Connect with us

ಲೈಫ್ ಸ್ಟೈಲ್

ಕಾರಹುಣ್ಣೀಮೇಯ ಕರಿ ಹರಿಯಲು ಸಜ್ಜಾದ ಕರುನಾಡು

Published

on

ತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಕಾರಹುಣ್ಣಿಮೆ ಒಂದಾಗಿದೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಕೆಲ ಕಡೆ ಒಂದಷ್ಟು ಅವಘಡಗಳು ಸಂಭವಿಸಿದರೂ ಒಟ್ಟಾರೆ ಕಾರಹುಣ್ಣಿಮೆ ಹಬ್ಬ ರೈತಾಪಿ ವರ್ಗದ ಕಳೆಯೇರಿಸಿದ್ದಂತೂ ಹೌದು. ಉತ್ತರ ಕರ್ನಾಟಕದದಲ್ಲಿ ವಿಭಿನ್ನ, ಹಾಗೂ ರೈತರು ನಂಬಿಕೆಯಿಂದ ಕಾರ ಹುಣ್ಣಿಮೆ ಆಚರಿಸುವ ಪದ್ಧತಿ ತಲೆತಲಾಂತರದಿಂದ ಬಂದಿದೆ.

ಹಬ್ಬದ ಅಂಗವಾಗಿ ನಗರ ಹಾಗೂ ಹಳ್ಳಿಗಳಲ್ಲಿ ವಿವಿಧೆಡೆ ಎತ್ತುಗಳ ಕರಿ ಹರಿಯುವ ಮೂಲಕ ಕಡು ಬೇಸಿಗೆ ಕಳೆದು ಮುಂಗಾರು ಸ್ವಾಗತಿಸಲು ಈ ಹಬ್ಬ ಸಾಕ್ಷಿಯಾಗುತ್ತದೆ. ರೈತರು ತಮ್ಮ ಎತ್ತು ಹಾಗೂ ಹೋರಿಗಳ ಮೈ ತೊಳೆದು, ರೈತರು ವಿವಿಧ ಬಗೆ ಶೃಂಗಾರದ ವಸ್ತುಗಳನ್ನು ಹಾಕುತ್ತಾರೆ. ಇನ್ನು ಎತ್ತು, ಹೋರಿಗಳ ಕೊಂಬುಗಳಿಗೆ ಬಣ್ಣ ಬಳೆಯುತ್ತಾರೆ. ಜೊತೆಗೆ ಮೈಮೇಲೆ ವಿಶೇಷವಾದ ಚಿತ್ತಾರ ಬಿಡಿಸಿ ಮೆರವಣಿಗೆ ಮಾಡುತ್ತಾರೆ.

ಸಂಜೆ ಹಮ್ಮಿಕೊಳ್ಳುವ ಕರಿ ಹರಿಯುವ ಸಂರ್ಭಮದಲ್ಲಿ ಭಾಗವಹಿಸಿ ರೋಮಾಂಚನಗೊಳಿಸುತ್ತಾರೆ. ವರ್ಷವಿಡೀ ದುಡಿಯುವ ಎತ್ತುಗಳಿಗೆ ಮನರಂಜನಾ ಕೂಟವಾಗಿ ಕಾರಹುಣ್ಣಿಮೆಯ ಕರಿ ಹರಿವುವ ಕಾರ ಹುಣ್ಣಿಮೆ ನಿಮಿತ್ತ ವಿಶೇಷವಾಗಿ ಶೃಂಗಾರಗೊಂಡಿರುವ ಎತ್ತು ಹೋರಿಗಳಿಗೆ ವಿವಿಧ ಬಗೆಯ ಭಕ್ಷ್ಯಗಳಾದ ಹೋಳಿಗೆ, ಕಡುಬು ಖಾದ್ಯಗಳನ್ನು ಮಾಡಿ ಉಣಬಡಿಸುವ ಮೂಲಕ ಅನ್ನದಾತರು ತಮ್ಮ ಎತ್ತುಗಳ ಮೇಲಿನ ಅಭಿಮಾನ ಮೆರೆಯುತ್ತಾರೆ.

ಎತ್ತು ಹೋರಿಗಳಿಗೆ ಉಣಿಸುವ ಸಂಪ್ರದಾಯ ಉತ್ತರ ಕರ್ನಾಟಕದಾದ್ಯಂತ ರೂಢಿಯಲ್ಲಿದೆ. ಗ್ರಾಮದ ರೈತರು ಹಾಗೂ ಯುವಕರು ಶೃಂಗರಿಸಿ ತಂದಿದ್ದ ತಮ್ಮ ಎತ್ತುಗಳನ್ನು ಸಾಲು ಸಾಲಾಗಿ ಓಡಿಸಿ ಸಂಭ್ರಮಪಡುತ್ತಾರೆ. ನಂತರ ರೈತರು ಮನೆಗೆ ಬಂದಾಗ ಅವುಗಳಿಗೆ ಆರತಿ ಎತ್ತಿ ಖುಷಿ ಪಟ್ಟರು. ಇದರ ಅಂಗವಾಗಿ ನಗರದ ಸುತ್ತ-ಮುತ್ತಲಿರುವ ವಿವಿಧ ಹಳ್ಳಿಯ ಜನರು ಎತ್ತುಗಳ ಕರಿ ಹರಿಯುವ ವಿಶಿಷ್ಠ ಆಚರಣೆಗೆ ನೂರಾರು ರೈತರು, ಗ್ರಾಮದ ಮಹಿಳೆಯರು ಹಾಗೂ ಯುವಕರು ಸಾಕ್ಷಿಯಾಗುತ್ತಾರೆ.

ಇದಕ್ಕೂ ಮೊದಲು ಮಹಿಳೆಯರು ಕಾರ ಹುಣ್ಣಿಮೆ ನಿಮಿತ್ತ ವಿಶೇಷ ಪೂಜೆ ನೆರವೇರಿಸಿ, ಈ ವರ್ಷನಾದ್ರೂ ಉತ್ತಮ ಮಳೆ-ಬೆಳೆ, ಸಿರಿ-ಧಾನ್ಯ ಸಂಪತ್ತು ಉತ್ತಮ ರೀತಿಯಲ್ಲಿ ನೀಡಿ ನಮ್ಮನ್ನು ಉದ್ದರಿಸು ಎಂದು ಭೂ ತಾಯಿ ಹಾಗೂ ಗೋಮಾತೆಯಲ್ಲಿ ಮೊರೆಯಿಡುತ್ತಾರೆ. ಅಲ್ಲದೆ ಸಮೀಪದ ಅರಳಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಂಗಾರನ್ನು ಬರಮಾಡಿಕೊಳ್ಳುತ್ತಾರೆ. ಕಾರಹುಣ್ಣಿಮೆ ದಿನದಂದು ಎತ್ತು, ಹೋರಿಗಳಿಗೆ ಕೃಷಿ ಚಟುವಟಿಕೆ ಯಿಂದ ವಿರಾಮ ನೀಡಲಾಗಿರುತ್ತೆ. ಹಬ್ಬದ ಅಂಗವಾಗಿ ಮನೆಯಲ್ಲಿ ತಯಾರಿಸಿದ ವಿಶೇಷ ಸಿಹಿ ಖಾದ್ಯಗಳನ್ನು ಸವಿದು ಸಂಭ್ರಮ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿ ಆಕರ್ಷಣೆಯಾಗಿರುತ್ತದೆ.

ಕಾರಹುಣ್ಣಿಮೆಯ ಉದ್ದೇಶ

ಕಾರಹುಣ್ಣಿಮೆ ದಿನದಂದು ಪ್ರಮುಖವಾಗಿ ಎತ್ತು, ಹೋರಿಗಳೇ ಆಕರ್ಷಣೆಯಾಗಿರುತ್ತವೆ.
ಕಾರ ಹಬ್ಬದ ವಿಶೇಷತೆಯಲ್ಲಿ ಕರಿ ಹರಿಯುವ ಕಾರ್ಯಕ್ರಮವೂ ಒಂದು. ಕಾರಹುಣ್ಣಿಮೆಯಂದು ಸಂಜೆಯಾಗುತ್ತಿದಂತೆ ಕರಿ ಹರಿಯುವ ಸಮಾರಂಭ ಹಮ್ಮಿಕೊಳ್ಳಲಾಗಿರುತ್ತೆ. ಊರ ಅಗಸಿಯಲ್ಲಿ ಬೇವಿನ ತಪ್ಪಲಿನ ತೋರಣದ ನಡುವೆ ಕೊಬ್ಬರಿ, ಶೇಂಗಾ, ಬೆಲ್ಲ, ಪುಟ್ಟಾಣಿ, ಚುರುಮುರಿ, ಉತ್ತತ್ತಿ ಹಾಗೂ ಕಲ್ಲುಸಕ್ಕರೆಯನ್ನು ಕಟ್ಟಲಾಗಿರುತ್ತೆ.

ಕರಿ ಹರಿಯಲು ಬಿಳಿ, ಹಾಗೂ ಕೆಂದು ಬಣ್ಣದ ಎತ್ತುಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ. ಹಲಗೆ ಸದ್ದು ಮಾಡುತ್ತಿದ್ದಂತೆ ಅಗಸಿ ಎದುರಿಗೆ ಕರಿ ಹರಿಯಲು ಎತ್ತುಗಳೊಂದಿಗೆ ರೈತರು ತಾ ಮುಂದು ನೀ ಮುಂದು ಎಂದು ಎತ್ತುಗಳನ್ನು ಓಡಿಸಿಕೊಂಡು ಬಂದು ಕರಿ ಹರಿಯುತ್ತಾರೆ. ಕರಿಯುವ ಓಟದಲ್ಲಿ ಇತರೆ ರೈತರು ಕೇಕೆ ಹಾಕಿ ಉತ್ಸಾಹ ತುಂಬುತ್ತಾರೆ. ಯಾವ ಬಣ್ಣದ ಎತ್ತು ಕರಿಹರಿಯುತ್ತೋ ಆ ಬಣ್ಣದ ಬೆಳೆ ಚೆನ್ನಾಗಿ ಬರುತ್ತೆ ಅನ್ನುವ ನಂಬಿಕೆ ರೈತರದ್ದಾಗಿದೆ.

ಈ ಬಾರಿಯ ಕಾರಹುಣ್ಣಿಮೆ ಹಬ್ಬದಂದು ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಕಾರಹುಣ್ಣಿಮೆ ಕರಿ ಹರಿಯುವ ಸಂಪ್ರದಾಯದ ನಡೆಸಲು ಎಲ್ಲ ಜನರು ಎತ್ತುಗಳ ಓಟದ ಕರಿ ಹಬ್ಬಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಸಾಕ್ಷಿಯಾಗಲು ಕಾತುರರಾಗಿದ್ದಾರೆ. ಈ ಬಾರಿ, ಓಟದಲ್ಲಿ ಯಾವ ಬಣ್ಣದ ಎತ್ತು ಮೊದಲ ಸ್ಥಾನದಲ್ಲಿ ಓಡಿ ಬಂದು ಕರಿ ಹರಿಯಲಿದೆ ಎನ್ನುವುದೆ ಒಂದು ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ಬಿಳಿ ಎತ್ತು ಮೊದಲು ಕರಿ ಹರಿದ್ರೆ ಬಿಳಿಜೋಳ, ಅಂದರೆ ಹಿಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ.

ಇನ್ನು ಕೆಂದು ಬಣ್ಣದ ಕರಿ ಹರಿದ್ರೆ ಮುಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ ಯನ್ನು ರೈತರು ಹೊಂದಿದ್ದಾರೆ. ಯಾವ ಬಣ್ಣದ ಎತ್ತು ಮೊದಲು ಬರುತ್ತದೆವೋ ಆ ಬೆಳೆ ಬಿತ್ತಲೂ ಕಾತೂರರಾಗಿದ್ದಾರೆ. ಇತ್ತ ಎತ್ತುಗಳು ಒಂದೆಡೆ ಕಂಡು ಬಂದ್ರೆ, ಸಾಲು ಸಾಲಾಗಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ರೈತ್ರು ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಮೊದಲು ಕರಿ ಹರಿದ ಎತ್ತಿಗೆ ರೈತರೆಲ್ಲರೂ ಸೇರಿ ಮೆರವಣಿಗೆ ಮಾಡುತ್ತಾರೆ.

ಕೆಲವು ಕಡೆಗಳಲ್ಲಿ ಕರಿ ಹರಿದ ಬಳಿಕ ಗುಂಡು ಎತ್ತುವ ಸ್ಪರ್ಧೆ ಏರ್ಪಡಿಸಲಾಗಿರುತ್ತೆ. ವರ್ಷವಿಡೀ ಕೃಷಿಯಲ್ಲಿ ತೊಡಗಿದ ರೈತರು ದೈಹಿಕ ಕಸರತ್ತು ನಡೆಸುವ ಮೂಲಕ ಕ್ರೀಡಾ ಮನೋಭಾವ ಮೆರೆಯುತ್ತಾರೆ. ಆನಂತರ ಶಕ್ತಿ ದೇವತೆಗಳ ದೇಗುಲಗಳಿಗೆ ತೆರಳಿ ರೈತರು ಮಳೆ ಕುರಿತಾಗಿ ದೇವರ ಹೇಳಿಕೆಯನ್ನು ಕೇಳುತ್ತಾರೆ. ಒಟ್ಟಿನಲ್ಲಿ ಕಾರಹುಣ್ಣಿಮೆ ಎಂದರೆ ರೈತರ- ಎತ್ತುಗಳ ಹಬ್ಬ ಅಂತಾನೆ ಫೇಮಸ್..

ಇನ್ನು ಕಪ್ಪು ಬಣ್ಣದ ಎತ್ತು ಅಪಶಕುನ ಎನ್ನುವ ಕಾರಣಕ್ಕೆ ಕರಿ ಹರಿಯಲು ಕಪ್ಪು ಬಣ್ಣದ ಎತ್ತನ್ನು ಓಟಕ್ಕೆ ಬಿಡುವುದಿಲ್ಲ.ಇನ್ನೊಂದು ನಂಬಿಕೆ ಎಂದರೆ ಕರಿ ಹರಿದ ಎತ್ತು ಕೈಗೆ ಸಿಗದೆ ಊರಿನ ಸೀಮೆ ದಾಟಿ ಹೋದರೆ ಕರಿ ಹರಿಯುದನ್ನು ನಿಷೇಧಿಸಿ ಕಾರಹುಣ್ಣಿಮೆ ಹಬ್ಬವನ್ನು ಕೈಬಿಡುತ್ತಾರೆ. ಒಟ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ-ಬೆಳೆ ಚೆನ್ನಾಗಿ ಬರಲಿ ಎನ್ನುವ ಬರವಸೆಯಲ್ಲಿ ಕಾಯುತ್ತಿದ್ದಾರೆ. ಈ ವರ್ಷನಾದ್ರು ಭೂತಾಯಿ ಹಾಗೂ ವರುಣದೇವರಿಬ್ಬರೂ ಸೇರಿ ರೇತನ ದುಖಃದ ಬದುಕು ಬವಣೆಯನ್ನು ನೀಗಿಸಲಿ ಎಂದು ಆಶಿಸುತ್ತೇವೆ.

  • ಕಾರಹುಣ್ಣಿಮೆ ಹಬ್ಬ ಆಚರಿಸಲು ನಮಗೆ ತುಂಬಾ ಸಂತೋಷ ಇದೆ. ನಾನು ನಮ್ಮ ಎತ್ತುಗಳನ್ನು ಸಹ ಓಟಕ್ಕೆಂದು ಸಿಂಗಾರ ಮಾಡಿ ತಯಾರಿ ಮಾಡುತ್ತಿದ್ದೆವೆ. ಆದರೆ ವರ್ಷದಿಂದ ವರ್ಷಕ್ಕೆ ಮಳೆ ಬೆಳೆ ಕಡಿಮೆಯಾಗಿದೆ. ಈ ವರ್ಷನಾದ್ರು ದೇವರು ಉತ್ತಮ ಮಳೆ ಕೊಡುತ್ತಾನೆನೋ ಎನ್ನುವ ಬರವಸಲೆಯಲ್ಲಿ ಅನ್ನದಾತ ಕಾಯುತ್ತಿದ್ದಾನೆ. ಅನ್ನದಾತ ಪ್ರತಿವರ್ಷವು ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಇದು ಈ ವರ್ಷ ಕಡಿಯಾಗುತ್ತದೆ ಎಂದು ನಂಬಿದ್ದವೆ.
     |ಸಂಗಪ್ಪ. ಚಂ. ಮೇತ್ರಿ (ವಿಜಯಪುರ ರೈತ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ22 hours ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ4 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ5 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ5 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ5 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ5 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ7 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ7 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ7 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ1 week ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

Trending