Connect with us

ಲೈಫ್ ಸ್ಟೈಲ್

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ

Published

on

  • ಡಾ.ರಾಮನರೇಶ್ ಎಸ್.ಎಂಬಿಬಿಎಸ್ ಎಂಡಿ ಡಿಎಂ (ಕಾರ್ಡಿಯಾಲಜಿ),ಕನ್ಸಲ್ಟೆಂಟ್ ಇಂಟರ್ ವೆನ್ಷನಲ್ ಕಾರ್ಡಿಯೋಲಾಜಿಸೇಂಟ್,ಅಪೋಲೊ ಕ್ಲೀನಿಕ್, ಬೆಂಗಳೂರು

ಯುವ ಜನರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಯುವ ಪೀಳಿಗೆ ದೈನಂದಿನ ಆರೋಗ್ಯ ತಪಾಸಣೆಗಳನ್ನು ಮಾಡುವಾಗ ಯಾವ ಅಂಶಗಳು ಮತ್ತು ಮುನ್ನೆಚ್ಚರಿಕೆಯ ಕ್ರಮಗಳು ತೆಗೆದುಕೊಳ್ಳ ಬೇಕು ಎಂಬುದು ಮುಖ್ಯ.

ಕಳೆದ ಹಲವಾರು ದಶಕಗಳಿಂದ, ವೃದ್ಧಾಪ್ಯಕ್ಕೆ ಹೃದಯಾಘಾತ ಅತ್ಯಂತ ದೊಡ್ಡ ಶತ್ರು/ ಅಪಾಯದ ಅಂಶಗಳಲ್ಲಿ ಒಂದು ಎಂದು ತಿಳಿಯಲಾಗಿದೆ. ಈ ಒಳ ಶತ್ರು ಸಾಮಾನ್ಯವಾಗಿ ಪುರುಷರು 50+ ಮತ್ತು ಮಹಿಳೆಯರನ್ನು 65+ನಷ್ಟು ಬಾಧಿಸುತ್ತದೆ. ಇತ್ತೀಚೆಗೆ 20, 30 ಮತ್ತು 40ರ ಇಳಿವಯಸ್ಸಿನ ಜನರು ಈ ಹೃದಯ ಸಂಬಂಧಿ ದಾಳಿಗೆ ತುತ್ತಾಗುತ್ತಿದ್ದಾರೆ.

ಈ ಹೃದಯಾಘಾತಗಳು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ 50 ಅಥವಾ 60 ರ ಹರೆಯದಲ್ಲಿ ಸಂಭವಿಸುವ ಸಾಮಾನ್ಯ ಹೃದಯಾಘಾತಗಳಲ್ಲ ಎಂದು ಕಿರಿಯ ವಯಸ್ಸಿನ ಜನರಲ್ಲಿ ನಡೆಸಿದ Premature Coronary Artery Disease (PCAD) ಅಧ್ಯಯನವು ಸೂಚಿಸುತ್ತದೆ. ಕಿರಿಯ ವಯಸ್ಸಿನವರಲ್ಲಿ ತೀರ ವಿಭಿನ್ನ ರೀತಿಯ ಪ್ರಚೋದಕಗಳಾಗಿ ಕಾಣಿಸುತ್ತಿದೆ.

ಈ ಪ್ರಕರಣಗಳಲ್ಲಿ ಶೇ.12-13ರಷ್ಟು ಜನರು ಮಧುಮೇಹ ಅಥವಾ ಅಧಿಕ ರಕ್ತದೊತ್ತಡ ಹೊಂದಿದವರಾಗಿದ್ದಾರೆ. ಇದರಿಂದ ಗೊತ್ತಾಗುತ್ತಿರುವ ಒಂದು ಅಂಶವೆಂದರೇ ವಯಸ್ಸಿನ ಮತ್ತು ಈ ಖಾಯಿಲೆ ಎಂಬ ೨ ಗುಂಪುಗಳ ಅಪಾಯದ ಅಂಶಗಳ ನಡುವೆ ಒಂದು ದೊಡ್ಡ ವ್ಯತ್ಯಾಸ ಇದೆ ಎಂದು. ಯುವ ಜನತೆ/ಕಿರಿಯ ರೋಗಿಗಳಲ್ಲಿ CHD Coronary heart disease ಯ ವೈದ್ಯಕೀಯ ಪ್ರಸ್ತುತಿಯು ಹಿರಿಯರಿಗಿಂತ ಭಿನ್ನವಾಗಿರುತ್ತದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಯುವ ರೋಗಿಗಳು ಆಂಜಿನಾ ದ ಅನುಭವ ಹೊಂದಿರುವುದಿಲ್ಲ.

ಇದು ಕೇವಲ ಕೆಟ್ಟ ಜೀವನಶೈಲಿ ಮತ್ತು ಒತ್ತಡಗಳಿಂದ ಮಾತ್ರವಲ್ಲ. ಮಾಲಿನ್ಯ ಮತ್ತು ಅಧಿಕ ಕಾರ್ಬ್ ಆಹಾರ ಸೇವನೆಯೂ ಸಹ ಹೃದಯಾಘಾತದ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಯುವಜನರು ಏನನ್ನು ತಿನ್ನುತ್ತಾರೆ ಎನ್ನುವುದಕ್ಕಿಂತ ಇದು ಹೆಚ್ಚು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬುದನ್ನು ನಾವು ಅರಿಯಬೇಕು. ತಡವಾಗಿಮಾಡುವ ಊಟ/ ರಾತ್ರಿಯ ಊಟ ಮತ್ತು ಸಿಎಆರ್ ಬೋಹೈಡ್ರೇಟ್ ಗಳು ಮತ್ತು ಮಾಂಸಗಳ ದೊಡ್ಡಭಾಗದ ಒಂದು ಕಳವಳಕಾರಿ ಆಹಾರ ಪದ್ಧತಿಯಾಗಿದೆ.

ಇದನ್ನೂ ಓದಿ | ಪ್ರಬುದ್ಧರೆನ್ನುವ ಪ್ರಭುಗಳಿಗೆ ಅತೀವ ನಮನ..!

ಹೃದಯಾಘಾತಗಳು ಮತ್ತು ಹೃದಯಾಘಾತದ ಲಕ್ಷಣಗಳು, ಚಿಕ್ಕ ವಯಸ್ಸಿನಲ್ಲಿ ಯಾವುದೇ ಮುನ್ಸೂಚನೆಯಿಲ್ಲದೆ ಬರುತ್ತವೆ, ಮುಖ್ಯವಾಗಿ ಹೃದಯ ರೋಗದ ಲಕ್ಷಣಗಳು ಮೊದಲು ಇರಲಿಲ್ಲ, ಏಕೆಂದರೆ ಹೃದಯ ಸಂಬಂಧಿ ಕಾಯಿಲೆಯ ಲಕ್ಷಣಗಳು ಈ ಮೊದಲು ಹೃದಯ ಸಂಬಂಧಿ ಕಾಯಿಲೆಯ ಲಕ್ಷಣಗಳಂತೆ ಇರಲಿಲ್ಲ. ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಕಾರಣವಾಗುವ ಪ್ರಮುಖ ಅಂಶಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:

  • ಮಾದಕ ವಸ್ತು ಬಳಕೆ ಅಥವಾ ಅತಿಯಾದ ಆಲ್ಕೋಹಾಲ್ ಬಳಕೆ
  • ಧೂಮಪಾನ
  • ಕೌಟುಂಬಿಕ ಇತಿಹಾಸ
  • ಅಧಿಕ ರಕ್ತದೊತ್ತಡ
  • ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು
  • ದೈಹಿಕ ಚಟುವಟಿಕೆಯ ಕೊರತೆ
  • ಮಧುಮೇಹ & ದುರ್ಬಲ ಗ್ಲುಕೋಸ್ ಸಹಿಷ್ಣುತೆ
    ಕಳಪೆ ಆಹಾರ

ಎಂಐ myocardial infarction ಹೊಂದಿರುವ ಯುವ ರೋಗಿಗಳು ಸಾಮಾನ್ಯವಾಗಿ CHD Coronary heart disease ಗಾಗಿ ಬಹು ಅಪಾಯದ ಅಂಶಗಳನ್ನು ಹೊಂದಿರುತ್ತಾರೆ. ಉದಾಹರಣೆಗೆ, ಕೆಲವು ಅಧ್ಯಯನಗಳಲ್ಲಿ, 90 ರಿಂದ 97 ಪ್ರತಿಶತದಷ್ಟು ಜನರು ಅಥ್ರೊಸ್ಕ್ಲೆರೋಸಿಸ್/ atherosclerosis ಗೆ ಒಂದು ಅಥವಾ ಹೆಚ್ಚು ಸಾಂಪ್ರದಾಯಿಕ ಅಪಾಯದ ಅಂಶಗಳನ್ನು ಹೊಂದಿರುತ್ತಾರೆ.

ಧೂಮಪಾನ/ Smoking

ಯುವ ರೋಗಿಗಳಲ್ಲಿ ಸಿಗರೇಟು ಸೇದುವುದು ಅತ್ಯಂತ ಸಾಮಾನ್ಯ ಮತ್ತು ಮಾರ್ಪಾಟು ಮಾಡಬಹುದಾದ ಅಪಾಯದ ಅಂಶವಾಗಿದೆ. ಎಂಐ ಹೊಂದಿರುವ 65 ರಿಂದ 92 ಪ್ರತಿಶತ ಯುವ ರೋಗಿಗಳಲ್ಲಿ ಇದು ಕಂಡುಬಂದಿದೆ, ಇದು 45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ 24 ರಿಂದ 56 ಪ್ರತಿಶತ ದಷ್ಟು ರೋಗಿಗಳಲ್ಲಿ ಕಂಡುಬಂದಿದೆ.

ಕುಟುಂಬ ಇತಿಹಾಸ/ Family history

CHD ಹೊಂದಿರುವ ಯುವ ರೋಗಿಗಳು ಹೆಚ್ಚಾಗಿ ಅಕಾಲಿಕ CHD ಯ ಕೌಟುಂಬಿಕ ಇತಿಹಾಸವನ್ನು ಹೊಂದಿರುತ್ತಾರೆ. ಇದರ ಜೊತೆಗೆ, ಅಕಾಲಿಕ CHD ಹೊಂದಿರುವ ರೋಗಿಗಳ ಸಂತತಿಯು ಅಂತಹ ಕೌಟುಂಬಿಕ ಇತಿಹಾಸವಿಲ್ಲದ ರೋಗಿಗಳಿಗಿಂತ coronary/ಪರಿಧಮನಿಯ ಅಪಾಯದ ಅಂಶಗಳನ್ನು ಹೊಂದಿರುವ ಸಾಧ್ಯತೆ ಹೆಚ್ಚು. ಕೌಟುಂಬಿಕ ಇತಿಹಾಸ ಮತ್ತು ಅವಧಿಪೂರ್ವ CHD ನಡುವಿನ ಸಂಬಂಧವು ಅನುವಂಶೀಯ ಮತ್ತು ಪರಿಸರೀಯ ಅಂಶಗಳಿಂದ ಬರಬಹುದು.

ಮಧುಮೇಹ ಮತ್ತು ಅಧಿಕ ರಕ್ತದೊತ್ತಡ

ಗ್ಲುಕೋಸ್ ಸಹಿಷ್ಣುತೆ/ glucose tolerance ಮತ್ತು ಟೈಪ್ 2 ಮಧುಮೇಹದ ಅಪಾಯವು ಹೆಚ್ಚುತ್ತಿರುವುದು ಒಂದು ದೊಡ್ಡ ಅಪಾಯವಾಗಿದೆ. ಯುವ ರೋಗಿಗಳು ಆಗಾಗ್ಗೆ ಗ್ಲುಕೋಸ್ ಚಯಾಪಚಯ ಕ್ರಿಯೆಯ ಸೂಕ್ಷ್ಮ ಸಮಸ್ಯೆಗಳನ್ನು ಹೊಂದಿರುತ್ತಾರೆ, ಅತಿಯಾದ ಮಧುಮೇಹದ ಅನುಪಸ್ಥಿತಿಯಲ್ಲಿ ಗ್ಲುಕೋಸ್ ಸಹಿಷ್ಣುತೆಯ ದುರ್ಬಲತೆ, ಇದು ಕರೋನರಿ coronary disease ಕಾಯಿಲೆಯ ಒಂದು ಅಪಾಯಕಾರಿ ಅಂಶವಾಗಿರುವು ಮುಖ್ಯ ಕಾರಣವಾಗಿದೆ. ಮುಖ್ಯವಾಗಿ, ಆಹಾರ ಆಯ್ಕೆಗಳು ಅಂದರೆ ಅಲ್ಟ್ರಾ-ಸಂಸ್ಕರಿಸಿದ ಆಹಾರ, ತೂಕದಲ್ಲಿ ಹೆಚ್ಚಳ ಮತ್ತು ಬೊಜ್ಜು, ಜಡ ಜೀವನಶೈಲಿ ಮತ್ತು ದೈಹಿಕವಾಗಿ ಕಡಿಮೆ ಚಟುವಟಿಕೆ ಆಗಿವೆ.

ಈ ಅಪಾಯವನ್ನು ಕಡಿಮೆ ಮಾಡಲು ಅತ್ಯುತ್ತಮ ಆಯ್ಕೆಯೆಂದರೆ, ಅಪಾಯ ಅಂಶಗಳ ಅಭಿವೃದ್ಧಿ ಮತ್ತು ಪ್ರಗತಿಗೆ ಕಾರಣವಾಗುವ ಸಾಮಾಜಿಕ ಮತ್ತು ಪರಿಸರೀ ಪರಿಸ್ಥಿತಿಗಳನ್ನು ಬದಲಾಯಿಸುವುದು.

ತಡೆಗಟ್ಟುವಿಕೆ ಮತ್ತು ಮುನ್ನೆಚ್ಚರಿಕೆಗಳು/ Prevention and Precautions

ವ್ಯಾಯಾಮ ಮಾಡುವುದು, ಪೌಷ್ಟಿಕಾಂಶದ ಆಹಾರ ಸೇವನೆ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ಒತ್ತಡ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಸರಿಯಾದ ರೀತಿಯಲ್ಲಿ ನಿರ್ವಹಿಸುವುದು. ಬೊಜ್ಜು, ಟೈಪ್ 2 ಮಧುಮೇಹ, ಕಳಪೆ ಆಹಾರ, ವ್ಯಾಯಾಮದ ಕೊರತೆ, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಹೃದಯ ರಕ್ತನಾಳ ಸಂಬಂಧಿ ಕಾಯಿಲೆಯ ಕೌಟುಂಬಿಕ ಇತಿಹಾಸ ದಂತಹ ನಡವಳಿಕೆಗಳು ಮತ್ತು ಅಪಾಯದ ಅಂಶಗಳ ಬಗ್ಗೆ ಜಾಗೃತಿ/ಅರಿವು ಮತ್ತು ಶಿಕ್ಷಣವು ಅಗತ್ಯವಾಗಿದೆ.

ಇವಲ್ಲದೇ, ಹವಾಮಾನ ವೈಪರೀತ್ಯಗಳ ಮೇಲೆ ಅಥವಾ COVID ಯ ಬೆದರಿಕೆಯ ಮೇಲೆ ಯಾವುದೇ ನಿಯಂತ್ರಣವಿಲ್ಲ. ಇಂತಹ ಸಾಂಕ್ರಾಮಿಕ ರೋಗಗಳಿಂದ ಮತ್ತು ಹವಾಮಾನ ಬದಲಾವಣೆಯಿಂದ ಬರುವ ಅನಾರೋಗ್ಯ ಅಪಾಯಗಳಿಂದ ರಕ್ಷಿಸಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಆರೋಗ್ಯವಂತ ನಾಗರಿಕರು ಯಾವುದೇ ರಾಷ್ಟ್ರಕ್ಕೆ ಅತ್ಯಂತ ದೊಡ್ಡ ಆಸ್ತಿ. ಶೀತದ ತಾಪದಿಂದ ನಿಮ್ಮನ್ನು ನೀವು ಬೆಚ್ಚಾಗಿ ಇದ್ದು ರಕ್ಷಿಸಿಕೊಳ್ಳಬೇಕು. COVID-19 ತಪ್ಪಿಸಲು ಸರಿಯಾದ ಮಾರ್ಗಸೂಚಿಗಳನ್ನು ಮತ್ತು ಎಸ್ ಒಪಿಗಳನ್ನು ಅನುಸರಿಸಬೇಕು. COVID-19 ನಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳು ಮತ್ತು ಶ್ರಮದೊಂದಿಗೆ ಉಸಿರಾಡುವವರು,

ಅನಿಯಮಿತ ಹೃದಯ ಬಡಿತ, ಉಸಿರಾಟದ ತೊಂದರೆಯಿಂದ ಆರಾಮದಾಯಕ ನಿದ್ರೆ ಸಾಧ್ಯವಾಗದೇ ಇರಬಹುದು, ರಾತ್ರಿ ವೇಳೆ ಯಲ್ಲಿ ಎಚ್ಚರಗೊಳ್ಳದಿರುವುದು, ಲಘು ತಲೆ ಅಥವಾ ತಲೆಸುತ್ತು ಇದ್ದರೆ ತಕ್ಷಣ ವೈದ್ಯರ ಅಥವಾ ಹೃದ್ರೋಗ ತಜ್ಞರನ್ನು ಸಂಪರ್ಕಿಸಬೇಕು. ಅನಾರೋಗ್ಯ ಎಚ್ಚರಿಕೆಯ ಆರೋಗ್ಯ ಚಿಹ್ನೆಗಳನ್ನು ಎಂದಿಗೂ ನಿರ್ಲಕ್ಷಿಸಬಾರದು, ಅಪಾಯದ ಅಂಶಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಕಾರಾತ್ಮಕ ನಡವಳಿಕೆಯ ಬದಲಾವಣೆ, ಆಶಾವಾದ ಜೀವನಶೈಲಿಗೆ ಆತ್ಮವಿಶ್ವಾಸ ಮತ್ತು ಆದ್ಯತೆಯನ್ನು ನೀಡಬೇಕು.

ಸರಿಯಾದ ವ್ಯಾಯಾಮ,ಸಮತೋಲಿತ ಆಹಾರ, ನಿಯಮಿತ ಆರೋಗ್ಯ ತಪಾಸಣೆ, ಒತ್ತಡ ನಿರ್ವಹಣೆ, ರಕ್ತದ ಸಕ್ಕರೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ಧೂಮಪಾನ ಮತ್ತು ಮದ್ಯಪಾನವನ್ನು ತಪ್ಪಿಸುವುದು ಇವು ನಿಮ್ಮ ಆರೋಗ್ಯಕರ ಹೃದಯಕ್ಕೆ ಪ್ರಮುಖ ಅಂಶಗಳಾಗಿವೆ.

ಅನುಸರಿಸಬೇಕಾದ ಕೆಲವು ಮಾರ್ಗಸೂಚಿಗಳು
ನಿಮ್ಮ ಸಮಸ್ಯೆಯನ್ನು ಜಟಿಲವಾಗುವ ಮುನ್ನ ಪತ್ತೆ ಹಚ್ಚಿ ನಿರ್ಣಯಿಸಬೇಕು. ನಿಯಮಿತ ತಪಾಸಣೆಗಳಿಂದ ನಿಮಗೆ ಆರಂಭಿಕ ಹಂತದಲ್ಲೇ ಕೆಲವು ರೋಗಗಳ ಬಗ್ಗೆ ಅರಿವು ಮೂಡಿಸುತ್ತವೆ ಮತ್ತು ನೀವು ಅದನ್ನು ಉಲ್ಬಣವಾಗದಂತೆ ತಡೆಯಲು ಅಗತ್ಯ ಮತ್ತು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬಹುದು.

ರೋಗಲಕ್ಷಣಗಳ ಆಧಾರದ ಮೇಲೆ ರೋಗಗಳನ್ನು ವೈದ್ಯರು ಗುರುತಿಸುತ್ತಾರೆ, ಸಮಸ್ಯೆ ಹೆಚ್ಚು ಜಟಿಲಗೊಳ್ಳದಂತೆ ಅಗತ್ಯ ಚಿಕಿತ್ಸೆಗೆ ಶಿಫಾರಸು ಮಾಡುತ್ತಾರೆ. ಆದ್ದರಿಂದ, ಆರೋಗ್ಯ ತಪಾಸಣೆಗಳು ಒಂದು ಮುಂಜಾಗ್ರತಾ ಕ್ರಮಗಳು ವಿಶೇಷವಾಗಿ ಅಪಾಯದ ಅಂಶಗಳನ್ನು ಹೊಂದಿರುವವರಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ.

ಸುದ್ದಿದಿನ‌‌.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending