ಕ್ರೀಡೆ
ಏಕದಿನ ಸರಣಿ | ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಜಯ
ಸುದ್ದಿದಿನ, ನ್ಯೂಜಿಲೆಂಡ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಇಂದು ಮೊದಲನೇ ಪಂದ್ಯದಲ್ಲಿ ಭಾರತ, ಗೆಲುವನ್ನ ಸಾಧಿಸಿ ಶುಭಾರಂಭ ಮಾಡಿದೆ.ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ಗೆ ಆರಂಭದಲ್ಲಿ ಮೊಹಮ್ಮದ್ ಶಮಿ ದಾಳಿಗೆ ಮಂಕಾದ್ರೆ, ಬಳಿಕ ಕುಲ್ದೀಪ್ ಯಾದವ್ ಸ್ಪಿನ್ ಮೋಡಿಗೆ ವಿಕೆಟ್ ಕ್ಲೀನ್ ಸ್ವಾಪ್ ಆಗಿತ್ತು. ಹೀಗಾಗಿ ನ್ಯೂಜಿಲೆಂಡ್ 38 ಓವರ್ಗಳಲ್ಲಿ 157 ರನ್ಗೆ ಆಲೌಟ್ ಆಯಿತು.
ನ್ಯೂಜಿಲೆಂಡ್ ತಂಡವನ್ನ ಅಲ್ಪಮೊತ್ತಕ್ಕೆ ಆಲೌಟ್ ಮಾಡಿ 158 ರನ್ ಟಾರ್ಗೆಟ್ ಪಡೆದಿದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆರಂಭಿಸಿತು.ಬ್ಯಾಟಿಂಗ್ನಲ್ಲಿ ಶಿಖರ್ ಧವನ್ ಆಕರ್ಷಕ ಅರ್ಧ ಶತಕ ಸಿಡಿಸಿ ಅಬ್ಬರಿಸಿದರು. ಈ ಮೂಲಕ ಮೊದಲ 34.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಭಾರತ ಜಯ ಸಾಧಿಸಿತು. ಧವನ್ ಅಜೇಯ 75 ರನ್ , ರಾಯುಡು 13 ರನ್ ನಾಯಕ ಕೊಹ್ಲಿ 45 ರನ್ ಗಳಿಸಿದ್ದಾರೆ.
ನಾಯಕ ಕೇನ್ ವಿಲಿಯಮ್ಸನ್ 64 ರನ್ ಹೊರತು ಪಡಿಸಿದರೆ ಇನ್ಯಾವ ಬ್ಯಾಟ್ಸ್ಮನ್ಗಳು ಹೋರಾಟ ನೀಡಲಿಲ್ಲ. ಭಾರತದಪರ ಕುಲ್ದೀಪ್ ಯಾದವ್ 4, ಮೊಹಮ್ಮದ್ ಶಮಿ 3, ಯಜುವೇಂದ್ರ ಚೆಹಾಲ್ 2 ಹಾಗೂ ಕೇದಾರ್ 1 ವಿಕೆಟ್ ಹಾಗು ಮಹ್ಮದ್ ಶಮಿ ಟಾಪ್ ಆರ್ಡರ್ ಮೂರು ವಿಕೆಟ್ ಪಡೆಯುವುದರ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಟಿ-20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ದೆಹಲಿಗೆ ಆಗಮನ ; ಸಂಜೆ ರೋಡ್ ಶೋ
ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್ನಿಂದ ತಂಡವು ಹಿಂತಿರುಗಿತು.
ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡದ ಆಗಮನ ವಿಳಂಬವಾಯಿತು. ರಾಷ್ಟ್ರದ ರಾಜಧಾನಿಯಲ್ಲಿ ಭಾರತೀಯ ತಂಡವನ್ನು ಸ್ವಾಗತಿಸಲು ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಮುಂಬೈಗೆ ತೆರಳುವ ಮುನ್ನ ಭಾರತ ತಂಡ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದೆ.
ಚಾಂಪಿಯನ್ ತಂಡ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ -ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.
ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ. ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
11 ವರ್ಷಗಳ ನಂತರ ಭಾರತ ತಂಡಕ್ಕೆ ಐಸಿಸಿ ಟಿ-20 ವಿಶ್ವಕಪ್ ಕಿರೀಟ ; ಗಣ್ಯರ ಮೆಚ್ಚುಗೆ
ಸುದ್ದಿದಿನಡೆಸ್ಕ್:ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ, 17 ವರ್ಷಗಳ ನಂತರ ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆದ್ದಸಾಧನೆ ಮಾಡಿದೆ.
ಭಾರತ ನೀಡಿದ 177 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತಗೊಂಡಿತು. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 52 ರನ್ ಗಳಿಸಿದರೆ, ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 3, ಜಸ್ ಪ್ರಿತ್ ಬುಮ್ರಾ ಮತ್ತು ಅರ್ಷ್ ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.
ಟೂರ್ನಿಯಲ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಸಹಜವಾಗಿಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಹಾಗೆಯೇ 8 ಪಂದ್ಯಗಳಿಂದ 15 ವಿಕೆಟ್ ಉರುಳಿಸಿದ ವೇಗಿ ಜಸ್ ಪ್ರಿತ್ ಬುಮ್ರಾ ಟೂರ್ನಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. 2007ರ ನಂತರ ಭಾರತ ಟಿ20 ವಿಶ್ವಕಪ್ ಗೆದ್ದರೆ, 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಐಸಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ.
ಈ ಮಧ್ಯೆ, ಭಾರತ ತಂಡ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕ್ರಿಕೆಟ್ ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಪ್ರಕಟಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!