ದಿನದ ಸುದ್ದಿ
ಸಂವಿಧಾನದ ತಿದ್ದುಪಡಿಗಳು

ನಿರ್ದಿಷ್ಟ ಕಾಲಮಾನ ಮತ್ತು ಆ ಸಂದರ್ಭದಸ್ಥಿತಿಗತಿಗಳನ್ನುಗಮನದಲ್ಲಿರಿಸಿಕೊಂಡುಸಂವಿಧಾನ ವನ್ನು ರಚಿಸಲಾಯಿತು. ಬದಲಾಗುತಿರುವಕಾಲಮಾನಹೊಸ ಪರಿಸ್ಥಿತಿ,ಸ್ಥಿತಿಗತಿ ಹಾಗೂಸಮಸ್ಯೆಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳನ್ನು ತೆರಬೇಕಾಗುತ್ತದೆ. ತಿದ್ದುಪಡಿಗಳನ್ನು ಮಾಡುವಾಗ ಹಿಂದಿನ ಅನುಭವ, ಪ್ರಸ್ತುತಪರಿಷ್ಕರಣೆಯ ಅಗತ್ಯ, ಪ್ರಸ್ತುತತೆ, ಭವಿಷ್ಯದ ಪ್ರಗತಿಹಾಗೂ ನ್ಯಾಯ ಪರವಾಗಿರುವ ತತ್ವಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು.
ಸಂವಿಧಾನ ತಿದ್ದುಪಡಿ ಮಾಡುವ ಬಗ್ಗೆ
ಪಂಡಿತ್ ಜವಾಹರಲಾಲ್ ನೆಹರೂ ಅವರ
ಅಭಿಪ್ರಾಯ ಹೀಗಿದೆ:
“ಅತ್ಯಂತ ಕಠಿಣವಾದ ಮತ್ತು ಸ್ಥಿರ ವಾದ
ಏನನ್ನಾದರೂ ಮಾಡಲು ಪ್ರಯತ್ನಿಸಿದರೆ ಅದು
ದೇಶದ ಪ್ರಗತಿಯನ್ನು ಮತ್ತು ಸಮಾಜದ ಅಭಿವೃದ್ಧಿ ಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಸಂವಿಧಾನವನ್ನು ಅತಿ ಕಠಿಣವಾಗಿ ರೂಪಿಸಲು ಸಾಧ್ಯವಿಲ್ಲ! ತೀವ್ರಗತಿಯಲ್ಲಿ ಬದಲಾಗುತ್ತಿರುವ ಪ್ರಪಂಚದಲ್ಲಿಇಂದು ಪ್ರಸ್ತುತವೆನಿಸುವುದು ನಾಳೆ ಆಪ್ರಸ್ತುತವೆನಿಸು ತ್ತದೆ. ಸಂವಿಧಾನದಲ್ಲಿ ತಿದ್ದುಪಡಿಗೆ ಅವಕಾಶ ನೀಡುವುದು ಎಂದರೆ ಕಾಲಕಾಲಕ್ಕೆಬದಲಾಗುತ್ತಿರುವ.ಸಮಾಜದೊಂದಿಗೆ ಸಂವಿಧಾನವು ಬದಲಾಗಿ
ಇಂದಿನ ಸಮಾಜಕ್ಕೆ ಪ್ರಸ್ತುತವಾದ ಸಂವಿಧಾನ
ಎನಿಸಿಕೊಳ್ಳುವುದಾಗಿರುತ್ತದೆ.”
ಈ ಎಲ್ಲ ಎಚ್ಚರ ಗಳನ್ನು ಗಮನದಲ್ಲಿಟ್ಟು
ಕೊಂಡು ಕಳೆದ 68 ವರ್ಷಗಳಲ್ಲಿ ನಮ್ಮಸಂವಿಧಾನವನ್ನು 10 ಬಾರಿ ತಿದ್ದುಪಡಿ ಮಾಡಲಾಗಿದೆ. ಇವುಗಳಲ್ಲಿ ಪ್ರಮುಖವಾದ ತಿದ್ದುಪಡಿಗಳೆಂದರೆ:
- 1ನೇ ತಿದ್ದುಪಡಿ, 1951: ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ
ವರ್ಗಗಳ ಅಭಿವೃದ್ಧಿಗಾಗಿ ವಿಶೇಷ ನಿಯಮಗಳನ್ನು ರಚಿಸುವ ಅಧಿಕಾರವನ್ನು
ರಾಜ್ಯ ಸರ್ಕಾರಗಳಿಗೆ ನೀಡಲಾಯಿತು. - 5ನೇ ತಿದ್ದುಪಡಿ, 1956: ರಾಜ್ಯಗಳ ಏಕೀಕರಣ ಮಾಡಲಾಯಿತು.
- 42 ನೇ ತಿದ್ದುಪಡಿ, 1976: ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಈ ಕೆಳಕಂಡ ಬದಲಾವಣೆಗಳನ್ನು ತರಲಾಯಿತು;
- ಅ. ಸಂವಿಧಾನದ ಪ್ರಸ್ತಾವನೆ ಸಮಾಜವಾದಿ, ಧರ್ಮನಿರಪೇಕ್ಷ ಜಾತ್ಯತೀತ
ಎಂಬ ಎರಡು ಹೊಸ ಪದಗಳನ್ನು ಹಾಗೂ ದೇಶದ ಏಕತೆಯ ಜೊತೆಗೆ
ಸಮಗ್ರತೆಯನ್ನು ಸೇರಿಸಲಾಯಿತು. - ಆ, ಮೂಲಭೂತ ಕರ್ತವ್ಯಗಳ ಪಟ್ಟಿಯನ್ನು ಸಂವಿಧಾನಕ್ಕೆ ಸೇರಿಸಲಾಯಿತು.
- ಈ. ಎಲ್ಲರಿಗೂ ಸಮಾನ ನ್ಯಾಯ ದೊರಕಿಸುವುದು ಹಾಗೂ ದುರ್ಬಲರಿಗೆ ಉಚಿತ ಕಾನೂನು ನೆರವು ನೀಡುವುದು.
- ಈ, ಉದ್ದಿಮೆಗಳು ವ್ಯವಸ್ಥಾಪನೆಯಲ್ಲಿ ಕಾರ್ಮಿಕರ ಪಾಲ್ಗೊಳ್ಳಲು ಅವಕಾಶ
ನೀಡಲಾಯಿತು, - ಉ. ಪರಿಸರ, ಅರಣ್ಯ ಮತ್ತು ವನ್ಯಜೀವಿಗಳ ಮೊದಲಾದ ಪ್ರಾಕೃತಿಕ ಸಂಪತ್ತಿನ
ಸಂರಕ್ಷಣೆಗೆ ಆದ್ಯತೆ ನೀಡಲಾಯಿತು - ಊ. ದೇಶದ ಯಾವುದೇ ಭಾಗದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲು
ಅವಕಾಶ ನೀಡಲಾಯಿತು. - ಋ, ಗಂಭೀರ ಪರಿಸ್ಥಿತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿಗಳು
ರಾಜ್ಯಗಳಲ್ಲಿ ತನ್ನ ಸೇನೆಯನ್ನು ನಿಯೋಜಿಸುವ ಅಧಿಕಾರ ವನ್ನು ಕೇಂದ್ರ
ಸರ್ಕಾರಕ್ಕೆ ನೀಡಲಾಯಿತು.
44 ನೇ ತಿದ್ದುಪಡಿ, 1978
(1) 42 ನೇ ತಿದ್ದುಪಡಿ ಕೆಲವು ಅತಿರೇಕ ಗಳನ್ನು ರದ್ದು ಗೊಳಿಸಿ ಹಿಂದೆ ಇದ್ದ ಪರಿಸ್ಥಿತಿಯನ್ನು ಮರು ಸ್ಥಾಪಿಸಲಾಯಿತು.
(2) ಆಸ್ತಿಯ ಹಕ್ಕನ್ನು ಮೂಲಭೂತ ಹಕ್ಕುಗಳ ಪಟ್ಟಿಯಿಂದ ತೆಗೆದು ಹಾಕಲಾಯಿತು.
(3) ಅನುಚ್ಛೇದ 20 ಮತ್ತು 21ರಲ್ಲಿ ತಿಳಿಯಪಡಿಸಿರುವ ಮೂಲಭೂತ ಹಕ್ಕುಗಳನ್ನು ರಾಷ್ಟ್ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ರದ್ದುಗೊಳಿಸದಂತೆ ಮಾಡಲಾಯಿತು.
52 ನೇ ತಿದ್ದುಪಡಿ, 1985
ಚುನಾಯಿತ ಪ್ರತಿನಿಧಿಗಳ ಪಕ್ಷಾಂತರವನ್ನುಕಾನೂನು ಬಾಹಿರ ಗೊಳಿಸಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನು, 10ನೇ ಅನುಸೂಚಿಗೆ ಸೇರಿಸಲಾಯಿತು.
61ನೇ ತಿದ್ದುಪಡಿ, 1989
ಮತದಾನದ ವಯಸ್ಸನ್ನು 21 ರಿಂದ 18 ವರ್ಷಗಳಿಗೆ
ಇಳಿಸಲಾಯಿತು.
73ನೇ ತಿದ್ದುಪಡಿ, 1992
ಪಂಚಾಯತ್ರಾಜ್ ವ್ಯವಸ್ಥೆ ಜಾರಿಗೆ ತರಲಾಯಿತು.
86ನೇ ತಿದ್ದುಪಡಿ, 2002
6 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣದ ಹಕ್ಕು ನೀಡಲಾಯಿತು.
(‘ಸಂವಿಧಾನ ಓದು’: ನ್ಯಾ.ಎಚ್.ಎನ್.ನಾಗಮೋಹನ ದಾಸ್ ,ಅವರ ಪುಸ್ತಕದಿಂದ ಈ ಲೇಖನವನ್ನು ತೆಗೆದುಕೊಳ್ಳಲಾಗಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
