Connect with us

ನಿತ್ಯ ಭವಿಷ್ಯ

ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ : 28-01-2020 ಮಂಗಳವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ಕಾರ್ಯಕ್ಷೇತ್ರದಲ್ಲಿ ಸ್ವಯಂಪರೀಕ್ಷೆ ಆರಂಭಗೊಂಡಿದೆ. ದೈವಾನುಗ್ರಹ ನಿಮ್ಮನ್ನು ಉತ್ತೇಜಿಸಲಿದೆ. ನಿಮ್ಮ ಅಗಾಧ ಅನುಭವ ಹಾಗೂ ಪ್ರಯತ್ನಬಲ, ಆತ್ಮವಿಶ್ವಾಸ ವೃತ್ತಿರಂಗದಲ್ಲಿ ಬೆಳಕಿಗೆ ಬರಲಿದೆ. ಸೂಕ್ತ ಸಮಯಕ್ಕಾಗಿ ಮಾತ್ರ ಕಾಯುವುದು ಅನಿವಾರ್ಯವಾದೀತು. ಸಾಮಾಜಿಕವಾಗಿ ಬುದ್ಧಿವಂತಿಕೆಯಲ್ಲಿ ಬದುಕುವ ಸನ್ನಿವೇಶವಿದು. ಕೌಟುಂಬಿಕವಾಗಿ ಹೆಚ್ಚಿನ ನಿರೀಕ್ಷೆ ನಿರಾಸೆ ತಂದೀತು. ಟೀಕೆಗಳನ್ನು ಎದುರಿಸಲು ನೀವು ಸಿದ್ಧರಾಗಬೇಕಾದೀತು. ಆರ್ಥಿಕವಾಗಿ ಪರಿಸ್ಥಿತಿಯು ಸುಧಾರಿಸುತ್ತ ಹೋಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಷಭ ರಾಶಿ

ವೃತ್ತಿರಂಗದಲ್ಲಿ ಅನಾವಶ್ಯಕ ರೀತಿಯಲ್ಲಿ ಕೆಲಸಕ್ಕೆ ಬಾರದ ಗಾಸಿಪ್‌ಗ್ಳೇ ನಿಮ್ಮನ್ನು ಹತಾಶೆಗೊಳಿಸಲಿದೆ. ಧೈರ್ಯ, ಪ್ರಯತ್ನ ಬಲದಿಂದ ಮುಂದುವರಿಯಿರಿ. ಹಾಗೇ ನಿರ್ಧಾರಗಳಿಂದ ಹಿಂದೆ ಸರಿಯದಿರಿ. ಆರ್ಥಿಕ ಮಟ್ಟ ನಿರೀಕ್ಷಿಸಿದ ರೀತಿಯಲ್ಲಿ ಹೆಚ್ಚಿನ ಕೆಲಸಕಾರ್ಯಗಳಿಗೆ ಅನುಕೂಲವನ್ನು ತಂದುಕೊಡಲಿದೆ. ಈ ಮಧ್ಯೆ ಅನಿರೀಕ್ಷಿತ ಧನಾಗಮನ ಕೂಡ ಅಚ್ಚರಿ ತಂದುಕೊಡಲಿದೆ. ವೈಯಕ್ತಿಕವಾಗಿ ಕಳಕೊಂಡಿದ್ದ ಅಸ್ತಿತ್ವವನ್ನು ಪುನಃ ಸಂಪಾ ದಿಸಲಿದ್ದೀರಿ. ಹಾಗೇ ವ್ಯವಸ್ಥೆಯ ಬೆಂಬಲ ಸಿಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಿಥುನ ರಾಶಿ

ವೃತ್ತಿರಂಗದಲ್ಲಿ ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ಸಮಸ್ಯೆಗಳು ತಮ್ಮಿಂದ ತಾವೇ ಉಪಶಮನ ಆಗಲಿವೆ. ಕೌಟುಂಬಿಕವಾಗಿ ಸಣ್ಣ ಸಣ್ಣ ವಿಷಯಗಳಲ್ಲಿ ಅಸಮಾಧಾನ ತೋರಿಬರ ಬಹುದು. ನಿಮ್ಮ ವ್ಯಕ್ತಿತ್ವವನ್ನು ಸ್ವಾಭಿಮಾನದಿಂದ ಕಾಪಾಡಿಕೊಳ್ಳಿರಿ. ದೂರ ಸಂಚಾರ, ವಾಹನ ಚಾಲನೆಯಲ್ಲಿ ಮಿತಿ ಇರಲಿ. ವಾರಾಂತ್ಯದಲ್ಲಿ ಅನಿರೀಕ್ಷಿತ ಧನಾಗಮನ ಅಚ್ಚರಿ ತಂದೀತು. ಅವಿವಾಹಿತರು ಕ್ರಿಯಾಶೀಲರಾದಲ್ಲಿ ವೈಯಕ್ತಿಕ ಸಂಬಂಧಗಳ ಪ್ರಸ್ತಾವಗಳು ಬರಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕರ್ಕಾಟಕ ರಾಶಿ

ವ್ಯಾಪಾರ, ವ್ಯವಹಾರಗಳಲ್ಲಿ ನಾನಾ ರೀತಿಯ ಪೈಪೋಟಿಯ ವಾತಾವರಣ ತೋರಿ ಬರಲಿದೆ. ಕಠಿಣ ಪರಿಶ್ರಮ, ಪ್ರಯತ್ನ ಬಲದ ಕಾರ್ಯಶೀಲತೆ ನಿಮ್ಮ ವೃತ್ತಿ ಬದುಕಿನ ಮೇಲೆ ಭಾರೀ ಪರಿಣಾಮ ಬೀರಲಿದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಬಂದೀತು. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಲಿವೆ. ಆದರೂ ಸಣ್ಣಸಣ್ಣ ವಿಷಯಗಳಲ್ಲಿ ಮನಸ್ಸನ್ನು ಕೆಡಿಸಿಕೊಳ್ಳುವಂತಾದೀತು. ತಾಳ್ಮೆ-ಸಮಾಧಾನವಿರಲಿ. ಗೋಚರದ ರಾಹು, ಕೇತುಗಳ ಪ್ರತಿಕೂಲತೆಯಿಂದ ಆರೋಗ್ಯ ಕೆಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಿಂಹ ರಾಶಿ

ಸಾಮಾಜಿಕ ಪ್ರತಿಷ್ಠೆಗಾಗಿ ಆರ್ಥಿಕ ಪರಿಸ್ಥಿತಿಯಲ್ಲಿ ನಾನಾ ರೀತಿಯಲ್ಲಿ ಧನವ್ಯಯ ಉಂಟಾಗಲಿದೆ. ವಾಸ್ತವದ ವಿದ್ಯಮಾನಗಳ ಬಗ್ಗೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಿದಲ್ಲಿ ಉತ್ತಮ. ಭವಿಷ್ಯದ ಸಮಸ್ಯೆಗಳನ್ನು ಚೆನ್ನಾಗಿ ಅರಿತುಕೊಂಡು ಮುಂದುವರಿದಲ್ಲಿ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾವಗಳು ಕಂಕಣಬಲಕ್ಕೆ ಪೂರಕವಾಗಲು ಹೆಚ್ಚಿನ ಹೊಂದಾಣಿಕೆ ಮಾಡಿಕೊಳ್ಳಬೇಕಾದೀತು. ಯಾವುದೇ ಒತ್ತಡಕ್ಕೆ ತಲೆಬಾಗದಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕನ್ಯಾ ರಾಶಿ

ಕಾರ್ಯಕ್ಷೇತ್ರದಲ್ಲಿ ಬುದ್ಧಿವಂತಿಕೆಯ ಪ್ರಯೋಗಕ್ಕೆ ಇದೇ ಸಕಾಲ. ಯಾವುದೇ ವಾದ- ವಿವಾದಗಳಲ್ಲಿ ಸಿಕ್ಕಿಕೊಳ್ಳದಂತೆ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ಕೌಟುಂಬಿಕವಾಗಿ ಹೆಚ್ಚಿನ ಸಹಕಾರ ಹಾಗೂ ಉತ್ಸಾಹದ ಪ್ರತಿಕ್ರಿಯೆ ಸಮಾಧಾನ ತಂದೀತು. ಆರ್ಥಿಕವಾಗಿ ಖರ್ಚು ವೆಚ್ಚಗಳನ್ನು ನಿಭಾಯಿಸಬಹುದಾಗಿದೆ. ಸಾಮಾಜಿಕವಾಗಿ ನಿಮ್ಮ ಗೌರವಕ್ಕೆ ಸಂಬಂಧಿಸಿದಂತೆ ಸ್ವಾಭಿಮಾನವನ್ನು ಕಾಪಾಡಿಕೊಳ್ಳಿರಿ. ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಕಾಳಜಿ, ಜವಾಬ್ದಾರಿ ಎಲ್ಲ ರೀತಿಯಲ್ಲಿ ಅನುಕೂಲವಾಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ತುಲಾ ರಾಶಿ

ನಿಮ್ಮ ಕೌಶಲ್ಯವನ್ನು ಒರೆಗೆ ಹಚ್ಚಿ ಕಾರ್ಯಸಾಧನೆಗೆ ಇಳಿಯಿರಿ. ಯಶಸ್ಸು ನಿಮ್ಮದಾದೀತು. ಸಾಮಾಜಿಕವಾಗಿ ಹೆಚ್ಚಿನ ಅನುಕೂಲಕರ ವಾತಾವರಣ ತೋರಿಬರುವುದಿಲ್ಲವಾದರೂ ಸುಧಾರಿಸಿಕೊಂಡು ಹೋಗಬಹುದಾಗಿದೆ. ರಾಜಕೀಯ ವರ್ಗದವರು ಭವಿಷ್ಯದ ಸಮಸ್ಯೆಗಳನ್ನು ತಾವೇ ನಿರ್ಧರಿಸಬೇಕಾಗುತ್ತದೆ. ಆತ್ಮವಿಮರ್ಶೆಗೆ ಸರಿಯಾದ ಕಾಲವಿದು. ಯೋಚಿಸಿ, ಚಿಂತಿಸಿ ಮುಂದುವರಿಯಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವೃಶ್ಚಿಕ ರಾಶಿ

ನಿಮ್ಮ ಮೇಲೆ ನೀವೇ ಹತೋಟಿಯನ್ನು ಕಾಯ್ದುಕೊಳ್ಳುವುದು ಅಗತ್ಯವಿದೆ. ದೈವಾನುಗ್ರಹ ಎಲ್ಲ ರೀತಿಯಲ್ಲಿ ನಿಮ್ಮ ಮುನ್ನಡೆಗೆ ಸಹಾಯವಾಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮೆದುರು ಭಾರೀ ಸವಾಲಿದೆ. ಎಚ್ಚರ. ಅನುಕೂಲ ಕಾರ್ಯಕ್ಷೇತ್ರದ ಆಯ್ಕೆ ಮಾಡಿ. ಬುದ್ಧಿವಂತಿಕೆಯ ಪ್ರಯೋಗಕ್ಕೆ ಇದು ಸಕಾಲವಾಗಲಿದೆ. ಕಳೆದುಕೊಂಡಿದ್ದ ಅವಕಾಶಗಳನ್ನು ಪೂರ್ಣ ಪಡೆಯಲಿದ್ದೀರಿ. ಆದರೂ ಕೆಲವೊಂದು ಸಮಸ್ಯೆಗಳನ್ನು ನೀವೇ ನಿಭಾಯಿಸಬೇಕಾದೀತು. ವಿದ್ಯಾರ್ಥಿಗಳಿಗೆ ಅನುಕೂಲವಾದ ವಾರವಿದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಧನುಸ್ಸು ರಾಶಿ

ಕಾರ್ಯರಂಗದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ತೀರಾ ಚ್ಯುತಿಯೇನೂ ತೋರಿಬರಲಾರದು. ಸಿಡುಕುತನ, ಸಿಟ್ಟು-ಸೆಡವನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿರಿ. ಕಾರ್ಯಸಾಧನೆಗೆ ಸುಲಭವಾದೀತು. ನಿರುದ್ಯೋಗಿಗಳಿಗೆ ವಿವಿಧ ರೀತಿಯ ಅವಕಾಶಗಳು ಒದಗಿಬಂದು ಭವಿಷ್ಯದ ಹಾದಿಯನ್ನು ಸುಗಮಗೊಳಿಸಲಿದೆ. ಈ ಬೆಳವಣಿಗೆಗಳಿಂದ ನಿಮ್ಮನ್ನು ಅವಲಂಬಿಸಿದವರು ಸಮಾಧಾನ, ಸಂತಸಗೊಂಡಾರು. ಅವಿವಾಹಿತರು ಖಚಿತ ನಿರ್ಧಾರವನ್ನು ತೆಗೆದುಕೊಳ್ಳುವಂತಾದೀತು. ಆರ್ಥಿಕವಾಗಿ ಖರ್ಚು- ವೆಚ್ಚಗಳನ್ನು ಹತೋಟಿಯಲ್ಲಿಡಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮಕರ ರಾಶಿ

ಎಲ್ಲ ವಿಚಾರಗಳಲ್ಲಿ ಹೊಸ ಹೊಸ ಆಸೆಗಳು ಚಿಗುರಲಿವೆ. ಸಾಮಾಜಿಕವಾಗಿ ಪರಿವರ್ತನೆಯು ಸದ್ಯದಲ್ಲೇ ತೋರಿಬರಲಿದೆ. ಲೆಕ್ಕಾಚಾರದಿಂದ ಆರ್ಥಿಕ ಸಮಸ್ಯೆಯು ನಿವಾರಣೆಯಾಗಿ ಲಾಭದಾಯಕ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿದೆ. ವೈವಾಹಿಕ ಸಂಬಂಧಗಳು ಆಗಾಗ ಹಿನ್ನಡೆಗೆ ಸರಿದರೂ ಕ್ರಿಯಾಶೀಲರಾಗಿ ಮುಂದುವರಿದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಶುಭ ಸೂಚನೆ ತೋರಿ ಬರಲಿದೆ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕುಂಭ ರಾಶಿ

ಕಾರ್ಯರಂಗದಲ್ಲಿ ಆಗಾಗ ಎಡರುತೊಡರುಗಳಿದ್ದರೂ ನಿಮ್ಮ ಶ್ರಮಕ್ಕೆ ಯಶೋಭಾಗ್ಯ ಅಭಿವೃದ್ಧಿಯನ್ನು ತಂದು ಕೊಟ್ಟಾನು. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಆಗಾಗ ಧನಾಗಮನದಿಂದ ಅನುಕೂಲವಾಗಲಿದೆ. ವೃತ್ತಿರಂಗದಲ್ಲಿ ಗುಣಮಟ್ಟ ಅನುಷ್ಠಾನ ಪಡೆಯದಿರುವುದಕ್ಕೆ ಹಿರಿಯ ಅಧಿಕಾರಿ ವರ್ಗದವರ ನಿರ್ಲಕ್ಷ್ಯ ಕಾರಣವಾದೀತು. ಸಾಂಸಾರಿಕವಾಗಿ ನೆಮ್ಮದಿಯ ದಿನಗಳು. ಮಿತ್ರಬಾಂಧವರ ಆಗಮನ ಹಾಗೂ ಸಾಮಾಜಿಕವಾಗಿ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೀನ ರಾಶಿ

ವ್ಯಾಪಾರ- ವ್ಯವಹಾರಗಳಲ್ಲಿ ವಿಲೀನತೆ, ಹೊಂದಾಣಿಕೆ, ಸ್ವಾಧೀನ ಪ್ರಕ್ರಿಯೆಗಳು ನಡೆಯಲಿವೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಿಷ್ಠೆ, ಪ್ರಯತ್ನಬಲ, ಕೆಲಸಕಾರ್ಯಗಳಿಗೆ ಪ್ರತಿಫ‌ಲ ಲಭಿಸುವುದು. ಆದರೂ ಹಿತಶತ್ರುಗಳು ಕ್ರೂರ ರೂಪದಿಂದ ಶೋಷಣೆ ಮಾಡುವರು. ಜಾಗ್ರತೆ ಇರಲಿ. ರಾಜಕೀಯ ವರ್ಗದವರಿಗಂತೂ ರಾಜಕಾರಣಿಗಳನ್ನು ಓಲೈಸುವ ಪ್ರಸಂಗ ಬಂದೀತು. ಸಾಂಸಾರಿಕವಾಗಿ ಉದಾರ ದೃಷ್ಟಿಯಲ್ಲಿ ಎಲ್ಲರನ್ನೂ ಪ್ರೀತಿಸಿ, ಪೋಷಿಸಿ, ರಕ್ಷಿಸಿ ಸಂಭಾಳಿಸಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.  9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending