ನಿತ್ಯ ಭವಿಷ್ಯ
ಹೊಸ ಉದ್ಯಮ ಆರಂಭಿಸುವಲ್ಲಿ ಈ ರಾಶಿಯವರಿಗಿಂದು ಒಳ್ಳೆಯ ದಿನ : ಕರೆಮಾಡಿ ಮಾತಾಡಿ | 03-12-2019, ಮಂಗಳವಾರ
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಕೇಂದ್ರ. ಪಂಡಿತ್ ಗುರುರಾಜ್ ದಿಕ್ಷಿತ್ : 9611844430
ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಮಹೋನ್ನತ ಬಲಿಷ್ಠ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ತಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿದೇಶ ಪ್ರವಾಸ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ ,ಹಣಕಾಸು ,ಪ್ರೇಮ ವಿಚಾರ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ
ಮುಖ್ಯಪ್ರಾಣದೇವರ ಕೃಪಾಕಟಾಕ್ಷದಿಂದ ಪರಿಹಾರ ಶತಸಿದ್ಧ.
ಪಂಡಿತ್ ಗುರು ದೀಕ್ಷಿತ್
Mob.No.__9611844430 ನಿಮ್ಮ ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
ಮೇಷ ರಾಶಿ
ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇಪದೇ ಗೈರುಹಾಜರಿ ಆಗುವವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನಸ್ತಾಪ ಮತ್ತು ವಿರಹ ಕಾಡಲಿದೆ. ಕುಟುಂಬ ಸದಸ್ಯರೊಡನೆ ಪ್ರವಾಸದ ಚಿಂತೆ ಮಾಡುವಿರಿ. ಆರ್ಥಿಕ ಉತ್ತೇಜನಕ್ಕೆ ದಾರಿ ಹುಡುಕಿಕೊಳ್ಳುವ ಸಾಧ್ಯತೆ ಇದೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ವೃಷಭ ರಾಶಿ
ತಮ್ಮ ಯೋಜನೆಗಳು ವಿಳಂಬವಾಗುವುದು. ಕಟ್ಟಡ ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೂ ಮಾಡಿರುವಂತಹ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ತಮ್ಮ ಕುಟುಂಬದ ಸದಸ್ಯರು ನಿಮ್ಮೊಂದಿಗೆ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವುದು ನಿರಾಶೆ ಆಗಲಿದೆ. ಸಂಗಾತಿಯೊಡನೆ ವಿರಸ ಮತ್ತು ಮಾನಸಿಕವಾಗಿ ವೇದನೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಮಿಥುನ ರಾಶಿ
ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಹಂತಕ್ಕೆ ಬಂದಿರುತ್ತದೆ. ಶಾಂತವಾಗಿದ್ದರೆ ಒಳಿತು. ನಿವೇಶನದಲ್ಲಿ ಕಟ್ಟಡ ಕಟ್ಟುವ ಬಗ್ಗೆ ಚಿಂತನೆ ಮಾಡಲಿದ್ದೀರಿ. ಕುಟುಂಬದ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ .ಹೊಸ ವ್ಯಾಪಾರ ಉದ್ಯಮ ಪ್ರಾರಂಭಿಸುವುದ ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಕಾಣುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕವಾಗಿ ಜಿಗುಪ್ಸೆ ಆಗಲಿದೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಕರ್ಕಾಟಕ ರಾಶಿ
ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾರ್ಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ. ಜಾಗೃತೆಯಿರಲಿ. ಹಿತೈಷಿಗಳು ತಮ್ಮ ವಿರೋಧಿಸುವವರು. ಪತ್ನಿ ಮತ್ತು ಅವರ ಸಂಬಂಧಿಕರ ಕಡೆಯಿಂದ ತಮಗೆ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸ ಯಶಸ್ಸು ಕಾಣುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ಸಹಾಯ ಸಿಗಲಿದೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಸಿಂಹರಾಶಿ
ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ವಿರಹ ಮತ್ತು ಮನೋವೇದನೆ ಸೃಷ್ಟಿಯಾಗಲಿದೆ. ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ತಮ್ಮ ದುಡ್ಡು ತಮಗೆ ಬರಲು ಹರಸಾಹಸ ಪಡೆಯುವ ಸಾಧ್ಯತೆ ಇದೆ. ಹಳೆ ನಿವೇಶನ ನವೀಕರಣ ಮಾಡುವ ಸಾಧ್ಯತೆ ಇದೆ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಕನ್ಯಾ ರಾಶಿ
ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆ ಆಗಲಿದೆ .ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಗ್ರಹವಾಗಲಿದೆ. ನಿವೇಶನ ಖರೀದಿ ಮತ್ತು ಹೊಸ ನಿವೇಶನದಲ್ಲಿ ಕಟ್ಟಡ ಪತ್ನಿ ಸಹಾಯದಿಂದ ಯಶಸ್ವಿಯಾಗಲಿದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಅನುಕೂಲಕರವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗದ ಹುಡುಕಾಟದಲ್ಲಿ ತಲೆನೋವು.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ತುಲಾ ರಾಶಿ
ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗಲಿದೆ. ಮಕ್ಕಳ ಮದುವೆ ವಿನಾಕಾರಣ ಮುಂದಕ್ಕೆ ಹೋಗುವುದು. ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನರ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕಾಟದಲ್ಲಿ ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇಪದೇ ಗೈರುಹಾಜರಾಗುವುದು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ವೃಶ್ಚಿಕ ರಾಶಿ
ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಗ್ರಹವಾಗಲಿದೆ. ಹೊಸ ನಿವೇಶನ ಖರೀದಿ ಮತ್ತು ಹೊಸ ನಿವೇಶನದಲ್ಲಿ ಕಟ್ಟಡ ಪತ್ನಿಯ ಸಹಾಯದಿಂದ ಯಶಸ್ವಿಯಾಗಲಿದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯಿಂದ ನಿಮಗೆ ಪ್ರಶಂಸೆ ಸಿಗಲಿದೆ .ಪ್ರೀತಿ ಸಂಗಾತಿಯೊಡನೆ ಮನಸ್ತಾಪವಾಗಲಿದೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಧನಸ್ಸು ರಾಶಿ
ತಮ್ಮ ನೇರನುಡಿಯ ಮಾತುಗಳಿಗೆ ಮುಜುಗರ ಆಗುವಿರಿ. ಮೃದು ಸ್ವಭಾವ ಸ್ವಲ್ಪ ಮಟ್ಟಿಗೆ ರೂಢಿಸಿಕೊಳ್ಳುವುದು ಉತ್ತಮ. ಇಂದು ತಮಗೆ ಸಂತೋಷವಾಗಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ ಮತ್ತು ಸ್ಥಾನಪಲ್ಲಟ ಆಗುವ ಸಾಧ್ಯತೆ ಇದೆ. ಸಂಗಾತಿಯಿಂದ ಬೇಸರ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಮಕರ ರಾಶಿ
ಕೃಷಿಕರಿಗೆ ಧನ ಲಾಭವಾಗಲಿದೆ. ಜಮೀನಲ್ಲಿ ಹೊಸ ಹೊಸ ಅವಿಷ್ಕಾರ ಮಾಡುವಿರಿ. ಮಕ್ಕಳ ಮದುವೆ ಕಾರ್ಯ ಬಗ್ಗೆ ಚಿಂತನೆ ಮಾಡುವಿರಿ. ಹೊಸ ಯಂತ್ರೋಪಕರಣಗಳು ಖರೀದಿ ಮಾಡುವಿರಿ. ಮನೆ ಕಟ್ಟುವ ಯೋಚನೆ ವಿಳಂಬವಾಗುವ ಸಾಧ್ಯತೆ. ಅಕ್ಕ ಪಕ್ಕದ ಮನೆ ಅಥವಾ ಅಕ್ಕ ಪಕ್ಕದ ಜಮೀನಿನ ಮಾಲಕರ ಕಡೆಯಿಂದ ಮನಸ್ತಾಪವಾಗಲಿದೆ. ಸರಕಾರಿ ಕಚೇರಿ ಕೆಲಸಗಳು ತಮಗೆ ಕಾಡಲಿದೆ. ಸಾಲದ ಸಮಸ್ಯೆಗಳಿಗೆ ತಮ್ಮ ಸ್ನೇಹಿತರ ಮುಖಾಂತರ ಸಹಾಯ ಸಿಗಲಿದೆ. ಸಂಗಾತಿಯೊಡನೆ ವಿರಸ. ಮಾತಾಪಿತೃ ಆರೋಗ್ಯದ ಬಗ್ಗೆ ಸಮಸ್ಯೆ ಕಾಡಲಿದೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಕುಂಭ ರಾಶಿ
ಕೆಲಸ ಕಾರ್ಯಗಳು ಮಂದಗತಿಯಲ್ಲಿ ಯಶಸ್ಸು ಕಾಣುವಿರಿ. ಪ್ರೀತಿಸುವವರು ಒಬ್ಬರಿಗೊಬ್ಬರು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಕಾಣುವಿರಿ. ಯೋಜನೆಗಳಿಂದ ದೂರಸರಿವ ಸಾಧ್ಯತೆ .ಸಮಾಜದಲ್ಲಿ ಗೌರವ ಸಿಗಲಿದೆ .ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ದಿನಸಿ ವ್ಯಾಪಾರಸ್ಥರಿಗೆ ಪ್ರಗತಿ ಕಾಣಲಿದೆ. ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಬಗ್ಗೆ ಚಿಂತನೆ. ಅಕ್ಕಪಕ್ಕದ ಮನೆ ಅಥವಾ ಅಕ್ಕಪಕ್ಕದ ಒಲದ ಮಾಲೀಕರ ಕಡೆಯಿಂದ ಮನಸ್ತಾಪ ಆಗಲಿದೆ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಮೀನ ರಾಶಿ
ಕೃಷಿಕರಿಗೆ ಧನಲಾಭವಿದೆ. ಜಮೀನಲ್ಲಿ ಹೊಸ ಪ್ರಯೋಗ ಮಾಡುವ ಚಿಂತನೆ ಮಾಡುವಿರಿ. ಹನಿ ನೀರಿನ ವ್ಯವಸಾಯ ಮಾಡುವ ಚಿಂತನೆ ಮಾಡುವಿರಿ. ಹಣ್ಣು ಹಂಪಲ ಗಿಡಗಳ ವ್ಯವಸಾಯ ಮಾಡುವ ಚಿಂತನೆ ಮಾಡುವಿರಿ. ಹೈನುಗಾರಿಕೆ ಬಗ್ಗೆ ಚಿಂತನೆ ಮಾಡುವಿರಿ. ಕುರಿ ಸಾಕಾಣಿಕೆ, ಕೋಳಿ ಫಾರಂ ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ ಮಾಡುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ನಿವೇಶನದಲ್ಲಿ ಮನೆ ಕಟ್ಟುವ ಚಿಂತನೆ ಮಾಡುವಿರಿ. ಅರ್ಧದಲ್ಲಿ ಕಟ್ಟಿರುವ ಮನೆಯ ಚಿಂತನೆ ಮಾಡುವಿರಿ.
ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9611844430
ಗುರು ದೀಕ್ಷಿತ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ ಮೊಬೈಲ್ ಸಂಖ್ಯೆ- 9611844430

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


