Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗಿಂದು ಅನಿರೀಕ್ಷಿತ ಧನಾಗಮನ | 07-12-2019 ಮಂಗಳವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್ : 9964584883

ಮೇಷ ರಾಶಿ

ಸ್ನೇಹದಲ್ಲಿ ಮತ್ತು ಪ್ರೇಮದಲ್ಲಿ ಅಹಿತಕರ ವಾದಂತಹ ಘಟನೆಗಳಿಂದ ಇರಿಸುಮುರುಸು ಉಂಟಾಗುವ ಸಾಧ್ಯತೆ ಇದೆ. ಯಾವುದೇ ನಿರ್ಧಾರಗಳನ್ನು ಮಾಡುವ ಮೊದಲು ಸೂಕ್ತವಾದ ಸಲಹೆಯನ್ನು ಪಡೆಯುವುದು ಉತ್ತಮ. ಆರ್ಥಿಕ ಸ್ಥಿತಿಯು ಲಾಭದಿಂದ ಕೂಡಿದೆ, ಅನಿರೀಕ್ಷಿತ ಧನಾಗಮನವನ್ನು ಇಂದು ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಇಂದು ಮನೆಯಲ್ಲಿ ಹಾಗೂ ಮಕ್ಕಳ ಜೊತೆಗಿನ ಮಾತುಗಳಲ್ಲಿ ಹೆಚ್ಚಿನ ತಾಳ್ಮೆ ಅವಶ್ಯಕವಾಗಿದೆ ಹಾಗೂ ಕಾರ್ಯವನ್ನು ಮತ್ತೊಬ್ಬರಿಗೆ ಒಪ್ಪಿಸದೇ ಅದನ್ನು ನೀವೆ ಮಾಡಿ ಮುಗಿಸುವುದು ಕ್ಷೇಮ. ಪ್ರೇಮಿಗಳಲ್ಲಿ ಭರವಸೆಯ ಆಶಾಕಿರಣ ಮೂಡಲಿದೆ. ಇಂದು ನಿಮ್ಮ ಬಹುತೇಕ ಸಮಯವನ್ನು ಇತರರಿಗಾಗಿ ಮೀಸಲಿಡುವ ಸಾಧ್ಯತೆ ಇದೆ. ಸಂಬಂಧಪಡದ ವಿಚಾರಗಳಲ್ಲಿ ನಿಮ್ಮನ್ನು ಅನವಶ್ಯಕವಾಗಿ ನಿಮ್ಮ ವಿರುದ್ಧ ಬಂಧು-ಮಿತ್ರರು ಆಕ್ರೋಶ ವ್ಯಕ್ತಪಡಿಸುವರು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ನಿಮ್ಮ ಜೀವನವನ್ನು ಯಾವ ರೀತಿಯಲ್ಲಿ ರೂಪಿಸಿಕೊಳ್ಳಬೇಕು, ಸಂತೋಷ ಎಂಬುದು ಹೇಗೆ ಎಂಬಿತ್ಯಾದಿ ವಿಷಯಗಳನ್ನು ನಿಮ್ಮ ಪತ್ನಿಯಿಂದ ಕಲಿಯುವುದು ಸೂಕ್ತ. ನಿಮಗೆ ಕೊಟ್ಟಿರುವ ಕೆಲಸವನ್ನು ಬೇಗನೆ ಪೂರ್ಣ ಮಾಡಿ ವಿಶ್ರಾಂತಿ ಪಡೆದುಕೊಳ್ಳುವ ಸಮಯವಿದು. ಆರ್ಥಿಕ ಪರಿಸ್ಥಿತಿಯಲ್ಲಿ ಅತಿ ಹೆಚ್ಚಿನ ಶ್ರಮ ಅಗತ್ಯವಿದೆ. ಕೆಲವು ಅವಕಾಶಗಳು ನಿಮ್ಮ ಕೈಮೀರಿ ಹೋಗುವ ಸಾಧ್ಯತೆ ಇದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಬಾಕಿ ಇರುವ ಕಟ್ಟಡ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಬಹುದಿನಗಳಿಂದ ಕೆಲಸವಿಲ್ಲದೆ ಕಾಲ ಕಳೆಯುತ್ತಿರುವರಿಗೆ ಉದ್ಯೋಗ ಸಿಗುವಂತ ಸನ್ನಿವೇಶ ಸೃಷ್ಟಿಯಾಗುವುದು. ನಿಮ್ಮ ಸಂಗಾತಿಯು ನಿಮ್ಮ ಕಲ್ಪನೆಯನ್ನು ವಾಸ್ತವದತ್ತ ಕೊಂಡೊಯ್ಯಲು ನಿಮಗೆ ಪ್ರೇರಣೆ ನೀಡುವರು. ಇಂದು ಪ್ರೇಮ ಬಂಧನ ದಲ್ಲಿ ಅತಿ ಹೆಚ್ಚು ಸಮಯ ಕಳೆಯುವ ಭಾಗ್ಯ ನಿಮ್ಮದಾಗಿರುತ್ತದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ನಿಮ್ಮಲ್ಲಿನ ವಿಭಿನ್ನ ವ್ಯಕ್ತಿತ್ವ ಹಾಗೂ ಸಮಾಜಮುಖಿ ಚಿಂತನೆಯು ಬಹಳಷ್ಟು ಮಾನ್ಯತೆ ತಂದುಕೊಡುತ್ತದೆ. ಹೊಸದಾದ ಅವಕಾಶಗಳು ನಿಮ್ಮ ಖಾಲಿ ಜೇಬನ್ನು ತುಂಬಿಸುವ ಶಕ್ತಿ ಹೊಂದಿರುವುದಲ್ಲದೆ ನಿಮ್ಮೆಲ್ಲಾ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಸೃಷ್ಟಿಸುತ್ತದೆ. ನೀವು ಭೋಜನಪ್ರಿಯರು ಇಂದು ನಿಮಗೆ ಪ್ರೀತಿಪಾತ್ರರು ಇಷ್ಟಪಟ್ಟ ತಿನಿಸುಗಳನ್ನು ಭರಪೂರವಾಗಿ ಮಾಡಿಕೊಡುವರು ಇದರಿಂದ ಸಂತುಷ್ಟರಾಗುವಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ನೀವು ನಿಮ್ಮ ಪ್ರಿಯತಮಗೆ ಸಂದೇಶವನ್ನು ಕಳಿಸುವ ಯೋಚನೆಯಲ್ಲಿದ್ದರೆ ಖಂಡಿತವಾಗಿ ಸಕಾರಾತ್ಮಕ ಫಲಿತಾಂಶ ಕಾಣಬಹುದಾಗಿದೆ. ಆರೋಗ್ಯಪೂರ್ಣ ಹಾಗೂ ಆತ್ಮವಿಶ್ವಾಸದಿಂದ ಇಂದು ಅಂದುಕೊಂಡ ಕೆಲಸವನ್ನು ಸುಲಭವಾಗಿ ಮುಗಿಸುವ ಚಾಣಾಕ್ಷತೆ ನಿಮ್ಮಲ್ಲಿ ಇರುವುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಹೊಸದಾದ ಒಪ್ಪಂದಗಳು ಜರುಗುವ ಸಾಧ್ಯತೆ ಇದೆ. ಇಂದು ದೊಡ್ಡಮಟ್ಟದ ಅವಕಾಶಗಳಿಗಾಗಿ ಕೆಲವು ವ್ಯಕ್ತಿಗಳನ್ನು ಮತ್ತು ಬಂಡವಾಳವನ್ನು ಕ್ರೋಡೀಕರಿಸಲು ಸನ್ನದ್ಧರಾಗುವಿರಿ. ಇಂದಿನ ನಿಮ್ಮ ಪ್ರತಿಯೊಂದು ಕೆಲಸದಲ್ಲಿ ಶಾಂತಿ ಸಂಯಮ ಇದನ್ನು ಅನುಸರಿಸುವುದು ಒಳ್ಳೆಯದು. ಮಾತನಾಡುವಾಗ ವಿಷಯದ ಸಂಪೂರ್ಣ ಜ್ಞಾನವನ್ನು ತಿಳಿದುಕೊಳ್ಳಿ ಹಾಗೂ ಅನಗತ್ಯವಾದ ವಾದಗಳಿಂದ ಅಥವಾ ಚುಚ್ಚು ಮಾತಿನಿಂದ ಜನಗಳಿಗೆ ಕೆಟ್ಟವರಂತೆ ಬಿಂಬಿತ ರಾಗದಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಸಾಧು ಸಂತರ ದರ್ಶನಭಾಗ್ಯ ಹಾಗೂ ಹಿರಿಯರ ಮಾರ್ಗದರ್ಶನ, ಕುಟುಂಬದ ಉತ್ತೇಜನ ನಿಮ್ಮ ಕಾರ್ಯಗಳಿಗೆ ಯಶಸ್ವಿಯಾಗಲು ನೆರವಾಗುವುದು. ಪತಿ ಪತ್ನಿಯ ನಡುವೆ ಕೆಲವು ಭಿನ್ನಾಭಿಪ್ರಾಯಗಳಿಂದ ಪರಸ್ಪರ ವೈಮನಸ್ಸು ಉದ್ಭವವಾಗುವುದು. ಉತ್ಸಾಹಭರಿತರಾಗಿ ಕಾರ್ಯದಲ್ಲಿ ದುಮಕುವಿರಿ. ಬರುವಂತಹ ಅವಕಾಶಗಳನ್ನು ಬಾಚಿಕೊಳ್ಳುವ ಸ್ವಭಾವ ನಿಮ್ಮದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಆರ್ಥಿಕತೆಯು ಉತ್ತಮವಾಗಿ ಸಾಗುವುದು. ಯೋಜಿತ ಕೆಲಸಕಾರ್ಯಗಳಿಗೆ ಹಣದ ಹೂಡಿಕೆ ಮತ್ತು ಬಂಡವಾಳವನ್ನು ಆಕರ್ಷಣೆ ಮಾಡುವಂತಹ ಚಾತುರ್ಯ ನಿಮ್ಮಲ್ಲಿದೆ. ಹಳೆಯ ಸಾಲಗಳನ್ನು ವಸೂಲಿ ಮಾಡಲು ಪರದಾಡುವ ಸ್ಥಿತಿ ಬರಬಹುದು. ನಿಮ್ಮ ವ್ಯವಹಾರದಲ್ಲಿ ಮೂರನೇ ವ್ಯಕ್ತಿಗಳಿಗೆ ಅವಕಾಶ ನೀಡಬೇಡಿ. ಪ್ರೇಮಿಗಳಲ್ಲಿ ಕೆಲವು ವಿವಾದಗಳು ಹುಟ್ಟಿಕೊಳ್ಳುತ್ತದೆ ಇದು ಅಶಾಂತಿ ಕೂಡ ತರಿಸಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಧಾರ್ಮಿಕ ಕಾರ್ಯಗಳ ಆಚರಣೆ ಮಾಡಲು ತಯಾರಾಗಿರಿ. ಸಂಗಾತಿಯ ಕೆಲವು ಮಾತುಗಳು ನಿಮಗೆ ಕೋಪವನ್ನು ತರಿಸಬಹುದು ತಾಳ್ಮೆಯಿಂದ ಇರುವುದು ಒಳಿತು. ನಿಮ್ಮ ಜ್ಞಾನ ಮಟ್ಟದ ಚಿಂತನೆಯ ಫಲವಾಗಿ ನಿರೀಕ್ಷಿತವಾಗಿ ನಿಮ್ಮ ಗುರಿಯನ್ನು ತಲುಪಲಿದ್ದೀರಿ. ಹೋಗುವ ದಾರಿಯಲ್ಲಿ ಕಲ್ಲು ಮುಳ್ಳು ಸಹಜ ತಾಳ್ಮೆಯಿಂದ ಎಲ್ಲವೂ ಗೆಲ್ಲಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ದೀರ್ಘಾವಧಿಯ ಹೂಡಿಕೆಗಳು ಲಾಭವನ್ನು ತಂದು ಕೊಡುವುದು. ನಿಮ್ಮ ಕಾರ್ಯಶೈಲಿಯನ್ನು ಮೇಲಾಧಿಕಾರಿಗಳು ಗಮನಿಸಿರುವರು ಉದ್ಯೋಗದಲ್ಲಿ ಬಡ್ತಿ ಯಾಗುವ ಅವಕಾಶಗಳಿವೆ. ಆದಾಯ ಸ್ಥಿತಿಯು ಬಹಳಷ್ಟು ಯೋಚಿಸಿ ಖರ್ಚು ಮಾಡುವಂತಹ ಸನ್ನಿವೇಶ ಸೃಷ್ಟಿಸಬಹುದು ಆದಕಾರಣ ಉಳಿತಾಯಕ್ಕೆ ಆದ್ಯತೆ ನೀಡುವುದು ಒಳಿತು. ನಿಮ್ಮ ಎಲ್ಲಾ ಕಷ್ಟಗಳು ಬೆಂಬಲವಾಗಿ ನಿಮ್ಮ ಪತ್ನಿಯು ನಿಲ್ಲುವರು ಅವರ ಹಿತಾಸಕ್ತಿಗಳಿಂದ ಕಾರ್ಯವನ್ನು ಮಾಡಿದರೆ ಖಂಡಿತ ಗೆಲುವು ಲಭಿಸಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ದಾನ ಮಾಡುವಾಗ ಅಥವಾ ಸಹಾಯ ಮಾಡುವಾಗ ವ್ಯಕ್ತಿಯು ನಂಬಿಕಸ್ಥನೇ ಎಂಬುದನ್ನು ತಿಳಿದುಕೊಳ್ಳಿ, ಕೆಲಸ ಆಗುವ ತನಕ ನಯವಾಗಿ ಮಾತನಾಡಿ ಪಲಾಯನ ಮಾಡುವಂತಹ ಜನ ಗಳಿದ್ದಾರೆ ಎಚ್ಚರ. ನಿಮ್ಮ ದುರ್ಬಲ ಆರ್ಥಿಕ ವ್ಯವಸ್ಥೆಯು ಪ್ರಮುಖ ಕೆಲಸವನ್ನು ವಿಳಂಬ ಮಾಡುವುದಕ್ಕೆ ಸಾಧ್ಯವಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending