Connect with us

ದಿನದ ಸುದ್ದಿ

ಅಮೆರಿಕಾಕ್ಕೆ ‘ಹುವಾವೇ’ ಬಗ್ಗೆ ಯಾಕಿಷ್ಟು ಭಯ..?

Published

on

ಚೀನಾವು ತನ್ನ ದೇಶಿಯ ಮಾರುಕಟ್ಟೆಯನ್ನು ರಕ್ಷಿಸಲು ಮತ್ತು ಹುವಾವೇ ಯಂತಹ ತನ್ನ ‘ಚಾಂಪಿಯನ್ ಕಂಪನಿ’ ಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲು, ಯುಎಸ್ ನ ಮತ್ತು ಅದರ ಮಿತ್ರರ ಆಕ್ರಮಣಗಳನ್ನು ಪ್ರತಿರೋಧಿಸಲು, ಶಕ್ತವಾಗುವ ತಾಂತ್ರಿಕ ಸಾರ್ವಭೌಮತ್ವವನ್ನು ಅಭಿವೃದ್ಧಿ ಪಡಿಸಿಕೊಂಡಿದೆ.

ಯುಎಸ್ ನ ಯಾವುದೇ ತಾಂತ್ರಿಕ ಸಮರವನ್ನು ಎದುರಿಸಲು, ಸಾಮ್ರಾಜ್ಯಶಾಹಿ ಅಜೆಂಡಾ ಹಾಗೂ ಯುಎಸ್ ನ ತಂತ್ರಜ್ಞಾನ ಅಧಿಪತ್ಯವನ್ನು ಹಿಮ್ಮೆಟ್ಟಿಸಲು ಚೀನಾವು ಸಜ್ಜಾಗುತ್ತಿದೆ. ಇದೇ ಯು.ಎಸ್. ಸರಕಾರ ಹುವಾವೇ ಬಗ್ಗೆ ಇಷ್ಟು ಆತಂಕಕ್ಕೆ ಕಾರಣ. ಅಮೆರಿಕದ ಜಾಗತಿಕ ಅಧಿಪತ್ಯದೊಂದಿಗೆ ಬಂಡವಾಳಶಾಹಿ ಮತ್ತು ಸಾಮ್ರಾಜ್ಯಶಾಹಿಯ ಅಧಿಪತ್ಯವೂ ತಳುಕು ಹಾಕಿಕೊಂಡಿದೆ

ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾದ “ಹುವಾವೇ” ಎಂಬ ಟೆಲಿಕಾಂ ಕಂಪನಿಯು 5ಜಿ ನೆಟ್ವರ್ಕ್ ಕ್ಷೇತ್ರದಲ್ಲಿ ಪ್ರಮುಖ ಕಂಫನಿಯಾಗಿ ಹೊಮ್ಮಿದೆ. ಹುವಾವೇಯ 5ಜಿ ನೆಟ್ವರ್ಕ್ ಉಪಕರಣಗಳ ಜಾಗತಿಕ ಮಾರುಕಟ್ಟೆಗೆ ವಿಸ್ತರಣೆಯನ್ನು ನಿಬರ್ಂಧಿಸಲು ಅಮೆರಿಕಾವು ಅನೇಕ ಉಗ್ರ ಕ್ರಮಗಳನ್ನು ಇತ್ತೀಚೆಗೆ ಕೈಗೊಂಡಿದೆ. 5ಜಿ ನೆಟ್ವರ್ಕ್ ಉಪಕರಣಗಳ ತಯಾರಿಗೆ ಅಗತ್ಯವಾದ ಪ್ರಮುಖವಾದ ಬಿಡಿಭಾಗಗಳು ಮತ್ತು ಸಾಪ್ಟ್ವೇರ್ ಗಳನ್ನು ನಿರಾಕರಿಸುವ ಪ್ರಯತ್ನಗಳನ್ನು ಮಾಡುವ ಮೂಲಕ ಹುವಾವೇಯ ಮುಖ್ಯ ವ್ಯವಹಾರವನ್ನು ಪರಿಣಾಮಕಾರಿಯಾಗಿ ದುರ್ಬಲಗೊಳಿಸಲು ಅಮೆರಿಕಾ ಕಾರ್ಯ ಪ್ರವೃತ್ತವಾಗಿದೆ. ಹಿಂದೆನೂ ಹುವಾವೇ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿತ್ತು. ಅವು ಪ್ರಮುಖವಾಗಿ ವಿವಿಧ ದೇಶಗಳಲ್ಲಿ ಹುವಾವೇ ಪ್ರವೇಶವನ್ನು ನಿಬರ್ಂಧಿಸುವ ಗುರಿಯನ್ನು ಹೊಂದಿದ್ದವು. ಹುವಾವೇ ಕಂಪನಿಯ ವಿರುದ್ದ ಅಮೆರಿಕದ ಕ್ರಮಗಳಿಂದ ಚೀನಾದ ಮೇಲೆ ಅದು ತಾಂತ್ರಿಕ ಸಮರವನ್ನೇ ಸಾರಿದಂತಾಗಿದೆ.

ಹುವಾವೇ ವಿಶ್ವದಲ್ಲೇ ಅತಿ ದೊಡ್ಡ (ನಂಬರ್ 1) ಟೆಲಿಕಾಂ ಉಪಕರಣಗಳ ತಯಾರಕ ಮತ್ತು ಮೊಬೈಲ್ ಎರಡನೆಯ ಅತಿ ದೊಡ್ಡ ಮೊಬೈಲ್ ಪೋನ್ ಗಳ ತಯಾರಕ ಸಂಸ್ಥೆಯಾಗಿದೆ. ಇದು 5ಜಿ ತಂತ್ರಜ್ಞಾನದಲ್ಲಿ ಜಾಗತಿಕ ನಾಯಕ ಮತ್ತು ಟೆಕ್ ವಲಯದಲ್ಲಿ ಅಮೆರಿಕಾದ ಅಧಿಪತ್ಯಕ್ಕೆ ಗಮನಾರ್ಹ ಸವಾಲನ್ನು ಒಡ್ಡುವ ಸಂಸ್ಥೆಯಾಗಿ ಬೆಳೆದಿದೆ. ಆದ್ದರಿಂದಲೇ, ಇದನ್ನು ಅಮೆರಿಕಾಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಏಕೆಂದರೆ, 5 ಜಿ ನೆಟ್ವರ್ಕ್ ಜಗತ್ತಿನ ಜನಜೀವನದ ಪ್ರತಿಯೊಂದು ವಿಚಾರ ಮತ್ತು ಅಂಶಗಳ ಮೇಲೂ ತನ್ನ ಅಪಾರ ಪ್ರಭಾವ ಬೀರಲಿದೆ. ಆದ್ದರಿಂದ ಈ ಕ್ಷೇತ್ರದಲ್ಲಿ ತನ್ನ ಪಾರಮ್ಯವನ್ನು ಸ್ಫಾಪಿಸುವುದು ಅದರ ಸಾಮ್ರಾಜ್ಯಶಾಹಿ ಕಾರ್ಯಸೂಚಿಯ ಅಗತ್ಯದ ಭಾಗವಾಗಿದೆ. ಅದಕ್ಕೆ ಹುವಾವೇ ಸಂಸ್ಥೆಯು ಈ ಕ್ಷೇತ್ರದಲ್ಲಿ ಅಡ್ಡವಾಗಿ ನಿಲ್ಲುತ್ತದೆ. ಹೀಗಾಗಿ ಚೀನಾದ ಈ ಹುವಾವೇ ಟೆಕ್ ದೈತ್ಯ ಸಂಸ್ಥೆಯ ಅಭಿವೃದ್ಧಿಯನ್ನು ಅಮೆರಿಕಾ ಎಂದಿಗೂ ಸಹಿಸುವುದಿಲ್ಲ. ಇದನ್ನು ನೆಲ ಸಮ ಮಾಡಲೇ ಬೇಕೆಂದು ಎಲ್ಲಾ ತರದ ಒಳಸಂಚುಗಳ ಸಮರವನ್ನು ನಡೆಸಲು ಆರಂಭಿಸಿದೆ.

ಪ್ರಮುಖ ವಾಗಿ ಹುವಾವೇ ವಿರುದ್ದ ಎರಡು ರೀತಿಯಲ್ಲಿ ತನ್ನ ಆಕ್ರಮಣವನ್ನು ನಡೆಸಲು ಸಜ್ಜಾಗಿದೆ. ಇತ್ತೀಚೆಗೆ, ಅಮೆರಿಕಾದ ವಾಣಿಜ್ಯ ಇಲಾಖೆಯು ಎರಡು ಬಗೆಯ ಉಗ್ರವಾದ ನಿಬರ್ಂಧ ಕ್ರಮಗಳನ್ನು ಹುವಾವೇ ವಿರುದ್ದ ಘೋಷಿಸಿದೆ.

ಅದರಲ್ಲಿ, ಮೊದಲನೆಯದು, ಹುವಾವೇ ತಯಾರು ಮಾಡುವ ಮೊಬೈಲ್ ಗಳು ಮತ್ತು 5ಜಿ ನೆಟ್ ವರ್ಕ್ ಉಪಕರಣಗಳಿಗೆ, ಯುಎಸ್ ನ ಟೆಕ್ ಸಂಸ್ಥೆ ಗಳು ಸರಬರಾಜು ಮಾಡುವ ಎಲ್ಲಾ ಬಗೆಯ ಬಿಡಿ ಭಾಗಗಳನ್ನು (ಮೂಲ ‘ಚಿಪ್ ಸೆಟ್’ ಗಳು ಮತ್ತಿತರ ಹಾರ್ಡ್ವೇರ್, ಸಾಫ್ಟ್ ವೇರ್) ತಡೆಗಟ್ಟುವುದು. ಎರಡನೆಯದು, ಕೆಲವು ದಿನಗಳ ಹಿಂದೆಯಷ್ಟೇ, ಆಂಡ್ರಾಯ್ಡ್ ಸಾಫ್ಟ್ವೇರ್ ಮತ್ತು ಇದಕ್ಕೆ ಸಂಬಂಧಿಸಿದ ಮತ್ತಿತರ ಗೂಗಲ್ ಸೇವೆಗಳನ್ನು ಹುವಾವೇ ಮೊಬೈಲುಗಳಲ್ಲಿ ಬಳಸಲು ನಿಬರ್ಂಧಗಳನ್ನು ಹೇರುವ ಘೋಷಣೆಯನ್ನು ಗೂಗಲ್ ಮೂಲಕ ಮಾಡಿರುವುದು. ಇದರಿಂದಾಗಿ, ಆಂಡ್ರಾಯ್ಡ್ ಮತ್ತು ಇತರ ಗೂಗಲ್ ಸೇವೆಗಳಿಗೆ ಪರ್ಯಾಯ ಪರಿಸರ ವ್ಯವಸ್ಥೆಯನ್ನು ಹುವಾವೇ ಮಾಡಿಕೊಳ್ಳಬೇಕಾಗಿದೆ. ಈ ಎರಡೂ ಕ್ರಮಗಳು ಹುವಾವೇ ಮೊಬೈಲ್ ಗಳು ಮತ್ತು 5ಜಿ ನೆಟ್ ವರ್ಕ್ ಉಪಕರಣಗಳ ಉತ್ಪಾದನೆ, ಪೂರೈಕೆ ಮತ್ತು ಮಾರುಕಟ್ಟೆ ವಿಸ್ತರಣೆಗೆ ತೀವ್ರ ಸವಾಲೊಡ್ಡಲಿವೆ.

ಕಳೆದ ಡಿಸೆಂಬರ್ ನಲ್ಲಿ ಹುವಾವೇ ಸಿ.ಎಫ್.ಒ. ಮೆಂಗ್ ವನ್ಝೌ ರನ್ನು ಯುಎಸ್ ಅಧಿಕಾರಿಗಳ ಆಜ್ಞೆಯ ಮೇರೆಗೆ ಕೆನಡಾದಲ್ಲಿ ಬಂಧಿಸಲಾಗಿತ್ತು. ಇರಾನ್ ಮೇಲೆ ಇತ್ತೀಚೆಗೆ ಯು.ಎಸ್. ತೆಗೆದು ಕೊಂಡ ನಿಬರ್ಂಧಗಳನ್ನು ಪಾಲಿಸದಿರುವ ಹಿನ್ನೆಲೆಯಲ್ಲಿ ಚೀನಾದ ಮೇಲೆ ಒತ್ತಡ ಹೇರಲು ಅಮೆರಿಕಾ ಕೈಗೊಂಡಿರುವ ಕ್ರಮ ಇದಾಗಿರಬಹುದೆಂದು ಅನೇಕ ವಿಶ್ಲೇಷಕರ ಅಭಿಪ್ರಾಯವಾಗಿತ್ತು.

ಆದಾಗ್ಯೂ, ಹುವಾವೇ ಮತ್ತು ಚೀನಾದ ಇನ್ನಿತರೆ ಟೆಲಿಕಾಂ ಕಂಪನಿಗಳ ವಿರುದ್ದ ಯುಎಸ್ ನ ನಿಬರ್ಂಧಗಳು, ಡೊನಾಲ್ಡ್ ಟ್ರಂಪ್ ನ ಇರಾನ್ ಮೇಲಿನ ನ್ಯೂಕ್ಲಿಯರ್ ಒಪ್ಪಂದ ದಿಂದ ಹೊರ ಬರುವ ನಿರ್ಧಾರದ ಬಹಳ ಮೊದಲೇ ಆರಂಭವಾಗಿವೆ. ಅನೇಕ ವರ್ಷಗಳಿಂದ, ಟೆಲಿಕಾಂ ಕ್ಷೇತ್ರದಲ್ಲಿ, ವಿಶೇಷವಾಗಿ 5ಜಿ ನೆಟ್ವರ್ಕ್ ತಂತ್ರಜ್ಞಾನದಲ್ಲಿ, ಹುವಾವೇ ಯುಎಸ್ ಕಂಪನಿಗಳಿಗಿಂತ ಮುಂದೆ ಇದ್ದವು. ಈ ಹಿಂದೆ, ಅಮೆರಿಕದ ಒತ್ತಡಕ್ಕೆ ಮಣಿದು, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ದೇಶಗಳು ಹುವಾವೇ ಯನ್ನು 5ಜಿ ನೆಟ್ವರ್ಕ್ ಉಪಕರಣಗಳ ಪ್ರವೇಶವನ್ನು ನಿಬರ್ಂಧಿಸಲಾಗಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬೇಕು. ಆದಾಗ್ಯೂ, ಇದೀಗ ಚೀನಾದ ಈ ದೈತ್ಯ ಹುವಾವೇ ಯ ತಂತ್ರಜ್ಞಾನ ಜಗತ್ತಿನಲ್ಲಿ ಹರಡುತ್ತಿರುವುದು ಅಮೆರಿಕಾದ ಆಂತಕಕ್ಕೆ ಮೂಲ ಕಾರಣವಾಗಿದೆ.

ಹುವಾವೇ ತಂತ್ರಜ್ಞಾನವು “ಭದ್ರತಾ ದೃಷ್ಟಿಯಿಂದ ಅಪಾಯಕಾರಿ” ಎಂದು ಯುಎಸ್ ವಾದಿಸುತ್ತದೆ.. ಆದರೆ ಸಿಸ್ಕೊ ನಂತಹ ಯು.ಎಸ್. ಕಂಪನಿಗಳು ತಯಾರಿಸಿದ ನೆಟ್ವರ್ಕ್ ಉಪಕರಣಗಳ ಹಿಂಬಾಗಿಲಿನಿಂದ, ನಿರಂತರವಾಗಿ ಅಮೆರಿಕ ಗುಪ್ತ ಮಾಹಿತಿಗಳನ್ನು ಪಡೆಯುತ್ತಿತ್ತು ಎಂದು ಎಡ್ವರ್ಡ್ ಸ್ನೋಡೆನ್ನ್ ಬಯಲು ಮಾಡಿದ್ದು ಇಲ್ಲಿ ನೆನಪಿಸಿಕೊಂಡರೆ, ಅಮೆರಿಕ ಈ ಬಗ್ಗೆ ದೂರುವುದು ಜೋಕ್ ಎನ್ನಬಹುದು.

ಹುವಾವೇ ಪ್ರಾಬಲ್ಯವನ್ನು ತಡೆಹಿಡಿಯುವ ಯುಎಸ್ ಯೋಜಿಸಿರುವ ನಿಬರ್ಂಧಗಳಿಂದ, ಅದರ ಚಿಪ್ ತಯಾರಿಕಾ ಮತ್ತು ಇತರ ಕಂಪನಿಗಳಿಗೆ ವಾರ್ಷಿಕವಾಗಿ ರಫ್ತು ಆದಾಯದಲ್ಲಿ 11 ಬಿಲಿಯನ್ ಡಾಲರ್ ನಷ್ಟು ನಷ್ಟ ಉಂಟಾಗುತ್ತದೆ ಎಂದು ಅಂದಾಜಿಸಲಾಗಿದೆ.

ಇದು ಪ್ರಪಂಚದಾದ್ಯಂತ 5 ಜಿ ನೆಟ್ ವರ್ಕ್ ನ ತಂತ್ರಜ್ಞಾ£ದ ಒಟ್ಟಾರೆ ಅಭಿವೃದ್ಧಿಯ ಮೇಲೆ ಅಗಾಧವಾದ ದುಷ್ಪರಿಣಾಮ ಬೀರುತ್ತದೆ. ಆದಾಗ್ಯೂ, ತನ್ನ ಮಿತ್ರ ರಾಷ್ಟಗಳ ಮಾರುಕಟ್ಟೆಗಳಲ್ಲಿ, ಪ್ರಮುಖವಾಗಿ ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳಲ್ಲಿ, ಹುವಾವೇಯ ಉತ್ಕøಷ್ಟ 5ಜಿ ತಂತ್ರಜ್ಞಾನದ ಬೇರೂರುವ ಸಾದ್ಯತೆಯ ಬಗ್ಗೆ ಯುಎಸ್ ಹೆಚ್ಚು ಚಿಂತಿತ ಗೊಂಡಿದೆ. ಪಶ್ಚಿಮ ರಾಷ್ಟ್ರಗಳು ತಮ್ಮತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು, ಬಡ ರಾಷ್ಟಗಳಿಗೆ ಮಾತ್ರ ಬೋಧಿಸುವ ತಮ್ಮ ಮುಕ್ತ ವ್ಯಾಪಾರ ನಿಯಮಗಳನ್ನು ಉಲ್ಲಂಘನೆ ಮಾಡಲು ಹಿಂಜರಿಯುವುದಿಲ್ಲ ಎಂಬುದನ್ನು ಮತ್ತೆ ಇಲ್ಲಿ ಯುಎಸ್ ಸಾಬೀತು ಪಡಿಸುತ್ತಿದೆ.

ಆದರೆ, ಇತ್ತೀಚಿನ ಗೂಗಲ್ ಕ್ರಮಗಳಿಗೂ “ರಾಷ್ಟ್ರೀಯ ಭದ್ರತಾ” ಅಂಶಗಳಿಗೂ ಯಾವುದೇ ಸಂಬಂಧವಿರುವುದಿಲ್ಲ. ಆದರೆ, ಹುವಾವೇ ಸಂಸ್ಥೆಯಲ್ಲಿ ತಯಾರಿಸಿದ ಮೊಬೈಲ್ ಪೋನ್ಗಳನ್ನು ಇನ್ನಿತರೆ ದೇಶಗಳಲ್ಲಿ ದುರ್ಬಲಗೊಳಿಸುವ ಸಲುವಾಗಿಯೇ, ಗೂಗಲ್ ಕ್ರಮಗಳ ಮೂಲಕ ಯುಎಸ್ ಪ್ರಯತ್ನ ಮಾಡುತ್ತಿದೆ.

ಗೂಗಲ್ ಕ್ರಮಗಳು ಎಂದರೆ, ಹುವಾವೇ ಪೋನ್ ಗಳನ್ನು ಖರೀದಿಸುವ ವರು ಮತ್ತು ಪ್ರಸ್ತುತ ಮಾಲೀಕರು ಸಹಾ, ಗೂಗಲ್ ನ ಉತ್ಪನ್ನಗಳು ಮತ್ತು ಭದ್ರತಾ ನವೀಕರಣಗಳಿಗೆ ಪ್ರವೇಶವನ್ನು ನಿರಾಕರಿಸಲು ಅಮೆರಿಕಾ ಒತ್ತಾಯ ಹೇರುತ್ತಿದೆ. ಇದರಿಂದಾಗಿ ಆಂಡ್ರಾಯ್ಡ್ ಓಎಸ್, ಜಿ-ಮೇಲ್ ಮತ್ತು ಗೂಗಲ್ ಸ್ಟೋರ್ ನಂತಹ ಉತ್ಪನ್ನ ಗಳ ಮೂಲಕ, ಪ್ರಪಂಚದಾದ್ಯಂತ ಇರುವ ಗೂಗಲ್ ನ ಲಕ್ಷಾಂತರ ಬಳಕೆದಾರ ಹೊಂದಿರುವ ವ್ಯಾಪ್ತಿ ಮತ್ತು ಈ ಹಂತದ ಬೆಳವಣಿಗೆಯಲ್ಲಿ ಹುವಾವೇ ಮೊಬೈಲ್ ಪೋನ್ ವ್ಯವಹಾರಕ್ಕೆ ಭಾರಿ ಹಿನ್ನಡೆಯಾಗುವಂತೆ ಮಾಡುವುದು ಅದರ ಉದ್ದೇಶ.

ಹುವಾವೇ ಸವಾಲುಗಳನ್ನು ಎದುರಿಸಲು ಸಿದ್ದವಾಗಿದೆ. ಕಂಪನಿಯ ಸಂಸ್ಥಾಪಕ ರೆನ್ ಝೆಂಗ್ಛೀ ಯವರು ನಿಬರ್ಂಧಗಳು ಕಂಪನಿಯ ಮುಖ್ಯ ವ್ಯವಹಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ವಿಶ್ವಾಸ ಹೊಂದಿದ್ದಾರೆ. ನಮ್ಮ ಉತ್ಪನ್ನಗಳನ್ನು ಮತ್ತು ಸೇವೆಗಳನ್ನು ಮುಂದುವರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಿಪ್ ಸೆಟ್ ಗಳನ್ಜು ಈಗಾಗಲೇ ಸಾಕಷ್ಟು ಸಂಗ್ರಹಿಸಲಾಗಿದೆ. ಹಾಗೆಯೇ, ಗೂಗಲ್ ಪರಿಸರ ವ್ಯವಸ್ಥೆಗೆ ಪರ್ಯಾಯ ಉತ್ಪನ್ನ ಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಲ್ಲಿ ಹೊಸ ಹೂಡಿಕೆಗಳನ್ನು ಮಾಡಲಾಗುತ್ತಿದೆ. ಆದಾಗ್ಯೂ, ಈಗಿರುವ ಬಳಕೆದಾರರ ಮೂಲವನ್ನು ಉಳಿಸಿಕೊಳ್ಳಲು ಹುವಾವೇ ಕಾರ್ಯತಂತ್ರಗಳನ್ನು ನಿಯೋಜಿಸಲು ಪ್ರಯತ್ನಗಳನ್ನು ಕೈಗೊಂಡಿದೆ. ಇದು ಹುವಾವೇ

ವಾಣಿಜ್ಯದ ಮೇಲೆ ಯು.ಎಸ್ ಮತ್ತು ಚೀನಾ ಒಪ್ಪಂದದ ಭಾಗವಾಗಿ, ಹುವಾವೇ ವಿರುದ್ದದ ನಿಬರ್ಂಧ ಕ್ರಮಗಳನ್ನು ಅಮೆರಿಕಾ ಹಿಂಪಡೆಯಬಹುದು ಅಥವಾ ಮುಂದೂಡಬಹುದು ಎಂಬ ಸಾಧ್ಯತೆಗಳು ಇವೆಯಾದಾರೂ ಖಂಡಿತವಾಗಿಯೂ ಇವೆರಡೂ ರಾಷ್ಟಗಳ ನಡುವಿನ ವಾಣಿಜ್ಯ ಸಮರವಂತೂ ನಿಲ್ಲುವುದಿಲ್ಲ ಎನ್ನಲಾಗಿದೆ.

ಪ್ರಸ್ತುತ ಮುಖಾಮುಖಿ ಯಲ್ಲಿ ಇಬ್ಬರು ಹಲವಾರು ಪಾಠಗಳನ್ನು ಕಲಿಯ ಬೇಕಾಗಿದೆಯಾದರೂ,. ಮೊದಲಿಗೆ, ಅಮೆರಿಕಾದ ಆರ್ಥಿಕತೆಯ ಮೇಲೆ ಹಾನಿ ಉಂಟಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ, ಚೀನಾವು ಹುವಾವೇ ಟೆಲಿಕಾಂ ತಂತ್ರಜ್ಞಾನದಲ್ಲಿ ಅಮೆರಿಕಾಕ್ಕೆ ಬೆದರಿಕೆಯನ್ನು ಒಡ್ಡಿದೆ ಎಂಬುದು ಸ್ಪಷ್ಟಗೊಂಡಿದೆ. 5ಜಿ ತಂತ್ರಜ್ಞಾನದ ಜೊತೆಗೆ ಆರ್ಟಿಫಿಶಿಲ್ ಇಂಟಲಿಜೆನ್ಸ್ ನಂತಹ ಕ್ಷೇತ್ರಗಳಲ್ಲೂ ಚೀನಾವು ಅಮೆರಿಕಾಕ್ಕಿಂತ ಹೆಚ್ಚಿನ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ. ಇದು ಅಮೆರಿಕಾದ ಆತಂಕವನ್ನು ಹೆಚ್ಚಿಸಿದೆ. ಚೀನಾ ಈ ತಂರ್ರಜ್ಞಾನದ ಮುನ್ನಡೆ ಹಾಗೂ ಬೆಲ್ಟ್ ಮತ್ತು ರೋಡ್ ಪೋರಂ ಬಳಸಿ ವ್ಯಾಪಾರ ಪಾಲುದಾರಿಕೆಯನ್ನು ಹೆಚ್ಚಿಸುತ್ತಿರುವುದು ಅಮೆರಿಕಾಕ್ಕೆ ಮತ್ತೊಂದು ಆತಂಕ..

ಚೀನಾವು ತನ್ನ ದೇಶಿಯ ಮಾರುಕಟ್ಟೆಯನ್ನು ರಕ್ಷಿಸಲು ಮತ್ತು ಹುವಾವೇ ಯಂತಹ ತನ್ನ ‘ಚಾಂಪಿಯನ್ ಕಂಪನಿ’ ಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲು, ಯುಎಸ್ ನ ಮತ್ತು ಅದರ ಮಿತ್ರರ ಆಕ್ರಮಣಗಳನ್ನು ಪ್ರತಿರೋಧಿಸಲು, ಶಕ್ತವಾಗುವ ತಾಂತ್ರಿಕ ಸಾರ್ವಭೌಮತ್ವವನ್ನು ಅಭಿವೃದ್ಧಿ ಪಡಿಸಿಕೊಂಡಿದೆ. ಯುಎಸ್ ನ ಯಾವುದೇ ತಾಂತ್ರಿಕ ಸಮರವನ್ನು ಎದುರಿಸಲು, ಸಾಮ್ರಾಜ್ಯಶಾಹಿ ಅಜೆಂಡಾ ಹಾಗೂ ಯುಎಸ್ ನ ತಂತ್ರಜ್ಞಾನ ಅಧಿಪತ್ಯವನ್ನು ಹಿಮ್ಮೆಟ್ಟಿಸಲು ಚೀನಾವು ಸಜ್ಜಾಗುತ್ತಿದೆ.

ಇದೇ ಯು.ಎಸ್. ಸರಕಾರ ಹುವಾವೇ ಬಗ್ಗೆ ಇಷ್ಟು ಆತಂಕಕ್ಕೆ ಕಾರಣ. ಅಮೆರಿಕದ ಜಾಗತಿಕ ಅಧಿಪತ್ಯದೊಂದಿಗೆ ಬಂಡವಾಳಶಾಹಿ ಮತ್ತು ಸಾಮ್ರಾಜ್ಯಶಾಹಿಯ ಅಧಿಪತ್ಯವೂ ತಳುಕು ಹಾಕಿಕೊಂಡಿದೆ. ಗೂಗಲ್, ಆಪಲ್, ಫೇಸ್ ಬುಕ್ ನಂತಹ ಕಂಪನಿಗಳ ಮೂಲಕ ಇಂಟರ್ನೆಟ್ ಮತ್ತು ಆ ಮೂಲಕ ಇಡೀ ಜಗತ್ತಿನ ಮಾಹಿತಿ ಮತ್ತು ಆರ್ಥಿಕದ ಜಾಲವನ್ನು ನಿಯಂತ್ರಣದಲ್ಲಿಟ್ಟಿರುವ ಅದರ ಯೋಜನೆಗೂ ಚೀನಾದಿಂದ ಸವಾಲು ಬರಬಹುದು ಎಂಬ ಆತಂಕದಿಂದಾಗಿಯೇ ಗೂಗಲ್ ಸಹ ಯು.ಎಸ್. ಸರಕಾರದ ಈ ನಿರ್ಧಾರದೊಂದಿಗೆ ಇಷ್ಟು ಆಸಕ್ತಿಯಿಂದ ತೊಡಗಿಸಿಕೊಂಡಿದೆ.

ಚೀನಾದ ತಂತ್ರಜ್ಞಾನದ ಸಾರ್ವಭೌಮತೆಯ ಸ್ವಾವಲಂಬನೆಯ ಪರಿಕಲ್ಪನೆ ಭಾರತಕ್ಕೂ ಮಾದರಿಯಾಗಬೇಕು.

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ನಾಗರಾಜ ನಂಜುಂಡಯ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ15 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ15 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ4 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ4 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ5 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ6 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ6 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ3 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending