Connect with us

ಲೋಕಾರೂಢಿ

ಸ್ವತಂತ್ರೋತ್ಸವದ ಈ‌ ಸಂದರ್ಭದಲ್ಲಿ..!

Published

on

ಬ್ರಿಟಿಷರು ವ್ಯಾಪರದ ನೆಪದಲ್ಲಿ ಭಾರತಕ್ಕೆ ಬಂದು ನಮ್ಮನೆಲ್ಲ ತಮ್ಮ ಕರಾಳ ಕಪಿಮುಷ್ಟಿಯಲ್ಲಿಟ್ಟುಕೊಂಡು ಸುಮಾರು ಎರಡುವರೆ ಶತಮಾನಗಳ ಕಾಲ ನಮ್ಮನ್ನು ಆಳಿದ್ದೇ ಒಂದು ಅಳಿಸಲಾಗದ ಇತಿಹಾಸ.

ಭಾರತದ ಪವಿತ್ರ ಮಣ್ಣಿನಲ್ಲಿ ಉದಹಿಸಿದ ಕಲಿಗಳ ತ್ಯಾಗ, ಬಲಿದಾನ ಹಾಗೂ ಅವಿರತ ಹೋರಾಟಗಳ ಫಲವಾಗಿ 1947ರ ಆಗಸ್ಟ್ 15 ರಂದು ಮಧ್ಯರಾತ್ರಿಯಲ್ಲಿ ಬ್ರಿಟಿಷರು ಭಾರತದಿಂದ ಪಲಾಯನ ಕೈಗೊಂಡರು. ಆ ದಿನವನ್ನೇ ನಾವು ಸ್ವಾತಂತ್ರೋತ್ಸವವೆಂದು ಸಂಭ್ರಮದಿಂದ ಆಚರಿಸುತ್ತೇವೆ. ಆದರೆ ಇಂದು ಈ ಆಚರಣೆ ಹಾಗೂ ದೇಶಭಕ್ತಿ ಕೇವಲ ಒಂದು ದಿನದ ಮಟ್ಟಿಗೆ ಮಾತ್ರ ಎಂಬುದು ಕೆಲ ವಿಪರ್ಯಾಸಗಳಿಂದ ಸಾಬೀತಾಗುತ್ತದೆ.

ಪ್ರತಿ ವರ್ಷದಂತೆಯೇ ಈ ವರ್ಷವೂ ಸ್ವತಂತ್ರ್ಯೊತ್ಸವವನ್ನು ವಿಜೃಂಭಣೆಯಿಂದ ಸಂಭ್ರಮಿಸುತ್ತಿದ್ದೇವೆ. ಆದರೆ ಈ 73 ರ ಸ್ವಾತಂತ್ರ್ಯದ ಸಂಭ್ರಮಾಚರಣೆಯನ್ನು ಆಚರಿಸುವುದಕ್ಕು ಮುಂಚೆ ಈ ಬಾರಿ ದೇಶದ ಹಲವು ರಾಜ್ಯಗಳು ವರುಣನ ರೌದ್ರತೆಗೆ ಕೊಚ್ಚಿ ಹೋಗಿವೆ. ಇಲ್ಲಿ ಜನ ತಮ್ಮ ಜೀವನವನ್ನು ಉಳಿಸಿಕೊಳ್ಳಲು ಹೋರಾಡುವಂತಾಗಿದೆ ಎಂಬುದನ್ನು ಕೊಂಚ ಗಮನಿಸಬೇಕಾದ ಅನಿವಾರ್ಯತೆ ನಮ್ಮ ಮೇಲಿದೆ.

ಪ್ರಕೃತಿಯ ವಿಕೋಪಕ್ಕೆ ಸಿಲುಕಿ ನಲುಗುತ್ತಿರುವ ಜನಕ್ಕೆ ಈಗ ಬೇಕಾಗಿರುವುದು ಆಶ್ರಯ ಮತ್ತು ಸಹಕಾರ. ಸದ್ಯದ ಸ್ಥಿತಿಯಲ್ಲಿ ಮನೆ ಮಠ, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡ ಜನ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಬೆನ್ನಿಗೆ ನಿಂತು ಧೈರ್ಯ ತುಂಬಬೇಕಾದ ಬಹು ದೊಡ್ಡ ಜವಬ್ದಾರಿ ನಮ್ಮ ಮೇಲಿದೆ.

ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ನಾಯಕರು ಒಟ್ಟಾಗಿ ದೇಶಕ್ಕೆ ಒದಗಿ ಬಂದ ಸಂಕಷ್ಟವನ್ನು ಪರಿಹರಿಸುವಲ್ಲಿ ತೆಗೆದು ಕೊಳ್ಳಬೇಕಾದ ಕ್ರಮಗಳ ಬಗ್ಗೆ ತೀರ್ಮಾನ ಮಡಬೇಕಾಗಿದೆ. ರಾಜ್ಯಕ್ಕೆ ರಾಜ್ಯವೇ ನೀರಿನಲ್ಲಿ ಕೊಚ್ಚಿಹೋಗುತ್ತಿದೆ. ಮತ್ತೊಂದು ಕಡೆ ಮಳೆಯಲ್ಲಿ ಎಲ್ಲವನ್ನು ಕಳೆದುಕೊಂಡು ನಿರ್ಗತಿಕವಾಗಿರುವ ಕುಟುಂಬಗಳು ತುತ್ತು ಅನ್ನಬೇಡುತ್ತಿವೆ. ಹೀಗಿರುವಾಗ ನಾಯಕರು, ಸಾರ್ವಜನಿಕರು ಅವರ ಪರ ನಿಂತು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ.

ಪ್ರಚಲಿತ ನಮ್ಮ ಭಾರತದ ಸ್ಥಿತಿ ಹೀಗಿದ್ದರು ಸಹ ಅದೆಷ್ಟೋ ಪ್ರಜೆಗಳು ತಮಗೆ ಇದರ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಶ್ರೀಮಂತ ಭಾರತೀಯ ಪ್ರಜೆಗಳು ತಮ್ಮಲ್ಲಿಯ ಸ್ವಾರ್ಥ, ಅಸೂಹೆ, ದ್ವೇಷ ಇತ್ಯಾದಿಗಳನ್ನೆಲ್ಲ ಪ್ರದರ್ಶಿಸುತ್ತಿದ್ದಾರೆ. ಇನ್ನೂ ರಾಜಕಾರಣಿಗಳು ಸಮಸ್ಯೆಗಳನ್ನು ಎತ್ತಿ ತೋರಿಸುತ್ತಾ, ದೇಶವನ್ನು ನಿಂದಿಸುತ್ತಾ ವ್ಯರ್ಥ ಕಾಲಹರಣ ಮಾಡುತ್ತಾ, ಅವರ ಮೇಲೆ ಇವರು ಇವರ ಮೇಲೆ ಅವರು ಆರೋಪಿಸುತ್ತಾ ಹಗ್ಗಜಗ್ಗಾಟ ಮಾಡುತ್ತಿದ್ದಾರೆ.
ಇದನ್ನೆಲ್ಲಾ ನೋಡುತ್ತಿದ್ದರೆ ಒಮ್ಮೆಲೆ ನೆನಪಾಗುವುದು ಸಿದ್ದಲಿಂಗಯ್ಯ ಬರೆದಂತಹ ಸಾಲುಗಳು, ಅದೆಂದರೆ
“ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ? ಟಾಟ ಬಿರ್ಲಾ ಜೋಬಿಗೆ ಬಂತು ಜನಗಳ ತಿನ್ನುವ ಬಾಯಿಗೆ ಬಂತು ಕೋಟ್ಯಾಧೀಶನ ಕೊಣೆಗೆ ಬಂತು. ಆದರೆ ಬಡವನ ಮನೆಗೆ ಬರಲಿಲ್ಲ ಬೆಳಕ ತರಲಿಲ್ಲ” ಎಂಬ ಸಾಲುಗಳು ಅಕ್ಷರಶಃ ಸತ್ಯವೆನಿಸುತ್ತಿದೆ.
ನಮಗಂದು ಮಧ್ಯರಾತ್ರಿಯಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಬರೀ ಸ್ವಾತಂತ್ರ್ಯ ಹೋರಾಟಗಾರರು ಮಾತ್ರ ಎಚ್ಚರವಿದ್ದರು. ಉಳಿದವರೆಲ್ಲರೂ ಹಾಯಾಗಿ ಮಲಗಿಕೊಂಡಿದ್ದರು. ಇವಾಗಲೂ ಅಷ್ಟೇ ಅವರು ಮಲಗಿಕೊಂಡೆ ಇದಾರೆ.

ಸತ್ಪ್ರಜೆಗಳಾಗಿ ದೇಶಕಟ್ಟಲು ಶ್ರಮಿಸುವ ಬದಲು ಸತ್ತ ಪ್ರಜೆಗಳಾಗಿ ವಿಶ್ರಮಿಸುತ್ತಿದ್ದಾರೆ. ಅಲ್ಲದೇ ತಮ್ಮ ದೇಶದಲ್ಲಿರುವ ಸಂಪನ್ಮೂಲಗಳನ್ನು ರಕ್ಷಿಸಿಟ್ಟುಕೊಳ್ಳಲು ತಲೆ ಕೆಡಿಸಿಕೊಳ್ಳುವ ಬದಲು, ನಮ್ಮಲ್ಲಿ ಅದಿಲ್ಲ, ಇದಿಲ್ಲ ಎಂದು ದೇಶವನ್ನು ತೆಗಳುತ್ತಾ ದೇಶದ್ರೋಹಿ ಕೆಲಸ ಮಾಡುತ್ತಿದ್ದಾರೆ. ನಮ್ಮ ದೇಶದಲ್ಲಿ ಎಲ್ಲವೂ ಇದೆ. ಆದರೆ ಅದನ್ನು ಬಳಸಿಕೊಳ್ಳುವ ಕಲೆ ನಮಗೆ ಮಾತ್ರ ಗೊತ್ತಾಗದೆ ಹೋಗಿದೆ.

ರಾಮರಾಜ್ಯವಾಗಬೇಕಿದ್ದ ಭಾರತ ಕಾಮರಾಜ್ಯವಾಗಿದೆ. ನಿಷ್ಟನಾಗಬೇಕಿದ್ದ ಭಾರತೀಯ ಭ್ರಷ್ಟನಾಗಿದ್ದಾನೆ. ಜಗತ್ತಿಗೆ ಉಪದೇಶ ನೀಡುತ್ತಾ, ಜಗತ್ತನ್ನು ಸರಿ ದಾರಿಯಲ್ಲಿ ಮುನ್ನಡೆಸಬೇಕಿದ್ದ ಭಾರತೀಯ ತನಗೆ ದಾರಿಕಾಣದೆ ಪರದಾಡುತ್ತಿದ್ದಾನೆ. ತಲೆಯೆತ್ತಿ ಮೆರೆದಾಡಬೇಕಿದ್ದ ಭಾರತೀಯ ತಲೆತಗ್ಗಿಸಿಕೊಂಡು ಕೂಡುವಂಥಹ ಹೀನ ಕೃತ್ಯಗಳಿಗೆ ಕೈಹಾಕುತ್ತಿದ್ದಾನೆ. ‘ನಾನೇಕೆ ಹೀಗಾದೆ?’ ಎಂಬುದನ್ನು ಸ್ವತಃ ಅವನೇ ತನ್ನನ್ನು ತಾನು ಕೇಳಿಕೊಳ್ಳಬೇಕು.

ಸ್ವಾತಂತ್ರ್ಯ ಸಿಕ್ಕು 72 ವರ್ಷ ಉರುಳಿದರು ಭಾರತ ಅಭಿವೃದ್ಧಿಯತ್ತ ಸಾಗುತ್ತಿದೆಯೇ?

ಇವತ್ತು ಸ್ವಾತಂತ್ರ್ಯ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರೂ ಎಲ್ಲವೂ ಅಭಿವೃದ್ಧಿ ದಿಕ್ಕಿನಡೆಗೆ ಸಾಗಿದೆಯಾ? ಸಾಗಿಲ್ಲವಾದರೆ ಅದಕ್ಕೆ ಕಾರಣಗಳೇನು ಎಂಬುದರ ಬಗ್ಗೆಯೂ ಚಿಂತೆ ಮಾಡಬೇಕಾದ ಕಾಲ ಬಂದಿದೆ. ಯುವಕರಿಗೆ ಉದ್ಯೋಗ.. ಬೆಳೆಬೆಳೆದ ರೈತನಿಗೆ ಉತ್ತಮ ದರ.. ಶ್ರಮಜೀವಿಗಳಿಗೆ ತಕ್ಕಂತೆ ಫಲ.. ಹೆಣ್ಣು ಮಕ್ಕಳು ನಿರ್ಭಯವಾಗಿ ಬದುಕಬೇಕಾದ ವಾತಾವರಣ.. ಅಪರಾಧ ಕೃತ್ಯಗಳಿಗೆ ಕಡಿವಾಣ.. ಭ್ರಷ್ಟಚಾರ ನಿಗ್ರಹ.. ಹೀಗೆ ಒಂದೇ ಎರಡೇ ಆಗಬೇಕಾಗಿದ್ದು ಬಹಳಷ್ಟಿದೆ. ಇದೆಲ್ಲವೂ ಸರಿಹೋದ ದಿನ ಸ್ವಾತಂತ್ರ್ಯ ದಿನಾಚರಣೆಗೆ ಅರ್ಥ ಬರುತ್ತದೆ. ಇಲ್ಲದೆ ಹೋದರೆ ಆಚರಣೆಗಷ್ಟೆ ಸೀಮಿತವಾಗುವುದು. ಹಾಗಾಗದಿರಲಿ ಎಂಬುದೇ ನಮ್ಮ ಆಶಯ.

ಯಂಗ್ ಇಂಡಿಯಾದಲ್ಲಿ ಶಕ್ತಿ ವ್ಯರ್ಥ ಮಾಡುತ್ತಿರುವ ನಮ್ಮ ಯುವಜನತೆಗೆ ಏನಾಗಿದೆ..?

ಭಗತ್‍ಸಿಂಗ್, ಸುಖದೇವ್, ರಾಜಗುರ್, ಸುಭಾಶ್‍ಚಂದ್ರ ಭೋಸ್, ಚಂದ್ರಶೇಕರ್ ಅಜಾದ್ ಸೇರಿದಂತೆ ಅನೇಕರು ನಮ್ಮ ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ. ಅಂದಿನ ಯುವ ಜನಾಂಗದ ತ್ಯಾಗ ಮಹನೀಯ. ಆದರಿಂದು ‘ಯಂಗ್ ಇಂಡಿಯಾ’ ಎಂದೇ ಖ್ಯಾತಿ ಪಡೆದ ನಮ್ಮ ದೇಶದೊಳಗಿರುವ ಯುವ ಜನರು ಭೋಗ ಜೀವನ ಅನುಭವಿಸುವ ಸಲುವಾಗಿ ಕೆಲವರು ಹತಾಶರಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಪ್ರತಿಭಾವಂತರು ಐ.ಟಿ, ಬಿ.ಟಿಗಳ ಸಂಸ್ಕøತಿಯ ಗುಂಗಿನಲ್ಲಿ ಮುಳುಗಿ ಹಣಗಳಿಸುವ ದಂಧೆಯನ್ನು ಮಾಡುತ್ತಿದ್ದಾರೆ. ಇನ್ನು ಕೆಲವರು ರಾಷ್ಟ್ರ ವಿರೋಧಿ ಭಯೋತ್ಪಾದನೆ ಮತ್ತು ಇತರ ಸಮಾಜಘಾತಕ ಶಕ್ತಿಗಳ ಕಪಿಮುಷ್ಠಿಯಲ್ಲಿ ಬಂಧಿತರಾಗಿದ್ದಾರೆ. ಹಲವಾರು ಮಜ, ಮದಿರೆ, ಮಾನನಿಯರ ಮಮಕಾರಗಳಿಗೆ ಒಳಗಾಗಿ ಪ್ರಪತಕ್ಕಿಳಿದಿದ್ದಾರೆ.

ನಮ್ಮ ದೇಶದಲ್ಲಿ ನಡೆಯುತ್ತಿರುವ ಆತ್ಮಹತ್ಯೆ, ಲೈಂಗಿಕ ದೌರ್ಜನ್ಯ, ಭ್ರಷ್ಟಚಾರ, ಜಾತೀಯತೆ, ಕೋಮುವಾದಿತನ, ಉಗ್ರವಾದಿತನ, ಕಾರ್ಮಿಕರ ಅರೆಬರೆ ಹೊಟ್ಟೆ ಇವು ಯಾವುವೂ ಯುವ ಜನಾಂಗದ ಎದೆಯ ಬಾಗಿಲನ್ನು ತಟ್ಟಿಲ್ಲ. ಇವೆಲ್ಲವನ್ನು ನೋಡಿದರೆ ಅನಿಸುತ್ತದೆ ಅಂದು ಆ ಮಹನೀಯರು ಇಂತಹ ಯುವ ಪೀಳಿಗೆಗಾಗಿ ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಎಲ್ಲಿ ಅಡಗಿದೆ ಈ ಯಂಗ್ ಇಂಡಿಯಾದ ಯೌವ್ವನ? ಏನಯ್ತು ನಮ್ಮ ಶಕ್ತಿ? ನಿಮ್ಮ ಮೌಲ್ಯಗಳು ಏನದವು? ಯುವಕರೇ ಇನ್ನಾದರೂ ಎಚ್ಚೆತ್ತುಕೊಂಡು ಹೊಸ ಚಿಂತನೆ, ಆಲೋಚನೆ ಹಾಗೂ ಅತ್ಮವಿಶ್ವಾಸ ಬೆಳೆಸಿಕೊಳ್ಳಬೇಕಾಗಿದೆ.

ಯಾವುದೋ ಕುಲುಮೆ ಅಥವಾ ಕಾರ್ಖಾನೆಗಳಲ್ಲಿ ನಯಕತ್ವ ತಯಾರಾಗುವುದಿಲ್ಲ, ಇಲ್ಲಿರುವ ಪ್ರತಿಯೊಬ್ಬ ಯುವಕ ಯುವತಿ ಸಹ ನಾಯಕರೇ.. ಆ ನಾಯಕತ್ವ ಗುಣ ನಮ್ಮಹೃದಯಾಂತರಾಳದಿಂದ ಹುಟ್ಟಬೇಕು. ನೊಂದವರಿಗೆ, ಕಷ್ಟದಲ್ಲಿರುವವರಿಗೆ ಅಂತಃಕರಣದಿಂದ ಸಹಾಯ ಮಾಡುವ ತುಡಿತವೇ ನಾಯಕನ ಪ್ರಧಾನ ಗುಣ. ಇದನ್ನು ಬೆಳೆಸಿಕೊಂಡು, ಜೊತೆಗೆ ನಮ್ಮ ವ್ಯಕ್ತಿತ್ವ ವಿಕಾಸ, ಮೌಲ್ಯವನ್ನು ಅರಿತುಕೊಂಡು ಇನ್ನಾದರೂ ನಮ್ಮ ದೇಶಕ್ಕಾಗಿ ಚಿಂತಿಸೋಣ.

ಒಟ್ಟಾರೆಯಾಗಿ ಹೇಳುವುದಾದರೆ ತ್ಯಾಗಿಗಳಿಂದ ಪಡೆದ ಸ್ವಾತಂತ್ರ್ಯವನ್ನು ಹಾಳುಗೆಡಹದೆ ಕಾಪಾಡಿಕೊಳ್ಳಬೇಕು. ಬರಿ ಒಂದು ದಿನದ ಮಟ್ಟಿಗೆ ತೋರಿಕೆಯ ದೇಶಪ್ರೇಮ ಪ್ರದರ್ಶಿಸದೇ ನಿಜವಾದ ದೇಶಪ್ರೇಮಿಗಳಾಗಿ ದೇಶವನ್ನು ರಕ್ಷಿಸಿ, ಪ್ರೀತಿಸಿ. ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸಲು ಪ್ರಾಮಾಣಿಕವಾಗಿ ಶ್ರಮಿಸಿ. “ಹೆತ್ತಮ್ಮನಿಗ ಹೆಗ್ಗಣ ಮುದ್ದು” ಎಂಬಂತೆ ನಮ್ಮ ದೇಶದಲ್ಲಿ ಏನೇ ಕುಂದು ಕೊರತೆಗಳಿದ್ದರೂ ನಮ್ಮ ದೇಶವನ್ನು ಪ್ರೀತಿಸಿರಿ, ಪೂಜಿಸಿರಿ. ಏಕೆಂದರೆ ಭಾರತ ಸೂರ್ಯ- ಚಂದ್ರರಿರುವರೆಗೂ ಚಿನ್ನದ ಗುಬ್ಬಚ್ಚಿ.

ಪ್ರೀತಿ.ಟಿ.ಎಸ್
ಪತ್ರಿಕೋದ್ಯಮ ವಿದ್ಯಾರ್ಥಿನಿ, ದಾವಣಗೆರೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ

‘ಝೀ ವಾಹಿನಿ’ಯಲ್ಲಿ ಅಂತರ್‌ ಕಲಹ ಮತ್ತೊಂದು ಕೂಗುಮಾರಿ ವಾಹಿನಿಗೆ ಹಾದಿ..!

Published

on

ವಿದ್ಯುನ್ಮಾನ ಸುದ್ಧಿಮಾಧ್ಯಮಗಳಿಗೆ ಕಾರ್ಪೋರೇಟ್‌ ಮಾರುಕಟ್ಟೆಯೇ ಸರ್ವಸ್ವ

  • ನಾ ದಿವಾಕರ

ಕಳೆದ ಎರಡು ದಶಕಗಳಲ್ಲಿ ಕಾರ್ಪೋರೇಟ್‌ ಸ್ನೇಹಿ ಬಂಡವಾಳ ವ್ಯವಸ್ಥೆಯ ಒಂದು ಭಾಗವಾಗಿಯೇ ತನ್ನ ಅಸ್ತಿತ್ವವನ್ನು ಕಂಡುಕೊಂಡಿರುವ ಭಾರತದ ಮಾಧ್ಯಮ ಜಗತ್ತಿನಲ್ಲಿ ಯಾವುದೇ ವ್ಯತ್ಯಯ ಸಂಭವಿಸಿದರೂ ಅದರ ಹಿಂದೆ ಮಾರುಕಟ್ಟೆಯ ಕಾರಣಗಳಿರುವಂತೆಯೇ ರಾಜಕೀಯ ಕಾರಣಗಳೂ ಇರುತ್ತವೆ.

ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾವಲುಕಾಯುವಂತಿರಬೇಕಾದ ಮಾಧ್ಯಮಗಳು ಆಳುವ ವರ್ಗಗಳ ವಂದಿಮಾಗಧರಾಗಿರುವುದೇ ಅಲ್ಲದೆ ವ್ಯವಸ್ಥೆಯ ಒಂದು ಭಾಗವೇ ಆಗಿಹೋಗಿರುವುದರಿಂದ, ಮಾಧ್ಯಮ ಲೋಕದಲ್ಲಿ ನಡೆಯುವ ಯಾವುದೇ ಬದಲಾವಣೆಗಳನ್ನು ಸೂಕ್ಷ್ಮವಾಗಿಯೇ ಗಮನಿಸಬೇಕಾಗುತ್ತದೆ. ಕಳೆದ ಎಂಟು ವರ್ಷಗಳಲ್ಲಿ ತಮ್ಮ ಸ್ವಾಯತ್ತತೆ, ಸ್ವಂತಿಕೆ ಮತ್ತು ಸ್ವಾತಂತ್ರ್ಯವನ್ನು ಸ್ವತಃ ತಾವೇ ಕಳೆದುಕೊಂಡು, ಮಾರುಕಟ್ಟೆಯ ಬಂಡವಾಳ ಮತ್ತು ಆಳುವ ವ್ಯವಸ್ಥೆಯ ಬೇಕುಬೇಡಗಳನ್ನು ಅವಲಂಬಿಸಿರುವ ಭಾರತದ ಮಾಧ್ಯಮ ಲೋಕ, ವಿಶೇಷವಾಗಿ ವಿದ್ಯುನ್ಮಾನ ಸುದ್ದಿಮನೆಗಳ ಲೋಕ ಈ ಜಟಿಲತೆಯ ನಡುವೆಯೇ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳಬೇಕಿದೆ.

ಕೇವಲ ಒಂದೆರಡು ದಶಕಗಳ ಹಿಂದೆ ಸಾರ್ವಜನಿಕರ ದೃಷ್ಟಿಯಲ್ಲಿ ವ್ಯವಸ್ಥೆಯ ಓರೆಕೋರೆಗಳನ್ನು ಎತ್ತಿತೋರುವ ಮತ್ತು ನೊಂದ ಜನತೆಯನ್ನು ಕೊಂಚಮಟ್ಟಿಗಾದರೂ ಪ್ರತಿನಿಧಿಸುವ ವಾಹಿನಿಗಳಾಗಿದ್ದ ಮಾಧ್ಯಮ ಇಂದು ಬಹುತೇಕವಾಗಿ, ವ್ಯವಸ್ಥೆಯ ಸಮರ್ಥನೆಯ ವೇದಿಕೆಗಳಾಗಿ ಬದಲಾಗಿವೆ. ಮುದ್ರಣ ಮಾಧ್ಯಮಗಳು ಕಾರ್ಪೋರೇಟ್‌ ಬಂಡವಾಳ ವ್ಯವಸ್ಥೆಯ ಜಾಹೀರಾತು ಆಮಿಷಗಳಿಗೆ ಬಲಿಯಾಗಿದ್ದರೆ, ವಿದ್ಯುನ್ಮಾನ ಮಾಧ್ಯಮಗಳು ಮಾರುಕಟ್ಟೆ ಆಧಾರಿತ ಟಿಆರ್‌ಪಿ ರೇಟಿಂಗ್‌ಗಳಿಗಾಗಿ ತಮ್ಮ ಸ್ವಂತಿಕೆಯನ್ನೂ ಕಳೆದುಕೊಂಡು ಬೆತ್ತಲಾಗುತ್ತಿವೆ.

ವಿದ್ಯುನ್ಮಾನ ಸುದ್ದಿಮನೆಗಳು ಸೃಷ್ಟಿಸಿರುವ ಕೂಗುಮಾರಿ ಸಂಸ್ಕೃತಿ ಎಲ್ಲ ಭಾಷೆಗಳಿಗೂ ವ್ಯಾಪಿಸುತ್ತಿದ್ದು, ತಮ್ಮ ಮಾರುಕಟ್ಟೆ ರೇಟಿಂಗ್‌ ಹೆಚ್ಚಿಸಿಕೊಳ್ಳುವ ಪೈಪೋಟಿಯಲ್ಲಿ ಸುಳ್ಳು ಸುದ್ದಿಗಳನ್ನು ವೈಭವೀಕರಿಸುವ ಮತ್ತು ಸತ್ಯವನ್ನು ಮರೆಮಾಚುವ ಒಂದು ವ್ಯವಸ್ಥಿತ ದಂಧೆಗೆ ಮಾಧ್ಯಮ ಲೋಕ ಅವಕಾಶಗಳನ್ನು ಕಲ್ಪಿಸಿದೆ. ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಕೇರಳದ ವಯನಾಡಿನಲ್ಲಿ ನೀಡಿದ ಹೇಳಿಕೆಯ ಬಗ್ಗೆ ಝೀ ಸುದ್ದಿವಾಹಿನಿ ಕ್ಷಮೆ ಯಾಚಿಸಿರುವುದು, ಟೈಂಸ್‌ನೌ ವಾಹಿನಿಯ ನಾವಿಕಾ ಕುಮಾರ್‌ ನೂಪುರ್‌ ಶರ್ಮ ವಿವಾದದ ಕೇಂದ್ರಬಿಂದುವಾಗಿರುವುದು, ಕನ್ನಡದ ಪಬ್ಲಿಕ್‌ ಟಿವಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳಿಗೆ ಅವಕಾಶ ಮಾಡಿಕೊಟ್ಟು ನಂತರ ಕ್ಷಮೆ ಕೋರಿರುವುದು ಇವೆಲ್ಲವೂ ಮಾಧ್ಯಮ ಲೋಕದ ಅವನತಿಯ ಸಂಕೇತಗಳೇ ಆಗಿವೆ.

ಈ ಅವನತಿಯ ಹಾದಿಯಲ್ಲೇ ದೇಶದ ಪ್ರತಿಷ್ಠಿತ ಸುದ್ದಿಮನೆಯ ನಿರೂಪಕರೊಬ್ಬರ ನಿರ್ಗಮನ ಸುದ್ದಿಯಲ್ಲಿದೆ. ಇಂದು ಯಾವುದೇ ವಿದ್ಯುನ್ಮಾನ ಸುದ್ದಿಮನೆಯನ್ನು ಗಮನಿಸಿದರೂ, ಅದು ಒಬ್ಬ ನಿರೂಪಕನ ಮೂಲಕವೇ ಗುರುತಿಸಿಕೊಂಡಿರುತ್ತದೆ. ಈ ನಿರೂಪಕರು ಬಹುಪಾಲು ಸಂದರ್ಭಗಳಲ್ಲಿ ಕೂಗುಮಾರಿ ಸಂಸ್ಕೃತಿಯ ಪರಿಚಾರಕರಾಗಿಯೇ ಇರುತ್ತಾರೆ. ಒಂದೆರಡು ವಾಹಿನಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ಇಂತಹ ಕೂಗುಮಾರಿ ನಿರೂಪಕರಿಂದಲೇ ತಮ್ಮ ಟಿಆರ್‌ಪಿ ರೇಟಿಂಗ್‌ ಹೆಚ್ಚಿಕೊಳ್ಳುತ್ತವೆ.

ಕನ್ನಡದ ಮಾಧ್ಯಮ ಲೋಕದಲ್ಲಿ ಎಲ್ಲವೂ ಇದೇ ಮಾದರಿಯನ್ನು ಅನುಸರಿಸುತ್ತಿವೆ. ಹಿಂದಿ ವಾಹಿನಿಗಳ ಪೈಕಿ ಕೆಲವು ಈ ಸಂಸ್ಕೃತಿಗೆ ಹೊರತಾಗಿವೆ. ಇಂತಹ ಕೂಗುಮಾರಿ ಸಂಸ್ಕೃತಿಯ ಪರಿಚಾರಕರಲ್ಲೊಬ್ಬರಾದ ಸುಧೀರ್‌ ಚೌಧರಿ ಝೀ ನ್ಯೂಸ್‌ ವಾಹಿನಿಯಿಂದ ನಿರ್ಗಮಿಸಿದ್ದಾರೆ. ಮಾರುಕಟ್ಟೆಯಲ್ಲೂ ಅತ್ಯಂತ ಜನಪ್ರಿಯ ನಿರೂಪಕರಲ್ಲಿ ಒಬ್ಬರಾಗಿ ಖ್ಯಾತಿ ಗಳಿಸಿರುವ ಸುಧೀರ್‌ ಚೌಧರಿಯ ನಿರ್ಗಮನಕ್ಕೆ ತಾತ್ವಿಕ ಅಥವಾ ಸೈದ್ಧಾಂತಿಕ ಕಾರಣಗಳಿಗಿಂತಲೂ ವ್ಯಕ್ತಿಗತ, ವಾಣಿಜ್ಯಾಸಕ್ತಿಗಳೇ ಪ್ರಧಾನವಾಗಿರುವುದು ಸ್ಪಷ್ಟವಾಗಿದೆ.

ಝೀ ನ್ಯೂಸ್‌ ಇಂದಿಗೂ ಭಾರತದಲ್ಲಿ ಪ್ರಥಮ ಶ್ರೇಣಿಯಲ್ಲಿರುವ ಒಂದು ಸುದ್ದಿಮನೆ. ಭಾರತವು ಮಾರುಕಟ್ಟೆ ಅರ್ಥವ್ಯವಸ್ಥೆಗೆ ತೆರೆದುಕೊಂಡು, ಮಾಧ್ಯಮ ಲೋಕವೂ ಸಹ ಬದಲಾದ ಸನ್ನಿವೇಶಕ್ಕೆ ತಕ್ಕಂತೆ ತನ್ನದೇ ಆದ ಮಾರುಕಟ್ಟೆ ತಂತ್ರಗಳನ್ನು ಅನುಸರಿಸಲಾರಂಭಿಸಿದಾಗ, 1990ರಲ್ಲೇ ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆ ಇಟ್ಟವರು ಝೀ ನ್ಯೂಸ್‌ನ ಮಾಲೀಕರಾದ ಸುಭಾಷ್‌ ಚಂದ್ರ. ಮಾಜಿ ರಾಜ್ಯಸಭಾ ಸದಸ್ಯರೂ ಆಗಿರುವ ಸುಭಾಷ್‌ ಚಂದ್ರ ಭಾರತದ ವಿದ್ಯುನ್ಮಾನ ಮಾಧ್ಯ ಲೋಕಕ್ಕೆ ಮಾರುಕಟ್ಟೆ ಸ್ಪರ್ಶ ನೀಡಿದ್ದೇ ಅಲ್ಲದೆ, ಪಶ್ದಿಮ ರಾಷ್ಟ್ರಗಳ ಮಾಧ್ಯಮ ವಲಯಕ್ಕೆ ಸರಿಸಮಾನವಾದ ಒಂದು ಆಧುನಿಕ ಸ್ವರೂಪವನ್ನು ನೀಡುವುದರಲ್ಲೂ ಯಶಸ್ವಿಯಾಗಿದ್ದಾರೆ.

ಇಂದು ಭಾರತದಲ್ಲಿ ನೂರಾರು ಟಿವಿ ವಾಹಿನಿಗಳಿದ್ದರೂ, ಇವೆಲ್ಲದರ ಜನಕ ಎಂದರೆ ಝೀ ಟೀವಿ ವಾಹಿನಿ ಎಂದು ನಿಸ್ಸಂಶಯವಾಗಿ ಹೇಳಬಹುದು. ಈ ವಾಹಿನಿಯಿಂದಲೇ ಕವಲೊಡೆದ ಹಲವಾರು ವಾಹಿನಿಗಳು ಇಂದು ನಮ್ಮ ನಡುವೆ ಇದೆ, ಹಾಗೆಯೇ ಝೀ ವಾಹಿನಿಯಿಂದಲೇ ತಮ್ಮ ವೃತ್ತಿ ಬದುಕು ಆರಂಭಿಸಿದ ಅನೇಕ ಪತ್ರಕರ್ತರು, ನಿರೂಪಕರು ಇಂದು ವಿವಿಧ ವಾಹಿನಿಗಳಲ್ಲಿ ತಮ್ಮ ನೆಲೆ ಕಂಡುಕೊಂಡಿದ್ದಾರೆ.

ವಿದ್ಯುನ್ಮಾನ ಮಾಧ್ಯಮದ ಪತ್ರಿಕೋದ್ಯೋಗಿಗಳ ಪೈಕಿ ಮೊದಲ ಪೀಳಿಗೆಯವರೆಂದೇ ಗುರುತಿಸಲ್ಪಟ್ಟಿರುವ ಸುಧೀರ್‌ ಚೌಧರಿ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದೇ ಝೀ ನ್ಯೂಸ್‌ ವಾಹಿನಿಯ ಮೂಲಕ. 24 ಗಂಟೆಗಳ ಸುದ್ದಿ ಪ್ರಸರಣ ಜನಪ್ರಿಯವಾಗುವುದರ ಹಿಂದೆ ಸುಧೀಂದ್ರ ಚೌಧರಿ ಅವರ ಕೊಡುಗೆಯೂ ಇದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. 2001ರಲ್ಲಿ ಭಾರತೀಯ ಸಂಸತ್‌ ಭವನದ ಮೇಲೆ ಭಯೋತ್ಪಾದಕ ದಾಳಿ ನಡೆದ ನಂತರ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತು ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್‌ ಮುಷರಫ್‌ ನಡುವೆ ನಡೆದ ಮಾತುಕತೆಗಳ ಸಂದರ್ಭದಲ್ಲಿ ಈ ಸಭೆಯ ಕಲಾಪಗಳನ್ನು ವರದಿಮಾಡಲು ನಿಯೋಜಿಸಲಾಗಿದ್ದ ತಂಡದಲ್ಲಿ ಸುಧೀರ್‌ ಚೌಧರಿ ಪ್ರಮುಖರಾಗಿದ್ದರು.

2003ರಲ್ಲಿ ಝೀ ನ್ಯೂಸ್‌ ವಾಹಿನಿಯನ್ನು ತೊರೆದು ಸಹಾರ ಸಮಯ್‌ ವಾಹಿನಿಯನ್ನು ಆರಂಭಿಸುವುದಕ್ಕೆ ಒತ್ತಾಸೆಯಾಗಿ ನಿಂತಿದ್ದರು. ಸಹಾರ ಉದ್ಯಮ ಸಮೂಹದ ಈ ಹಿಂದಿ ವಾಹಿನಿ ಹೆಚ್ಚು ಕಾಲ ಊರ್ಜಿತವಾಗಲಿಲ್ಲ. ನಂತರ ಸುಧೀರ್‌ ಇಂಡಿಯಾ ಟಿವಿ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಪುನಃ ತಮ್ಮ ತವರಿಗೆ, ಝೀ ನ್ಯೂಸ್‌ ವಾಹಿನಿಗೆ ಬಂದು ಸೇರಿಕೊಂಡಿದ್ದು, ನಿತ್ಯ ಸುದ್ದಿ ಮತ್ತು ವಿಶ್ಲೇಷಣೆಯ ವಿಭಾಗದಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ತಮ್ಮದೇ ಆದ ಸ್ವಂತ ವಾಹಿನಿಯನ್ನು ಆರಂಭಿಸುವ ಇಚ್ಚೆಯೊಂದಿಗೆ ನಿರ್ಗಮಿಸಿದ್ದಾರೆ.

ನಾ ದಿವಾಕರ, ಲೇಖಕರು

ಸುಧೀರ್‌ ಚೌಧರಿ ತಮ್ಮ ವೃತ್ತಿ ಜೀವನದಲ್ಲಿ ಅನೇಕ ಏಳುಬೀಳುಗಳನ್ನೂ ಎದುರಿಸಿದ್ದಾರೆ. ವಾಣಿಜ್ಯೋದ್ಯಮಿ ನವೀನ್‌ ಜಿಂದಾಲ್ ಅವರಿಂದ ಹಣವಸೂಲಿ ಮಾಡುವ ಆರೋಪಕ್ಕೆ ಸಿಲುಕಿದ್ದ ಚೌಧರಿ 2012ರಲ್ಲಿ ಬಂಧನಕ್ಕೊಳಗಾಗಿದ್ದರು. ಈ ಸಂಬಂಧ ಸುದ್ದಿ ಪ್ರಸರಣ ಸಂಪಾದಕರ ಸಂಘದ ಖಜಾಂಚಿಯೂ ಆಗಿದ್ದ ಸುಧೀರ್‌ ಅವರನ್ನು ಸಂಘದಿಂದ ಉಚ್ಚಾಟಿಸಲಾಗಿತ್ತು. 2018ರಲ್ಲಿ ಪರಸ್ಪರ ರಾಜಿ ಸೂತ್ರದ ಮೂಲಕ ಈ ವಿವಾದ ಬಗೆಹರಿದಿತ್ತು.

ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೋಯಿತ್ರಾ ಅವರು ತಮ್ಮ ಭಾಷಣವೊಂದರಲ್ಲಿ ಟ್ರೂಮನ್‌ ಲಾಂಗ್‌ಮನ್‌ ಅವರಿಂದ ಕೃತಿಚೌರ್ಯ ಮಾಡಿದ್ದಾರೆ ಎಂದು ಆರೋಪಿಸಿ ಸುಧೀರ್‌ ಚೌಧರಿ ಮೊಯಿತ್ರಾ ಅವರಿಂದ ಮಾನನಷ್ಟ ಮೊಕದ್ದಮೆ ಎದುರಿಸಬೇಕಾಯಿತು. ನಂತರ ಸ್ವತಃ ಲಾಂಗ್‌ಮನ್‌ ಅವರೇ ಈ ಆರೋಪವನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಝೀ ನ್ಯೂಸ್‌ ಕ್ಷಮಾಪಣೆ ಕೇಳಬೇಕಾಯಿತು. ಕೋವಿದ್‌ 19 ಸಂದರ್ಭದಲ್ಲಿ ಕೋಮು ಪ್ರಚೋದಕ ಸುದ್ದಿಗಾಗಿಯೇ ಸುಧೀರ್‌ ಇಸ್ಲಾಂ ಭೀತಿ ಸೃಷ್ಟಿಸುವ ಆರೋಪಕ್ಕೆ ಗುರಿಯಾಗಿದ್ದರು. ಈ ಆರೋಪಗಳ ಹೊರತಾಗಿಯೂ ಸುಧೀರ್‌ ಒಬ್ಬ ನಿರೂಪಕರಾಗಿ ಝೀ ಸುದ್ದಿವಾಹಿನಿಯನ್ನು ಮಾರುಕಟ್ಟೆಯಲ್ಲಿ ಒಂದು ಪ್ರಬಲ ದನಿಯಾಗಿ ಕಾಪಾಡಿಕೊಂಡು ಬಂದಿದ್ದು ವಾಸ್ತವ.

ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಬಲಪಂಥೀಯ ರಾಜಕಾರಣ ಬಲವಾಗುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ವ್ಯವಸ್ಥೆಯ ಪರವಾಗಿಯೇ ತಮ್ಮ ಸುದ್ದಿ ನಿರೂಪಣೆಯನ್ನು ನಿರ್ವಹಿಸುವ ಮೂಲಕ ಸುಧೀರ್‌ ಚೌಧರಿ ಜನಪ್ರಿಯತೆಯನ್ನೂ ಗಳಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಬಲವಾಗಿ ಸಮರ್ಥನೆ ಮಾಡಿಕೊಳ್ಳುವುದೇ ಅಲ್ಲದೆ, ತಮ್ಮ ಸುದ್ದಿ ನಿರೂಪಣೆಯ ಮೂಲಕ ಮತ್ತು ಝೀ ವಾಹಿನಿಯಲ್ಲಿ ಏರ್ಪಡಿಸುವ ಚರ್ಚೆಗಳ ಮೂಲಕ ಸರ್ಕಾರದ ನೀತಿಗಳನ್ನು ಸಾರ್ವಜನಿಕ ವಲಯದಲ್ಲಿ ಜನಪ್ರಿಯಗೊಳಿಸುವ ಮೂಲಕ ಸುಧೀರ್‌ ಚೌಧರಿ ವ್ಯವಸ್ಥೆಯ ಪರವಾದ ಒಂದು ದನಿಯಾಗಿ ಕಂಡುಬಂದಿದ್ದಾರೆ.

ಬಹುಶಃ ಈ ಹಿನ್ನೆಲೆಯಲ್ಲೇ ತಮ್ಮದೇ ಆದ ಸ್ವಂತ ವಾಹಿನಿಯನ್ನು ಆರಂಭಿಸುವ ಇಚ್ಚೆಯೊಂದಿಗೆ ಸುಧೀರ್‌ ಚೌಧರಿ ಝೀ ವಾಹಿನಿಯಿಂದ ನಿರ್ಗಮಿಸಿದ್ದಾರೆ. ಆಂತರಿಕವಾಗಿ ಝೀ ಸಮೂಹದ ಮಾಲೀಕ ಸುಭಾಷ್‌ ಚಂದ್ರ ಅವರು ಇತ್ತೀಚಿನ ದಿನಗಳಲ್ಲಿ ಸುಧೀರ್‌ ಚೌಧರಿಯನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದ್ದರು ಎಂಬ ಆರೋಪವೂ ಕೇಳಿಬರುತ್ತಿದೆ. 2021ರಲ್ಲಿ ಎಬಿಪಿ ನ್ಯೂಸ್‌ ವಾಹಿನಿಯಿಂದ ಬಂದು, ಝೀ ನ್ಯೂಸ್‌ನ ಕಂಟೆಂಟ್‌ ಅಧಿಕಾರಿ ಮತ್ತು ಸಂಪಾದಕರಾಗಿ ನಿಯೋಜಿತರಾದ ರಜನೀಶ್‌ ಅಹುಜಾ ಮತ್ತು ಸುಧೀರ್‌ ಚೌಧರಿ ನಡುವೆ ಇದ್ದ ಅಧಿಕಾರ ಸಂಘರ್ಷವೂ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.

ಇತ್ತೀಚಿನ ರಾಜ್ಯಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುಭಾಷ್‌ ಚಂದ್ರ ಸೋಲು ಅನುಭವಿಸಿದ ನಂತರ, ಝೀ ನ್ಯೂಸ್‌ ಕೆಲವು ಸಂದರ್ಭಗಳಲ್ಲಿ ತಟಸ್ಥ ನೀತಿಯನ್ನೂ ಅನುಸರಿಸಲಾರಂಭಿಸಿತ್ತು. ಅಸ್ಸಾಂ ಕುರಿತು ಪ್ರಸಾರವಾದ ಒಂದು ಷೋನಲ್ಲಿ ಇದು ಸ್ಪಷ್ಟವಾಗಿದ್ದು, ಈ ಬೆಳವಣಿಗೆಗಳಿಗೆ ಸುಧೀರ್‌ ಚೌಧರಿ ಸಮ್ಮತಿ ಇರಲಿಲ್ಲ ಎಂದೂ ಹೇಳಲಾಗುತ್ತಿದೆ. ಮಾಧ್ಯಮ ಮಾರುಕಟ್ಟೆಯಲ್ಲಿ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿರುವ ಸುಧೀರ್‌ ಚೌಧರಿ ಝೀ ವಾಹಿನಿಯ ಇತ್ತೀಚಿನ ತಟಸ್ಥ ನೀತಿಯಿಂದ ಅಸಮಾಧಾನಗೊಂಡಿದ್ದರೆಂದೂ ಹೇಳಲಾಗುತ್ತಿದೆ.

ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಸ್ಪರ್ಧಿಸಿ, ಸೋಲು ಅನುಭವಿಸಿದ ನಂತರ ಝೀ ನ್ಯೂಸ್‌ ಮಾಲೀಕ ಸುಭಾಷ್‌ ಚಂದ್ರ ತಮ್ಮ ಸಂಸ್ಥೆಯ ಕೆಲವು ಸಿಬ್ಬಂದಿಯ ವಿರುದ್ಧ ಅಸಮಾಧಾನಗೊಂಡಿದ್ದು, ಇದರ ಪರಿಣಾಮವೇ ಸುಧೀರ್‌ ಚೌಧರಿ ಸಹ ನಿರ್ಗಮಿಸಿದ್ದಾರೆ ಎಂದು ನ್ಯೂಸ್‌ ಲಾಂಡ್ರಿ ಸುದ್ದಿವಾಹಿನಿ ಹೇಳಿದೆ. ಇದೇ ಸಂದರ್ಭದಲ್ಲಿ ಸುಧೀರ್‌ ಚೌಧರಿ ಬಹುಮಟ್ಟಿಗೆ ಝೀ ನ್ಯೂಸ್‌ ವಾಹಿನಿಯ ಮುಖವಾಣಿಯಂತಾಗಿದ್ದುದು ಸುಭಾಷ್‌ ಚಂದ್ರ ಅವರ ಅಸಹನೆಗೆ ಕಾರಣವಾಗಿರಬಹುದು.

ಈ ಆಂತರಿಕ ಬಿಕ್ಕಟ್ಟುಗಳ ಹೊರತಾಗಿಯೂ, ಭಾರತದ ಪ್ರಸ್ತುತ ಸಂದರ್ಭದಲ್ಲಿ ಆಡಳಿತಾರೂಢ ಪಕ್ಷಗಳಿಗೆ ಮತ್ತು ಕಾರ್ಪೋರೇಟ್‌ ಮಾರುಕಟ್ಟೆಗೆ ತನ್ನದೇ ಆದ ಮಾಧ್ಯಮ ಮುಖವಾಣಿಗಳ ಅವಶ್ಯಕತೆ ಹೆಚ್ಚಾಗಿದೆ. ಸರ್ಕಾರದ ಪರ ವಕಾಲತ್ತು ವಹಿಸುವ ಮತ್ತು ಸರ್ಕಾರದ ನೀತಿಗಳನ್ನು ಸಮರ್ಥಿಸುತ್ತಲೇ ಸಾರ್ವಜನಿಕರ ನಡುವೆ ಒಂದು ಸಕಾರಾತ್ಮಕ ಅಭಿಪ್ರಾಯವನ್ನು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು, ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿರುವುದು ಗುಟ್ಟಿನ ಮಾತೇನಲ್ಲ. ಪ್ರಜಾತಂತ್ರ ವ್ಯವಸ್ಥೆಯ ಒಂದು ಪ್ರಮುಖ ಅಂಗವಾಗಿ ಸಾರ್ವಜನಿಕರ ನಡುವೆ ಸದಾ ಜಾಗೃತಾವಸ್ಥೆಯಲ್ಲಿರುವ ಒಂದು ಸಂಸ್ಥೆಯಾಗಿ ಮಾಧ್ಯಮವೂ ಮುಖ್ಯವಾಗುತ್ತದೆ.

ಆಡಳಿತಾರೂಢ ಪಕ್ಷಗಳು ಈ ಮಾಧ್ಯಮಗಳ ಮೂಲಕ, ವಾಹಿನಿಗಳ ಮೂಲಕ ತಮ್ಮದೇ ಆದ ಪ್ರಭಾವಿ ವಲಯವನ್ನು ಸೃಷ್ಟಿಸಿಕೊಳ್ಳಲು ಸದಾ ಹಾತೊರೆಯುತ್ತಿರುತ್ತವೆ. ಮುದ್ರಣ ಮಾಧ್ಯಮಗಳೇ ಪ್ರಧಾನವಾಗಿದ್ದ ಸಂದರ್ಭದಲ್ಲೂ ಇದನ್ನು ಕಾಣಬಹುದಿತ್ತು. ವಿದ್ಯುನ್ಮಾನ ಮಾಧ್ಯಮಗಳು ದೇಶದ ಮೂಲೆ ಮೂಲೆಗೂ, ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪುವ ಸಾಮರ್ಥ್ಯ ಹೊಂದಿರುವುದರಿಂದ ಆಡಳಿತಾರೂಢ ಪಕ್ಷಗಳು, ಮಾಧ್ಯಮಗಳನ್ನು ತಮ್ಮ ಆಡಳಿತ ನೀತಿಗಳ ವಾಹಕಗಳಾಗಿ ಬಳಸಿಕೊಳ್ಳುತ್ತವೆ. ಹಿಂದಿನ ಕಾಂಗ್ರೆಸ್‌ ಸರ್ಕಾರಗಳೂ ಇದನ್ನು ಮಾಡುತ್ತಲೇ ಬಂದಿವೆ. ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿದೆ.

ಇದರೊಟ್ಟಿಗೇ ನವ ಉದಾರವಾದ ಮತ್ತು ಜಾಗತೀಕರಣದ ಆರ್ಥಿಕ ನೀತಿಗಳು ದೇಶದಲ್ಲಿ ಸೃಷ್ಟಿಸುತ್ತಿರುವ ಜನಾಕ್ರೋಶ ಮತ್ತು ಜನಸಾಮಾನ್ಯರ ನಡುವೆ ಸೃಷ್ಟಿಯಾಗುತ್ತಿರುವ ಹತಾಶೆಯನ್ನು ನಿವಾರಿಸುವ ನಿಟ್ಟಿನಲ್ಲಿ, ಆಡಳಿತ ನೀತಿಗಳ ಪರವಾದ ಸಾರ್ವಜನಿಕ ಅಭಿಪ್ರಾಯವನ್ನು ಉತ್ಪಾದಿಸುವಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಪ್ರಧಾನ ಪಾತ್ರ ವಹಿಸುತ್ತವೆ. ಟಿವಿ ವಾಹಿನಿಗಳಲ್ಲಿ ನಡೆಯುವ ಏಕಮುಖಿ ಚರ್ಚೆಗಳು ಈ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಂಡುಬರುತ್ತವೆ. ಹಾಗಾಗಿ ಮಾರುಕಟ್ಟೆ ವ್ಯವಸ್ಥೆ ಮತ್ತು ಕಾರ್ಪೋರೇಟ್‌ ಔದ್ಯಮಿಕ ಹಿತಾಸಕ್ತಿಗಳಿಗೆ ವಿದ್ಯುನ್ಮಾನ ಮಾಧ್ಯಮಗಳು ಒಂದು ಪ್ರಬಲ ವೇದಿಕೆಗಳೂ ಆಗುತ್ತವೆ. ಡಿಜಿಟಲ್‌ ಯುಗದಲ್ಲಿ ದೇಶದ ಅರ್ಥವ್ಯವಸ್ಥೆ ಹೆಚ್ಚು ಹೆಚ್ಚು ಕಾರ್ಪೋರೇಟ್‌ ಮಾರುಕಟ್ಟೆ ಕೇಂದ್ರಿತವಾಗುತ್ತಿರುವುದರಿಂದ ಆಳುವ ವರ್ಗಗಳಿಗೂ ಈ ವೇದಿಕೆಗಳು ಅಪ್ಯಾಯಮಾನವಾಗಿ ಕಾಣುತ್ತವೆ.

ಸುಧೀರ್‌ ಚೌಧರಿ ಬಹುಶಃ ಇಂತಹುದೇ ಒಂದು ಹೊಸ ವೇದಿಕೆಯನ್ನು ದೇಶದ ಜನತೆಗೆ ಸಮರ್ಪಿಸಲಿದ್ದಾರೆ. ವಸ್ತುನಿಷ್ಠ ವರದಿಗಾರಿಕೆ , ಜನಪರ ದನಿಯನ್ನು ಬಿಂಬಿಸುವ ಧೋರಣೆ ಮತ್ತು ಜನಸಮುದಾಯಗಳ ನಿತ್ಯ ಬದುಕಿನ ಬವಣೆಗಳನ್ನು ಬಿಂಬಿಸುವ ಜನೋಪಯೋಗಿ ವಿಧಾನಗಳಿಗಿಂತಲೂ ಮಿಗಿಲಾಗಿ, ಆಳುವ ವರ್ಗಗಳ ಆಡಳಿತ ನೀತಿಗಳನ್ನು ಜನರ ನಡುವೆ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಈ ವಾಹಿನಿಗಳು ಕಾರ್ಯನಿರ್ವಹಿಸುತ್ತವೆ. ತಮ್ಮ ಕೂಗುಮಾರಿ ಧೋರಣೆಗೆ ಖ್ಯಾತಿ ಪಡೆದಿರುವ ಸುಧೀರ್‌ ಚೌಧರಿ ಬಹುಶಃ ತಮ್ಮ ಭವಿಷ್ಯದ ಯೋಜನೆಯಲ್ಲಿ ಯಶಸ್ಸುಗಳಿಸಲೂ ಇದೇ ಧೋರಣೆ ನೆರವಾಗುತ್ತದೆ.

ಕಾರ್ಪೋರೇಟ್‌ ಬಂಡವಾಳ ಸ್ನೇಹಿ ಸರ್ಕಾರ ಮತ್ತು ಮಾರುಕಟ್ಟೆ ಸ್ನೇಹಿ ಮಾಧ್ಯಮ ಜಂಟಿಯಾಗಿ ನವ ಉದಾರವಾದವನ್ನು ತಳಮಟ್ಟದವರೆಗೂ ಪರಿಣಾಮಕಾರಿಯಾಗಿ ವಿಸ್ತರಿಸಲು ನೆರವಾಗುವುದನ್ನು ಈ ಸಂದರ್ಭದಲ್ಲಿ ಗಮನಿಸಬೇಕಾಗುತ್ತದೆ. ಬಹುಶಃ ಸುಧೀರ್‌ ಚೌಧರಿ ಆರಂಭಿಸಲಿರುವ ಹೊಸ ವಾಹಿನಿ ಈ ಸಾಲಿಗೆ ಸೇರ್ಪಡೆಯಾಗಲಿರುವ ಮತ್ತೊಂದು ವೇದಿಕೆಯಾಗಲಿದೆ. ಸುಧೀರ್‌ ಚೌಧರಿ ಸ್ವತಃ ಕಾರ್ಪೋರೇಟ್‌ ರೂಪದಲ್ಲಿ ಹೊರಹೊಮ್ಮಲಿದ್ದಾರೋ ಅಥವಾ ಮತ್ತೊಂದು ಉದ್ದಿಮೆಯ ಭಾಗವಾಗಿ ತಮ್ಮ ವಾಹಿನಿಯ ಸಾರಥ್ಯ ವಹಿಸುವರೋ ಕಾದುನೋಡಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ನಡುಪಂಥ’ ಎನ್ನುವ ಗುಳ್ಳೇನರಿ ಸಿದ್ದಾಂತ | ಭಾಗ – 1

Published

on

  • ಲೋಕೇಶ್ ಪೂಜಾರಿ, ಬೆಂಗಳೂರು

ಸ್ವಾರ್ಥಸಾಧನೆಯನ್ನು ಚೊಕ್ಕವಾಗಿ ಮಾಡಿ,ಮಾನವೀಯ ಮೌಲ್ಯಗಳನ್ನು ಅಡಿಗೆ ಹಾಕುವವರು ನಡುಪಂಥೀಯರು. ಅವರು ದೋಣಿಯ ನಡುವಲ್ಲಿ ಕೂತಿರುತ್ತಾರೆ.ಎತ್ತ ವಾಲಿದರೂ ಜಾರಿಬೀಳುವುದಿಲ್ಲ.

ಅವರನ್ನು ಗುರುತಿಸುವುದು ಸುಲಭ. ಅವರು ಮಹಾತ್ಮ ಗಾಂಧಿಯವರ ಪೋಟೋ ಹಾಕಿಕೊಂಡು,ಗೋಡ್ಸೆಯನ್ನೂ ಸಮರ್ಥಿಸುತ್ತಾರೆ.ಹಾಗೇ ಮುಂದುವರೆದು ಒಂದು ದಿನ ಕಾಡುಗಳ್ಳ ವೀರಪ್ಪನ್ ನನ್ನು ವಾಲ್ಮೀಕಿಗೂ ಹೋಲಿಸಬಹುದು. ಅದರಿಂದ ಅವರಿಗೆ ಲಾಭ ಇರಬೇಕು ಅಷ್ಟೇ .

ಒಬ್ಬ ಬರೆಯುವ ಬರಹಗಳು ಯುವಜನರಿಗೆ ತಪ್ಪು ಸಂದೇಶ ಕೊಡುತ್ತವೆ ಎಂದು ಯಾರಾದರೂ ಹೇಳಿದಾಗ.. ,ನಾನು ಬರೆಯುವುದು ಸಮಾಜ ಪರಿವರ್ತನೆ ಗೆ ಅಲ್ಲ ಎನ್ನುವಂತಹ ಭೈರಪ್ಪ ಪ್ರೇರಿತ ಉತ್ತರ ಕೊಡುವವರು ಬಹಳ ಜನ ಇದ್ದಾರೆ .
ನಮ್ಮ ಬರವಣಿಗೆಯಿಂದ ಹುಡುಗರು ಹಾಳಾದರೆ ಅದು ಸಮಾಜದ ತಪ್ಪು ಅಥವಾ ರಾಜಕೀಯ ದ ತಪ್ಪು ಎಂದು ತಿಪ್ಪೆ ಸಾರಿಸುವ ಅಂತವರ ಬಳಿ ವಾದ ಮಾಡುವುದು ಕಷ್ಟ.

ಓದು ಮತ್ತು ವಯಸ್ಸಿಗೆ ಬಹಳ ಸಂಬಂಧ ಇದೆ.
ಎಳವೆಯಲ್ಲಿ ಇಷ್ಟ ಪಟ್ಟು ಚಂದಮಾಮ ಓದುತ್ತಿದ್ದವರು ಹೈಸ್ಕೂಲ್ ಸೇರಿದ ಬಳಿಕ ಯೆಂಡಮೂರಿ ವೀರೇಂದ್ರನಾಥರ ಪುಸ್ತಕ ಓದುತ್ತಾರೆ. ಅವರು ಎಷ್ಟು ಯೆಂಡಮೂರಿಯ ಬರಹಗಳನ್ನು ಇಷ್ಟ ಪಡುತ್ತಾರೆಂದರೆ ,ಪ್ರತೀ ಕಾದಂಬರಿನೂ ಹುಡುಕಿ ಹುಡುಕಿ ಓದುತ್ತಾರೆ.
ಆದರೆ‌ ಆ ಸೆಳೆತ ಪಿಯುಸಿ ಮುಗಿದು ಡಿಗ್ರಿ ಓದುವ ತನಕ ಮಾತ್ರ .

ಹದಿನಾರರಿಂದ ಇಪ್ಪತ್ತರ ವಯಸ್ಸಿನ ಹೆಚ್ಚಿನವರು ಯೆಂಡಮೂರಿಯ ಬರಹಗಳನ್ನು ಇಷ್ಟ ಪಡುತ್ತಾರೆ. ಬಳಿಕ ಅವರಿಗೆ ತೇಜಸ್ವಿ ,ಕಾರಂತ ,ಬೈರಪ್ಪ ಇಷ್ಟವಾಗಲು ಶುರುವಾಗುತ್ತದೆ. ತಮ್ಮ ಆಯುಷ್ಯದಲ್ಲಿ ಬಹು ಭಾಗ ಇನ್ನೂ ಕಳೆಯಬೇಕಾಗಿರುವ ಯುವ ಜನರ ಓದುವ ರುಚಿ ಮತ್ತು ಬಹುಭಾಗದ ಆಯುಷ್ಯ ಕಳೆದು ಕೊಂಡು ಜೀವನಾನುಭವ ಪಡೆದು ಕೊಂಡಿರುವವರ ಓದುವ ರುಚಿ ಬೇರೆ ಬೇರೆ ಇರುತ್ತದೆ.

ಹದಿ ಹರೆಯದ ಮನಸ್ಸಿಗೆ ತಿರುಚಿದ ಇತಿಹಾಸ ಓದಲು ಕೊಡಬಾರದು‌. ಪ್ರತಿಯೊಂದಕ್ಕೂ ಪುರಾಣದ ಉದಾಹರಣೆ ಕೊಡಬಾರದು. ಬಹಳಷ್ಟು ನಾಗರೀಕತೆಗಳ ಹುಟ್ಟನ್ನು ಕಂಡ ಸನಾತನ ಭಾರತದಲ್ಲಿ ಲೆಕ್ಕವಿಲ್ಲದಷ್ಟು ಪುರಾಣಕತೆಗಳಿವೆ.

ಪತಿಯೊಂದಕ್ಕೂ ಪುರಾಣಕತೆಗಳನ್ನು ಉದಾಹರಣೆ ಕೊಡಬಹುದು. ” ಕಣ್ಣಾ ಮುಚ್ಚೇ , ಕಾಡೇ ಗೂಡೇ… ಉದ್ದಿನ ಮೂಟೆ ಉರುಳೇ ಹೋಯ್ತು'” ಅನ್ನುವುದನ್ನೂ ರಾಮಾಯಣ ಕ್ಕೆ ಲಿಂಕ್ ಮಾಡಿ,
ಧಶರಥ ಕಣ್ಣುಮುಚ್ಚಲಾಗಿ ,ರಾಮನಿಗೆ ಕಾಡೇ ಮನೆಯಾಗಿ ,ಉದ್ದಿನ ಮೂಟೆಯಂತಹಾ ರಾವಣ ಉರುಳೇ ಹೋದ ” ಎಂದು ಬರೆದು ಬಿಡಬಹುದು.

ಆದರೆ ಅದು ವಿತಂಡವಾದ ಅನ್ನಿಸಿಕೊಳ್ಳುತ್ತದೆಯೇ ಹೊರತು ವಾದ ಅಲ್ಲ. ಹಾಗೆ ವಾದ ಮಾಡುವವರು ತಾವು ತುಂಬಾ ಓದಿದ್ದೇವೆ. ತಾವು ಇತಿಹಾಸ ಶಾಸ್ತ್ರ ಜ್ಞರು ಮನಃಶಾಸ್ತ್ರರು ಎಂದೆಲ್ಲಾ ಇಷ್ಟುದ್ದ ಹೇಳಿಕೊಳ್ಳುತ್ತಾರೆ. ಓದಿದವರೆಲ್ಲಾ ಮಹಾ ಮಾನವತಾವಾದಿಗಳಾಗಿರುತ್ತಾರೆ ಎಂದು ಕೊಳ್ಳುವುದೂ ತಪ್ಪು. ಒಸಾಮಾ ಬಿನ್ ಲಾದೆನ್ ಕೂಡಾ ತುಂಬಾ ಓದಿದ್ದ ಇಂಜಿನಿಯರ್ ಆಗಿದ್ದ.

ಒಂದು ಕಡೆ ಮಹಾತ್ಮಾ ಗಾಂಧಿ ಬಗ್ಗೆ ಬರೆಯುತ್ತಾ ,ಇನ್ನೊಂದು ಕಡೆ ಗೋಡ್ಸೆಯನ್ನು ದಾರಿತಪ್ಪಿದ ದೇಶಭಕ್ತ ಎಂದು ಬಲವಾಗಿ ಬಿಂಬಿಸುವವರು ಸಮಾಜಕ್ಕೆ ಯಾವ ಸಂದೇಶ ನೀಡುತ್ತಾರೆ? ಗೋಡ್ಸೆಗೆ ಗಾಂಧಿ ನ ಕೊಲ್ಲಲು ಕಾರಣ ಇತ್ತು . ಹಾಗೆಯೇ ಗೌರಿ ಲಂಕೇಶ್ ,ಪನ್ಸಾರೆ ,ಕಲಬುರ್ಗಿ ಹಂತಕರಿಗೂ ಕಾರಣ ಇತ್ತು.

ಇಂತಹದೇ ಕಾರಣ ಇತ್ತು ಎಂದು ಸಮರ್ಥನೆ ಇಳಿಯುವವರು, ಅಂತಹಾ ಸಮರ್ಥನೆಗಳನ್ನು ಮನಸ್ಸಿಗೆ ತುಂಬಿಕೊಂಡು ಕೊಲೆಗಾರರಾಗುವ ಸಮೂಹವನ್ನೂ ಹುಟ್ಟುಹಾಕುತ್ತಿದ್ದೇವೆ ಎಂದು ಯಾಕೆ ಯೋಚಿಸುತ್ತಿಲ್ಲ. ಅವರ ಯೋಚನೆ ನಡುಪಂಥೀಯ ಇರಬಹುದು ,ಆದರೆ ಅವರುಗಳು ಸೈತಾನಿಯೇ ಹೊರತು ಸನಾತನಿ ಖಂಡಿತಾ ಅಲ್ಲ.

ಬಹಳಷ್ಟು ಜನರ ಪ್ರೊಪೈಲ್ ನಲ್ಲಿ ಗಾಂಧಿ ಪೋಟೋ ಇರುತ್ತದೆ. ಆ ತರಹ ಇಟ್ಟುಕೊಂಡವರಲ್ಲಿ ಎರಡು ವಿಧ,
ಒಂದೇ ಅವರು ಪಕ್ಕಾಗಾಂಧಿವಾದಿಯಾಗಿರುತ್ತಾರೆ .
ಅಥವಾ ಅವರ ಮನಸ್ಸು ತುಂಬಾ ಗೋಡ್ಸೆ ತುಂಬಿರುತ್ತಾನೆ.

ನಮ್ಮೂರಿನ ಕೆಲವರು ಬಿಲ್ಲವ ರಾಜಕಾರಣಿ ಅಥವಾ ಮುಖಂಡನ ಬಗ್ಗೆ ಸಿಕ್ಕಾಪಟ್ಟೆ ತಕರಾರು ಮಾಡಿ ಪೋಸ್ಟ್ ಹಾಕಿದ ಬಳಿಕ ಶ್ರೀ ನಾರಾಯಣ ಗುರುಗಳ ಪೋಟೋ ಪ್ರೊಫೈಲ್ ಗೆ ಹಾಕಿಕೊಳ್ಳುತ್ತಾರೆ. ಶ್ರೀ ನಾರಾಯಣ ಗುರುಗಳು ಒಂದು ಜಾತಿಯ ಗುರು ಅಲ್ಲ ,ಅವರು ವಿಶ್ವಗುರು ಅಂತಾ ಅವರಿಗೂ ಗೊತ್ತು. ಅದರೂ ಯಾವುದೋ ಒಂದು social chemistry ಚೆನ್ನಾಗಿ ಕೆಲಸ ಮಾಡುತ್ತದೆ ಎಂಬುದು ಅವರ ನರಿಬುದ್ದಿಗೆ ಚೆನ್ನಾಗಿ ಹೊಳೆದಿರುತ್ತದೆ.ಕಾಣದ ಕೈಗಳ ಪ್ರತಿರೋದವನ್ನು ಕಡಿಮೆ ಮಾಡುವ ನರಿಬುದ್ದಿ ಅದು.

ಎಷ್ಟೋ ಜನ ಮೀಸಲಾತಿಯನ್ನು ವಿರೋಧಿಸುವುದರಿಂದ ಹಿಡಿದು ಜಾತಿವಾದವನ್ನು ಪುರಸ್ಕರಿಸುವಷ್ಟು ಮನುವಾದೀ ಮನಸ್ಸು ಹೊಂದಿರುವವರೂ ಅಂಬೇಡ್ಕರ್ ರಂತಹಾ ಮಾನವತಾವಾದಿಯ ಪೋಟೋ ಹಾಕಿಕೊಂಡಿರುತ್ತಾರೆ.

ಯಾರ ಪ್ರೊಫೈಲ್ ನಲ್ಲಿ ಯಾವ ಪೋಟೋ ಇರುತ್ತದೆ ಎನ್ನುವುದರಿಂದ ಅವರ ಸ್ವಭಾವ ಗುಣಲಕ್ಷಣಗಳನ್ನು ಅರಿಯಲು ಸಾದ್ಯವಿಲ್ಲ. ನಡುಪಂಥೀಯ ಗುಳ್ಳೆನರಿಗಳ ಬಗ್ಗೆ ದಿನಕ್ಕೊಂದು ಪೋಸ್ಟ್ ಹಾಕಿದರೂ ವರ್ಷ ಕಳೆದರೂ ಮುಗಿಯದಷ್ಟು ಇದೆ. ಆದರೂ ನೂರು ಎಪಿಸೋಡ್ ಗಳ ಒಳಗೇ ಮುಗಿಸಲು ನೋಡುತ್ತೇನೆ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನನ್ನ ಹೆಸರಿನ ಪಜೀತಿ..! ನನ್ನ ಹೆಸರು ಹೇಗೆ ಬಂತು..?

Published

on

  • ಪರಶುರಾಮ್. ಎ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಹೆಸರು ಇದ್ದೇ ಇರುತ್ತದೆ ಇರಲೇ ಬೇಕು ಸಹ. ಆ ವ್ಯಕ್ತಿ ಹೆಸರಿಗೂ ಇತಿಹಾಸದ ನಂಟು ಅಥವಾ ಒಂದು ಕತೆ ಇದ್ದೆ ಇರುತ್ತದೆ. ‌ಅವುಗಳನ್ನ ಕೆದಕಿ ನೋಡಿದಾಗ ಆ ಕತೆಗಳು ನೆನಪುಗಳಾಗಿ ಮೇಲೆದ್ದು ಕಾಣಿಸಿಕೊಳ್ಳುತ್ತದೆ.

ಈಗೀಗ ಜನ ಸಮಾಜದಲ್ಲಿ ಹೆಸರು ಮಾಡಲು ಏನೇನೂ ಸರ್ಕಸ್ ಮಾಡ್ತಾರಂತ ನಿಮಗೆ ಗೊತ್ತೇ ಇದೆ. ರಾಜಕೀಯ. ಸಿನಿಮಾ. ರೌಡಿಸಂ. ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌, ಡಬ್ ಸ್ಮಾಷ್. ಟಿಕ್ ಟಾಕ್ ನಲ್ಲಿ ಹುಚ್ಚರಾಗಿ ಹೆಸರು ಗಳಿಸಲು ನಾನಾ ತರದ ಸರ್ಕಸ್ ನಡಿತಾನೇ ಇದೆ. ಅವರ ಹೆಸರುಗಳು ಸಹ ವಿಚಿತ್ರ ವಿಚಿತ್ರವಾಗಿ ಇರ್ತವೆ!!! ಈ ವಿಚಿತ್ರ ಹೆಸರುಗಳ‌ ಖಯಾಲಿ ಸಿನೆಮಾ, ರೌಡಿಸಂ ಕ್ಷೇತ್ರದಲ್ಲಿ ಹೆಚ್ಚು.

ಹೆಸರಿನಲ್ಲಿ ಏನಿದೆ ಬಿಡ್ರೀ ಮಹತ್ವ?? ಅನ್ನುವವರಿಗೆ ಅವರ ಹೆಸರು ಒಮ್ಮೆ ಹಾಳಾದಗಲೇ ಅದರ ನೋವು ಗೊತ್ತಾಗುವುದು ಹೆಸರಿನ ಮಹತ್ವ!! ಅಂದಾಗೆ ನಾನು ನನ್ನ ಹೆಸರು ಹುಟ್ಟಿನ ಬಗ್ಗೆ ಹೇಳ್ತಿನಿ ಆಮೇಲೆ ಆ ಹೆಸರಿನಿಂದ ನನಗಾದ ಪಜೀತಿಗಳೆಷ್ಟು ಅಂತ ಹೇಳ್ತಿನಿ. ನಾನು ಹುಟ್ಟಿದಾಗ ನನಗೆ ನಾಮಕರಣ ಮಾಡಲು ಹೆಸರಿಡಲು ವಾಡಿಕೆಯಂತೆ ಜ್ಯೋತಿಷ್ಯ ಕೇಳಿದಾಗ ನನಗೆ ಡ,ಡು,ಡೆ ಎಂಬ ಪದಗಳು ಬಂದವಂತೆ.

ಹೋಗಿ ಹೋಗಿ ಎಂತ ಪದಗಳು ಬಂದಿವೇ ನೋಡ್ರೀ!! ಈ ಡ,ಡು,ಡೆ ಎಂಬ ಪದಗಳಿಂದ ಯಾವ ಹೆಸರು ತಾನೇ ಕನ್ನಡದಲ್ಲಿ ಆಗಲಿ ಯಾವ ಭಾಷೆಯಲ್ಲಿ ಆಗಲಿ ಬರೊದಕ್ಕೆ ಸಾಧ್ಯ?? (ಈಗಲೂ ಈ ಅಕ್ಷರದಿಂದ ನಿಮಗೆ ಏನಾದರೂ ಹೆಸರು ಗೊತ್ತಾದರೆ ಹೇಳಿ ನನ್ನ ಹೆಸರೇ ಬದಲಾಯಿಸಿಕೊಳ್ತಿನಿ.) ಹೆಸರಿ‌ನ ಮೊದಲ ಅಕ್ಷರ ಹೇಳಿದ ಜ್ಯೋತಿಷಿ ಬಳಿ ಯಾವುದೇ ಉತ್ತರ ಸಿಗದೆ ಕಂಗಾಲಾಗಿ ನಮ್ಮ ಅಜ್ಜಿ ತಾತ ಮತ್ತು ಅಪ್ಪ ಅಮ್ಮ ಅಪ್ಪ ಆಕಾಶ ತಲೆ ಮೇಲೆ ಬಿದ್ದಂಗಾಗಿ ಏನಿದು ಹುಟ್ಟಿರೊ ಮಗುವಿಗೆ ಈ ರೀತಿಯಲ್ಲಿ ಅಕ್ಷರಗಳು ಬಂದಿದಾವಲ್ಲಂತ ಯೋಚಿಸಿ ಕುಳಿತರಂತೆ.!

ಹೀಗೆ ಯೋಚಿಸಿದಾಗ ಅವರಿಗೆ ಒಂದು ಜ್ಞಾನೋದಯ ಅಗಿ ಹೇಗಿದ್ದರೂ ನಮ್ಮ ಮನೆಯ ದೇವರು ಸವದತ್ತಿ ಯಲ್ಲಮ್ಮ ಈಗ ಹುಟ್ಟಿದ ಗಂಡು ಮಗುವಿಗೆ ಆಕೆಯ ಮಗನಾದ ಪರಶುರಾಮ ಎಂಬ ಹೆಸರನ್ನೇ ಇಟ್ಟು ಇನ್ನೂ ಮಿಕ್ಕಿದ್ದ ಪಾಪ ಪುಣ್ಯ ಎಲ್ಲಾ ಯಲ್ಲಮ್ಮನ ಮೇಲೆ ಹಾಕಿ ಪರಶುರಾಮ ಎಂಬ ಹೆಸರಿನಲ್ಲಿ ನನಗೆ ನಾಮಕರಣ ಮಾಡಿದರು. ಇವತ್ತಿಗೂ ನಮ್ಮ ಹಳ್ಳಿಯಲ್ಲಿನ ನಮ್ಮ ಸಂಬಂಧಿ ಚಂದ್ರಣ್ಣ ಎಂಬುವವರು ನನಗೆ ಈ ಕತೆ ಹೇಳಿ ನನ್ನ ಹೀಗೆ ಡ,ಡು,ಡೆ ಎಂದೇ ಸಂಬೋಧಿಸಿ ಕರೆಯುತ್ತಾರೆ.

ಅವರಿಗೆ ನನ್ನ ಹೆಸರೇ ತಮಾಷೆಯ ವಸ್ತು. ನಾನು ಹುಟ್ಟಿದಾಗಲೇ ಬ್ರಾಹ್ಮಣರ ಬಳಿಯಿಂದ ಹೆಸರನ್ನು ಪಡೆಯದೆ ಹುಟ್ಟಿನಿಂದಲೇ ನಾನು ಬ್ರಾಹ್ಮಣತ್ವದ ವಿರೋಧಿಯಾಗಿದ್ದೆ, ಹೋರಾಡಿದ್ದೆ ಎಂದು ಈಗ ಒಮ್ಮೊಮ್ಮೆ ಹಲವು ಸಲ ಮನದಲ್ಲಿ ಯೋಚಿಸಿ ನಗು ಬರುತ್ತದೆ. ನನ್ನ ಅಮ್ಮ ಈ ಸಂಗತಿಯನ್ನು ಅದೆಷ್ಟೋ ಸಲ ಹೇಳಿ ನಗ್ತಾಳೆ. ನೀನು ನನಗೆ ಹುಟ್ಟಿದಾಗ ನಿನಗೆ ಒಂದು ಸರಿಯಾದ ಹೆಸರು ಬರಲಿಲ್ಲ ಗೊತ್ತ ನಿನಗೆ ಅಂತ ಕೇಳಿ.

ಹೇಗೋ ನನಗೂ ಒಂದು ಹೆಸರು ಬಂತು ಅಂದುಕೊಂಡಾಗ, ನಾನು ಚಿಕ್ಕವಯಸ್ಸಿನಲ್ಲಿದ್ದಾಗ ನಮ್ಮ ಸಂಬಂಧಿಕರು ನನ್ನ ಪರ್ಶಿ, ಪರ್ಸೀ ಅಂದು ನನ್ನ ಹೆಸರೇ ಹಾಳು ಮಾಡಿದ್ದರು. ಪರಶುರಾಮ ಎಂಬ ಸುಂದರ ಹೆಸರನ್ನು ಹೀಗೆ ಹಾಳು ಮಾಡಿದಾಗ ಯಾರಿಗೆ ತಾನೇ ಕೋಪ ಬರಲ್ಲ ಹೇಳಿ?? ಬೆಳೆದು ದೊಡ್ಡವನಾದರೂ ಇನ್ನೂ ಅದೆಷ್ಟು ಸಂಬಂಧಿಕರು ನನ್ನ ಪರ್ಸಿ ಪರ್ಸಿ ಅಂತಾನೆ ಕರೆತಾರೆ ಇದಂತು ನನಗೆ ಅಳುನೇ ತರ್ಸುತ್ತೆ.

ಇನ್ನೂ ನಾನು ಪ್ರಾಥಮಿಕ ಶಾಲೆಯಲ್ಲಿ ವಿದ್ಯೆ ತಲೆಗೆ ಹತ್ತದೆ ಇದ್ದಾಗ ನನಗೆ rr ಎಂಬ ಟೀಚರ್ ಒಬ್ಬರು ಪರಶುರಾಮ ಎಂಬ ನನ್ನ ಹೆಸರನ್ನ ಸಿದ್ದರಾಮ ಎಂದು ರೇಗಿಸುತ್ತಿದ್ದರು ಅದು ತರಗತಿಯ ನನ್ನ ಎಲ್ಲಾ ಸ್ನೇಹಿತರ ಮುಂದೆ. ನನಗೆ ಎಷ್ಟು ಕೋಪ ಮುಜುಗರ ಬರಬೇಡ?? ಆಗ ನನಗೆ ಕೇವಲ ಏಳು ಅಥವಾ ಎಂಟು ವರ್ಷ. ಇನ್ನೂ ನಾನು ಐದನೇ ತರಗತಿಯ ಓದುವಾಗ ನಮಗೆ ಇಂಗ್ಲೀಷ್ ಭಾಷೆ ಪರಿಚಯಿಸಿದರು, ನೇತ್ರಾವತಿ ಟೀಚರ್ ಸಹ ನನ್ನ ಹೆಸರನ್ನು ಇಂಗ್ಲಿಷ್ ಓದಲು ಬಾರದೆ ಇದ್ದದ್ದಕ್ಕೆ ಮತ್ತದೇ ಸಿದ್ದರಾಮ ಎಂದು ಒತ್ತಿ ಒತ್ತಿ ಕರೆಯುತ್ತಿದ್ದರು. ‌

ಆಗಲಂತು ನನ್ನ ಮನಸ್ಸು ನನ್ನ ಈ ಹೆಸರಿನ ಬಗೆಗೆ ತೀವ್ರ ಜಿಗುಪ್ಸೆ ತರಿಸಿತ್ತು.
ಇನ್ನೂ ಏಳನೇ ತರಗತಿಯಲ್ಲಿ ಪರಶುರಾಮ್ ಎಂಬ ನನ್ನೊಂದಿಗೆ ಪುರುಷೋತ್ತಮ ಎಂಬ ಎರಡು ಸ್ನೇಹಿತರು ಬೇರೆ ಒಂದೇ ತರಗತಿಯಲ್ಲಿ ಇದ್ದೆವು. ಆಗಲಂತು ತರಗತಿಗೆ ಬಂದ ಟೀಚರ್ ಗಳು ಅದೆಷ್ಟೋ ಬಾರಿ ಪುರುಷೋತ್ತಮನ ಪರಶುರಾಮ ಎಂದು ಪರಶುರಾಮನ ಪುರುಷೋತ್ತಮ ಎಂದು ಕರೆದು ಗೊಂದಲಕ್ಕೆ ಸಿಕ್ಕಿಸಿದರೊ ಗೊತ್ತಿಲ್ಲ. ಇದು ಒಂದು ವರ್ಷಗಳ ಕಾಲ ಹೀಗೆ ನಡೆಯಿತು.

ಇನ್ನೂ ಹೈಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಈ ಹೆಸರು ಮತ್ತದೆ ಯಥಾವತ್ ಜಿಗುಪ್ಸೆ ತರಿಸಿ ನನ್ನ ಹೆಸರೇ ನಾನು ಕಳಚುವಂತೆ ಯೋಚಿಸಲು ತಲೆನೋವು ತಂದಿತ್ತು. ಕಾರಣ ಸ್ನೇಹಿತರು ನನ್ನ ರೇಗಿಸಲು ನನ್ನ ಹೆಸರನ್ನೇ ಅಸ್ತ್ರವನ್ನಾಗಿ ಬಳಸಿ ಪರ್ಸು ಪರ್ಸು(purse) ಅನ್ನೊರು. ಆಗಲಂತು ನನಗೆ ಕೆಟ್ಟ ಕೋಪ ಬರೊದು ನಿಜವಾಗಿಯೂ ನನ್ನ ಹೆಸರಿಗೆ ತಕ್ಕಂತೆ ಪರಶುರಾಮನಾಗಿ ಹೊಡೆಯಲ ಎಂದು ಆದರೆ ಏನು ಮಾಡೊದು ಎಲ್ಲಾ ಸ್ನೇಹಿತರೆ ಅಂತ ನನಗೆ ನಾನೇ ಸಮಾದಾನವಾಗಿ ತಗೊಂಡು ನಾನು ಅವರೊಂದಿಗೆ ನಗ್ತ ಸುಮ್ಮನೆ ಆಗ್ತಿದ್ದೆ. ಹಿರಿಯರು ಮತ್ತು ಅನಕ್ಷರಸ್ಥರ ಬಾಯಲ್ಲಿ ನನ್ನ ಹೆಸರು ಹೀಗೆ ಹಾಳದದ್ದು ಉಂಟು ಆದರೆ ಅಕ್ಷರಸ್ಥರ ಬಾಯಲ್ಲಿ ಹೆಸರು ಹಾಳಾದಾಗ ಆಗುವ ನೋವು ಹೇಳಲಾಗದಷ್ಟು ಇತ್ತು.

ಇನ್ನೂ ನಾನು ಡಿ,ಎಡ್ ಓದುವಾಗಲಂತೂ ವಿಜ್ಞಾನದ ಸರ್ ಗುರುಮೂರ್ತಿಯವರಂತು ಪ್ರತಿ ಭಾರಿ ನನ್ನ ಪರಶಿವನಾಗಿ ಮಾಡಿದ್ದರು. ಪರಶಿವ ಎಂದರೆ ಶಿವನಾಗಿ ಅಲ್ಲ. ಪರಶುರಾಮನ ಹೆಸರನ್ನು ಅವರು ಗೊಂದಲದಲ್ಲಿ ಪರಶಿವ ಎಂದೇ ಕರೆಯುತ್ತಿದ್ದರು ಅದಕ್ಕೆ ಕಾರಣ ಎರಡು ವರ್ಷಗಳ ಹಿಂದಿನ ಡಿ,ಎಡ್ ಬ್ಯಾಚಿನಲ್ಲಿ ಪರಶಿವ ಎಂಬ ಹೆಸರಿನ ವಿದ್ಯಾರ್ಥಿ ಹುಡುಗನೊಬ್ಬ ಇದ್ದನಂತೆ ಅದರಿಂದಾಗಿ ನನ್ನ ಹೆಸರು ಹೀಗೆ ಬದಲಾಗಿತ್ತು.

ಡಿ.ಎಡ್ ಮಾಡಿದ ಎರಡು ವರ್ಷಗಳ ಕಾಲ ನನ್ನ ಅವರು ಕರೆದದ್ದು ಪರಶಿವನೆಂದೆ. ನನಗೂ ನನ್ನ ಹೆಸರು ಸರ್ ಗೆ ಹೇಳಿ ಹೇಳಿ ಸಾಕಾಗಿ ಸರಿ ಇನ್ನೂ ಮುಂದೆ ಸರ್ ಕೂಗುವ ಈ ಹೆಸರಿಗೆ ಪ್ರತಿಕ್ರಿಯಿಸಲು ನಾನೇ ಬದಲಾಗಿ ಅವರು ಪರಶಿವ ಎಂದಾಗಲೆಲ್ಲ ಓಗುಟ್ಟುತ್ತಿದ್ದೆ.

ಆದರೂ ಅವರು ಕೊನೆಯ ವರೆಗೆ ನನ್ನ ಹೆಸರು ಜ್ಞಾಪಕ ಶಕ್ತಿಯಲ್ಲಿ ಉಳಿಸಿಕೊಂಡಿದ್ದು ಪರಶಿವನಾಗಿಯೇ ಹೊರತು ಪರಶುರಾಮನಾಗಿ ಅಲ್ಲ!! ಇವತ್ತಿಗೂ ಆಗಾಗ ಕಾಲೇಜ್ ಕಡೆ ಹೋದಾಗ ಎದುರಾದರೆ ಏನಯ್ಯ ಪರಶಿವ ಅಂತಾರೆ. ಗುರುಗಳ ಆ ಮಾತಿಗೆ ಉತ್ತರಿಸಲೊ ಕೋಪಗೊಳ್ಳಲೊ ಅಥವಾ ಅವರ ಬಾಯಲ್ಲಿ ನನ್ನ ಬದಲಾದ ಹೆಸರಿಗೆ ಮುಜುಗರ ಪಡಲೊ ತಿಳಿಯದೆ ಕಂಗಲಾಗ್ತಿನಿ..

ಅಂದ ಹಾಗೆ ನಿಮಗೆ ನನ್ನ ಹೆಸರು ಸರಿಯಾಗಿ ಏನಂತ ಗೊತ್ತಾಯ್ತ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 week ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ2 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ3 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ3 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ3 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ3 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ3 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ3 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ3 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ3 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending