Connect with us

ಸಿನಿ ಸುದ್ದಿ

ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಅಷ್ಟೇ ಅಲ್ಲ..!

Published

on

  • ಚೇತನ್ ನಾಡಿಗೇರ್

ಹಿಂದಿ ರಾಷ್ಟ್ರ ಭಾಷೆ ಹೌದು, ಅಲ್ಲ ಎನ್ನುವುದರ ಕುರಿತು ಇಡೀ ದೇಶದಲ್ಲಿ ಕಳೆದೊಂದು ದಿನದಿಂದ ದೊಡ್ಡ ಚರ್ಚೆಯಾಗುತ್ತಿದೆ. ಬಾಲಿವುಡ್ ಮತ್ತು ದಕ್ಷಿಣ ಭಾರತೀಯ ಚಿತ್ರರಂಗಗಳ ನಡುವೆ ಯಾರು ಮೇಲು ಎಂಬುದರ ಕುರಿತು ಕೆಲವು ತಿಂಗಳುಗಳಿಂದ ತರ್ಕ ನಡೆಯುತ್ತಿದೆ. ಇದು ಒಂದೆಡೆಯಾದರೆ, ಇನ್ನೊಂದು ಕಡೆ ಚಿತ್ರರಂಗಗಳನ್ನು ಭಾಷೆ ಮತ್ತು ಪ್ರಾಂತ್ಯಗಳ ಆಧಾರದ ಮೇಲೆ ವಿಂಗಡಿಸುವುದನ್ನು ಬಿಟ್ಟು ನಾವು ಭಾರತೀಯರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ಒಂದು ಚಿತ್ರವನ್ನು ಒಂದು ಭಾಷೆಗೆ ಸೀಮಿತ ಮಾಡದೆ, ಭಾರತೀಯ ಚಿತ್ರ ಎಂದು ನೋಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಚರ್ಚೆಗಳು ಇಲ್ಲಿ ಭಾಷೆಗಳು ಮತ್ತು ರಾಜ್ಯಗಳ ನಡುವೆ ನಡಯುತ್ತಿವೆ. ಆದರೆ, ಜಾಗತಿಕ ಚಿತ್ರರಂಗದಲ್ಲಿ ಭಾರತೀಯ ಚಿತ್ರರಂಗಕ್ಕೆ ಬೇರೆಯದೇ ಸ್ಥಾನವಿದೆ. ಬೇರೆಯದೇ ಮಹತ್ವವಿದೆ. ಏಕೆಂದರೆ, ಬೇರೆ ಭಾಷೆಗಳ ಚಿತ್ರರಂಗಗಳಿಗಿಂತ ಭಾರತೀಯ ಚಿತ್ರರಂಗ ವಿಭಿನ್ನವಾಗಿ ನಿಲ್ಲುವುದೇ ಇಲ್ಲಿನ ಭಾಷೆ, ಸೊಗಡು ಮತ್ತು ವೈವಿಧ್ಯತೆಯೇ ಕಾರಣ.

ಜಗತ್ತಿನಾದ್ಯಂತ ಎಲ್ಲಾ ದೇಶಗಳಲ್ಲೂ ಅದರದ್ದೇ ಆದ ಚಿತ್ರರಂಗಗಳಿವೆ. ಇಂಗ್ಲೀಷ್, ಫ್ರೆಂಚ್, ಪರ್ಶಿಯನ್, ಜರ್ಮನ್, ಕೊರಿಯನ್, ಜಾಪನೀಸ್, ಚೈನೀಸ್ (ಮಾಂಡರಿನ್), ಇಟಾಲಿಯನ್, ರಷ್ಯನ್ ಹೀಗೆ ಬೇರೆಬೇರೆ ದೇಶಗಳಲ್ಲಿ ಅದರದ್ದೇ ಆದ ಚಿತ್ರರಂಗಗಳಿವೆ. ಇಂಗ್ಲೀಷ್ ಚಿತ್ರಗಳು ಬರೀ ಹಾಲಿವುಡ್ನಲ್ಲಿ ಮಾತ್ರ ತಯಾರಾಗುವುದಿಲ್ಲ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ನಲ್ಲೂ ತಯಾರಾಗುತ್ತಿವೆ.

ಎಲ್ಲಾ ದೇಶಗಳಲ್ಲಿ ವರ್ಷವೊಂದಕ್ಕೆ ನೂರಾರು ಚಿತ್ರಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಆದರೆ, ಭಾರತದಲ್ಲಿ ಕಂಡಂತೆ ಯಾವುದೇ ದೇಶದಲ್ಲೂ ಇಷ್ಟೊಂದು ಭಾಷೆಗಳ ಚಿತ್ರಗಳನ್ನು ಕಾಣುವುದಕ್ಕೆ ಸಾಧ್ಯವೇ ಇಲ್ಲ. ಅಲ್ಲಿ ಮುಖ್ಯ ಭಾಷೆಯಲ್ಲದೆ ಒಂದೆರೆಡು ಉಪಭಾಷೆಗಳ ಚಿತ್ರಗಳು ಬರಬಹುದು ಅಷ್ಟೇ. ಆದರೆ, ಭಾರತದಲ್ಲಿ ಹಾಗಿಲ್ಲ.

ಇಲ್ಲಿ ಭಾರತೀಯ ಚಿತ್ರರಂಗ ಎಂದು ಯಾವುದೋ ಒಂದು ಭಾಷೆಯ ಚಿತ್ರರಂಗಕ್ಕೆ ಹೇಳುವುದು ಸಾಧ್ಯವಿಲ್ಲ. ಸಾಮಾನ್ಯವಾಗಿ ಹೊರಜಗತ್ತಿಗೆ ಭಾರತೀಯ ಚಿತ್ರರಂಗವೆಂದರೆ, ಹಿಂದಿ ಚಿತ್ರರಂಗ ಅಥವಾ ಬಾಲಿವುಡ್ ಮಾತ್ರ ಕಾಣಬಹುದು. ಆದರೆ, ಅದರ ಹೊರತಾಗಿಯೂ ೨೦ಕ್ಕೂ ಹೆಚ್ಚು ಚಿತ್ರರಂಗಗಳಿವೆ ಮತ್ತು ಪ್ರತಿಯೊಂದು ರಾಜ್ಯದಲ್ಲೂ ಆಯಾ ಭಾಷೆಯ ಒಂದು ಚಿತ್ರರಂಗವಿದ್ದೇ ಇದೆ.

ಭಾರತದ ಮೊದಲ ಚಿತ್ರ `ರಾಜ ಹರಿಶ್ಚಂದ್ರ’ ಬಿಡುಗಡೆಯಾಗಿ ಕೆಲವು ವರ್ಷಗಳಲ್ಲೇ ಬೇರೆಬೇರೆ ಭಾಷೆಗಳಲ್ಲೂ ಚಿತ್ರಗಳ ನಿರ್ಮಾಣ ಪ್ರಾರಂಭವಾಗಿದೆ. ಆದರೆ, ಎಲ್ಲವೂ ಮೂಕಿ ಚಿತ್ರಗಳಾದ್ದರಿಂದ, ಅದು ಯಾವುದೋ ಒಂದು ಭಾಷೆಯ ಚಿತ್ರ ಎಂದು ಗುರುತಿಸುವುದು ಕಷ್ಟ. 1931ರಲ್ಲಿ ಭಾರತದ ಮೊದಲ ಟಾಕಿ ಚಿತ್ರವಾದ ‘ಆಲಂ ಅರಾ’ ಬಿಡುಗಡೆಯಾದ ಮೇಲೆ ಬೇರೆ ಭಾಷೆಗಳಲ್ಲೂ ಚಿತ್ರನಿರ್ಮಾಣ ಪ್ರಾರಂಭವಾಗಿ, ಬೇರೆ ಭಾಷೆಗಳ ಚಿತ್ರರಂಗಗಳೂ ಪ್ರಾರಂಭವಾಗಿವೆ. ಸದ್ಯಕ್ಕೆ ಭಾರತೀಯ ಚಿತ್ರರಂಗದಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬಂಗಾಲಿ, ಮರಾಠಿ, ಭೋಜಪುರಿ, ಗುಜರಾತಿ, ರಾಜಸ್ತಾನಿ, ಒಡಿಯಾ, ಮಣಿಪುರಿ, ಅಸ್ಸಾಮಿ, ಡೋಗ್ರಿ, ಪಂಜಾಬಿ, ಹರಿಯಾಣ್ವಿ, ನಾಗ್ಪುರಿ, ಮೇಯ್ತಿ ಹೀಗೆ 20ಕ್ಕೂ ಹೆಚ್ಚು ಚಿತ್ರರಂಗಗಳಿವೆ.

ಇನ್ನು, ಇತ್ತೀಚಿನ ವರ್ಷಗಳಲ್ಲಿ, ಹೈದರಾಬಾದಿನ ಉರ್ದು ಮಾತನಾಡುವ ಜನರಿಗಾಗಿಯೇ ಡೆಕ್ಕನಿ ಎಂಬ ಚಿತ್ರರಂಗ ಹುಟ್ಟಿಕೊಂಡಿದ್ದು, ಡೆಕ್ಕನಿ ಭಾಷೆಯ ಚಿತ್ರಗಳು ನಿರ್ಮಾಣವಾಗುತ್ತಿವೆ. ಈ ಭಾಷೆಯ ಚಿತ್ರಗಳು ಆಂಧ್ರ ಪ್ರದೇಶ, ತೆಲಂಗಾಣ ಮುಂತಾದ ಕಡೆ ಪ್ರದರ್ಶನವಾಗುತ್ತವೆ. ಇವಿಷ್ಟು ಚಿತ್ರರಂಗಗಳಲ್ಲದೆ, ಪ್ರಾದೇಶಿಕ ಚಿತ್ರರಂಗಗಳು ಬೇರೆ ಇವೆ.

ಉದಾಹರಣೆಗೆ, ಕನ್ನಡದಲ್ಲೇ ಪ್ರಾದೇಶಿಕ ಭಾಷೆ ಎಂದು ಗುರುತಿಸಿಕೊಂಡಿರುವ ತುಳು, ಕೊಂಕಣಿ, ಕೊಡವ, ಬಂಜಾರ ಮತ್ತು ಬ್ಯಾರಿ ಭಾಷೆಗಳಿವೆ. ಈ ಎಲ್ಲಾ ಭಾಷೆಗಳಲ್ಲೂ ಚಿತ್ರ ನಿರ್ಮಾಣವಾಗುತ್ತಿರುವುದು ವಿಶೇಷ. ಮುಖ್ಯ ಭಾಷೆಯಂತೆ ಈ ಭಾಷೆಗಳಲ್ಲಿ ಸತತವಾಗಿ ಚಿತ್ರಗಳ ನಿರ್ಮಾಣವಾಗದಿದ್ದರೂ, ಆಗಾಗ ಒಂದೊಂದು ಪ್ರಯತ್ನ ಮತ್ತು ಪ್ರಯೋಗಗಳಾಗುತ್ತಲೇ ಇರುತ್ತವೆ. ಉದಾಹರಣೆಗೆ, ತುಳು ಚಿತ್ರರಂಗ 1931ರಿಂದಲೇ ಅಸ್ತಿತ್ವದಲ್ಲಿದ್ದರೂ, ನಿರ್ಮಾಣವಾಗುತ್ತಿದ್ದ ಚಿತ್ರಗಳ ಸಂಖ್ಯೆ ಕಡಿಮೆಯೇ ಇತ್ತು. ಇತ್ತೀಚಿನ ವರ್ಷಗಳಲ್ಲಿ ತುಳು ಭಾಷೆಯಲ್ಲಿ ನಿರ್ಮಾಣ ಹೆಚ್ಚಾಗಿದ್ದು, ಪ್ರತಿ ವರ್ಷ 10ಕ್ಕೂ ಹೆಚ್ಚು ಸಂಖ್ಯೆಯ ಚಿತ್ರಗಳು ನಿರ್ಮಾಣವಾಗುತ್ತಿವೆ.

ಇದಲ್ಲದೆ ಬಿಹಾರದಲ್ಲಿ ಹಿಂದಿ ಮತ್ತು ಭೋಜಪುರಿಯ ಜೊತೆಗೆ ಮಘಹಿ ಭಾಷೆಯ ಚಿತ್ರಗಳು ಬಿಡುಗಡೆಯಾಗುತ್ತವೆ. ಗುಜರಾತ್ನಲ್ಲಿ ಗುಜರಾತಿ ಭಾಷೆಯ ಚಿತ್ರಗಳ ಜೊತೆಗೆ ಕಛ್ಛಿ ಭಾಷೆಯ ಚಿತ್ರಗಳು ಸಹ ತೆರೆ ಕಾಣುತ್ತವೆ. ಇನ್ನು ಒಡಿಯಾದಲ್ಲಿ ಒಡಿಸ್ಸಿ ಭಾಷೆಯ ಜೊತೆಗೆ ಸಂಭಲಪುರಿ ಅಥವಾ ಖೋಸ್ಲಿ ಭಾಷೆಯ ಚಿತ್ರಗಳನ್ನು ನೋಡಬಹುದು. ಇದಲ್ಲದೆ ಭಾರತದ ಅತ್ಯಂತ ಪುರಾತನ ಭಾಷೆಯಾದ ಸಂಸ್ಕೃತದಲ್ಲೂ ಆಗಾಗ ಚಿತ್ರಗಳು ನಿರ್ಮಾಣವಾಗುವುದುಂಟು.

ಇಷ್ಟೆಲ್ಲಾ ಚಿತ್ರರಂಗಗಳು ಆಯಾ ಭಾಷೆಯ ಹೆಸರಿನಿಂದಲೇ ಗುರಿತಿಸಿಕೊಳ್ಳುತಿತ್ತು. ಆದರೆ, 90ರ ದಶಕದಿಂದಿತ್ತೀಚೆಗೆ, ಈ ಚಿತ್ರರಂಗಗಳನ್ನು ಗುರುತಿಸುವ ಪರಿಪಾಠ ಬದಲಾಯಿತು. ಇಂಗ್ಲೀಷ್ ಚಿತ್ರಗಳನ್ನು ಹೇಗೆ ಹಾಲಿವುಡ್ ಎಂದು ಗುರುತಿಸಲಾಯಿತೋ, ಭಾರತದಲ್ಲೂ ಒಂದೊಂದು ಭಾಷೆಗೂ ಒಂದೊಂದು ವುಡ್ ಎಂದು ಹೆಸರು ಕೊಡುವ ಟ್ರೆಂಡ್ ಶುರುವಾಯಿತು. ಮೊದಲಿಗೆ ಹಿಂದಿ ಚಿತ್ರರಂಗಕ್ಕೆ ಬಾಲಿವುಡ್ ಎಂದು ಕರೆಯಲಾಯಿತು.

ಕ್ರಮೇಣ ಈ ಚಾಳಿ ಎಲ್ಲಾ ಚಿತ್ರರಂಗಗಳಿಗೂ ವ್ಯಾಪಸಿತು. ತಮಿಳಿಗೆ ಕಾಲಿವುಡ್, ತೆಲುಗಿಗೆ ಟಾಲಿವುಡ್, ಕನ್ನಡದಕ್ಕೆ ಸ್ಯಾಂಡಲ್ವುಡ್, ತುಳು ಚಿತ್ರಗಳಿಗೆ ಕೋಸ್ಟಲ್ವುಡ್, ಮಲಯಾಳಂಗೆ ಮಾಲಿವುಡ್, ಭೋಜಪುರಿಗೆ ಭೋಜಿವುಡ್, ಡೋಗ್ರಿ ಚಿತ್ರಗಳಿಗೆ ಪಹಾಡಿವುಡ್, ಗುಜರಾತಿ ಸಿನಿಮಾಗಳಿಗೆ ಗಾಲಿವುಡ್, ಒಡಿಯಾ ಭಾಷೆಯ ಚಿತ್ರಗಳಿಗೆ ಒಲಿವುಡ್, ಪಂಜಾಬಿಗೆ ಪಾಲಿವುಡ್ … ಹೀಗೆ ಏನೇನೋ ಚಿತ್ರ-ವಿಚಿತ್ರ ಹೆಸರುಗಳಿವೆ. ಹೀಗೆ ಪ್ರತಿಯೊಂದು ಚಿತ್ರರಂಗಕ್ಕೂ ಒಂದೊಂದು ಹೆಸರು ಬಂದು, ಆ ಹೆಸರಿನಿಂದಲೇ ಆ ಚಿತ್ರರಂಗವನ್ನು ಗುರುತಿಸಲಾಗುತ್ತಿದೆ.

ಇದೆಲ್ಲದರಿಂದಲೇ ಭಾರತದಲ್ಲಿ ಪ್ರತೀ ವರ್ಷ ಬಿಡುಗಡೆಯಾಗುತ್ತಿರುವ ಚಿತ್ರಗಳ ಸಂಖ್ಯೆ 1400 ದಾಟುತ್ತಿದೆ. ಇದರಲ್ಲಿ ಹಿಂದಿಯ ಪಾಲು ಹೆಚ್ಚೆಂದರೆ 200-250 ಇರಬಹುದು. ಮಿಕ್ಕಂತೆ ದಕ್ಷಿಣ ಭಾರತೀಯ ಚಿತ್ರರಂಗಗಳಿಂದ 850ಕ್ಕೂ ಹೆಚ್ಚು ಚಿತ್ರಗಳು ತಯಾರಾಗುತ್ತಿವೆ. ಮಿಕ್ಕೆಲ್ಲ ಭಾಷೆಯ ಚಿತ್ರಗಳನ್ನು ಒಟ್ಟುಗೂಡಿಸಿದರೆ ವರ್ಷವೊಂದಕ್ಕೆ 1400 ಪ್ಲಸ್ ಚಿತ್ರಗಳು ಬಿಡುಗಡೆಯಾಗುತ್ತಿವೆ. ಇಲ್ಲಿ ಯಾವುದೇ ಚಿತ್ರರಂಗ ದೊಡ್ಡದಲ್ಲ, ಯಾವುದೂ ಚಿಕ್ಕದಲ್ಲ.

ಕೆಲವು ಚಿತ್ರರಂಗಗಳ ರೀಚ್ ಚಿಕ್ಕದಿರಬಹುದು, ಅಲ್ಲಿ ತಯಾರಾಗುವ ಚಿತ್ರಗಳ ಬಜೆಟ್ ಕಡಿಮೆ ಇರಬಹುದು, ಆ ಚಿತ್ರಗಳನ್ನು ನೋಡುವವರ ಸಂಖ್ಯೆ ಕಡಿಮೆ ಇರಬಹುದು … ಆದರೆ, ಎಲ್ಲ ಚಿತ್ರರಂಗಗಳಿಗೂ ಅದರದ್ದೇ ಆದ ಐತಿಹಾಸಿಕ ಮಹತ್ವವಿದೆ ಮತ್ತು ಎಲ್ಲ ಚಿತ್ರರಂಗಗಳು ಸಹ ತಮ್ಮದೇ ರೀತಿಯಲ್ಲಿ ಸಂಸ್ಕೃತಿ ಮತ್ತು ಸೊಗಡನ್ನು ಬಿಂಬಿಸುತ್ತಿವೆ ಎನ್ನುವುದಷ್ಟೇ ಮುಖ್ಯ.

(ಚೇತನ್ ನಾಡಿಗೇರ್ ಅವರ ಫೇಸ್‌ಬುಕ್‌ ನಿಂದ ಆಯ್ದುಕೊಂಡ ಬರಹ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending