ದಿನದ ಸುದ್ದಿ
ಉಳ್ಳವರ ಭಾರತದಲ್ಲಿ ನರಳುತ್ತಿರುವ ಬಡ ಭಾರತ

- ಜಗದೀಶ್ ಕೊಪ್ಪ
ನಮ್ಮ ನಡುವಿನ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಹಾಗೂ ಮಾನವೀಯ ಮುಖದ ಹೃದಯವಂತ ಅಮಾರ್ತ್ಯ ಸೇನ್ ದಶಕದ ಹಿಂದೆ ಭಾರತದ ಅಭಿವೃದ್ಧಿಯನ್ನು ವ್ಯಾಖ್ಯಾನಿಸುತ್ತಾ, “ ಭಾರತದಲ್ಲಿ ಎರಡು ಭಾರತಗಳಿವೆ, ಒಂದು ಉಳ್ಳವರ ಭಾರತ, ಇನ್ನೊಂದು ನರಳುವವರ ಭಾರತ” ಎಂದು ಹೇಳಿದ್ದರು. ಅವರ ಮಾತು ಇಂದಿನ ಭಾರತಕ್ಕೆ ಯಾವುದೇ ಅನುಮಾನವಿಲ್ಲದೆ ಅನ್ವಯಿಸಬಹುದಾಗಿದೆ.
ಜಗತ್ತಿನಾದ್ಯಂತ ಸುನಾಮಿಯಂತೆ ಅಪ್ಪಳಿಸಿರುವ ಕೋವಿಡ್-19 ಅಥವಾ ಕೊರನಾ ವೈರಸ್ ಹಾವಳಿಗೆ ಇದೀಗ ಭಾರತದಲ್ಲಿ ಶ್ರೀಮಂತರು ಅಥವಾ ಮಧ್ಯಮ ವರ್ಗದವರಿಗಿಂತ ಬಡವರನ್ನು ಬಲಿಕೊಡಲಾಗುತ್ತದೆ. ಒಂದು ದೇಶದ ಪ್ರಧಾನಿಯಾದ ವ್ಯಕ್ತಿಗೆ ಈ ದೇಶದ ಆರ್ಥಿಕ ಚಟುವಟಿಕೆಗಳ ಬಗ್ಗೆಯಾಗಲಿ, ದೇಶದ ಬಹುದೊಡ್ಡ ಅಸಂಘಟಿತ ವಲಯವಾದ ಕಾರ್ಮಿಕರ ಕುರಿತಂತೆ ಕಿಂಚಿತ್ತೂ ಕಾಳಜಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಮಧ್ಯ ಚೀನಾದ ವುಹಾನ್ ನಗರದಲ್ಲಿ ಅತಿ ದೊಡ್ಡ ಕಸಾಯಿಖಾನೆ ಕೇಂದ್ರಗಳಿದ್ದು ಈ ನಗರದಿಂದ ಪ್ರಥಮ ಬಾರಿಗೆ ಕಳೆದ ವರ್ಷದ ಕೊನೆಯಲ್ಲಿ ವುಹಾನ್ ನಗರದಲ್ಲಿ ಕೊರನಾ ವೈರಸ್ ಹಾವಳಿ ಕಾಣಿಸಿಕೊಂಡಿತು. ಅದನ್ನು ಅಲ್ಲಿಯ ಸರ್ಕಾರ ಸಮರ್ಥವಾಗಿ ಹಿಮ್ಮೆಟ್ಟಿಸಿತು. ಜೊತೆಗೆ ಅಲ್ಲಿದ್ದ ವಿದೇಶಿ ಪ್ರಜೆಗಳ ಮೂಲಕ ಜಗತ್ತಿನ ಇತರೆ ರಾಷ್ಟ್ರಗಳಿಗೂ ಹರಡಿ ಈಗ ಚೀನಾ ಕಣ್ಮುಚ್ಚಿ ಕುಳಿತಿದೆ.
ಈ ವೈರಸ್ ನ ಬಗ್ಗೆ ಹಾಗೂ ಅವರ ಗುಣ ಲಕ್ಷಣಗಳ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ತಮ್ಮ ವೆಬ್ ಸೈಟ್ ನಲ್ಲಿ ವಿವರವಾಗಿ ಪ್ರಕಟಿಸಿದ್ದರೂ ಕೂಡ ಇಲ್ಲಿನ ಆಳುವ ವರ್ಗ ಪುಂಖಾನುಪುಂಖವಾಗಿ ಕಟ್ಟು ಕಥೆಯನ್ನು ಹುಟ್ಟು ಹಾಕಿ ಜನತೆಯಲ್ಲಿ ಭಯ ಮತ್ತು ಭೀತಿಯನ್ನು ಹುಟ್ಟು ಹಾಕಿತು.
ಬ್ಯಾಕ್ಟಿರಿಯಾಗಿಂತ ಅತಿ ಸಣ್ಣ ಹಾಗೂ ಸೂಕ್ಮವಾಗಿರುವ ಈ ವೈರಾಣಣು ಜೀವಕೋಶಗಳ ನೆರವಿಲ್ಲದೆ ವಾತಾವರಣದಲ್ಲಿ ಹೆಚ್ಚು ಕಾಲ ಬದುಕಿರುವುದಿಲ್ಲ. ಯಾವುದೇ ವಸ್ತುವಿನ ಮೇಲೆ ಇದ್ದರೂ ಸಹ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಇದು ಸಾಯುತ್ತದೆ ಎಂದು ವಿಶ್ಸಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಬೆಂಗಳೂರಿನ ಮಾನಸಿಕ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಗಿರೀಶ್ ಉಪಾಧ್ಯಾಯ ವಿವರಿಸಿದ್ದಾರೆ. ಈ ವೈರಾಣು ಬಾಯಿ ಅಥವಾ ಮೂಗಿನ ಉಸಿರಾಟದ ಮೂಲಕ ಮನುಷ್ಯನೊಳಗೆ ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ನಿರ್ಧಿಷ್ಟ ಅಂತರ ಕಾಪಾಡಿಕೊಳ್ಳಬೇಕು ಮತ್ತು ಕೈಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ಮುನ್ನಚ್ಚೆರಿಕೆಯ ಕ್ರಮಗಳನ್ನು ವಿವರಿಸಿದ್ದಾರೆ.
ಭಾರತಕ್ಕೆ ಈ ವೈರಾಣು ಪ್ರವೇಶ ಪಡೆದದ್ದು ವಿದೇಶಗಳಲ್ಲಿದ್ದು ಭಾರತಕ್ಕೆ ಹಿಂತಿರುಗಿದ ಭಾರತೀಯರಿಂದ, ಈ ಕುರಿತಂತೆ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಯನ್ನು ಕಳೆದ ಜನವರಿಯಲ್ಲಿ ಜಾರಿಗೆ ತರಬಹುದಿತ್ತು. ಆದರೆ, ಹೆದರಿದವರ ಮೇಲೆ ಸತ್ತ ಹಾವನ್ನು ಎಸೆದರು ಎಂಬ ಗಾದೆಯಂತೆ ಸಿರಿವಂತರನ್ನು ನಿಯಂತ್ರಿಸಲಾರದ ಪ್ರಧಾನಿಯೆಂಬ ಮಹಾನ್ ನಟರು ದೇಶದ ಎಲ್ಲಾ ಪ್ರಜೆಗಳ ಮೇಲೆ ಬರೆ ಎಳೆದರು.
ಶ್ರೀಮಂತರು ಮತ್ತು ಅವರ ಮಕ್ಕಳನ್ನು ವಿದೇಶದಿಂದ ಕರೆತರಲು ವಿಮಾನ ಯಾನ, ವಿಶೇಷ ವಿಮಾನ ವ್ಯವಸ್ಥೆ ಮಾಡಿದ ಪ್ರಧಾನಿಗೆ ದೇಶಾದ್ಯಂತ ಜಾರಿಗೆ ತಂದ ಲಾಕ್ ಡೌನ್ ವ್ಯವಸ್ಥೆಗೆ ಮುನ್ನ ದೇಶದ ಮಹಾನ್ ನಗರಗಳಲ್ಲಿ ಕಟ್ಟಡ, ರಸ್ತೆ, ಹೋಟೆಲ್ ಇತ್ಯಾದಿ ವಲಯಗಳಲ್ಲಿ ದುಡಿಯುತ್ತಿರುವ ಸೂರಿಲ್ಲದ ಬಡ ಕಾರ್ಮಿಕರಿಗೆ ಕನಿಷ್ಠ ರೈಲುಗಳ ಮೂಲಕ ಅವರನ್ನು ಊರಿಗೆ ತಲುಪಿಸುವ ಯೋಚನೆ ಹೊಳೆಯಲಿಲ್ಲ.
ಎಂತಹ ಅಯೋಗ್ಯರು ಮತ್ತು ಮುಠಾಳರು ಕೇಂದ್ರ ಸಚಿವ ಸಂಪುಟದಲ್ಲಿ ಇದ್ದಾರೆ ಎಂದರೆ, ಹಳೆಯ ರಾಮಾಯಣ, ಮಹಾಭಾರತ ಧಾರವಾಹಿಗಳನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡುತ್ತಿದ್ದೇವೆ ನೋಡಿ ಎಂದು ಪ್ರಕಾಶ್ ಜಾವೇದ್ಡ್ಕರ್ ಎಂಬ ಸಚಿವ ಹೇಳಿಕೆ ನೀಡುತ್ತಾನೆ. ಈ ಅವಿವೇಕಿಗೆ ವಲಸೆ ಕಾರ್ಮಿಕರು ಬದುಕುವ ಸೂರಿನಡಿ, ವಿದ್ಯುತ್ ಅಥವಾ ಟಿ.ವಿ. ಇಲ್ಲ ಎಂಬ ಕನಿಷ್ಠ ವಿವೇಕವೂ ಇಲ್ಲ.
ದೇಹಲಿಯಲ್ಲೇ ಇರುವ ಪ್ರಧಾನಿ ಮತ್ತು ಅವರ ನಲವತ್ತು ಮಂದಿ ಸಚಿವ ಸಂಪುಟದ ಮೂರ್ಖ ಸಚಿವರು ದೆಹಲಿಯ ಕಾಶ್ಮೀರಿ ಗೇಟ್, ಜಾಮೀಯ ಮಸೀದಿ ಪ್ರದೇಶ, ಕರೋಲ್ ಬಾಗ್ ಹಾಗೂ ಕನಾಟ್ ಸರ್ಕಲ್ ಪ್ರದೇಶಗಳಲ್ಲಿ ರಾತ್ರಿ ವೇಳೆ ಸಂಚರಿಸಿದ್ದರೆ, ವಲಸೆ ಕಾರ್ಮಿಕರು ಭೂಮಿಯನ್ನು ಹಾಸಿಗೆ ಮಾಡಿಕೊಂಡು, ಆಕಾಶವನ್ನು ಹೊದಿಕೆಯನ್ನಾಗಿಸಿಕೊಂಡು ಮಲಗಿರುವ ದೃಶ್ಯ ಕಾಣುತ್ತಿತ್ತು. ಬಡವರ ಕಷ್ಟ ಅರಿವಾಗುತ್ತಿತ್ತು. ದೇಶದ ಬಹುತೇಕ ಮಹಾನಗರಗಳಲ್ಲಿ ಲಕ್ಷಾಂತರ ಮಂದಿ ಇಂತಹ ದುಸ್ಥಿತಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.ಇಂತಹವರು, ಹಣ್ಣು, ತರಕಾರಿ, ಸೊಪ್ಪು ಮಾರುವವರು ಮತ್ತು ರೈತರ ಬವಣೆಗಳನ್ನು ಗಣನೆಗೆ ತೆಗೆದುಕೊಳ್ಳದೆ, ಪೊಲೀಸರಿಗೆ ಅಧಿಕಾರ ನೀಡಲಾಯಿತು.
ಕೈಯಲ್ಲಿ ಸುತ್ತಿಗೆ ಹಿಡಿದವನಿಗೆ ಜಗತ್ತಿನಲ್ಲಿರುವ ವಸ್ತುಗಳು ಮೊಳೆಯಂತೆ ಕಾಣುತ್ತವೆ ಎಂಬ ಮಾತಿನಂತೆ ಪೊಲೀಸರು ಕೈಯಲ್ಲಿ ಲಾಠಿ ಹಿಡಿದು ಎಲ್ಲರ ಮೇಲೆ ಬೀಸುತ್ತಾ, ತಮ್ಮ ರಾಕ್ಷಸತನವನ್ನು ಮೆರೆಯುತ್ತಿದ್ದಾರೆ. ಮೈಸೂರಿನ ಚೆಲುವಾಂಬ ಎಂಬ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆ ಹಾಗೂ ಕೆ.ಆರ್. ಆಸ್ಪತ್ರೆ ಬಳಿ ರೋಗಿಗಳಿಗೆ ತಿನ್ನಲು ಹಣ್ಣುಗಳು ದೊರೆಯುತ್ತಿಲ್ಲ. ಕುಡಿಯಲು ಒಂದು ಲೋಟ ಬಿಸಿ ಹಾಲು ಅಥವಾ ಬಿಸಿ ಬ್ರೆಡ್ ಸಿಗುತ್ತಿಲ್ಲ. ಮೈಸೂರಿನಲ್ಲಿ ಒಂದೂವರೆ ಸಾವಿರ ವಿದೇಶಿ ಪ್ರವಾಸಿಗಳು ಉಳಿದುಕೊಂಡಿದ್ದು ಅವರು ಉಪಯೋಗಿಸುವ ಲಘು ಆಹಾರವಾದ ಹಣ್ಣು, ಬ್ರೆಡ್, ಕೇಕ್, ಬಿಸ್ಕೆಟ್, ಇತ್ಯಾದಿ ವಸ್ತುಗಳಿಗಾಗಿ ಬೀದಿ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ.. ಇದು ವ್ಯಸ್ಥೆಯ ಕ್ರೌರ್ಯವಲ್ಲದೆ ಇನ್ನೇನು?
ರೋಗ ನಿಯಂತ್ರಣಕ್ಕೆ ಸಭೆ, ಸಮಾರಂಭ, ಸಿನಿಮಾ ಹಾಲ್, ಬೃಹತ್ ಮಾಲ್ ಗಳನ್ನು ಮುಚ್ಚಿಸಿ, ನಿಗದಿತ ಮಾರ್ಗದಲ್ಲಿ ತಪಾಸಣೆ ಮಾಡಿ ಸ್ಥಳಿಯರ ಓಡಾಟಕ್ಕೆ ಅನುವು ಮಾಡಿಕೊಡಬಹುದಿತ್ತು. ಅದೇ ರೀತಿ ದಿನಸಿ ಅಂಗಡಿ ವಸ್ತುಗಳನ್ನು ಸರಬರಾಜು ಮಾಡುವ ಮಂಡಿಗಳಿಗೆ ನಿಗದಿತ ಅವಧಿಗೆ ಅವಕಾಶ ನೀಡಬಹುದಿತ್ತು., ಇವೆಲ್ಲವನ್ನೂ ಬದಿಗೆ ಸರಿಸಿ ತರಕಾರಿ, ಮತ್ತು ಹಣ್ಣಿನ ಮಾರುಕಟ್ಟೆಗಳನ್ನು ಮುಚ್ಚಿಸಿ, ಕಾರ್ಮಿಕರ ಜೊತೆಗೆ ರೈತರಿಗೂ ಈ ಸರ್ಕಾರ ಬರೆ ಎಳಿಯಿತು.
ಕೇವಲ ಅವದೂತನಂತೆ ಅವತರಿಸಿ ರೇಡಿಯೊ ಮತ್ತು ಟಿ.ವಿಗಳಲ್ಲಿ ಭಾಷಣ ಮಾಡುವ ಪ್ರಧಾನಿಗೆ ರಾಜ್ಯ ಸರ್ಕಾರಗಳಿಗೆ ಯಾವುದೇ ಆರ್ಥಿಕ ನೆರವು ನೀಡುವ ಮನಸ್ಸಿಲ್ಲ, ಕಳೆದ ಆಗಸ್ಟ್ ನಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ 50 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದರೆ, ಕೇಂದ್ರದಿಂದ ದೊರೆತ ಪರಿಹಾರ ಎರಡು ಕಂತುಗಳಲ್ಲಿ ( 600+1200) ಬರ ಪರಿಹಾರವೂ ಸೇರಿ ಕೇವಲ 1800 ಕೋಟಿ ರೂಪಾಯಿಗಳು ಮಾತ್ರ. ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಇಪ್ಪತ್ತೈದು ಬಿ.ಜೆ.ಪಿ. ಸಂಸದರು ಬಾಯಿಗೆ ಬಗನಿ ಗೂಟ ಜಡಿದುಕೊಂಡು ಮೌನವಾಗಿದ್ದಾರೆ.
ಇಡೀ ದೇಶದಲ್ಲಿ ಕೊರನಾ ಸೊಂಕಿನಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಪರಿಹಾರ ಸಿಕ್ಕಿಲ್ಲಿ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೇಂದ್ರ ಸರ್ಕಾರ ಏನೂ ಕೊಡದಿದ್ದರೂ ಚಿಂತೆ ಇಲ್ಲ, ಅವರನ್ನು ಅಧಿಕಾರದ ಕುರ್ಚಿಯಿಂದ ಕದಲಿಸದಿದ್ದರೆ ಸಾಕು ಎಂಬ ಮನಸ್ಥಿತಿಯಲ್ಲಿದ್ದಾರೆ. ಇಂತಹವರನ್ನ ಆಯ್ಕೆ ಮಾಡಿಕಳಿಸಿದ ಗೋಮೂತ್ರ, ಸಗಣಿ, ಶಂಖ ಮತ್ತು ಜಾಗಟೆಯ ಗಿರಾಕಿಗಳು ಒಮ್ಮೆ ಎದೆಮುಟ್ಟಿಕೊಂಡು ತಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಬೇಕು.
ಬಿ.ಎಲ್. ಸಂತೋಷ್ ಎಂಬ ಅವಿವೇಕಿಯೊಬ್ಬನನ್ನು ಬಿ.ಜೆ.ಪಿ. ಪಕ್ಷದ ರಾಷ್ಟ್ರಮಟ್ಟದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈತ ಎಂತಹ ವಿಕೃತ ಮನಸ್ಥಿತಿಯವನು ಎಂದರೆ, ಬೆಂಗಳೂರು ಬಳಿಯ ಅತ್ತಿಬೆಲೆಯ ಗಡಿಯಿಂದ ತಮಿಳುನಾಡಿನ ಚೆನ್ನೈ ನಗರ ಕೇವಲ ನೂರು ಕಿಲೊಮೀಟರ್ ಗಿಂತಲೂ ಕಡಿಮೆಯಿದೆ, ಕಾರ್ಮಿಕರು ನಡೆದುಕೊಂಡು ಹೋಗಲಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾನೆ.
ಈ ದುರಂಕಾರಿಗೆ ಬೆಂಗಳೂರು-ಚೆನ್ನೈ ನಡುವಿನ ಅಂತರ 347 ಕಿ.ಮಿ. ಎಂಬ ಕನಿಷ್ಠ ಜ್ಞಾನವೂ ಇಲ್ಲ. ಭೌಗೂಳಿಕ ಜ್ಞಾನವಿಲ್ಲದ ಇಂತಹ ಜಾತಿಯ ಕ್ರಿಮಿಗಳು ಈಗ ರಾಷ್ಟ್ರ ಮಟ್ಟದಲ್ಲಿ ನಾಯಕರಾಗಿ ಬೆಳೆಯುತ್ತಿದ್ದಾರೆ. ಇವುಗಳನ್ನು ಪ್ರಶ್ನಿಸಬೇಕಾದ ಮಾಧ್ಯಮಗಳು ಈಗ ಆರ್.ಎಸ್.ಎಸ್, ನ ಶಾಖಾಮಠಗಳಾಗಿರುವ ಕಾರಣ ದಿವ್ಯ ಮೌನಕ್ಕೆ ಶರಣಾಗಿವೆ.
ಕಾಲ್ನಡಿಗೆಯಲ್ಲಿ ಹುಟ್ಟಿದ ಊರಿನತ್ತ ಪ್ರಯಾಣ ಹೊರಟ ನತದೃಷ್ಟರು, ಆಹಾರ, ನೀರು ಇಲ್ಲದೆ, ನಡುರಸ್ತೆಯಲ್ಲಿ ಬಸವಳಿಯುತ್ತಾ ಸಾಗುತ್ತಿದ್ದಾರೆ. ನಾವು ಮೌನ ಸಾಕ್ಷಿಗಳಾಗಿದ್ದೇವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ6 days ago
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ6 days ago
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
-
ದಿನದ ಸುದ್ದಿ6 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ6 days ago
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
-
ದಿನದ ಸುದ್ದಿ5 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು
-
ಅಂಕಣ5 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ