Connect with us

ದಿನದ ಸುದ್ದಿ

ತರಳಬಾಳು ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಶನಿವಾರದಂದು ಉದ್ಘಾಟಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ ಅವರು, ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟುವ ಸಲುಗಾಗಿ ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸಲಾಗುತ್ತಿದೆ.

ನಗರಕ್ಕೆ ಸಮೀಪದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ತರಳಬಾಳು ಜಗದ್ಗುರುಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳಿಗೆ ಕೋರಿದಾಗ, ಸ್ವಾಮೀಜಿಗಳು, ತಕ್ಷಣವೇ ಒಪ್ಪಿಗೆ ಸೂಚಿಸಿ, ವಸತಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್‍ಗಾಗಿ ಒದಗಿಸಿದ್ದಾರೆ, ಅಲ್ಲದೆ ಅಗತ್ಯವಿರುವ ಎಲ್ಲ ಸಹಕಾರವನ್ನೂ ನೀಡುವುದಾಗಿ ಹೇಳಿದ್ದಾರೆ. ಜನತೆಯ ಪರವಾಗಿ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ತರಳಬಾಳು ವಸತಿ ನಿಲಯದ 30 ಕೊಠಡಿಗಳನ್ನು ಒದಗಿಸಿದ್ದು, ಪ್ರತಿ ಕೊಠಡಿಯಲ್ಲಿ 03 ಬೆಡ್ ವ್ಯವಸ್ಥೆ ಇದೆ. ಹೀಗಾಗಿ ಒಟ್ಟು 90 ಜನರಿಗೆ ಕೋವಿಡ್ ಕೇರ್ ಸೆಂಟರ್‍ನಲ್ಲಿ ಸ್ಥಳಾವಕಾಶ ಕಲ್ಪಿಸಬಹುದಾಗಿದೆ. ಅಲ್ಲದೆ ಇಲ್ಲಿನ ವಾತಾವರಣವೂ ಹಿತಕರವಾಗಿದ್ದು, ಬಿಸಿನೀರು, ಉತ್ತಮ ಊಟೋಪಹಾರದ ವ್ಯವಸ್ಥೆ ಒದಗಿಸಲಾಗುವುದು.

ಇದನ್ನೂ ಓದಿ | ದಿ ಗ್ರೇಟ್ ಇಂಡಿಯನ್ ಕಿಚನ್ : ಮಹಿಳಾ ಅಸಮಾನತೆಯ ಕರಾಳ ಜಗತ್ತಿನ ಚಿತ್ರಣ

ಕೋವಿಡ್ ಸೋಂಕಿಗೆ ಒಳಗಾಗಿ, ಮನೆಯಲ್ಲಿ ಒಂದೇ ಶೌಚಾಲಯ, ಬಾತ್‍ರೂಂ ಹೊಂದಿರುವವರು ಹೋಂ ಐಸೋಲೇಷನ್ ನಲ್ಲಿ ಮನೆಯಲ್ಲಿ ಒಂದೇ ಶೌಚಾಲಯ, ಬಾತ್‍ರೂಂ ಹೊಂದಿರುವ ಸೋಂಕಿತರು, ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ನಲ್ಲಿ ಇರಬಾರದು. ಇದರಿಂದಾಗಿ ಮನೆಯ ಇತರೆ ಸದಸ್ಯರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚು.

ಹೀಗಾಗಿ ಇಂತಹ ಯಾವುದೇ ರೋಗಲಕ್ಷಣಗಳು ಕಂಡುಬರದ, ಎ-ಸಿಂಮ್ಟಮ್ಯಾಟಿಕ್ ಇದ್ದು, ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರಿಗೆ, ಇಲ್ಲಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ನಿಗಾದಲ್ಲಿ ಇರಿಸಲಾಗುವುದು. ಕೋವಿಡ್ ಕೇರ್ ಸೆಂಟರ್‍ಗೆ ವೈದ್ಯರ ಶಿಫಾರಸಿನ ಮೇರೆಗೆ ದಾಖಲಾಗುವ ಎ-ಸಿಂಮ್ಟಮ್ಯಾಟಿಕ್ ಸೋಂಕಿತರಿಗೆ ಉತ್ತಮ ರೀತಿಯಲ್ಲಿ ಊಟೋಪಹಾರ, ಬಿಸಿನೀರಿನ ವ್ಯವಸ್ಥೆ ಇದೆ.

ಸೋಂಕಿತರ ಆರೈಕೆಗಾಗಿ ವೈದ್ಯರು ಹಾಗೂ ನರ್ಸ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕೇವಲ ಖಾಸಗಿ ವಸತಿ ನಿಲಯಗಳು ಮಾತ್ರವಲ್ಲದೆ, ಬಿಸಿಎಂ ವಸತಿ ನಿಲಯಗಳು, ಕಲ್ಯಾಣಮಂಟಪಗಳನ್ನು ಕೂಡ ಅವಶ್ಯಕತೆ ಎನಿಸಿದಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನಾಗಿ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಆಕ್ಸಿಜನ್ ಕೊರತೆ ನೀಗಿಸುವ ಸಲುವಾಗಿ ಕೇಂದ್ರ ಸರ್ಕಾರ 84 ಲಕ್ಷ ರೂ. ವೆಚ್ಚದ 10 ಕೆ.ಎಲ್. ಆಕ್ಸಿಜನ್ ಘಟಕ ಮಂಜೂರು ಮಾಡಿದ್ದು, ಈಗಾಗಲೆ ಕಂಪನಿಯೊಂದಿಗೆ ಸಮನ್ವಯ ಸಾಧಿಸಿದ್ದು, 20 ದಿನಗಳೊಳಗೆ ಕಾರ್ಯಾರಂಭವಾಗುವ ಸಾಧ್ಯತೆ ಇದೆ.

ಅಲ್ಲದೆ ತಮ್ಮ ತಂದೆ-ತಾಯಿಯವರ ಹೆಸರಿನಲ್ಲಿರುವ ಟ್ರಸ್ಟ್ ವತಿಯಿಂದಲೂ ದಾವಣಗೆರೆ ಹಾಗೂ ಜಗಳೂರಿನಲ್ಲಿ ಆಕ್ಸಿಜನ್ ಘಟಕ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಸೌರ್ಹಾದ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್‍ಗಳೊಂದಿಗೆ ಸಭೆ ನಡೆಸಿ ಅವರಿಂದ ಆಕ್ಸಿಜನ್ ಮಷಿನ್ ಖರೀದಿಸಲು ಚರ್ಚೆ ನಡೆಸುತ್ತೇವೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಮೊದಲುಗೊಂಡು, ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು, ವೈದ್ಯರು, ಶುಶ್ರೂಷಕರು, ಪೊಲೀಸರು ಸೇರಿದಂತೆ ಬಹಳಷ್ಟು ಜನ ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ. ಜನರೂ ಕೂಡ ಸರ್ಕಾರದ ಆಶಯವನ್ನು ಅರ್ಥ ಮಾಡಿಕೊಂಡು, ಕೋವಿಡ್ ನಿಯಂತ್ರಣಕ್ಕೆ ರೂಪಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು, ಇಲ್ಲದಿದ್ದಲ್ಲಿ ಕೋವಿಡ್ ನಿಯಂತ್ರಣಗೊಳಿಸುವುದು ಕಷ್ಟ ಎಂದರು.

ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ. ರವೀಂದ್ರನಾಥ್ ಮಾತನಾಡಿ, ಕೋವಿಡ್ ಸೋಂಕಿತರಿಗೆ ಸೂಕ್ತ ವೈದ್ಯಕೀಯ ನೆರವು ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು, ಅಗತ್ಯ ವ್ಯವಸ್ಥೆ ಮಾಡುತ್ತಿದ್ದೇವೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡದಂತೆ ಸರ್ಕಾರ ಹಲವು ರೀತಿಯಲ್ಲಿ ಯತ್ನಿಸುತ್ತಿದೆ. ಇನ್ನಾದರೂ ಸಾರ್ವಜನಿಕರು ಜಾಗೃತರಾಗಬೇಕು, ವಿನಾಕಾರಣ ಮನೆಯಿಂದ ಹೊರಗಡೆ ಬಂದು ಓಡಾಡಬಾರದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್ ಬಾರ್ಕಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್ ಹಾಗೂ ಇತರರು ಉಪಸ್ಥಿತರಿದ್ದರು. ಕೋವಿಡ್ ಕೇರ್ ಸೆಂಟರ್‍ಗಾಗಿ ಪೂರೈಕೆ ಮಾಡಲಾದ ಮೊಟ್ಟೆಗಳನ್ನು ಇದೇ ಸಂದರ್ಭದಲ್ಲಿ ಸಂಸದರು, ಶಾಸಕರು ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending