ದಿನದ ಸುದ್ದಿ
ಒಂದೇ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಹುದು : ಕೂಡಲೇ ಕರೆಮಾಡಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/07/kannada-horoscope.jpg&description=ಒಂದೇ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಹುದು : ಕೂಡಲೇ ಕರೆಮಾಡಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/07/kannada-horoscope.jpg&description=ಒಂದೇ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಹುದು : ಕೂಡಲೇ ಕರೆಮಾಡಿ', 'pinterestShare', 'width=750,height=350'); return false;" title="Pin This Post">
ಶ್ರೀ ನಾರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ. ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು. ಈ ದಿನ ನಿಮ್ಮ ಸಮಯ ಹಾಗೂ ವಿಚಾರಗಳನ್ನು ಇತರರ ಒಳಿತಿಗಾಗಿ ಶ್ರಮಿಸುವ ಸಾಧ್ಯತೆ ಕಾಣಬಹುದು. ನಿಮಗೆ ಸಂಬಂಧವಿಲ್ಲದ ವಿಷಯಗಳಲ್ಲಿ ಆದಷ್ಟು ಮುಂದುವರಿಯುವುದು ಬೇಡ. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಾಣಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಕೌಟುಂಬಿಕ ಅವಶ್ಯಕತೆಗಳನ್ನು ಪೂರೈಸಲು ಬದ್ಧರಾಗಿ. ಕೆಲವು ಮಾತುಗಳು ಇತರರಿಗೆ ಮುಜುಗರ ತರಿಸುವುದು ಆದಷ್ಟು ಮಾತಿನಲ್ಲಿ ಜಾಗ್ರತೆವಹಿಸಿ. ಹೂಡಿಕೆಗಳು ನಿಮ್ಮನ್ನು ದಾರಿ ತಪ್ಪಿಸಬಹುದಾಗಿದೆ ಆದಷ್ಟು ಅದರ ಬಗ್ಗೆ ಪೂರ್ವಪರ ತಿಳಿದುಕೊಳ್ಳಿ ನಿಪುಣರ ಸಹಾಯ ಪಡೆಯಿರಿ. ನಿಮ್ಮ ಕೆಲವು ಆಲೋಚನೆಗಳು ಜನಗಳ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು ಪರಿಚಯಿಸಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಸಂಗಾತಿಯ ನೋಟ ಸುಂದರವಾದ ವದನ ನಿಮಗೆ ಆನಂದ ತರಿಸುವ ಮುಖ್ಯವಾದ ಅಂಶವಾಗಿದೆ. ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ನಿಮ್ಮ ಬಿಡುವಿಲ್ಲದ ಸಮಯದಿಂದ ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರಬಹುದು ಆದಷ್ಟು ಇದರ ಬಗ್ಗೆ ಗಮನವಹಿಸಿ. ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕೆಲವು ಜವಾಬ್ದಾರಿಗಳು ನೀವು ಪೂರೈಸಲು ಕಟಿಬದ್ಧರಾಗಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು. ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ7 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

