ಬಹಿರಂಗ
ವರ್ಣವ್ಯವಸ್ಥೆ ಜಾತಿವ್ಯವಸ್ಥೆಯಾದ ಬಗೆ

ಜಾತಿ ಭಾರತದ ಸಾಮಾಜಿಕ ವ್ಯವಸ್ಥೆಯ ಪೀಡೆ ಎಂಬುದು ಎಲ್ಲರಿಗೂ ತಿಳಿದಿದೆ. ಪ್ರಜ್ಞಾವಂತರಿಗೆ ಅದರ ನಿರ್ಮೂಲನೆಯಾಗಬೇಕೆಂಬ ಕಳಕಳಿಯೂ ಇದೆ. ಅಂತಹ ಕಳಕಳಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರ ಕಳಕಳಿ ಸದಾ ಒಂದು ಕೈಮೇಲು. ಯಾಕೆಂದರೆ ಅಂಬೇಡ್ಕರರು ಜಾತಿಯ ಮೂಲವನ್ನು ಪತ್ತೆ ಹಚ್ಚುವ ಯತ್ನ ನಡೆಸಿದ್ದಾರೆ. ಮೂಲ ಪತ್ತೆಯಾದರೆ ಚಿಕಿತ್ಸೆ ಸುಲಭ ಎಂಬುದಷ್ಟೆ ಇಲ್ಲಿ ಬಾಬಾಸಾಹೇಬರ ನಿಲುವು. ಅಂಬೇಡ್ಕರರ ಈ ಪತ್ತೆಹಚ್ಚುವ ಕ್ರಿಯೆಯಲ್ಲಿ ಪತ್ತೆಯಾದ ಸತ್ಯವೆಂದರೆ ಜಾತಿವ್ಯವಸ್ಥೆಯ ಮೂಲ ವರ್ಣವ್ಯವಸ್ಥೆ ಎಂಬುದು.
ಜಾತಿ ಮತ್ತು ಹಿಂದೂ ಧರ್ಮಕ್ಕೆ ಯಾವ ಸಂಬಂಧವಿದೆ? ಅಂಬೇಡ್ಕರರ ಉತ್ತರವನ್ನಿಲ್ಲಿ ದಾಖಲಿಸುವುದಾದರೆ… “ತಮ್ಮ ನಡುವೆ ಯಾವುದೇ ಅಭಿಪ್ರಾಯ ಭೇದವಿದ್ದರೂ ಹಿಂದೂಗಳು ವಿಧೇಯರಾಗಿದ್ದರೆ ಎಂಬ ಭಾವ ಉಕ್ಕಿಸುವಂತಹ ಯಾವುದಾದರೂ ತತ್ವ ಹಿಂದೂ ಧರ್ಮದಲ್ಲಿದೆಯಾ? ಖಂಡಿತ ಇಲ್ಲ. ನನ್ನ ದೃಷ್ಟಿಯಲ್ಲಿ ಅಂತಹ ತತ್ವ ಯಾವುದಾದರೂ ಇದೆ ಎನ್ನುವುದಾದರೆ ಅದು ಜಾತಿ ತತ್ವ ಮಾತ್ರ. ಹಿಂದುತ್ವಕ್ಕೆ ಸಂಬಂಧಿಸಿದಂತೆ ಅದರ ಮೂಲ ತಿರುಳು ಏನನ್ನು ಒಳಗೊಂಡಿದೆ ಎಂಬುದರ ಬಗ್ಗೆ ಅಭಿಪ್ರಾಯ ಭೇದವಿರಬಹುದು.
ಆದರೆ ಹಿಂದುತ್ವದ ಅವಿಭಾಜ್ಯ ಮತ್ತು ಅತ್ಯಗತ್ಯ ಭಾಗ ಜಾತಿ ಎಂಬುದರ ಬಗ್ಗೆ ಯಾವುದೇ ಅನುಮಾನವಿಲ್ಲ. ಪ್ರತಿಯೊಬ್ಬ ಹಿಂದೂ ಆತ ಶಾಸನಬದ್ಧ ಹಿಂದೂವಲ್ಲದಿದ್ದರೂ ಕೂಡ ಜಾತಿಯನ್ನು ನಂಬುತ್ತಾನೆ. ಹಾಗೆಯೇ ಪ್ರತಿಯೊಬ್ಬ ಹಿಂದೂ ಹೌದು, ನಾನು ಶಾಸನಬದ್ಧ ಹಿಂದೂ ಎಂದು ಆತ ಹೆಮ್ಮೆಪಟ್ಟುಕೊಂಡರೂ ಕೂಡ ಆತ ಕೂಡ ಒಂದು ಜಾತಿಯನ್ನು ಹೊಂದಿರುತ್ತಾನೆ.
ಒಬ್ಬ ಹಿಂದೂ ಹಿಂದೂಧರ್ಮದಲ್ಲಿ ಹೇಗೆ ಹುಟ್ಟಿರುತ್ತಾನೆಯೋ ಅದಕ್ಕಿಂತ ಹೆಚ್ಚಿಗೆ ಆತ ಒಂದು ಜಾತಿಯಲ್ಲಿ ಹುಟ್ಟಿರುತ್ತಾನೆ. ನಿಜಕ್ಕೂ ಹೇಳಬೇಕೆಂದರೆ, ಒಬ್ಬ ವ್ಯಕ್ತಿ ಆತ ಒಂದು ಜಾತಿಯಲ್ಲಿ ಹುಟ್ಟಿಲ್ಲವೆಂದರೆ ಆತ ಹಿಂದೂ ಧರ್ಮದಲ್ಲಿ ಹುಟ್ಟಲು ಸಾಧ್ಯವೇ ಇಲ್ಲ. ಈ ಕಾರಣದಿಂದಾಗಿ ಹಿಂದೂ ಧರ್ಮ ಮತ್ತು ಜಾತಿ ಪರಸ್ಪರ ಪ್ರತ್ಯೇಕಿಸಲಾಗದಂತಹವುಗಳಾಗಿವೆ”
ಈ ನಿಟ್ಟಿನಲ್ಲಿ ಸ್ಪಷ್ಟ, ಜಾತಿ ಪದ್ಧತಿ ಮತ್ತು ಹಿಂದುತ್ವದ ಸಂಬಂಧ ಅವಿನಾಭಾವ ಎಂಬುದು. ಹಾಗೆ ಸ್ಪಷ್ಟಪಡಿಸಿಕೊಳ್ಳುತ್ತಾ ಅಂಬೇಡ್ಕರರು ಅದರ ಮೂಲ ಹುಡುಕಹೊರಡುತ್ತಾರೆ. “ಅಸ್ಪøಶ್ಯತೆಯ ಮೂಲ ಜಾತಿ ವ್ಯವಸ್ಥೆಯಲ್ಲಿದೆ. ಜಾತಿವ್ಯವಸ್ಥೆಯ ಮೂಲ ವರ್ಣವ್ಯವಸ್ಥೆಯಲ್ಲಿದೆ. ವರ್ಣವ್ಯವಸ್ಥೆಯ ಮೂಲ ಬ್ರಾಹ್ಮಣರ ಶಾಸ್ತ್ರಪುರಾಣಗಳಲ್ಲಿದೆ (ಶೃತಿ-ಸ್ಮøತಿಗಳಲ್ಲಿದೆ)” ಎಂಬುದನ್ನು ಕಂಡುಕೊಳ್ಳುತ್ತಾರೆ.
ಒಟ್ಟಾರೆ ಅಂಬೇಡ್ಕರರಷ್ಟು ಕರಾರುವಕ್ಕಾಗಿ ಭಾರತದ ಜನಸಾಮಾನ್ಯನಿಗೆ ಜಾತಿವ್ಯವಸ್ಥೆಯ ಮೂಲವನ್ನು ಬಿಡಿಸಿಟ್ಟವರು ಮತ್ತೊಬ್ಬರಿರಲಿಕ್ಕಿಲ್ಲ. “ಜಾತಿ ವಿನಾಶ” ಎಂಬ ಕೃತಿಯನ್ನೇ ಅವರು ಬರೆದಿದ್ದಾರೆಂದರೆ.. ತಮ್ಮ ಈ ಜಾತಿವಿನಾಶದ ಹಾದಿಯಲ್ಲಿ ಅಂಬೇಡ್ಕರರು ಜಾತಿ ಅದಕ್ಕೆ ಮೂ¯ ವರ್ಣಾಶ್ರಮ ಧರ್ಮ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂದು ಇಡೀ ದೇಶ ಹೇಗೆ ಮಗ್ಗಿ ಒಪ್ಪಿಸುತ್ತದೆಯೋ ಅಂತಹ ವರ್ಣವ್ಯವಸ್ಥೆ ಎಂದು ದಾಖಲಿಸುತ್ತಾರೆ.
ಈ ವಾದವನ್ನು ಅಂದರೆ ಜಾತಿಗೆ ಮೂಲ ವರ್ಣವ್ಯವಸ್ಥೆ ಎಂಬುದನ್ನು ಒಂದಿಷ್ಟು ಮಂದಿ ಒಪ್ಪುವುದಿಲ್ಲ. ಹೇಗೆ ಎಂಬ ಪ್ರಶ್ನೆ ಇಡುತ್ತಾರೆ. ಅಂಬೇಡ್ಕರ್ ಹೇಳುತ್ತಾರೆ, “ಬ್ರಾಹ್ಮಣವಾದ ವರ್ಣವನ್ನು ಜಾತಿಯಾಗಿ ಪರಿವರ್ತಿಸಿತು. ಅದರರ್ಥ ಸಾಮಾಜಿಕ ಅಂತಸ್ತು ಮತ್ತು ಉದ್ಯೋಗವನ್ನು ಬ್ರಾಹ್ಮಣವಾದ ವಂಶಪಾರಂಪರ್ಯಗೊಳಿಸಿತು”.
ಹೌದು, ವಂಶಪಾರಂಪರ್ಯ… ಪ್ರಪಂಚದ ಎಲ್ಲಿಯೂ ಕಸಗುಡಿಸುವವನ ಮಗನೊಬ್ಬ ಕಸಗುಡಿಸಬೇಕು, ಕ್ಷೌರಿಕನ ಮಗನೊಬ್ಬ ಕ್ಷೌರವೃತ್ತಿಯನ್ನೇ ಮಾಡಬೇಕು, ಬಟ್ಟೆ ಒಗೆಯುವವನ ಮಗನೊಬ್ಬ ಬಟ್ಟೆ ಒಗೆಯಬೇಕು, ಕುರಿ ಕಾಯುವವನ ಮಗನೊಬ್ಬ ಕುರಿಕಾಯಬೇಕು… ಹೀಗೆ ಉದ್ಯೋಗ ಮಾಡುವವರನ್ನು ಅದೇ ಉದ್ಯೋಗದ ಹೆಸರಿನ ಒಂದು ಗುಂಪಿಗೆ ಅರ್ಥಾತ್ ವಂಶಪಾರಂಪರ್ಯಕ್ಕೆ, ಜಾತಿಗೆ ಕಟ್ಟಿಹಾಕಿದ್ದು, ಅಲ್ಲಿಯೇ ಕೊಳೆಯುವಂತೆ ಮಾಡಿದ್ದು ಅದು ಭಾರತದಲ್ಲಷ್ಟೆ.
ಅಂಬೇಡ್ಕರ್ ಹೇಳುತ್ತಾರೆ ‘ಅದನ್ನು ಧರ್ಮದ ನೀತಿ ನಿಯಮಗಳನ್ನು ಹೇರಿ ಕಾನೂನು ಕ್ರಮದಲ್ಲಿ ವರ್ಣವನ್ನು ಜಾತಿಯಾಗಿ ಪರಿವರ್ತಿಸುವ ಮೂಲಕ ತರಲಾಯಿತು’. ಹಾಗಿದ್ದರೆ ವರ್ಣದಿಂದ ಜಾತಿಯಾಗಿ ಈ ಪರಿವರ್ತನೆ ಅದು ಹೇಗಾಯಿತು? ಅಂಬೇಡ್ಕರ್ ಹೇಳುತ್ತಾರೆ “ಆ ಪರಿವರ್ತನೆಯನ್ನು ನಿಧಾನವಾಗಿ ಹಂತಗಳ ಮೂಲಕ ಸಾಧಿಸಲಾಗಿದೆ. ಹಾಗೆ ವರ್ಣವನ್ನು ಜಾತಿಯಾಗಿ ಪರಿವರ್ತಿಸುವಾಗ ಮೂರು ಹಂತಗಳು ಸುಸ್ಪಷ್ಟವಾಗಿ ಗೋಚರಿಸುತ್ತವೆ.
ಅವುಗಳಲ್ಲಿ ಮೊದಲ ಹಂತ, ವರ್ಣಪದ್ಧತಿಯ ಅವಧಿಯನ್ನು ಅಂದರೆ ವ್ಯಕ್ತಿಯ ಉದ್ಯೋಗ ಮತ್ತು ಅಂತಸ್ತನ್ನು ನಿರ್ದಿಷ್ಟ ಕಾಲಮಿತಿಯವರೆಗಷ್ಟೆ ಮಿತಿಗೊಳಿಸಿದ ಹಂತ. ಎರಡನೆಯ ಹಂತ, ವರ್ಣಪದ್ಧತಿಯ ಪ್ರಕಾರದ ಸದರಿ ವ್ಯಕ್ತಿಯ ಅಂತಸ್ತು ಮತ್ತು ಉದ್ಯೋಗವನ್ನು ಆತನ ಜೀವಿತ ಅವಧಿಗಷ್ಟೆ ಸೀಮಿತಗೊಳಿಸಿದ ಹಂತ. ಕಡೆಯದಾಗಿ ಮೂರನೆಯ ಹಂತದಲ್ಲಷ್ಟೆ, ವ್ಯಕ್ತಿಯ ಉದ್ಯೋಗ ಮತ್ತು ಅಂತಸ್ತನ್ನು ಆತನ ಜೀವಿತ ಅವಧಿಯನ್ನು ಮೀರಿ ಅವನ ಮಗಳಿಗೆ ಅಥವಾ ಮಗನಿಗೆ ಅದನ್ನು ಆರೋಪಿಸಲಾಯಿತು, ಆರ್ಥಾತ್ ವಂಶಪಾರಂಪರ್ಯಗೊಳಿಸಲಾದ ಹಂತ”.
ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಹೇಳುತ್ತಾರೆ “ಧರ್ಮದ ಮೂಲಕ ಮನುಷ್ಯ ಮನುಷ್ಯ ಸಂಬಂಧವನ್ನು ಸಾಮಾಜಿಕ ಶ್ರೇಣೀಕರಣಗೊಳಿಸಿ(ವರ್ಣ), ಪವಿತ್ರೀಕರಣಗೊಳೀಸಿ ಅದು ಚಿರಾಯು(ಶಾಶ್ವತ)ವಾಗಿರುವಂತೆ ಮತ್ತು ಅತಿಕ್ರಮಿಸಲಾಗದಂತೆ ಮೀಸಲಿಟ್ಟುಕೊಂಡ ಪ್ರಪಂಚದ ಏಕೈಕ ಜನಾಂಗವೆಂದರೆ ಅದು ಹಿಂದೂಗಳಷ್ಟೆ” (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.5, ಪು.190).
ವಿವರಿಸುವುದಾದರೆ, ಅಂಬೇಡ್ಕರರ ಪ್ರಕಾರ ಮೊದಲ ಹಂತದಲ್ಲಿ ಅಂತಸ್ತು ಮತ್ತು ಉದ್ಯೋಗದ ಆಧಾರದ ಮೇಲೆ ವ್ಯಕ್ತಿಯ ವರ್ಣವನ್ನು 4 ವರ್ಷಗಳ ಸೀಮಿತ ಅವಧಿಗೆ ನಿಯುಕ್ತಿಗೊಳಿಸಲಾಗುತ್ತಿತ್ತು. ಹಾಗೆ ವ್ಯಕ್ತಿಯ ವರ್ಣವನ್ನು ನಿಯುಕ್ತಿಗೊಳಿಸುತ್ತಿದ್ದ ಅಧಿಕಾರಿಗಳು ಮನು ಮತ್ತು ಸಪ್ತಋಷಿಗಳು ಎಂಬ ಅಧಿಕಾರಿಗಳಾಗಿದ್ದರು.
ವ್ಯಕ್ತಿಗಳಿಗೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಈ ಮೂರು ವರ್ಣಗಳನ್ನು ಸಂಬಂಧಪಟ್ಟ ವ್ಯಕ್ತಿಗಳ ಮಾನಸಿಕ, ದೈಹಿಕ ಅರ್ಹತೆ ಮತ್ತು ಉದ್ಯೋಗದ ಆಧಾರದ ಮೇಲೆ, ಸಮುದಾಯದ ಹಿತದೃಷ್ಟಿಯಿಂದಷ್ಟೆ ನೀಡಲಾಗುತ್ತಿತ್ತು. ಈ ಮೂರೂ ವರ್ಣಗಳನ್ನು ನೀಡದವರನ್ನು ಅಥವಾ ಉಳಿದವರನ್ನು ಶೂದ್ರರು ಎನ್ನಲಾಗುತ್ತಿತ್ತು.
ಹೀಗೆ ನಿಯುಕ್ತಿಗೊಳಿಸಲಾದ ವರ್ಣವು ಕೇವಲ 4 ವರ್ಷಗಳ ಸೀಮಿತ ಅವಧಿಗೆ ಎಂಬುದಿಲ್ಲಿ ಗಮನಾರ್ಹ ಮತ್ತು ಆ ಪ್ರಕ್ರಿಯೆಯಲ್ಲಿ ವ್ಯಕ್ತಿಯ ನಾಲ್ಕು ವರ್ಷಗಳ ಆ ಅವಧಿಯನ್ನು ‘ಯುಗ’ ಎನ್ನಲಾಗುತ್ತಿತ್ತು. ನಾಲ್ಕು ವರ್ಷಗಳ ನಂತರ ವ್ಯಕ್ತಿಗಳ ವರ್ಣಗಳು ಬದಲಾಗುತ್ತಿದ್ದವು ಮತ್ತು ಬದಲಾವಣೆಯ ಈ ಸಮಯವನ್ನು ‘ಮನ್ವಂತರ’ ಎನ್ನಲಾಗುತ್ತಿತ್ತು. ಒಂದಂತು ನಿಜ, ‘ವರ್ಣ’ ಅದು ಮೊದಲ ಹಂತದಲ್ಲಿ ಕೇವಲ 4 ವರ್ಷಗಳ ಅವಧಿಗಷ್ಟೆ ಸೀಮಿತಗೊಂಡಿತ್ತು.
ಎರಡನೆಯ ಹಂತದಲ್ಲಿ ವ್ಯಕ್ತಿಯ ವರ್ಣವನ್ನು ನಿಯುಕ್ತಿಗೊಳಿಸುವ ಪ್ರಕ್ರಿಯೆ ಮನು ಮತ್ತು ಸಪ್ತಋಷಿಗಳಿಂದ ಗುರು ಅಥವಾ ಆಚಾರ್ಯರಿಗೆ ಬಂತು. ಈ ಹಂತದಲ್ಲಿ ಗುರುಕುಲಗಳು ಹುಟ್ಟಿಕೊಂಡವು. ವ್ಯಕ್ತಿಗಳು ಗುರುಕುಲದಲ್ಲಿ 12 ವರ್ಷಗಳು ಅಭ್ಯಾಸ ನಡೆಸಬೇಕಾಗುತ್ತಿತ್ತು. 12 ವರ್ಷಗಳ ಅಭ್ಯಾಸದ ನಂತರ ಅಂತಹ ವ್ಯಕ್ತಿಗಳಿಗೆ ಗುರು ಅಥವಾ ಆಚಾರ್ಯ ವರ್ಣದ ದೀಕ್ಷೆ ನೀಡುತ್ತಿದ್ದರು.
ಗುರುಕುಲದಲ್ಲಿ ವರ್ಣ ನಿರ್ಧರಿಸುವ ಈ ಪದ್ಧತಿಯನ್ನು, ಕ್ರಮವನ್ನು ‘ಉಪನಯನ’ ಎನ್ನಲಾಗುತ್ತಿತ್ತು. ಎರಡನೆಯ ಈ ಹಂತದಲ್ಲಿ ಕಂಡುಬಂದ ಒಂದು ವ್ಯತ್ಯಾಸವೆಂದರೆ ವರ್ಣವನ್ನು 4 ವರ್ಷಗಳ ನಿರ್ದಿಷ್ಟ ಅವಧಿಯ ಬದಲಿಗೆ ವ್ಯಕ್ತಿಯ ಜೀವಿತ ಅವಧಿಯವರೆಗೆ ವಿಸ್ತರಿಸಲಾದದ್ದು. ಹಾಗಿದ್ದರೂ ಅದನ್ನು ವಂಶಪಾರಂಪರ್ಯಗೊಳಿಸಲಿಲ್ಲ ಎಂಬುದಿಲ್ಲಿ ಗಮನಾರ್ಹ.
ಆದರೆ… ಮೂರನೆಯ ಹಂತದಲ್ಲಿ ವರ್ಣವನ್ನು ನಿರ್ಧರಿಸುವ ಗುರುಕುಲದ ಈ ಪದ್ಧತಿಯನ್ನೇ ರದ್ದುಗೊಳಿಸಲಾಯಿತು! ಹಾಗೆಯೇ ವರ್ಣವನ್ನು ನಿರ್ಧರಿಸುವ (ಉಪನಯನ ನೀಡುವ) ಗುರುಕುಲದ ಹಕ್ಕನ್ನು ಕೂಡ ಕಿತ್ತುಕೊಳ್ಳಲಾಯಿತು. ಹೀಗೆ ವರ್ಣವನ್ನು ನಿರ್ಧರಿಸುವ ಹಕ್ಕನ್ನು ಗುರುವಿನಿಂದ ಕಿತ್ತು ವ್ಯಕ್ತಿಯ ತಂದೆಗೆ ನೀಡಿದ್ದು ಮನುಸ್ಮøತಿ (ಸುಮತೀ ಭಾರ್ಗವ ವಿರಚಿತ) ಎಂಬುದಿಲ್ಲಿ ಉಲ್ಲೇಖಾರ್ಹ.
ಈ ಪ್ರಕಾರ ಮನುಸ್ಮøತಿಯ ಕಾನೂನು ವರ್ಣ ನಿರ್ಧರಿಸುವ ಉಪನಯನದಲ್ಲಿ ಪರಿಪೂರ್ಣ ಬದಲಾವಣೆ ತಂದು ಶಿಕ್ಷಣದ ನಂತರ ಉಪನಯನ ಎಂಬುದನ್ನು ರದ್ದುಗೊಳಿಸಿ ಶಿಕ್ಷಣಕ್ಕೂ ಮೊದಲೆ ಉಪನಯನ ಎಂಬ ನೀತಿ ಜಾರಿಗೊಳಿಸಿತು. ಹಾಗೆಯೇ ವರ್ಣ ನಿರ್ಧರಿಸುವ ಹಕ್ಕನ್ನು ಗುರುವಿನಿಂದ ಕಿತ್ತು ವ್ಯಕ್ತಿಯ ತಂದೆಗೆ ನೀಡಿದ್ದರಿಂದ ಸ್ವಾಭಾವಿಕವಾಗಿ ಆತ (ತಂದೆ) ಉಪನಯನದ ಸಂದರ್ಭದಲ್ಲಿ ತನ್ನ ಮಗನಿಗೆ ಆತನ ಶಕ್ತಿಸಾಮಥ್ರ್ಯ ನೋಡುವುದನ್ನು ಬಿಟ್ಟು ತಾನು ಈಗ ಯಾವ ವರ್ಣದಲ್ಲಿರುವನೋ ಅದೇ ವರ್ಣವನ್ನು ತನ್ನ ಮಗನಿಗೂ ನೀಡಲಾರಂಭಿಸಿದ. ಪರಿಣಾಮ ವರ್ಣ ವಂಶಪಾರಂಪರ್ಯವಾಯಿತು, ಅದು ಜಾತಿಯಾಗಿ ಪರಿವರ್ತನೆ ಹೊಂದಿತು ಅರ್ಥಾತ್ ಜಾತಿ ಸೃಷ್ಟಿಯಾಯಿತು.
–ರಘೋತ್ತಮ ಹೊ.ಬ
ಮೈಸೂರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?

- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು