ನಿತ್ಯ ಭವಿಷ್ಯ
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ : 25-01-2020 ಶನಿವಾರ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ : 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ನಿಮ್ಮ ಆತ್ಮೀಯರು ನಿಮ್ಮ ಬುದ್ಧಿಶಕ್ತಿಯನ್ನು ಕಂಡು ಅವಕಾಶಗಳನ್ನು ದಯಪಾಲಿಸುವರು, ನೀವು ತಡಮಾಡದೆ ಕಾರ್ಯಾರಂಭ ಮಾಡಿ ವಿಶ್ವಾಸ ಉಳಿಸಿಕೊಳ್ಳಿ. ಜಂಟಿ ವ್ಯವಹಾರಗಳಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ. ಹೂಡಿಕೆಗಳು ನಿಮಗಾಗಿ ಲಾಭಾಂಶ ತಂದುಕೊಡಲಿವೆ. ಮಕ್ಕಳ ಶೈಕ್ಷಣಿಕ ಸಾಧನೆಗೆ ನಿಮ್ಮ ನೆರವು ಅಗತ್ಯ ಬೀಳುವುದು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕುಟುಂಬದಲ್ಲಿ ವಿನಾಕಾರಣ ಖರ್ಚುಗಳು ಹೆಚ್ಚಾಗಬಹುದು. ನಿಮ್ಮ ಹಣಕಾಸಿನ ವ್ಯವಹಾರವನ್ನು ಮತ್ತಷ್ಟು ಪ್ರಬಲರಾಗಿಸಿ ಕೊಳ್ಳುವ ಯೋಚನೆ ಮಾಡಿ. ಮಕ್ಕಳು ಕೆಲಸದಲ್ಲಿ ಅಭಿವೃದ್ಧಿ ಕಾಣಲಿದ್ದಾರೆ,ಅವರ ದುಡಿಮೆ ಉತ್ತಮವಾಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದಲ್ಲಿ ಸಂತೋಷದ ಕ್ಷಣಗಳು ನಿಮಗೆ ಸಿಗಲಿವೆ. ಕೊಟ್ಟಿರುವ ಕೆಲಸವನ್ನು ವಿಳಂಬ ಮಾಡುವುದಾಗಿ ನಿಮ್ಮ ವ್ಯಕ್ತಿತ್ವಕ್ಕೆ ದಕ್ಕೆ ಬರಬಹುದು. ಆರ್ಥಿಕ ವ್ಯವಹಾರದಲ್ಲಿ ಇರಿಸುಮುರಿಸು ಆಗುವ ಸಾಧ್ಯತೆಯಿದೆ ಎಚ್ಚರವಿರಲಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಕಾರ್ಯಗಳಲ್ಲಿ ಉತ್ತಮವಾದ ಕುಶಲತೆಗಳನ್ನು ಪಡೆಯುವಿರಿ. ಕೆಲಸದಲ್ಲಿ ಲಾಭದಾಯಕ ಚಿಂತನೆ ಹೆಚ್ಚಾಗಲಿದೆ. ಇಂದು ವಿಶ್ರಾಂತಿಗೆ ಸಮಯ ಅವಕಾಶ ಸಿಗದಿರಬಹುದು ಹೆಚ್ಚಿನ ಒತ್ತಡ ಕೆಲಸದಲ್ಲಿ ಕಂಡುಬರುತ್ತದೆ. ಮಡದಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ನಿಮ್ಮ ಆತ್ಮೀಯ ವರ್ಗದವರು ನಿಮ್ಮ ಕೆಲವು ಯೋಜನೆಗಳಿಗೆ ಅಪಸ್ವರ ತೆಗೆಯುವ ಸಾಧ್ಯತೆ ಇದೆ. ಆರ್ಥಿಕ ವ್ಯವಸ್ಥೆಯಲ್ಲಿ ನಿಮ್ಮ ನಿರೀಕ್ಷೆ ಹುಸಿಯಾಗುವ ಸಾಧ್ಯತೆ ಕಂಡುಬರುತ್ತದೆ. ಕೆಲವರು ನಿಮ್ಮಿಂದ ಲಾಭ ಪಡೆಯುವ ಹುನ್ನಾರ ನಡೆಸಿರಬಹುದು ಆದಷ್ಟು ಅಂತಹವರನ್ನು ದೂರದಲ್ಲಿಡಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮಕ್ಕಳೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಉದ್ಯೋಗಕ್ಕಾಗಿ ಇನ್ನು ಹೆಚ್ಚಿನ ಪರಿಶ್ರಮ ಬೇಕಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧಿಸುವ ತವಕ ನಿಮ್ಮಲ್ಲಿ ಹೆಚ್ಚಾಗಿ ಕಾಣಸಿಗುವುದು. ನಿಮ್ಮ ಬೆಂಬಲಕ್ಕೆ ಹಿತೈಷಿಗಳು ನಿಲ್ಲುವರು. ಪ್ರೇಮ ಪ್ರಸ್ತಾಪ ಮಾಡುವ ವಿಷಯದಲ್ಲಿ ಇಂದು ಅನಿರೀಕ್ಷಿತ ತಿರುವು ಎದುರಾಗಬಹುದು ಆದಕಾರಣ ನಿಮ್ಮ ಮನದ ಬಯಕೆಯನ್ನು ತಡೆಹಿಡಿಯುವುದು ಸೂಕ್ತ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲಸದ ಬದ್ಧತೆಗೆ ನಿಮ್ಮ ವರ್ಚಸ್ಸು ಹೆಚ್ಚು ಮಾಡಲಿದೆ. ಮುಖ್ಯ ಕೆಲಸಗಳಲ್ಲಿ ದಾಖಲಾತಿಗಳನ್ನು ಮರೆಯುವ ಸಾಧ್ಯತೆಯಿದೆ ಎಚ್ಚರವಹಿಸಿ. ಕುಟುಂಬದ ಸಮಸ್ಯೆಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳಲು ಮುಂದಾಗಿ. ಯಾವುದೇ ಗಾಳಿಸುದ್ದಿಯನ್ನು ನಂಬುವುದು ಬೇಡ. ನಿಮ್ಮ ವಿಷಯವೇ ಅಂತಿಮವಾದದ್ದು ಎಂಬ ತೀರ್ಮಾನ ಇನ್ನೊಬ್ಬರ ಮೇಲೆ ಹೇರಿಕೆ ಮಾಡುವುದು ತಪ್ಪಾಗುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಸರ್ವರ ಒಮ್ಮತದ ನಿಲುವುಗಳನ್ನು ಪ್ರತಿಪಾದಿಸಿ. ಆರ್ಥಿಕ ವಿಷಯದಲ್ಲಿ ಮಂದಗತಿಯ ಬೆಳವಣಿಗೆ ಈ ದಿನ ಕಾಣಬಹುದು. ಯೋಜನೆಗಳಲ್ಲಿ ನಿಮ್ಮ ಮನ ಇಚ್ಛೆಯಂತೆ ನಡೆದುಕೊಳ್ಳಿ, ಹಾಗೂ ಅದರಲ್ಲಿ ಶ್ರದ್ಧೆ ಅವಶ್ಯಕತೆ ಇರುವುದು ಮುಖ್ಯ. ಕುಟುಂಬದ ಹಿರಿಯರು ತಮ್ಮ ಬೇಡಿಕೆಗಳನ್ನು ನಿಮ್ಮ ಮುಂದೆ ಪ್ರಸ್ತಾಪಿಸಬಹುದು ಆದಷ್ಟು ನಿರಾಕರಿಸಿದೆ ಕಾರ್ಯೋನ್ಮುಖರಾಗಿ. ಮನೆಯ ಕೆಲವು ಕಾರ್ಯಕ್ರಮಗಳು ನಿರೀಕ್ಷೆಯಂತೆ ನಡೆಯಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕೆಲಸದ ಒತ್ತಡದ ನಡುವೆಯೂ ನಿಮ್ಮ ಆರೋಗ್ಯವೂ ಉತ್ತಮ ದಿಂದ ಕೂಡಿರುತ್ತದೆ. ನಿಮ್ಮ ಇಂದಿನ ದಿನಚರಿಯಲ್ಲಿ ರೋಮಾಂಚನಗೊಳ್ಳುವ ಕೆಲವು ಅಂಶಗಳನ್ನು ಕಾಣಲಿದ್ದೀರಿ. ಆರ್ಥಿಕವಾಗಿ ಸದೃಢ ಗೊಳ್ಳುವ ಸಮಯವಿದು. ಮಕ್ಕಳು ನಿಮ್ಮ ಕಾರ್ಯಗಳಲ್ಲಿ ಸಹಾಯ ಮಾಡುತ್ತಾರೆ ಮತ್ತು ನಿಮ್ಮನ್ನು ಸಂತೋಷಗೊಳಿಸಲು ಪ್ರಯತ್ನಿಸುವರು. ಸಂಗಾತಿಯು ನಿಮ್ಮ ಬಗ್ಗೆ ಹೆಚ್ಚು ಮುತುವರ್ಜಿಯನ್ನು ವಹಿಸುತ್ತಾರೆ. ಕೆಲವು ಹೂಡಿಕೆಗಳು, ತೆರಿಗೆಗಳು ಅಥವಾ ಯೋಜನೆಗಳಲ್ಲಿ ಗಮನವಹಿಸುವ ಸಮಯ ನೀಡಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕುಟುಂಬದವರು ನಿಮ್ಮಿಷ್ಟದ ಕಾರ್ಯಗಳನ್ನು ಮಾಡಿ ಇಂದು ಸಂತೋಷಪಡಿಸುತ್ತಾರೆ. ದೀರ್ಘ ಪ್ರಯಾಣವನ್ನು ಮಾಡುವುದರಿಂದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಬುದ್ಧಿವಂತಿಕೆ ಹಾಗೂ ತಂತ್ರಗಾರಿಕೆಯನ್ನು ಬೆಳೆಸಿಕೊಳ್ಳಿ ಇದರಿಂದ ನಿಮ್ಮ ಆರ್ಥಿಕ ಸ್ವರೂಪ ಬಲಿಷ್ಠವಾಗಲಿದೆ. ಪ್ರೇಮಾಂಕುರವಾಗುವ ಎಲ್ಲಾ ಲಕ್ಷಣಗಳು ಇಂದು ಗೋಚರವಾಗಬಹುದು. ಕೆಲವು ವಿಷಯಗಳ ಗೊಂದಲದಿಂದ ಅಚಾತುರ್ಯ ನಡೆಯಬಹುದಾದ ಸಾಧ್ಯತೆ ಇದೆ ಎಚ್ಚರ ವಹಿಸಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಆಸ್ತಿ ಹಣಕಾಸಿನ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳಲು ಮುಂದಾಗಿ. ನಿಮ್ಮ ಉತ್ತಮ ರೀತಿಯ ಆಲೋಚನೆಗಳನ್ನು ಅಳವಡಿಸಿಕೊಂಡು ನಕಾರಾತ್ಮಕ ಭಾವನೆಯನ್ನು ತೆಗೆದುಹಾಕಿ. ಕೆಲವು ಆಸೆಆಕಾಂಕ್ಷೆಗಳು ವಿರುದ್ಧತೆ ಗಳಿಂದ ಕೂಡಿರುತ್ತದೆ, ಆದಷ್ಟು ಆಗುವ ಕೆಲಸದ ಬಗ್ಗೆ ಯೋಚಿಸಿ. ಕೆಲಸದಲ್ಲಿ ಉತ್ತಮ ಅಂಶಗಳನ್ನು ರೂಢಿಸಿಕೊಳ್ಳಿ. ಈ ದಿನ ಆರ್ಥಿಕ ಲಾಭಗಳು ನೀವು ನಿರೀಕ್ಷೆಯಂತೆ ಆಗಲಿದೆ. ಕಲಾತ್ಮಕ ಚಟುವಟಿಕೆಗಳಲ್ಲಿ ಉತ್ತಮ ಅವಕಾಶಗಳು ಸಿಗಲಿವೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಯಾವಾಗಲೂ ಕಲ್ಪನಾಲೋಕದಲ್ಲಿ ಕಾಲಕಳೆಯುವುದು ಅದೇ ನಿಜವಾದ ಭಾವನೆ ಆವರಿಸಬಹುದು, ವಾಸ್ತವಾಂಶ ಪರಿಗಣನೆ ಮಾಡುವುದು ಜೀವನದ ಬೆಳವಣಿಗೆ ಸಹಕಾರ ಆಗಲಿದೆ. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ. ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


