Connect with us

ದಿನದ ಸುದ್ದಿ

ವಿಚಾರವಾದಿ ಡಾ.ಎಚ್. ನರಸಿಂಹಯ್ಯ ಬದುಕು : ಮಿಸ್ ಮಾಡ್ದೆ ಓದಿ ಈ ಲೇಖನ

Published

on

  • ಸಂಗಮೇಶ ಎನ್ ಜವಾದಿ

ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,
ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ, ಬದುಕಿನೂದ್ದಕ್ಕೂ ಸರಳತೆ ಜೀವನ
ಸಾಗಿಸಿದ ಸಾಧಕ.

ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದ
ಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿ
ಶಿಸ್ತು ಮತ್ತು ಸರಳತೆಗೆ ಎಚ್ಚೆನ್ ರವರು ಹೆಚ್ಚು ಆದ್ಯತೆ ನೀಡಿದವರು.

ಜೊತೆಗೆ ಕರ್ನಾಟಕದ ಮೂಡಲಸೀಮೆಯ ಹುಡುಗನೊಬ್ಬ ಅಮೆರಿಕ್ಕೆ ಹೋದರೂ ಉಪ್ಪಿಟ್ಟು ತಿನ್ನುವ, ಗಾಂಧಿಟೊಪ್ಪಿಯನ್ನೇ ತೊಡುವ ಮೂಲಕ ಭಾರತದ ಹಿರಿಮೆಯನ್ನು ಕಾಪಾಡಿಕೊಂಡು ಬಂದ ಶಿಕ್ಷಣಪ್ರೇಮಿ ಎನ್ನುವುದು ನಾವ್ಯಾರು ಮರೆಯುವಂತಿಲ್ಲ.

ಸರಳತೆ, ಪ್ರಾಮಾಣಿಕತೆ, ಸಮಾಜಿಕ ಚಿಂತನೆ, ಪರಿಶುದ್ಧತೆಯನ್ನು ತಮ್ಮ ಬಾಳಿನುದ್ದಕ್ಕೂ ಒಂದು ವ್ರತದಂತೆ ಕಾಯ್ದುಕೊಂಡು ಬಂದ ಎಚ್ಚೆನ್‍ರ ಬದುಕು ಇಂದಿನ ಸಮಾಜಕ್ಕೆ ಆದರ್ಶ ಮತ್ತು ಮಾರ್ಗದರ್ಶನ ಎಂಬುವುದರಲ್ಲಿ ಎರಡು ಮಾತಿಲ್ಲ ಬಂಧುಗಳೆ.

ಡಾ. ಎಚ್ ಎನ್ ಜನನ – ಜೀವನ

ಎಚ್.ನರಸಿಂಹಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದ ತಂದೆ ಹನುಮಂತಪ್ಪ, ತಾಯಿ ವೆಂಕಟಮ್ಮ ದಂಪತಿಗಳ ಮಗನಾಗಿ 06-06-1920 ರಲ್ಲಿ ಜನಿಸಿದರು.

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಹೊಸೂರಿನಲ್ಲಿಯೇ ಮುಗಿಸಿದರು. 1935ರಲ್ಲಿ ಬೆಂಗಳೂರಿನ ನ್ಯಾಷನಲ್‌ ಹೈಸ್ಕೂಲಿಗೆ ಸೇರಿದರು.ತದನಂತರ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್) ಮತ್ತು ಎಂ.ಎಸ್ಸಿ., ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಓದಿದರು. ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ (ಪ್ರಥಮ) ದರ್ಜೆಯಲ್ಲಿ ಉತ್ತೀರ್ಣರಾದರು. 1946ರಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕರಾದರು.

ಅಲ್ಲಿಯೇ ಪ್ರಾಧ್ಯಾಪಕರಾಗಿ, ಆಮೇಲೆ ಹನ್ನೆರಡು ವರ್ಷಗಳ ಕಾಲ ಪ್ರಿನ್ಸಿಪಾಲರಾಗಿದ್ದರು.ಹಾಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ್ದ ಶ್ರೇಯಸ್ಸಿನ ಜೊತೆಗೆ ಆ ಸಮಯದಲ್ಲಿ ಶಿಕ್ಷಣ ರಂಗದಲ್ಲಿ ಮಹತ್ವಪೂರ್ಣ ಬದಲಾವಣೆಗಳು ಮಾಡುವ ಮೂಲಕ ಸುಧಾರಣೆಗಳನ್ನು ಕೈಗೊಂಡ ಹೆಗ್ಗಳಿಕೆ ಇವರದಾಗಿತ್ತು. ಜೊತೆಗೆ ಕನ್ನಡವೆಂದರೆ ಹೆಚ್ಚು ಪ್ರೀತಿ, ಹಾಗೂ ಪ್ರಾವೀಣ್ಯತೆಯನ್ನು ಸಹ ಹೊಂದಿದರು.

ಇವರ ಇಡೀ ಜೀವನ ಶಿಕ್ಷಣಕ್ಕೆ ಮತ್ತು ನಾಲ್ಕು ನ್ಯಾಷನಲ್ ಕಾಲೇಜು, ಐದು ನ್ಯಾಷನ ಲ್ ಹೈಸ್ಕೂಲ್ ಮತ್ತು ಎರಡು ಪ್ರೈಮರಿ ಶಾಲೆಗಳನ್ನೊಳಗೊಂಡ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ ಮೀಸಲಿಟ್ಟಿದ್ದರು.ಜಯನಗರದ ನ್ಯಾಷನಲ್ ಕಾಲೇಜಿನಲ್ಲಿರುವ ಬೆಂಗಳೂರು ಲಲಿತಕಲಾ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿ ಸಂಸ್ಥೆಗಳ ಉನ್ನತಿಗಾಗಿ ಶ್ರಮಿಸಿದ್ದಾರೆ. ಹಾಗೂ ಎಚ್.ಎನ್.ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್‌ ಕರ್ನಾಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಹಿರಿಮೆಗೆ ಸಾಕ್ಷಿಯಾಗಿದಾರೆ.

ಇದಲ್ಲದೆ ಬೆಂಗಳೂರು ವಿಶ್ವವಿದ್ಯಾಲಯದ ಪ್ರಗತಿ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಬೆಳವಣಿಗೆ, ಭಾರತದ ಸ್ವಾತಂತ್ರ್ಯ ಚಳುವಳಿ, ಮೈಸೂರು ರಾಜ್ಯದ ಸ್ಥಾಪನೆಗಾಗಿ ಹೋರಾಟ ಹೀಗೆ ಅನೇಕ ವಿಷಯಗಳಲ್ಲಿ ಹೋರಾಟ ಮಾಡಿದ್ದ ಜೀವನದ ಬದುಕು ಇವರದು.

ಮತ್ತೆ ವಿಜ್ಞಾನದಲ್ಲಿ, ವೈಜ್ಞಾನಿಕ ಮನೋಭಾವದಲ್ಲಿ ಅವರಿಗೆ ಅಚಲವಾದ ನಂಬಿಕೆ.ಮೂಢನಂಬಿಕೆ, ಮೌಢ್ಯದ ವಿರುದ್ಧ ಸತತ ಹೋರಾಟ. ಮೂವತ್ತು ವರ್ಷಗಳ ಹಿಂದೆ ಅವರು ಬೆಂಗಳೂರು ವಿಜ್ಞಾನ ವೇದಿಕೆ (Bangalore Science forum) ಎಂಬ ವಿಜ್ಞಾನವೇದಿಕೆಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿದರು. ಸಂಗೀತ, ನಾಟಕ, ನೃತ್ಯ ಮುಂತಾದ ಲಲಿತ ಕಲೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಿರುತ್ತಾರೆ ಹಾಗೂ
ಸರಳ ಕಟ್ಟುನಿಟ್ಟಾದ ಬದುಕನ್ನು ಪಾಲಿಸಿದರು.

ಡಾ.ಎಚ್ ಎನ್ ರವರ ಸರಳತೆ

ಡಾ.ಎಚ್ ಎನ್ ರವರ ಬದುಕಿನಲ್ಲಿ ಅವರು ಕಂಡ ನೋವು, ಸಂಕಟ, ಅನುಭವಿಸಿದ ಬಡತನ, ತಂದೆಯ ಸಾವು, ಓದಿಗಾಗಿ ಊರೂರು ಅಲೆದದ್ದು, ಬರಿಗಾಲಿನಲ್ಲಿ ನಡೆದುಕೊಂಡೆ ಬೆಂಗಳೂರು ತಲುಪಿದ್ದು, ಬದುಕಿಗೊಂದು ಹೊಸ ತಿರುವು ನೀಡಿದ ನ್ಯಾಷನಲ್ ಹೈಸ್ಕೂಲು, ಉಚಿತ ಪ್ರಸಾದ ನಿಲಯದಲ್ಲಿ ಪ್ರವೇಶ ಪಡೆಯಲು ಮಾಡಿದ ಹೋರಾಟ, ಬರೀ ನೀರು ಕುಡಿದೇ ದಿನಗಳನ್ನು ನೂಕಿದ್ದು, ಫೇಲಾದರೆ ಮತ್ತೆ ಮರಳಿ ಊರಿಗೆ ಹೋಗಬೇಕಲ್ಲ ಎನ್ನುವ ಭೀತಿಯಿಂದ ಓದಿದ್ದು, ಪ್ರತಿ ತರಗತಿಯಲ್ಲೂ ಪಟ್ಟಣದ ಹುಡುಗರಿಗೆ ಸ್ಪರ್ಧೆ ಒಡಿದ್ದು ಹೀಗೆ ಹತ್ತು ಹಲವು ಸಂಗತಿಗಳು ಅವರ ಸರಳತೆಗೆ ಸಾಕ್ಷಿಯಾಗಿದೆ.

ಅವರು ಬಾಲ್ಯದಲ್ಲಿ ಅನುಭವಿಸಿದ ಕಡು ಬಡತನ ಮತ್ತು ವಿದ್ಯಾಭ್ಯಾಸಕ್ಕಾಗಿ ಮಾಡಿದ ಹೋರಾಟ ನಂತರದ ಪ್ರಾಮಾಣಿಕ ಸರಳತೆಯ ಬದುಕಿಗೆ ಗಟ್ಟಿ ಅಡಿಪಾಯ ಒದಗಿಸಿತು ಎನ್ನುವುದು ಸುಳ್ಳಲ್ಲ.ನಂತರದ ಭಾಗ ಶಿಕ್ಷಕರಾಗಿ ಎಚ್.ನರಸಿಂಹಯ್ಯನವರು ಮಾಡಿದ ಸಾಧನೆಗಳು ಅದ್ಭುತ. ತಮ್ಮ ಇಡೀ ಬದುಕನ್ನು ಶಿಕ್ಷಕ ವೃತ್ತಿಗಾಗಿ ಮುಡಿಪಾಗಿಟ್ಟ ನರಸಿಂಹಯ್ಯನವರ ಸರಳ ಬದುಕು ಇಂದಿನ ಜನರಿಗೆ ಪ್ರೇರಣೆ ನೀಡುತ್ತದೆ.

ಅಮೇರಿಕಾದಂಥ ಆಕರ್ಷಕ ರಾಷ್ಟ್ರದಲ್ಲಿ ಅಧ್ಯಯನ ಮಾಡಿಯೂ ತಾಯ್ನಾಡಿನಲ್ಲಿ ಸೇವೆ ಸಲ್ಲಿಸಬೇಕೆನ್ನುವ ಅವರ ಹಂಬಲ, ವಿದ್ಯೆ ಕೊಟ್ಟು ಬದುಕು ರೂಪಿಸಿದ ನ್ಯಾಷನಲ್ ಶಿಕ್ಷಣ ಸಂಸ್ಥೆಯಲ್ಲೆ ಕೆಲಸ ಮಾಡಬೇಕೆನ್ನುವ ಅವರ ತುಡಿತ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನಿವೃತ್ತಿಯ ನಂತರ ನ್ಯಾಷನಲ್ ಕಾಲೇಜಿಗೆ ಮರಳಿ ಬಂದ ಅವರ ಸರಳತೆಯ ನಿಷ್ಠೆ, ದೊಡ್ಡ ಹುದ್ಧೆಯಲ್ಲಿದ್ದೂ ವಿದ್ಯಾರ್ಥಿಗಳ ವಸತಿ ಗೃಹದ ಸಣ್ಣ ಕೋಣೆಯಲ್ಲಿ ವಾಸಿಸುತ್ತಿದ್ದ ಅವರ ಸರಳತೆ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಬದುಕಿನುದ್ದಕ್ಕೂ ಶ್ರಮಿಸಿದ್ದು, ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಸೇವೆಗಳು, ಪವಾಡಗಳ ದುರುಪಯೋಗವನ್ನು ವಿರೋಧಿಸಿದ ಅವರ ವೈಚಾರಿಕ ಕ್ರಾಂತಿ, ತಮ್ಮ ಅಂತ್ಯಕ್ರಿಯೆಯನ್ನು ಅತ್ಯಂತ ಸರಳವಾಗಿ ಮಾಡಬೇಕೆಂದು ಅವರು ಬರೆದಿಟ್ಟ ಉಯಿಲು ಹೀಗೆ ಅನೇಕ ಸಂಗತಿಗಳ ಮೂಲಕ ಎಚ್ಚೆನ್ ಅವರ ಅಗಾಧ ಸರಳ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ ಎನ್ನಬಹುದು.

ಅತ್ಯಂತ ಪ್ರಜ್ಞಾಪೂರ್ವಕವಾಗಿ ಅವರು ರೂಢಿಸಿಕೊಂಡಿದ್ದ ಸರಳ ಬದುಕು ಎಚ್ಚೆನ್ ಯವರು ಇಂದಿನ ಆಧುನಿಕ ಸಮಾಜಕ್ಕೆ ಇಷ್ಟವಾಗಲು ಮುಖ್ಯಕಾರಣವಾಗುತ್ತದೆ. ಸರಳತೆಗೆ ಇನ್ನೊಂದು ಹೆಸರೇ ಎಚ್.ನರಸಿಂಹಯ್ಯನವರು ಎನ್ನುವಂತೆ ಅವರು ಬದುಕಿ ಬಾಳಿದರು. ಧರಿಸುವ ಬಟ್ಟೆ, ಸೇವಿಸುವ ಆಹಾರ, ವಾಸಿಸುವ ಕೋಣೆ ಹೀಗೆ ಪ್ರತಿಯೊಂದು ಅವರ ಸರಳ ಬದುಕಿಗೆ ಸಾಕ್ಷಿಯಾಗಿದ್ದವು. ಸರಳತೆಗೂ ಮತ್ತು ಅವರ ಬದುಕಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದಾಗಲೂ ಅವರು ತಮ್ಮ ವೇಶ ಭೂಷಣಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿಲ್ಲ.

ಒಂದು ಹಂತದಲ್ಲಿ ಅಂಥದ್ದೊಂದು ಒತ್ತಡ ಬಂದಾಗ ಹುದ್ದೆಯನ್ನು ತ್ಯಜಿಸಲು ಮುಂದಾದರೆ ವಿನಹ ಸರಳತೆಯನ್ನು ಬಿಟ್ಟುಕೊಡಲು ಸ್ವಲ್ಪವೂ ಯೋಚಿಸಲಿಲ್ಲ. ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಯೋರ್ವ ತನ್ನ ಬದುಕಿನುದ್ದಕ್ಕೂ ವಿದ್ಯಾರ್ಥಿಗಳ ವಸತಿ ನಿಲಯದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದರೆನ್ನುವುದು ಕಲ್ಪನೆಗೂ ನಿಲುಕದ ಸಂಗತಿ. ಆ ಕೋಣೆಯಲ್ಲಾದರೂ ಏನಿತ್ತು ಮಲಗಲು ಒಂದೆರಡು ಹಾಸಿಗೆಗಳು, ಬರೆಯಲು ಸಣ್ಣ ಮೇಜು, ಅತಿಥಿಗಳಿಗಾಗಿ ಕೂಡಲು ಎರಡು ಕುರ್ಚಿಗಳು. ವಿಲಾಸಿ ಜೀವನವನ್ನು ನಡೆಸುತ್ತ ಸರಳತೆಯನ್ನು ಕೇವಲ ಉಪದೇಶವಾಗಿಟ್ಟುಕೊಂಡವರಿಗೆ ಎಚ್ಚೆನ್ ಅವರ ಸರಳ ಬದುಕು ಒಂದು ನೀತಿ ಪಾಠವಾಗುತ್ತದೆ.

ಡಾ.ಎಚ್ ಎನ್ ರವರಿಗೆ ಸಂಧ
ಪ್ರಶಸ್ತಿ-ಗೌರವಗಳು

ಅವರ ಸರಳತೇಯ ಹೋರಾಟ, ಸಮಾಜಿಕ ಚಿಂತನೆಯ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1968),ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನೀಡಿದ ತಾಮ್ರಪತ್ರ ಪ್ರಶಸ್ತಿ (1973), ಭಾರತ ಸರ್ಕಾರದ
ಪದ್ಮಭೂಷಣ ಪ್ರಶಸ್ತಿ (1984),
ಕಲ್ಬುರ್ಗಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ(1988), ದೇವರಾಜ ಅರಸು ಪ್ರಶಸ್ತಿ (1994) ಗಳು ದೊರೆಕಿವೆ. ಮತ್ತು
ಫೆಲೋಗಳಾಗಿರುವ ಕಮಿಟಿ ಫಾರ್ ದಿ ಸೈಂಟಿಪಿಕ್ ಇನ್ವೆಸ್ಟಿಗೇಷನ್ ಆಫ್ ದಿ ಕ್ಲೈಮ್ಸ್ ಆಫ್ ದಿ ಪ್ಯಾರಾ ನಾರ್ಮಲ್` ( Committee for Scientific Investigation of the claims of the Paranomal) ಸಂಸ್ಥೆಯು ಭಾರತದ ಏಕೈಕ ಫೆಲೋ ಎಂಬ ಗೌರವಕ್ಕೆ ಎಚ್ ಎನ್ ರವರು ಪಾತ್ರರಾಗಿದ್ದಾರೆ. 2004ರ ದಸರಾ ಮಹೋತ್ಸವದ ಉದ್ಘಾಟನೆ ಮಾಡುವ ಹಿರಿಮೆಗೆ ಭಾಜನರಾಗಿದ್ದಾರೆ . ಹೀಗೆ ಹತ್ತು ಹಲವು ಪ್ರಶಸ್ತಿ, ಗೌರವ, ಸನ್ಮಾನಗಳು ಸಂಧಿವೆ.

ಕೊನೆಯ ಮಾತು

ಎಚ್ಚೆನ್ ರವರ ನಿರ್ಮಲ ವ್ಯಕ್ತಿತ್ವ ಅದ್ಭುತ ಗುಣಗಳ ಒಂದು ಗಣಿ. ಕುಗ್ರಾಮವೊಂದರ ಅತ್ಯಂತ ಬಡತನದ ಕುಟುಂಬದಲ್ಲಿ ಹುಟ್ಟಿ ಬಂದ ಹಳ್ಳಿಯ ಹುಡುಗನೊಬ್ಬ ನಿರಂತರವಾದ ಸರಳತೆಯ,ಸಮಾಜಿಕ ಚಿಂತನೆಯ ಶ್ರಮದಿಂದ ಜೊತೆಗೆ ಅಚಲವಾದ ವಿಶ್ವಾಸದಿಂದ, ತನ್ನ ವೈಚಾರಿಕ ಮನೋಭಾವದಿಂದ ಅತ್ಯಂತ ಪ್ರತಿಭಾವಂತನಾಗಿ ಬೆಳೆದು ನಿಂತು ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿದ ಅಪ್ರತಿಮ ಸಾಧನೆ ನಮ್ಮಗೆಲ್ಲರಿಗೂ ಬೆರಗು ಹುಟ್ಟಿಸುತ್ತದೆ. ಜೊತೆಗೆ ಅವರ ಸರಳತೆಯ ಬದುಕು ಅನೇಕರಿಗೆ ಸ್ಪೂರ್ತಿಯ ಸೆಲೆಯಾಗುತ್ತದೆ.

ಮನುಷ್ಯ ಹೇಗೆ ಬದುಕಬೇಕೆನ್ನುವುದಕ್ಕೆ ಎಚ್ಚೆನ್ ಸದಾಕಾಲ ಮಾದರಿಯಾಗಿ ನಿಲ್ಲುತ್ತಾರೆ. ಎಚ್ಚೆನ್ ನಮಗೆಲ್ಲ ಇಷ್ಟವಾಗಲು ಅನೇಕ ಸಂಗತಿಗಳು ಕಾರಣವಾಗುತ್ತವೆ. ಅವರ ಸರಳ ಜೀವನ ಶೈಲಿ, ಅನನ್ಯ ರಾಷ್ಟ್ರ ಪ್ರೇಮ, ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಯ ಮೇಲಿನ ನಿಷ್ಠೆ, ಕಡು ಬಡತನದ ಬದುಕಿನೊಂದಿಗಿನ ಹೋರಾಟ, ಅವರಲ್ಲಿನ ಅಚಲವಾದ ಆತ್ಮವಿಶ್ವಾಸ, ವೈಚಾರಿಕ ಮನೋಭಾವ, ಬದುಕಿನ ಒಂದು ಭಾಗ ಎನ್ನುವಂತೆ ಬೆಳೆಸಿಕೊಂಡು ಬಂದ ನಿಷ್ಟೂರತೆ ಹೀಗೆ ಅನೇಕ ಕಾರಣಗಳಿಂದ ನರಸಿಂಹಯ್ಯನವರ ವ್ಯಕ್ತಿತ್ವ ನಮಗೆ ಆಪ್ತವಾಗುತ್ತದೆ.ಹಳ್ಳಿಯಿಂದ ಬಂದ ಅನಾಥ ಬಾಲಕ ನ್ಯಾಷನಲ್ ಹೈಸ್ಕೂಲಿನಲ್ಲಿ ಪ್ರವೇಶ ಪಡೆದು ತನ್ನ ಸ್ವಂತ ಪರಿಶ್ರಮದಿಂದ ಆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆರಿದ್ದು ಅವರ ಬದುಕಿನ ಮಹತ್ವದ ಸಾಧನೆಗಳಲ್ಲೊಂದು.

ವಿಶ್ವವಿದ್ಯಾಲಯದ ಉಪಕುಲಪತಿ, ಮೇಲ್ಮನೆಯ ಶಾಸಕ ಸ್ಥಾನ, ಕನ್ನಡ ಪ್ರಾಧಿಕಾರದ ಅಧ್ಯಕ್ಷತೆ, ಪದ್ಮಭೂಷಣ ಪ್ರಶಸ್ತಿ, ಗೌರವ ಡಾಕ್ಟರೇಟ್ ಈ ಎಲ್ಲವು ಎಚ್ಚೆನ್ ಅವರ ಪ್ರತಿಭೆಗೆ ಸಂದ ಗೌರವಗಳು. ಯಾವುದನ್ನೂ ಅವರು ಅಪೇಕ್ಷಿಸಿದವರಲ್ಲ. ಯಾವ ಪ್ರಶಸ್ತಿ, ಗೌರವಗಳ ಹಿಂದೆ ಬಿದ್ದವರಲ್ಲ. ಒಂದು ಪ್ರಶಸ್ತಿ, ಉನ್ನತ ಹುದ್ದೆ ದೊರೆತಾಗಲೂ ಅವರದು ನಿರ್ವಿಕಾರ ಭಾವ.

ತನ್ನದು ಎನ್ನುವ ಒಂದು ಕೌಟಂಬಿಕ ಚೌಕಟ್ಟನ್ನೂ ಕಟ್ಟಿ ಕೊಳ್ಳದ ವ್ಯಕ್ತಿಗೆ ಅನೇಕ ಸ್ಥಾನ ಮಾನಗಳು ಹುಡುಕಿಕೊಂಡು ಬಂದವು. ಪ್ರತಿಭೆ, ನಿರಂತರ ಪರಿಶ್ರಮ, ಪ್ರಾಮಾಣಿಕತೆ ಈ ಗುಣಗಳಿಂದ ಮನುಷ್ಯನೋರ್ವನ ಜೀವನದಲ್ಲಿ ಏನೆಲ್ಲ ಪವಾಡಗಳಾಗಬಹುದೆನ್ನುವುದಕ್ಕೆ ಎಚ್.ನರಸಿಂಹಯ್ಯನವರ ಸರಳತೆ ಬದುಕು, ಸಮಾಜಿಕ ಚಿಂತನೆಗಳು ಸಾಕ್ಷಿ ಹಾಗೂ ನಮಗೆಲ್ಲರಿಗೂ ಪ್ರೇರಣೆಯಾಗಿವೆ.

(ಲೇಖಕರು : ಸಂಗಮೇಶ ಎನ್ ಜವಾದಿ, ಕೊಡಂಬಲ.
ತಾಲೂಕು – ಚಿಟಗುಪ್ಪ, ಬೀದರ ಜಿಲ್ಲೆ.-9663809340.
Email I’d : snjawadi2009@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending