Connect with us

ಬಹಿರಂಗ

ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ

Published

on

  • ನಾ ದಿವಾಕರ

ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ ಸ್ವಾಸ್ಥ್ಯ ಸಂರಕ್ಷಣೆಯ ಪ್ರಯತ್ನಗಳು ನಡೆಯುತ್ತಾ ಬಂದಿರುವುದರಿಂದಲೇ ಮನುಕುಲ ಇಂದಿಗೂ ಸಹ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡುಬಂದಿದೆ. ಒಬ್ಬ ಹಿಟ್ಲರಿಗೆ ನೂರಾರು ಗಾಂಧಿ ಮಂಡೇಲಾಗಳು ಹುಟ್ಟಿಕೊಳ್ಳುತ್ತಾ ಬಂದಿದ್ದಾರೆ. ಒಬ್ಬ ಮುಸೋಲಿನಿಗೆ ನೂರಾರು ಅಂಬೇಡ್ಕರುಗಳು ಉದಯಿಸುತ್ತಾ ಬಂದಿದ್ದಾರೆ.

ಮತಾಂಧನೊಬ್ಬನಿಂದ ಹತ್ಯೆಗೀಡಾದರೂ ಗಾಂಧಿ ಬೌದ್ಧಿಕವಾಗಿ ನಮ್ಮ ನಡುವೆ ಇದ್ದಾರೆ. ಭಾರತದ ಮೇಲ್ಜಾತಿ ಮನಸುಗಳಿಂದ ಬಹಿಷ್ಕೃತರಾಗಿದ್ದರೂ ಪೆರಿಯಾರ್, ಅಂಬೇಡ್ಕರ್ ಇಂದು ಭಾರತೀಯ ಸಮಾಜದ ಅಂತಃಸತ್ವದ ಬುನಾದಿಯಾಗುತ್ತಾರೆ. ಸಾಂಸ್ಕೃತಿಕ ರಾಜಕಾರಣದ ರಾಯಭಾರಿಗಳ ಗುಂಡೇಟಿಗೆ ಬಲಿಯಾದರೂ ಧಬೋಲ್ಕರ್, ಪನ್ಸಾರೆ, ಗೌರಿ, ಕಲಬುರ್ಗಿ ನಮ್ಮ ನಡುವೆ ಚಿಂತನೆಗಳ ರೂಪದಲ್ಲಿ ಜೀವಂತಿಕೆಯಿಂದಿದ್ದಾರೆ.

ಸಮಾಜದಲ್ಲಿ ಅಂತರ್ಗತವಾಗಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿ ಬೆಳೆಸಲು ಈ ಚಿಂತಕರ ಚಿಂತನೆಗಳು, ಬೋಧನೆಗಳು ಸುಭದ್ರ ಬುನಾದಿಯನ್ನು ನಿರ್ಮಿಸುತ್ತವೆ. ಶತಮಾನಗಳ ಹಿಂದೆ ಭಾರತೀಯ ಸಮಾಜದಲ್ಲಿ ಅಂತರ್ಗತವಾಗಿದ್ದ ಅಸಮಾನತೆ, ಅಸಹಿಷ್ಣುತೆ ಮತ್ತು ಜಾತಿ ಶ್ರೇಷ್ಠತೆಯ ಚಿಂತನೆಗಳಿಗೆ ಪ್ರತಿರೋಧದ ರೂಪದಲ್ಲೇ ಭಾರತದಲ್ಲಿ ಜೈನ, ಬೌದ್ಧ, ಸಿಖ್ ಧರ್ಮಗಳು ಉದಯಿಸಿದ್ದವು.

ಸಾಂಪ್ರದಾಯಿಕ ಸಮಾಜದ, ವೈದಿಕ ಪರಂಪರೆಯ ಡಂಭಾಚಾರ, ಶೋಷಣೆ, ಕಂದಾಚಾರಗಳ ವಿರುದ್ಧ ಭಕ್ತಿ ಪಂಥ, ಸೂಫಿ ಪರಂಪರೆಗಳು ಹುಟ್ಟಿಕೊಂಡಿದ್ದವು. ಈ ಪ್ರತಿರೋಧದ ದನಿಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿದ್ದರೆ ಅದರ ಹಿಂದೆ ಅನೇಕ ಸಮಕಾಲೀನ ಚಿಂತಕರ, ಸಾಹಿತಿಗಳ ಮತ್ತು ಸಮಾಜ ಸುಧಾರಕರ ಪರಿಶ್ರಮ ಇದೆ.

ಬುದ್ಧನಿಂದ ಗಾಂಧಿ ಅಂಬೇಡ್ಕರ್ ವರೆಗೆ ಈ ಚಿಂತನಾ ವಾಹಿನಿಗಳು ಭಾರತೀಯ ಸಮಾಜಕ್ಕೆ ಮಾರ್ಗದರ್ಶಿ ಸೂತ್ರಗಳನ್ನು ಒದಗಿಸಿವೆ. ಸಾವಿರಾರು ಭಾಷೆಗಳು, ನೂರಾರು ಸಂಸ್ಕೃತಿಗಳು ಭಾರತೀಯ ಸಮಾಜದ ವೈವಿಧ್ಯತೆಯನ್ನು, ಬಹುಸಂಸ್ಕೃತಿಯ ನೆಲೆಗಳನ್ನು ಕಾಪಾಡಿಕೊಂಡು ಬಂದಿದ್ದರೆ ಅದಕ್ಕೆ ಕಾರಣ ಈ ಮಹಾನ್ ಚಿಂತಕರು ಬಿಟ್ಟುಹೋಗಿರುವ, ಕೊಟ್ಟುಹೋಗಿರುವ ಟೂಲ್ಕಿಿಟ್ಗದಳು.

ಭಾರತದ ಫ್ಯಾಸಿಸ್ಟ್ ಆಡಳಿತ ವ್ಯವಸ್ಥೆಯ ದೃಷ್ಟಿಯಲ್ಲಿ, ವಂದಿಮಾಗಧ ಸುದ್ದಿಮನೆಗಳ ದೃಷ್ಟಿಯಲ್ಲಿ ರಾಜದ್ರೋಹದ ಅಸ್ತ್ರದಂತೆ ಕಾಣುವ ಒಂದು ಸಾಧಾರಣ ಟೂಲ್ಕಿ ಟ್ ದಿಶಾ ರವಿ ಎಂಬ 21 ವರ್ಷದ ಪರಿಸರವಾದಿಯನ್ನು ದೇಶದ್ರೋಹಿಯನ್ನಾಗಿ ಮಾಡುತ್ತದೆ. ಆದರೆ ಇಂತಹ ನೂರಾರು ಟೂಲ್ಕಿಷಟ್ಗರಳೇ ಭಾರತದಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಸಂರಕ್ಷಿಸಿಕೊಂಡುಬಂದಿದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಮುಷ್ಕರವನ್ನು ಬೆಂಬಲಿಸುವ ಒಂದು ಟೂಲ್ಕಿ ಟ್ 136 ಕೋಟಿ ಜನತೆಯನ್ನು ಪ್ರತಿನಿಧಿಸುವ ಒಂದು ಚುನಾಯಿತ ಸರ್ಕಾರವನ್ನು ವಿಚಲಿತಗೊಳಿಸುತ್ತದೆ ಎಂದರೆ ನಮ್ಮನ್ನು ಆಳುವ ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ದೆಹಲಿಯ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದ್ದ ಒಬ್ಬ ಹೋರಾಟಗಾರ್ತಿಯನ್ನು ರಾತ್ರೋರಾತ್ರಿ ಬಂಧಿಸುತ್ತಾರೆ, ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಯಾವುದೇ ಸುಳಿವು ನೀಡದೆ ಆಕೆಯನ್ನು ದೆಹಲಿಗೆ ಕರೆದೊಯ್ಯುತ್ತಾರೆ. ಒಂದು ಒಕ್ಕೂಟ ವ್ಯವಸ್ಥೆಯಲ್ಲಿ, ಗಣತಂತ್ರದ ಚೌಕಟ್ಟಿನಲ್ಲಿ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಮ್ಮನ್ನು ಕಾಡದೆ ಹೋದರೆ ನಾವು ಪ್ರಜ್ಞಾಶೂನ್ಯರಾಗಿದ್ದೇವೆ ಎಂದೇ ಭಾವಿಸಬೇಕಾಗುತ್ತದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಮುಷ್ಕರ ಮೂರು ತಿಂಗಳು ಪೂರೈಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಷ್ಟು ದೀರ್ಘಕಾಲಿಕ ಮುಷ್ಕರ ಈವರೆಗೂ ಕಂಡಿರಲಿಲ್ಲ. ಹಾಗೆಯೇ ಮುಷ್ಕರನಿರತರಲ್ಲಿನ ಈ ಪ್ರಮಾಣದ ಬದ್ಧತೆ ಮತ್ತು ಆತ್ಮಸ್ಥೈರ್ಯವನ್ನೂ ಭಾರತ ಕಂಡಿರಲಿಲ್ಲ. ಮತ್ತೊಂದು ಮಜಲಿನಲ್ಲಿ ನೋಡಿದಾಗ ಭಾರತದ ಗಣತಂತ್ರ ವ್ಯವಸ್ಥೆಯಲ್ಲಿ ಈ ರೀತಿಯ ನಿಷ್ಕ್ರಿಯ, ನಿರ್ದಯಿ ಮತ್ತು ನಿರ್ಲಕ್ಷ್ಯ ಸರ್ಕಾರವನ್ನೂ ಈವರೆಗೂ ನಾವು ಕಂಡಿರಲಿಲ್ಲ. ಇವೆಲ್ಲದರ ನಡುವೆ ಕೇಂದ್ರ ಸರ್ಕಾರ ರೈತ ಮುಷ್ಕರದ ನೈತಿಕ ಉದ್ದೇಶವನ್ನೇ ಪ್ರಶ್ನಿಸುತ್ತಿದ್ದು ಸರ್ಕಾರ ಜಾರಿಗೊಳಿಸಿರುವ ಅಸಾಂವಿಧಾನಿಕ ಕರಾಳ ಮರಣ ಶಾಸನಗಳನ್ನು ವಿರೋಧಿಸುವುದನ್ನೇ ರಾಜದ್ರೋಹ ಎಂದು ಪರಿಗಣಿಸುತ್ತಿದೆ. ಮುಷ್ಕರವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅನುಸರಿಸಿದ ಕ್ರೂರ, ಅಸಾಂವಿಧಾನಿಕ ಕುಟಿಲೋಪಾಯಗಳು ವಿಫಲವಾದ ನಂತರ ಈಗ ಈ ಮುಷ್ಕರವನ್ನು ಬೆಂಬಲಿಸುವ ದನಿಗಳನ್ನೇ ಶಾಶ್ವತವಾಗಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿವೆ. ದಿಶಾರವಿ ಇಂತಹ ಕುತಂತ್ರಕ್ಕೆ ಬಲಿಯಾದ ಪರಿಸರ ಹೋರಾಟಗಾರ್ತಿ.

ಕೆನಡಾದಲ್ಲಿ 2020ರ ಮಾರ್ಚ್ ತಿಂಗಳಲ್ಲಿ ಸ್ಥಾಪಿಸಲಾದ ಪೋಯೆಟಿಕ್ ಜಸ್ಟಿಸ್ ಫೌಂಡೇಷನ್ ಮೂಲತಃ ಜಗತ್ತಿನಾದ್ಯಂತ ನಡೆಯುವ ಜನಾಂದೋಲನಗಳನ್ನು, ಪರಿಸರ ಹೋರಾಟಗಳನ್ನು ಮತ್ತು ಹಕ್ಕೊತ್ತಾಯಗಳ ಹೋರಾಟಗಳನ್ನು ಬೆಂಬಲಿಸುವ ಒಂದು ಸಂಸ್ಥೆ. ದೆಹಲಿ ಪೊಲೀಸರು ಆರೋಪಿಸಿರುವಂತೆ ಇದು ಖಲಿಸ್ತಾನಿ ಬೆಂಬಲಿಗ ಸಂಘಟನೆ ಎಂದು ನಿರೂಪಿಸಲು ಯಾವುದೇ ಪುರಾವೆಗಳಿಲ್ಲ. ಸಾಮಾಜಿಕ ಮಾಧ್ಯಮಗಳು ಹೆಚ್ಚು ಪ್ರಚಲಿತವಾದ ನಂತರ ಇಂತಹ ಜಾಗತಿಕ ವೇದಿಕೆಗಳು ವಿಶ್ವದಾದ್ಯಂತ ನಡೆಯುವ ಜನಾಂದೋಲನಗಳಿಗೆ ಪ್ರೋತ್ಸಾಹ, ಬೆಂಬಲ ವ್ಯಕ್ತಪಡಿಸಲು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತವೆ. ಈ ಸೂತ್ರಗಳ ಮೂಲಕ ಹೋರಾಟಗಳನ್ನು ಹೇಗೆ ಮುನ್ನಡೆಸಬೇಕು, ಜನರನ್ನು ಹೇಗೆ ಕ್ರೋಢೀಕರಿಸಬೇಕು ಎಂದು ಸೂಚಿಸಲಾಗುತ್ತದೆ. ಇದನ್ನು ಟೂಲ್ಕಿೆಟ್ ಎಂದು ಕರೆಯಲಾಗುತ್ತದೆ. ಅಂದರೆ ಹೋರಾಟದ ಅಸ್ತ್ರಗಳನ್ನೊಳಗೊಂಡ ಒಂದು ಆಕರ. ಇಲ್ಲಿ ಮೌಖಿಕ, ಲಿಖಿತ, ಸಾಂಕೇತಿಕ ಸೂಚನೆಗಳಿರುತ್ತವೆಯೇ ಹೊರತು ಶಸ್ತ್ರಾಸ್ತ್ರಗಳ ಸುಳಿವೂ ಇರುವುದಿಲ್ಲ.

ಭಾರತದಲ್ಲಿ ನಡೆಯುತ್ತಿರುವ ರೈತ ಮುಷ್ಕರದ ಬಗ್ಗೆಯೂ ಸಹ ಇಂತಹುದೇ ಟೂಲ್ಕಿೇಟ್ ಒಂದನ್ನು ಸಿದ್ಧಪಡಿಸಲಾಗಿದ್ದು ಇದರಲ್ಲಿ ಮುಷ್ಕರ ನಿರತ ರೈತರು ಅನುಸರಿಸಬೇಕಾದ ಅಹಿಂಸಾತ್ಮಕ ಕಾರ್ಯ ಚಟುವಟಿಕೆಗಳನ್ನು ಸೂಚಿಸಲಾಗಿದೆ. ಟ್ವೀಟ್ಗ ಳ ಮೂಲಕ ಪ್ರತಿಭಟಿಸುವುದು, ಅರ್ಜಿಗಳನ್ನು ಸಲ್ಲಿಸುವುದು, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಧರಣಿ ನಡೆಸುವುದು ಹೀಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಭಾರತದ ಎಂಬೆಸಿ ಕಚೇರಿಯ ಮುಂದೆ ಧರಣಿ ನಡೆಸಲು ಸೂಚಿಸುವುದು , ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಲು ಸೂಚಿಸುವುದು ಸಂವಿಧಾನವಿರೋಧಿಯೂ ಆಗುವುದಿಲ್ಲ, ದೇಶದ್ರೋಹವೂ ಆಗುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಾರ್ವಭೌಮ ಪ್ರಜೆಗಳಿಗೆ ಈ ಹಕ್ಕು ಇರುತ್ತದೆ ಎನ್ನುವುದನ್ನು ನಾವು ಗಮನಿಸಬೇಕು.

ಜನವರಿ 26ರಂದು ರೈತರ ಟ್ರಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಟೂಲ್ಕಿಟಟ್ ಮತ್ತು ಇತರ ಸಂಘಟಕರನ್ನು ಅನುಮಾನಾಸ್ಪದವಾಗಿ ನೋಡುತ್ತಿದೆ. ಆದರೆ ಕೆಂಪುಕೋಟೆಯಲ್ಲಿ ನಡೆದ ಘಟನೆ ಯಾವುದೇ ಒಂದು ಬೃಹತ್ ಜನಾಂದೋಲನದ ಸಂದರ್ಭದಲ್ಲಿ ಸಹಜವಾಗಿ ನಡೆಯುವಂತಹುದೇ ಆಗಿದ್ದು, ಭಾರತದ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎನ್ನುವ ಆರೋಪಗಳೂ ಸಹ ಹುಸಿ ಎಂದು ಸಾಬೀತಾಗಿದೆ.

ರೈತ ಮುಷ್ಕರವನ್ನು ಸಾರ್ವಜನಿಕರ ದೃಷ್ಟಿಯಲ್ಲಿ ತಪ್ಪಾಗಿ ತೋರಿಸುವ ಒಂದು ಹುನ್ನಾರವನ್ನೂ ಈ ಘಟನೆಗಳಲ್ಲಿ ಕಾಣಬಹುದಾಗಿದೆ. ಆದರೆ ಈ ಘಟನೆಗಳನ್ನು ನೆಪವಾಗಿಟ್ಟುಕೊಂಡೇ ಕೇಂದ್ರ ಸರ್ಕಾರ ರೈತ ಮುಷ್ಕರದ ಪರ ವಹಿಸುವ ಪ್ರಜಾಸತ್ತಾತ್ಮಕ ದನಿಗಳನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ದಿಶಾ ರವಿ ಪ್ರಕರಣದಲ್ಲಿ ಇದರ ಉದ್ದೇಶ ಸ್ಪಷ್ಟವಾಗಿ ಕಾಣುತ್ತದೆ.

ಫ್ರೈಡೇಸ್ ಫಾರ್ ಫ್ಯೂಚರ್ ಪ್ರಚಾರಾಂದೋಲನ ಎನ್ನುವ ಒಂದು ಟೂಲ್ಕಿುಟ್ ಸಂಪಾದಿಸುವಲ್ಲಿ ದಿಶಾರವಿ ಪಾತ್ರವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ. ಈ ಟೂಲ್ಕಿಲಟ್ ಸಿದ್ಧಪಡಿಸಿದ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬಪರ್ಗ್ ಜಾಗತಿಕ ಮಟ್ಟದಲ್ಲೇ ಭಾರತದ ರೈತರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇವರು ಸಿದ್ಧಪಡಿಸಿರುವ ಟೂಲ್ಕಿರಟ್ ಸಾರ್ವಜನಿಕ ಓದಿಗೂ ಲಭ್ಯವಿದ್ದು, ಅದರಲ್ಲಿ ಹೋರಾಟದ ರೂಪುರೇಷೆಗಳನ್ನು ಹೊರತುಪಡಿಸಿ ಮತ್ತಾವುದೇ ಸಂವಿಧಾನವಿರೋಧಿ ಸಂದೇಶಗಳಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಈ ಟೂಲ್ಕಿಾಟ್ನಿಲ್ಲಿನ ಕೆಲವು ಅಂಶಗಳನ್ನು ತಾನು ಸಂಪಾದಿಸಿರುವುದಾಗಿ ದಿಶಾರವಿ ಒಪ್ಪಿಕೊಂಡಿದ್ದಾರೆ ಆದರೆ ಈ ಚಟುವಟಿಕೆಯನ್ನೇ ಆಧರಿಸಿ ಆಕೆಯನ್ನು ರಾಜದ್ರೋಹದ ಕಾಯ್ದೆಯಡಿ ಬಂಧಿಸುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಒಂದು ವೇಳೆ ಇಡೀ ಟೂಲ್ ಕಿಟ್ ದಿಶಾ ರವಿ ಅವರಿಂದಲೇ ರಚಿಸಲ್ಪಟ್ಟಿದ್ದರೂ ಅಪರಾಧವೇನೂ ಆಗುವುದಿಲ್ಲ.

ಟೂಲ್ ಕಿಟ್ ನಲ್ಲಿ ಏನಿದೆ ?

ಭಾರತದಲ್ಲಿ ನಡೆಯುತ್ತಿರುವ ರೈತ ಮುಷ್ಕರಕ್ಕೆ ಬೆಂಬಲ ಸೂಚಿಸಲು ಗ್ರೇಟಾ ಥನ್ಬದರ್ಗ್ ಸಿದ್ಧಪಡಿಸಿರುವ ಟೂಲ್ಕಿಬಟ್ನಲಲ್ಲಿ ಭಾರತ ಸರ್ಕಾರದ ಹೊಸ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಗುರುತಿಸಲಾಗಿದ್ದು, ಈ ಕಾಯ್ದೆಗಳು ನವ ಉದಾರವಾದಿ ಆರ್ಥಿಕ ನೀತಿಗಳ ಪರಿಣಾಮವಾಗಿ ಮೂಡಿಬಂದಿರುವುದನ್ನು ಸ್ಪಷ್ಟಪಡಿಸಲಾಗಿದೆ. ರೈತರನ್ನು ಸಂಪರ್ಕಿಸದೆ, ಸಂಸತ್ತಿನಲ್ಲಿ ಚರ್ಚೆ ನಡೆಸದೆ ಈ ಕಾಯ್ದೆಗಳನ್ನು ಜಾರಿಗೊಳಿಸಿರುವುದನ್ನೂ ಟೂಲ್ಕಿಪಟ್ನನಲ್ಲಿ ಉಲ್ಲೇಖಿಸಲಾಗಿದೆ.

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಉದ್ಯಮಿಗಳಿಗೆ ವಹಿಸುವುದರಿಂದ ಪರಿಸರ ವಿನಾಶಕ್ಕೂ ದಾರಿಮಾಡಿಕೊಟ್ಟಂತಾಗುತ್ತದೆ ಎನ್ನುವ ಅಂಶವನ್ನೂ ಉಲ್ಲೇಖಿಸಲಾಗಿದೆ. ಈ ನಿಟ್ಟಿನಲ್ಲಿ ರೈತ ಮುಷ್ಕರಕ್ಕೆ ಭಾರತದ ಜನತೆ ಮತ್ತು ವಿಶ್ವದ ಇತರ ರಾಷ್ಟ್ರಗಳ ಜನತೆ ಹೇಗೆ ಪ್ರತಿಕ್ರಯಿಸಬೇಕು ಎನ್ನುವುದನ್ನು ಟೂಲ್ಕಿ್ಟ್ನಷಲ್ಲಿ ವಿವರಿಸಲಾಗಿದೆ. ರೈತರಿಗೆ ಬೆಂಬಲಿಸಿ ಟ್ವೀಟ್ ಮಾಡುವುದು, ಹ್ಯಾಷ್ಟ್ಯಾ ಗ್ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲ ವ್ಯಕ್ತಪಡಿಸುವುದು, ಸರ್ಕಾರದ ಪ್ರತಿನಿಧಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಇ ಮೇಲ್ ಕಳಿಸುವುದು, ಫೆಬ್ರವರಿ 13-14ರಂದು ಭಾರತೀಯ ರಾಯಭಾರ ಕಚೇರಿಯ ಮುಂದೆ, ಸ್ಥಳೀಯ ಸರ್ಕಾರಿ ಕಚೇರಿಗಳ ಮುಂದೆ ಧರಣಿ ನಡೆಸುವುದು, ಸತತ ಟ್ವೀಟ್ ಮಾಡುವುದು, ಮುಖ್ಯ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಹೀಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಇದರ ಪೂರ್ಣ ವಿವರಗಳು ಇಲ್ಲಿ ಲಭ್ಯವಿದೆ :Farming and its Crisis

ಈ ಟೂಲ್ ಕಿಟ್ ಆಧಾರದಲ್ಲೇ ದಿಶಾ ರವಿ ಅವರನ್ನು ಬಂಧಿಸಲಾಗಿದ್ದು ಇದೀಗ ದೆಹಲಿಯ ಪಟಿಯಾಲಾ ನ್ಯಾಯಾಲಯದಲ್ಲಿ ಆಕೆಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಧರ್ಮೇಂದ್ರ ರಾಣಾ ಅವರು ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ಇಂದಿನ ಸಂದರ್ಭದಲ್ಲಿ ಬಹಳ ಮುಖ್ಯವಾಗುತ್ತದೆ. ಎಲ್ಗಾರ್ ಪರಿಷತ್ ಮತ್ತು ಭೀಮಾ ಕೊರೆಗಾಂವ್ ಘಟನೆಯ ಹಿನ್ನೆಲೆಯಲ್ಲಿ ಹಲವಾರು ವಕೀಲರನ್ನು, ಬರಹಗಾರರನ್ನು, ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಇವರ ವಿರುದ್ಧ ಯುಎಪಿಎ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ರಾಜದ್ರೋಹ ಕಾಯ್ದೆ ಸೆಕ್ಷನ್ 124ಎ ಮತ್ತು ಯುಎಪಿಎ, ಈ ಎರಡು ಕರಾಳ ಶಾಸನಗಳು ಪ್ರತಿರೋಧದ ದನಿಗಳನ್ನು ಅಡಗಿಸುವ ಅಸ್ತ್ರಗಳಾಗಿ ಪರಿಣಮಿಸಿರುವುದು ಭಾರತೀಯ ಪ್ರಜಾತಂತ್ರದ ದುರಂತ.

ದಿಶಾ ರವಿಯವರ ಬಂಧನದ ಹಿಂದೆ ದೇಶದ ಯುವ ಸಮುದಾಯದ ಜಾಗೃತ ಪ್ರಜ್ಞೆಯನ್ನು ಕುಡಿಯಲ್ಲೇ ಚಿವುಟುವ ಹುನ್ನಾರವನ್ನೂ ಗುರುತಿಸಬಹುದಾಗಿದೆ. ಇಂದು ದೇಶ ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಮೋದಿ ಸರ್ಕಾರದ ಆಡಳಿತ ನೀತಿಗಳೇ ಕಾರಣ ಎನ್ನುವುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ, ಉತ್ಪಾದನೆಯ ಕೊರತೆ, ಅಭಿವೃದ್ಧಿ ಸೂಚ್ಯಂಕದಲ್ಲಿ ಕುಸಿತ, ಉದ್ಯೋಗ ಸೃಷ್ಟಿಯಲ್ಲಿನ ವೈಫಲ್ಯ, ತೈಲ ಮತ್ತು ಅವಶ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು ಮತ್ತು ಹಣಕಾಸು ಬಿಕ್ಕಟ್ಟು ಜನಸಾಮಾನ್ಯರನ್ನು ಬಾಧಿಸುತ್ತಿದೆ.

ಈ ಗಂಭೀರ ಸಮಸ್ಯೆಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಯಥಾಸ್ಥಿತಿಯಲ್ಲಿದ್ದರೆ ಅದಕ್ಕೆ ಕಾರಣ ಯುವ ಸಮುದಾಯವನ್ನು ಆವರಿಸಿರುವ ಸಮೂಹ ಸನ್ನಿ ಮತ್ತು ಮಧ್ಯಮ, ಮೇಲ್ ಮಧ್ಯಮ ವರ್ಗವನ್ನು ಆವರಿಸಿರುವ ಅಂಧ ಶ್ರದ್ಧೆ.

ಈ ಸಮೂಹ ಸನ್ನಿಗೊಳಗಾಗಿರುವ ಯುವಸಮುದಾಯದ ಒಂದು ವರ್ಗ ಇತ್ತೀಚಿನ ದಿನಗಳಲ್ಲಿ ಜಾಗೃತವಾಗುತ್ತಿದೆ. ರೈತ ಮುಷ್ಕರದ ಹಿನ್ನೆಲೆಯಲ್ಲಿ ಉತ್ತರದ ಹಲವು ರಾಜ್ಯಗಳಲ್ಲಿ ಜನಾಭಿಪ್ರಾಯ ಬದಲಾಗುತ್ತಿದೆ. ಭ್ರಮನಿರಸನಗೊಂಡ ಯುವ ಸಮುದಾಯ ಭಿನ್ನ ನೆಲೆಯಲ್ಲಿ ಯೋಚಿಸಲಾರಂಭಿಸಿದೆ. ಈ ಜಾಗೃತ ಮನಸುಗಳನ್ನು ಪುನಃ ಪರಿವರ್ತಿಸುವುದು ಇಂದಿನ ದುಸ್ಥಿತಿಯಲ್ಲಿ ಕಷ್ಟ ಎನ್ನುವುದೂ ಮೋದಿ ಸರ್ಕಾರಕ್ಕೆ ತಿಳಿದಿದೆ.

ಹಾಗಾಗಿ ಯುವ ಮನಸುಗಳಲ್ಲಿ ಭೀತಿ ಉಂಟುಮಾಡುವ ಉದ್ದೇಶದಿಂದಲೇ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾರವಿ ವಿರುದ್ಧ ರಾಜದ್ರೋಹದಂತಹ ಗಂಭೀರ ಆರೋಪ ಹೊರಿಸಿ ಬಂಧಿಸಲಾಗುತ್ತದೆ. ಇದು ಜನಸಾಮಾನ್ಯರಲ್ಲಿ ಭೀತಿ ಸೃಷ್ಟಿಸಿ ಜಾಗೃತಿಗೆ ಧಕ್ಕೆ ಉಂಟುಮಾಡುವ ತಂತ್ರಗಾರಿಕೆ ಎನ್ನುವುದು ಸುಸ್ಪಷ್ಟ.

ಸ್ವತಂತ್ರ ಆಲೋಚನೆಗೆ ಅವಕಾಶವೇ ನೀಡದೆ ಅಧಿಪತ್ಯ ರಾಜಕಾರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಮೋದಿ-ಶಾ ಜೋಡಿ ಹಲವು ವ್ಯೂಹಗಳನ್ನು ರಚಿಸುತ್ತಿದ್ದು, ದಿಶಾರವಿಯ ಪ್ರಕರಣವೂ ಇಂತಹುದೇ ಪ್ರಯತ್ನವಾಗಿದೆ. ಮಾಧ್ಯಮಗಳು ವಂದಿಮಾಗಧ ಸಂಸ್ಕೃತಿಯ ಶಿಖರ ತಲುಪಿರುವ ಹೊತ್ತಿನಲ್ಲಿ ಸರ್ಕಾರದ ತಪ್ಪುಒಪ್ಪುಗಳನ್ನು ಪರಾಮರ್ಶಿಸುವ ಅವಕಾಶವೇ ಇಲ್ಲವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿ ಯುವ ಸಮುದಾಯದ ಸ್ವತಂತ್ರ ಆಲೋಚನೆ ಪ್ರಜಾತಂತ್ರ ಮೌಲ್ಯಗಳ ರಕ್ಷಣೆಗೆ ಅತ್ಯವಶ್ಯವಾಗಿರುತ್ತದೆ.

ಈ ಬೆಳವಣಿಗೆಗೆ ಅವಕಾಶ ನೀಡದಿರಲು ಸರ್ಕಾರ ಕರಾಳ ಶಾಸನಗಳ ಮೊರೆ ಹೋಗುತ್ತಿದೆ. ಭಾರತದ ಬಹುತ್ವ ಸಂಸ್ಕೃತಿಯನ್ನು ಮತ್ತು ಬಹುಮುಖೀ ಸಾಂಸ್ಕೃತಿಕ ನೆಲೆಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಮುಂದಿನ ಪೀಳಿಗೆಗೆ ರವಾನಿಸುವ ಗುರುತರ ಹೊಣೆ ಹೊತ್ತಿರುವ ಯುವ ಸಮುದಾಯದ ಮೇಲೆ ಕರಾಳ ಶಾಸನಗಳ ಪ್ರಹಾರದ ಮೂಲಕ ಒತ್ತಡ ಹೇರುವ ತಂತ್ರವನ್ನು ನಾವಿಂದು ನೋಡುತ್ತಿದ್ದೇವೆ.

ಈ ಹಿನ್ನೆಲೆಯಲ್ಲಿ ದಿಶಾರವಿ ಜಾಮೀನು ತೀರ್ಪಿನಲ್ಲಿ ಪಟಿಯಾಲಾ ನ್ಯಾಯಾಲಯದ ನ್ಯಾಯಮೂರ್ತಿ ಧರ್ಮೇಂದ್ರರಾಣಾ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಸಾರ್ವಕಾಲಿಕ ಮಾನ್ಯತೆ ಪಡೆಯುತ್ತವೆ. ಇದೇ ನ್ಯಾಯಮೂರ್ತಿಗಳು ಈ ಹಿಂದೆ ಜೆಎನ್ಯುಕ ವಿದ್ಯಾರ್ಥಿನಿ ಸಫೂರ ಜರ್ಗರ್ ಪ್ರಕರಣದಲ್ಲಿ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ದಿಶಾರವಿ ಪ್ರಕರಣದ ತೀರ್ಪು ಇಂದಿನ ಸಂದರ್ಭದಲ್ಲಿ ಸ್ವಾಗತಾರ್ಹ ಎನಿಸುತ್ತದೆ.

ನ್ಯಾ ಧರ್ಮೇಂದ್ರ ರಾಣಾ ತಮ್ಮ ತೀರ್ಪಿನಲ್ಲಿ ಹೀಗೆ ಹೇಳಿದ್ದಾರೆ:-“ ಒಬ್ಬ ವ್ಯಕ್ತಿಯು ಕೆಲವು ಸಂಶಯಾಸ್ಪದ ವ್ಯಕ್ತಿಗಳ ಜೊತೆಗೆ ಸಂಪರ್ಕದಲ್ಲಿದ್ದ ಮಾತ್ರಕ್ಕೆ ಆ ವ್ಯಕ್ತಿಯ ಎಲ್ಲ ಚಟುವಟಿಕೆಗಳನ್ನೂ ಸಂಶಯಾಸ್ಪದವಾಗಿ ನೋಡುವ ಅಗತ್ಯವಿಲ್ಲ , ಕಾನೂನಿನ ಚೌಕಟ್ಟಿನೊಳಗೆ ನಡೆಸುವ ಚಟುವಟಿಕೆಗಳನ್ನು ಆಧರಿಸಿ ಕಳಂಕ ಹೊರಿಸುವುದು ಸಮರ್ಥನೀಯವಲ್ಲ. ಸರ್ಕಾರ ಜಾರಿಗೊಳಿಸಿರುವ ಒಂದು ಶಾಸನವನ್ನು ವಿರೋಧಿಸುವ ವೇದಿಕೆ ಅಥವಾ ಸಂಘಟನೆಯನ್ನು ಬೆಂಬಲಿಸದ ಮಾತ್ರಕ್ಕೆ ಊಹಾಪೋಹಗಳನ್ನು ಆಧರಿಸಿ ಯಾರನ್ನೂ ಭಯೋತ್ಪಾದಕರಂತೆ ನೋಡುವುದು ತರವಲ್ಲ.

ಭಾರತದ ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಮನ್ನಣೆ ನೀಡಿದ್ದು, ಇದಕ್ಕೆ ಯಾವುದೇ ಭೌಗೋಳಿಕ ಚೌಕಟ್ಟು, ಗಡಿರೇಖೆ ಇರುವುದಿಲ್ಲ, ಜಾಗತಿಕ ಅಭಿಪ್ರಾಯ ಮೂಡಿಸಲೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಬಳಸಬಹುದು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ಕೆಲವು ಯೋಜನೆಗಳನ್ನು, ನೀತಿಗಳನ್ನು ವಿರೋಧಿಸುವುದೇ ರಾಜದ್ರೋಹ ಎನಿಸಿಕೊಳ್ಳುವುದಿಲ್ಲ, ಈ ಕಾರಣಕ್ಕಾಗಿ ಪ್ರಜೆಗಳನ್ನು ಜೈಲಿಗೆ ತಳ್ಳುವುದು, ಮತ್ತು ಘಾಸಿಗೊಂಡ ಸರ್ಕಾರದ ದುರಭಿಮಾನವನ್ನು ತಣಿಸಲು ರಾಜದ್ರೋಹ ಪ್ರಕರಣ ದಾಖಲಿಸುವುದು ನ್ಯಾಯಯುತವಲ್ಲ. ಭಾರತ ಸಾವಿರಾರು ವರ್ಷಗಳಿಂದ ಹಲವಾರು ಭಿನ್ನ ಚಿಂತನೆಗಳನ್ನು, ಅಭಿಪ್ರಾಯಗಳನ್ನು ಗೌರವಿಸುತ್ತಲೇ ಬಂದಿದೆ ಎಂದು ಹೇಳುತ್ತಾ ಋಗ್ವೇದದ ವಾಕ್ಯವೊಂದನ್ನು ಉದ್ಧರಿಸಿರುವ ನ್ಯಾಯಮೂರ್ತಿಗಳು, ವಾಟ್ಸಾಪ್ ಗುಂಪು ರಚಿಸುವುದು, ಟೂಲ್ ಕಿಟ್ ಸಿದ್ಧಪಡಿಸುವುದು ಶಿಕ್ಷಾರ್ಹ ಅಪರಾಧವಾಗುವುದಿಲ್ಲ ”

ರಾಜದ್ರೋಹ ಕಾಯ್ದೆಯನ್ನು ಸಂತೆಯ ಸರಕಿನಂತೆ ಬಳಸುತ್ತಿರುವ ಕೇಂದ್ರ ಸರ್ಕಾರ, ಆಡಳಿತ ನೀತಿಯ ವಿರುದ್ಧ ಮಾತನಾಡುವುದನ್ನೇ ಅಪರಾಧ ಎಂದು ಭಾವಿಸುತ್ತಿದೆ. ಸರ್ಕಾರದ ವಿರುದ್ಧ ಮಾತನಾಡುವುದನ್ನೇ ದೇಶದ್ರೋಹ ಎಂದು ಪರಿಗಣಿಸುತ್ತಿದೆ. 2010ರ ನಂತರ ದೇಶದಲ್ಲಿ 11 ಸಾವಿರ ಜನರ ವಿರುದ್ಧ 816 ರಾಜದ್ರೋಹ ಮೊಕದ್ದಮೆಗಳು ದಾಖಲಾಗಿವೆ. ಪತ್ರಕರ್ತರು, ವಿದ್ಯಾರ್ಥಿಗಳು, ವಿರೋಧಪಕ್ಷ ನಾಯಕರು, ಲೇಖಕರು, ಬೋಧಕರು, ಕಲಾವಿದರು ಈ ಕರಾಳ ಶಾಸನದಡಿ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.

2010 ರಿಂದ 2014ರ ಯುಪಿಎ ಅವಧಿಯಲ್ಲಿ 279 ಪ್ರಕರಣಗಳು ದಾಖಲಾಗಿದ್ದರೆ, 2014ರ ನಂತರ 519 ರಾಜದ್ರೋಹ ಮೊಕದ್ದಮೆಗಳು ದಾಖಲಾಗಿವೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ 144 ಜನರು ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ 149 ಮಂದಿಯ ವಿರುದ್ಧ ರಾಜದ್ರೋಹ ಪ್ರಕರಣಗಳು ದಾಖಲಾಗಿವೆ.

ಈ ಹಿನ್ನೆಲೆಯಲ್ಲಿ ದಿಶಾ ರವಿ ಪ್ರಕರಣ ಪ್ರಭುತ್ವದ ದಮನಕಾರಿ ನೀತಿಯ ಒಂದು ಆಯಾಮವಾಗಿದ್ದರೆ, ಪಟಿಯಾಲ ನ್ಯಾಯಾಲಯದ ಮಹತ್ವದ ತೀರ್ಪು ನ್ಯಾಯ ವ್ಯವಸ್ಥೆಗೆ ಚುರುಕುಮುಟ್ಟಿಸುವಂತಿದೆ. ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದಂತೆಯೂ ಇದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ದನಿಯೇ ಅಂತಿಮ ಎನ್ನುವ ಸತ್ಯವನ್ನು ಸರ್ಕಾರಕ್ಕಿಂತಲೂ ಹೆಚ್ಚಾಗಿ ಜನಸಾಮಾನ್ಯರು ಅರ್ಥಮಾಡಿಕೊಳ್ಳಬೇಕಿದೆ. ಆಗಲಾದರೂ ಭಾರತದ ಯುವ ಸಮುದಾಯ ಸಮೂಹ ಸನ್ನಿಯಿಂದ ಮುಕ್ತವಾಗಿ ಸ್ವತಂತ್ರವಾಗಿ ಆಲೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ3 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ6 days ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ1 week ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ1 week ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ1 week ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ2 weeks ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ3 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

Trending