೆಯಬಹುದು. ಉದ್ಯೋಗದಲ್ಲಿ ಅಧಿಕಾರ-ಪ್ರಾಪ್ತಿ ಸನ್ಮಾನಗಳು ನಡೆಯುವಂತ ಸಂಭವ ಬರುತ್ತದೆ. ಈದಿನ ದೈವಬಲ ಇರುವ ಸಮಯವಾಗಿದೆ. ಪ್ರಯೋಗ ನಿಮ್ಮಲ್ಲಿ ಕಾಣುವುದು. ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ವಾಹನ ಅಪಘಾತ ಸಂಭವ ಇರುತ್ತದೆ. ಹಣಕಾಸಿನ ಪರಿಸ್ಥಿತಿ ಸಾಧರಣವಾಗಿರುತ್ತದೆ. ಶಿವನಿಗೆ ಅಭಿಷೇಕ ಮಾಡುವುದು ಶುಭವಾಗಿರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಷಭ ರಾಶಿ
ಈ ದಿನದಲ್ಲಿ ಬಂಧುಗಳು ನಿಮಗೆ ಸಹಾಯ ಮಾಡುವವರು. ಕುಟುಂಬದಲ್ಲಿನ ಪುತ್ರರಲ್ಲಿ ಕಲಹ ಕಾಣಬಹುದು. ನಿಮ್ಮ ಧಾರ್ಮಿಕ ಕಾರ್ಯಗಳಿಗೆ ವಿಘ್ನ ಉಂಟಾಗಬಹುದು. ಅಧಿಕ ಹಿತಶತ್ರುಗಳು ಅಧಿಕವಾಗಿರುವುದು. ವಿದೇಶದಲ್ಲಿ ಜೀವನ ದುಃಖಮಯ ವಾಗಿರುವುದು. ಆರೋಗ್ಯದ ಬಗ್ಗೆ ಗಮನವಿರಲಿ. ಆರ್ಥಿಕ ಪರಿಸ್ಥಿತಿಯು ಸುಧಾರಣೆಯತ್ತ ಸಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮನ್ನು ವಂಚಿಸಬಹುದು. ಗಿರಿಜಾ ಕಲ್ಯಾಣ ಪೂಜೆ ಮಾಡಿಸುವುದರಿಂದ ಶುಭವಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಿಥುನ ರಾಶಿ
ನಿಮಗೆ ಈ ದಿನ ಋಣಭಾದೆ ಗಳು ಕಡಿಮೆಯಾಗುತ್ತದೆ. ಆರೋಗ್ಯದಲ್ಲಿ ಮನಃಶಾಂತಿ ಇರುವುದಿಲ್ಲ. ನಿಮ್ಮ ಮಿತ್ರರಲ್ಲಿ ವಿನಾಕಾರಣ ವಿರೋಧಗಳು ಉಂಟಾಗುತ್ತದೆ. ಶತ್ರುಗಳು ನಿಮ್ಮನ್ನು ಕಂಡು ಬಾಧಿಸುವುದು ಪತ್ನಿ ಪುತ್ರರಿಂದ ಈದಿನ ದೂರವಿರ ಬೇಕಾಗಬಹುದು. ನಿರಂತರ ಪ್ರಯಾಣವನ್ನು ಮಾಡುವಿರಿ. ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಬಹುದು. ನಿಮಗೆ ಮನೋಧೈರ್ಯ ಅಧಿಕವಾಗಿ ಕಂಡುಬರುತ್ತದೆ. ಶಿವಮಾನಸ ಸ್ತ್ರೋತ್ರವನ್ನು ಪಠಿಸುವುದರಿಂದ ಶುಭವಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕರ್ಕಾಟಕ ರಾಶಿ
ಎಲ್ಲಾ ವಿಷಯಗಳಲ್ಲಿ ಈ ದಿನ ಆತ್ಮವಿಶ್ವಾಸ ಉತ್ತಮವಾಗಿ ಕಂಡುಬರುತ್ತದೆ. ಧಾರ್ಮಿಕ ಕಾರ್ಯಗಳನ್ನು ಈ ದಿನ ಮಾಡಬಹುದು. ದೀರ್ಘಕಾಲ ಪ್ರಯಾಣ ಮಾಡುವ ಸಂಭವ ಉಂಟಾಗಬಹುದು. ಮಾನಸಿಕ ಚಿಂತೆ ಬಾಧಿಸುತ್ತದೆ. ದಾಂಪತ್ಯದಲ್ಲಿ ವಿರಸ ವಾಗಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭವನ್ನು ಗಳಿಸುತ್ತೀರಿ. ಹೆಸರು ಕೀರ್ತಿ ಗಳಿಸಬಹುದು. ಈದಿನ ಶ್ರಮ ಜಾಸ್ತಿ ಇರುತ್ತದೆ. ಕಾಳಹಸ್ತಿ ಕ್ಷೇತ್ರ ದರ್ಶನ ಮಾಡಿ ಪೂಜೆ ಮಾಡಬೇಕು. ವಿವಾಹದ ವಿಷಯಗಳು ತಿರುಗಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಸಿಂಹ ರಾಶಿ
ನಿಮಗೆ ಈ ದಿನ ಸಂಪೂರ್ಣ ದೈವಬಲ ದೊರೆಯುವುದು. ಅನಿರೀಕ್ಷಿತ ಫಲಗಳು ಮೂಡಬಹುದು. ಯಾವುದಾದರೂ ಒಂದು ಕಾರ್ಯದಲ್ಲಿ ಅಪಕೀರ್ತಿ ಬರುತ್ತದೆ. ಉತ್ತಮ ಅವಕಾಶಗಳಿಂದ ವಂಚಿತರಾಗಬಹುದು. ಗುಪ್ತರೋಗ ಬಾದೆಗಳು ನಿಮ್ಮನ್ನು ಈದಿನ ಕಾಡುತ್ತವೆ. ವೃತ್ತಿಯಲ್ಲಿ ಬದಲಾವಣೆ ಹೊಂದುವುದರಿಂದ ವಿಪರೀತ ಖರ್ಚು ಮತ್ತು ವ್ಯಥಾ ತಿರುಗಾಟ ಕಂಡುಬರಬಹುದು. ದಾನಧರ್ಮಗಳನ್ನು ಮಾಡುವುದರಿಂದ ಶುಭಫಲಗಳು ಉಂಟಾಗುತ್ತದೆ. ಈಶ್ವರನಿಗೆ ಲಘು ರುದ್ರಾಭಿಷೇಕ ಮಾಡಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕನ್ಯಾ ರಾಶಿ
ಪರಸ್ಥಳಕ್ಕೆ ಹೋಗುವ ಸಂಭವ ಒದಗಿಬರುತ್ತದೆ. ಮೋಸ ಹೋಗುವ ಸಂಭವ ಕೂಡ ಇರುತ್ತದೆ. ಈ ದಿನ ಬಹಳ ಆರೋಗ್ಯವಂತರಾಗಿ ಇರಬಹುದು. ವ್ಯವಹಾರದಲ್ಲಿ ಜಯ ಲಭಿಸುತ್ತದೆ. ಬಂದು ಬಾಂಧವರಲ್ಲಿ ಮನಸ್ತಾಪ ತೊಂದರೆ ಅನುಭವಿಸಬಹುದು. ದುಷ್ಟ ಶಕ್ತಿಗಳ ಪ್ರಭಾವಕ್ಕೆ ಒಳಗಾಗಬಹುದು. ಪಿತ್ರಾರ್ಜಿತ ಆಸ್ತಿ ಕಳೆದುಕೊಳ್ಳುವ ಸಂಭವ ಇರುತ್ತದೆ. ಆತ್ಮವಿಶ್ವಾಸ ಕೂಡ ಹೆಚ್ಚಿಗೆ ಇರುವುದಿಲ್ಲ. ವಿವಾಹಕ್ಕೆ ವಿಘ್ನ ಉಂಟಾಗಬಹುದು. ವ್ಯಾಪಾರದಲ್ಲಿ ಲಾಭ ನಷ್ಟ ಸರಿಯಾಗಿ ಇರುತ್ತದೆ. ಸುದರ್ಶನ ಮೂಲ ಮಂತ್ರ ಜಪ ಮಾಡಬೇಕು ದುರ್ಗಾ ಪಾರಾಯಣ ಮಾಡಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ತುಲಾ ರಾಶಿ
ಈ ದಿನ ನಿಮ್ಮ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಸಹೋದರರ ಸಹೋದರಿಯರ ಸಹಕಾರ ಸಿಗುತ್ತದೆ. ದೈವಬಲ ಕಡಿಮೆ ಇರುತ್ತದೆ. ಅದರಿಂದ ಬಂದು ಜನರ ವಿರೋಧ ಕಾಣಬಹುದು. ಸಂತಾನಕ್ಕೆ ತೊಂದರೆಗಳು ಉಂಟಾಗುತ್ತವೆ. ಅಪಘಾತದ ಭಯ ನಿಮ್ಮನ್ನು ಕಾಡುತ್ತದೆ. ನೇತ್ರ ಬಾದೆ ಇಂದ ತೊಂದರೆಗಳು ಅನುಭವಿಸಬಹುದು. ಕೆಲವು ಕೆಲಸ ಕಾರ್ಯಗಳಲ್ಲಿ ವಿಘ್ನ ಬರಬಹುದು. ಸಾಲ ಮಾಡಬೇಕಾದ ಪ್ರಸಂಗ ಒದಗಿ ಬರುತ್ತದೆ. ಬಿಳಿ ಎಕ್ಕದ ಹೂವನ್ನು ವಿನಾಯಕನಿಗೆ ಅರ್ಪಣೆ ಮಾಡಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಶ್ಚಿಕ ರಾಶಿ
ಆಸ್ತಿಯನ್ನು ಖರೀದಿಸುವ ಯೋಗ ಉಂಟಾಗಿ ಕೆಲಸ ಕಾರ್ಯಗಳಲ್ಲಿ ಜಯ ಲಭಿಸುತ್ತದೆ. ಆರೋಗ್ಯದಲ್ಲಿನ ಸುಧಾರಣೆ ಕೂಡ ಹೊಂದಬಹುದು. ಹೆಂಡತಿಯೊಡನೆ ಮನಸ್ಥಾಪ ಬರುತ್ತದೆ. ಜನಸಂಪರ್ಕ ಅಧಿಕವಾಗಿ ಕಾಣಬಹುದು. ಮನೋಬಲ ಕೂಡ ಹೆಚ್ಚಾಗಿ ಇರುತ್ತದೆ. ಸ್ನೇಹಿತರ ಮತ್ತು ಆಪ್ತರ ಸಹಕಾರ ಸಹಾಯ ದೊರೆಯುತ್ತದೆ. ವಂಶಾಭಿವೃದ್ಧಿಯ ಯೋಗ ನಿಮ್ಮಲ್ಲಿ ಕಾಣಬಹುದು. ಪವಿತ್ರ ಯಾತ್ರಾ ಸ್ಥಳಗಳನ್ನು ಸಂದರ್ಶಿಸುವ ಸಾಧ್ಯತೆ ಇರುತ್ತದೆ. ವಿಷ್ಣು ಸಹಸ್ರನಾಮ ಪಠಣ ಮತ್ತು ಹೋಮ ಮಾಡಿಸುವುದು ಸೂಕ್ತ ಎನಿಸುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಧನಸ್ಸು ರಾಶಿ
ಈ ದಿನ ಹೆಚ್ಚಾಗಿ ಮಿಶ್ರ ಫಲಗಳನ್ನು ಹೆಚ್ಚಾಗಿ ಕಾಣಬಹುದು. ನಿಮ್ಮ ಬುದ್ಧಿಗೆ ಮಂಕು ಬಡಿಯುತ್ತದೆ. ಕೆಲಸಕಾರ್ಯಗಳಲ್ಲಿ ನೋಡಬಹುದು. ಅಣ್ಣತಮ್ಮಂದಿರು ಅಕ್ಕ-ತಂಗಿಯರೇ ಶತ್ರುಗಳ ಆಗಬಹುದು. ಉಚ್ಚ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇರುತ್ತದೆ. ಆರೋಗ್ಯದಲ್ಲಿ ಕೂಡ ಪ್ರಗತಿಯನ್ನು ಕಾಣುವಿರಿ. ಬಹುದಿನಗಳ ಆಸೆ ಆಕಾಂಕ್ಷೆಗಳು ನೆರವೇರುವುದು. ಸಂಜೀವಿನಿ ಮಂತ್ರ ಜಪ ಮಾಡಿರಿ ಗೋಧೂಳಿ ಸಮಯದಲ್ಲಿ ಶ್ರೀ ಲಕ್ಷ್ಮಿ ಅಷ್ಟೊತ್ತರ ಪಠಿಸಿರಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಕರ ರಾಶಿ
ನಿಮ್ಮ ಆದಾಯಕ್ಕಿಂತ ಖರ್ಚು ಜಾಸ್ತಿ ಉಂಟಾಗುತ್ತದೆ. ಕೆಲವು ಕೆಲಸಕಾರ್ಯಗಳಲ್ಲಿ ಅಡೆತಡೆ ಬರುತ್ತದೆ. ಶಾರೀರಿಕ ತೊಂದರೆಗಳು ಕಂಡುಬರಬಹುದು. ಕುಟುಂಬದಲ್ಲಿ ಅಶಾಂತಿ ಕೂಡ ಕಾಣಬಹುದು. ಅದೃಷ್ಟವು ನಿಮ್ಮನ್ನು ಮುಂದೆ ನಡೆಸುತ್ತದೆ. ಕೆಲವು ವಿಚಾರ ಮಾತಿನಿಂದ ಸರಿಹೋಗದೆ ಇದ್ದರೆ ಬಲಪ್ರಯೋಗ ಮಾಡಬೇಕಾಗಿ ಬರಬಹುದು. ವಿವಾಹದ ತೀರ್ಮಾನವನ್ನು ನ್ಯಾಯ ರೂಪದಲ್ಲಿ ತೆಗೆದುಕೊಳ್ಳಬೇಕು. ಹಣಕಾಸು ವಿಚಾರದಲ್ಲಿ ಸುತ್ತಾಟದಿಂದ ಲಾಭಗಳಿಗೆ ಸಿಗುತ್ತದೆ. ಶ್ರೀ ಲಕ್ಷ್ಮೀನಾರಾಯಣ ಹೃದಯ ಪಠಿಸಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕುಂಭ ರಾಶಿ
ಮನೆಯಲ್ಲಿ ಶುಭಕಾರ್ಯಗಳು ನಡೆಯುತ್ತವೆ. ಗೌರವ ಪ್ರತಿಷ್ಠೆ ಸನ್ಮಾನ ದೊರೆಯಲಿದೆ. ಅನೇಕ ಮೂಲಗಳಿಂದ ಧನಪ್ರಾಪ್ತಿ ಯೋಗ ಉಂಟಾಗುತ್ತದೆ. ನಿರೀಕ್ಷೆಗೂ ಮೀರಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಚಾಲಕರು ಜಾಗೃತೆ ವಹಿಸುವುದು ಬಹಳ ಮುಖ್ಯ. ಕೆಲವು ವಿಷಯಗಳಲ್ಲಿ ನಿಮ್ಮ ಮಾತೆ ನಿಮಗೆ ಮುಳ್ಳಾಗಬಹುದು. ನಿಮಗೆ ಮೋಸ ಮಾಡುವವರು ಈ ದಿನ ಕಾಯುತ್ತಿರುತ್ತಾರೆ. ಉದ್ಯೋಗದಲ್ಲಿ ಬಡ್ತಿ ಸಿಗುವುದಿಲ್ಲ. ಸಜ್ಜನರಲ್ಲಿ ವಿರೋಧಗಳು ಬಂದು ಮಾನಸಿಕ ವಾಗುತ್ತದೆ. ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಭಾಗ್ಯ ಮಾಡುವುದರಿಂದ ಶುಭ ಶನಿ ದೇವರಿಗೆ ತೈಲ ಅಭಿಷೇಕ ಮಾಡಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮೀನಾ ರಾಶಿ
ಈ ದಿನ ಯಾವುದಾದರೂ ಕೆಲಸವನ್ನು ಪ್ರಾರಂಭಿಸಿದರೆ ಅದನ್ನು ಮುಗಿಸಿಯೇ ಇರುತ್ತಾರೆ. ಪದೇ ಪದೇ ಮಾನಸಿಕ ತೊಂದರೆಗಳು ನಿಮ್ಮಲ್ಲಿ ಈ ದಿನ ಕಾಣಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ವಿವಾಹದ ಕಾರ್ಯಕ್ರಮವನ್ನು ಮುಂದುವರಿಸಿ. ಆದಾಯ ಉತ್ತಮವಾಗಿ ಇರುತ್ತದೆ ಸರ್ವ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ. ಅದೃಷ್ಟದ ಮೇಲಿನ ನಂಬಿಕೆ ಕಡಿಮೆಯಾಗಬಹುದು. ಪತಿಪತ್ನಿಯರಲ್ಲಿ ಭಿನ್ನಾಭಿಪ್ರಾಯ ಬರಬಹುದು. ನವಗ್ರಹಗಳಿಗೆ ಪೂಜೆ ಮಾಡಿಸಬೇಕು. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ದಿಗ್ಭಂಧನ, ಸಮಸ್ಯೆಗಳು( ಪರಿಹಾರ ಮಾಡಲು ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


