ಲೈಫ್ ಸ್ಟೈಲ್
ಕಾರಹುಣ್ಣೀಮೇಯ ಕರಿ ಹರಿಯಲು ಸಜ್ಜಾದ ಕರುನಾಡು
ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಕಾರಹುಣ್ಣಿಮೆ ಒಂದಾಗಿದೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಕೆಲ ಕಡೆ ಒಂದಷ್ಟು ಅವಘಡಗಳು ಸಂಭವಿಸಿದರೂ ಒಟ್ಟಾರೆ ಕಾರಹುಣ್ಣಿಮೆ ಹಬ್ಬ ರೈತಾಪಿ ವರ್ಗದ ಕಳೆಯೇರಿಸಿದ್ದಂತೂ ಹೌದು. ಉತ್ತರ ಕರ್ನಾಟಕದದಲ್ಲಿ ವಿಭಿನ್ನ, ಹಾಗೂ ರೈತರು ನಂಬಿಕೆಯಿಂದ ಕಾರ ಹುಣ್ಣಿಮೆ ಆಚರಿಸುವ ಪದ್ಧತಿ ತಲೆತಲಾಂತರದಿಂದ ಬಂದಿದೆ.
ಹಬ್ಬದ ಅಂಗವಾಗಿ ನಗರ ಹಾಗೂ ಹಳ್ಳಿಗಳಲ್ಲಿ ವಿವಿಧೆಡೆ ಎತ್ತುಗಳ ಕರಿ ಹರಿಯುವ ಮೂಲಕ ಕಡು ಬೇಸಿಗೆ ಕಳೆದು ಮುಂಗಾರು ಸ್ವಾಗತಿಸಲು ಈ ಹಬ್ಬ ಸಾಕ್ಷಿಯಾಗುತ್ತದೆ. ರೈತರು ತಮ್ಮ ಎತ್ತು ಹಾಗೂ ಹೋರಿಗಳ ಮೈ ತೊಳೆದು, ರೈತರು ವಿವಿಧ ಬಗೆ ಶೃಂಗಾರದ ವಸ್ತುಗಳನ್ನು ಹಾಕುತ್ತಾರೆ. ಇನ್ನು ಎತ್ತು, ಹೋರಿಗಳ ಕೊಂಬುಗಳಿಗೆ ಬಣ್ಣ ಬಳೆಯುತ್ತಾರೆ. ಜೊತೆಗೆ ಮೈಮೇಲೆ ವಿಶೇಷವಾದ ಚಿತ್ತಾರ ಬಿಡಿಸಿ ಮೆರವಣಿಗೆ ಮಾಡುತ್ತಾರೆ.
ಸಂಜೆ ಹಮ್ಮಿಕೊಳ್ಳುವ ಕರಿ ಹರಿಯುವ ಸಂರ್ಭಮದಲ್ಲಿ ಭಾಗವಹಿಸಿ ರೋಮಾಂಚನಗೊಳಿಸುತ್ತಾರೆ. ವರ್ಷವಿಡೀ ದುಡಿಯುವ ಎತ್ತುಗಳಿಗೆ ಮನರಂಜನಾ ಕೂಟವಾಗಿ ಕಾರಹುಣ್ಣಿಮೆಯ ಕರಿ ಹರಿವುವ ಕಾರ ಹುಣ್ಣಿಮೆ ನಿಮಿತ್ತ ವಿಶೇಷವಾಗಿ ಶೃಂಗಾರಗೊಂಡಿರುವ ಎತ್ತು ಹೋರಿಗಳಿಗೆ ವಿವಿಧ ಬಗೆಯ ಭಕ್ಷ್ಯಗಳಾದ ಹೋಳಿಗೆ, ಕಡುಬು ಖಾದ್ಯಗಳನ್ನು ಮಾಡಿ ಉಣಬಡಿಸುವ ಮೂಲಕ ಅನ್ನದಾತರು ತಮ್ಮ ಎತ್ತುಗಳ ಮೇಲಿನ ಅಭಿಮಾನ ಮೆರೆಯುತ್ತಾರೆ.
ಎತ್ತು ಹೋರಿಗಳಿಗೆ ಉಣಿಸುವ ಸಂಪ್ರದಾಯ ಉತ್ತರ ಕರ್ನಾಟಕದಾದ್ಯಂತ ರೂಢಿಯಲ್ಲಿದೆ. ಗ್ರಾಮದ ರೈತರು ಹಾಗೂ ಯುವಕರು ಶೃಂಗರಿಸಿ ತಂದಿದ್ದ ತಮ್ಮ ಎತ್ತುಗಳನ್ನು ಸಾಲು ಸಾಲಾಗಿ ಓಡಿಸಿ ಸಂಭ್ರಮಪಡುತ್ತಾರೆ. ನಂತರ ರೈತರು ಮನೆಗೆ ಬಂದಾಗ ಅವುಗಳಿಗೆ ಆರತಿ ಎತ್ತಿ ಖುಷಿ ಪಟ್ಟರು. ಇದರ ಅಂಗವಾಗಿ ನಗರದ ಸುತ್ತ-ಮುತ್ತಲಿರುವ ವಿವಿಧ ಹಳ್ಳಿಯ ಜನರು ಎತ್ತುಗಳ ಕರಿ ಹರಿಯುವ ವಿಶಿಷ್ಠ ಆಚರಣೆಗೆ ನೂರಾರು ರೈತರು, ಗ್ರಾಮದ ಮಹಿಳೆಯರು ಹಾಗೂ ಯುವಕರು ಸಾಕ್ಷಿಯಾಗುತ್ತಾರೆ.
ಇದಕ್ಕೂ ಮೊದಲು ಮಹಿಳೆಯರು ಕಾರ ಹುಣ್ಣಿಮೆ ನಿಮಿತ್ತ ವಿಶೇಷ ಪೂಜೆ ನೆರವೇರಿಸಿ, ಈ ವರ್ಷನಾದ್ರೂ ಉತ್ತಮ ಮಳೆ-ಬೆಳೆ, ಸಿರಿ-ಧಾನ್ಯ ಸಂಪತ್ತು ಉತ್ತಮ ರೀತಿಯಲ್ಲಿ ನೀಡಿ ನಮ್ಮನ್ನು ಉದ್ದರಿಸು ಎಂದು ಭೂ ತಾಯಿ ಹಾಗೂ ಗೋಮಾತೆಯಲ್ಲಿ ಮೊರೆಯಿಡುತ್ತಾರೆ. ಅಲ್ಲದೆ ಸಮೀಪದ ಅರಳಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಂಗಾರನ್ನು ಬರಮಾಡಿಕೊಳ್ಳುತ್ತಾರೆ. ಕಾರಹುಣ್ಣಿಮೆ ದಿನದಂದು ಎತ್ತು, ಹೋರಿಗಳಿಗೆ ಕೃಷಿ ಚಟುವಟಿಕೆ ಯಿಂದ ವಿರಾಮ ನೀಡಲಾಗಿರುತ್ತೆ. ಹಬ್ಬದ ಅಂಗವಾಗಿ ಮನೆಯಲ್ಲಿ ತಯಾರಿಸಿದ ವಿಶೇಷ ಸಿಹಿ ಖಾದ್ಯಗಳನ್ನು ಸವಿದು ಸಂಭ್ರಮ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿ ಆಕರ್ಷಣೆಯಾಗಿರುತ್ತದೆ.
ಕಾರಹುಣ್ಣಿಮೆಯ ಉದ್ದೇಶ
ಕಾರಹುಣ್ಣಿಮೆ ದಿನದಂದು ಪ್ರಮುಖವಾಗಿ ಎತ್ತು, ಹೋರಿಗಳೇ ಆಕರ್ಷಣೆಯಾಗಿರುತ್ತವೆ.
ಕಾರ ಹಬ್ಬದ ವಿಶೇಷತೆಯಲ್ಲಿ ಕರಿ ಹರಿಯುವ ಕಾರ್ಯಕ್ರಮವೂ ಒಂದು. ಕಾರಹುಣ್ಣಿಮೆಯಂದು ಸಂಜೆಯಾಗುತ್ತಿದಂತೆ ಕರಿ ಹರಿಯುವ ಸಮಾರಂಭ ಹಮ್ಮಿಕೊಳ್ಳಲಾಗಿರುತ್ತೆ. ಊರ ಅಗಸಿಯಲ್ಲಿ ಬೇವಿನ ತಪ್ಪಲಿನ ತೋರಣದ ನಡುವೆ ಕೊಬ್ಬರಿ, ಶೇಂಗಾ, ಬೆಲ್ಲ, ಪುಟ್ಟಾಣಿ, ಚುರುಮುರಿ, ಉತ್ತತ್ತಿ ಹಾಗೂ ಕಲ್ಲುಸಕ್ಕರೆಯನ್ನು ಕಟ್ಟಲಾಗಿರುತ್ತೆ.
ಕರಿ ಹರಿಯಲು ಬಿಳಿ, ಹಾಗೂ ಕೆಂದು ಬಣ್ಣದ ಎತ್ತುಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ. ಹಲಗೆ ಸದ್ದು ಮಾಡುತ್ತಿದ್ದಂತೆ ಅಗಸಿ ಎದುರಿಗೆ ಕರಿ ಹರಿಯಲು ಎತ್ತುಗಳೊಂದಿಗೆ ರೈತರು ತಾ ಮುಂದು ನೀ ಮುಂದು ಎಂದು ಎತ್ತುಗಳನ್ನು ಓಡಿಸಿಕೊಂಡು ಬಂದು ಕರಿ ಹರಿಯುತ್ತಾರೆ. ಕರಿಯುವ ಓಟದಲ್ಲಿ ಇತರೆ ರೈತರು ಕೇಕೆ ಹಾಕಿ ಉತ್ಸಾಹ ತುಂಬುತ್ತಾರೆ. ಯಾವ ಬಣ್ಣದ ಎತ್ತು ಕರಿಹರಿಯುತ್ತೋ ಆ ಬಣ್ಣದ ಬೆಳೆ ಚೆನ್ನಾಗಿ ಬರುತ್ತೆ ಅನ್ನುವ ನಂಬಿಕೆ ರೈತರದ್ದಾಗಿದೆ.
ಈ ಬಾರಿಯ ಕಾರಹುಣ್ಣಿಮೆ ಹಬ್ಬದಂದು ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಕಾರಹುಣ್ಣಿಮೆ ಕರಿ ಹರಿಯುವ ಸಂಪ್ರದಾಯದ ನಡೆಸಲು ಎಲ್ಲ ಜನರು ಎತ್ತುಗಳ ಓಟದ ಕರಿ ಹಬ್ಬಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಸಾಕ್ಷಿಯಾಗಲು ಕಾತುರರಾಗಿದ್ದಾರೆ. ಈ ಬಾರಿ, ಓಟದಲ್ಲಿ ಯಾವ ಬಣ್ಣದ ಎತ್ತು ಮೊದಲ ಸ್ಥಾನದಲ್ಲಿ ಓಡಿ ಬಂದು ಕರಿ ಹರಿಯಲಿದೆ ಎನ್ನುವುದೆ ಒಂದು ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ಬಿಳಿ ಎತ್ತು ಮೊದಲು ಕರಿ ಹರಿದ್ರೆ ಬಿಳಿಜೋಳ, ಅಂದರೆ ಹಿಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ.
ಇನ್ನು ಕೆಂದು ಬಣ್ಣದ ಕರಿ ಹರಿದ್ರೆ ಮುಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ ಯನ್ನು ರೈತರು ಹೊಂದಿದ್ದಾರೆ. ಯಾವ ಬಣ್ಣದ ಎತ್ತು ಮೊದಲು ಬರುತ್ತದೆವೋ ಆ ಬೆಳೆ ಬಿತ್ತಲೂ ಕಾತೂರರಾಗಿದ್ದಾರೆ. ಇತ್ತ ಎತ್ತುಗಳು ಒಂದೆಡೆ ಕಂಡು ಬಂದ್ರೆ, ಸಾಲು ಸಾಲಾಗಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ರೈತ್ರು ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಮೊದಲು ಕರಿ ಹರಿದ ಎತ್ತಿಗೆ ರೈತರೆಲ್ಲರೂ ಸೇರಿ ಮೆರವಣಿಗೆ ಮಾಡುತ್ತಾರೆ.
ಕೆಲವು ಕಡೆಗಳಲ್ಲಿ ಕರಿ ಹರಿದ ಬಳಿಕ ಗುಂಡು ಎತ್ತುವ ಸ್ಪರ್ಧೆ ಏರ್ಪಡಿಸಲಾಗಿರುತ್ತೆ. ವರ್ಷವಿಡೀ ಕೃಷಿಯಲ್ಲಿ ತೊಡಗಿದ ರೈತರು ದೈಹಿಕ ಕಸರತ್ತು ನಡೆಸುವ ಮೂಲಕ ಕ್ರೀಡಾ ಮನೋಭಾವ ಮೆರೆಯುತ್ತಾರೆ. ಆನಂತರ ಶಕ್ತಿ ದೇವತೆಗಳ ದೇಗುಲಗಳಿಗೆ ತೆರಳಿ ರೈತರು ಮಳೆ ಕುರಿತಾಗಿ ದೇವರ ಹೇಳಿಕೆಯನ್ನು ಕೇಳುತ್ತಾರೆ. ಒಟ್ಟಿನಲ್ಲಿ ಕಾರಹುಣ್ಣಿಮೆ ಎಂದರೆ ರೈತರ- ಎತ್ತುಗಳ ಹಬ್ಬ ಅಂತಾನೆ ಫೇಮಸ್..
ಇನ್ನು ಕಪ್ಪು ಬಣ್ಣದ ಎತ್ತು ಅಪಶಕುನ ಎನ್ನುವ ಕಾರಣಕ್ಕೆ ಕರಿ ಹರಿಯಲು ಕಪ್ಪು ಬಣ್ಣದ ಎತ್ತನ್ನು ಓಟಕ್ಕೆ ಬಿಡುವುದಿಲ್ಲ.ಇನ್ನೊಂದು ನಂಬಿಕೆ ಎಂದರೆ ಕರಿ ಹರಿದ ಎತ್ತು ಕೈಗೆ ಸಿಗದೆ ಊರಿನ ಸೀಮೆ ದಾಟಿ ಹೋದರೆ ಕರಿ ಹರಿಯುದನ್ನು ನಿಷೇಧಿಸಿ ಕಾರಹುಣ್ಣಿಮೆ ಹಬ್ಬವನ್ನು ಕೈಬಿಡುತ್ತಾರೆ. ಒಟ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ-ಬೆಳೆ ಚೆನ್ನಾಗಿ ಬರಲಿ ಎನ್ನುವ ಬರವಸೆಯಲ್ಲಿ ಕಾಯುತ್ತಿದ್ದಾರೆ. ಈ ವರ್ಷನಾದ್ರು ಭೂತಾಯಿ ಹಾಗೂ ವರುಣದೇವರಿಬ್ಬರೂ ಸೇರಿ ರೇತನ ದುಖಃದ ಬದುಕು ಬವಣೆಯನ್ನು ನೀಗಿಸಲಿ ಎಂದು ಆಶಿಸುತ್ತೇವೆ.
- ಕಾರಹುಣ್ಣಿಮೆ ಹಬ್ಬ ಆಚರಿಸಲು ನಮಗೆ ತುಂಬಾ ಸಂತೋಷ ಇದೆ. ನಾನು ನಮ್ಮ ಎತ್ತುಗಳನ್ನು ಸಹ ಓಟಕ್ಕೆಂದು ಸಿಂಗಾರ ಮಾಡಿ ತಯಾರಿ ಮಾಡುತ್ತಿದ್ದೆವೆ. ಆದರೆ ವರ್ಷದಿಂದ ವರ್ಷಕ್ಕೆ ಮಳೆ ಬೆಳೆ ಕಡಿಮೆಯಾಗಿದೆ. ಈ ವರ್ಷನಾದ್ರು ದೇವರು ಉತ್ತಮ ಮಳೆ ಕೊಡುತ್ತಾನೆನೋ ಎನ್ನುವ ಬರವಸಲೆಯಲ್ಲಿ ಅನ್ನದಾತ ಕಾಯುತ್ತಿದ್ದಾನೆ. ಅನ್ನದಾತ ಪ್ರತಿವರ್ಷವು ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಇದು ಈ ವರ್ಷ ಕಡಿಯಾಗುತ್ತದೆ ಎಂದು ನಂಬಿದ್ದವೆ.
|ಸಂಗಪ್ಪ. ಚಂ. ಮೇತ್ರಿ (ವಿಜಯಪುರ ರೈತ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
ಸುದ್ದಿದಿನ,ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಆಸ್ತಿ ಮತ್ತು ಸರಳ ಜೀವನಶೈಲಿಯ ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮಾತ್ರವಲ್ಲ, ಸಾರ್ವಜನಿಕರಲ್ಲೂ ಚರ್ಚೆಗೆ ಕಾರಣವಾಗಿದೆ. ಶ್ರೀಮಂತ ರಾಜಕಾರಣಿ ಎಂಬ ಗುರುತಿನ ನಡುವೆಯೂ, ತಾವು ಇಂದಿಗೂ ಹೇರ್ಕಟ್ಗೆ ಕೇವಲ 50 ರೂ. ಖರ್ಚು ಮಾಡುತ್ತೇನೆ ಎಂದು ಅವರು ಹೇಳಿರುವುದು ಗಮನ ಸೆಳೆದಿದೆ.
ಹೈಲೈಟ್ಸ್ |
|
‘ಎರಡು-ಮೂರು ಪೀಳಿಗೆಗೆ ಸಾಕಾಗುವಷ್ಟು ಆಸ್ತಿ’
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ತಮ್ಮ ಪೂರ್ವಜರು ಮತ್ತು ತಾವು ಸಂಪಾದಿಸಿರುವ ಆಸ್ತಿ ಎರಡು-ಮೂರು ಪೀಳಿಗೆ ಕುಳಿತು ತಿನ್ನುವಷ್ಟು ಇದೆ ಎಂದು ಹೇಳಿದ್ದರು. ಮುಖ್ಯಮಂತ್ರಿ ಸ್ಥಾನವನ್ನು ಹಣ ಸಂಪಾದಿಸುವ ಉದ್ದೇಶಕ್ಕಾಗಿ ಬಳಸಿಕೊಳ್ಳುವುದಿಲ್ಲ. ಬದಲಾಗಿ ಕರ್ನಾಟಕದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದು ಮತ್ತು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುವುದು ತಮ್ಮ ಗುರಿ ಎಂದು ಅವರು ಹೇಳಿದ್ದರು.
ಡಿಕೆ ಶಿವಕುಮಾರ್ ಅವರು ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪೈಕಿ ಒಬ್ಬರು ಎಂಬ ವಿಚಾರವೂ ಈ ಹಿಂದೆ ವರದಿಯಾಗಿತ್ತು. ಆದರೆ ತಮ್ಮ ವೈಯಕ್ತಿಕ ಜೀವನಶೈಲಿಯಲ್ಲಿ ದುಂದು ವೆಚ್ಚಕ್ಕೆ ಆದ್ಯತೆ ನೀಡುವುದಿಲ್ಲ ಎಂಬ ಸಂದೇಶವನ್ನು ಅವರು ಇದೀಗ ನೀಡಿದ್ದಾರೆ.
http://Visit : www.suddidina.com
50 ರೂ. ಹೇರ್ಕಟ್: ಸರಳ ಬದುಕಿನ ಉದಾಹರಣೆ
ಆ.26ರಂದು ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಡಿಕೆ ಶಿವಕುಮಾರ್ ತಮ್ಮ ಹೇರ್ಕಟ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. “ನಾನು ನನ್ನ ಹೇರ್ಕಟ್ಗಾಗಿ 50 ರೂ. ಖರ್ಚು ಮಾಡುತ್ತೇನೆ. ಸರಳ ಜೀವನ ನನಗೆ ಇಷ್ಟ. ದುಂದು ವೆಚ್ಚ ನನಗೆ ಇಷ್ಟವಿಲ್ಲ” ಎಂಬರ್ಥದಲ್ಲಿ ಅವರು ಮಾತನಾಡಿದ್ದಾರೆ.
ದಿಲ್ಲಿಯಲ್ಲಿಯೂ ತಾವು 50 ರೂ. ನೀಡಿ ಹೇರ್ಕಟ್ ಮಾಡಿಸಿಕೊಳ್ಳುವುದಾಗಿ ಹೇಳಿರುವ ಅವರು, ಜೀವನ ನಡೆಸಲು ಎಷ್ಟು ಅಗತ್ಯವೋ ಅಷ್ಟನ್ನೇ ಖರ್ಚು ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅವರ ಆಸ್ತಿ ಪ್ರಮಾಣಕ್ಕಿಂತ ಅವರ ವೈಯಕ್ತಿಕ ಖರ್ಚಿನ ಈ ಉದಾಹರಣೆಯೇ ಇದೀಗ ಹೆಚ್ಚು ಗಮನ ಸೆಳೆಯುತ್ತಿದೆ.
‘ಕಾಂಗ್ರೆಸ್ನ ಅಮಿತ್ ಶಾ’ ಹೋಲಿಕೆಗೆ ಡಿಕೆಶಿ ವಿರೋಧ
ಇದೇ ಸಂದರ್ಶನದಲ್ಲಿ ತಮ್ಮನ್ನು ‘ಕಾಂಗ್ರೆಸ್ನ ಅಮಿತ್ ಶಾ’ ಎಂದು ಕರೆಯುವುದಕ್ಕೂ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ತಾವು ಕಾಂಗ್ರೆಸ್ನ ಸಾಮಾನ್ಯ ಕಾರ್ಯಕರ್ತನಾಗಿದ್ದು, ಪಕ್ಷ ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದೇ ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ.
ಯುವಜನರ ಶಕ್ತಿ, ಆಲೋಚನೆ ಮತ್ತು ಮಹತ್ವಾಕಾಂಕ್ಷೆಗಳ ಮೇಲೆ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಯುವಕರಿಗೆ ಕಲಿಯಲು, ಹೊಸದನ್ನು ಸೃಷ್ಟಿಸಲು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುವುದು ತಮ್ಮ ದೃಷ್ಟಿಕೋನ ಎಂದು ಅವರು ಹೇಳಿದ್ದಾರೆ.
2028ರ ಚುನಾವಣೆಯಲ್ಲೂ ವಿಶ್ವಾಸ
2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಗೆ ಹೋಲಿಸಿದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನೂ ಅವರು ತಿಳಿಸಿದ್ದಾರೆ.
ಅಲ್ಲದೆ, 2029ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಡಿಕೆಶಿ ಅವರ ಇತ್ತೀಚಿನ ಸಂದರ್ಶನವು ಸರಳ ಜೀವನಶೈಲಿಯಿಂದ ಹಿಡಿದು ಕಾಂಗ್ರೆಸ್ನ ಭವಿಷ್ಯದ ರಾಜಕೀಯ ಗುರಿಗಳವರೆಗೆ ಹಲವು ವಿಚಾರಗಳನ್ನು ಮುನ್ನೆಲೆಗೆ ತಂದಿದೆ.

ಲೈಫ್ ಸ್ಟೈಲ್
ಅನ್ನ ಜಿಗುಟಾಯಿತಾ? ಬ್ರೆಡ್ನ ಈ ಸರಳ ಟ್ರಿಕ್ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!
ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಅಡುಗೆಮನೆಯಲ್ಲಿರುವ ಒಣ ಬ್ರೆಡ್ ತುಂಡೇ ಹೆಚ್ಚುವರಿ ತೇವಾಂಶವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಈ ಸರಳ ತಂತ್ರವನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಯೋಣ.
ಅಕ್ಕಿಯನ್ನು ಅಗತ್ಯಕ್ಕಿಂತ ಹೆಚ್ಚು ಬೇಯಿಸಿದಾಗ ಕಾಳುಗಳು ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೀರಿಕೊಳ್ಳುತ್ತವೆ. ಪರಿಣಾಮವಾಗಿ ಅವುಗಳ ಸಹಜ ರಚನೆ ಕಳೆದು, ಮೆತ್ತಗೆ ಹಾಗೂ ಒಂದಕ್ಕೊಂದು ಅಂಟಿಕೊಳ್ಳುವಂತಾಗುತ್ತವೆ. ಹೆಚ್ಚು ನೀರು ಸೇರಿಸುವುದು, ಅಗತ್ಯಕ್ಕಿಂತ ಹೆಚ್ಚು ಸಮಯ ಬೇಯಿಸುವುದು ಮತ್ತು ಅಕ್ಕಿಯ ಪ್ರಕಾರಕ್ಕೆ ಸರಿಯಾದ ನೀರಿನ ಪ್ರಮಾಣ ಬಳಸದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ.
ಅಕ್ಕಿ ಸಂಪೂರ್ಣವಾಗಿ ಗಂಜಿಯಂತಹ ಹದಕ್ಕೆ ಬರುವ ಮೊದಲು ಸಮಸ್ಯೆಯನ್ನು ಗುರುತಿಸಿದರೆ, ಹೆಚ್ಚುವರಿ ತೇವಾಂಶವನ್ನು ಕಡಿಮೆ ಮಾಡುವ ಮೂಲಕ ಅನ್ನದ ಹದವನ್ನು ಸ್ವಲ್ಪಮಟ್ಟಿಗೆ ಸುಧಾರಿಸಬಹುದು.
http://Visit : www.suddidina.com
ಬ್ರೆಡ್ ತುಂಡು ಹೇಗೆ ಸಹಾಯ ಮಾಡುತ್ತದೆ?
ಅನ್ನದಲ್ಲಿ ನೀರು ಹೆಚ್ಚಾಗಿ ಉಳಿದಿದ್ದರೆ ಮೊದಲು ಸಾಧ್ಯವಾದಷ್ಟು ಹೆಚ್ಚುವರಿ ನೀರನ್ನು ಎಚ್ಚರಿಕೆಯಿಂದ ಬಸಿದು ತೆಗೆಯಬೇಕು. ಬಳಿಕ ಅನ್ನದ ಮೇಲೆ ದಪ್ಪವಾದ, ಸ್ವಲ್ಪ ಒಣಗಿದ ಬ್ರೆಡ್ ತುಂಡನ್ನು ಇರಿಸಿ ಪಾತ್ರೆಯನ್ನು ಮುಚ್ಚಬೇಕು.
ಉರಿಯನ್ನು ತೀರಾ ಕಡಿಮೆ ಮಟ್ಟದಲ್ಲಿಟ್ಟು ಕೆಲವು ನಿಮಿಷಗಳ ಕಾಲ ಹಾಗೆಯೇ ಬಿಡಿ. ಬ್ರೆಡ್ನ ಒಣ ರಚನೆಯು ಸ್ಪಂಜಿನಂತೆ ವರ್ತಿಸಿ ಅನ್ನದಲ್ಲಿರುವ ಹೆಚ್ಚುವರಿ ತೇವಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.
ಹೆಚ್ಚು ನೀರಾದ ಅನ್ನಕ್ಕೆ ಎರಡು–ಮೂರು ಬ್ರೆಡ್ ತುಂಡು
ಅನ್ನದಲ್ಲಿ ನೀರಿನ ಪ್ರಮಾಣ ಹೆಚ್ಚು ಇದ್ದರೆ ಒಂದು ಬ್ರೆಡ್ ತುಂಡು ಸಾಕಾಗದಿರಬಹುದು. ಅಂತಹ ಸಂದರ್ಭದಲ್ಲಿ ಎರಡು ಅಥವಾ ಮೂರು ಒಣ ಬ್ರೆಡ್ ತುಂಡುಗಳನ್ನು ಅನ್ನದ ಮೇಲೆ ಬೇರೆ ಬೇರೆ ಕಡೆಗಳಲ್ಲಿ ಇರಿಸಬಹುದು. ಕೆಲವು ನಿಮಿಷಗಳ ನಂತರ ಬ್ರೆಡ್ ತುಂಡುಗಳನ್ನು ತೆಗೆದುಹಾಕಬೇಕು.
ಆದರೆ ಬ್ರೆಡ್ ಅನ್ನು ಹೆಚ್ಚು ಹೊತ್ತು ಪಾತ್ರೆಯಲ್ಲೇ ಬಿಡಬಾರದು. ಅದು ಹೆಚ್ಚಿನ ತೇವಾಂಶ ಹೀರಿಕೊಂಡು ಮೆತ್ತಗಾಗಬಹುದು.
ಈ ವಿಧಾನ ಯಾವಾಗ ಪರಿಣಾಮಕಾರಿ?
ಅನ್ನ ಸ್ವಲ್ಪ ಹೆಚ್ಚು ತೇವವಾಗಿದ್ದಾಗ ಅಥವಾ ಕಾಳುಗಳು ತಮ್ಮ ಆಕಾರವನ್ನು ಇನ್ನೂ ಉಳಿಸಿಕೊಂಡಿರುವಾಗ ಈ ತಂತ್ರ ಹೆಚ್ಚು ಉಪಯುಕ್ತ. ಆದರೆ ಅಕ್ಕಿ ಸಂಪೂರ್ಣವಾಗಿ ಬೆಂದು ಒಡೆದು ಗಂಜಿಯಂತಹ ಹದಕ್ಕೆ ಬಂದಿದ್ದರೆ, ಬ್ರೆಡ್ ಅದನ್ನು ಮತ್ತೆ ಉದುರುದುರಾದ ಅನ್ನವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಬ್ರೆಡ್ ಹೆಚ್ಚುವರಿ ತೇವಾಂಶವನ್ನು ಮಾತ್ರ ಹೀರಿಕೊಳ್ಳುತ್ತದೆ.
ರೈಸ್ ಕುಕ್ಕರ್ನಲ್ಲೂ ಬಳಸಬಹುದು
ರೈಸ್ ಕುಕ್ಕರ್ನಲ್ಲಿ ಅನ್ನ ಬೇಯಿಸುವಾಗ ಆಕಸ್ಮಿಕವಾಗಿ ನೀರು ಹೆಚ್ಚಾದರೂ ಇದೇ ವಿಧಾನ ಪ್ರಯತ್ನಿಸಬಹುದು. ಮೊದಲು ಅನ್ನ ಸಂಪೂರ್ಣವಾಗಿ ಬೆಂದಿದೆಯೇ ಎಂದು ಪರಿಶೀಲಿಸಿ.
ಕಾಳುಗಳು ಚೆನ್ನಾಗಿದ್ದು ಹೆಚ್ಚುವರಿ ತೇವಾಂಶ ಮಾತ್ರ ಉಳಿದಿದ್ದರೆ, ಒಣ ಬ್ರೆಡ್ ತುಂಡನ್ನು ಮೇಲೆ ಇರಿಸಿ 5 ನಿಮಿಷ ಮುಚ್ಚಿಡಬಹುದು.
ಮುಂದೆ ಅನ್ನ ಜಿಗುಟಾಗದಂತೆ ಏನು ಮಾಡಬೇಕು?
ಪ್ರತಿಯೊಂದು ಬಗೆಯ ಅಕ್ಕಿಗೂ ಬೇಕಾಗುವ ನೀರಿನ ಪ್ರಮಾಣ ಒಂದೇ ಆಗಿರುವುದಿಲ್ಲ. ಆದ್ದರಿಂದ ಅಕ್ಕಿಯ ಪ್ಯಾಕೆಟ್ನ ಸೂಚನೆ ಅಥವಾ ನೀವು ಅನುಸರಿಸುವ ಪಾಕವಿಧಾನದ ಪ್ರಕಾರ ನೀರನ್ನು ಅಳೆಯುವುದು ಉತ್ತಮ.
ಅನ್ನ ಬೇಯುವಾಗ ಪದೇಪದೇ ಮುಚ್ಚಳ ತೆರೆಯುವುದನ್ನು ತಪ್ಪಿಸಿ. ಸರಿಯಾದ ಸಮಯದಲ್ಲಿ ಉರಿಯನ್ನು ಆರಿಸಿ, ಅನ್ನವನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಒಲೆಯ ಮೇಲಿಡದಿರುವುದು ಕೂಡ ಮುಖ್ಯ.

ಲೈಫ್ ಸ್ಟೈಲ್
ರಕ್ಷಾಬಂಧನದ ಸಿಹಿಗೆ ಮಾರುಕಟ್ಟೆ ಖೋವಾ ಬೇಡ; ಮನೆಯಲ್ಲೇ ಶುದ್ಧ ಮಾವಾ ತಯಾರಿಸಿ!
ಸುದ್ದಿದಿನ: ರಕ್ಷಾಬಂಧನ ಸೇರಿದಂತೆ ಹಬ್ಬಗಳ ಸಮಯದಲ್ಲಿ ಸಿಹಿತಿಂಡಿಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಗುಲಾಬ್ ಜಾಮೂನ್, ಪೇಡಾ, ಬರ್ಫಿ, ಗುಜಿಯಾ ಸೇರಿದಂತೆ ಹಲವು ಸಿಹಿತಿಂಡಿಗಳ ತಯಾರಿಕೆಯಲ್ಲಿ ಖೋವಾ ಪ್ರಮುಖ ಪದಾರ್ಥವಾಗಿದೆ. ಇದೇ ಕಾರಣಕ್ಕೆ ಹಬ್ಬದ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಖೋವಾಕ್ಕೆ ಬೇಡಿಕೆಯೂ ಹೆಚ್ಚುತ್ತದೆ.
ಆದರೆ ಮಾರುಕಟ್ಟೆಯಲ್ಲಿ ಸಿಗುವ ಖೋವಾದ ಗುಣಮಟ್ಟದ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯ. ಕಲಬೆರಕೆಯ ಖೋವಾದಲ್ಲಿ ಪಿಷ್ಟ, ಕೃತಕ ಕೊಬ್ಬು ಅಥವಾ ಇತರ ಅನಗತ್ಯ ಪದಾರ್ಥಗಳನ್ನು ಬಳಸುವ ಸಾಧ್ಯತೆ ಇರುವುದರಿಂದ, ಸಾಧ್ಯವಾದರೆ ಮನೆಯಲ್ಲೇ ಖೋವಾ ತಯಾರಿಸುವುದು ಉತ್ತಮ ಆಯ್ಕೆಯಾಗಬಹುದು.
http://Visit : www.suddidina.com
ನಿರಂತರವಾಗಿ ಕೈಯಾಡಿಸುವುದೇ ಮುಖ್ಯ
ಹಾಲು ಕುದಿಯುತ್ತಿರುವಾಗ ದಪ್ಪ ಸೌಟಿನಿಂದ ನಿರಂತರವಾಗಿ ಕಲಕುತ್ತಿರಬೇಕು. ವಿಶೇಷವಾಗಿ ಹಾಲು ಗಟ್ಟಿಯಾಗಲು ಆರಂಭಿಸಿದಾಗ ಪಾತ್ರೆಯ ತಳಕ್ಕೆ ಅಂಟದಂತೆ ಎಚ್ಚರಿಕೆ ವಹಿಸಬೇಕು. ಪಾತ್ರೆಯ ಅಂಚಿನಲ್ಲಿ ಶೇಖರವಾಗುವ ಕೆನೆಯನ್ನು ಕೆರೆದು ಮತ್ತೆ ಹಾಲಿನಲ್ಲೇ ಸೇರಿಸುತ್ತಿರಿ.
ಸುಮಾರು 20–25 ನಿಮಿಷಗಳ ಬಳಿಕ ಹಾಲು ಅರ್ಧದಷ್ಟು ಕಡಿಮೆಯಾಗಿ ರಾಬ್ರಿಯಂತೆ ದಪ್ಪವಾಗುತ್ತದೆ. ನಂತರ ಉರಿಯನ್ನು ಮಧ್ಯಮ ಅಥವಾ ಕಡಿಮೆ ಮಟ್ಟಕ್ಕೆ ಇಟ್ಟು ಮತ್ತಷ್ಟು ಕೈಯಾಡಿಸುತ್ತಿರಬೇಕು. ಇನ್ನೂ 10–15 ನಿಮಿಷಗಳಲ್ಲಿ ತೇವಾಂಶ ಕಡಿಮೆಯಾಗಿ ಮಿಶ್ರಣ ಗಟ್ಟಿಯಾಗಲು ಆರಂಭಿಸುತ್ತದೆ.
ಖೋವಾ ಸಿದ್ಧವಾಗುವುದು ಹೇಗೆ ಗೊತ್ತಾಗುತ್ತದೆ?
ಮಿಶ್ರಣವು ಹಿಟ್ಟಿನಂತೆ ಗಟ್ಟಿಯಾಗಿ, ಬಾಣಲೆಯ ತಳವನ್ನು ಬಿಡಲು ಆರಂಭಿಸಿದಾಗ ಖೋವಾ ಸಿದ್ಧವಾಗಿದೆ ಎಂದು ತಿಳಿಯಬಹುದು. ಉರಿ ಆರಿಸಿದ ನಂತರವೂ ಬಾಣಲೆ ಬಿಸಿಯಾಗಿರುವುದರಿಂದ ಒಂದು–ಎರಡು ನಿಮಿಷ ಸೌಟಿನಿಂದ ನಿಧಾನವಾಗಿ ಕೈಯಾಡಿಸಿ ಬಳಿಕ ತಟ್ಟೆ ಅಥವಾ ಬಟ್ಟಲಿಗೆ ವರ್ಗಾಯಿಸಿ.
ತಣ್ಣಗಾದಂತೆ ಖೋವಾ ಇನ್ನಷ್ಟು ಗಟ್ಟಿಯಾಗಿ ಉತ್ತಮ ಹರಳಿನ ಹದ ಪಡೆಯುತ್ತದೆ. ಇದನ್ನು ಪೇಡಾ, ಬರ್ಫಿ, ಗುಲಾಬ್ ಜಾಮೂನ್, ಗುಜಿಯಾ ಸೇರಿದಂತೆ ವಿವಿಧ ಸಿಹಿತಿಂಡಿಗಳಿಗೆ ಬಳಸಬಹುದು.
ಶೇಖರಣೆ ಮತ್ತು ಮುನ್ನೆಚ್ಚರಿಕೆ
ಖೋವಾ ತಯಾರಿಸುವಾಗ ದಪ್ಪ ತಳದ ಪಾತ್ರೆ ಬಳಸುವುದು ಅತ್ಯಗತ್ಯ. ಹಾಲು ಗಟ್ಟಿಯಾಗುವ ಹಂತದಲ್ಲಿ ನಿರಂತರವಾಗಿ ಕಲಕಬೇಕು. ಹೆಚ್ಚಿನ ಉರಿಯಲ್ಲಿ ಹೆಚ್ಚು ಹೊತ್ತು ಇಟ್ಟರೆ ಖೋವಾ ಸುಟ್ಟು ಬಣ್ಣ ಮತ್ತು ರುಚಿ ಬದಲಾಗಬಹುದು.
ಖೋವಾದಲ್ಲಿ ತೇವಾಂಶ ಮತ್ತು ಪೋಷಕಾಂಶ ಹೆಚ್ಚಿರುವುದರಿಂದ ಸಾಮಾನ್ಯ ತಾಪಮಾನದಲ್ಲಿ ಹೆಚ್ಚು ಕಾಲ ಇಡುವುದು ಸೂಕ್ತವಲ್ಲ. ತಯಾರಿಸಿದ ಖೋವಾವನ್ನು ಸ್ವಚ್ಛ, ಗಾಳಿಯೇರದ ಪಾತ್ರೆಯಲ್ಲಿ ಶೀತಲೀಕರಿಸಿ ಇಡುವುದು ಉತ್ತಮ. ದೀರ್ಘಕಾಲ ಸಂಗ್ರಹಿಸಬೇಕಾದರೆ ಫ್ರೀಜರ್ ಬಳಸಬಹುದು. ಬಳಸುವ ಮೊದಲು ಅದರ ವಾಸನೆ, ಬಣ್ಣ ಮತ್ತು ಹದದಲ್ಲಿ ಯಾವುದೇ ಬದಲಾವಣೆ ಆಗಿದೆಯೇ ಎಂಬುದನ್ನು ಪರಿಶೀಲಿಸುವುದು ಅಗತ್ಯ.

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ2 days agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ




