ಲೈಫ್ ಸ್ಟೈಲ್
ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ
- ಡಾ.ರಾಮನರೇಶ್ ಎಸ್.ಎಂಬಿಬಿಎಸ್ ಎಂಡಿ ಡಿಎಂ (ಕಾರ್ಡಿಯಾಲಜಿ),ಕನ್ಸಲ್ಟೆಂಟ್ ಇಂಟರ್ ವೆನ್ಷನಲ್ ಕಾರ್ಡಿಯೋಲಾಜಿಸೇಂಟ್,ಅಪೋಲೊ ಕ್ಲೀನಿಕ್, ಬೆಂಗಳೂರು
ಯುವ ಜನರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಯುವ ಪೀಳಿಗೆ ದೈನಂದಿನ ಆರೋಗ್ಯ ತಪಾಸಣೆಗಳನ್ನು ಮಾಡುವಾಗ ಯಾವ ಅಂಶಗಳು ಮತ್ತು ಮುನ್ನೆಚ್ಚರಿಕೆಯ ಕ್ರಮಗಳು ತೆಗೆದುಕೊಳ್ಳ ಬೇಕು ಎಂಬುದು ಮುಖ್ಯ.
ಕಳೆದ ಹಲವಾರು ದಶಕಗಳಿಂದ, ವೃದ್ಧಾಪ್ಯಕ್ಕೆ ಹೃದಯಾಘಾತ ಅತ್ಯಂತ ದೊಡ್ಡ ಶತ್ರು/ ಅಪಾಯದ ಅಂಶಗಳಲ್ಲಿ ಒಂದು ಎಂದು ತಿಳಿಯಲಾಗಿದೆ. ಈ ಒಳ ಶತ್ರು ಸಾಮಾನ್ಯವಾಗಿ ಪುರುಷರು 50+ ಮತ್ತು ಮಹಿಳೆಯರನ್ನು 65+ನಷ್ಟು ಬಾಧಿಸುತ್ತದೆ. ಇತ್ತೀಚೆಗೆ 20, 30 ಮತ್ತು 40ರ ಇಳಿವಯಸ್ಸಿನ ಜನರು ಈ ಹೃದಯ ಸಂಬಂಧಿ ದಾಳಿಗೆ ತುತ್ತಾಗುತ್ತಿದ್ದಾರೆ.
ಈ ಹೃದಯಾಘಾತಗಳು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ 50 ಅಥವಾ 60 ರ ಹರೆಯದಲ್ಲಿ ಸಂಭವಿಸುವ ಸಾಮಾನ್ಯ ಹೃದಯಾಘಾತಗಳಲ್ಲ ಎಂದು ಕಿರಿಯ ವಯಸ್ಸಿನ ಜನರಲ್ಲಿ ನಡೆಸಿದ Premature Coronary Artery Disease (PCAD) ಅಧ್ಯಯನವು ಸೂಚಿಸುತ್ತದೆ. ಕಿರಿಯ ವಯಸ್ಸಿನವರಲ್ಲಿ ತೀರ ವಿಭಿನ್ನ ರೀತಿಯ ಪ್ರಚೋದಕಗಳಾಗಿ ಕಾಣಿಸುತ್ತಿದೆ.
ಈ ಪ್ರಕರಣಗಳಲ್ಲಿ ಶೇ.12-13ರಷ್ಟು ಜನರು ಮಧುಮೇಹ ಅಥವಾ ಅಧಿಕ ರಕ್ತದೊತ್ತಡ ಹೊಂದಿದವರಾಗಿದ್ದಾರೆ. ಇದರಿಂದ ಗೊತ್ತಾಗುತ್ತಿರುವ ಒಂದು ಅಂಶವೆಂದರೇ ವಯಸ್ಸಿನ ಮತ್ತು ಈ ಖಾಯಿಲೆ ಎಂಬ ೨ ಗುಂಪುಗಳ ಅಪಾಯದ ಅಂಶಗಳ ನಡುವೆ ಒಂದು ದೊಡ್ಡ ವ್ಯತ್ಯಾಸ ಇದೆ ಎಂದು. ಯುವ ಜನತೆ/ಕಿರಿಯ ರೋಗಿಗಳಲ್ಲಿ CHD Coronary heart disease ಯ ವೈದ್ಯಕೀಯ ಪ್ರಸ್ತುತಿಯು ಹಿರಿಯರಿಗಿಂತ ಭಿನ್ನವಾಗಿರುತ್ತದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಯುವ ರೋಗಿಗಳು ಆಂಜಿನಾ ದ ಅನುಭವ ಹೊಂದಿರುವುದಿಲ್ಲ.
ಇದು ಕೇವಲ ಕೆಟ್ಟ ಜೀವನಶೈಲಿ ಮತ್ತು ಒತ್ತಡಗಳಿಂದ ಮಾತ್ರವಲ್ಲ. ಮಾಲಿನ್ಯ ಮತ್ತು ಅಧಿಕ ಕಾರ್ಬ್ ಆಹಾರ ಸೇವನೆಯೂ ಸಹ ಹೃದಯಾಘಾತದ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಯುವಜನರು ಏನನ್ನು ತಿನ್ನುತ್ತಾರೆ ಎನ್ನುವುದಕ್ಕಿಂತ ಇದು ಹೆಚ್ಚು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬುದನ್ನು ನಾವು ಅರಿಯಬೇಕು. ತಡವಾಗಿಮಾಡುವ ಊಟ/ ರಾತ್ರಿಯ ಊಟ ಮತ್ತು ಸಿಎಆರ್ ಬೋಹೈಡ್ರೇಟ್ ಗಳು ಮತ್ತು ಮಾಂಸಗಳ ದೊಡ್ಡಭಾಗದ ಒಂದು ಕಳವಳಕಾರಿ ಆಹಾರ ಪದ್ಧತಿಯಾಗಿದೆ.
ಇದನ್ನೂ ಓದಿ | ಪ್ರಬುದ್ಧರೆನ್ನುವ ಪ್ರಭುಗಳಿಗೆ ಅತೀವ ನಮನ..!
ಹೃದಯಾಘಾತಗಳು ಮತ್ತು ಹೃದಯಾಘಾತದ ಲಕ್ಷಣಗಳು, ಚಿಕ್ಕ ವಯಸ್ಸಿನಲ್ಲಿ ಯಾವುದೇ ಮುನ್ಸೂಚನೆಯಿಲ್ಲದೆ ಬರುತ್ತವೆ, ಮುಖ್ಯವಾಗಿ ಹೃದಯ ರೋಗದ ಲಕ್ಷಣಗಳು ಮೊದಲು ಇರಲಿಲ್ಲ, ಏಕೆಂದರೆ ಹೃದಯ ಸಂಬಂಧಿ ಕಾಯಿಲೆಯ ಲಕ್ಷಣಗಳು ಈ ಮೊದಲು ಹೃದಯ ಸಂಬಂಧಿ ಕಾಯಿಲೆಯ ಲಕ್ಷಣಗಳಂತೆ ಇರಲಿಲ್ಲ. ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಕಾರಣವಾಗುವ ಪ್ರಮುಖ ಅಂಶಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:
- ಮಾದಕ ವಸ್ತು ಬಳಕೆ ಅಥವಾ ಅತಿಯಾದ ಆಲ್ಕೋಹಾಲ್ ಬಳಕೆ
- ಧೂಮಪಾನ
- ಕೌಟುಂಬಿಕ ಇತಿಹಾಸ
- ಅಧಿಕ ರಕ್ತದೊತ್ತಡ
- ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು
- ದೈಹಿಕ ಚಟುವಟಿಕೆಯ ಕೊರತೆ
- ಮಧುಮೇಹ & ದುರ್ಬಲ ಗ್ಲುಕೋಸ್ ಸಹಿಷ್ಣುತೆ
ಕಳಪೆ ಆಹಾರ
ಎಂಐ myocardial infarction ಹೊಂದಿರುವ ಯುವ ರೋಗಿಗಳು ಸಾಮಾನ್ಯವಾಗಿ CHD Coronary heart disease ಗಾಗಿ ಬಹು ಅಪಾಯದ ಅಂಶಗಳನ್ನು ಹೊಂದಿರುತ್ತಾರೆ. ಉದಾಹರಣೆಗೆ, ಕೆಲವು ಅಧ್ಯಯನಗಳಲ್ಲಿ, 90 ರಿಂದ 97 ಪ್ರತಿಶತದಷ್ಟು ಜನರು ಅಥ್ರೊಸ್ಕ್ಲೆರೋಸಿಸ್/ atherosclerosis ಗೆ ಒಂದು ಅಥವಾ ಹೆಚ್ಚು ಸಾಂಪ್ರದಾಯಿಕ ಅಪಾಯದ ಅಂಶಗಳನ್ನು ಹೊಂದಿರುತ್ತಾರೆ.
ಧೂಮಪಾನ/ Smoking
ಯುವ ರೋಗಿಗಳಲ್ಲಿ ಸಿಗರೇಟು ಸೇದುವುದು ಅತ್ಯಂತ ಸಾಮಾನ್ಯ ಮತ್ತು ಮಾರ್ಪಾಟು ಮಾಡಬಹುದಾದ ಅಪಾಯದ ಅಂಶವಾಗಿದೆ. ಎಂಐ ಹೊಂದಿರುವ 65 ರಿಂದ 92 ಪ್ರತಿಶತ ಯುವ ರೋಗಿಗಳಲ್ಲಿ ಇದು ಕಂಡುಬಂದಿದೆ, ಇದು 45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ 24 ರಿಂದ 56 ಪ್ರತಿಶತ ದಷ್ಟು ರೋಗಿಗಳಲ್ಲಿ ಕಂಡುಬಂದಿದೆ.
ಕುಟುಂಬ ಇತಿಹಾಸ/ Family history
CHD ಹೊಂದಿರುವ ಯುವ ರೋಗಿಗಳು ಹೆಚ್ಚಾಗಿ ಅಕಾಲಿಕ CHD ಯ ಕೌಟುಂಬಿಕ ಇತಿಹಾಸವನ್ನು ಹೊಂದಿರುತ್ತಾರೆ. ಇದರ ಜೊತೆಗೆ, ಅಕಾಲಿಕ CHD ಹೊಂದಿರುವ ರೋಗಿಗಳ ಸಂತತಿಯು ಅಂತಹ ಕೌಟುಂಬಿಕ ಇತಿಹಾಸವಿಲ್ಲದ ರೋಗಿಗಳಿಗಿಂತ coronary/ಪರಿಧಮನಿಯ ಅಪಾಯದ ಅಂಶಗಳನ್ನು ಹೊಂದಿರುವ ಸಾಧ್ಯತೆ ಹೆಚ್ಚು. ಕೌಟುಂಬಿಕ ಇತಿಹಾಸ ಮತ್ತು ಅವಧಿಪೂರ್ವ CHD ನಡುವಿನ ಸಂಬಂಧವು ಅನುವಂಶೀಯ ಮತ್ತು ಪರಿಸರೀಯ ಅಂಶಗಳಿಂದ ಬರಬಹುದು.
ಮಧುಮೇಹ ಮತ್ತು ಅಧಿಕ ರಕ್ತದೊತ್ತಡ
ಗ್ಲುಕೋಸ್ ಸಹಿಷ್ಣುತೆ/ glucose tolerance ಮತ್ತು ಟೈಪ್ 2 ಮಧುಮೇಹದ ಅಪಾಯವು ಹೆಚ್ಚುತ್ತಿರುವುದು ಒಂದು ದೊಡ್ಡ ಅಪಾಯವಾಗಿದೆ. ಯುವ ರೋಗಿಗಳು ಆಗಾಗ್ಗೆ ಗ್ಲುಕೋಸ್ ಚಯಾಪಚಯ ಕ್ರಿಯೆಯ ಸೂಕ್ಷ್ಮ ಸಮಸ್ಯೆಗಳನ್ನು ಹೊಂದಿರುತ್ತಾರೆ, ಅತಿಯಾದ ಮಧುಮೇಹದ ಅನುಪಸ್ಥಿತಿಯಲ್ಲಿ ಗ್ಲುಕೋಸ್ ಸಹಿಷ್ಣುತೆಯ ದುರ್ಬಲತೆ, ಇದು ಕರೋನರಿ coronary disease ಕಾಯಿಲೆಯ ಒಂದು ಅಪಾಯಕಾರಿ ಅಂಶವಾಗಿರುವು ಮುಖ್ಯ ಕಾರಣವಾಗಿದೆ. ಮುಖ್ಯವಾಗಿ, ಆಹಾರ ಆಯ್ಕೆಗಳು ಅಂದರೆ ಅಲ್ಟ್ರಾ-ಸಂಸ್ಕರಿಸಿದ ಆಹಾರ, ತೂಕದಲ್ಲಿ ಹೆಚ್ಚಳ ಮತ್ತು ಬೊಜ್ಜು, ಜಡ ಜೀವನಶೈಲಿ ಮತ್ತು ದೈಹಿಕವಾಗಿ ಕಡಿಮೆ ಚಟುವಟಿಕೆ ಆಗಿವೆ.
ಈ ಅಪಾಯವನ್ನು ಕಡಿಮೆ ಮಾಡಲು ಅತ್ಯುತ್ತಮ ಆಯ್ಕೆಯೆಂದರೆ, ಅಪಾಯ ಅಂಶಗಳ ಅಭಿವೃದ್ಧಿ ಮತ್ತು ಪ್ರಗತಿಗೆ ಕಾರಣವಾಗುವ ಸಾಮಾಜಿಕ ಮತ್ತು ಪರಿಸರೀ ಪರಿಸ್ಥಿತಿಗಳನ್ನು ಬದಲಾಯಿಸುವುದು.
ತಡೆಗಟ್ಟುವಿಕೆ ಮತ್ತು ಮುನ್ನೆಚ್ಚರಿಕೆಗಳು/ Prevention and Precautions
ವ್ಯಾಯಾಮ ಮಾಡುವುದು, ಪೌಷ್ಟಿಕಾಂಶದ ಆಹಾರ ಸೇವನೆ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ಒತ್ತಡ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಸರಿಯಾದ ರೀತಿಯಲ್ಲಿ ನಿರ್ವಹಿಸುವುದು. ಬೊಜ್ಜು, ಟೈಪ್ 2 ಮಧುಮೇಹ, ಕಳಪೆ ಆಹಾರ, ವ್ಯಾಯಾಮದ ಕೊರತೆ, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಹೃದಯ ರಕ್ತನಾಳ ಸಂಬಂಧಿ ಕಾಯಿಲೆಯ ಕೌಟುಂಬಿಕ ಇತಿಹಾಸ ದಂತಹ ನಡವಳಿಕೆಗಳು ಮತ್ತು ಅಪಾಯದ ಅಂಶಗಳ ಬಗ್ಗೆ ಜಾಗೃತಿ/ಅರಿವು ಮತ್ತು ಶಿಕ್ಷಣವು ಅಗತ್ಯವಾಗಿದೆ.
ಇವಲ್ಲದೇ, ಹವಾಮಾನ ವೈಪರೀತ್ಯಗಳ ಮೇಲೆ ಅಥವಾ COVID ಯ ಬೆದರಿಕೆಯ ಮೇಲೆ ಯಾವುದೇ ನಿಯಂತ್ರಣವಿಲ್ಲ. ಇಂತಹ ಸಾಂಕ್ರಾಮಿಕ ರೋಗಗಳಿಂದ ಮತ್ತು ಹವಾಮಾನ ಬದಲಾವಣೆಯಿಂದ ಬರುವ ಅನಾರೋಗ್ಯ ಅಪಾಯಗಳಿಂದ ರಕ್ಷಿಸಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ಆರೋಗ್ಯವಂತ ನಾಗರಿಕರು ಯಾವುದೇ ರಾಷ್ಟ್ರಕ್ಕೆ ಅತ್ಯಂತ ದೊಡ್ಡ ಆಸ್ತಿ. ಶೀತದ ತಾಪದಿಂದ ನಿಮ್ಮನ್ನು ನೀವು ಬೆಚ್ಚಾಗಿ ಇದ್ದು ರಕ್ಷಿಸಿಕೊಳ್ಳಬೇಕು. COVID-19 ತಪ್ಪಿಸಲು ಸರಿಯಾದ ಮಾರ್ಗಸೂಚಿಗಳನ್ನು ಮತ್ತು ಎಸ್ ಒಪಿಗಳನ್ನು ಅನುಸರಿಸಬೇಕು. COVID-19 ನಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳು ಮತ್ತು ಶ್ರಮದೊಂದಿಗೆ ಉಸಿರಾಡುವವರು,
ಅನಿಯಮಿತ ಹೃದಯ ಬಡಿತ, ಉಸಿರಾಟದ ತೊಂದರೆಯಿಂದ ಆರಾಮದಾಯಕ ನಿದ್ರೆ ಸಾಧ್ಯವಾಗದೇ ಇರಬಹುದು, ರಾತ್ರಿ ವೇಳೆ ಯಲ್ಲಿ ಎಚ್ಚರಗೊಳ್ಳದಿರುವುದು, ಲಘು ತಲೆ ಅಥವಾ ತಲೆಸುತ್ತು ಇದ್ದರೆ ತಕ್ಷಣ ವೈದ್ಯರ ಅಥವಾ ಹೃದ್ರೋಗ ತಜ್ಞರನ್ನು ಸಂಪರ್ಕಿಸಬೇಕು. ಅನಾರೋಗ್ಯ ಎಚ್ಚರಿಕೆಯ ಆರೋಗ್ಯ ಚಿಹ್ನೆಗಳನ್ನು ಎಂದಿಗೂ ನಿರ್ಲಕ್ಷಿಸಬಾರದು, ಅಪಾಯದ ಅಂಶಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಕಾರಾತ್ಮಕ ನಡವಳಿಕೆಯ ಬದಲಾವಣೆ, ಆಶಾವಾದ ಜೀವನಶೈಲಿಗೆ ಆತ್ಮವಿಶ್ವಾಸ ಮತ್ತು ಆದ್ಯತೆಯನ್ನು ನೀಡಬೇಕು.
ಸರಿಯಾದ ವ್ಯಾಯಾಮ,ಸಮತೋಲಿತ ಆಹಾರ, ನಿಯಮಿತ ಆರೋಗ್ಯ ತಪಾಸಣೆ, ಒತ್ತಡ ನಿರ್ವಹಣೆ, ರಕ್ತದ ಸಕ್ಕರೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ಧೂಮಪಾನ ಮತ್ತು ಮದ್ಯಪಾನವನ್ನು ತಪ್ಪಿಸುವುದು ಇವು ನಿಮ್ಮ ಆರೋಗ್ಯಕರ ಹೃದಯಕ್ಕೆ ಪ್ರಮುಖ ಅಂಶಗಳಾಗಿವೆ.
ಅನುಸರಿಸಬೇಕಾದ ಕೆಲವು ಮಾರ್ಗಸೂಚಿಗಳು
ನಿಮ್ಮ ಸಮಸ್ಯೆಯನ್ನು ಜಟಿಲವಾಗುವ ಮುನ್ನ ಪತ್ತೆ ಹಚ್ಚಿ ನಿರ್ಣಯಿಸಬೇಕು. ನಿಯಮಿತ ತಪಾಸಣೆಗಳಿಂದ ನಿಮಗೆ ಆರಂಭಿಕ ಹಂತದಲ್ಲೇ ಕೆಲವು ರೋಗಗಳ ಬಗ್ಗೆ ಅರಿವು ಮೂಡಿಸುತ್ತವೆ ಮತ್ತು ನೀವು ಅದನ್ನು ಉಲ್ಬಣವಾಗದಂತೆ ತಡೆಯಲು ಅಗತ್ಯ ಮತ್ತು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬಹುದು.
ರೋಗಲಕ್ಷಣಗಳ ಆಧಾರದ ಮೇಲೆ ರೋಗಗಳನ್ನು ವೈದ್ಯರು ಗುರುತಿಸುತ್ತಾರೆ, ಸಮಸ್ಯೆ ಹೆಚ್ಚು ಜಟಿಲಗೊಳ್ಳದಂತೆ ಅಗತ್ಯ ಚಿಕಿತ್ಸೆಗೆ ಶಿಫಾರಸು ಮಾಡುತ್ತಾರೆ. ಆದ್ದರಿಂದ, ಆರೋಗ್ಯ ತಪಾಸಣೆಗಳು ಒಂದು ಮುಂಜಾಗ್ರತಾ ಕ್ರಮಗಳು ವಿಶೇಷವಾಗಿ ಅಪಾಯದ ಅಂಶಗಳನ್ನು ಹೊಂದಿರುವವರಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ7 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


