Connect with us

ರಾಜಕೀಯ

ದೇಶದ ಸಾರ್ವಭೌಮತೆ ಮತ್ತು ಆತ್ಮಾಭಿಮಾನವನ್ನು ಬಲಿಗೊಟ್ಟು ಅಮೆರಿಕಾದ ಎದುರು ತಲೆಬಾಗಿಸುವುದನ್ನು ಒಪ್ಪಲು ಸಾಧ್ಯವಿಲ್ಲ : ಬಿಜೆಪಿ ಸರಕಾರಕ್ಕೆ ಎಡಪಕ್ಷಗಳ ಎಚ್ಚರಿಕೆ

Published

on

ಮೆರಿಕಾ ಸಂಯುಕ್ತ ಸಂಸ್ಥಾನಗಳ ವಿದೇಶಾಂಗ ಕಾರ್ಯದರ್ಶಿಯ ಭಾರತ ಭೇಟಿಯ ಸಂದರ್ಭದಲ್ಲಿ ಭಾರತದ ಕೈತಿರುಚುವ ಅಮೆರಿಕಾದ ಅಜೆಂಡಾಕ್ಕೆ ಎಡಪಕ್ಷಗಳು ದೃಢ ವಿರೋಧವನ್ನು ವ್ಯಕ್ತಪಡಿಸಿವೆ. ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚುರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ, ಸಿಪಿಐ(ಎಂಎಲ್ -ಲಿಬರೇಷನ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಪ್ರಧಾನ ಕಾರ್ಯದರ್ಶಿ ದೇಬಬ್ರತ್ ಬಿಸ್ವಾಸ್ ಮತ್ತು ಆರ್ಎಸ್ಪಿ ಪ್ರಧಾನ ಕಾರ್ಯದರ್ಶಿ ಕ್ಷಿತಿ ಗೋಸ್ವಾಮಿ ಜಂಟಿ ಹೇಳಿಕೆಯೊಂದನ್ನು ಜೂನ್ 20 ರಂದು ನೀಡಿದ್ದಾರೆ.

ಅಮೆರಿಕನ್ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಜೂನ್ 25 ಮತ್ತು 26ರಂದು ಭಾರತಕ್ಕೆ ಭೇಟಿ ನೀಡುತ್ತಿರುವುದಾಗಿ ಪ್ರಕಟಿಸಿದ್ದಾರೆ. ಈ ಭೇಟಿಯ ಉದ್ದೇಶ ಭಾರತವು ತನ್ನ ಆರ್ಥಿಕ ವ್ಯವಸ್ಥೆಯನ್ನು ಇನ್ನಷ್ಟು ತೆರೆಯುವತ್ತ ತಳ್ಳುವುದು, ವ್ಯಾಪಾರ ಅಡೆ-ತಡೆಗಳನ್ನು ಕೈಬಿಡುವಂತೆ ಮಾಡುವುದು, ಮತ್ತು ಭಾರತಕ್ಕೆ ಅಮೆರಿಕನ್ ರಕ್ಷಣಾ ಸಾಧನಗಳನ್ನು ಮಾರುವುದು ಎನ್ನಲಾಗಿದೆ.

ಈ ಭೇಟಿ, ಅಮೆರಿಕಾದ ’ಸಾಮಾನ್ಯಗೊಳಿಸಿದ ಆದ್ಯತಾ ವ್ಯವಸ್ಥೆ ವ್ಯಾಪಾರ ಕಾರ್ಯಕ್ರಮ’(ಜಿಎಸ್ ಪಿ)ದ ಫಲಾನುಭವಿ ಎಂದು ಭಾರತಕ್ಕೆ ಕೊಟ್ಟಿದ್ದ ಸ್ಥಾನವನ್ನು ಕೊನೆಗೊಳಿಸಿರುವ ಹಿನ್ನೆಲೆಯಲ್ಲಿ ಬಂದಿದೆ. ಇದುವರೆಗೆ ಈ ಸ್ಥಾನಮಾನ ದಿಂದಾಗಿ ಭಾರತದ ಉತ್ಪನ್ನಗಳು ಸುಂಕ-ಮುಕ್ತವಾಗಿ ಅಮೆರಿಕಾ ಪ್ರವೇಶಿಸಲು ಅವಕಾಶವಿತ್ತು. ಈಗ ಅದು ಇಲ್ಲವಾಗಿದೆ. ಅಲ್ಲದೆ ಭಾರತವು ಇರಾನ್, ವೆನೆಝುವೆಲ ಮುಂತಾದ ದೇಶಗಳಿಂದ ತೈಲ ಖರೀದಿಸಿದರೆ ನಿರ್ಬಂಧಗಳನ್ನು ಹೇರುವುದಾಗಿಯೂ ಅಮೆರಿಕಾ ಬೆದರಿಕೆ ಹಾಕಿದೆ ಎಂಬುದನ್ನು ಎಡಪಕ್ಷಗಳು ನೆನಪಿಸಿವೆ.

ತನ್ನ ಆಣತಿಗಳಿಗೆ ಲಕ್ಷ್ಯ ಕೊಡದಿದ್ದರೆ ಹೊಸ ನಿರ್ಬಂಧಗಳನ್ನು ಹಾಕುವುದಾಗಿ ಅಮೆರಿಕನ್ ಆಡಳಿತ ಜಗತ್ತಿನಾದ್ಯಂತ ದೇಶಗಳಿಗೆ ಬೆದರಿಕೆ ಹಾಕುತ್ತಿದೆ. ಅದು ಕ್ಯೂಬ, ವೆನೆಝುವೆಲ, ಇರಾನ್ ಮತ್ತು ನಿಕರಗುವ ದೇಶಗಳಲ್ಲಿ ಆಡಳಿತಗಳನ್ನು ಬದಲಿಸುವುದಕ್ಕಾಗಿ ಅವುಗಳ ಕುತ್ತಿಗೆ ಹಿಸುಕುವ ಪ್ರಯತ್ನ ನಡೆಸುತ್ತಿದೆ. ಈಗ ನಡೆಯುತ್ತಿರುವ ವ್ಯಾಪಾರ ಸಮರ ಈಗಾಗಲೇ ತತ್ತರಿಸುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯನ್ನು ಮತ್ತೊಂದು ಹಿಂಜರಿತದತ್ತ ತಳ್ಳುವ ಬೆದರಿಕೆಯನ್ನು ಒಡ್ಡಿದೆ. ಭಾರತವು ಅಮೆರಿಕಾದ ಧೋರಣೆಗಳಿಗೆ ತನ್ನನ್ನು ಒಳಗಾಗಿಸಿಕೊಳ್ಳಬೇಕು, ಇರಾನ್ ಮತ್ತು ವೆನೆಝುವೆಲದಿಂದ ತೈಲ ಖರೀದಿಸುವುದನ್ನು ಮತ್ತು ರಷ್ಯಾದಿಂದ ಎಸ್-400 ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಅದು ನಿರ್ಬಂಧಿಸುತ್ತಿದೆ.

ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಅಮೆರಿಕಾ ಈ ರೀತಿ ಕೈತಿರುಚುತ್ತಿರುವುದನ್ನು ಪ್ರತಿರೋಧಿಸುವ ಬದಲು ಅದರ ಒತ್ತಡಗಳಿಗೆ ಕುಸಿಯುತ್ತಿದೆ. ನಮ್ಮ ಸಾರ್ವಭೌಮತೆ ಮತ್ತು ಆತ್ಮಾಭಿಮಾನವನ್ನು ಬಲಿಗೊಟ್ಟು ಅಮೆರಿಕಾದ ಎದುರು ತಲೆಬಾಗಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿರುವ ಎಡಪಕ್ಷಗಳು, ಬಿಜೆಪಿ ಸರಕಾರ ಭಾರತದ ಹಿತಾಸಕ್ತಿಗಳನ್ನು ಅಮೆರಿಕಾಕ್ಕೆ ಒಪ್ಪಿಸಿ ಬಿಡುತ್ತಿರುವುದನ್ನು ವಿರೋಧಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ಪಟ್ಟಾಗಿ ಭದ್ರಪಡಿಸಿಕೊಳ್ಳುವ ಒಂದು ಸ್ವತಂತ್ರ ಧೋರಣೆಯನ್ನು ಅನುಸರಿಸಬೇಕು ಎಂದು ದೃಢವಾಗಿ ಆಗ್ರಹಿಸಬೇಕು ಎಂದು ಭಾರತದ ಜನತೆಯನ್ನು ಕೇಳಿಕೊಂಡಿವೆ.

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending