ರಾಜಕೀಯ
ಬ್ರೇಕಿಂಗ್ : ಸ್ವಾತಂತ್ರ್ಯೋತ್ಸವ ಸಂಭ್ರಮ, ಕೆಂಪು ಕೋಟೆ ಮೇಲೆ ನಮೋ ಭಾಷಣ
ಸುದ್ದಿದಿನ ಡೆಸ್ಕ್: ಇಂದು ದೇಶದಾದ್ಯಂತ 72ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ದೆಹಲಿಯ ಕೆಂಪು ಕೋಟೆ ಮೇಕೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ಬಳಿಕ ಪ್ರಧಾನಿ ಸೇನೆಯಿಂದ ಗೌರವ ವಂದನೆ ಸ್ವೀಕಲಿಸಲಿದ್ದಾರೆ. ಶಾಲಾ ಮಕ್ಕಳು ಹಾಗೂ ಎನ್ಸಿಸಿ ಕೆಡೆಟ್ಸ್ ಸೇರಿದಂತೆ ಎಲ್ಲರೂ ರಾಷ್ಟ್ರಗೀತೆ ಹಾಡುತ್ತಾರೆ. ಇದು 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರ 5ನೇ ಹಾಗೂ ಈ ಅವಧಿಯ ಕೊನೆಯ ಭಾಷಣವಾಗಿದೆ. ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಕುರಿತು ನರೇಂದ್ರ ಮೋದಿ ಮಾತನಾಡಿದರು. ಜಾಗತಿಕವಾಗಿ ಭಾರತ ಪ್ರಗತಿ ಸಾಧಿಸಿದೆ ಎಂದು ಹೇಳಿದರು.