Connect with us

ಲೈಫ್ ಸ್ಟೈಲ್

ಭಾರತದ ಸ್ವಾತಂತ್ರ್ಯಕ್ಕಿಂದು ಅಮೃತ ಮಹೋತ್ಸವ

Published

on

  • ಹನುಮಂತ ದಾಸರ ಹೊಗರನಾಳ

ಗತ್ತಿನ ಅತ್ಯಂತ ವೈವಿಧ್ಯಮಯ, ಹಾಗೂ ಸಂಪದ್ಭರಿತವಾದ, ಕಲೆ ಸಾಹಿತ್ಯ ಸಂಸ್ಕೃತಿ ವಿಜ್ಞಾನ ಮತ್ತು ತಂತ್ರಜ್ಞಾನ ಹೀಗೆ ವಿಭಿನ್ನ ಕ್ಷೇತ್ರಗಳಲ್ಲಿ ವಿಶೇಷ ಸ್ಥಾನಮಾನವನ್ನು ಹೊಂದಿದ ದೇಶ ಭಾರತ. ಇಂತಹ ಅಸಾಮಾನ್ಯ ರಾಷ್ಟ್ರದ ಶಾಂತಿ ಸಂಪತ್ತನ್ನು ಕೊಳ್ಳೇ ಹೊಡೆಯಲು ಬ್ರಿಟಿಷರು ಭಾರತವನ್ನು 200 ವರ್ಷಗಳ ವರೆಗೆ ಆಳಿ ಅಪಾರ ಸಂಪತ್ತನ್ನು ದೋಚಿದರು.

ಮೂಲ ಭಾರತೀಯರನ್ನು ತಮ್ಮ ಸೇವಕರನ್ನಾಗಿ ಮಾಡಿಕೊಂಡು ನಮ್ಮ ನೆಲದಲ್ಲೇ ಬೆಳೆಯುವ ಫಸಲಿಗೆ ತೆರಿಗೆ ಪಡೆದು ನಾವು ಬದುಕುವ ಕೆಲ ಹಕ್ಕನ್ನೇ ಕಿತ್ತುಕೊಂಡು ಬ್ರಿಟಿಷರ ಪ್ರತೀ ನಿಯಮಗಳಿಗೆ ಶರಣಾಗಿ ಅವರ ದಬ್ಬಾಳಿಕೆಗೆ ಗುರಿಯಾಗಿ ಬದುಕು ಸಾಗಿಸಿದ ದೇಶ ಕೊನೆಗೊಂದು ದಿನ ದೇಶಕ್ಕಾಗಿ ಜೀವ ಹೋದರೂ ಚಿಂತೆಯಿಲ್ಲ ನಮ್ಮ ಭಾರತ ಮಾತೆಗಾಗಿ ಭಾರತೀಯ ನೆಲಕ್ಕಾಗಿ ನಮ್ಮ ಪ್ರಾಣವನ್ನು ತ್ಯಾಗ ಮಾಡಿ ಬ್ರಿಟಿಷರನ್ನು ಭಾರತೀಯ ಭವ್ಯ ಭೂಮಿಯಿಂದ ಓಡಿಸಬೇಕು ನಮ್ಮ ಭಾರತ ಮಾತೆಯನ್ನು ಅವರಿಂದ ಬಿಡುಗಡೆಗೊಳಿಸಿಕೊಳ್ಳಬೇಕೆಂಬ ಕಠೋರವಾದ ನಿರ್ಧಾರಗಳು ಪ್ರತಿಯೊಬ್ಬ ಭಾರತೀಯ ವೀರರಲ್ಲಿ ಹುಟ್ಟತೊಡಗಿದವು.

ಅಂತೆಯೇ ಅಂತಹ ಕಠೋರ ನಿರ್ಧಾರಗಳಿಗೆ ಅಣಿಯಾಗಿ ಬ್ರಿಟಿಷರ ವಿರುದ್ಧ ಹಲವಾರು ದಂಗೆಗಳು ಜರುಗಿದವು ಮತ್ತು ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿಸಲು ಹಲವಾರು ಚಳುವಳಿಗಳು ಕೂಡ ನಡೆದವು. ಹೀಗೆ ದಂಗೆಗಳು ಚಳುವಳಿಗಳನ್ನು ಹಮ್ಮಿಕೊಂಡು ಬ್ರಿಟಿಷರ ಎದುರಿಗೆ ಎದೆಗೊಟ್ಟು ನಿಂತು ಹೋರಾಡಿದ ಕ್ಷಣಗಳೇ ಸ್ವಾತಂತ್ರ್ಯ ದಂಗೆಗಳು.

ಹನುಮಂತ ದಾಸರ ಹೊರಗನಾಳ

ಈ ಸ್ವಾತಂತ್ರ್ಯ ದಂಗೆಗಳ ಮೂಲಕ ಭಾರತೀಯ ವೀರನಾಯಕರ ಧೈರ್ಯ ಶೌರ್ಯ ಹೊತ್ತ ತೀವ್ರಗಾಮಿಗಳ ಮತ್ತು ಶಾಂತಿ ಸಮ್ಮತಿ ಭಾವನೆಯ ಮಂದಗಾಮಿಗಳ ಆತ್ಮಾಭಿಮಾನ ಮತ್ತು ದೇಶಭಕ್ತಿಗಾಗಿ ರಕ್ತವನ್ನೇ ಚೆಲ್ಲಲು ಸಿದ್ಧವಾಗಿರುವ ಭಾರತೀಯ ಮಹಾನ್ ನಾಯಕರರ ಹೋರಾಟಗಳನ್ನು ಅರಿತ ಬ್ರಿಟಿಷರು ಕೊನೆಗೆ ” ಭಾರತವನ್ನು ಬಿಟ್ಟು ತೊಲಗಿ ” ಎಂಬ ಕಠೋರ ವಾಕ್ಯದಂತೆ ರಾತ್ರೋರಾತ್ರಿ ಬ್ರಿಟಿಷರು ಭಾರತ ಬಿಟ್ಟು ಹೊರಡುವ ಮೂಲಕ ಮಧ್ಯೆ ರಾತ್ರಿ ಭಾರತೀಯರಿಗೆ ಸ್ವಾತಂತ್ರ್ಯ ದೊರಕುವಂತಾಯಿತು.

ಆದರೇ ಅಷ್ಟೊತ್ತಿಗಾಗಲೇ ಭಾರತದ ಪ್ರಮುಖ ಸಂಪತ್ತನ್ನು ದೋಚಿ ನಡೆಯುವುದಷ್ಟೇ ಅಲ್ಲದೇ ಅವರು ಶಿಕ್ಷಣಕ್ಕೆ ಸಂಬಂಧಿಸಿದ ಹೊಸ ನೀತಿ ನಿಯಮಗಳನ್ನು ಜಾರಿಗೊಳಿಸಿದ್ದು , ಇಂಗ್ಲಿಷ್ ಶಿಕ್ಷಣವನ್ನು ಹುಟ್ಟುಹಾಕಿದ್ದು ಬ್ರಿಟಿಷರು ಭಾರತಕ್ಕೆ ಕೊಟ್ಟ ಕೊಡುಗೆಯಾಗಿವೆ ಎಂಬುದಕ್ಕೆ ಅವರ ವಾಸ್ತುಶಿಲ್ಪದ ಕಟ್ಟಡಗಳೇ ಕಾರಣ.

ಹೀಗೆ ಮುಂದುವರೆದ ಭಾರತ ವೀರ ನಾಯಕರ ತ್ಯಾಗ ಬಲಿದಾನಗಳಿಂದ, ದಂಗೆ ಚಳುವಳಿ ಹೋರಾಟಗಳಿಗೆ ಫಲ ದೊರೆಯುವಂತೆ 15 ಆಗಸ್ಟ್ 1947ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆಯಿತು, ದೇಶದ ತುಂಬೆಲ್ಲಾ ಸ್ವಾತಂತ್ರ್ಯ ಜಯಕಾರಗಳ ಕಹಳೆ ಮೊಳಗತೊಡಗಿದವು, ಮನೆ ಮನೆಯಲ್ಲಿ ಮನ ಮನದಲ್ಲಿ ಮಹೋತ್ಸವಗಳು ಮೊಳಗಿದವು, ಎಲ್ಲೆಡೆಯಲ್ಲಿ ಜಯಕಾರಗಳ ಕೂಗು ಮುಗಿಲಿಗೆ ಮುಟ್ಟುವಂತಿತ್ತು.

ಮುಂದೆ 9 ಡಿಸೇಂಬರ್ 1947 ರಿಂದ 26 ನವೆಂಬರ್ 1949 ರವರೆಗೆ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು 26 ಜನೆವರಿ 1950 ರಂದು ಅಂಗೀಕರಿಸಲ್ಪಡುತ್ತದೆ. ಅದೇ ದಿನವನ್ನು ಪ್ರತೀ ವರ್ಷ ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ.
ಭಾರತ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೆ ಬದುಕನ್ನು ಕಟ್ಟಿಕೊಳ್ಳಲು ಸರ್ಕಾರವನ್ನು ರಚನೆ ಮಾಡುತ್ತದೆ.

ಸ್ವಾತಂತ್ರ್ಯ ಭಾರತದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರಪ್ರಸಾದ್(1950-1962) ಹಾಗೂ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು( 15 ಆಗಸ್ಟ್ 1947 – 27 ಮೇ 1964) ರವರ ಅಧಿಕಾರ ಮತ್ತು ಆಡಳಿತದ ದಿನದಿಂದ ಇಂದಿಗೆ ಸ್ವಾತಂತ್ರ್ಯ ಭಾರತಕ್ಕೆ 75 ವರ್ಷ ತುಂಬುತಲಿದೆ. ಈ ಸಂಭ್ರಮವು ಪ್ರಸ್ತುತ ಹಾಗೂ ವಿಶೇಷ ಬುಡಕಟ್ಟು ಜನಾಂಗದಿಂದ ರಾಷ್ಟ್ರಪತಿ ಹುದ್ದೆಗೇರಿದ ಶ್ರೀಮತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತಧಿಕಾರದಲ್ಲಿ ಸ್ವಾತಂತ್ರ್ಯತ್ಸವದ ” ಅಜಾದಿ ಕಾ ಅಮೃತ್ ಮಹೋತ್ಸವ ” ಎಂಬ ಶೀರ್ಷಿಕೆಯಡಿಯಲ್ಲಿ ಸ್ವಾತಂತ್ರ್ಯತ್ಸವವನ್ನು ಆಚರಣೆ ಮಾಡಲು ಶ್ರೀ ನರೇಂದ್ರ ಮೋದಿ ಅವರು ಕರೆ ನೀಡಿರುವುದು ತುಂಬಾ ಸಂತೋಷದ ಸಂಗತಿ.

ಹಾಗೆಯೇ ಭಾರತಕ್ಕೆ ಅಸಾಧ್ಯವೆನಿಸಿದ್ದ ಪ್ರತಿಯೊಂದು ಕ್ಷಣಗಳನ್ನೊಮ್ಮೆ ತಿರುಗಿ ನೋಡಿದಾಗ ನಮಗೆ ನಮ್ಮ ಮೇಲೆ ತುಂಬಾ ಸಂತೋಷ ಉಂಟಾಗುವಂತಾಗಿದೆ. ಇಂದು ಇಡೀ ವಿಶ್ವವೇ ನಮ್ಮನ್ನು ತಲೆ ಎತ್ತಿ ನೋಡುವಂತಹ ಸಮಯ ನಮ್ಮದಾಗಿದೆ. ಅಷ್ಟೇ ಅಲ್ಲದೇ ಈ 75ನೇ ಸ್ವಾತಂತ್ರತ್ಯೋತ್ಸವ ಆಚರಣೆ ಮುಂದಿನ 25 ವರ್ಷಗಳ ಅಂದರೆ ಮುಂದಿನ ಶತಮಾನಕ್ಕೆ (100 ವರ್ಷಗಳು )ಪೂರಕವಾಗುವಂತಿರಬೇಕು.

ಈ ಅಜಾದಿ ಕಾ ಅಮೃತ ಮಹೋತ್ಸವವು ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಮತ್ತು ದೇಶದ ಏಕತೆಗಾಗಿ ದುಡಿದ ವೀರ ನಾಯಕರಿಗೆ, ದೇಶವನ್ನು ವಿಶ್ವ ಮಟ್ಟಕ್ಕೆ ಪರಿಚಯಿಸುತ್ತಿರುವ ಪ್ರತಿಯೊಂದು ಕ್ಷೇತ್ರದ ಮಾಹಾನ್ ಸಾಧಕರಿಗೆ ಗೌರವ ಸಲ್ಲಬೇಕಿದೆ ಮತ್ತು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾನ್ ನಾಯಕರುಗಳ ಕನಸನ್ನು ನನಸು ಮಾಡುವಲ್ಲಿ ನಾವು ನಿರತರಾಗಬೇಕಿದೆ ಹಾಗೂ ಈ ಅಮೃತ ಮಹೋತ್ಸವವೂ ಕೂಡ ಅವರ ಉಸಿರಿಗೆ ಸಲ್ಲಬೇಕಿದೆ.

ದೇಶದ ಹುತಾತ್ಮರಿಗೆ ಹಾಗೂ ಹೋರಾಟಗಾರರಿಗೆ ಅವರ ಕನಸಿನ ಭಾರತದ ಕನಸನ್ನು ನಾವು ನನಸು ಮಾಡುವಲ್ಲಿ ಮುಂದೆ ಸಾಗಬೇಕಿದೆ ಮತ್ತು 2047 ರ ಸ್ವಾತಂತ್ರತ್ಯೋತ್ಸವ ಹಬ್ಬವನ್ನು ಆಚರಿಸುವ ಹೊತ್ತಿಗೆ ಭಾರತವನ್ನು ಮತ್ತಷ್ಟು ಎತ್ತರದ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಿದೆ, ವಿಶ್ವಕ್ಕೆ ಭಾರತದ ಪ್ರತಿಷ್ಠೆಯನ್ನು ತೋರಿಸಬೇಕಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದವರ, ಹೋರಾಟಕ್ಕೆ ಸಾಕ್ಷಿಯಾದವರನ್ನು ಮತ್ತು ಹೋರಾಟದಲ್ಲಿ ಭಾಗಿಯಾದವರನ್ನು ಗುರುತಿಸದೇ ಇರುವಂತಹ ಮಹಾನ್ ವ್ಯಕ್ತಿಗಳನ್ನು ಹಾಗೂ ರಾಷ್ಟ್ರ ಸಮಾಜಕ್ಕಾಗಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಈ ಅಮೃತ ಮಹೋತ್ಸವಕ್ಕೆ ಸ್ಫೂರ್ತಿಯಾಗಬೇಕಿದೆ. ಹಾಗೂ ವಿಶೇಷವಾಗಿ ಸ್ವಾತಂತ್ರ್ಯತ್ಸವದ ದಿನದಂದು ಜನಿಸಿ ಗಣರಾಜ್ಯೋತ್ಸವ ದಿನದಂದು ಬ್ರಿಟಿಷರಿಂದ ಗಲ್ಲಿಗೆ ಶರಣಾದ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾದ ವೀರಯೋಧ ಸಂಗೊಳ್ಳಿ ರಾಯಣ್ಣನನ್ನು ಸ್ಮರಿಸಬೇಕಿದೆ.

ರಾಷ್ಟ್ರ ನಿರ್ಮಾಣಕ್ಕಾಗಿ ಅವಶ್ಯವಾಗಿ ಬೇಕಾಗಿರುವ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯ ಹಾಗೂ ವಿಭಿನ್ನ ಅಭಿರುದ್ಧಿಪರ ಯೋಜನೆಗಳನ್ನು ಜಾರಿಗೆಗೊಳಿಸುವ ಮೂಲಕ ಜಾತಿ ವ್ಯವಸ್ಥೆ, ಧರ್ಮ ವ್ಯವಸ್ಥೆ, ಲಿಂಗ ತಾರತಮ್ಯ, ಅಸಮಾನತೆ, ನಿರುದ್ಯೋಗ, ಮಹಿಳಾ ದೌರ್ಜನ್ಯ ಹೀಗೆ ಮುಂತಾದ ರಾಷ್ಟ್ರ ಪ್ರಗತಿಗೆ ಮುಳ್ಳಾದ ಸಮಸ್ಯೆಗಳನ್ನು ಬೇರು ಸಮೇತ ಕಿತ್ತು ಒಗೆಯುವಂತಹ ಪರಿಹಾರಗಳನ್ನು ರೂಪಿಸಬೇಕು ಜೊತೆಗೆ ಸಂವಿಧಾನವನ್ನು ಗೌರವಿಸಿ ಸಂವಿಧಾನದ ಪ್ರತಿಯೊಂದು ಆಶಯಕ್ಕೆ ಬದ್ಧರಾಗಬೇಕು, ಒಳ್ಳೆಯ ವಿಚಾರಗಳನ್ನು ಯುವಕರ ಮನದಲ್ಲಿ ಬಿತ್ತುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಯುವಕರಲ್ಲಿ ಉತ್ತೇಜನ ತುಂಬುವತಾಗಬೇಕು, ರಾಷ್ಟ್ರ ನಿರ್ಮಾಣಕ್ಕೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಮಹಾನ್ ನಾಯಕರ ಕನಸಿನ ಭಾರತಕ್ಕೆ ಅವರಿವರೆನ್ನದೆ ನಾವೆಲ್ಲರೂ ಕೈ ಜೋಡಿಸಿ ವಿಶ್ವವೇ ಭಾರತದತ್ತ ತಲೆಎತ್ತಿ ನೋಡುವಂತಹ ಕಾರ್ಯ ಮಾಡಬೇಕಿದೆ ಹಾಗೂ ಈ 75ನೇ ಸ್ವಾತಂತ್ರ್ಯತ್ಸವದ ಅಮೃತ ಮಹೋತ್ಸವ ದಿನದಿಂದಲೇ 100 ವರ್ಷದ ಸ್ವಾತಂತ್ರ್ಯತ್ಸವದ ಸಂಭ್ರಮಕ್ಕಾಗಿ ನಾವು ಮತ್ತಷ್ಟು ಈಗಿಂದಲೇ ರೂಪುರೇಷಗಳನ್ನು ಹಾಕಿಕೊಳ್ಳಬೇಕಿದೆ ಆಗಲೇ ಭಾರತಕ್ಕೆ ಅಸಾಧ್ಯವೆಂಬುದು ಯಾವ ಪದವೂ ಇಲ್ಲ ಎಂದು ಇಡೀ ವಿಶ್ವಕ್ಕೆ ತೋರಿಸಲು ಸಾಧ್ಯವಾಗುತ್ತದೆ.

(ಲೇಖಕರು : ಹನುಮಂತ ದಾಸರ ಹೊಗರನಾಳ.
ಮೊ : 9945246234)

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending