ದಿನದ ಸುದ್ದಿ
ಸಂವಿಧಾನದ ತಿದ್ದುಪಡಿಗಳು
ನಿರ್ದಿಷ್ಟ ಕಾಲಮಾನ ಮತ್ತು ಆ ಸಂದರ್ಭದಸ್ಥಿತಿಗತಿಗಳನ್ನುಗಮನದಲ್ಲಿರಿಸಿಕೊಂಡುಸಂವಿಧಾನ ವನ್ನು ರಚಿಸಲಾಯಿತು. ಬದಲಾಗುತಿರುವಕಾಲಮಾನಹೊಸ ಪರಿಸ್ಥಿತಿ,ಸ್ಥಿತಿಗತಿ ಹಾಗೂಸಮಸ್ಯೆಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳನ್ನು ತೆರಬೇಕಾಗುತ್ತದೆ. ತಿದ್ದುಪಡಿಗಳನ್ನು ಮಾಡುವಾಗ ಹಿಂದಿನ ಅನುಭವ, ಪ್ರಸ್ತುತಪರಿಷ್ಕರಣೆಯ ಅಗತ್ಯ, ಪ್ರಸ್ತುತತೆ, ಭವಿಷ್ಯದ ಪ್ರಗತಿಹಾಗೂ ನ್ಯಾಯ ಪರವಾಗಿರುವ ತತ್ವಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು.
ಸಂವಿಧಾನ ತಿದ್ದುಪಡಿ ಮಾಡುವ ಬಗ್ಗೆ
ಪಂಡಿತ್ ಜವಾಹರಲಾಲ್ ನೆಹರೂ ಅವರ
ಅಭಿಪ್ರಾಯ ಹೀಗಿದೆ:
“ಅತ್ಯಂತ ಕಠಿಣವಾದ ಮತ್ತು ಸ್ಥಿರ ವಾದ
ಏನನ್ನಾದರೂ ಮಾಡಲು ಪ್ರಯತ್ನಿಸಿದರೆ ಅದು
ದೇಶದ ಪ್ರಗತಿಯನ್ನು ಮತ್ತು ಸಮಾಜದ ಅಭಿವೃದ್ಧಿ ಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಸಂವಿಧಾನವನ್ನು ಅತಿ ಕಠಿಣವಾಗಿ ರೂಪಿಸಲು ಸಾಧ್ಯವಿಲ್ಲ! ತೀವ್ರಗತಿಯಲ್ಲಿ ಬದಲಾಗುತ್ತಿರುವ ಪ್ರಪಂಚದಲ್ಲಿಇಂದು ಪ್ರಸ್ತುತವೆನಿಸುವುದು ನಾಳೆ ಆಪ್ರಸ್ತುತವೆನಿಸು ತ್ತದೆ. ಸಂವಿಧಾನದಲ್ಲಿ ತಿದ್ದುಪಡಿಗೆ ಅವಕಾಶ ನೀಡುವುದು ಎಂದರೆ ಕಾಲಕಾಲಕ್ಕೆಬದಲಾಗುತ್ತಿರುವ.ಸಮಾಜದೊಂದಿಗೆ ಸಂವಿಧಾನವು ಬದಲಾಗಿ
ಇಂದಿನ ಸಮಾಜಕ್ಕೆ ಪ್ರಸ್ತುತವಾದ ಸಂವಿಧಾನ
ಎನಿಸಿಕೊಳ್ಳುವುದಾಗಿರುತ್ತದೆ.”
ಈ ಎಲ್ಲ ಎಚ್ಚರ ಗಳನ್ನು ಗಮನದಲ್ಲಿಟ್ಟು
ಕೊಂಡು ಕಳೆದ 68 ವರ್ಷಗಳಲ್ಲಿ ನಮ್ಮಸಂವಿಧಾನವನ್ನು 10 ಬಾರಿ ತಿದ್ದುಪಡಿ ಮಾಡಲಾಗಿದೆ. ಇವುಗಳಲ್ಲಿ ಪ್ರಮುಖವಾದ ತಿದ್ದುಪಡಿಗಳೆಂದರೆ:
- 1ನೇ ತಿದ್ದುಪಡಿ, 1951: ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ
ವರ್ಗಗಳ ಅಭಿವೃದ್ಧಿಗಾಗಿ ವಿಶೇಷ ನಿಯಮಗಳನ್ನು ರಚಿಸುವ ಅಧಿಕಾರವನ್ನು
ರಾಜ್ಯ ಸರ್ಕಾರಗಳಿಗೆ ನೀಡಲಾಯಿತು. - 5ನೇ ತಿದ್ದುಪಡಿ, 1956: ರಾಜ್ಯಗಳ ಏಕೀಕರಣ ಮಾಡಲಾಯಿತು.
- 42 ನೇ ತಿದ್ದುಪಡಿ, 1976: ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಈ ಕೆಳಕಂಡ ಬದಲಾವಣೆಗಳನ್ನು ತರಲಾಯಿತು;
- ಅ. ಸಂವಿಧಾನದ ಪ್ರಸ್ತಾವನೆ ಸಮಾಜವಾದಿ, ಧರ್ಮನಿರಪೇಕ್ಷ ಜಾತ್ಯತೀತ
ಎಂಬ ಎರಡು ಹೊಸ ಪದಗಳನ್ನು ಹಾಗೂ ದೇಶದ ಏಕತೆಯ ಜೊತೆಗೆ
ಸಮಗ್ರತೆಯನ್ನು ಸೇರಿಸಲಾಯಿತು. - ಆ, ಮೂಲಭೂತ ಕರ್ತವ್ಯಗಳ ಪಟ್ಟಿಯನ್ನು ಸಂವಿಧಾನಕ್ಕೆ ಸೇರಿಸಲಾಯಿತು.
- ಈ. ಎಲ್ಲರಿಗೂ ಸಮಾನ ನ್ಯಾಯ ದೊರಕಿಸುವುದು ಹಾಗೂ ದುರ್ಬಲರಿಗೆ ಉಚಿತ ಕಾನೂನು ನೆರವು ನೀಡುವುದು.
- ಈ, ಉದ್ದಿಮೆಗಳು ವ್ಯವಸ್ಥಾಪನೆಯಲ್ಲಿ ಕಾರ್ಮಿಕರ ಪಾಲ್ಗೊಳ್ಳಲು ಅವಕಾಶ
ನೀಡಲಾಯಿತು, - ಉ. ಪರಿಸರ, ಅರಣ್ಯ ಮತ್ತು ವನ್ಯಜೀವಿಗಳ ಮೊದಲಾದ ಪ್ರಾಕೃತಿಕ ಸಂಪತ್ತಿನ
ಸಂರಕ್ಷಣೆಗೆ ಆದ್ಯತೆ ನೀಡಲಾಯಿತು - ಊ. ದೇಶದ ಯಾವುದೇ ಭಾಗದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲು
ಅವಕಾಶ ನೀಡಲಾಯಿತು. - ಋ, ಗಂಭೀರ ಪರಿಸ್ಥಿತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿಗಳು
ರಾಜ್ಯಗಳಲ್ಲಿ ತನ್ನ ಸೇನೆಯನ್ನು ನಿಯೋಜಿಸುವ ಅಧಿಕಾರ ವನ್ನು ಕೇಂದ್ರ
ಸರ್ಕಾರಕ್ಕೆ ನೀಡಲಾಯಿತು.
44 ನೇ ತಿದ್ದುಪಡಿ, 1978
(1) 42 ನೇ ತಿದ್ದುಪಡಿ ಕೆಲವು ಅತಿರೇಕ ಗಳನ್ನು ರದ್ದು ಗೊಳಿಸಿ ಹಿಂದೆ ಇದ್ದ ಪರಿಸ್ಥಿತಿಯನ್ನು ಮರು ಸ್ಥಾಪಿಸಲಾಯಿತು.
(2) ಆಸ್ತಿಯ ಹಕ್ಕನ್ನು ಮೂಲಭೂತ ಹಕ್ಕುಗಳ ಪಟ್ಟಿಯಿಂದ ತೆಗೆದು ಹಾಕಲಾಯಿತು.
(3) ಅನುಚ್ಛೇದ 20 ಮತ್ತು 21ರಲ್ಲಿ ತಿಳಿಯಪಡಿಸಿರುವ ಮೂಲಭೂತ ಹಕ್ಕುಗಳನ್ನು ರಾಷ್ಟ್ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ರದ್ದುಗೊಳಿಸದಂತೆ ಮಾಡಲಾಯಿತು.
52 ನೇ ತಿದ್ದುಪಡಿ, 1985
ಚುನಾಯಿತ ಪ್ರತಿನಿಧಿಗಳ ಪಕ್ಷಾಂತರವನ್ನುಕಾನೂನು ಬಾಹಿರ ಗೊಳಿಸಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನು, 10ನೇ ಅನುಸೂಚಿಗೆ ಸೇರಿಸಲಾಯಿತು.
61ನೇ ತಿದ್ದುಪಡಿ, 1989
ಮತದಾನದ ವಯಸ್ಸನ್ನು 21 ರಿಂದ 18 ವರ್ಷಗಳಿಗೆ
ಇಳಿಸಲಾಯಿತು.
73ನೇ ತಿದ್ದುಪಡಿ, 1992
ಪಂಚಾಯತ್ರಾಜ್ ವ್ಯವಸ್ಥೆ ಜಾರಿಗೆ ತರಲಾಯಿತು.
86ನೇ ತಿದ್ದುಪಡಿ, 2002
6 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣದ ಹಕ್ಕು ನೀಡಲಾಯಿತು.
(‘ಸಂವಿಧಾನ ಓದು’: ನ್ಯಾ.ಎಚ್.ಎನ್.ನಾಗಮೋಹನ ದಾಸ್ ,ಅವರ ಪುಸ್ತಕದಿಂದ ಈ ಲೇಖನವನ್ನು ತೆಗೆದುಕೊಳ್ಳಲಾಗಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
-
ದಿನದ ಸುದ್ದಿ1 day agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ1 day agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 hours agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

