Connect with us

ಬಹಿರಂಗ

ಬಡತನಕ್ಕೆ ಬಾಯಿಲ್ಲವಾಗಿ

Published

on

  • ಜಗದೀಶ್ ಕೊಪ್ಪ

ಳೆದ ಮೂವತ್ತು ವರ್ಷಗಳಿಂದ ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದಾಗಿ ಎಂದೂ ಕೇಳರಿಯದ ರೋಗರುಜಿನಗಳು ಮತ್ತು ವೈರಸ್ ಗಳು ಆಧುನಿಕ ಜಗತ್ತನ್ನು ಕಾಡುತ್ತಿವೆ. ಇದರಿಂದಾಗಿ, ಭೂಮಂಡಲದ ಮನುಕುಲ ಮಾತ್ರವಲ್ಲದೆ, ನಾವು ಬೆಳೆಯುತ್ತಿರುವ ಬೆಳೆಗಳು ಮತ್ತು ಪ್ರಾಣಿ ಪಕ್ಷಿಗಳ ಮೇಲೆ ಅಗಾಧವಾದ ಪರಿಣಾವುಂಟಾಗಿದೆ. ಇದರ ಮೂಲ ಕಾರಣ ಮನುಷ್ಯನ ಅಪರಿತ ಆಸೆ ಮತ್ತು ಭೋಗ ಜಗತ್ತಿನ ಮೋಹ ಎಂಬ ವಾಸ್ತವ ಸತ್ಯವನ್ನು ಅರಿಯಲಾರದ ವಿಸ್ಮೃತಿಗೆ ನಾವು ದೂಡಲ್ಪಟ್ಟಿದ್ದೇವೆ.

ಮಹಾತ್ಮ ಗಾಂಧೀಜಿಯವರು “ಪ್ರಕೃತಿ ಇರುವುದು ಮನುಷ್ಯನ ಮಿತವಾದ ಬೇಡಿಕೆಗಳನ್ನು ಪೂರೈಸುವುದಕ್ಕೆ ಮಾತ್ರ, ದುರಾಸೆಗಳನ್ನು ಈಡೇರಿಸುವುದಕ್ಕೆ ಅಲ್ಲ” ಎಂದು ಶತಮಾನದ ಹಿಂದೆ ಹೇಳಿದ ಮಾತನ್ನು ಮರೆತು ನಾವು ವಿನಾಶದತ್ತ ದಾಪುಗಾಲು ಇಡುತ್ತಿದ್ದೇವೆ.

ಈಗ ಭಾರತವನ್ನು ಮಾತ್ರವಲ್ಲದೆ, ವಿಶ್ವವನ್ನು ಕಾಡುತ್ತಿರುವ ಕೊರನಾ ಅಥವಾ ಕೋವಿಡ್ 19 ಎಂಬ ವೈರಸ್ ನ ಸಮಸ್ಯೆಗೆ ಕಾರಣ ಮನುಷ್ಯನೇ ಹೊರತು ಪ್ರಕೃತಿಯಲ್ಲ. ಇದರ ನಿರ್ಮೂಲನೆ ಸ್ವಯಂ ನಿಯಂತ್ರಣ ಅತ್ಯಗತ್ಯ. ಆದರೆ, ಭಾರತದಲ್ಲಿ ಎತ್ತಿಗೆ ಜ್ವರ ಬಂದರೆ, ಎಮ್ಮೆಗೆ ಬರೆ ಹಾಕಿದರು ಎಂಬಂತೆ ಹೇರಲಾಗುತ್ತಿರುವ ಸರ್ಕಾರಿ ಪ್ರಾಯೋಜಿತ ನಿರ್ಬಂಧಗಳು ಬಡವರನ್ನು, ದೀನ ದಲಿತರನ್ನು ಸಂಕಷ್ಟಕ್ಕೆ ಗುರಿಮಾಡಿವೆ.

ಈ ದೇಶದ ಪ್ರಧಾನಿ, ನಡುರಾತ್ರಿ ಪಾಕಿಸ್ತಾನದ ಮೇಲೆನಡೆಸಿದ ಸರ್ಜಿಕಲ್ ದಾಳಿಯ ಮಾದರಿಯಲ್ಲಿ ಮತ್ತು ರಾತ್ರೋರಾತ್ರಿ ನೋಟು ನಿಷೇಧ ಹೇರಿದ ರೀರಿಯಲ್ಲಿ ಕೊರನಾ ನಿಯಂತ್ರಣಕ್ಕೆ ಹೊಸ ಹೊಸ ನಿಯಮ ಜಾರಿಗೆ ತರುತ್ತಿದ್ದಾರೆ. ಭಾರತದಂತಹ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರದಲ್ಲಿ ಗಣ ರಾಜ್ಯಗಳ ಮುಖ್ಯಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಅವರ ಸಲಹೆ ಕೇಳದೆ, ಅವತಾರ ಪುರುಷನ ಹಾಗೆ ದಿಡೀರ್ ಟಿ.ವಿ ಯಲ್ಲಿ ಕಾಣಿಸಿಕೊಂಡು ಉಪದೇಶ ಮತ್ತು ನಿರ್ದೇಶನಗಳನ್ನು ಜಾರಿ ಮಾಡುತ್ತಿದ್ದಾರೆ.

ಯಾವುದೇ ಮುನ್ಸೂಚನೆ ನೀಡದೆ ದೇಶಾದ್ಯಂತ ರೈಲು ಮತ್ತು ವಿಮಾನ ಸಂಚಾರ ರದ್ದುಪಡಿಸಿದ್ದು ಅಲ್ಲದೆ, ರಾಜ್ಯಗಳ ನಡುವಿನ ಗಡಿಗಳನ್ನು ಬಂದ್ ಮಾಡಿ ಸಾರಿಗೆ ಸಂಚಾರವನ್ನು ರದ್ದುಗೊಳಿಸಲಾಯಿತು. ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ಮತ್ತು ಉತ್ತರದಿಂದ ದಕ್ಷಿಣ ಭಾರತದ ತೀರ್ಥಕ್ಷೇತ್ರಗಳಿಗೆ ಪ್ರವಾಸ ಹೋದ ಯಾತ್ರಿಕರು, ಪ್ರವಾಸಿಗರು ಇದೀಗ ಊಟ, ವಸತಿ ಇಲ್ಲದೆ ಅತಂತ್ರರಾಗಿ ಹಲವು ನಗರಗಳ ಬಸ್ ಮತ್ತು ರೈಲು ನಿಲ್ದಾಣದಲ್ಲಿ ಅಲೆಮಾರಿಗಳಂತೆ, ನಿರ್ಗತಿಕರಂತೆ ಜೀವಿಸುವಂತಾಗಿದೆ.

ಪ್ರದಾನಿ ನರೇಂದ್ರ ಮೋದಿಯವರು ಕೈ ಚಪ್ಪಾಳೆ ತಟ್ಟಿ ಕೋರನಾ ವೈರಸ್ ನಿರ್ಮೂಲಕ್ಕೆ ಶ್ರಮಿಸುತ್ತರಿವ ವೈದ್ಯರನ್ನು ಮತ್ತು ಸ್ವಯಂ ಸೇವಕರಿಗೆ ಗೌರವ ಸೂಚಿಸಿ ಎಂದು ಕರೆ ನೀಡಿದರೆ, ಈ ದೇಶದ ಪ್ರಜ್ಞಾವಂತ ನಾಗರೀಕರೆನಿಸಿಕೊಂಡ ಜನ ಗಂಟೆ, ಜಾಗಟೆ, ತಟ್ಟೆ, ಲೋಟ ಬಾರಿಸುತ್ತಾ ಬೀದಿಗಳಿದರು.ಇಂತಹ ಅನಾಗರೀಕರ ಭಾರತವನ್ನು ಏನೆಂದು ಕರೆಯೋಣ? ಬಾಯಿ ಬಡಿದುಕೊಳ್ಳಿ ಎಂದರೆ, ತಿಕ ಬಡಿದುಕೊಳ್ಳುವ ನಾಗರೀಕರನ್ನು ತಿದ್ದಲು 21 ನೇ ಶತಮಾನವಲ್ಲ, 71 ನೇ ಶತಮಾನ ಬಂದರೂ ಸಾಧ್ಯವಿಲ್ಲ.

ನಾಗರೀಕರಲ್ಲಿ ಅನಗತ್ಯ ಭಯ ಉಂಟು ಮಾಡಿ, ಬೀದಿಯಲ್ಲಿ ಓಡಾಡಿದರೆ, ಕೇಸ್ ಹಾಕುವುದು, ಲಾಠಿ ಪ್ರಯೋಗ ಮಾಡುವುದು, ಅಗತ್ಯ ವಸ್ತುಗಳು ದೊರೆಯದ ಹಾಗೆ ಮಾಡಿ, ಕಾಳಸಂತೆಯ ದರೋಡೆಕೋರರಿಗೆ ಅನುವು ಮಾಡಿಕೊಡುವುದು ಯಾವ ನ್ಯಾಯ?

ಭಾರತಕ್ಕೆ ಅಥವಾ ಪೂರ್ವ ಜಗತ್ತಿನ ರಾಷ್ಟ್ರಗಳಿಗೆ ಇಂತಹ ಪಿಡುಗುಗಳು ಹೊಸತೇನಲ್ಲ. ಈ ದೇಶದಲ್ಲಿ ರೋಗಕ್ಕೆ ಬಲಿಯಾದವರಿಗಿಂತ ಹಸಿವಿನಿಂದ ಸತ್ತ ಬಡವರ ಸಂಖ್ಯೆ ಅಧಿಕವಾಗಿದೆ. ಆದರೆ, ಬಡವರ ಸಾವು, ನೋವು ಇಲ್ಲಿ ಯಾವುದಕ್ಕೂ ಲೆಕ್ಕವಿಲ್ಲ. ಬಡವರು ಈ ದೇಶದಲ್ಲಿ ಬದುಕಿರುವುದು ಓಟು ಒತ್ತುವ ಮತಯಂತ್ರಗಳಾಗಿ ಮಾತ್ರ. ಇದು ಪ್ರತಿಯೊಂದ ರಾಜಕೀಯ ಪಕ್ಷದ ಅಥವಾ ನೇತಾರನ ದೃಢ ನಂಬಿಕೆಯಾಗಿದೆ.

1943 ರಲ್ಲಿ ಬಂಗಾಳ ಪ್ರಾಂತ್ಯದಲ್ಲಿ ಅಂದರೆ, ಈಗಿನ ಪಶ್ಚಿಮ ಬಂಗಾಳ, ಬಂಗ್ಲಾ ದೇಶ ಮತ್ತು ಬಿಹಾರ ರಾಜ್ಯಗಳನ್ನು ಒಳಗೊಂಡ ಪ್ರದೇಶದ ಒಟ್ಟು ಆರು ಕೋಟಿ ಜನಸಂಖ್ಯೆಯಲ್ಲಿ ಮುವತ್ತು ಲಕ್ಷ ಜನತೆ ಹಸಿವು ಮತ್ತು ಸಾಂಕ್ರಾಮಿಕ ರೋಗದಿಂದ ಸತ್ತರು.

ಎರಡನೆಯ ಮಹಾಯುದ್ಧ ನಡೆಯುತ್ತಿದ್ದ ಆ ಸಂದರ್ಭದಲ್ಲಿ ಜಪಾನ್ ಸೇನೆ ನಮ್ಮ ನೆರೆಯ ಬರ್ಮಾ ದೇಶಕ್ಕೆ ಕಾಲಿಟ್ಟಿತ್ತು. ಬಿಟೀಷ್ ಆಧಿಪತ್ಯಕ್ಕೆ ಒಳಪಟ್ಟಿದ್ದ ಭಾರತದ ಮೇಲೆ ಅಂದಿನ ಬ್ರಿಟನ್ ಪ್ರಧಾನಿ ಚರ್ಚಿ ಕೆಲವು ಅಮಾನವೀಯ ನಿರ್ಧಾರಗಳನ್ನು ಕೈ ಗೊಂಡನು.

ಅವುಗಳಲ್ಲಿ ಪ್ರಮುಖವಾದ ನಿರ್ಧಾರವೆಂದರೆ, ಬರ್ಮಾ ದೇಶಕ್ಕೆ ಯಾವುದೇ ಪಡಿತರ ಹೋಗಭಾರದೆಂದು ಕೊಲ್ಕತ್ತ ನಗರದ ಎಲ್ಲಾ ಸಗಟು ದಿನಿಸಿ ಮಾರಾಟದ ಅಂಗಡಿಗಳನ್ನು ಬಂದ್ ಮಾಡಿಸಿದನು. ಜೊತೆಗೆ ಬಂಗಾಳದ ಗೋದಾಮುಗಳಲ್ಲಿ ದಾಸ್ತಾನು ಇಟ್ಟಿದ್ದ ಅಕ್ಕಿ ಮತ್ತು ಗೋಧಿಯನ್ನು ಬಿಡುಗಡೆ ಮಾಡದೆ, ಬ್ರಿಟಿಷ್ ಸೈನಿಕರಿಗೆ ಮೀಸಲಿಟ್ಟನು. ಅಲ್ಲಿನ ಜನತೆ ಒಣಗಿದ ತರಗೆಲೆಗಳಂತೆ ಭೂಮಿಗೆ ಉದುರಿ ಹೋದರು.

ಇಂತಹ ಅನೇಕ ಸಂಕಷ್ಟಗಳನ್ನು, ಕಾಲರಾ, ಸಿಡುಬು, ಮಲೇರಿಯಾ, ಏಡ್ಸ್ ನಂತಹ ಮಹಾಮಾರಿ ಕಾಯಿಲೆಗಳನ್ನು ಎದುರುಸಿರುವ ಭಾರತದ ಜನತೆಗೆ ಕೋವಿಡ್-19 ವೈರಸ್ ಕುರಿತಂತೆ ಈ ರೀತಿ ಅನಗತ್ಯ ಭಯ ಉಂಟು ಮಾಡುವ ಅಗತ್ಯವಿರಲಿಲ್ಲ.

ಸರ್ಕಾರದ ವತಿಯಿಂದ ಏನು ವ್ಯವಸ್ಥೆಯಾಗಿದೆ ಮತ್ತು ಸರ್ಕಾರ ಸೋಂಕನ್ನು ತಡೆಗಟ್ಟಲು ಯಾವ ರೀತಿ ಸಜ್ಜಾಗಿದೆ ಎಂದು ನೋಡಿದರೆ, ಎಲ್ಲವೂ ಶೂನ್ಯ.ಹೋಬಳಿ ಮಟ್ಟದಲ್ಲಿ ಮತ್ತು ನಗರದ ಬಡಾವಣೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಳೆದ ಐದಾರು ವರ್ಷಗಳಿಂದ ವೈದ್ಯರಿಲ್ಲ. ಕೊರನಾ ವೈರಸ್ ಕುರಿತು ಸ್ಪೃಷ್ಟ ಮಾಹಿಯಿಲ್ಲ. ಜನರನ್ನು ಗೃಹ ಬಂಧನದಲ್ಲಿ ಇರಿಸಿದರೆ. ಮಾತ್ರ. ರೋಗ ನಿಯಂತ್ರಿಸಬಹುದು ಎಂಬ ನಂಬಿಕೆ ಇಲ್ಲಿ ಚಾಲ್ತಿಯಲ್ಲಿದೆ.

ಈ ದೇಶದ ಶೇಕಡ 52 ಮಂದಿ ದಿನ ನಿತ್ಯದ ದುಡಿಮೆಯ ಮೇಲೆ ಬೀದಿ ಬದಿಯ ಸೊಪ್ಪು, ತರಕಾರಿ, ಹಣ್ಣು, ಮಾರುವವರು, ಕೃಷಿ ಮತ್ತು ಕೂಲಿ ಕಾರ್ಮಿಕರು, ಸೈಕಲ್ ರಿಕ್ಷಾ, ಆಟೋರಿಕ್ಷಾ, ಕೈಗಾಡಿ ತಳ್ಳುವವರು ಇವರ ಕುರಿತು ನಮ್ಮನ್ನಾಳುವ ಸರ್ಕಾರಗಳು ಯೋಚಿಸಲೇ ಇಲ್ಲ.

ಇಂತಹ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾದ ನಮ್ಮ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಸಿನಿಮಾ ನಟ, ನಟಿಯರ ಬೆನ್ನು ಹತ್ತಿವೆ. ಯಾವ ನಟ ಅಥವಾ ನಟಿ ಏನು ತಿಂದರು? ಹೇಗೆ ವಿಸರ್ಜಿಸಿದರು. ಮನೆಯಲ್ಲಿ ಹೇಗೆ ವ್ಯಾಯಾಮ ಮಾಡುತ್ತಿದ್ದಾರೆ ಇಂತಹ ಸುದ್ದಿಯನ್ನು ಲದ್ದಿಯ ರೂಪದಲ್ಲಿ ನಮ್ಮ ಮನೆ ಬಾಗಿಲಿಗೆ ತಲುಪಿಸುವಲ್ಲಿ ನಿರತವಾಗಿವೆ.

ರಾಜಕೀಯ ಪಕ್ಷಗಳು ಮತ್ತು ಕಾರ್ಪೋರೇಟ್ ಜಗತ್ತಿನ ಎದುರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಬೆತ್ತಲೆಯಾಗಿ ಕುಣಿಯುತ್ತಿರುವ ಮಾಧ್ಯಮ ಸಂಸ್ಥೆಗಳಲ್ಲಿ ದುಡಿಯುವ ಜೀತದಾಳುಗಳಿಗೆ ಕನಿಷ್ಟ ಮಾನವೀಯತೆ ಇದ್ದರೆ, ಬಡವರ ಕೇರಿಗಳಿಗೆ ಮತ್ತು ಬಡಾವಣೆಗಳಿಗೆ ಹೋಗಬಹುದಿತ್ತು. ಆದರೆ, ಸಿನಿಮಾ ನಟ, ನಟಿ ಮತ್ತು ಕ್ರಿಕೇಟ್ ತಾರೆಯರಿಂದ ಈ ಜಗತ್ತು ಬದುಕಿದೆ ಮತ್ತು ಬೆಳಕಾಗುತ್ತಿದೆ ಎಂದು ನಂಬಿರುವ ಬೃಹಸ್ಪತಿಗಳಿಗೆ ಜ್ಞಾನೋದಯವಾಗುವ ಸಂಭವ ತೀರಾ ಕಡಿಮೆ.

ಇನ್ನು ಹೊಟ್ಟೆ ತುಂಬಿದ ನಮ್ಮ ಕೆಲವು ಬುದ್ದಿ ಜೀವಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದಿನಕ್ಕೊಂದು ಉಪದೇಶ ಹೊರಡಿಸುತ್ತಿದ್ದಾರೆ. ತಣ್ಣನೆಯ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು, ಸ್ಕಾಚ್ ವಿಸ್ಕಿ ಹೀರುತ್ತಾ, ಗೋಡಂಬಿ ಮೆಲ್ಲುತ್ತಾ ಪ್ರಧಾನಿಯವರ ಆದೇಶವನ್ನು ಪಾಲಿಸೋಣ ಎನ್ನುವ ಮಹನೀಯರಿಗೆ ನನ್ನದೊಂದು ಕಿವಿಮಾತು.

ದಯವಿಟ್ಟು ನಿಮ್ಮ ಎ.ಸಿ.ಯನ್ನು ಸ್ವಿಚ್ ಆಫ್ ಮಾಡಿ. ಮನೆಯ ಕಿಟಕಿ, ಬಾಗಿಲು ತೆರೆದು ಹೊರ ಜಗತ್ತನ್ನು ನೋಡಿ, ನಿಮ್ಮ ಮನೆಯಾಚೆಯ ಗುಡಿಸಲಿನಲ್ಲಿ ಹೊಲೆ ಉರಿಯದೆ ಇರುವುದು, ದೀಪ ಬೆಳಗದೆ ಇರುವುದನ್ನು ಗಮನಿಸಿ. ಹಸಿವಿನಿಂದ ಅಳುತ್ತಿರುವ ಕಂದಮ್ಮಗಳ ಆಕ್ರಂದನ ನಿಮಗೆ ಕೇಳಿಸದಿದ್ದರೆ, ಆ ಕ್ಷಣದಲ್ಲಿ ನೀವು ಮನುಷ್ಯರಲ್ಲ ಎಂದು ತೀರ್ಮಾನಿಸಿಕೊಳ್ಳಿ, ಏಕೆಂದರೆ, ನೀವು ನಮ್ಮ ನಡುವಿನ ನಕಲಿ ದೇವ ಮಾನವರಂತೆ ಒಣ ವೇದಾಂತದ ಉಪದೇಶ ಮಾಡುವುದಕ್ಕೆ ಮಾತ್ರ ಲಾಯಕ್ಕು.

ಇದರಾಚೆಗೆ ನಿಮ್ಮಿಂದ ಏನನ್ನು ನಿರೀಕ್ಷಿಸಲಾಗದು. “ನೊಂದವರ ನೋವ ನೋಯದವರೆತ್ತ ಬಲ್ಲರೋ?” ಎಂದು ಅಕ್ಕ ಮಾಹಾದೇವಿ ಹಾಡಿರುವುದು ನಿಮಗಾಗಿ ಎಂದು ಈಗಲಾದರೂ ಅರ್ಥ ಮಾಡಿಕೊಳ್ಳಿ. ನಮಸ್ತೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading
Advertisement

Title

ದಿನದ ಸುದ್ದಿ3 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ3 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ3 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ3 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ3 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ4 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ4 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ4 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ4 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ4 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending