ದಿನದ ಸುದ್ದಿ
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.
2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಕೆಆರ್ಡಿಬಿ ಗೆ 5 ಸಾವಿರ ಕೋಟಿ ರೂ
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.
1.03 ಲಕ್ಷ ಹಕ್ಕುಪತ್ರ ವಿತರಣೆ
ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


