ದಿನದ ಸುದ್ದಿ
ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ | ‘ವೀರವನಿತೆ ಓಬವ್ವ ಪಡೆ’ಗೆ ಚಾಲನೆ
ಸುದ್ದಿದಿನ, ಚಿತ್ರದುರ್ಗ | ಕಾನೂನಿನ ಭಯ ಇಲ್ಲದೆ ದೌರ್ಜನ್ಯಗಳು ಹೆಚ್ಚಾಗುತ್ತಿದೆ ಅದರಲೂ ಮಹಿಳೆಯ ಮೇಲಿನ ದೌರ್ಜನ್ಯ ಇನ್ನು ಜಾಸ್ತಿಯಾಗುತ್ತಿದೆ ಎಂದು ಪೂರ್ವ ವಲಯದ ಪೋಲಿಸ್ ಮಹಾ ನಿರೀಕ್ಷಕರಾದ ಶರತ್ ಚಂದ್ರ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಅಸ್ಥಿತ್ವಕ್ಕೆ ಬಂದ ಓಬವ್ವ ಪಡೆಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಓಬವ್ವ ಪಡೆ ಕರ್ನಾಟಕದ ಯಾವ ಜಿಲ್ಲೆಯಲ್ಲೂ ಇಲ್ಲ, ಇಲ್ಲಿ ಮಾಡಿರುವುದು ಶ್ಲಾಘನೀಯ ಕಾರ್ಯ, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಉತ್ತಮವಾದ ಸ್ಥಾನವನ್ನು ನೀಡಲಾಗಿದೆ. ಅವರ ಬಗ್ಗೆ ಕೀಳಾಗಿ ಕಾಣುವುದು ಸೇರಿದಂತೆ ದೌರ್ಜನ್ಯ ಮಾಡಿದಲ್ಲಿ ಕಾನೂನಿಗೆ ಗುರಿಯಾಗುತ್ತಾರೆ. ಮಹಿಳೆಯರ ರಕ್ಷಣೆ ಕೇವಲ ಪೊಲೀಸರ ಕೆಲಸವಲ್ಲ ಅದು ಎಲ್ಲರ ಹೊಣೆಯಾಗಿದೆ ಎಂದರು.
ಬಸ್ಸು ರೈಲು ಜನಸಂದಣೆ ಸೇರಿದಂತ ಪ್ರದೇಶಗಳಲ್ಲಿ ಮಹಿಳೆಯರನ್ನು ಚೂಡಾಯಿಸುವವರ ಸಂಖ್ಯೆ ಹೆಚ್ಚಾಗಿದೆ. ತಲೆ ಎತ್ತಿ ನಡೆಯಲು ಆಗುವುದಿಲ್ಲಾ, ಕೆಲ ಪುಂಡರಿಗೆ ಯಾವುದೇ ಭಯ ಇರುವುದಿಲ್ಲ. ಮತ್ತು ನಮ್ಮ ಮೇಲೆ ಯಾವುದೇ ದೂರು ಕೊಡುವುದಿಲ್ಲಾ ಎಂಬುದು ಅವರಿಗೆ ಧೈರ್ಯ. ಇದರ ವಿರುದ್ದ ಮಹಿಳೆ ಸಿಡಿದೇಳಬೇಕು.ಮತ್ತು ಧೈರ್ಯವಾಗಿ ದೂರು ನೀಡಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಅವರು, ಪುಂಡರಿಗೆ ಕಾನೂನಿನ ಭಯ ಮೂಡಿಸಬೇಕು. ಈ ನಿಟ್ಟಿನಲ್ಲಿ ಓಬವ್ವ ಪಡೆ ಸನ್ನದ್ದವಾಗಿದೆ. ಇವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ಇತ್ತೀಚಿನ ದಿನದಲ್ಲಿ ಮಾದಕ ವಸ್ತುಗಳನ್ನು ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ ಈ ಬಗ್ಗೆ ಮಾಹಿತಿ ನೀಡಿ, ಕಾಲೇಜಿನ ಆಡಳಿತ ಮಂಡಳಿಯು ಈ ಬಗ್ಗೆ ಎಚ್ಚರ ವಹಿಸಬೇಕು. ಮೊಬೈಲ್ ನಿಂದಲೂ ಇಂದು ಬಹಳಷ್ಟು ಅಘಾತಕಾರಿ ಘಟನೆಗಳು ನಡೆಯುತ್ತಿವೆ. ಆದ್ದರಿಂದ ಮೊಬೈಲ್ ಬಳಕೆ ಮಾಡುವುದನ್ನು ಕಡಿಮೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಐಜಿಪಿ ಕಿವಿ ಮಾತು ಹೇಳಿದರು.
ಸೈಬರ್ ಕ್ರೈಮ್ ಗಳ ಬಗ್ಗೆಯೂ ಸಹಾ ಅರಿವು ಮೂಡಿಸುವ ಕಾರ್ಯಕ್ರಮವನ್ನು ಓಬವ್ವ ಪಡೆ ಮಾಡಲಿದೆ. ಪೋಕ್ಸೋ ಕಾಯಿದೆ ಅತ್ಯಂತ ಕಠಿಣವಾದ ಕಾನೂನು. ಗ್ಯಾಂಗ್ ರೇಪ್, ಮತ್ತು ಮಕ್ಕಳ ಮೇಲೆ ಅತ್ಯಾಚಾರ ನಡೆದರೆ ಮರಣ ದಂಡನೆ ಶಿಕ್ಷೆ ಇದೆ ಇವೆಲ್ಲದರ ಬಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು.
ಮಕ್ಕಳ ಶೈಕ್ಷಣಿಕ ಅವಧಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿರಬೇಕು. ಪ್ರೇಮ ಪ್ರಕರಣದಲ್ಲಿ ಸಿಲುಕುವುದಕ್ಕೆ ಅಲ್ಲಾ ಎಂಬದನ್ನು ತಿಳಿದುಕೊಳ್ಳಬೇಕು ಎಂದು ಶರತ್ ಚಂದ್ರ ಕರೆ ನೀಡಿದರು.
ಜಿ.ಪಂ.ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಜಿಲ್ಲಾಧಿಕಾರಿ ವಿವಿ ಜೋತ್ಸ್ನಾ ಜಿ.ಪಂ.ಸಿಇಓ ರವೀಂದ್ರ, ಜಿಲ್ಲಾ ರಕ್ಷಣಾಧಿಕಾರಿ ಶ್ರೀನಾಥ್ ಎಂ.ಜೋಶಿ, ಹೆಚ್ಚುವರಿ ರಕ್ಷಣಾಧಿಕಾರಿ ರಾಮಲಕ್ಷ್ಮಣ್ ಅರೆಸಿದ್ದಿ, ಪ್ರಾಧ್ಯಾಪಕ ನಟರಾಜ್, ಉಪವಿಭಾಗಾಧಿಕಾರಿ ವಿಜಯಕುಮಾರ್, ನಗರಸಭೆ ಅಧ್ಯಕ್ಷ ತಿಮ್ಮಣ್ಣ ಸೇರಿದಂತೆ ಇತರರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ