Connect with us

ಭಾವ ಭೈರಾಗಿ

ಅದೊಂದಿದ್ದರೆ ಜಗತ್ತನ್ನೇ ಗೆಲ್ಲಬಹುದಿತ್ತು ಆದರೆ…

Published

on

ಏನು ಮಾಡ್ಲಿ ಸರ್ ನನಗೆ ಹಣಬಲ ಇಲ್ಲ ಅದೊಂದಿದ್ದಿದ್ದರೆ ಏನು ಬೇಕಾದ್ರು ಮಾಡ್ತಿದ್ದೆ. ನಾನು ಸಾಧನೆ ಮಾಡ್ತಿದ್ದೆ ಸಾರ್ ಆದರೆ ಸರಿಯಾದ ದಾರಿ ತೋರಿಸೋರೆ ಯಾರೂ ಇರಲಿಲ್ಲ. ನಾನು ದುಡಿಬೇಕು ಅಂತ ಏನೇನೋ ಮಾಡ್ತಿನಿ ಸಾರ್ ಸಪೋರ್ಟ್‌ ಮಾಡೋಕೆ ಮನೇಲಿ ಯಾರೂ ಇಲ್ಲ. ನನ್ ಹೆಂಡತಿಯೊಬ್ಬಳು ಸರಿ ಇದ್ದಿದ್ರೆ ಇಷ್ಟರಲ್ಲಿ ಮನೆ ಕಟ್ಟಿ ಬಹಳ ವರ್ಷ ಆಗಿರ್ತಿತ್ತು. ನಮ್ ಅಪ್ಪ ಅಮ್ಮ ಏನಾದ್ರೂ ಸ್ವಲ್ಪ ಮಾಡಿಟ್ಟಿದ್ರೆ ಇವತ್ತು ನಾನೂ ನಾಲ್ಕು ಜನರ ರೀತಿ ಕೖತುಂಬಾ ದುಡಿತಿದ್ದೆ ಸಾರ್. ಹೀಗೆ ಸಾವಿರ ಸಾವಿರ ಕಾರಣಗಳನ್ನ ನಮಗೆ ನಾವೇ ಹೇಳಿಕೊಂಡು ಸಮಾಧಾನ ಮಾಡಿಕೊಳ್ತೇವೆ. ಆದರೆ ನಮಗೆಲ್ಲರಿಗೂ ಗೊತ್ತು ಇವೆಲ್ಲ ಬರೀ ಕಾರಣಗಳಷ್ಟೇ ಹೊರತು ಸತ್ಯ ಅಲ್ಲ ಅಂತ.

ಸತ್ಯ ಅಂದ್ರೆ ನಾವು ಏನೆಲ್ಲಾ ಮಾಡಬೇಕು ಅಂತ ನಿರ್ಧರಿಸಿರ್ತೇವೋ ಅದೆಲ್ಲವನ್ನೂ ನಾವು ಮಾಡೇ ತೀರ್ತೇವೆ. ಆದರೆ ಮಾಡುವುದಕ್ಕಿಂತ ಮುಂಚೆಯೇ ನಾವು ನಮ್ಮ ಕೖಲಿ ಅದೆಲ್ಲ ಆಗೋ ಮಾತಲ್ಲ ಬಿಡಿ ಅಂತ ತೀರ್ಮಾನಿಸಬಾರದಷ್ಟೇ. ಹೀಗೆ ನಮಗೆ ನಾವೇ ಮೋಸ ಮಾಡಿಕೊಂಡು ತೆಗೆದುಕೊಳ್ಳುವ ಆ ಒಂದು ತೀರ್ಮಾನದಿಂದ ನಮ್ಮ ಎಲ್ಲ ಸಾಧನೆಗಳೂ ಹುಟ್ಟುವ ಮೊದಲೇ ಅಸುನೀಗುತ್ತವೆ, ಅದಕ್ಕೆ ನಾವು ಕೊಟ್ಟುಕೊಳ್ಳುವ ಕಾರಣಗಳೇ ಈ ಮೇಲೆ ಹೇಳಿರುವ ಅದೊಂದಿದ್ದಿದ್ರೆ ಸಾಕಿತ್ತು ಸಾರ್ ಅನ್ನೋದು.

ದೇವರು ನನಗೆ ಅದೊಂದು ಕಿತ್ತುಕೊಂಡುಬಿಟ್ಟ ಇಲ್ಲದಿದ್ರೆ ಮಾಡಿ ತೋರಿಸ್ತಿದ್ದೆ ಅಂತ ಹೇಳ್ತಾರಲ್ಲ ಅವರ ಮಾತನ್ನ ಒಂದು ಮಟ್ಟಕ್ಕೆ ಮನ್ನಿಸಬಹುದು. ಯಾಕಂದ್ರೆ ಅವರು ಬದಲಿಸಲಾಗದ ಅವರಿಂದ ಪಡೆಯಲಾಗದ ಏನನ್ನೋ ದೇವರು ಕಿತ್ತುಕೊಂಡುಬಿಟ್ಟಿರ್ತಾನೆ. ಅದರಲ್ಲಿ ಅವರ ಕಣ್ಣು, ಕಿವಿ, ಕೖ ಕಾಲು ಅಥವಾ ಇವೆಲ್ಲವೂ,,, ಹೀಗೆ ಮೂಲಭೂತವಾಗಿ ಇರಲೇ ಬೇಕಾದ ಏನನ್ನಾದರೂ ಕಿತ್ತುಕೊಂಡಿದ್ರೆ ಆಗ ಕಾಣದ ದೇವರಿಗೆ ಬಯ್ಯುತ್ತಾ ತಿರುಗುವುದರಲ್ಲಿ ಅರ್ಥ ಇರುತ್ತೆ . ಆದರೆ ಗೊತ್ತಿರಲಿ ಗೆಳೆಯರೆ ಹೀಗೆ ಇರಬೇಕಾದ ಅಂಗಗಳಲ್ಲಿ ಕೆಲವನ್ನು ಕಳದುಕೊಂಡ ಬಹುತೇಕರು ಏನಾದರೂ ಸಾಧಿಸಿರ್ತಾರೆ. ಅವರನ್ನ ಕೇಳಿ ನೋಡಿ ಅವರು ಹೇಳೋದು ನನ್ನ ಅಂಗ ವೖಕಲ್ಯ ನನ್ನ ದೌರ್ಬಲ್ಯವಾಗಬಾರದು ಸಾರ್. ಹೀಗಾಗಿ ನಾನು ಯಾರಿಗೂ ಕಡಿಮೆ ಇಲ್ಲ ಅಂತ ತೋರಿಸೋಕೆ ನನ್ನ ಮನಸ್ಸು ತುಡೀತಿತ್ತು. ಅದಕ್ಕೆ ಕಷ್ಟಪಟ್ಟು ಈ ಸಾಧನೆ ಮಾಡಿದೆ ಅಂತಾರೆ. ಅಸಲಿಗೆ ಅವರು ಹೇಳಿದ್ರಲ್ಲ ನಾನು ಎಲ್ಲದೂ ಸರಿಯಿರುವವರಿಗಿಂತ ಕಡಿಮೆ ಇರಬಾರದು ಅಂತ ಆ ಸರಿ ಇರೋರು ಬೇರೆ ಯಾರೂ ಅಲ್ಲ ನಾವೆ. ಈಗ ಹೇಳಿ ಎಲ್ಲದೂ ಸರಿ ಇರೋ ನಾವು ಏನು ಸಾಧಿಸಿದ್ದೇವೆ. ಒಬ್ಬ ಕಣ್ಣಿಲ್ಲದವನೋ ಕಾಲಿಲ್ಲದವನೋ ಹೇಳಬೇಕಾದ ಕಾರಣ ಅದೊಂದಿರಬೇಕಿತ್ತು ಅನ್ನೋದು. ಆದರೆ ಅವರು ಹೇಳಲ್ಲ, ಅದಿಲ್ಲದಿದ್ದರೂ ಸಾಧಿಸ್ತೀನಿ ಅಂತಾರೆ.  ಅದನ್ನ ನಾನು ನೀವು ಹೇಳಿದರೆ ಎಷ್ಟು ಸರಿ ಅಲ್ವಾ.

ಉತ್ತಮರನ್ನು ಹುಡುಕುವುದಕ್ಕಿಂತ ನಾವೇ ಉತ್ತಮರಾಗೋದು ಒಳಿತು ಅಂತಾರೆ. ಹೀಗೆ ನಮ್ಮಂಥವರ ಕೖಲಿ ಅದೆಲ್ಲ ಆಗಲ್ಲ ಬಿಡಿ ಅಂತ ತೀರ್ಮಾನಿಸೋಕು ಮುಂಚೆ ನಮ್ಮಂಥವರಲ್ಲದೆ ಮತ್ತಾರು ಮಾಡಬೇಕು . ಅಂಥವರು ಅಂತ ಬೇರೆಯೇ ಹುಟ್ಟಿರ್ತಾರಾ ಅಂತ ನಮ್ಮನ್ನ ನಾವು ಕೇಳಿಕೊಳ್ಳಬೇಕಲ್ವಾ. ಗಾಂಧಿ, ಬುದ್ಧ ಬಸವಣ್ಣ, ಸ್ವಾಮಿ ವಿವೇಕಾನಂದ ಹೀಗೆ ನಾವು ಯಾರನ್ನೇ ಸಾಧಕರು ಅಂದ್ರೂ ಅವರಿಗೆಲ್ಲ ಇರಬಹುದಾದ ದೌರ್ಬಲ್ಯಗಳೇ ತಾನೆ ನಮಗೂ ಇರೋದು. ಅವರಂತೆಯೇ ನಮಗೂ ಎರಡು ಕಣ್ಣ ಎರಡು ಕಾಲು, ಎರಡು ಕೖ, ಒಂದು ಮೆದುಳು ಎಲ್ಲಾ ಇದೆ ಆದರೂ ನಾವು ಅದೊಂದಿಲ್ಲ ಅಂತ ಕಾರಣ ಕೊಡೋದು ಎಷ್ಟು ಸರಿ ಅಲ್ವಾ.

ಏನು ಬೇಕಾದರೂ ಮಾಡ್ತಿದ್ದೆ ಸಾರ್ ಆದ್ರೆ ಈ ಆಫೀಸು ಮನೆ ಇವುಗಳ ಮಧ್ಯೆ ಟೖಮೇ ಸಿಗಲ್ಲ ಅಂತೀವಿ. ಹಾಗಾದ್ರೆ ವಿಶ್ವೇಶ್ವರಯ್ಯನವರಿಗೇನು ದಿನಕ್ಕೆ ನಲವತ್ತೆಂಟು ಗಂಟೆ ಸಿಕ್ಕಿತ್ತಾ.,,, ನಾವೆಲ್ಲ ಇಷ್ಟು ಬದುಕಿದ್ರೂ ನಮಗೆ ಮುಂದೊಂದು ದಿನ ಎಲ್ಲಾ ಸರಿಹೋಗೋ ಕಾಲ ಬರುತ್ತೆ ಅಂತ ಕಾಯ್ತಿದ್ದೀವಿ ಆದರೆ ಕೇವಲ ಇಪ್ಪತ್ಮೂಕ್ಕೆ ಅಸುನೀಗಿದ ಜಾನ್ ಕೀಟ್ಸ್ ಹೀಗೇ ಅಂದುಕೊಂಡಿದ್ರೆ ಏನು ಮಾಡಬೇಕಿತ್ತು ಅಲ್ವಾ, ಕೇವಲ ಹದಿನೇಳು ವರ್ಷಕ್ಕೆ ಕೊನೆಯುಸಿರೆಳೆದ ಥಾಮಸ್ ಛಟ್ಟರ್ ಟನ್ ಏನೆಲ್ಲಾ ಮಾಡಬಿಟ್ಟ ಜಗತ್ತಿನ ರೊಮ್ಯಾಂಟಿಕ್ ಕವಿಗಳಲ್ಲಿ ಅತ್ಯಂತ ಕಿರಿಯವನೇ ಅವನು. ಮೂವತ್ತೆರಡಕ್ಕೆ ಶಂಕರಾಚಾರ್ಯರು ಇಹಲೋಕ ತ್ಯಜಿಸಿದ್ರು , ನಲವತ್ತು ತುಂಬುವುದರೊಳಗೆ ಸ್ವಾಮಿ ವಿವೇಕಾನಂದರು ಹೀಗೆ ಎಷ್ಟು ಜನರ ಉದಾಹರಣೆ ನೋಡಿದರೂ ನಾವು ಮತ್ತೆ ಕೊಡೋ ಕಾರಣ ನನಗೆ ಅದೊಂದಿಲ್ಲ ಸಾರ್ ಅಂತ. ಯಾವುದದು ಸಮಯ, ಊಟ, ಹಣ, ಜನಬಲ, ಶ್ರೀಮಂತಿಕೆ, ಯಾವುದಿಲ್ಲ. ಇವೆಲ್ಲವೂ ನಾವು ಸಂಪಾದಿಸಬಹುದಾದವೆ ತಾನೆ. ಮನುಷ್ಯನಿಂದ ಇವನ್ನು ಸಂಪಾದಿಸಲು ಸಾಧ್ಯವೇ ಇಲ್ಲ ಎನ್ನುವಂಥದ್ದೇನಾದರೂ ಇಲ್ಲ ಎಂಬ ಕಾರಣ ನೀಡಿದರೆ ಒಪ್ಪಹುದಿತ್ತು ಅನ್ನಿಸುತ್ತೆ.

ಏನಾದರಾಗಲಿ ಒಂದು ಸಣ್ಣ ತೀರ್ಮಾನ ಮಾಡೇ ಬಿಡೋಣ. ಇಂದಿನಿಂದ ಇಂಥ ಕುಂಟುನೆಪ ಹೇಳುವುದು ಬಿಟ್ಟು ನನ್ನ ಭವಿಷ್ಯವನ್ನು ನಾನೇ ತೀರ್ಮಾನಿಸ್ತೇನೆ ಅಂತ. ಒಂದು ಸಣ್ಣ ಸಾಧನೆ ನನ್ನಿಂದ ಸಾಧ್ಯ ಅಂತ ಹಠ ಹಿಡಿದುಬಿಡಿ. ವಾರಕ್ಕೊಂದು ಪುಸ್ತಕ ಓದೇ ತೀರ್ತೇನೆ. ತಿಂಗಳಿಗೊಂದಾದರೂ ಲೇಖನ ಬರೀತೇನೆ. ದುಡಿದದ್ದರಲ್ಲಿ ಹತ್ತು ಪರ್ಸೆಂಟ್ ಒಳ್ಳೇ ಕೆಲಸಕ್ಕೆ ಬಳಸ್ತೇನೆ ಅಂತ . ಆರಂಭದಲ್ಲೇ ಇದೆಲ್ಲ ಕಷ್ಟ ಎನಿಸಿದರೆ ನಿಮ್ಮ ವಿಚಾರದಲ್ಲಿ ನೀವು ಯಾವುದು ಅಸಾಧ್ಯ ನನ್ನಿಂದಾಗದ ಕೆಲಸ, ನಮ್ಮಂಥವರ ಕೖಲಿ ಇದೆಲ್ಲ ಆಗುತ್ತಾ ಅಂತ ಯಾವುದನ್ನ ಪೆಂಡಿಂಗ್ ಇಟ್ಟಿರ್ತೀರೋ ಅದನ್ನೇ ಕೖಗೆತ್ತಿಕೊಳ್ಳಿ. ಇದು ನನ್ನಿಂದ ಸಾಧ್ಯ ಯೆಸ್ ಈ ಕ್ಯಾನ್ ಡೂ ಇಟ್ ಅಂತ ತೀರ್ಮಾನಿಸಿಬಿಡಿ. ಒಂದು ದಿನಕ್ಕೆ ಒಂದು ವಾರಕ್ಕೆ ಆಗುವಂತಹಾ ಸಣ್ಣ ಸಣ್ಣ ಗುರಿಗಳನ್ನ ಈಡೇರಿಸ್ತಾ ಹೋಗಿ. ಆರಂಭದಲ್ಲೇ ಬೆಟ್ಟದ ತುದಿಗೆ ಕಾಲಿಡಲು ಸಾಧ್ಯವಿಲ್ಲ ಆದರೆ ಎರಡು ಹೆಜ್ಜೆ ಹತ್ತಿದ ನಂತರ ನಾವು ಎರಡು ಅಡಿಯಾದರೂ ಎತ್ತರದಲ್ಲಿರ್ತೇವೆ. ತಿರುಪತಿಗೆ ಹೋಗಬಏಕೆಂದು ವರ್ಷಗಟ್ಟಲೇ ಜಪಿಸಿದರೂ ಸಾಧ್ಯವಾಗಲ್ಲ. ಆದರೆ ಎದ್ದು ಬಸ್ ಸ್ಟ್ಯಾಂಡಿಗೆ ನಡೆದು ಹೋಗುವುದರಿಂದ ತಿರುಪತಿಗೆ ಹೋದರೂ ಹೋಗಬಹುದು. ಅದಕ್ಕೆ ಮೊದಲು ಬಸ್ ಸ್ಟಾಪ್ ತಲುಪುವ ಸಣ್ಣ ಗುರಿ ಮುಟ್ಟಇ ನಂತರ ಬಸ್ ಹತ್ತುವ ನಾಳೆ ತಿರುಪತಿ ಮುಟ್ಟಉವ ಗುರಿ ಸಾಧಿಸಬಹುದೇನೋ. ಲೆಟ್ಸ್ ಟ್ರೖ ಇಟ್.

ದಿನದ ಸುದ್ದಿ

ಕವಿತೆ | ನಾನೊಲಿದೆನಯ್ಯಾ

Published

on

  • ರಮ್ಯ ಕೆ ಜಿ, ಮೂರ್ನಾಡು

ಲೆಯುತ್ತಿದೆ ಈ ರೂಹು
ನನ್ನೊಳಗಿಂದ ಚಿಗಿದು
ನಿನ್ನ ತುದಿಬೆರಳಲಿ ಕುಣಿದು
ಗಾಳಿತುಟಿಯ ಸೋಕಿದಾಕ್ಷಣ
ಬೆವೆತು,
ಮಳೆ ಹೊಯ್ಯಿಸಿ
ಮಣ್ಣ ಘಮದೊಳಗೆ
ಲೀನವಾಗುವಂತೆ.

ಹೊಳೆಯುತ್ತದೆ ನಿನ್ನ
ಕಣ್ಣಬೊಂಬೆಯೊಳಗೆ,
ಎಷ್ಟೋ ನೋವು ಕುಡಿದ
ನದಿಯೆದೆಯೊಳಗೆ,
ನೆನಪ ಮೀಟುವ ಘಳಿಗೆಗೆಲ್ಲ
ಪಾರಿಜಾತದ ಪರಿಮಳವುಳಿವಂತೆ.

ಕಲೆಯುತ್ತದೆ ಮತ್ತೆ,
ನಿನ್ನ ಮಾತು ಜೀವವಾಗುವಂತೆ
ನಗೆಬೆಳಕು ಕೈಹಿಡಿದು
ಜೊತೆ ನಡೆಯುವಂತೆ
ಅನಂತ ಬಾನು-
ಪ್ರೇಮಗಡಲಿಗೆ ಬಾಗುವಂತೆ
ತಿರುವುಗಳಲಿ ಹೊರಳಿ,
ಕವಲಾಗುವಾಗ
ಹಾಡೊಂದು ಕಾಡುವಂತೆ
ಜಪಮಣಿ ಎಣಿಸುವ
ಬೆರಳು, ಲೆಕ್ಕ ಮರೆತು
ಉಸಿರ ಪಲುಕನು
ಚಿತ್ರವಾಗಿಸುವಂತೆ.

ಕವಯಿತ್ರಿ : ರಮ್ಯ ಕೆ.ಜಿ,ಮೂರ್ನಾಡು

ಕವಿತೆ : ರಮ್ಯ ಕೆ ಜಿ, ಮೂರ್ನಾಡು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮುರುಕುಂಬಿ

Published

on

  • ಡಾ.ಗಿರೀಶ್ ಮೂಗ್ತಿಹಳ್ಳಿ

ನಮ್ಮ ಒಳಗೆ ಬಿಡಲೆ ಇಲ್ಲ
ಚೌರ ಚಹಾ ಮಾಡಲೆ ಇಲ್ಲ
ಎದೆಗೆ ಒದ್ದರು; ಬದಿ ಬದಿಗು ನಕ್ಕರು

ಜಾತಿಪಂಚೆ ಉಟ್ಟುಕೊಂಡು
ನೀತಿನಂಜು ಇಟ್ಟುಕೊಂಡು
ದ್ವೇಷ ಮೆರೆದರು; ಕಟುಸತ್ಯ ಮರೆತರು

ನೂರ ಒಂದು ಕೂಡಿಕೊಂಡು
ಹಟ್ಟಿತನಕ ಅಟ್ಟಿಬಂದು
ಬೆಂಕಿ ಇಟ್ಟರು ; ಕಣ್ಣೀರು ಕೊಟ್ಟರು

ಮುರುಕುಂಬಿ ಮುರುಕರೆಲ್ಲ
ಕಂಬಿ ಹಿಂದೆ ಬಿದ್ದರಲ್ಲ
ಕೆಟ್ಟ ಮನಗಳು; ಕಡುಕೆಟ್ಟ ಜನಗಳು

ಜಾತಿಗೀತಿ ಏನು ಇಲ್ಲ
ಪ್ರೀತಿ ಪ್ರೇಮ ಇರಲಿ ಎಲ್ಲ
ಬಾಳ್ಮೆ ಮಾಡಲು; ಸಹಬಾಳ್ಮೆ ಮಾಡಲು

ಶಾಂತಿಬೆಳಕು ಬುದ್ಧನಿರಲು
ಕ್ರಾಂತಿಕಹಳೆ ಬಸವನಿರಲು
ಅಳಲುಬಾರದು;’ವಿಧಿದಾತ’ನಿರಲು
ಅಳುಕುಬಾರದು. (ಕವಿತೆ-ಡಾ. ಗಿರೀಶ್ ಮೂಗ್ತಿಹಳ್ಳಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ‘ಎಳೆ’ ತಂದರೋ..!

Published

on

  • ನವೀನ್ ಸಾಗರ್, ಬೆಂಗಳೂರು

ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!!

ಹಾಡು ಅಂದರೆ ಅಲ್ಲಿ ಉಪಮೆಗಳು ಗೂಢಾರ್ಥಗಳು ದ್ವಂದ್ವಾರ್ಥಗಳು(ದ್ವಂದ್ವಾರ್ಥ ಅಂದ್ರೆ ಅಶ್ಲೀಲ ಮಾತ್ರವೇ ಅಲ್ಲ), ಎರಡುಮೂರು ವಿಚಾರಗಳನ್ನು ಹೇಳಬಲ್ಲ ಒಂದೇ ಒಂದು ಸಾಲು, ಇನ್ಯಾವತ್ತೋ ರೆಲೆವೆಂಟ್ ಅನಿಸಬಲ್ಲ ಕಲ್ಪನೆಗಳು ಏನೇನೋ ತುಂಬಿಹೋಗಿರುತ್ತವೆ. ಅದಕ್ಕೊಂದು ಮೂಡ್ ಇರುತ್ತೆ.

ಒಬ್ಬೊಬ್ಬ ಓದುಗನಲ್ಲಿ ಒಂದೊಂದು ಭಾವ ಹುಟ್ಟಿಸಬಲ್ಲ ಶಕ್ತಿ ಕವಿತೆಗಳಿಗಿರುತ್ತದೆ. ನನಗೆ ರೊಮ್ಯಾಂಟಿಕ್ ಅನಿಸುವ ಗೀತೆಯೊಂದು ಇನ್ನೊಬ್ಬನಿಗೆ ವಿರಹಗೀತೆ ಅನಿಸಬಹುದು. ನನಗೆ ಲಾಲಿ ಹಾಡೆನಿಸುವ ಗೀತೆಯೊಂದು ಇನ್ಯಾರಿಗೋ ಜಾಲಿ ಗೀತೆ ಅನಿಸಬಹುದು. ಇನ್ನೊಬ್ರಿಗೆ ಶೋಕಗೀತೆ ಅನಿಸೋ ಗೀತೆಯಲ್ಲಿ ನನಗೇನೋ ತುಂಟತನ ಕಾಣಿಸಬಹುದು. ಸಭ್ಯಗೀತೆ ಅನಿಸುವ ಹಾಡೊಂದು ಸಾಲುಸಾಲಲ್ಲೂ ಡಬಲ್ ಮೀನಿಂಗ್ ತುಂಬ್ಕೊಂಡಿದೆಯಲ್ಲ ಅನಿಸಬಹುದು. ಗ್ರಹಿಕೆ ಮೂಡು ವಯಸ್ಸು ಸಂದರ್ಭ ಇವೆಲ್ಲದರ ಮೇಲೆ ಹಾಡೊಂದು ನಮ್ಮನ್ನು ತಲುಪೋ ಬಗೆ ಬದಲಾಗುತ್ತಾ ಹೋಗುತ್ತದೆ‌. ಅಷ್ಟಾಗಿಯೂ ಅಸಲಿಗೆ ಅದನ್ನು ಬರೆದ ಕವಿಯ ಯೋಚನೆ ನಾವು ಗ್ರಹಿಸಿದ್ದೆಲ್ಲಕ್ಕಿಂತ ಭಿನ್ನವಾಗಿದ್ದಿನ್ನೇನೋ ಇದ್ದರೂ ಇರಬಹುದು.

ಹಲವು ಬಾರಿ ಕವಿಗೆ ತನ್ನ ಗೀತೆ ತಾನಂದುಕೊಂಡ ಭಾವದಲ್ಲೇ ರೀಚ್ ಆಗಿದೆ ಅನ್ನೋ ಖುಷಿ ತೃಪ್ತಿ ಸಿಗುತ್ತದೆ. ಕೆಲವು ಬಾರಿ .. ಅರೆ ಬರೆಯುವಾಗ ನಾನೇ ಹೀಗೊಂದು ಗೂಡಾರ್ಥದ ಬಗ್ಗೆ ಯೋಚಿಸಿರಲಿಲ್ಲ. ಕೇಳುಗ ಇದಕ್ಕೆ ಇನ್ನೊಂದು ಆಯಾಮವನ್ನೇ ಕೊಟ್ಟುಬಿಟ್ಟನಲ್ಲ ಅಂತ ಅಚ್ಚರಿಯಾಗಬಹುದು. ಕೆಲವೊಮ್ಮೆ ತನಗೇ ಗೊತ್ತಿಲ್ಲದ ಅರ್ಥ ಹುಟ್ಟಿಸಿ ತನ್ನನ್ನು ಕೇಳುಗರು ಮೇಲೇರಿಸಿ ಕೂರಿಸಿದಾಗ, ಈ ಕ್ರೆಡಿಟ್ ಬಿಟ್ಟುಕೊಡಲಿಷ್ಟ ಪಡದ ಕರಪ್ಟ್ ಮನಸು.. ಹೌದೌದು ನಾನು ಹೀಗೆ ಎರಡರ್ಥ ಹುದುಗಿಸಿ‌ಈ ಸಾಲು ಬರೆದಿದ್ದೆ ಎಂದು ಧ್ವನಿಗೂಡಿಸುತ್ತದೆ. ಅದೇ ವಿವಾದಕ್ಕೋ ಅವಹೇಳನಕ್ಕೋ ಕಾರಣವಾದರೆ .. ಇಲ್ಲ ನಾನು ಬರೆದದ್ದು ಈ ಅರ್ಥದಲ್ಲಿ ಅಂತ ಸೇಫ್ಟಿ ಮೋಡ್ ಗೂ ಹೋಗುತ್ತದೆ. ಹಾಡು/ಕವಿತೆಗಳಿಗೆ ಈ ವ್ಯಾಖ್ಯಾನದ ಮೂಲಕ ಬಚಾವಾಗುವ ಇಮೇಜ್ ರೂಪಿಸಿಕೊಳ್ಳುವ ಅವಕಾಶವಿರುತ್ತದೆ‌. ಗದ್ಯಗಳಿಗೆ ಆ ಪ್ರಿವೆಲೇಜ್ ಇರೋದಿಲ್ಲ.

ಸಂಭ್ರಮ ಚಿತ್ರದಲ್ಲಿ ಹಂಸಲೇಖ … “ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ಎಳೆ ತಂದರೋ…” ಗೀತೆಯಲ್ಲಿ ” ಎಳೆ” ಪದವನ್ನು ಎರಡರ್ಥ ಬರುತ್ತದೆಂದೇ ಬಳಸಿದರೋ ಬರೆದ ಮೇಲೆ ಎರಡರ್ಥ ಕೇಳುಗರ ಗ್ರಹಿಕೆಗೆ ಬಂತೋ ಎಂಬ ಪ್ರಶ್ನೆಯಂತೆ ಇದು. ಹಂಸ ಲೇಖಾವ್ರು ಪ್ರೀತಿಯ ’ಎಳೆ’ಯ ಬಗ್ಗೆ ಬರೆದಿರಬಹುದು. ಅಥವಾ ಎಳೆದು ತಂದರೋ ಎಂದು ಕೇಳಿಯೂ ಬರೆದಿರಬಹುದು. ಅಥವಾ ಅವರಿಗಿರೋ ಪನ್ ಸೆನ್ಸ್ ಗೆ ಈ ಎರಡೂ ಅರ್ಥ ಬರಲಿ ಅಂತಲೇ ಎಳೆ ಎಂಬ ಪದ ಬಳಸಿರಬಹುದು. ಈ ಥರದ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಾಹಿತ್ಯ ಗಮನಿಸಲು ಶುರು ಮಾಡಿದಾಗ ಇಂಥ ಖುಷಿ ಅನುಭೂತಿಗಳು ಸಿಗಲಾರಂಭಿಸುತ್ತವೆ. ರಿಸರ್ಚಿನಂಥ ಖುಷಿ

ಹಂಸಲೇಖರ … “ಈ ಹರಯದ ನರಕೊಳಲಲಿ ಇವೆ ಸರಿಗಮ ಹೊಳ್ಳೆಗಳು… ಈ ಮದನನ ಕಿರುಬೆರಳಲಿ ನವಿರೇಳದೆ ಗುಳ್ಳೆಗಳು..” ಈ ಸಾಲು ಕೇವಲ ಕಮರ್ಶಿಯಲ್ ಮ್ಯೂಸಿಕಲ್ ಸಾಂಗ್ ಆಗಿ ನಮ್ಮ ಕಿವಿ ತಲುಪಿದಾಗ ಗುನುಗುವ ಸಾಲಾಗುತ್ತದೆ ಅಷ್ಟೆ. ಅರೆ ಹರಯದ ನರಕೊಳಲು ಅಂದ್ರೆ ಏನು… ಮದನನ ಕಿರುಬೆರಳು ಅಂದ್ರೆ.. ? ಸಾಮಾನಿಗೆ ಇಷ್ಟು ಸಭ್ಯಶೃಂಗಾರರೂಪ ಕೊಟ್ಟು ಹೇಳಿರೋದಾ ಅನಿಸಿದಾಗ.. ಶೃಂಗಾರ ಅಡಗಿರೋ‌ ಸಾಲಾದರೂ ಜೋರಾಗಿ ಹೇಳೋಕೆ ಮನಸು ಹಿಂಜರಿಯುತ್ತದೆ.

ಸಾಹಿತ್ಯ ಅಷ್ಟಾಗಿ ಗಮನಿಸದ ವಯಸ್ಸಲ್ಲಿ… “ಮೈಯ್ಯಲ್ಲಿ ಏಳುತಿದೆ ಮನ್ಮಥ‌ನ ಅಂಬುಗಳು.. ಜುಮ್ ಜುಮ್ ಜುಮ್..” ಅನ್ನೋ ಸಾಲು ಸಂಕ್ರಾಂತಿ ಗೀತೆ ಎಂಬಂತೆ ಬಂದು ಹೋಗುತ್ತಿತ್ತು.

ಆದರೆ ಆನಂತರ ಸಾಹಿತ್ಯವಾಗಿ ಗಮನಿಸಿದಾಗ.‌ ಆಹಾ ರೋಮಾಂಚನವನ್ನು.. ಮೈರೋಮ ನಿಮಿರುವುದನ್ನು ಮನ್ಮಥನ ಬಾಣಕ್ಕೆ ಹೋಲಿಸಿದ್ದಾರಲ್ಲ ಅನಿಸಿ ನಿಜಕ್ಕೂ ಜುಮ್ ಅನಿಸಿತ್ತು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸಿದರೆ.. ಮೈಯಲ್ಲಿ ಏಳುತಿದೆ ಮನ್ಮಥನ ಅಂಬು ಅಂದ್ರೆ.. ಒನ್ಸಗೇನ್ ಸಾಮಾನಿರಬಹುದಾ ಅನಿಸದಿರದು.

ಸದಾಶಿವಂಗೆ ಅದೇ ಗ್ಯಾನ ಅಂದ್ಕೋಬೇಡಿ..

ನೆನಪಿರಲಿ ಚಿತ್ರದ ಅಜಂತಾ ಎಲ್ಲೋರಾ ಗೀತೆಯಲ್ಲಿ ಬರುವ… “ಮಂದವಾಗಿ ಬಳುಕೋವಂಥ ನಾರಿ ಇವಳ
ಅಂದ ನೋಡಿ ನಿಂತಾಗ..ಚಂದ ನೋಡಿ ನಿಂತಾಗ..
ಯಾರೊ ನೀನು ಎಂದು ಕೇಳುತಾವೆ..
ಇವಳ ಪೊಗರಿನ ಹೃದಯಪಾಲಕಿಯರು..
ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ…”

ಈ ಸಾಲುಗಳು ತನ್ನ ರಿದಮಿಕ್ ಮ್ಯೂಸಿಕ್ ಹಾಗೂ ಸುಲಲಿತವಾಗಿ ಲಘುಗುರು ಇಟ್ಟು ಬರೆದಂಥ ಪದಗಳ‌ ಆಟದಿಂದ ಮಜವಾಗಿ ಹಾಡಿಸಿಕೊಂಡು ಬಿಡ್ತವೆ. ಆದರೆ ಯಾವತ್ತೋ ಆರಾಮಾಗಿ ಸಾಹಿತ್ಯ ಕೇಳ್ತಾ ಇದ್ದರೆ.. ಆಹಾ ..ಹಂಸಲೇಖರ ರಸಿಕಕಲ್ಪನೆಗಳಿಗೆ ಮಿತಿಯೇ ಇಲ್ಲವಾ ಅನಿಸಿಬಿಡುತ್ತದೆ.

ಯಾರೋ ನೀನು ಎಂದು ಕೇಳುತಾವೆ ಇವಳ “ಪೊಗರಿನ ಹೃದಯ ಪಾಲಕಿಯರು” ಎಂದು ಅವರು ರೆಫರ್ ಮಾಡ್ತಿರೋದು ಆ ಹೆಣ್ಣಿನ ಸ್ತನಗಳ ಬಗ್ಗೆ ಅಂತ ಅರ್ಥವಾದಾಗ ಮತ್ತೊಮ್ಮೆ ಈ ಸಾಂಗ್ ಕೊಡುವ ಅನುಭೂತಿಯೇ ವಿಭಿನ್ನ. “ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ” ಎಂದು ಮುಂದುವರಿಸಿ ಆ ಸಾಲಿಗೆ ಇನ್ನಷ್ಟು ರಸಿಕತೆ ತುಂಬುತ್ತಾರೆ ಹಂಸ್.

ಗಡಿಬಿಡಿಗಂಡ ಚಿತ್ರದ…. ಮುದ್ದಾಡೆಂದಿದೆ ಮಲ್ಲಿಗೆ ಹೂ ಗೀತೆಯಲ್ಲಿ……. ನಾಯಕಿ”ಎದೆಯ ಸೆರಗ ಮೋಡದಲ್ಲಿ ನೀನೇ ಚಂದ್ರನೀಗ….” ಅಂದರೆ…. ನಾಯಕ” ಹೃದಯ ಮೇರುಗಿರಿಗಳಲ್ಲಿ… ಕರಗಬಹುದೆ ಈಗ” ಅಂತಾನೆ. “ಮುಡಿಯಲಿ ಮಲ್ಲಿಗೆಯ ಮುಡಿದವಳ ಮೊದಲುಮುಡಿಯಬೇಕು.. ಮಡದಿಗೆ ಪ್ರತಿದಿನವೂ ಮೊದಲಿರುಳಿರಬೇಕು…” ಅಂತ ನಾಯಕಿ ತನ್ನನ್ನು ಮೊದಲು ರಮಿಸು ಅಂತ ಒತ್ತಾಯಿಸುತ್ತಿದ್ದರೆ………… ನಾಯಕ ..” ಮನಸಿನ ಮಧುವಿನ ಮಹಲೊಳಗೆ … ಮದನ ಮಣಿಯಬೇಕು… ಸುರತಿಯ ಪರಮಾನ್ನ ಹಿತಮಿತವಿರಬೇಕು” ಅಂತ ಆಕೆಯ ಮೇಲಿರೋ ಮೋಹದ ಜೊತೆಜೊತೆಗೆ ಪ್ರತಿದಿನ ಬೇಡ ಫ್ರೀಡಮ್ಮು ವೀಕ್ಲಿ ಒನ್ಸು ಜುಮ್ ಜುಮ್ಮು” ಅಂತ ದೂರ ಹೋಗೋ ಪ್ರಯತ್ನ ಕೂಡ ಮಾಡುತ್ತಾನೆ.

ಇದು ಕೂಡ ಹೆಣ್ಣು ತನ್ನ ಗಂಡನ್ನು ಸೆಕ್ಸಿಗಾಗಿ ಕರೆಯುವ ಗೀತೆಯೇ ಆದರೂ… ತನ್ನ ಕ್ಲಾಸಿಕಲ್ ಟ್ಯೂನ್ ನಿಂದ ಚೆಂದದ ಪದಜೋಡಣೆಯಿಂದ… ಈ ಹಾಡು ಕೊಂಚವೂ ಅಶ್ಲೀಲ ಅನಿಸೋದೇ ಇಲ್ಲ. ಅಶ್ಲೀಲ ಅನಿಸಿದರೂ ಓಕೆ ಎಂದು ಬರೆದಾಗ.. ರಾತ್ರಿ ಆಯ್ತು ಮಲಗೋಣ ಇಂದು ನಮ್ಮ ಸೋಭಾನ… ಅಥವಾ ಕಾಯಿ ಕಾಯಿ ನುಗ್ಗೇಕಾಯಿ ಮಹಿಮೆಗೆ ರಾತ್ರಿಯೆಲ್ಲ ನಿದ್ದೆಯಿಲ್ಲ ಕಣ್ಣಿಗೆ.. ನೆಲ್ಲಿಕಾಯಿ ಆಸೆಗೆ ಬಿಟ್ಟು ಬಂದೆ ಹಾಸಿಗೆ ಅಂತ ಸ್ವಲ್ಪ ನೇರವಾಗಿಬಿಡುತ್ತಾರೆ ಹಂಸಲೇಖ.

ಇವೆಲ್ಲ ಸಾಹಿತ್ಯವನ್ನು ಗಮನಿಸುವಾಗ ಅರ್ಥವಾಗುತ್ತಾ ಹೋಗುವ ಅಪಾರಾರ್ಥಗಳು. ತೂಗುಮಂಚದ “ಹಮ್ಮನುಸಿರಬಿಟ್ಟಳು ಎಂಬುದು ಅಮ್ಮನುಸಿರ ಬಿಟ್ಟಳು ಎಂದಾಗಿದ್ದು ಅದನ್ನು ಲಾಲಿಹಾಡೆಂದು ತಪ್ಪು ತಿಳಿದುದರ ಪರಿಣಾಮ ಎಂದು ಹಿಂದೊಮ್ಮೆ ಬರೆದಿದ್ದು ನಿಮಗೆ ನೆನಪಿರಬಹುದು.

ಇನ್ನು ಡಬಲ್ ಮೀನಿಂಗೇ ಹುಡುಕಬೇಕು ಅಂದರೆ ಪ್ರತಿ ಗೀತೆಯೂ ಬೇರೆಯೇ ಅರ್ಥ ಕೊಡಬಲ್ಲ ಕೆಪಾಸಿಟಿ ಹೊಂದಿರುತ್ತದೆ. ಅದು ನಾವು ಆ ಗೀತೆಯನ್ನು ಬಿಂಬಿಸೋಕೆ ಹೊರಟಿರುವ ರೀತಿಯ ಮೇಲೆ ಡಿಪೆಂಡು. ಎಂಥ ಸಭ್ಯಸಾಲನ್ನೂ.. ಕವಿಗೇ ಶಾಕ್ ಆಗುವ ಹಾಗೆ ಡಬಲ್ ಮೀನಿಂಗ್ ಆಗಿಸಬಹುದು. ಆ ಉದಾಹರಣೆ ಈ ಬರಹದಲ್ಲಿ ಬೇಡ. ಮುಂದೆಂದಾದರೂ ಬರೆಯೋಣ.

ಇದೆಲ್ಲ ಬರೆಯೋಕೆ ಹೊರಟಿದ್ದಕ್ಕೆ ಪ್ರೇರಣೆ ಅಣ್ಣಯ್ಯ ಚಿತ್ರದ ಒಂದು ಸಾಂಗ್. ಅಣ್ಣಯ್ಯ ಬಂದು ಹೋಗಿ ಇಪ್ಪತ್ತೈದು ವರ್ಷಕ್ಕೂ ಹೆಚ್ಚು ಟೈಮಾಯ್ತು. ರವಿಚಂದ್ರನ್ ಸಿನಿಮಾಗಳು ಸಾಫ್ಟ್ ಪೋರ್ನ್ ಸಿನಿಮಾಗಳಂತೆ ಭಾಸವಾಗುತ್ತಿದ್ದ ನಮ್ಮ ಏಜಿನ ದಿನಗಳವು. ರವಿಚಂದ್ರನ್ ಸಿನಿಮಾಗಳನ್ನು ನೋಡೋದು ಕಾಶೀನಾಥ್ ಸಿನಿಮಾ ನೋಡೋಷ್ಟೇ ಪಾಪ ಎಂಬಷ್ಟು ಮಡಿವಂತಿಕೆ ದಿನಗಳವು. ಆದರೆ ನಮ್ಮ ಪಾಲಿಗೆ ಆಗ ರವಿಮಾಮಾ ಲವ್ ರೊಮ್ಯಾನ್ಸ್ ಶೃಂಗಾರಗಳಿಗೆ ಗಾಡ್. ಆತ ಹೀರೋಯಿನ್ ಎದೆಯ ಮೇಲೆ ಮುಖವಿಟ್ಟು ಒರಗಿದರೆ ನಮಗೆ ರಸಸ್ಫೋಟ ಆಗುತ್ತಿತ್ತು. ಕುತ್ತಿಗೆಗೊಂದು ಮುತ್ತಿಟ್ಟು ತುದಿಬೆರಳುಗಳನ್ನು ಕತ್ತು ಮತ್ತು ಎದೆಯ ನಡುವೆ ಒಮ್ಮೆ ಆಡಿಸಿದ ಅಂದರೆ ಕೊಳಲು ಲಂಬಕೋನವಾಗುತ್ತಿತ್ತು.

ಆತ ಸೆರಗು ಸರಿಸಿ ಹೊಕ್ಕಳಿಗೊಮ್ಮೆ ಮುತ್ತಿಟ್ಟರೆ ಮುಗಿದೇಹೋಯ್ತು ಊರಸ್ನಾಯುಗಳು ಬಿಗಿಯಾಗಿ ಹೋಗುತ್ತಿದ್ದವು. ಅಂದು ಹಂಸಲೇಖ ಗೀತೆಗಳು ರವಿಚಂದ್ರನ್ ನ ಪಿಚ್ಚರೈಸೇಷನ್ನಲ್ಲಿ ಕಳೆದುಹೋಗಿಬಿಡುತ್ತಿದ್ದವು. ಅಥವಾ ಸಾಹಿತ್ಯ ಸಂಗೀತ ಎಲ್ಲದರಾಚೆಗೆ ನಮಗೆ ಆ ರೊಮ್ಯಾನ್ಸೇ ಹೆಚ್ಚು ಆಕರ್ಷಿಸಿಬಿಡುತ್ತಿತ್ತು. ಕ್ಯಾಸೆಟಲ್ಲಿ ಹಾಡುಗಳನ್ನು ಕೇಳಿ ಸಿನಿಮಾಗೆ ಹೋದಾಗ ಗೀತೆಗಳು ಆಡಿಯೋಗಿಂತ ವಿಡಿಯೋವಾಗಿ ತೃಪ್ತಿಕೊಟ್ಟು ಕಳಿಸುತ್ತಿದ್ದವು. ಆದರೆ ಆನಂತರ ಸಾಹಿತ್ಯ ಗಮನಿಸುವ ಮೆಚುರಿಟಿ, ಸಾಹಿತ್ಯದಲ್ಲಿರುವ ಇಮ್ಯಾಜಿನೇಷನ್ ಪವರ್ ಆಸ್ವಾಧಿಸುವ ಮನಸ್ಥಿತಿ ಎಲ್ಲ ಬಂದಾಗ.. ರವಿ ಚಂದ್ರನ್ ಹಂಸಲೇಖರ ಗೀತೆಗೆ ಹತ್ತು ಪರ್ಸೆಂಟಷ್ಟೂ ನ್ಯಾಯ ಸಲ್ಲಿಸಲು ಸಾಧ್ಯವಾಗಿಲ್ಲ ಅನಿಸಿಬಿಟ್ಟಿದೆ. ಹಾಗಂತ ಹಂಸಲೇಖರ ಸಾಹಿತ್ಯಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಿತ್ತಾ? ಖಂಡಿತ ಇಲ್ಲ. ಯಥಾವತ್ ನ್ಯಾಯ ಸಲ್ಲಿಸಲು ಹೋದದ್ದೇ ಆದರೆ ಆ ಸಾಂಗ್ ನ ಪಿಚ್ಚರೈಸೇಷನ್ ಕಾಮಸೂತ್ರವಾಗಿ ಹೋಗುವಷ್ಟು ಹಾಟ್ ಆಗಿಬಿಡುತ್ತಿತ್ತು.

ಆ ಗೀತೆಗಳು ಪಿಚ್ಚರೈಸ್ ಆಗದೆಯೇ ಇಮ್ಯಾಜಿನೇಷನ್ನಲ್ಲೇ ಉಳಿದುಬಿಟ್ಟಿದ್ದರೆ ಎಷ್ಟು ಚೆಂದವಿತ್ತು ಅನಿಸಿದ್ದೂ ಇದೆ. ಸತ್ಯ ಏನಂದರೆ ರವಿಚಂದ್ರನ್ ಸಲ್ಲಿಸಿದಷ್ಟು ನ್ಯಾಯವನ್ನು ಹಂಸಲೇಖರ ಗೀತೆಗೆ ಇನ್ಯಾರೂ ಸಲ್ಲಿಸಲು ಸಾಧ್ಯವಾಗಲಿಲ್ಲ. ರೊಮ್ಯಾಂಟಿಕ್ ಗೀತೆಗಳಲ್ಲಿ ಮಾತ್ರವಲ್ಲ… ಬೇರೆ ಗಂಭೀರ/ಸ್ಯಾಡ್/ಫಿಲಾಸಫಿಕಲ್/ಕ್ರಾಂತಿ ಯಾವ ಗೀತೆಗಳಿಗೂ ವಿಶ್ಯುಯಲಿ ನ್ಯಾಯ ಸಿಕ್ಕಿಲ್ಲ. ಇದು ಹಂಸಲೇಖ ಮಾತ್ರ ಅಲ್ಲ.. ಬಹುತೇಕ ಸಾಹಿತಿಗಳ ಮನಸಿನ ಮೂಲೆಯ ಅಸಮಾಧಾನ ಹಾಗೂ ನೋಡುಗರ ಅಸಂತೃಪ್ತಿ. ಮೊನ್ನೆ ನಾನು ಶೇರ್ ಮಾಡಿಕೊಂಡ ” ಸುಮ್ಮನೆ ಹೀಗೆ ನಿನ್ನನೇ …:” ಎಂಬ ಅಮರ್ ಚಿತ್ರದ ಗೀತೆಯಾದರೂ ಅಷ್ಟೆ. ಅಷ್ಟು ಗಾಢ ಸಾಲುಗಳ ಗೀತೆಗೆ ಅಂಬರೀಶ್ ಪುತ್ರನಿಂದ ಕಲ್ಲುಬಂಡೆಯಂಥ ಅಭಿನಯ. ಇಡೀ ಹಾಡನ್ನು ಲಾಂಗ್ ಶಾಟ್ ಗಳಲ್ಲಿ ತೆಗೆದು ಪ್ರಕೃತಿ ಸೌಂದರ್ಯ ತೋರಿಸಿ ಮುಗಿಸಿದ್ದಾರೆ ನಾಗಶೇಖರ್. ಸಾಹಿತ್ಯಕ್ಕೆ ಸಂಗೀತ ಸಲ್ಲಿಸುವಷ್ಟು ನ್ಯಾಯವನ್ನು ದೃಶ್ಯರೂಪ ಸಲ್ಲಿಸಲು ಸಾಧ್ಯವಿಲ್ಲ. ಬೆಟರ್ ನಾವು ಹಾಡುಗಳನ್ನು ನಮ್ಮ ಇಮ್ಯಾಜಿನೇಷನ್ ಗೆ ತಕ್ಕಂತೆ ಕಣ್ಮುಚ್ಚಿಕೊಂಡು ಮನಸ್ಸಿನೊಳಗೇ ಚಿತ್ರಿಸಿಕೊಂಡುಬಿಡುವುದು.

ಬ್ಯಾಕ್ ಟು ಅಣ್ಣಯ್ಯ ಚಿತ್ರದ ಆ ಸಾಂಗ್ : ಇಷ್ಟು ವರ್ಷದಲ್ಲಿ ಈ ಹಾಡನ್ನು ಕಮ್ಮಿ ಅಂದ್ರೂ ಒಂದು ಸಾವಿರ ಸಲ ಕೇಳಿರುತ್ತೇನೆ. ಹಿಟ್ ಆಲ್ಪಮ್ ಆಗಿರುವ ಅದರ ಕಡಿಮೆ ಪಾಪ್ಯುಲರ್ ಗೀತೆ ಅದು.

“ಅ ಹಾಗೆ ಪ್ರೇಮಿ ಓಹೋ.. ಒ ಹೋಗೆ ಪ್ರೇಮಿ ಆಹಾ…”
ಈ ಹಾಡಿನ ಚಿತ್ರಣ ನಿಮ್ಮನ್ನು ಸಾಹಿತ್ಯ ಗಮನಿಸದಷ್ಟು ಸೆಳೆದುಕೊಳ್ಳುತ್ತದೆ ಕಾರಣ. ರವಿಚಂದ್ರನ್ ಮಧುಬಾಲಾ ಕೆಮಿಸ್ಟ್ರಿ! ಆದರೆ ಅದ್ಯಾಕೋ ಗೀತೆ ತುಂಬ ಅಟ್ರಾಕ್ಟಿವ್ ಅನಿಸಿರಲಿಲ್ಲ. ಕಮಾನು ಡಾರ್ಲಿಂಗ್, ಅಣ್ಣಯ್ಯ ಅಣ್ಣಯ್ಯ ಬಾರೋ, ರಾಗಿ ಹೊಲದಾಗೆ ಖಾಲಿ ಗುಡಿಸಲು ಈ ಗೀತೆಗಳು ಕೊಟ್ಟ ಕಿಕ್ …. ಈ ಅ ಹಾಗೆ ಪ್ರೇಮಿ ಓಹೋ… ಒ ಹೋಗೆ ಪ್ರೇಮಿ ಆಹಾ ಗೀತೆ ನೀಡಿರಲಿಲ್ಲ.

ಹೌದು ನಾನು ಈ ಹಾಡನ್ನು ಕೇಳಿಸಿಕೊಳ್ತಾ ಇದ್ದದ್ದೇ ಹೀಗೆ. ಮೊನ್ನೆಯ ತನಕವೂ…ಆದರೆ ಮೊನ್ನೆ ಯಾಕೋ ಮತ್ತೊಮ್ಮೆ ಕೇಳಿಸಿಕೊಂಡಾಗ.. ಅರೆ ಇಪ್ಪತ್ತೈದು ವರ್ಷ ತಪ್ಪಾಗಿ ತಿಳಿದುಕೊಂಡು ತಪ್ಪಾಗೇ ಹಾಡಿಕೊಂಡೆನಲ್ಲ ಅಂತ ಮೈತುಂಬ ಗಿಲ್ಟು

ಆ ಸಾಂಗ್ ಇರೋದು ಹೀಗೆ…

”ಆಹಾ’ಗೆ ಪ್ರೇಮಿ “ಓಹೋ”
” ಓಹೋ”ಗೆ ಪ್ರೇಮಿ ” ಆಹಾ”

ನನ್ನ ಹಾಗೆ ಅದೆಷ್ಟು ಜನ ಯಾಮಾರಿದ್ದೀರೋ ಗೊತ್ತಿಲ್ಲ. ಅಥವಾ ನಾನೊಬ್ನೇ ಹೀಗೆ ತಪ್ಪಾಗಿ ಕೇಳಿಸಿಕೊಂಡವ್ನೋ ಗೊತ್ತಿಲ್ಲ

ಈ ಗೀತೆಯ ವಿಶೇಷ ಏನಂದ್ರೆ ಹಂಸಲೇಖ. ಆಹಾ ಮತ್ತು ಓಹೋ ಎಂಬ ಎರಡು ಪದಗಳನ್ನೇ ಪ್ರೇಮಿಗಳನ್ನಾಗಿಸಿದ್ದಾರೆ

ಆಹಾಗೆ ಓಹೋ ಪ್ರೇಮಿ… ಓಹೋಗೆ ಆಹಾ ಪ್ರೇಮಿ!
ಅದು ಇಬ್ಬರು ಪ್ರ‍ೇಮಿಗಳ ಹೆಸರು!

ಈಗ ಈ ಹಾಡೊಮ್ಮೆ ಕೇಳಿನೋಡಿ…
ಅದು ಸೌಂಡಾಗೋದೇ ಬೇರೆ ಥರ!

ಅದ್ಯಾಕೆ ಆಹಾ ಓಹೋ ಎಂಬ ಪದಗಳು ಇಲ್ಲಿ ಪಾತ್ರಗಳಾದವು ಅಂತ ಸಿನಿಮಾ ತೆರೆದು ನೋಡಿದೆ. ಈ ಹಾಡು ಆರಂಭವಾಗುವ ಮುನ್ನ ಅಣ್ಣಯ್ಯ ಯಾವುದೋ ಫೈಟಿಂಗಲ್ಲಿ ಒದೆ ತಿಂದು ಬೆನ್ನಿಗೆ ಕಾಶಿ ಕೈಲಿ ಬಿಸಿ ಮಸಾಜ್ ಮಾಡಿಸಿಕೊಳ್ತಾ ಇರ್ತಾನೆ. ಅವನ ಇಮ್ಯಾಜಿನೇಷನಲ್ಲಿ ನಾಯಕಿ ಬಂದು ಕಾಶಿಯ ಬದಲು ಮಸಾಜ್ ಮಾಡ್ತಿರೋ ಹಾಗೆ ಒಂದು ಟ್ವಿಸ್ಟು.. ಇಮ್ಯಾಜಿನೇಷನಲ್ಲೇ ಅವಳೊಂದಿಗೆ ಮಾತಾಡ್ತಾ.. ಆಕೆ ಬಿಸಿ ಶಾಖ ಕೊಟ್ಟಾಗ ಒಮ್ಮೆ ನಾಯಕ ಆಹಾ ಅಂತಾನೆ.. ಇನ್ನೊಮ್ಮೆ ಓಹೋ ಎಂದು ಬಿಗಿಯುಸಿರು ಬಿಡುತ್ತಾನೆ. ಆಗ ಹುಟ್ಟುವ ಹಾಡಿದು. ಡ್ರೀಮ್ ಸಾಂಗ್ ನಲ್ಲಿ ಟೆಕ್ಸ್ಟ್ ಕೂಡ ಬರುತ್ತದೆ ಆಹಾ ಓಹೋ ಅಂತ!

ಸ್ಕ್ರಿಪ್ಟ್ ಜೊತೆ ದೃಶ್ಯರಚನೆ ಜೊತೆ ಗೀತ ಸಾಹಿತಿ ಕನೆಕ್ಟ್ ಆದಾಗ ಇಂಥ ಅದ್ಭುತಗಳು, ಮಜಗಳು, ಕ್ರಿಯೇಟಿವ್ ಐಡಿಯಾಗಳು ಹುಟ್ಟುತ್ತವೆ. ಹಂಸಲೇಖ ಎಲ್ಲೋ ಕೂತು ಹಾಡುಬರೆದುಕೊಟ್ಟು ಸಂಗೀತ ಮಾಡಿಕೊಡ್ತಿರಲಿಲ್ಲ. ಸಿನಿಮಾದೊಂದಿಗೆ ಪ್ರೀ ಪ್ರೊಡಕ್ಷನ್ನಿಂದ ರೀರೆಕಾರ್ಡಿನ ತನಕ ಜರ್ನಿ ಮಾಡ್ತಿದ್ರು ಅನ್ನೋದಕ್ಕೆ ಇದೊಂದು ಸಾಕ್ಷಿ. ಅವರಿಬ್ಬರ ಕಾಂಬಿನೇಷನ್ ಯಾಕೆ ಆ ಪರಿ ಕ್ಲಿಕ್ ಆಗುತ್ತಿತ್ತು ಅನ್ನೋದಕ್ಕೂ ಇದೊಂದು ಪುರಾವೆ. ( ಬರಹ : ನವೀನ್ ಸಾಗರ್ ; ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ದಿನದ ಸುದ್ದಿ18 hours ago

ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ...

ದಿನದ ಸುದ್ದಿ18 hours ago

ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ...

ದಿನದ ಸುದ್ದಿ2 days ago

ಕವಿತೆ | ನಾನೊಲಿದೆನಯ್ಯಾ

ರಮ್ಯ ಕೆ ಜಿ, ಮೂರ್ನಾಡು ಅಲೆಯುತ್ತಿದೆ ಈ ರೂಹು ನನ್ನೊಳಗಿಂದ ಚಿಗಿದು ನಿನ್ನ ತುದಿಬೆರಳಲಿ ಕುಣಿದು ಗಾಳಿತುಟಿಯ ಸೋಕಿದಾಕ್ಷಣ ಬೆವೆತು, ಮಳೆ ಹೊಯ್ಯಿಸಿ ಮಣ್ಣ ಘಮದೊಳಗೆ ಲೀನವಾಗುವಂತೆ....

ದಿನದ ಸುದ್ದಿ3 days ago

ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ...

ದಿನದ ಸುದ್ದಿ4 days ago

ತುಂಬಿದ ಕೊಡ ತುಳುಕಿತಲೇ ಪರಾಕ್..!

ಗಿರೀಶ್ ಕುಮಾರ್ ಗೌಡ, ಬಳ್ಳಾರಿ “ತುಂಬಿದ ಕೊಡ ತುಳುಕಿತಲೇ ಪರಾಕ್” ಎಂದು ಕಾರ್ಣಿಕ ನುಡಿದ ಗೊರವಯ್ಯ, ಅದು ಮೈಲಾರ ಕೋಟ್ಯಾಂತರ ಭಕ್ತರ ಆರಾಧ್ಯದೈವ ಮೈಲಾರ ಲಿಂಗನ ಪುಣ್ಯ...

ದಿನದ ಸುದ್ದಿ5 days ago

ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44...

ದಿನದ ಸುದ್ದಿ7 days ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ7 days ago

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ...

ದಿನದ ಸುದ್ದಿ1 week ago

ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ...

Trending