ಲೈಫ್ ಸ್ಟೈಲ್
ರೆಸಿಪಿ | ಮುಂಗಾರಿನ ಮನಸ್ಸಿಗೆ ಈರುಳ್ಳಿ ಉಪ್ಪಿನಕಾಯಿ
ಮಳೆಗಾಲದ ಈ ದಿನಗಳಲ್ಲಿ ಬಜ್ಜಿ ಬೋಂಡಾಕ್ಕೆ ನಾಲಿಗೆ ಹಪಹಪಿಸುತ್ತದೆ. ದೇಹಕ್ಕೆ ಉಷ್ಣಾಂಶದ ಕೊರತೆಯುಂಟಾಗುವುದು ಇದಕ್ಕೆ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಮಳೆಗಾಲದಲ್ಲಿ ತಪ್ಪದೇ ಖಾರದ ಅಂಶ ಆಹಾರದಲ್ಲಿ ಹೆಚ್ಚಿರಲಿ. ಮುಖ್ಯವಾಗಿ ಊಟದಲ್ಲಿ ಉಪ್ಪಿನಕಾಯಿ ಇರಲೇಬೇಕು. ಉಪ್ಪಿನಕಾಯಿ ಇದ್ರೆ ಸಾಕು ಇನ್ನೇನೂ ಬೇಡ. ಬರಿ ಅನ್ನಕ್ಕೆ ತುಪ್ಪ ಸೇರಿಸಿ ತಿನ್ನಬಹುದು.
ಮಳೆಗಾಲ ಅಂದ್ರೆ ಸಾಕು ಎಲ್ಲರ ಮನೆಯಲ್ಲೂ ಖಾರದ ಅಡುಗೆಗಳು ಘಮ ಘಮ ಎನ್ನುತ್ತವೆ. ಅದರಲ್ಲೂ ಬಾಯಿ ರುಚಿ ಅಂತಾ ಬಜ್ಜಿ ಬೋಂಡಾಗಳು ಬೇಯುತ್ತವೆ. ಆದ್ರೆ ಇದರಿಂದ ಎಣ್ಣೆ ಅಂಶ ದೇಹಕ್ಕೆ ಸೇರಿ ಚಳಿಗಾಲದಲ್ಲಿ ಹೃದಯಾಘಾತವಾಗುವ ಸಂಭವವಿರುತ್ತೆ. ಹಾಗಾದ್ರೆ ಮಳೆಗಾಲದಲ್ಲಿ ಮನಸು ಬೇಡುವ ಖಾರದ ರುಚಿಗೆ ತಪ್ಪದೇ ಉಪ್ಪಿನ ಸೇವಿಸಿ.
ಹಾಗಾದ್ರೆ ಮುಂಗಾರಿನ ತುಂತುರಿನಲ್ಲಿ ಸವಿಯಲೇಬೇಕಾದ ಈರುಳ್ಳಿ ಉಪ್ಪಿನಕಾಯಿಗಳು ಮಾಡೋದು ಹೇಗೆ ನೋಡಿ.
ಈರುಳ್ಳಿಯ ಸ್ಪೆಷಲ್ ಉಪ್ಪಿನ ಕಾಯಿ, ಮಳೆಗಾಲದಲ್ಲಿ ದೇಹಕ್ಕೆ ಅಗತ್ಯವಾದ ಉಷ್ಣಾಂಶವನ್ನು ಪೂರೈಸುವಲ್ಲಿ ಈರುಳ್ಳಿ ಸೇವನೆ ಪ್ರಯೋಜನಕಾರಿ. ಅಲ್ಲದೇ ಮಳೆಗಾಲದ ಆರೋಗ್ಯ ಸಮಸ್ಯೆಗೆ ಈರುಳ್ಳಿ ಸೇವನೆ ಇರಲಿ. ಸರಿ ಬನ್ನಿ ಹಾಗಿದ್ರೆ ಈರುಳ್ಳಿ ಉಪ್ಪಿನಕಾಯಿ ಸ್ವಾದವನ್ನು ಸವಿಯೋಣ.
ಈರುಳ್ಳಿ ಉಪ್ಪಿನಕಾಯಿಗೆ ಬೇಕಾಗುವ ಸಾಮಗ್ರಿಗಳು
• ಮೀಡಿಂಯಂ ಸೈಜ್ನ 7 ಕೆಂಪು ಈರುಳ್ಳಿಯನ್ನು ಸಿಪ್ಪೆ ಬಿಡಿಸಿಟ್ಟುಕೊಳ್ಳಿ.
• ಒಂದು ನಿಂಬೆ ಹಣ್ಣಿನ ಗಾತ್ರದ ಕೆಂಪು ಅಥವಾ ಹಳೇ ಹುಣಸೇ ಹಣ್ನನ್ನು ಬಳಸಿಕೊಳ್ಲಿ. ಹೂಣಸೇ ಹಣ್ಣು ಉಪ್ಪಿನಕಾಯಿಗೆ ಹೆಚ್ಚು ರುಚಿ ನೀಡುತ್ತದೆ.
• ಇನ್ನು ಮಿಕ್ಸಿ ಮಾಡಿಕೊಳ್ಳಲು ಒಂದು ಗಡ್ಡೆ ಬೆಳ್ಳುಳ್ಲಿ, ಸಿಪ್ಪೆ ಬಿಡಿಸಿಟ್ಟುಕೊಳ್ಳಿ. ಸಿಪ್ಪೆ ಬಿಡಿಸಿದ ಒಂದು ದೊಡ್ಡ ಶುಂಠಿ ಎಸಳು.
• 20-30 ಬ್ಯಾಡಗಿ ಮೆಣಸಿನಕಾಯಿಯನ್ನು ಬಳಸಿಕೊಳ್ಳಿ.ಇದನ್ನು ಮಸಾಲೆಗೆ ಬಳಸಿಕೊಳ್ಳುತ್ತೇವೆ. ಇದು ಉಪ್ಪಿನಕಾಯಿಗೆ ಹೆಚ್ಚ ಟೇಸ್ಟ್ ಕೊಡುತ್ತೆ.
• ಇಂಗು ಬಳಸುವುದರಿಂದ ಅಸಿಡಿಟಿ ಕಡಿಮೆಯಾಗುತ್ತದೆ. ಕರಿಯಲು ಎಣ್ಣೆ, ಎಳ್ಳೆಣ್ಣೆ ಬಳಸಿದ್ರೆ ಹೆಚ್ಚು ಟೇಸ್ಟಿ. ಸ್ವಲ್ಪ ವಿನೆಗರ್ ಕೂಡ ಸೇರಿಸಿಕೊಳ್ಳಬಹುದು.
ಮುಕ್ಕಾಲು ಚಮಚ ಅರಿಶಿಣ ಪುಡಿ
ಕಾಲು ಚಮಚ ಮೆಂತ್ಯೆಕಾಳು
ಈರುಳ್ಳಿ ಉಪ್ಪಿನಕಾಯಿ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ.
• ಮೊದಲಿಗೆ ಈರುಳ್ಳಿಯನ್ನು ಹೆಚ್ಚಿಕೊಂಡು ಒಂದು ಬಾಣಲಿ ಇಟ್ಟು ಈರುಳ್ಳಿ ಹಾಕಿಕೊಳ್ಳಿ. ಇದಕ್ಕೆ ಹುಣಸೇ ಹಣ್ಣು ಸೇರಿಸಿಕೊಳ್ಳಿ, ಜೊತೆಗೆ ಕರಿಬೇವು ಆಡ್ ಮಾಡಿ. 2 ಸ್ಪೂನ್ಸ್ ಉಪ್ಪು ಸೇರಿಸಿ ಕಾಲು ಲೀಟರ್ ಸೇರಿಸಿ ಕುದಿಸಿಕೊಳ್ಳಿ.
• ಈಗ ಒಂದು ಬಾಣಲಿ ಇಟ್ಟು, ಕಾಲು ಚಮಚ ಮೆಂತ್ಯೆಯನ್ನು ಡ್ರೈ ರೋಸ್ಟ್ ಮಾಡಿಕೊಳ್ಲಿ.
ನಂತರ ಇದನ್ನು ಮಿಕ್ಸಿಯಲ್ಲಿ ಇಲ್ಲವೇ ಕುಟ್ಟಾಣೀಯಲ್ಲಿಟ್ಟು ಪುಡಿ ಮಾಡಿಕೊಳ್ಳಿ.
ಇನ್ನೊಂದು ಕಡೆ ಈರುಳ್ಳಿ ಕುದಿ ಹತ್ತಿದೆಯೇ ಗಮನಿಸಿಕೊಳ್ಲಿ.
• ಈರುಳ್ಳಿ ಸಾಫ್ಟ್ ಆಗುವವರೆಗೆ ಕುದಿಸಿಕೊಳ್ಳಿ. ಹೀಗೆ ಗೊಜ್ಜಿನ ಹದ ಬಂದಾಗ ಈರುಳ್ಲಿ ಮಿಶ್ರಣ ಮಿಕ್ಸಿಗೆ ಹಾಕಿ 20 ಬ್ಯಾಡಗಿ ಮೆಣಸಿನಕಾಯಿ, ಒಂದು ದೊಡ್ಡ ಶುಂಠೀಯನ್ನು ಹೋಳುಗಳನ್ನಾಗಿ ಮಾಡಿಕೊಂಡು ರುಬ್ಬಿಕೊಳ್ಳಬೇಕು.ಮಿಕ್ಸಿ ಜಾರು ಚಿಕ್ಕದಿದ್ದರೇ ಎರಡು ಹಂತದಲ್ಲಿ ರುಬ್ಬಿಕೊಳ್ಳಬಹದು.
• ನಂತರ ಒಂದು ಪ್ಯಾನ್ ಇಟ್ಟು 150 ಗ್ರಾಂ ಎಳ್ಳೆಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ. ಇದಕ್ಕೆ ಮುಕ್ಕಾಲು ಟೇಬಲ್ ಸ್ಪೂನ್ ಸಾಸಿವೆ ಸೇರಿಸಿ. 2 ಕೆಂಪು ಮೆಣಸಿನಕಾಯಿ, ಕರಿಬೇವು ಸೇರಿಸಿ ಸಿಡಿಸಿಕೊಳ್ಳಿ. ಮಮುಕ್ಕಾಲು ಸ್ಪೂನ್ ಅರಿಶಿನ ಸೇರಿಸಿ ಮಿಕ್ಸ್ ಮಾಡಿಕೊಲ್ಳಿ. ಇದಕ್ಕೆ ರುಬ್ಬಿಕೊಂಡ ಮಿಶ್ರಣ ಸೇರಿಸಿ ನೀರಿನಾಂಶ ಇಂಗುವವರೆಗು ಕುದಿಸಿಕೊಳ್ಳಿ.
• ಮುಚ್ಚಳ ಮುಚ್ಚಿ 10 ನಿಮಿಷ ಬೇಯಿಸಿಕೊಳ್ಳಿ ನಂತರ ಕೈಯಾಡಿ, ಇದಕ್ಕೆ ಪುಡಿ ಮಾಡಿಕೊಂಡ ಮೆಂತ್ಯೆ ಪುಡಿ ಸೇರಿಸಿ, ತೆಂಗಿನ ಕಾಯಿ ಪುಡಿ ಒಂದು ಸ್ಪೂನ್ ಸೇರಿಸಿ ಮಿಕ್ಸ್ ಮಾಡಿಕೊಳ್ಳಿ.ಉಪ್ಪು ಕಡಿಮೆ ಬಿದ್ರೆ ಸ್ವಲ್ಪ ಉಪ್ಪು ಸೇರಿಸಿಕೊಳ್ಳಬಹುದು. ಇದಕ್ಕೆ 2 ಟೇಬಲ್ ಸ್ಪೂನ್ ನೀರೆ ಸೇರಿಸಿ ಮಿಕ್ಸ್ ಮಾಡಿ . ಮತ್ತೆ ಮಿಶ್ರಣ ಗಟ್ಟಿಯಾದಾ ನೀರು ಸೇರಿಸಿ ಮಿಕ್ಸ್ ಮಾಡಿ. ಕಡೆಯಲ್ಲಿ ಒಂದು ಸ್ಪೂನ್ ವಿನೇಗರ್ ಹಾಕಿ ಬೇಯಿಸಿಕೊಳ್ಲಿ. ಹೀಗೆ ಉಪ್ಪಿನಕಾಯಿ ಎಣ್ಣೆ ಬಿಡಲು ಆರಂಭಿಸಿದ್ರೆ ಉಪ್ಪಿನಕಾಯಿ ಸವಿಯೋದಕ್ಕೆ ಸಿದ್ಧ. ಈಗ ಸ್ಟೌವ್ ಆರಿಸಿ ಇದನ್ನು ಒಂದು ಉಪ್ಪಿನಕಾಯಿ ಜಾರ್ನಲ್ಲಿ ತುಂಬಿ ಉಪ್ಪಿನಕಾಯಿ ಮಿಶ್ರಣಕ್ಕಿಂತ ಒಂದು ಚೂರು ಮೇಲೆ ಬರುವಂತೆ ಎಣ್ಣೆ ಹಾಕಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
ದಿನದ ಸುದ್ದಿ16 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ15 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ1 hour agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ

