ದಿನದ ಸುದ್ದಿ
ಕಾರು ಕಳುವಾದರೆ ಇನ್ಸುರೆನ್ಸ್ ಕ್ಲೇಮ್ಗೆ ಬೇಕು ಎರಡು ಕೀಗಳು
ಒಂದು ವೇಳೆ ನಿಮ್ಮ ಕಾರು ಕಳುವಾಗಿ ಪೊಲೀಸರಿಗೆ ದೂರು ನೀಡಿ ಇನ್ಸೂರೆನ್ಸ್ ಕ್ಲೇಮ್ ಮಾಡಲು ಹೋದರೆ ಅಲ್ಲಿ ಕಾರಿನ ಎರಡೂ ಒರಿಜಿನಲ್ ಕೀಗಳನ್ನು ಕೇಳುತ್ತಾರೆ. ಏಕೆಂದರೆ ಇಂಥ ಪ್ರಕರಣಗಳಲ್ಲಿ ಒರಿಜಿನಲ್ ಕೀಗಳನ್ನು ಇನ್ಸೂರೆನ್ಸ್ ಕಂಪನಿಗಳಿಗೆ ಸಲ್ಲಿಸುವುದು ಕಡ್ಡಾಯ.
ಸುದ್ದಿದಿನ ಡೆಸ್ಕ್: ಒಂದು ವೇಳೆ ನಿಮ್ಮ ಕಾರು ಕಳುವಾಗಿ ಪೊಲೀಸರಿಗೆ ದೂರು ನೀಡಿ ಇನ್ಸೂರೆನ್ಸ್ ಕ್ಲೇಮ್ ಮಾಡಲು ಹೋದರೆ ಅಲ್ಲಿ ಕಾರಿನ ಎರಡೂ ಒರಿಜಿನಲ್ ಕೀಗಳನ್ನು ಕೇಳುತ್ತಾರೆ. ಏಕೆಂದರೆ ಇಂಥ ಪ್ರಕರಣಗಳಲ್ಲಿ ಒರಿಜಿನಲ್ ಕೀಗಳನ್ನು ಇನ್ಸೂರೆನ್ಸ್ ಕಂಪನಿಗಳಿಗೆ ಸಲ್ಲಿಸುವುದು ಕಡ್ಡಾಯ.
ದಿಲ್ಲಿ ಮೂಲದ ವ್ಯಕ್ತಿ ಸುರೇಶ್ ಎಂಬುವರು ತಮ್ಮ ಹೋಂಡಾ ಸಿಟಿ ಕಾರನ್ನು ಮನೆ ಮುಂದೆ ಪಾರ್ಕ್ ಮಾಡಿದ್ದಾಗ ಕಾರು ಕಳುವಾಗಿದೆ. ಪೊಲೀಸರಿಗೆ ದೂರು ನೀಡಿ ಅದನ್ನು ಇನ್ಸುರೆನ್ಸ್ ಕಂಪನಿಗೆ ಸಲ್ಲಿಸಿದಾಗ ಕಾರಿನ ಎರಡು ಒರಿಜಿನಲ್ ಕೀಗಳನ್ನು ಸಲ್ಲಿಸುವಂತೆ ಕೇಳಿದ್ದಾರೆ. ಸುರೇಶ್ ಅವರ ಬಳಿ ಇದ್ದ ಒಂದು ಕೀ ಕಳೆದುಹೋಗಿದ್ದ ಕಾರಣ ಅವರು ಸಲ್ಲಿಸಲು ಸಾಧ್ಯವಾಗಿಲ್ಲ.
ತಮ್ಮ ಸಬೂಬು ಬರೆದು ಅರ್ಜಿ ಜತೆ ಸೇರಿಸಿ ಕೊಟ್ಟಾಗ ಇನ್ಸುರೆನ್ಸ್ ಕಂಪನಿಯು ಅರ್ಜಿಯನ್ನು ವಜಾ ಮಾಡಿ ವಿಮೆ ಹಣ ನೀಡುವುದು ಅಸಾಧ್ಯ ಎಂದಿದೆ.
ಕೇಂದ್ರ ರಸ್ತೆ ಸಂಚಾರ ಇಲಾಖೆಯ ಪ್ರಕಾರ ವ್ಯಕ್ತಿಯು ಕಾರು ಕೊಂಡಾಗ ನೀಡುವ ಎರಡು ಕೀಗಳು ಕಳೆದುಹೋಗಿದ್ದರೆ ಡ್ಯೂಪ್ಲಿಕೆಟ್ ಕೀಗಳನ್ನು ಬಳಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಒರಿಜಿನಲ್ ಕೀಗಳನ್ನು ಸಲ್ಲಿಸಬೇಕೆಂಬ ನಿಯಮ ಸರಿಯಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್, ಇನ್ಸುರೆನ್ಸ್, ಆರ್ಟಿಒ ಕಚೇರಿಗಳಿಗೆ ಅಲೆಯುತ್ತಿರುವ ಸುರೇಶ್ ಹೈರಾಣಾಗಿರುವುದಂತೂ ನಿಜ.

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


