Connect with us

ಬಹಿರಂಗ

ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ

Published

on

  • ನಾ ದಿವಾಕರ

ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ ಸ್ವಾಸ್ಥ್ಯ ಸಂರಕ್ಷಣೆಯ ಪ್ರಯತ್ನಗಳು ನಡೆಯುತ್ತಾ ಬಂದಿರುವುದರಿಂದಲೇ ಮನುಕುಲ ಇಂದಿಗೂ ಸಹ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡುಬಂದಿದೆ. ಒಬ್ಬ ಹಿಟ್ಲರಿಗೆ ನೂರಾರು ಗಾಂಧಿ ಮಂಡೇಲಾಗಳು ಹುಟ್ಟಿಕೊಳ್ಳುತ್ತಾ ಬಂದಿದ್ದಾರೆ. ಒಬ್ಬ ಮುಸೋಲಿನಿಗೆ ನೂರಾರು ಅಂಬೇಡ್ಕರುಗಳು ಉದಯಿಸುತ್ತಾ ಬಂದಿದ್ದಾರೆ.

ಮತಾಂಧನೊಬ್ಬನಿಂದ ಹತ್ಯೆಗೀಡಾದರೂ ಗಾಂಧಿ ಬೌದ್ಧಿಕವಾಗಿ ನಮ್ಮ ನಡುವೆ ಇದ್ದಾರೆ. ಭಾರತದ ಮೇಲ್ಜಾತಿ ಮನಸುಗಳಿಂದ ಬಹಿಷ್ಕೃತರಾಗಿದ್ದರೂ ಪೆರಿಯಾರ್, ಅಂಬೇಡ್ಕರ್ ಇಂದು ಭಾರತೀಯ ಸಮಾಜದ ಅಂತಃಸತ್ವದ ಬುನಾದಿಯಾಗುತ್ತಾರೆ. ಸಾಂಸ್ಕೃತಿಕ ರಾಜಕಾರಣದ ರಾಯಭಾರಿಗಳ ಗುಂಡೇಟಿಗೆ ಬಲಿಯಾದರೂ ಧಬೋಲ್ಕರ್, ಪನ್ಸಾರೆ, ಗೌರಿ, ಕಲಬುರ್ಗಿ ನಮ್ಮ ನಡುವೆ ಚಿಂತನೆಗಳ ರೂಪದಲ್ಲಿ ಜೀವಂತಿಕೆಯಿಂದಿದ್ದಾರೆ.

ಸಮಾಜದಲ್ಲಿ ಅಂತರ್ಗತವಾಗಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿ ಬೆಳೆಸಲು ಈ ಚಿಂತಕರ ಚಿಂತನೆಗಳು, ಬೋಧನೆಗಳು ಸುಭದ್ರ ಬುನಾದಿಯನ್ನು ನಿರ್ಮಿಸುತ್ತವೆ. ಶತಮಾನಗಳ ಹಿಂದೆ ಭಾರತೀಯ ಸಮಾಜದಲ್ಲಿ ಅಂತರ್ಗತವಾಗಿದ್ದ ಅಸಮಾನತೆ, ಅಸಹಿಷ್ಣುತೆ ಮತ್ತು ಜಾತಿ ಶ್ರೇಷ್ಠತೆಯ ಚಿಂತನೆಗಳಿಗೆ ಪ್ರತಿರೋಧದ ರೂಪದಲ್ಲೇ ಭಾರತದಲ್ಲಿ ಜೈನ, ಬೌದ್ಧ, ಸಿಖ್ ಧರ್ಮಗಳು ಉದಯಿಸಿದ್ದವು.

ಸಾಂಪ್ರದಾಯಿಕ ಸಮಾಜದ, ವೈದಿಕ ಪರಂಪರೆಯ ಡಂಭಾಚಾರ, ಶೋಷಣೆ, ಕಂದಾಚಾರಗಳ ವಿರುದ್ಧ ಭಕ್ತಿ ಪಂಥ, ಸೂಫಿ ಪರಂಪರೆಗಳು ಹುಟ್ಟಿಕೊಂಡಿದ್ದವು. ಈ ಪ್ರತಿರೋಧದ ದನಿಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿದ್ದರೆ ಅದರ ಹಿಂದೆ ಅನೇಕ ಸಮಕಾಲೀನ ಚಿಂತಕರ, ಸಾಹಿತಿಗಳ ಮತ್ತು ಸಮಾಜ ಸುಧಾರಕರ ಪರಿಶ್ರಮ ಇದೆ.

ಬುದ್ಧನಿಂದ ಗಾಂಧಿ ಅಂಬೇಡ್ಕರ್ ವರೆಗೆ ಈ ಚಿಂತನಾ ವಾಹಿನಿಗಳು ಭಾರತೀಯ ಸಮಾಜಕ್ಕೆ ಮಾರ್ಗದರ್ಶಿ ಸೂತ್ರಗಳನ್ನು ಒದಗಿಸಿವೆ. ಸಾವಿರಾರು ಭಾಷೆಗಳು, ನೂರಾರು ಸಂಸ್ಕೃತಿಗಳು ಭಾರತೀಯ ಸಮಾಜದ ವೈವಿಧ್ಯತೆಯನ್ನು, ಬಹುಸಂಸ್ಕೃತಿಯ ನೆಲೆಗಳನ್ನು ಕಾಪಾಡಿಕೊಂಡು ಬಂದಿದ್ದರೆ ಅದಕ್ಕೆ ಕಾರಣ ಈ ಮಹಾನ್ ಚಿಂತಕರು ಬಿಟ್ಟುಹೋಗಿರುವ, ಕೊಟ್ಟುಹೋಗಿರುವ ಟೂಲ್ಕಿಿಟ್ಗದಳು.

ಭಾರತದ ಫ್ಯಾಸಿಸ್ಟ್ ಆಡಳಿತ ವ್ಯವಸ್ಥೆಯ ದೃಷ್ಟಿಯಲ್ಲಿ, ವಂದಿಮಾಗಧ ಸುದ್ದಿಮನೆಗಳ ದೃಷ್ಟಿಯಲ್ಲಿ ರಾಜದ್ರೋಹದ ಅಸ್ತ್ರದಂತೆ ಕಾಣುವ ಒಂದು ಸಾಧಾರಣ ಟೂಲ್ಕಿ ಟ್ ದಿಶಾ ರವಿ ಎಂಬ 21 ವರ್ಷದ ಪರಿಸರವಾದಿಯನ್ನು ದೇಶದ್ರೋಹಿಯನ್ನಾಗಿ ಮಾಡುತ್ತದೆ. ಆದರೆ ಇಂತಹ ನೂರಾರು ಟೂಲ್ಕಿಷಟ್ಗರಳೇ ಭಾರತದಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಸಂರಕ್ಷಿಸಿಕೊಂಡುಬಂದಿದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಮುಷ್ಕರವನ್ನು ಬೆಂಬಲಿಸುವ ಒಂದು ಟೂಲ್ಕಿ ಟ್ 136 ಕೋಟಿ ಜನತೆಯನ್ನು ಪ್ರತಿನಿಧಿಸುವ ಒಂದು ಚುನಾಯಿತ ಸರ್ಕಾರವನ್ನು ವಿಚಲಿತಗೊಳಿಸುತ್ತದೆ ಎಂದರೆ ನಮ್ಮನ್ನು ಆಳುವ ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ದೆಹಲಿಯ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದ್ದ ಒಬ್ಬ ಹೋರಾಟಗಾರ್ತಿಯನ್ನು ರಾತ್ರೋರಾತ್ರಿ ಬಂಧಿಸುತ್ತಾರೆ, ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಯಾವುದೇ ಸುಳಿವು ನೀಡದೆ ಆಕೆಯನ್ನು ದೆಹಲಿಗೆ ಕರೆದೊಯ್ಯುತ್ತಾರೆ. ಒಂದು ಒಕ್ಕೂಟ ವ್ಯವಸ್ಥೆಯಲ್ಲಿ, ಗಣತಂತ್ರದ ಚೌಕಟ್ಟಿನಲ್ಲಿ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಮ್ಮನ್ನು ಕಾಡದೆ ಹೋದರೆ ನಾವು ಪ್ರಜ್ಞಾಶೂನ್ಯರಾಗಿದ್ದೇವೆ ಎಂದೇ ಭಾವಿಸಬೇಕಾಗುತ್ತದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಮುಷ್ಕರ ಮೂರು ತಿಂಗಳು ಪೂರೈಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಷ್ಟು ದೀರ್ಘಕಾಲಿಕ ಮುಷ್ಕರ ಈವರೆಗೂ ಕಂಡಿರಲಿಲ್ಲ. ಹಾಗೆಯೇ ಮುಷ್ಕರನಿರತರಲ್ಲಿನ ಈ ಪ್ರಮಾಣದ ಬದ್ಧತೆ ಮತ್ತು ಆತ್ಮಸ್ಥೈರ್ಯವನ್ನೂ ಭಾರತ ಕಂಡಿರಲಿಲ್ಲ. ಮತ್ತೊಂದು ಮಜಲಿನಲ್ಲಿ ನೋಡಿದಾಗ ಭಾರತದ ಗಣತಂತ್ರ ವ್ಯವಸ್ಥೆಯಲ್ಲಿ ಈ ರೀತಿಯ ನಿಷ್ಕ್ರಿಯ, ನಿರ್ದಯಿ ಮತ್ತು ನಿರ್ಲಕ್ಷ್ಯ ಸರ್ಕಾರವನ್ನೂ ಈವರೆಗೂ ನಾವು ಕಂಡಿರಲಿಲ್ಲ. ಇವೆಲ್ಲದರ ನಡುವೆ ಕೇಂದ್ರ ಸರ್ಕಾರ ರೈತ ಮುಷ್ಕರದ ನೈತಿಕ ಉದ್ದೇಶವನ್ನೇ ಪ್ರಶ್ನಿಸುತ್ತಿದ್ದು ಸರ್ಕಾರ ಜಾರಿಗೊಳಿಸಿರುವ ಅಸಾಂವಿಧಾನಿಕ ಕರಾಳ ಮರಣ ಶಾಸನಗಳನ್ನು ವಿರೋಧಿಸುವುದನ್ನೇ ರಾಜದ್ರೋಹ ಎಂದು ಪರಿಗಣಿಸುತ್ತಿದೆ. ಮುಷ್ಕರವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅನುಸರಿಸಿದ ಕ್ರೂರ, ಅಸಾಂವಿಧಾನಿಕ ಕುಟಿಲೋಪಾಯಗಳು ವಿಫಲವಾದ ನಂತರ ಈಗ ಈ ಮುಷ್ಕರವನ್ನು ಬೆಂಬಲಿಸುವ ದನಿಗಳನ್ನೇ ಶಾಶ್ವತವಾಗಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿವೆ. ದಿಶಾರವಿ ಇಂತಹ ಕುತಂತ್ರಕ್ಕೆ ಬಲಿಯಾದ ಪರಿಸರ ಹೋರಾಟಗಾರ್ತಿ.

ಕೆನಡಾದಲ್ಲಿ 2020ರ ಮಾರ್ಚ್ ತಿಂಗಳಲ್ಲಿ ಸ್ಥಾಪಿಸಲಾದ ಪೋಯೆಟಿಕ್ ಜಸ್ಟಿಸ್ ಫೌಂಡೇಷನ್ ಮೂಲತಃ ಜಗತ್ತಿನಾದ್ಯಂತ ನಡೆಯುವ ಜನಾಂದೋಲನಗಳನ್ನು, ಪರಿಸರ ಹೋರಾಟಗಳನ್ನು ಮತ್ತು ಹಕ್ಕೊತ್ತಾಯಗಳ ಹೋರಾಟಗಳನ್ನು ಬೆಂಬಲಿಸುವ ಒಂದು ಸಂಸ್ಥೆ. ದೆಹಲಿ ಪೊಲೀಸರು ಆರೋಪಿಸಿರುವಂತೆ ಇದು ಖಲಿಸ್ತಾನಿ ಬೆಂಬಲಿಗ ಸಂಘಟನೆ ಎಂದು ನಿರೂಪಿಸಲು ಯಾವುದೇ ಪುರಾವೆಗಳಿಲ್ಲ. ಸಾಮಾಜಿಕ ಮಾಧ್ಯಮಗಳು ಹೆಚ್ಚು ಪ್ರಚಲಿತವಾದ ನಂತರ ಇಂತಹ ಜಾಗತಿಕ ವೇದಿಕೆಗಳು ವಿಶ್ವದಾದ್ಯಂತ ನಡೆಯುವ ಜನಾಂದೋಲನಗಳಿಗೆ ಪ್ರೋತ್ಸಾಹ, ಬೆಂಬಲ ವ್ಯಕ್ತಪಡಿಸಲು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತವೆ. ಈ ಸೂತ್ರಗಳ ಮೂಲಕ ಹೋರಾಟಗಳನ್ನು ಹೇಗೆ ಮುನ್ನಡೆಸಬೇಕು, ಜನರನ್ನು ಹೇಗೆ ಕ್ರೋಢೀಕರಿಸಬೇಕು ಎಂದು ಸೂಚಿಸಲಾಗುತ್ತದೆ. ಇದನ್ನು ಟೂಲ್ಕಿೆಟ್ ಎಂದು ಕರೆಯಲಾಗುತ್ತದೆ. ಅಂದರೆ ಹೋರಾಟದ ಅಸ್ತ್ರಗಳನ್ನೊಳಗೊಂಡ ಒಂದು ಆಕರ. ಇಲ್ಲಿ ಮೌಖಿಕ, ಲಿಖಿತ, ಸಾಂಕೇತಿಕ ಸೂಚನೆಗಳಿರುತ್ತವೆಯೇ ಹೊರತು ಶಸ್ತ್ರಾಸ್ತ್ರಗಳ ಸುಳಿವೂ ಇರುವುದಿಲ್ಲ.

ಭಾರತದಲ್ಲಿ ನಡೆಯುತ್ತಿರುವ ರೈತ ಮುಷ್ಕರದ ಬಗ್ಗೆಯೂ ಸಹ ಇಂತಹುದೇ ಟೂಲ್ಕಿೇಟ್ ಒಂದನ್ನು ಸಿದ್ಧಪಡಿಸಲಾಗಿದ್ದು ಇದರಲ್ಲಿ ಮುಷ್ಕರ ನಿರತ ರೈತರು ಅನುಸರಿಸಬೇಕಾದ ಅಹಿಂಸಾತ್ಮಕ ಕಾರ್ಯ ಚಟುವಟಿಕೆಗಳನ್ನು ಸೂಚಿಸಲಾಗಿದೆ. ಟ್ವೀಟ್ಗ ಳ ಮೂಲಕ ಪ್ರತಿಭಟಿಸುವುದು, ಅರ್ಜಿಗಳನ್ನು ಸಲ್ಲಿಸುವುದು, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಧರಣಿ ನಡೆಸುವುದು ಹೀಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಭಾರತದ ಎಂಬೆಸಿ ಕಚೇರಿಯ ಮುಂದೆ ಧರಣಿ ನಡೆಸಲು ಸೂಚಿಸುವುದು , ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಲು ಸೂಚಿಸುವುದು ಸಂವಿಧಾನವಿರೋಧಿಯೂ ಆಗುವುದಿಲ್ಲ, ದೇಶದ್ರೋಹವೂ ಆಗುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಾರ್ವಭೌಮ ಪ್ರಜೆಗಳಿಗೆ ಈ ಹಕ್ಕು ಇರುತ್ತದೆ ಎನ್ನುವುದನ್ನು ನಾವು ಗಮನಿಸಬೇಕು.

ಜನವರಿ 26ರಂದು ರೈತರ ಟ್ರಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಟೂಲ್ಕಿಟಟ್ ಮತ್ತು ಇತರ ಸಂಘಟಕರನ್ನು ಅನುಮಾನಾಸ್ಪದವಾಗಿ ನೋಡುತ್ತಿದೆ. ಆದರೆ ಕೆಂಪುಕೋಟೆಯಲ್ಲಿ ನಡೆದ ಘಟನೆ ಯಾವುದೇ ಒಂದು ಬೃಹತ್ ಜನಾಂದೋಲನದ ಸಂದರ್ಭದಲ್ಲಿ ಸಹಜವಾಗಿ ನಡೆಯುವಂತಹುದೇ ಆಗಿದ್ದು, ಭಾರತದ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎನ್ನುವ ಆರೋಪಗಳೂ ಸಹ ಹುಸಿ ಎಂದು ಸಾಬೀತಾಗಿದೆ.

ರೈತ ಮುಷ್ಕರವನ್ನು ಸಾರ್ವಜನಿಕರ ದೃಷ್ಟಿಯಲ್ಲಿ ತಪ್ಪಾಗಿ ತೋರಿಸುವ ಒಂದು ಹುನ್ನಾರವನ್ನೂ ಈ ಘಟನೆಗಳಲ್ಲಿ ಕಾಣಬಹುದಾಗಿದೆ. ಆದರೆ ಈ ಘಟನೆಗಳನ್ನು ನೆಪವಾಗಿಟ್ಟುಕೊಂಡೇ ಕೇಂದ್ರ ಸರ್ಕಾರ ರೈತ ಮುಷ್ಕರದ ಪರ ವಹಿಸುವ ಪ್ರಜಾಸತ್ತಾತ್ಮಕ ದನಿಗಳನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ದಿಶಾ ರವಿ ಪ್ರಕರಣದಲ್ಲಿ ಇದರ ಉದ್ದೇಶ ಸ್ಪಷ್ಟವಾಗಿ ಕಾಣುತ್ತದೆ.

ಫ್ರೈಡೇಸ್ ಫಾರ್ ಫ್ಯೂಚರ್ ಪ್ರಚಾರಾಂದೋಲನ ಎನ್ನುವ ಒಂದು ಟೂಲ್ಕಿುಟ್ ಸಂಪಾದಿಸುವಲ್ಲಿ ದಿಶಾರವಿ ಪಾತ್ರವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ. ಈ ಟೂಲ್ಕಿಲಟ್ ಸಿದ್ಧಪಡಿಸಿದ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬಪರ್ಗ್ ಜಾಗತಿಕ ಮಟ್ಟದಲ್ಲೇ ಭಾರತದ ರೈತರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇವರು ಸಿದ್ಧಪಡಿಸಿರುವ ಟೂಲ್ಕಿರಟ್ ಸಾರ್ವಜನಿಕ ಓದಿಗೂ ಲಭ್ಯವಿದ್ದು, ಅದರಲ್ಲಿ ಹೋರಾಟದ ರೂಪುರೇಷೆಗಳನ್ನು ಹೊರತುಪಡಿಸಿ ಮತ್ತಾವುದೇ ಸಂವಿಧಾನವಿರೋಧಿ ಸಂದೇಶಗಳಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಈ ಟೂಲ್ಕಿಾಟ್ನಿಲ್ಲಿನ ಕೆಲವು ಅಂಶಗಳನ್ನು ತಾನು ಸಂಪಾದಿಸಿರುವುದಾಗಿ ದಿಶಾರವಿ ಒಪ್ಪಿಕೊಂಡಿದ್ದಾರೆ ಆದರೆ ಈ ಚಟುವಟಿಕೆಯನ್ನೇ ಆಧರಿಸಿ ಆಕೆಯನ್ನು ರಾಜದ್ರೋಹದ ಕಾಯ್ದೆಯಡಿ ಬಂಧಿಸುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಒಂದು ವೇಳೆ ಇಡೀ ಟೂಲ್ ಕಿಟ್ ದಿಶಾ ರವಿ ಅವರಿಂದಲೇ ರಚಿಸಲ್ಪಟ್ಟಿದ್ದರೂ ಅಪರಾಧವೇನೂ ಆಗುವುದಿಲ್ಲ.

ಟೂಲ್ ಕಿಟ್ ನಲ್ಲಿ ಏನಿದೆ ?

ಭಾರತದಲ್ಲಿ ನಡೆಯುತ್ತಿರುವ ರೈತ ಮುಷ್ಕರಕ್ಕೆ ಬೆಂಬಲ ಸೂಚಿಸಲು ಗ್ರೇಟಾ ಥನ್ಬದರ್ಗ್ ಸಿದ್ಧಪಡಿಸಿರುವ ಟೂಲ್ಕಿಬಟ್ನಲಲ್ಲಿ ಭಾರತ ಸರ್ಕಾರದ ಹೊಸ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಗುರುತಿಸಲಾಗಿದ್ದು, ಈ ಕಾಯ್ದೆಗಳು ನವ ಉದಾರವಾದಿ ಆರ್ಥಿಕ ನೀತಿಗಳ ಪರಿಣಾಮವಾಗಿ ಮೂಡಿಬಂದಿರುವುದನ್ನು ಸ್ಪಷ್ಟಪಡಿಸಲಾಗಿದೆ. ರೈತರನ್ನು ಸಂಪರ್ಕಿಸದೆ, ಸಂಸತ್ತಿನಲ್ಲಿ ಚರ್ಚೆ ನಡೆಸದೆ ಈ ಕಾಯ್ದೆಗಳನ್ನು ಜಾರಿಗೊಳಿಸಿರುವುದನ್ನೂ ಟೂಲ್ಕಿಪಟ್ನನಲ್ಲಿ ಉಲ್ಲೇಖಿಸಲಾಗಿದೆ.

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಉದ್ಯಮಿಗಳಿಗೆ ವಹಿಸುವುದರಿಂದ ಪರಿಸರ ವಿನಾಶಕ್ಕೂ ದಾರಿಮಾಡಿಕೊಟ್ಟಂತಾಗುತ್ತದೆ ಎನ್ನುವ ಅಂಶವನ್ನೂ ಉಲ್ಲೇಖಿಸಲಾಗಿದೆ. ಈ ನಿಟ್ಟಿನಲ್ಲಿ ರೈತ ಮುಷ್ಕರಕ್ಕೆ ಭಾರತದ ಜನತೆ ಮತ್ತು ವಿಶ್ವದ ಇತರ ರಾಷ್ಟ್ರಗಳ ಜನತೆ ಹೇಗೆ ಪ್ರತಿಕ್ರಯಿಸಬೇಕು ಎನ್ನುವುದನ್ನು ಟೂಲ್ಕಿ್ಟ್ನಷಲ್ಲಿ ವಿವರಿಸಲಾಗಿದೆ. ರೈತರಿಗೆ ಬೆಂಬಲಿಸಿ ಟ್ವೀಟ್ ಮಾಡುವುದು, ಹ್ಯಾಷ್ಟ್ಯಾ ಗ್ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲ ವ್ಯಕ್ತಪಡಿಸುವುದು, ಸರ್ಕಾರದ ಪ್ರತಿನಿಧಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಇ ಮೇಲ್ ಕಳಿಸುವುದು, ಫೆಬ್ರವರಿ 13-14ರಂದು ಭಾರತೀಯ ರಾಯಭಾರ ಕಚೇರಿಯ ಮುಂದೆ, ಸ್ಥಳೀಯ ಸರ್ಕಾರಿ ಕಚೇರಿಗಳ ಮುಂದೆ ಧರಣಿ ನಡೆಸುವುದು, ಸತತ ಟ್ವೀಟ್ ಮಾಡುವುದು, ಮುಖ್ಯ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಹೀಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಇದರ ಪೂರ್ಣ ವಿವರಗಳು ಇಲ್ಲಿ ಲಭ್ಯವಿದೆ :Farming and its Crisis

ಈ ಟೂಲ್ ಕಿಟ್ ಆಧಾರದಲ್ಲೇ ದಿಶಾ ರವಿ ಅವರನ್ನು ಬಂಧಿಸಲಾಗಿದ್ದು ಇದೀಗ ದೆಹಲಿಯ ಪಟಿಯಾಲಾ ನ್ಯಾಯಾಲಯದಲ್ಲಿ ಆಕೆಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಧರ್ಮೇಂದ್ರ ರಾಣಾ ಅವರು ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ಇಂದಿನ ಸಂದರ್ಭದಲ್ಲಿ ಬಹಳ ಮುಖ್ಯವಾಗುತ್ತದೆ. ಎಲ್ಗಾರ್ ಪರಿಷತ್ ಮತ್ತು ಭೀಮಾ ಕೊರೆಗಾಂವ್ ಘಟನೆಯ ಹಿನ್ನೆಲೆಯಲ್ಲಿ ಹಲವಾರು ವಕೀಲರನ್ನು, ಬರಹಗಾರರನ್ನು, ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಇವರ ವಿರುದ್ಧ ಯುಎಪಿಎ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ರಾಜದ್ರೋಹ ಕಾಯ್ದೆ ಸೆಕ್ಷನ್ 124ಎ ಮತ್ತು ಯುಎಪಿಎ, ಈ ಎರಡು ಕರಾಳ ಶಾಸನಗಳು ಪ್ರತಿರೋಧದ ದನಿಗಳನ್ನು ಅಡಗಿಸುವ ಅಸ್ತ್ರಗಳಾಗಿ ಪರಿಣಮಿಸಿರುವುದು ಭಾರತೀಯ ಪ್ರಜಾತಂತ್ರದ ದುರಂತ.

ದಿಶಾ ರವಿಯವರ ಬಂಧನದ ಹಿಂದೆ ದೇಶದ ಯುವ ಸಮುದಾಯದ ಜಾಗೃತ ಪ್ರಜ್ಞೆಯನ್ನು ಕುಡಿಯಲ್ಲೇ ಚಿವುಟುವ ಹುನ್ನಾರವನ್ನೂ ಗುರುತಿಸಬಹುದಾಗಿದೆ. ಇಂದು ದೇಶ ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಮೋದಿ ಸರ್ಕಾರದ ಆಡಳಿತ ನೀತಿಗಳೇ ಕಾರಣ ಎನ್ನುವುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ, ಉತ್ಪಾದನೆಯ ಕೊರತೆ, ಅಭಿವೃದ್ಧಿ ಸೂಚ್ಯಂಕದಲ್ಲಿ ಕುಸಿತ, ಉದ್ಯೋಗ ಸೃಷ್ಟಿಯಲ್ಲಿನ ವೈಫಲ್ಯ, ತೈಲ ಮತ್ತು ಅವಶ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು ಮತ್ತು ಹಣಕಾಸು ಬಿಕ್ಕಟ್ಟು ಜನಸಾಮಾನ್ಯರನ್ನು ಬಾಧಿಸುತ್ತಿದೆ.

ಈ ಗಂಭೀರ ಸಮಸ್ಯೆಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಯಥಾಸ್ಥಿತಿಯಲ್ಲಿದ್ದರೆ ಅದಕ್ಕೆ ಕಾರಣ ಯುವ ಸಮುದಾಯವನ್ನು ಆವರಿಸಿರುವ ಸಮೂಹ ಸನ್ನಿ ಮತ್ತು ಮಧ್ಯಮ, ಮೇಲ್ ಮಧ್ಯಮ ವರ್ಗವನ್ನು ಆವರಿಸಿರುವ ಅಂಧ ಶ್ರದ್ಧೆ.

ಈ ಸಮೂಹ ಸನ್ನಿಗೊಳಗಾಗಿರುವ ಯುವಸಮುದಾಯದ ಒಂದು ವರ್ಗ ಇತ್ತೀಚಿನ ದಿನಗಳಲ್ಲಿ ಜಾಗೃತವಾಗುತ್ತಿದೆ. ರೈತ ಮುಷ್ಕರದ ಹಿನ್ನೆಲೆಯಲ್ಲಿ ಉತ್ತರದ ಹಲವು ರಾಜ್ಯಗಳಲ್ಲಿ ಜನಾಭಿಪ್ರಾಯ ಬದಲಾಗುತ್ತಿದೆ. ಭ್ರಮನಿರಸನಗೊಂಡ ಯುವ ಸಮುದಾಯ ಭಿನ್ನ ನೆಲೆಯಲ್ಲಿ ಯೋಚಿಸಲಾರಂಭಿಸಿದೆ. ಈ ಜಾಗೃತ ಮನಸುಗಳನ್ನು ಪುನಃ ಪರಿವರ್ತಿಸುವುದು ಇಂದಿನ ದುಸ್ಥಿತಿಯಲ್ಲಿ ಕಷ್ಟ ಎನ್ನುವುದೂ ಮೋದಿ ಸರ್ಕಾರಕ್ಕೆ ತಿಳಿದಿದೆ.

ಹಾಗಾಗಿ ಯುವ ಮನಸುಗಳಲ್ಲಿ ಭೀತಿ ಉಂಟುಮಾಡುವ ಉದ್ದೇಶದಿಂದಲೇ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾರವಿ ವಿರುದ್ಧ ರಾಜದ್ರೋಹದಂತಹ ಗಂಭೀರ ಆರೋಪ ಹೊರಿಸಿ ಬಂಧಿಸಲಾಗುತ್ತದೆ. ಇದು ಜನಸಾಮಾನ್ಯರಲ್ಲಿ ಭೀತಿ ಸೃಷ್ಟಿಸಿ ಜಾಗೃತಿಗೆ ಧಕ್ಕೆ ಉಂಟುಮಾಡುವ ತಂತ್ರಗಾರಿಕೆ ಎನ್ನುವುದು ಸುಸ್ಪಷ್ಟ.

ಸ್ವತಂತ್ರ ಆಲೋಚನೆಗೆ ಅವಕಾಶವೇ ನೀಡದೆ ಅಧಿಪತ್ಯ ರಾಜಕಾರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಮೋದಿ-ಶಾ ಜೋಡಿ ಹಲವು ವ್ಯೂಹಗಳನ್ನು ರಚಿಸುತ್ತಿದ್ದು, ದಿಶಾರವಿಯ ಪ್ರಕರಣವೂ ಇಂತಹುದೇ ಪ್ರಯತ್ನವಾಗಿದೆ. ಮಾಧ್ಯಮಗಳು ವಂದಿಮಾಗಧ ಸಂಸ್ಕೃತಿಯ ಶಿಖರ ತಲುಪಿರುವ ಹೊತ್ತಿನಲ್ಲಿ ಸರ್ಕಾರದ ತಪ್ಪುಒಪ್ಪುಗಳನ್ನು ಪರಾಮರ್ಶಿಸುವ ಅವಕಾಶವೇ ಇಲ್ಲವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿ ಯುವ ಸಮುದಾಯದ ಸ್ವತಂತ್ರ ಆಲೋಚನೆ ಪ್ರಜಾತಂತ್ರ ಮೌಲ್ಯಗಳ ರಕ್ಷಣೆಗೆ ಅತ್ಯವಶ್ಯವಾಗಿರುತ್ತದೆ.

ಈ ಬೆಳವಣಿಗೆಗೆ ಅವಕಾಶ ನೀಡದಿರಲು ಸರ್ಕಾರ ಕರಾಳ ಶಾಸನಗಳ ಮೊರೆ ಹೋಗುತ್ತಿದೆ. ಭಾರತದ ಬಹುತ್ವ ಸಂಸ್ಕೃತಿಯನ್ನು ಮತ್ತು ಬಹುಮುಖೀ ಸಾಂಸ್ಕೃತಿಕ ನೆಲೆಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಮುಂದಿನ ಪೀಳಿಗೆಗೆ ರವಾನಿಸುವ ಗುರುತರ ಹೊಣೆ ಹೊತ್ತಿರುವ ಯುವ ಸಮುದಾಯದ ಮೇಲೆ ಕರಾಳ ಶಾಸನಗಳ ಪ್ರಹಾರದ ಮೂಲಕ ಒತ್ತಡ ಹೇರುವ ತಂತ್ರವನ್ನು ನಾವಿಂದು ನೋಡುತ್ತಿದ್ದೇವೆ.

ಈ ಹಿನ್ನೆಲೆಯಲ್ಲಿ ದಿಶಾರವಿ ಜಾಮೀನು ತೀರ್ಪಿನಲ್ಲಿ ಪಟಿಯಾಲಾ ನ್ಯಾಯಾಲಯದ ನ್ಯಾಯಮೂರ್ತಿ ಧರ್ಮೇಂದ್ರರಾಣಾ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಸಾರ್ವಕಾಲಿಕ ಮಾನ್ಯತೆ ಪಡೆಯುತ್ತವೆ. ಇದೇ ನ್ಯಾಯಮೂರ್ತಿಗಳು ಈ ಹಿಂದೆ ಜೆಎನ್ಯುಕ ವಿದ್ಯಾರ್ಥಿನಿ ಸಫೂರ ಜರ್ಗರ್ ಪ್ರಕರಣದಲ್ಲಿ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ದಿಶಾರವಿ ಪ್ರಕರಣದ ತೀರ್ಪು ಇಂದಿನ ಸಂದರ್ಭದಲ್ಲಿ ಸ್ವಾಗತಾರ್ಹ ಎನಿಸುತ್ತದೆ.

ನ್ಯಾ ಧರ್ಮೇಂದ್ರ ರಾಣಾ ತಮ್ಮ ತೀರ್ಪಿನಲ್ಲಿ ಹೀಗೆ ಹೇಳಿದ್ದಾರೆ:-“ ಒಬ್ಬ ವ್ಯಕ್ತಿಯು ಕೆಲವು ಸಂಶಯಾಸ್ಪದ ವ್ಯಕ್ತಿಗಳ ಜೊತೆಗೆ ಸಂಪರ್ಕದಲ್ಲಿದ್ದ ಮಾತ್ರಕ್ಕೆ ಆ ವ್ಯಕ್ತಿಯ ಎಲ್ಲ ಚಟುವಟಿಕೆಗಳನ್ನೂ ಸಂಶಯಾಸ್ಪದವಾಗಿ ನೋಡುವ ಅಗತ್ಯವಿಲ್ಲ , ಕಾನೂನಿನ ಚೌಕಟ್ಟಿನೊಳಗೆ ನಡೆಸುವ ಚಟುವಟಿಕೆಗಳನ್ನು ಆಧರಿಸಿ ಕಳಂಕ ಹೊರಿಸುವುದು ಸಮರ್ಥನೀಯವಲ್ಲ. ಸರ್ಕಾರ ಜಾರಿಗೊಳಿಸಿರುವ ಒಂದು ಶಾಸನವನ್ನು ವಿರೋಧಿಸುವ ವೇದಿಕೆ ಅಥವಾ ಸಂಘಟನೆಯನ್ನು ಬೆಂಬಲಿಸದ ಮಾತ್ರಕ್ಕೆ ಊಹಾಪೋಹಗಳನ್ನು ಆಧರಿಸಿ ಯಾರನ್ನೂ ಭಯೋತ್ಪಾದಕರಂತೆ ನೋಡುವುದು ತರವಲ್ಲ.

ಭಾರತದ ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಮನ್ನಣೆ ನೀಡಿದ್ದು, ಇದಕ್ಕೆ ಯಾವುದೇ ಭೌಗೋಳಿಕ ಚೌಕಟ್ಟು, ಗಡಿರೇಖೆ ಇರುವುದಿಲ್ಲ, ಜಾಗತಿಕ ಅಭಿಪ್ರಾಯ ಮೂಡಿಸಲೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಬಳಸಬಹುದು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ಕೆಲವು ಯೋಜನೆಗಳನ್ನು, ನೀತಿಗಳನ್ನು ವಿರೋಧಿಸುವುದೇ ರಾಜದ್ರೋಹ ಎನಿಸಿಕೊಳ್ಳುವುದಿಲ್ಲ, ಈ ಕಾರಣಕ್ಕಾಗಿ ಪ್ರಜೆಗಳನ್ನು ಜೈಲಿಗೆ ತಳ್ಳುವುದು, ಮತ್ತು ಘಾಸಿಗೊಂಡ ಸರ್ಕಾರದ ದುರಭಿಮಾನವನ್ನು ತಣಿಸಲು ರಾಜದ್ರೋಹ ಪ್ರಕರಣ ದಾಖಲಿಸುವುದು ನ್ಯಾಯಯುತವಲ್ಲ. ಭಾರತ ಸಾವಿರಾರು ವರ್ಷಗಳಿಂದ ಹಲವಾರು ಭಿನ್ನ ಚಿಂತನೆಗಳನ್ನು, ಅಭಿಪ್ರಾಯಗಳನ್ನು ಗೌರವಿಸುತ್ತಲೇ ಬಂದಿದೆ ಎಂದು ಹೇಳುತ್ತಾ ಋಗ್ವೇದದ ವಾಕ್ಯವೊಂದನ್ನು ಉದ್ಧರಿಸಿರುವ ನ್ಯಾಯಮೂರ್ತಿಗಳು, ವಾಟ್ಸಾಪ್ ಗುಂಪು ರಚಿಸುವುದು, ಟೂಲ್ ಕಿಟ್ ಸಿದ್ಧಪಡಿಸುವುದು ಶಿಕ್ಷಾರ್ಹ ಅಪರಾಧವಾಗುವುದಿಲ್ಲ ”

ರಾಜದ್ರೋಹ ಕಾಯ್ದೆಯನ್ನು ಸಂತೆಯ ಸರಕಿನಂತೆ ಬಳಸುತ್ತಿರುವ ಕೇಂದ್ರ ಸರ್ಕಾರ, ಆಡಳಿತ ನೀತಿಯ ವಿರುದ್ಧ ಮಾತನಾಡುವುದನ್ನೇ ಅಪರಾಧ ಎಂದು ಭಾವಿಸುತ್ತಿದೆ. ಸರ್ಕಾರದ ವಿರುದ್ಧ ಮಾತನಾಡುವುದನ್ನೇ ದೇಶದ್ರೋಹ ಎಂದು ಪರಿಗಣಿಸುತ್ತಿದೆ. 2010ರ ನಂತರ ದೇಶದಲ್ಲಿ 11 ಸಾವಿರ ಜನರ ವಿರುದ್ಧ 816 ರಾಜದ್ರೋಹ ಮೊಕದ್ದಮೆಗಳು ದಾಖಲಾಗಿವೆ. ಪತ್ರಕರ್ತರು, ವಿದ್ಯಾರ್ಥಿಗಳು, ವಿರೋಧಪಕ್ಷ ನಾಯಕರು, ಲೇಖಕರು, ಬೋಧಕರು, ಕಲಾವಿದರು ಈ ಕರಾಳ ಶಾಸನದಡಿ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.

2010 ರಿಂದ 2014ರ ಯುಪಿಎ ಅವಧಿಯಲ್ಲಿ 279 ಪ್ರಕರಣಗಳು ದಾಖಲಾಗಿದ್ದರೆ, 2014ರ ನಂತರ 519 ರಾಜದ್ರೋಹ ಮೊಕದ್ದಮೆಗಳು ದಾಖಲಾಗಿವೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ 144 ಜನರು ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ 149 ಮಂದಿಯ ವಿರುದ್ಧ ರಾಜದ್ರೋಹ ಪ್ರಕರಣಗಳು ದಾಖಲಾಗಿವೆ.

ಈ ಹಿನ್ನೆಲೆಯಲ್ಲಿ ದಿಶಾ ರವಿ ಪ್ರಕರಣ ಪ್ರಭುತ್ವದ ದಮನಕಾರಿ ನೀತಿಯ ಒಂದು ಆಯಾಮವಾಗಿದ್ದರೆ, ಪಟಿಯಾಲ ನ್ಯಾಯಾಲಯದ ಮಹತ್ವದ ತೀರ್ಪು ನ್ಯಾಯ ವ್ಯವಸ್ಥೆಗೆ ಚುರುಕುಮುಟ್ಟಿಸುವಂತಿದೆ. ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದಂತೆಯೂ ಇದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ದನಿಯೇ ಅಂತಿಮ ಎನ್ನುವ ಸತ್ಯವನ್ನು ಸರ್ಕಾರಕ್ಕಿಂತಲೂ ಹೆಚ್ಚಾಗಿ ಜನಸಾಮಾನ್ಯರು ಅರ್ಥಮಾಡಿಕೊಳ್ಳಬೇಕಿದೆ. ಆಗಲಾದರೂ ಭಾರತದ ಯುವ ಸಮುದಾಯ ಸಮೂಹ ಸನ್ನಿಯಿಂದ ಮುಕ್ತವಾಗಿ ಸ್ವತಂತ್ರವಾಗಿ ಆಲೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 days ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ7 days ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ7 days ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ7 days ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

ದಿನದ ಸುದ್ದಿ2 weeks ago

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ....

ದಿನದ ಸುದ್ದಿ2 weeks ago

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು...

ದಿನದ ಸುದ್ದಿ3 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

Trending