ದಿನದ ಸುದ್ದಿ
ಹೊಸದುರ್ಗ | ತಹಶೀಲ್ದಾರರಿಗೆ ಅತಿಥಿ ಉಪನ್ಯಾಸಕರ ಮನವಿ
ಸುದ್ದಿದಿನ,ಹೊಸದುರ್ಗ : ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲುತ್ತಾ ಬಂದಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಸರ್ಕಾರ ವಿಲೀನಗೊಳಿಸಬೇಕೆಂದು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಇತ್ತೀಚೆಗೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.
ಸಂಬಂಧ ಕರ್ನಾಟಕ ನಾಗರೀಕ ಸೇವೆ (KCS 1977 General Recruitment Rule) 1(3) (2) ಮತ್ತು ನಿಯಮ 14ರ ಅಡಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ, ನಿಯಮಬಾಹಿರ 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿಯ ಬೇಕೆಂದು ಒತ್ತಾಯಿಸಿದರು.
ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸೇವಾ ವಿಲೀನ ಸಂಬಂಧ 23/08/2021 ಮತ್ತು 05/09/2021ರಲ್ಲಿ ಕೈಗೊಂಡ ನಿರ್ಣಯಗಳ ಕಡತವನ್ನು ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಪ್ರಸ್ತುತ 2021ರ ಬೆಳಗಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯವನ್ನು ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯದಂತೆ ದಿನಾಂಕ : 10/12/2021ರಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರವನ್ನು ಕೈಗೊಂಡಿರುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243