Connect with us

ರಾಜಕೀಯ

ಕನ್ಹಯ್ಯ, ಜಿಗ್ನೇಶ್ ಕಾಂಗ್ರೆಸ್ ಸೇರಿದ್ದನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು..?

Published

on

  • ಹರ್ಷಕುಮಾರ್ ಕುಗ್ವೆ

ಮಾಜಿ ಕಮ್ಯುನಿಸ್ಟ್ ಯುವ ಮುಂದಾಳು ಕನ್ಹಯ್ಯ ಕುಮಾರ್ ಮೇಲೆ ನಮ್ಮ ಕೆಲವು ಕಮ್ಯುನಿಸ್ಟ್ ಗೆಳೆಯರು ನಡೆಸುತ್ತಿರುವ ಟ್ರೋಲ್ ಕುರಿತು ನಾನೂ ಒಂದೆರಡು ಪೋಸ್ಟ್ ಹಾಕಿದ್ದಕ್ಕೆ ಕೆಲವರಿಗೆ ಬೇಜಾರಾಗಿದೆ ಎಂದು ತಿಳಿಯಿತು. ನನ್ನ ಉದ್ದೇಶ ಯಾರನ್ನೂ ನೋಯಿಸುವುದಲ್ಲ.

ಆದರೆ ಫ್ಯಾಸಿಸ್ಟರನ್ನು ವಿರೋದಿಸುವಲ್ಲಿ ತಾನು ತೋರಿದ ದಿಟ್ಟತನ, ವಾಕ್ಚಾತುರ್ಯದ ಕಾರಣಕ್ಕೆ ಇಷ್ಟು ದಿನ ಎಲ್ಲರ ಕಣ್ಮಣಿಯಾಗಿದ್ದ ಹೆಮ್ಮೆಯ ಕೂಸಾಗಿದ್ದ ಹುಡುಗನೊಬ್ಬ ಮತ್ತೊಂದು ಪಕ್ಷ ಸೇರಿದ ಕೂಡಲೇ ದ್ರೋಹಿ, ವಂಚಕ ಏನೇನೆಲ್ಲಾ ಆಗಿ ಯಾವ ಮಾರ್ಜಿನ್ ಕೊಡದೇ ನಿಂದಿಸತೊಡಗಿದಾಗ ಆದ ಕಳವಳದಿಂದ ‘ವಾರೆ’ನೋಟದಿಂದ ಒಂದೆರಡು ಸಾಲು ಬರೆಯಬೇಕಾಯಿತು.

ಕನ್ಹಯ್ಯ, ಜಿಗ್ನೇಶ್ ಕಾಂಗ್ರೆಸ್ ಸೇರಿದ್ದನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು? ಸೈದ್ಧಾಂತಿಕ, ಸಂಘಟನಾತ್ಮಕ ಬದ್ಧತೆ ಇಲ್ಲದ ಅವಕಾಶವಾದಿಗಳು ಬಂಡವಾಳಶಾಹಿ ಪಕ್ಷವನ್ನು ಸೇರಿಕೊಂಡರು ಎಂದು ಸರಳವಾಗಿ ತೀರ್ಪು ಹೊರಡಿಸಬಹುದೆ? ಖಂಡಿತಾ ಇಂತಹ ನಿಲುವು ಸರಿಯಲ್ಲ ಎಂಬುದು ನನ್ನ ಖಚಿತ ಅಭಿಪ್ರಾಯ. ಯಾಕೆ ಎಂದು ಮುಂದೆ ವಿವರಿಸುವೆ.

ನಾನು ಯಾವುದೇ ಪಕ್ಷದ ಸದಸ್ಯನಾಗಲೀ ವಕ್ತಾರನಾಗಲೀ ಅಲ್ಲ. ಯಾವುದೇ ಒಂದು ಪಕ್ಷದ ಐಡಿಯಾಲಜಿಗೂ ಆತುಕೊಂಡಿಲ್ಲ. ಸಧ್ಯದ ಮಟ್ಟಿಗೆ ಫ್ಯಾಸಿಸ್ಟರನ್ನು ಹೊರತುಪಡಿಸಿದ ಎಲ್ಲಾ ಪಕ್ಷ ಮತ್ತು ಸಂಘಟನೆಗಳ ನಡುವೆ ಯಾವುದಾದರೂ ರೂಪದ ಸಮನ್ವಯ ಆಗಬಹುದೇ ಎಂಬ ಆಸೆ ಇಟ್ಟುಕೊಂಡಿದ್ದೇನೆ.

ನನ್ನ ದೃಷ್ಟಿಯಲ್ಲಿ ಇಂದು ಅವನತಿಯ ಅಂಚಿನಲ್ಲಿರುವ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಯಾವುದೋ ರೀತಿಯಲ್ಲಿ ಒಂದುಗೂಡಲೇಬೇಕು, ಇಂತಹ ಒಂದುಗೂಡುವಿಕೆಗೆ ವಿರೋಧವಿರುವವರು ಫ್ಯಾಸಿಸ್ಟ್ ಶಕ್ತಿಗಳಿಗೆ ಪೂರಕವಾಗಿಯೇ ಇರಲು ಸಾಧ್ಯ ಎಂಬ ನಿಲುವು ನನ್ನದು.

ಕೆಲ ವರ್ಷಗಳ ಹಿಂದೆ ಹೆಸರಾಂತ ಪತ್ರಕರ್ತ ರವೀಶ್ ಕುಮಾರ್ ಇಂತಹುದೇ ಒಂದು ಸಲಹೆ ಮುಂದಿಟ್ಟಿದ್ದರು. ದೇಶದ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳು ಸ್ವಯಂ ವಿಸರ್ಜನೆಗೊಂಡು ಹೊಸ ಪಕ್ಷ ಆಗಬೇಕು ಎಂಬ ಒಂದು ಅವಾಸ್ತವಿಕ ಯೋಜನೆಯೊಂದನ್ನು ಅವರು ಮುಂದಿಟ್ಟಿದ್ದರು. ಅವರ ಸಲಹೆ ಜಾರಿಯಾಗಲು ಅಸಾಧ್ಯ ಎಂದರೂ ಅವರ ಆಶಯ ಸರಿಯಾಗಿತ್ತು ಎಂದು ನನ್ನ ಭಾವನೆ.

ವರ್ಷದ ಹಿಂದೆ ಕಾಂಗ್ರೆಸ್ ಸೇರಿದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ‘ಯಾಕೆ ಕಾಂಗ್ರೆಸ್ ಸೇರಿದ್ರಿ? ಅಂತ ಕೇಳಿದ್ದೆ. ಅದಕ್ಕವರು ನೇರ ಉತ್ತರಿಸದೇ ಒಂದು ಉದಾಹರಣೆ ಮೂಲಕ ಹೇಳಿದ್ದರು. ಈಗ ಒಂದು ಮನೆ ಹೊತ್ತಿ ಉರಿಯುತ್ತಿದೆ. ಅದರ ಸನಿಹದಲ್ಲಿ ಒಂದು ಫೈರ್ ಎಂಜಿನ್ ಇದೆ. ಆದರೆ ಅದರಲ್ಲಿ ಇರುವವರು ನಿದ್ದೆ ಮಾಡ್ತಾ ಇದ್ದಾರೆ. ಆ ಮನೆಯಿಂದ ಬಹಳ ದೂರದಲ್ಲಿ ಇರುವ ಫೈರ್ ಇಂಜಿನ್ ಗಳು ಹತ್ತಿರ ಬರೋ ಅಷ್ಟರಲ್ಲಿ ಇಡೀ ಮನೆ ಉರಿದು ಹೋಗತ್ತೆ. ಹೀಗಾಗಿ ಹತ್ತಿರ ಇರುವ ಫೈರ್ ಇಂಜಿನ್ ಹತ್ತಿ ಅದರಲ್ಲಿ ಇರೋರನ್ನ ಎಚ್ಚರಿಸಿ ನಾವೂ ಮನೆಯ ಬೆಂಕಿ ಆರಿಸಲು ಪ್ರಯತ್ನ ಮಾಡಬೇಕಾಗುತ್ತೆ’ ಎಂದು ಹೇಳಿದ್ದರು.

ಈಗ ಜಿಗ್ನೇಶ್, ಕನ್ಹಯ್ಯ ವಿಶಯಕ್ಕೆ ಬರೋಣ. ಕಳೆದ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದಲೇ ವಡಗಾಂವ್ ಕ್ಷೇತ್ರದಿಂದ ಜಿಗ್ನೇಶ್ ಪಕ್ಷೇತರ ಅಭ್ಯರ್ಥಿಯಾಗಿ ಆರಿಸಿ ಬಂದಿದ್ದರು. ಅಂದು ತಮ್ಮ ಪಕ್ಷ ಸೇರಲು ಒಪ್ಪದ ಜಿಗ್ನೇಶ್ ಗೆ ರಾಹುಲ್ ಗಾಂಧಿ ಬೆಂಬಲಿಸಿ ಆರಿಸಿ ಬರಲು ಸಹಕರಿಸಿದ್ದರು. ಅಂದಿನ ಸಂದರ್ಭದಲ್ಲಿ ಜಿಗ್ನೇಶ್ ಚುನಾವಣೆಯಲ್ಲಿ ಗೆಲ್ಲಬೇಕೆಂದು ಇಡೀ ದೇಶದ ಶೋಷಿತರು ಬಯಸಿದ್ದರು.

ಯಾಕೆಂದರೆ ಅದು ಕೇವಲ ಜಿಗ್ನೇಶ್ ಗೆಲುವಾಗಿರಲಿಲ್ಲ. ಜಿಗ್ನೇಶ್ ಪ್ರತಿನಿಧಿಸಿದ್ದ ಚಿಂತನೆಗಳ ಗೆಲುವಾಗಿತ್ತು. ಹೀಗಾಗೇ ಜಿಗ್ನೇಶ್ ರನ್ನು ಸೋಲಿಸಲು ಮೋದಿ ಮತ್ತು ಶಾ ಮಾಡಿದ ಪ್ರಯತ್ನ ಅಷ್ಟಿಷ್ಡಿರಲಿಲ್ಲ‌. ಜಿಗ್ನೇಶ್ ಗೆಲುವಿನೊಂದಿಗೆ ನಾವೆಲ್ಲರೂ ಬೀಗಿದ್ದೆವು. ಕರ್ನಾಟದಿಂದಲೂ ಸಾವಿರಾರು ರೂಪಾಯಿಗಳನ್ನು ಸಂಗ್ರಹಿಸಿ ಕಳಿಸಿದ್ದೆವು.

ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೇಗುಸರಾಯ್ ನಿಂದ ಸಿಪಿಐ ಪಕ್ಷದ ಅಭ್ಯರ್ಥಿಯಾಗಿ ಕನ್ಹಯ್ಯ ಸ್ಪರ್ದಿಸಿದ್ದರು. ಆಗಲೂ ಇಡೀ ದೇಶದ ಪ್ರಗತಿಪರ ಶಕ್ತಿಗಳು ಕನ್ಹಯ್ಯ ಗೆಲುವಿಗೆ ಆಶಿಸಿದ್ದರು. ಆದರೆ ಮಹಾಘಟಬಂದನ್ ಮಾಡಿದ ಎಡವಟ್ಟಿನಿಂದಾಗಿ ಹಾಗೂ ಬೂಮಿಹಾರ್ ಜಾತಿಯವರು ಬಿಜೆಪಿ ಜೊತೆ ನಿಂತ ಕಾರಣದಿಂದ ಕನ್ಹಯ್ಯ ಬಿಜೆಪಿ ಸ್ಪರ್ಧಿ ಎದುರು ಸೋಲುಂಡರು.

ಈಗ ಮತ್ತೊಂದು ಚುನಾವಣೆ ಬರುತ್ತಲಿದೆ. ಎಂದಿನಂತೆ ಫ್ಯಾಸಿಸ್ಟ್ ರು ಜನರ ಮನಸುಗಳನ್ನು ಒಡೆಯುತ್ತಿದ್ದಾರೆ. ಬೆಂಕಿ ಹಚ್ಚುತ್ತಿದ್ದಾರೆ. ಅವರ ಆಡಳಿತರ ವೈಫಲ್ಯ ಮುಚ್ಚಿಕೊಳ್ಳಲು ಧರ್ಮ ದ್ವೇಷವನ್ನು ದೇಶವ್ಯಾಪಿ ಹರಡುವ ತಯಾರಿ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಮುಂದೆ ಕೆಲವು ಪ್ರಶ್ನೆಗಳು ಎದುರಾಗುತ್ತವೆ.‌

ಅಕಸ್ಮಾತ್ ಮುಂದಿನ ಚುನಾವಣೆಗಳಲ್ಲೂ ಈ ಬ್ರಾಹ್ಮಿನಿಕಲ್ ಫ್ಯಾಸಿಸ್ಟ್ ಶಕ್ತಿಗಳೇ ಗೆಲುವು ಸಾಧಿಸಿದರೆ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ತತ್ವಗಳ ಸ್ಥಿತಿ ಎಲ್ಲಿಗೆ ತಲುಪಬಹುದು? ಈಗಾಗಲೇ ಡಾ.ಆನಂದ್ ತೇಲ್ತುಂಬ್ಡೆ, ಸಂಜೀವ್ ಭಟ್, ರೋಣಾ ಮುಂತಾದ ಪ್ರಜಾತಂತ್ರ ಮುಂದಾಳುಗಳನ್ನು ಜೈಲಿನಲ್ಲಿ ಕೊಳೆಸುತ್ತಿರುವ ಇವರು ಮತ್ತೊಂದು ಅಧಿಕಾರಕ್ಕೆ ಬಂದರೆ ಯಾವ ರೀತಿ ಆಡಳಿತ ನಡೆಸಬಹುದು?

ಇಂತಹ ಒಂದು ಪ್ರಜಾಪ್ರಭುತ್ವದ ಬಿಕ್ಕಟ್ಟಿನ ಸನ್ನಿವೇಶದಲ್ಲಿ ನಮ್ಮ ನಡೆ ಏನಾಗಬೇಕು?

ಕಮ್ಯುನಿಸ್ಟ್, ಬಿ ಎಸ್ ಪಿ, ಎಸ್ಡಿಪಿಐ ಗಳು ಫ್ಯಾಸಿಸ್ಟರನ್ನು ಅಧಿಕಾರದಿಂದ ತಡೆಯಲು ನಿಜಕ್ಕೂ ಸಮರ್ಥವಾಗಿವೆಯಾ? ಅವುಗಳ ತತ್ವ ಚಿಂತನೆಗಳು ಉತ್ತಮವೂ ಉದಾತ್ತವೂ ಇರಬಹುದು. ಆದರೆ ತಕ್ಷಣದ ಅಜೆಂಡಾ ಒಂದು ದೇಶದ ಮುಂದಿದೆಯಲ್ಲವೆ?

ಇಂತಹ ಸನ್ನಿವೇಶದಲ್ಲಿ ಪ್ರಾಯಶಃ ಕಾಂಗ್ರೆಸ್ ಉಳಿದ ಪಕ್ಷಗಳಿಗಿಂತ ಉತ್ತಮ ಎಂದುಕೊಂಡು ಜಿಗ್ನೇಶ್, ಕನ್ಹಯ್ಯ, ಸೆಂಥಿಲ್ ತರದವರು ಕಾಂಗ್ರೆಸ್ ಸೇರಿಕೊಂಡಿದ್ದರೆ ಅದರ ಬಗ್ಗೆ ತೀರಾ ಬೇಸರ ಪಟ್ಟುಕೊಳ್ಳುವ ಅಗತ್ಯ ನನಗಂತೂ ಕಾಣುತ್ತಿಲ್ಲ.‌

ಹಾಗಂತ ಕಾಂಗ್ರೆಸ್ ಸರಿಯಾದ ಆಯ್ಕೆಯಾ? ಅಲ್ಲಿ ಎಲ್ಲವೂ ಸರಿ ಇದೆಯಾ? ಇದಕ್ಕೆ ಸಕಾರಾತ್ಮಕ ಉತ್ತರವನ್ನು ಪ್ರಾಯಶಃ ಕಾಂಗ್ರೆಸ್ ನವರೂ ಎದೆ ತಟ್ಟಿಕೊಂಡು ಕೊಡಲಾರರು. ಅಲ್ಲಿ ತತ್ವ ಸಿದ್ದಾಂತಗಳಿಗೆ, ಪ್ರಾಮಾಣಿಕತೆಗೆ ಯಾವ ಬೆಲೆ ಇದೆ ಎಂಬುದೂ ಪ್ರಶ್ನೆಯೇ.

ದೇಶದ ಮಟ್ಟದಲ್ಲಿ ಲಕ್ಷಾಂತರ ಕಾರ್ಯಕರ್ತರ ಮುಂದಾಳುಗಳ ಪಡೆ ಇದ್ದರೂ unity of thought and action ಅಂತೂ ಅಲ್ಲಿಲ್ಲ. ಕಾಂಗ್ರೆಸ್ ನ ಮೂಲ ತತ್ವಗಳ ಕುರಿತೇ ಸೂಕ್ತ ಪರಿಣಾಮಕಾರಿ ಶಿಕ್ಷಣವೂ ಅಲ್ಲಿ ಇದ್ದಂತಿಲ್ಲ. ಈಗ ಇರುವ ವ್ಯಕ್ತಿ ಕೇಂದ್ರಿತ ಕಾಂಗ್ರೆಸನ್ನು ಸ್ವಲ್ಪ ಮಟ್ಟಿಗೆ ಕೇಡರ್ ಬೇಸ್ಡ್ ಮತ್ತು ಸಂವಿಧಾನವಾದಿ ಪಕ್ಷವಾಗಿ ಮಾರ್ಪಡಿಸಲು ಸಾಧ್ಯವಾದರೆ ಒಂದಷ್ಟು ಉತ್ತಮ ಫಲಿತಾಂಶ ನಿರೀಕ್ಷಿಸಬಹುದು.

ಕಾಂಗ್ರೆಸ್ ನ ವರ್ಗ ಹಿನ್ನೆಲೆ, ಅವರ ಆರ್ಥಿಕ ನೀತಿಗಳು ಇತ್ಯಾದಿಗಳ ಬಗ್ಗೆ ತಕರಾರು ಬೇಜ್ಜಾನ್ ಇವೆ. ಆದರೆ ನರಹತ್ಯೆಗಳನ್ನು ಯಾವ ಕ್ಷಣದಲ್ಲಿ ನಡೆಸಬಲ್ಲ ಒಂದು ಶಕ್ತಿಯನ್ನು ಎದುರಿಸಲು ಮಿಕ್ಕೆಲ್ಲರೂ ತಕ್ಷಣದ ಕನಿಷ್ಟ ಸಾಮಾನ್ಯ ಕಾರ್ಯಕ್ರಮವೊಂದರ ಬಗ್ಗೆ ಚಿಂತಿಸುವ ಅಗತ್ಯವಿದೆ.

ಕೇವಲ ಚುನಾವಣೆಯಿಂದ ಫ್ಯಾಸಿಸ್ಟ್ ಶಕ್ತಿಗಳನ್ನು ಹಿಮ್ಮೆಟ್ಟಿಸುವುದು ಅಸಾಧ್ಯ. ಆದರೆ ಬೀದಿಯ ಮೇಲೆ ಎದುರಿಸಲಾದರೂ ನಮಗೊಂದಷ್ಟು ಸಮಾಯಾವಕಾಶ ತೆಗೆದುಕೊಳ್ಳಲಾದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಲೇಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ.

ಈ ನಡುವೆ ಯಾರಾದರೂ ಕಮ್ಯುನಿಸ್ಟ್ ಪಕ್ಷದಿಂದ ಕಾಂಗ್ರೆಸ್ ಗೆ, ಬಿಎಸ್ ಪಿಯಿಂದ ಎಸ್ ಡಿ ಪಿ ಐ, ಎಸ್ ಡಿ ಪಿ ಐ‌ನಿಂದ ಕಾಂಗ್ರೆಸ್ ಹೀಗೆ ಸ್ಥಾನ ಪಲ್ಲಟ ಮಾಡಿಕೊಂಡರೆ ತೀರಾ ತಲೆಕೆಡಿಸಿಕೊಳ್ಳಬೇಕಿಲ್ಲ. Let’s welcome…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending