Connect with us

ದಿನದ ಸುದ್ದಿ

ಬೂಕರ್ ಪ್ರಶಸ್ತಿ ಬಗ್ಗೆ ನಿಮಗಿಷ್ಟು ತಿಳಿದಿರಲಿ..!

Published

on

ಬೂಕರ್ ಪ್ರಶಸ್ತಿಯು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿಗಳಲ್ಲಿ ಒಂದಾಗಿದೆ. ಇದರ ಇತಿಹಾಸ ಹೀಗಿದೆ..

ಸ್ಥಾಪನೆ ಮತ್ತು ಆರಂಭಿಕ ವರ್ಷಗಳು (1969 – 2001)

ಬೂಕರ್ ಪ್ರಶಸ್ತಿಯನ್ನು 1968 ರಲ್ಲಿ “ಬೂಕರ್ ಪ್ರೈಜ್ ಫಾರ್ ಫಿಕ್ಷನ್” (Booker Prize for Fiction) ಎಂದು ಸ್ಥಾಪಿಸಲಾಯಿತು. ಬೂಕರ್ ಮೆಕ್‌ಕಾನೆಲ್ (Booker McConnell) ಎಂಬ ಬಹುರಾಷ್ಟ್ರೀಯ ಕಂಪನಿಯು ಈ ಪ್ರಶಸ್ತಿಯನ್ನು ಪ್ರಾಯೋಜಿಸಿತು. ಫ್ರಾನ್ಸ್‌ನ ಪ್ರಿಕ್ಸ್ ಗಾಂಕೂರ್ (Prix Goncourt) ಪ್ರಶಸ್ತಿಗೆ ಸಮಾನವಾಗಿ ಇಂಗ್ಲಿಷ್ ಭಾಷೆಯಲ್ಲಿ ಉತ್ತಮ ಕಾದಂಬರಿಗಳನ್ನು ಗುರುತಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಆರಂಭದಲ್ಲಿ, ಈ ಪ್ರಶಸ್ತಿಯು ಕಾಮನ್‌ವೆಲ್ತ್ ರಾಷ್ಟ್ರಗಳು, ಐರ್ಲೆಂಡ್ ಮತ್ತು ಝಿಂಬಾಬ್ವೆ ದೇಶದ ನಾಗರಿಕರು ಇಂಗ್ಲಿಷ್ ಭಾಷೆಯಲ್ಲಿ ಬರೆದ ಪೂರ್ಣ ಪ್ರಮಾಣದ ಕಾದಂಬರಿಗಳಿಗೆ ಮಾತ್ರ ಸೀಮಿತವಾಗಿತ್ತು.

1969 ರಲ್ಲಿ ಪಿ. ಹೆಚ್. ನ್ಯೂಬಿ (P.H. Newby) ಅವರ “ಸಮ್ಥಿಂಗ್ ಟು ಆನ್ಸರ್ ಫಾರ್” (Something to Answer For) ಕೃತಿಗೆ ಮೊದಲ ಬೂಕರ್ ಪ್ರಶಸ್ತಿ ಲಭಿಸಿತು.

1970 ರಲ್ಲಿ ಬೆರ್ನಿಸ್ ರೂಬೆನ್ಸ್ (Bernice Rubens) ಅವರು “ದಿ ಎಲೆಕ್ಟೆಡ್ ಮೆಂಬರ್” (The Elected Member) ಕೃತಿಗೆ ಪ್ರಶಸ್ತಿ ಪಡೆದ ಮೊದಲ ಮಹಿಳಾ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ವಿ.ಎಸ್. ನೈಪಾಲ್ (V.S. Naipaul) 1971 ರಲ್ಲಿ “ಇನ್ ಎ ಫ್ರೀ ಸ್ಟೇಟ್” (In a Free State) ಕೃತಿಗೆ ಬೂಕರ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮೂಲದ ಲೇಖಕರಾದರು (ಅವರು ಟ್ರಿನಿಡಾಡ್‌ನಲ್ಲಿ ಜನಿಸಿದರು).

ಮ್ಯಾನ್ ಬೂಕರ್ ಪ್ರಶಸ್ತಿ ಯುಗ (2002 – 2019):

2002 ರಲ್ಲಿ, ಬೂಕರ್ ಪ್ರಶಸ್ತಿಯ ಆಡಳಿತವನ್ನು ಬುಕ್ ಟ್ರಸ್ಟ್‌ನಿಂದ (Book Trust) ಮ್ಯಾನ್ ಗ್ರೂಪ್ ಪಿಎಲ್‌ಸಿ (Man Group PLC) ಎಂಬ ಹೂಡಿಕೆ ನಿರ್ವಹಣಾ ಸಂಸ್ಥೆಗೆ ವರ್ಗಾಯಿಸಲಾಯಿತು. ಈ ಸಮಯದಲ್ಲಿ ಪ್ರಶಸ್ತಿಯ ಹೆಸರನ್ನು “ಮ್ಯಾನ್ ಬೂಕರ್ ಪ್ರಶಸ್ತಿ” (Man Booker Prize) ಎಂದು ಬದಲಾಯಿಸಲಾಯಿತು.

2013 ರಲ್ಲಿ, ಪ್ರಶಸ್ತಿಯ ಅರ್ಹತೆಯನ್ನು ವಿಸ್ತರಿಸಲಾಯಿತು. ಇಂಗ್ಲಿಷ್ ಭಾಷೆಯಲ್ಲಿ ಬ್ರಿಟನ್ ಅಥವಾ ಐರ್ಲೆಂಡ್‌ನಲ್ಲಿ ಪ್ರಕಟವಾದ ಯಾವುದೇ ಕಾದಂಬರಿಗೆ ಈ ಪ್ರಶಸ್ತಿಯನ್ನು ನೀಡಲು ಪ್ರಾರಂಭಿಸಲಾಯಿತು, ಅಮೆರಿಕಾದ ಲೇಖಕರನ್ನು ಸಹ ಒಳಗೊಂಡಂತೆ. ಈ ಬದಲಾವಣೆಯು ಸಾಕಷ್ಟು ಚರ್ಚೆಗೆ ಒಳಗಾಯಿತು.

ಪ್ರಸ್ತುತ ಬೂಕರ್ ಪ್ರಶಸ್ತಿ (2019 ರಿಂದ)

2019 ರಲ್ಲಿ, ಚಾರಿಟಬಲ್ ಫೌಂಡೇಶನ್ ಕ್ರ್ಯಾಂಕ್‌ಸ್ಟಾರ್ಟ್ (Crankstart) ಪ್ರಾಯೋಜಕತ್ವವನ್ನು ವಹಿಸಿಕೊಂಡ ನಂತರ ಪ್ರಶಸ್ತಿಯು ತನ್ನ ಮೂಲ ಹೆಸರಾದ “ಬೂಕರ್ ಪ್ರಶಸ್ತಿ” ಗೆ ಮರಳಿತು.

ಇತ್ತೀಚೆಗೆ, (ಮೇ 20-2025) ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ತಮ್ಮ ಅನುವಾದಿತ “ಹಾರ್ಟ್ ಲ್ಯಾಂಪ್” (Heart Lamp) ಕೃತಿಗೆ 2025 ರ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ (International Booker Prize) ಪಡೆದಿದ್ದಾರೆ. ಇದು ಕನ್ನಡದ ಕೃತಿಗೆ ಲಭಿಸಿದ ಮೊದಲ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯಾಗಿದೆ.

ಬೂಕರ್ ಪ್ರಶಸ್ತಿಯಲ್ಲಿ ಎರಡು ವಿಧಗಳಿವೆ ಅವುಗಳೆಂದರೆ, ‘ಬೂಕರ್ ಪ್ರಶಸ್ತಿ ಮತ್ತು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ.’

ಬೂಕರ್ ಪ್ರಶಸ್ತಿ (Booker Prize): ಇದು ಯುನೈಟೆಡ್ ಕಿಂಗ್‌ಡಮ್ ಅಥವಾ ಐರ್ಲೆಂಡ್‌ನಲ್ಲಿ ಪ್ರಕಟವಾದ, ಇಂಗ್ಲಿಷ್ ಭಾಷೆಯಲ್ಲಿ ಬರೆದ ಅತ್ಯುತ್ತಮ ಮೂಲ ಕಾದಂಬರಿಗೆ ನೀಡಲಾಗುತ್ತದೆ.

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ (International Booker Prize): ಇದು ಇಂಗ್ಲಿಷ್‌ಗೆ ಅನುವಾದಗೊಂಡ, ವಿಶ್ವದ ಯಾವುದೇ ಭಾಷೆಯ ಅತ್ಯುತ್ತಮ ಕಾದಂಬರಿಗೆ ನೀಡಲಾಗುತ್ತದೆ. ಪ್ರಶಸ್ತಿಯ ಮೊತ್ತವನ್ನು ಮೂಲ ಲೇಖಕರು ಮತ್ತು ಅನುವಾದಕರು ಸಮಾನವಾಗಿ ಹಂಚಿಕೊಳ್ಳುತ್ತಾರೆ.
ಬೂಕರ್ ಪ್ರಶಸ್ತಿಯು ಸಾಹಿತ್ಯ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿದೆ ಮತ್ತು ವಿಶ್ವದಾದ್ಯಂತ ಓದುಗರ ಮತ್ತು ಬರಹಗಾರರ ಗಮನ ಸೆಳೆಯುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending