ರಾಜಕೀಯ
ಭಾರತವನ್ನು ಅಮೆರಿಕನ್ ರಥದ ಇನ್ನೊಂದು ಗಾಲಿಯಾಗಿಸುತ್ತಿರುವ ಮೋದಿ

- ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ.
ವಾಷಿಂಗ್ಟನ್ನಲ್ಲಿ ನಡೆದ ಮಾಧ್ಯಮ ಗೋಷ್ಠಿಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ವಿನಂತಿಸಿಕೊಂಡಿದ್ದಾರೆ ಎಂದು ಹೇಳಲಾದ ಚಿತ್ರವು ತಳಮಳಕಾರೀ ಪರಿಣಾಮವನ್ನು ಉಂಟು ಮಾಡಿದೆ. ಗೋಷ್ಠಿಯಲ್ಲಿ ಅವರೊಂದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಉಪಸ್ಥಿತರಿದ್ದರು. ಮಧ್ಯಸ್ಥಿಕೆ ವಹಿಸುವಂತೆ ಮೋದಿ ಕೇಳಿದ್ದಾರೋ ಇಲ್ಲವೋ ಎನ್ನುವುದು ಇಲ್ಲಿ ಮುಖ್ಯವಲ್ಲ. ಆದರೆ ಮೋದಿಯವರ ವಿದೇಶಾಂಗ ನೀತಿ ಎಷ್ಟು ಆಭಾಸಕಾರಿಯಾಗಿ ಪರಿಣಮಿಸಿದೆ ಎನ್ನುವುದನ್ನು ಈ ಪ್ರಕರಣ ಬಹಿರಂಗಪಡಿಸುತ್ತದೆ ಎನ್ನುವುದು ಗಮನಾರ್ಹವಾಗಿದೆ.
ಪಾಕಿಸ್ತಾನ ಕುರಿತ ಅಮೆರಿಕದ ಧೋರಣೆಯಲ್ಲಿ ಯಾವ ರೀತಿಯ ಬದಲಾವಣೆ ಉಂಟಾಗಿದೆ ಎಂಬುದನ್ನು ಇಮ್ರಾನ್ ಖಾನ್ರ ಅಮೆರಿಕ ಭೇಟಿಯು ದೃಢಪಡಿಸುತ್ತದೆ. ಅಫಘಾನಿಸ್ತಾನದಿಂದ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳಲು ಟ್ರಂಪ್ ಬಯಸಿರುವ ಹಿನ್ನೆಲೆಯಲ್ಲಿ ತಾಲಿಬಾನ್ ಮಾತುಕತೆಗೆ ಬರುವ ವಿಚಾರದಲ್ಲಿ ಪಾಕಿಸ್ತಾನದ ಪಾತ್ರ ನಿರ್ಣಾಯಕವಾಗಲಿದೆ. ಇಮ್ರಾನ್ ಖಾನ್ರ ಭೇಟಿಯು ತಾಲಿಬಾನ್ ಜೊತೆಗೆ ಶಾಂತಿ ಮಾತುಕತೆಯಲ್ಲಿ ಆಗಿರುವ ಪ್ರಗತಿಗೆ ಸಿಕ್ಕಿರುವ ಮಾನ್ಯತೆಯಂತೆ ಆಗಿದೆ. ಇದರ ಶ್ರೇಯಸ್ಸನ್ನು ಪಾಕಿಸ್ತಾನಕ್ಕೆ ಸಲಲಿಸಲಾಗಿದೆ.. ಈ ಇಡೀ ಪ್ರಕ್ರಿಯೆಯಲ್ಲಿ ಭಾರತವನ್ನು ಹೊರಗಿಡಲಾಗಿದೆ ಎನ್ನುವುದೇ ಏಕೈಕ ಸಮಸ್ಯೆಯಾಗಿದೆ.
ತನ್ನೆಲ್ಲ ವಿಚಾರಗಳನ್ನು ಅಮೆರಿಕಕ್ಕೆ ಬಿಟ್ಟುಕೊಟ್ಟ ಮೋದಿ ಸರಕಾರ ಈಗ ಹಠಾತ್ತನೆ ಒಂದು ಮುಜುಗರದ ಪರಿಸ್ಥಿತಿಗೆ ಸಿಲುಕಿ ಕೊಂಡಿದೆ. ಟ್ರಂಪ್ಗಾದರೋ ಅಫಘಾನಿಸ್ತಾನದಿಂದ ಹೊರಹೋಗುವುದು ಮತ್ತು ಕಾಶ್ಮೀರ ಸಮಸ್ಯೆ ಒಂದಕ್ಕೊಂದು ತಳಕು ಹಾಕಿಕೊಂಡಿದೆ- ಪಾಕಿಸ್ತಾನ ಬಯಸುವುದು ಕೂಡ ಇದನ್ನೇ.
ಕಳೆದ ಐದು ವರ್ಷಗಳಲ್ಲಿ ಮೋದಿಯವರು ಒಂದೊಂದೇ ಹೆಜ್ಜೆಯಾಗಿ ಅಮೆರಿಕದ ಭೌಗೊಳಿಕ-ರಾಜಕೀಯ ಕಾರ್ಯತಂತ್ರಕ್ಕೆ ಭಾರತವನ್ನು ಜೋಡಿಸಿದ್ದರು. ಅವರು ಅಮೆರಿಕದ ಇಂಡೊ-ಪೆಸಿಫಿಕ್ ವ್ಯೂಹಕ್ಕೆ ಬಲಿಬಿದ್ದರು; ಮಿಲಿಟರಿ ಸಾಗಾಣಿಕೆ ಒಪ್ಪಂದಕ್ಕೆ ಸಹಿಹಾಕುವ ಮೂಲಕ ಅಮೆರಿಕದ ಸೇನಾ ಕಾರ್ಯಾಚರಣೆಗಳಿಗೆ ಭಾರತದ ನೆಲೆಗಳನ್ನು ಬಳಸಿಕೊಳ್ಳುವ ಹಕ್ಕನ್ನು ಅಮೆರಿಕಕ್ಕೆ ಅವರು ಕೊಟ್ಟರು. ಅಮೆರಿಕದ ದೊಡ್ಡ ರಕ್ಷಣಾ ಪಾಲುದಾರನಾಗುವ ಮೂಲಕ ಮೋದಿ ಸರಕಾರವು ಭಾರತದ ಮಿಲಿಟರಿಯು ಅಮೆರಿಕದ ಸಶಸ್ತ್ರ ಪಡೆಗಳೊಂದಿಗೆ ಸಿಲುಕಿಕೊಳ್ಳುವ ಇತರ ಒಡಂಬಡಿಕೆಗಳಿಗೂ ಸಹಿ ಹಾಕಲು ಮುಂದಾಯಿತು.
ಒಂದು ಅಡಿಯಾಳು ಮಿತ್ರನಾಗಿ ಅಮೆರಿಕಕ್ಕೆ ಭಾರತ ಬಾಲಾಕೋಟ್ನಲ್ಲಿ ನಡೆದ ತನ್ನ ಪ್ರತೀಕಾರದ ವೈಮಾನಿಕ ದಾಳಿಯ ಬಗ್ಗೆ ಮಾಹಿತಿ ಒದಗಿಸಿತು. ಭಾರತೀಯ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದ ನಂತರ ಪೈಲಟ್ ಅಭಿನಂದನ್ರನ್ನು ಬಿಡುಗಡೆ ಮಾಡಲಾಗುವುದು ಎಂದು ಮೊದಲು ಪ್ರಕಟಿಸಿದ್ದು ಟ್ರಂಪ್. ತನ್ನ ಆಡಳಿತ ತೀವ್ರ ಒತ್ತಡ ಹೇರಿದ್ದರಿಂದಲೇ ಹಫೀಜ್ ಸಯೀದ್ನನ್ನು ಬಂಧಿಸಲಾಯಿತು ಎಂದೂ ಟ್ರಂಪ್ ಹೇಳಿಕೊಂಡಿದ್ದಾರೆ.
ಈ ರೀತಿಯಾಗಿ ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ.
ಭಾರತವು ಅಮೆರಿಕದ ಆದೇಶಗಳಿಗೆ ಮಣಿದು ಇರಾನ್ ಮತ್ತು ವೆನಿಜುವೆಲಾದಿಂದ ತೈಲ ಖರೀದಿಯನ್ನು ನಿಲ್ಲಿಸಿದೆ. ಇಷ್ಟೆಲ್ಲಾ ವಿಧೇಯತೆಯಿಂದ ಹಿಂಬಾಲಿಸಿದ ನಂತರವೂ ಅಫಘಾನಿಸ್ತಾನದಲ್ಲಿ ಪರಿವರ್ತನೆಯ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಹತ್ವದ ಪಾತ್ರವನ್ನು ಟ್ರಂಪ್ ವಹಿಸುತ್ತಿರುವ ದೃಶ್ಯ ನಿಜಕ್ಕೂ ಬಹಳ ನೋವಿನ ಸಂಗತಿಯಾಗಿರಬೇಕು.
ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ. ಟ್ರಂಪ್ ಹೇಳಿಕೆಯನ್ನು ಎದುರಿಸುವ ಸಲುವಾಗಿ ಭಾರತೀಯ ಅಧಿಕೃತ ಮೂಲಗಳು ಒಸಾಕಾದಲ್ಲಿ ಟ್ರಂಪ್-ಮೋದಿ ಭೇಟಿಯ ಸಂದರ್ಭದಲ್ಲಿ ಇರಾನ್, ೫ಜಿ, ವಾಣಿಜ್ಯ ಮತ್ತು ರಕ್ಷಣೆ- ಹೀಗೆ ನಾಲ್ಕು ವಿಷಯಗಳನ್ನು ಮಾತ್ರ ಚರ್ಚಿಸಲಾಗಿತ್ತು ಎಂದು ತಿಳಿಸಿವೆ. ಈ ಅಜೆಂಡಾವೇ ಸಂಬಂಧವು ಯಾವ ಕಡೆಗೆ ವಾಲಿದೆ ಎಂಬುದನ್ನು ತೋರಿಸುತ್ತದೆ-ಎಲ್ಲವೂ ಅಮೆರಿಕದ ಪರವೇ ವಾಲಿದೆ.
ಭಾರತ ತೈಲ ಆಮದು ಸೇರಿದಂತೆ ಇರಾನ್ ಜತೆಗಿನ ಎಲ್ಲಾ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎನ್ನುವುದು ಅಮೆರಿಕದ ಬಯಕೆಯಾಗಿದೆ. ಚೀನಾ ಕಂಪೆನಿ ಹುವೆಯ್ ಅನ್ನು ಭಾರತ ಒಳಗೊಳಿಸಬಾರದು ಹಾಗೂ ಭಾರತದಲ್ಲಿ ೫ಜಿ ಜಾಲ ಅಭಿವೃದ್ಧಿ ಪಡಿಸುವಲ್ಲಿ ಅದಕ್ಕೆ ಯಾವುದೇ ಪಾತ್ರವನ್ನು ವಹಿಸಬಾರದು ಎನ್ನುವುದು ಅಮೆರಿಕದ ಇಚ್ಛೆಯಾಗಿದೆ. ವಾಣಿಜ್ಯ ವಿಚಾರದಲ್ಲಿ ಹೇಳುವುದಾದರೆ ಟ್ರಂಪ್ ಈಗಾಗಲೇ ಭಾರತದ ವಿರುದ್ಧ ಅನೇಕ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗೂ ಭಾರತವು ಸುಂಕದರಗಳನ್ನು ಇಳಿಸಬೇಕು ಮತ್ತು ಹೆಚ್ಚೆಚ್ಚು ಅಮೆರಿಕದ ವಸ್ತುಗಳನ್ನು ಖರೀದಿಸಬೇಕು ಎಂಬುದು ಅಮೆರಿಕದ ಬಯಕೆಯಾಗಿದೆ. ಅಂತಿಮವಾಗಿ, ರಕ್ಷಣಾ ಅಜೆಂಡಾವೆಂದರೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಮತ್ತು ರಕ್ಷಣಾ ಸಾಮಗ್ರಿಗಳನ್ನು ಖರೀದಿಸಬೇಕೆಂದೇ ಅದರ ಅರ್ಥವಿದ್ದಿರಬೇಕು.
ಈ ಏಕಮುಖ ರಸ್ತೆಯಲ್ಲಿ ಸಾಗಿದ ಮೇಲೆ, ಭಾರತವು ಅಮೆರಿಕದ ರಥದ ಎರಡು ಚಕ್ರಗಳಲ್ಲಿ ಒಂದು ಚಕ್ರವಾಗುವ ಸಂಭವವನ್ನು ಮೋದಿ ಎದುರಿಸಬೇಕಾಗಿ ಬಂದಿದೆ. ಪಾಕಿಸ್ತಾನ ಅದರ ಇನ್ನೊಂದು ಗಾಲಿಯಾಗಿದೆ. ತಾಲಿಬಾನ್ ಅಫಘಾನಿಸ್ತಾನವನ್ನು ವಶಪಡಿಸಿಕೊಂಡ ಮೇಲೆ ಅದರ ಪ್ರತ್ಯಾಘಾತವನ್ನು ಕೂಡ ಅವರು ಎದುರಿಸಬೇಕಾಗುತ್ತದೆ.
–ಪ್ರಕಾಶ್ ಕಾರಟ್
ಅನು:ವಿಶ್ವ
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು