ಅಂತರಂಗ
ಹೊಸತನದ ಹೊಸ್ತಿಲಲ್ಲಿ..!
- ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ
ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.
ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.
ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.
ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.
ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.
ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243