Connect with us

ನಿತ್ಯ ಭವಿಷ್ಯ

ಪಾಪ ಕರ್ಮದ ಫಲವಾಗಿ ಹಲವು ಸಮಸ್ಯೆಗಳು : ಸಮಸ್ಯೆಗಳಿಗೆ ಪರಿಹಾರ; ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ | 09-01-2020 ಗುರುವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.

ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.

ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ

ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.

ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.

ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ

ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.

ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.

ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕರ್ಕಾಟಕ ರಾಶಿ

ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.

ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.

ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ

ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.

ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.

ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ

ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.

ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ

ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.

ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.

ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ

ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.

ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.

ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನಸ್ಸು ರಾಶಿ

ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.

ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.

ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ

ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.

ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.

ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ

ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.

ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.

ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ

ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.

ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.

ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending