ದಿನದ ಸುದ್ದಿ
ಗೌರಿ ಲಂಕೇಶ್ ಕೊಂದದ್ದು ನಾನೇ : ಪರಶುರಾಮ್ ತಪ್ಪೊಪ್ಪಿಗೆ
ಸುದ್ದಿದಿನ, ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕೊಂದದ್ದು ನಾನೇ ಎಂದು ಪರಶುರಾಮ್ ವಾಘ್ಮೋರೆ ತಪ್ಪೊಪ್ಪಿಕೊಂಡಿದ್ದಾನೆ ಎಂಬ ಸತ್ಯವನ್ನು ಎಸ್ ಐ ಟಿ ಹೇಳಿದೆ.
ಶುಕ್ರವಾರ (ಜೂನ್ 15) ರಂದು ಆತ ಕರೆ ಮಾಡಿದ ಕಾಯಿನ್ ಬೂತ್, ತಂಗಿದ್ದ ಸ್ಥಳ, ಗೌರಿ ಲಂಕೇಶ್ ಅವರ ಮನೆ, ಹಾಗೂ ಆತ ಬೈಕಿನಲ್ಲಿ ತಪ್ಪಿಸಿಕೊಂಡಿದ್ದ ಜಾಗವನ್ನು ತೋರಿಸಿದ್ದಾನೆ. ಅದೆಲ್ಲವನ್ನೂ ಪೊಲೀಸರು ಮಹಜರು ಮಾಡಿದ್ದಾರೆ.
ಪರಶುರಾಮ್ ಎಸ್ ಐ ಟಿ ಗೆ ಗೌರಿ ಹತ್ಯೆಗೆ ಹೇಗೆಲ್ಲಾ ತಯಾರಿ ನಡೆಸಲಾಯಿತು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.
ಅಪರಿಚಿತ ವ್ಯಕ್ತಿಯಿಂದ ಡೀಲ್
ಪರಶುರಾಮ್ ಗೆ ವ್ಯಕ್ತಿಯೊಬ್ಬ ಹಿಂದೂ ಧರ್ಮವನ್ನ ಇಷ್ಟೊಂದು ಪ್ರೀತಿಸುತ್ತಿರುವ ನಿನಗೇ ಆ ದೇವರು ಒಂದೊಳ್ಳೆ ಅವಕಾಶಮಾಡಿಕೊಟ್ಟಿದ್ದಾನೆ. ಈ ಅವಕಾಶವನ್ನು ಬಿಡಬೇಡ, ಈ ಕೆಲಸಕ್ಕೆ ನೀನು ಒಪ್ಪಿಗೆ ನೀಡಿದರೆ ನಿನಗೆ ಬೇಕಾದಂತಹ ಎಲ್ಲಾ ತಯಾರಿಯನ್ನು ನಾನು ಕೊಡುತ್ತೇನೆ ಎಂದು ಆ ವ್ಯಕ್ತಿ ನನ್ನ ಬ್ರೈನ್ ವಾಷ್ ಮಾಡಿದ ಎಂದು ಪರಶುರಾಮ್ ಹೇಳಿದ್ದಾನೆ. ಆದರೆ ಆ ವ್ಯಕ್ತಿ ಬಗ್ಗೆ ಹೆಚ್ಚು ಮಾಹಿತಿ ನನಗಿಲ್ಲ ಆದರೆ, ಆತನನ್ನು ನೋಡಿದರೆ ಗುರಿತಿಸಬಲ್ಲೆ. ಆ ವ್ಯಕ್ತಿ ನನಗೆ 2017ರಲ್ಲಿ ಭೇಟಿಯಾಗಿದ್ದ.
ವಿಡಿಯೋ ನೋಡಿ ರಕ್ತ ಕುದಿಯಿತು
ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡುವಂತೆ ಡೀಲ್ ಬಂದಾಗ ನಾನು ಆಕೆಯ ಭಾಷಣದ ವಿಡಿಯೋಗಳನ್ನ ನೋಡಿದೆ. ಆಕೆಯ ಆ ಮಾತುಗಳು ನನ್ನಲ್ಲಿ ರಕ್ತಕುದಿಯುವಂತೆ ಮಾಡಿತು. ಆಗ ನನಗೆ ಆಕೆಯನ್ನು ಕೊಲ್ಲಲೇ ಬೇಕೆನಿಸಿತು. ಆಗ ಕೊಲ್ಲಲು ಬೇಕಾದ ತಯಾರಿಯನ್ನು ನನಗೆ ಕೊಡಬೇಕಾಗಿ ಆ ವ್ಯಕ್ತಿಯನ್ನು ಕೇಳಿದೆ ಎಂದಿದ್ದಾನೆ ಪರಶುರಾಮ್.
ತರಬೇತಿ
ನಂತರ ಆ ವ್ಯಕ್ತಿ ನನಗೆ ಬೆಳಗಾವಿಯ ಒಂದು ನಿರ್ಜನ ಪ್ರದೇಶದಲ್ಲಿ ಗುಂಡು ಹಾರಿಸುವುದರ ಬಗ್ಗೆ ಏರ್ ಗನ್ ನಲ್ಲಿ ತರಬೇತಿ ನೀಡಿದ. ಈ ತರಬೇತಿಯು 20 ದಿನಗಳ ಕಾಲ ನಡೆಯಿತು. ಹಾಗೇ ಈ 20ದಿನಗಳಲ್ಲಿ ಸುಮಾರು 500 ಸುತ್ತು ಗುಂಡು ಹಾರಿಸಿದ್ದೇನೆ ಎಂದಿರುವ ಪರಶುರಾಮ್.
ಬೆಂಗಳೂರಿಗೆ ಪಯಣ
20 ದಿನದ ತರಬೇತಿಯ ನಂತರ ನನಗೆ ಆ ವ್ಯಕ್ತಿ ಒಂದು ಮೊಬೈಲ್ ನಂಬರ್ ನನಗೆ ಕೊಟ್ಟ. ಆ ನಂಬರ್ ಗೆ ನಾನು ಕೊಲೆಯ ತಯಾರಿಬಗೆಗೆ ಕಾಯಿನ್ ಬೂತ್ ನಿಂದ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದೆ. ನಂತರ ನನ್ನ ಕರೆ ಸ್ವೀಕರಿಸಿ ಮಾತನಾಡುತ್ತಿದ್ದ ಆ ವ್ಯಕ್ತಿಯ ಮಾತಿನಂತೆ ಸೆಪ್ಟೆಂಬರ್ 3 ರಂದು ಬೆಂಗಳೂರಿನ ಸುಂಕದಕಟ್ಟೆಯ ಮನೆಯೊಂದರಲ್ಲಿ ಉಳಿದೆ. ಆ ಮನೆಯಲ್ಲಿ ಸುಜಿತ್ ಅಲಿಯಾಸ್ ಪ್ರವೀಣ್ ಕೂಡಾ ಇದ್ದ.
ನಾನೇ ಶೂಟ್ ಮಾಡಿದೆ
ಕೇವಲ ಎರಡೇ ಎರಡು ಅಡಿದೂರದಿಂದ ನಾನು ಗೌರಿ ಲಂಕೇಶ್ ಗೆ ಗನ್ ನಿಂದ ಶೂಟ್ ಮಾಡಿದೆ. ಮೂರು ಗುಂಡು ಹೊಡೆದೆ. ನಂತರ ಸ್ವಲ್ಪ ಹಿಂದೆ ಬಂದು ಮತ್ತೆ ಗುಂಡು ಹಾರಿಸಿದೆ ಅದು ಗೊಡೆಗೆ ಬಿದ್ದಿತು. ಸುಮಾರು 5-6 ಸೆಕೆಂಡ್ ನಲ್ಲಿ ನಾವಂದು ಕೊಂಡ ಕೆಲಸ ಆಗಿಯೇ ಹೋಯ್ತು ಎಂದು ಹೇಳಿದ್ದಾನೆ.
ಶೂಟ್ ಮಾಡಿದ ಮೇಲೆ
ಶೂಟ್ ಮಾಡಿದ ಕೂಡಲೇ ನನ್ನ ಬಳಿ ಇದ್ದ ಗನ್ ಮತ್ತು ಜಾಕೆಟ್ ಅನ್ನು ಬೈಕ್ ಚಲಾಯಿಸುತ್ತಿದ್ದವ ತೆಗೆದುಕೊಂಡು “ಗುಡ್ ಜಾಬ್, ನಮಗಾರಿಗೂ ನೀನು ಕಾಲ್ ಮಾಡ್ಬೇಡ, ಸಮಯ ಬಂದಾಗ ನಾವೇ ನಿನ್ನ ಭೇಟಿ ಮಾಡ್ತೇವೆ” ಎಂದು ಹೇಳಿ ಹೋದ ಎಂದು ಎಸ್ ಐ ಟಿಗೆ ಹೇಳಿದ್ದಾನೆ.
ಆಡಿಕೊಂಡು ನಕ್ಕಿದ್ದ
ಗೌರಿ ಹತ್ಯೆಯ ಕೇಸಲ್ಲಿ ಕೆ.ಟಿ. ನವೀನ್ ನನ್ನು ಪೊಲೀಸರು ಬಂಧಿಸಿದ ಮಾಹಿತಿ ತಿಳಿದು, ಕೊಲೆ ಮಾಡಿದವನನ್ನು ಬಿಟ್ಟು ಯಾರೋ ಅಮಾಯಕನನ್ನು ಹಿಡಿದಿದ್ದಾರೆ ಎಂದು ಪರಶುರಾಮ್ ಆಡಿಕೊಂಡು ನಕ್ಕಿದ್ದನಂತೆ. ನಂತರ ಯಾವಾಗ ಸುಜಿತ್ ಅಲಿಯಾಸ್ ಪ್ರವೀಣ್ ನನ್ನು ಪೊಲೀಸ್ ಅರೆಸ್ಟ್ ಮಾಡಿದ್ರೋ ಆಗ ನಾನೂ ಕೂಡಾ ಅರೆಸ್ಟ್ ಆಗೋದು ಗ್ಯಾರಂಟಿ ಅಂತ ತಿಳ್ಕೊಂಡ್ನಂತೆ ಪರಶುರಾಮ.
126 ಕಾಯಿನ್ ಬೂತ್
ಎಸ್ ಐ ಟಿ ಯು ಲಕ್ಷಾಂತರ ಕರೆಗಳನ್ನ ಪರಿಶೀಲನೆ ನಡೆಸಿ, ಪರಶುರಾಮ್ ಕರೆ ಮಾಡಿದ್ದ ಕಾಯಿನ್ ಬೂತ್ ಗಳನ್ನ ಹಾಗೂ ಕರೆಗಳ ಮಾಹಿತಿ ಕಲೆಹಾಕಿದೆ. ಪರಶುರಾಮ್ ಒಟ್ಟು 126 ಕಾಯಿನ್ ಬೂತ್ ಬಳಸಿ ಕರೆ ಮಾಡಿದ್ದನಂತೆ.
ಪ್ರತ್ಯಕ್ಷದರ್ಶಿಗಳು
ಗೌರಿ ಲಂಕೇಶ್ ಹತ್ಯೆಯ ಪ್ರತ್ಯಕ್ಷದರ್ಶಿಗಳಾದ ಇಬ್ಬ ಪತ್ರಿಕೋದ್ಯಮ ವಿದ್ಯಾರ್ಥಿ ಮತ್ತು ಕೂಲಿ ಕೆಲಸದವರು ಪರಶುರಾಮ್ ನನ್ನ ಗುರುತಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ18 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ17 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

