ದಿನದ ಸುದ್ದಿ
ಗೌರಿ ಲಂಕೇಶ್ ಕೊಂದದ್ದು ನಾನೇ : ಪರಶುರಾಮ್ ತಪ್ಪೊಪ್ಪಿಗೆ
![](https://suddidina.com/wp-content/uploads/2018/06/Gowrikiller-parashuram-suddidina.jpg)
ಸುದ್ದಿದಿನ, ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕೊಂದದ್ದು ನಾನೇ ಎಂದು ಪರಶುರಾಮ್ ವಾಘ್ಮೋರೆ ತಪ್ಪೊಪ್ಪಿಕೊಂಡಿದ್ದಾನೆ ಎಂಬ ಸತ್ಯವನ್ನು ಎಸ್ ಐ ಟಿ ಹೇಳಿದೆ.
ಶುಕ್ರವಾರ (ಜೂನ್ 15) ರಂದು ಆತ ಕರೆ ಮಾಡಿದ ಕಾಯಿನ್ ಬೂತ್, ತಂಗಿದ್ದ ಸ್ಥಳ, ಗೌರಿ ಲಂಕೇಶ್ ಅವರ ಮನೆ, ಹಾಗೂ ಆತ ಬೈಕಿನಲ್ಲಿ ತಪ್ಪಿಸಿಕೊಂಡಿದ್ದ ಜಾಗವನ್ನು ತೋರಿಸಿದ್ದಾನೆ. ಅದೆಲ್ಲವನ್ನೂ ಪೊಲೀಸರು ಮಹಜರು ಮಾಡಿದ್ದಾರೆ.
ಪರಶುರಾಮ್ ಎಸ್ ಐ ಟಿ ಗೆ ಗೌರಿ ಹತ್ಯೆಗೆ ಹೇಗೆಲ್ಲಾ ತಯಾರಿ ನಡೆಸಲಾಯಿತು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.
ಅಪರಿಚಿತ ವ್ಯಕ್ತಿಯಿಂದ ಡೀಲ್
ಪರಶುರಾಮ್ ಗೆ ವ್ಯಕ್ತಿಯೊಬ್ಬ ಹಿಂದೂ ಧರ್ಮವನ್ನ ಇಷ್ಟೊಂದು ಪ್ರೀತಿಸುತ್ತಿರುವ ನಿನಗೇ ಆ ದೇವರು ಒಂದೊಳ್ಳೆ ಅವಕಾಶಮಾಡಿಕೊಟ್ಟಿದ್ದಾನೆ. ಈ ಅವಕಾಶವನ್ನು ಬಿಡಬೇಡ, ಈ ಕೆಲಸಕ್ಕೆ ನೀನು ಒಪ್ಪಿಗೆ ನೀಡಿದರೆ ನಿನಗೆ ಬೇಕಾದಂತಹ ಎಲ್ಲಾ ತಯಾರಿಯನ್ನು ನಾನು ಕೊಡುತ್ತೇನೆ ಎಂದು ಆ ವ್ಯಕ್ತಿ ನನ್ನ ಬ್ರೈನ್ ವಾಷ್ ಮಾಡಿದ ಎಂದು ಪರಶುರಾಮ್ ಹೇಳಿದ್ದಾನೆ. ಆದರೆ ಆ ವ್ಯಕ್ತಿ ಬಗ್ಗೆ ಹೆಚ್ಚು ಮಾಹಿತಿ ನನಗಿಲ್ಲ ಆದರೆ, ಆತನನ್ನು ನೋಡಿದರೆ ಗುರಿತಿಸಬಲ್ಲೆ. ಆ ವ್ಯಕ್ತಿ ನನಗೆ 2017ರಲ್ಲಿ ಭೇಟಿಯಾಗಿದ್ದ.
ವಿಡಿಯೋ ನೋಡಿ ರಕ್ತ ಕುದಿಯಿತು
ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡುವಂತೆ ಡೀಲ್ ಬಂದಾಗ ನಾನು ಆಕೆಯ ಭಾಷಣದ ವಿಡಿಯೋಗಳನ್ನ ನೋಡಿದೆ. ಆಕೆಯ ಆ ಮಾತುಗಳು ನನ್ನಲ್ಲಿ ರಕ್ತಕುದಿಯುವಂತೆ ಮಾಡಿತು. ಆಗ ನನಗೆ ಆಕೆಯನ್ನು ಕೊಲ್ಲಲೇ ಬೇಕೆನಿಸಿತು. ಆಗ ಕೊಲ್ಲಲು ಬೇಕಾದ ತಯಾರಿಯನ್ನು ನನಗೆ ಕೊಡಬೇಕಾಗಿ ಆ ವ್ಯಕ್ತಿಯನ್ನು ಕೇಳಿದೆ ಎಂದಿದ್ದಾನೆ ಪರಶುರಾಮ್.
ತರಬೇತಿ
ನಂತರ ಆ ವ್ಯಕ್ತಿ ನನಗೆ ಬೆಳಗಾವಿಯ ಒಂದು ನಿರ್ಜನ ಪ್ರದೇಶದಲ್ಲಿ ಗುಂಡು ಹಾರಿಸುವುದರ ಬಗ್ಗೆ ಏರ್ ಗನ್ ನಲ್ಲಿ ತರಬೇತಿ ನೀಡಿದ. ಈ ತರಬೇತಿಯು 20 ದಿನಗಳ ಕಾಲ ನಡೆಯಿತು. ಹಾಗೇ ಈ 20ದಿನಗಳಲ್ಲಿ ಸುಮಾರು 500 ಸುತ್ತು ಗುಂಡು ಹಾರಿಸಿದ್ದೇನೆ ಎಂದಿರುವ ಪರಶುರಾಮ್.
ಬೆಂಗಳೂರಿಗೆ ಪಯಣ
20 ದಿನದ ತರಬೇತಿಯ ನಂತರ ನನಗೆ ಆ ವ್ಯಕ್ತಿ ಒಂದು ಮೊಬೈಲ್ ನಂಬರ್ ನನಗೆ ಕೊಟ್ಟ. ಆ ನಂಬರ್ ಗೆ ನಾನು ಕೊಲೆಯ ತಯಾರಿಬಗೆಗೆ ಕಾಯಿನ್ ಬೂತ್ ನಿಂದ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದೆ. ನಂತರ ನನ್ನ ಕರೆ ಸ್ವೀಕರಿಸಿ ಮಾತನಾಡುತ್ತಿದ್ದ ಆ ವ್ಯಕ್ತಿಯ ಮಾತಿನಂತೆ ಸೆಪ್ಟೆಂಬರ್ 3 ರಂದು ಬೆಂಗಳೂರಿನ ಸುಂಕದಕಟ್ಟೆಯ ಮನೆಯೊಂದರಲ್ಲಿ ಉಳಿದೆ. ಆ ಮನೆಯಲ್ಲಿ ಸುಜಿತ್ ಅಲಿಯಾಸ್ ಪ್ರವೀಣ್ ಕೂಡಾ ಇದ್ದ.
ನಾನೇ ಶೂಟ್ ಮಾಡಿದೆ
ಕೇವಲ ಎರಡೇ ಎರಡು ಅಡಿದೂರದಿಂದ ನಾನು ಗೌರಿ ಲಂಕೇಶ್ ಗೆ ಗನ್ ನಿಂದ ಶೂಟ್ ಮಾಡಿದೆ. ಮೂರು ಗುಂಡು ಹೊಡೆದೆ. ನಂತರ ಸ್ವಲ್ಪ ಹಿಂದೆ ಬಂದು ಮತ್ತೆ ಗುಂಡು ಹಾರಿಸಿದೆ ಅದು ಗೊಡೆಗೆ ಬಿದ್ದಿತು. ಸುಮಾರು 5-6 ಸೆಕೆಂಡ್ ನಲ್ಲಿ ನಾವಂದು ಕೊಂಡ ಕೆಲಸ ಆಗಿಯೇ ಹೋಯ್ತು ಎಂದು ಹೇಳಿದ್ದಾನೆ.
ಶೂಟ್ ಮಾಡಿದ ಮೇಲೆ
ಶೂಟ್ ಮಾಡಿದ ಕೂಡಲೇ ನನ್ನ ಬಳಿ ಇದ್ದ ಗನ್ ಮತ್ತು ಜಾಕೆಟ್ ಅನ್ನು ಬೈಕ್ ಚಲಾಯಿಸುತ್ತಿದ್ದವ ತೆಗೆದುಕೊಂಡು “ಗುಡ್ ಜಾಬ್, ನಮಗಾರಿಗೂ ನೀನು ಕಾಲ್ ಮಾಡ್ಬೇಡ, ಸಮಯ ಬಂದಾಗ ನಾವೇ ನಿನ್ನ ಭೇಟಿ ಮಾಡ್ತೇವೆ” ಎಂದು ಹೇಳಿ ಹೋದ ಎಂದು ಎಸ್ ಐ ಟಿಗೆ ಹೇಳಿದ್ದಾನೆ.
ಆಡಿಕೊಂಡು ನಕ್ಕಿದ್ದ
ಗೌರಿ ಹತ್ಯೆಯ ಕೇಸಲ್ಲಿ ಕೆ.ಟಿ. ನವೀನ್ ನನ್ನು ಪೊಲೀಸರು ಬಂಧಿಸಿದ ಮಾಹಿತಿ ತಿಳಿದು, ಕೊಲೆ ಮಾಡಿದವನನ್ನು ಬಿಟ್ಟು ಯಾರೋ ಅಮಾಯಕನನ್ನು ಹಿಡಿದಿದ್ದಾರೆ ಎಂದು ಪರಶುರಾಮ್ ಆಡಿಕೊಂಡು ನಕ್ಕಿದ್ದನಂತೆ. ನಂತರ ಯಾವಾಗ ಸುಜಿತ್ ಅಲಿಯಾಸ್ ಪ್ರವೀಣ್ ನನ್ನು ಪೊಲೀಸ್ ಅರೆಸ್ಟ್ ಮಾಡಿದ್ರೋ ಆಗ ನಾನೂ ಕೂಡಾ ಅರೆಸ್ಟ್ ಆಗೋದು ಗ್ಯಾರಂಟಿ ಅಂತ ತಿಳ್ಕೊಂಡ್ನಂತೆ ಪರಶುರಾಮ.
126 ಕಾಯಿನ್ ಬೂತ್
ಎಸ್ ಐ ಟಿ ಯು ಲಕ್ಷಾಂತರ ಕರೆಗಳನ್ನ ಪರಿಶೀಲನೆ ನಡೆಸಿ, ಪರಶುರಾಮ್ ಕರೆ ಮಾಡಿದ್ದ ಕಾಯಿನ್ ಬೂತ್ ಗಳನ್ನ ಹಾಗೂ ಕರೆಗಳ ಮಾಹಿತಿ ಕಲೆಹಾಕಿದೆ. ಪರಶುರಾಮ್ ಒಟ್ಟು 126 ಕಾಯಿನ್ ಬೂತ್ ಬಳಸಿ ಕರೆ ಮಾಡಿದ್ದನಂತೆ.
ಪ್ರತ್ಯಕ್ಷದರ್ಶಿಗಳು
ಗೌರಿ ಲಂಕೇಶ್ ಹತ್ಯೆಯ ಪ್ರತ್ಯಕ್ಷದರ್ಶಿಗಳಾದ ಇಬ್ಬ ಪತ್ರಿಕೋದ್ಯಮ ವಿದ್ಯಾರ್ಥಿ ಮತ್ತು ಕೂಲಿ ಕೆಲಸದವರು ಪರಶುರಾಮ್ ನನ್ನ ಗುರುತಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ
![](https://suddidina.com/wp-content/uploads/2024/06/New_Criminal_law_suddidina.jpg)
ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
“ಐಪಿಸಿ, ಸಿಆರ್ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”
ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”
ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.
ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ
![](https://suddidina.com/wp-content/uploads/2022/05/petrol_suddidina.jpg)
ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ
![](https://suddidina.com/wp-content/uploads/2024/06/food_poison_suddidina.jpg)
ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ7 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ಅಂತರಂಗ7 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ