Connect with us

ರಾಜಕೀಯ

ಮಾತು, ಮೌನ ಮತ್ತು ಮಿಥ್ಯಾವಾಸ್ತವ

Published

on

ಗ ಮಾತುಗಳದ್ದೇ ಆರ್ಭಟ. ಮಾತು, ಪ್ರತಿಮಾತು, ದಿಢೀರನೆ ಪ್ರತಿಕ್ರಿಯಿಸಿಬಿಡುವ ಸಿಟ್ಟು-ಸೆಡವಿನ ಪ್ರವೃತ್ತಿಗಳ ವಿಜೃಂಭಣೆ. ನಾಯಕರೆನ್ನಿಸಿಕೊಂಡು ಜನಪ್ರಿಯಗೊಂಡವರ ವಿರುದ್ಧ ಯಾರೂ ಉಸಿರೆತ್ತುವ ಹಾಗಿಲ್ಲ. ಆರಾಧನೆಯ ಗುಂಗಿನೊಳಗೆ ಪ್ರಶ್ನಿಸಿದವರನ್ನು ಸುಮ್ಮನಾಗಿಸಿಬಿಡುವ ಜಾಯಮಾನಗಳದ್ದೇ ಪ್ರಭಾವಳಿ. ಅನುಭವಕ್ಕೆ ಬಂದ ಮತ್ತು ಕಣ್ಣಮುಂದಿನ ವಾಸ್ತವಗಳನ್ನು ನೋಡಿಯೂ ನೋಡದಂತಿದ್ದು ಎಲ್ಲರ ಹಾಗೆ ಹೊಗಳುವ ಮನೋವೃತ್ತಿಯನ್ನು ಒತ್ತಾಯಪೂರ್ವಕವಾಗಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ. ಇಂಥದ್ದೊಂದು ವಾತಾವರಣವನ್ನೇ ಸಮಕಾಲೀನ ರಾಜಕಾರಣ ನಿರೀಕ್ಷಿಸುತ್ತಿದೆ. ಮಾತು ಮತ್ತು ಮೌನಗಳ ಚಾಣಾಕ್ಷಯುತ ನಿರ್ವಹಣೆಯ ಮೂಲಕ ಅದು ಹೊಸ ಪೀಳಿಗೆಯ ಯೋಚಿಸುವ ಶಕ್ತಿಯನ್ನು ಕೊಂದುಬಿಟ್ಟಿದೆ. ಅಧಿಕಾರರೂಢ ಮತ್ತು ವಿರೋಧ ಪಕ್ಷಗಳು ಯಾವುದು ವಾಸ್ತವವಲ್ಲವೋ ಅದನ್ನು ಸೃಷ್ಟಿಸಿ ಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ವಾಸ್ತವವನ್ನು ಮುಚ್ಚಿಟ್ಟು ಭಾವುಕ ಸಂಗತಿಗಳ ದಾಳಗಳನ್ನು ಎಸೆದು ಪ್ರಜಾಪ್ರಭುತ್ವದ ಅಖಾಡದ ಸಂವೈಧಾನಿಕ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿವೆ.

ಈಗ ನಮಗೆ ಎಂಥ ರಾಜಕಾರಣ ಬೇಕಾಗಿದೆ ಎಂದರೆ ನಮ್ಮ ಬದುಕು ಅದರಿಂದ ಉದ್ಧರಿಸಲ್ಪಡುವಂತಿರಬೇಕು. ಈ ನಮ್ಮ ಬದುಕಿನ ವ್ಯಾಪ್ತಿಯೊಳಗೆ ಎಲ್ಲ ಧರ್ಮಗಳವರೂ ಇರಬೇಕು. ಎಲ್ಲ ಜಾತಿಗಳವರೂ ಇರಬೇಕು. ಅವರವರ ನಂಬಿಕೆಗಳ ಭಾವಜಗತ್ತನ್ನು ಮತ್ತಷ್ಟು ಉದಾತ್ತಗೊಳಿಸುವ ಪ್ರಯತ್ನಗಳಿಗೆ ಅಲ್ಲಿ ಅವಕಾಶವಿರಬೇಕು. ಆ ಮೂಲಕ ಹೊಸ ವಿಶ್ವಾಸಾರ್ಹತೆ ಮೂಡಬೇಕು. ಅಪನಂಬಿಕೆ ಮತ್ತು ಮೂಢನಂಬಿಕೆಗಳ ಜಾಡ್ಯಗಳನ್ನು ತೊರೆಯುವ ಹೃದಯವೈಶಾಲ್ಯತೆ ನೆಲೆಗೊಳ್ಳಬೇಕು. ಹಾಗಾಗುವ ಹಾಗೆ ರಾಜಕಾರಣವು ನಾಯಕತ್ವವನ್ನು ಚಿಗುರಿಸಬೇಕು. ಮಾತಿನ ಭಾಷಿಕ ಅಬ್ಬರದ ಬದಲು ಮಿತಭಾಷಿಕ ಸೌಜನ್ಯವನ್ನು ಸೃಷ್ಟಿಸಬೇಕು.

ಘಾಸಿಗೊಳ್ಳುತ್ತಿರುವ ಆಯ್ಕೆ ಹಕ್ಕು
ಹಾಗೆ ಆಗುತ್ತಿಲ್ಲ. ಸ್ವಾತಂತ್ರ್ಯಾನಂತರ ಹಲವು ದಶಕಗಳಾದರೂ ಭಾರತದ ಕನಸುಗಳ್ಯಾವುವೂ ಸಾಕಾರಗೊಳ್ಳಲಿಲ್ಲ ಮತ್ತು ಅಧಿಕಾರದಲ್ಲಿದ್ದ ಹಿಂದಿನವರು ಉದ್ದೇಶಪೂರ್ವಕವಾಗಿ ಆ ಕನಸುಗಳನ್ನು ಸಾಕಾರಗೊಳಿಸುವುದರ ಕಡೆಗೆ ಗಮನಹರಿಸಲಿಲ್ಲ ಎಂಬ ಕೊರಗುಗಳನ್ನು ಮುಂದಿಡುತ್ತಲೇ ತಮ್ಮ ಪರವಾದ ಅಲೆಯನ್ನು ಸೃಷ್ಟಿಸಿಕೊಂಡ ರಾಜಕೀಯ ಪಡೆಗಳು ಅಧಿಕಾರಕ್ಕೆ ಬಂದ ತಕ್ಷಣ ಮತ್ತದೇ ಸ್ಥಗಿತತೆಯ ಜಾಡ್ಯವನ್ನೇ ಪರಮಲಕ್ಷಣವಾಗಿಸಿಕೊಂಡಿವೆ. ಯಾವುದನ್ನು ವಿರೋಧಿಸಿ ಅಧಿಕಾರಕ್ಕೆ ಬರುತ್ತಾರೋ ಅವರೇ ತಾವು ಹಿಂದೆ ವಿರೋಧಿಸಿದ್ದ ನಡೆಯನ್ನೇ ಮರುಪ್ರತಿಷ್ಠಾಪಿಸಿಕೊಳ್ಳುವುದು ರಾಜಕಾರಣಿ, ರಾಜಕೀಯ ಪಕ್ಷಗಳ ಅಲಿಖಿತ ಕಡ್ಡಾಯ ನಿಯಮವಾಗಿಬಿಟ್ಟಿದೆಯೇನೋ ಎಂದು ಭಾಸವಾಗುತ್ತಿದೆ. ಈ ವಿಚಿತ್ರ ನಡೆಗಳು ಭಾರತದ ಪ್ರಜೆಗಳ ಆಯ್ಕೆಯ ಹಕ್ಕನ್ನು ಘಾಸಿಗೊಳಿಸಿವೆ.

ನಿರ್ಲಿಪ್ತ ಭಾವ

ಅಧಿಕಾರದಲ್ಲಿದ್ದವರನ್ನು ಪ್ರಶ್ನಿಸಬೇಕು ಎಂಬ ಮನೋಭಾವವು ವಿರೋಧ ಪಕ್ಷಗಳಿಂದ ಪ್ರಚೋದಿತವಾಗಬೇಕಿಲ್ಲ. ಮಾಧ್ಯಮಗಳ ವಿಶ್ಲೇಷಣೆಗಳನ್ನೇ ನೆಚ್ಚಿಕೊಂಡು ಪ್ರಶ್ನಿಸುವ ಅಗತ್ಯವಿಲ್ಲ. ಈ ದೇಶದ ಸಂವಿಧಾನ ಒದಗಿಸಿರುವ ಪ್ರಶ್ನಿಸುವ ಅವಕಾಶವನ್ನು ಬಳಸಿಕೊಳ್ಳುವ ವಿವೇಕ ನಮ್ಮೆಲ್ಲರದ್ದಾಗಿರಬೇಕು. ಈ ವಿವೇಕವನ್ನು ಪ್ರಖರಗೊಳಿಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಗಮನಾರ್ಹ ಪಾತ್ರನಿರ್ವಹಿಸಬೇಕು. ಪ್ರಶ್ನೆ ಕೇಳುವ ಸಾಧ್ಯತೆಗಳನ್ನು ವರ್ತಮಾನದ ರಾಜಕಾರಣ ಹೇಗೆ ಮೊಟಕುಗೊಳಿಸುತ್ತಿದೆ ಎಂದರೆ ಕಣ್ಣಮುಂದೆ ಎಷ್ಟೆಲ್ಲಾ ಊನಗಳಿದ್ದರೂ, ಸ್ವತಃ ವ್ಯವಸ್ಥೆಯ ಲೋಪಗಳ ಕಾರಣಕ್ಕಾಗಿಯೇ ನೋವು ಅನುಭವಿಸಿದರೂ ಅವುಗಳ ಬಗ್ಗೆ ಮಾತನಾಡಬಾರದು ಎಂಬ ನಿರ್ಲಿಪ್ತ ಭಾವವನ್ನೇ ನೆಚ್ಚಿಕೊಳ್ಳುವಂತೆ ಒತ್ತಡಗಳು ಸೃಷ್ಟಿಯಾಗುತ್ತಿವೆ.

ಪ್ರತಿಮೆಯ ನೆಗೆತ!

ಅಧಿಕಾರಕ್ಕೆ ಹತ್ತಿರವಾಗುವ ರಹಸ್ಯ ಕಾರ್ಯಸೂಚಿಯೊಂದಿಗೆ ರಾಜಕೀಯ ಪಡೆಗಳು ಇತಿಹಾಸದ ಮೌಲಿಕ ಸಂಸ್ಥೆಯನ್ನು ತಮ್ಮ ಹತಾರೆಗಳೊಂದಿಗೆ ಈಗಾಗಲೇ ಪ್ರವೇಶಿಸಿಬಿಟ್ಟಿವೆ. ಈಗಾಗಲೇ ಆಗಿಹೋದ ಸಂಗತಿಯೊಂದರ ವಿವರವನ್ನು ತಮ್ಮ ಉದ್ದೇಶಕ್ಕೆ ತಿರುಗಿಸಿಕೊಳ್ಳುವ ಚಾಣಾಕ್ಷ ನಡೆಗಳೊಂದಿಗೆ ಅವು ಯಶಸ್ಸು ಸಾಧಿಸುತ್ತಿವೆ. ಈಗಾಗಲೇ ಆಗಿಹೋದವರನ್ನು ಟೀಕಿಸುವ ಹುಮ್ಮಸ್ಸಿನಲ್ಲಿ ಸದ್ಯಕ್ಕೆ ಸರಿಯಾದ ಹಾದಿ ತೋರಿಸುವ ಆದರ್ಶದ ಐತಿಹಾಸಿಕ ಪರಂಪರೆಯ ಮೌಲಿಕತೆಯನ್ನು ಉದ್ದೇಶಪೂರ್ವಕವಾಗಿ ಹಿನ್ನೆಲೆಗೆ ಸರಿಸಲಾಗುತ್ತಿದೆ. ಈ ಹಿಂದಿನವರು ವಿಜೃಂಭಿಸಿದ ಪ್ರತಿಮಾ ರಾಜಕಾರಣವು ಇದೀಗ ಹೊಸದೊಂದು ನೆಗೆತ ನೆಗೆದಿದೆ ಅಷ್ಟೇ. ಯಾರ ಆದರ್ಶಗಳನ್ನು ನಾವು ಬದುಕಿನೊಳಗೆ ಅಳವಡಿಸಿಕೊಳ್ಳುತ್ತಾ ಸಾಗುವ ಬದಲು ಅವುಗಳನ್ನು ನಾಮ್‍ಕೇವಾಸ್ತೆ ಎಂಬಂತೆ ನೆನಪಿಸಿಕೊಳ್ಳುತ್ತಾ ಅವರ ಮೂರ್ತಿಗಳನ್ನು ಆರಾಧಿಸಿದೆವು. ಹಾಗೆ ಆರಾಧಿಸುವ ಹಾಗೆ ನಮ್ಮ ಮೇಲೆ ಭಾವುಕ ಪ್ರಭಾವವನ್ನು ಬೀರಲಾಯಿತು. ಈಗ ಆ ತರಹದ ಪ್ರಭಾವ ದಟ್ಟವಾಗಿ ಪ್ರತಿಮಾ ರಾಜಕಾರಣ ಹೊಸದೊಂದು ಕಾರ್ಯಸೂಚಿಯನ್ನು ಕಾರ್ಯಗತಗೊಳಿಸುವುದರ ಕಡೆಗೆ ಕಾರ್ಯೋನ್ಮುಖವಾಗಿದೆ.

ಇತಿಹಾಸ ತಿರುಚುವ ರೋಚಕ ಶೈಲಿ

ಇತಿಹಾಸವನ್ನು ಜನಪ್ರಿಯ ಶೈಲಿಯಲ್ಲಿ ತಿರುಚುವ ನಕಾರಾತ್ಮಕ ಶೈಲಿಯು ಒಂದು ಟ್ರೆಂಡ್‍ನ ರೂಪದಲ್ಲಿ ಇದೀಗ ಅಸ್ತಿತ್ವದಲ್ಲಿದೆ. ಈಗಾಗಲೇ ಆಗಿಹೋದ ಇತಿಹಾಸದಲ್ಲಿ ನಾವು ನಿಖರ ವಿವರಗಳ ಆಧಾರದಲ್ಲಿ ಮಹತ್ವದ ವ್ಯಕ್ತಿತ್ವಗಳ ಕೊಡುಗೆಗಳನ್ನು ಗ್ರಹಿಸಿಕೊಂಡಿರುತ್ತೇವೆ. ಆ ಕೊಡುಗೆಗಳು ವರ್ತಮಾನ ಮತ್ತು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ರೀತಿಯಲ್ಲಿಯೇ ಚರ್ಚಿತವಾಗಬೇಕು ಎಂಬ ಎಚ್ಚರವನ್ನೂ ಇದೇ ಇತಿಹಾಸದ ವಿವೇಚನಾತ್ಮಕ ವಿಶ್ಲೇಷಣೆಗಳು ನಮ್ಮೊಳಗೆ ನೆಲೆಗೊಳಿಸಿರುತ್ತವೆ. ರಾಜಕೀಯ ಪಡೆಗಳ ಕಾರ್ಯಸೂಚಿಗಳು ಈ ವಿವೇಚನಾತ್ಮಕ ಎಚ್ಚರದ ಪ್ರಜ್ಞೆಯನ್ನು ಒಡೆದುಬಿಡುತ್ತವೆ. ಇಲ್ಲಿಯವರೆಗೆ ಸರಿಯಾಗಿ ಗ್ರಹಿಸಿದವರ ತಲೆಮಾರಿನ ಪ್ರಜ್ಞೆಯನ್ನು ಛಿದ್ರಗೊಳಿಸಿದ್ದಲ್ಲದೇ ಹೊಸ ಪೀಳಿಗೆಯೊಳಗೂ ಅನುಮಾನಗಳನ್ನು ಬಿತ್ತಿ ಅಧಿಕಾರದ ಗಮ್ಯವನ್ನು ತಲುಪಿಕೊಳ್ಳುವ ಹುನ್ನಾರಗಳು ತೀವ್ರಗೊಳ್ಳುವ ಹಾಗೆಯೇ ಈ ಒಡೆಯುವಿಕೆಯು ಅಗಾಧವಾಗಿರುತ್ತದೆ. ಅಹಿಂಸೆಯಿಂದಲಷ್ಟೇ ಸ್ವಾತಂತ್ರ್ಯ ಹೋರಾಟಕ್ಕೆ ಯಶಸ್ಸು ದಕ್ಕಲಿಲ್ಲ, ಗಾಂಧೀಜಿಯೊಬ್ಬರಿಂದಲೇ ಎಲ್ಲವೂ ಆಗಲಿಲ್ಲ, ಹಿಂಸೆಗೆ ಪ್ರಚೋದನೆ ನೀಡಿದವರು ಇಲ್ಲದಿದ್ದರೆ ಸ್ವಾತಂತ್ರ್ಯ ದಕ್ಕುತ್ತಿರಲಿಲ್ಲ, ಸಂವಿಧಾನವನ್ನು ಈ ದೇಶದ ಆಚಾರ-ವಿಚಾರಗಳಿಗೆ ಅನುಗುಣವಾಗಿ ಬದಲಿಸಬೇಕು, ಅದರಲ್ಲಿ ಅನೇಕ ಸಮಸ್ಯೆಗಳಿವೆ, ಇಂಥವರ ಬದಲು ಇಂಥವರು ಪ್ರಧಾನಿಯಾಗಿದ್ದಿದ್ದರೆ ಈ ದೇಶದ ಚಿತ್ರಣವೇ ಬದಲಾಗಿಬಿಟ್ಟಿರುತ್ತಿತ್ತು… – ಹೀಗೆ ವಿವಿಧ ರೀತಿಗಳಲ್ಲಿ ತರಹೇವಾರಿ ವಿತಂಡವಾದಿ ದೃಷ್ಟಿಕೋನಗಳನ್ನು ಹರಿಬಿಟ್ಟು ಇತಿಹಾಸದ ಸಾಂಸ್ಥಿಕ ಮೌಲ್ಯಕ್ಕೆ ಧಕ್ಕೆಯುಂಟುಮಾಡಲಾಗುತ್ತಿದೆ.
ಭಾವುಕ ಸರೋವರಕ್ಕೆ ವಿಷ ಬೆರೆಕೆ
ಒಂದು ಕಡೆಗೆ ದೇವರು, ಧರ್ಮ, ನಂಬಿಕೆಗಳ ಕುರಿತ ಜಿಜ್ಞಾಸೆ. ಮತ್ತೊಂದು ಕಡೆಗೆ ಯಾತನೆಗಳೊಂದಿಗೇ ಬದುಕು ದೂಡುವ ಅನಿವಾರ್ಯತೆ ಎದುರಿಸುತ್ತಿರುವ ಜನರು. ಸಮಸ್ಯೆಗಳನ್ನು ನಿವಾರಿಸುವ ಮಹತ್ವದ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದ್ದ ಅಧಿಕಾರರೂಢ ಆಡಳಿತಾತ್ಮಕ ವ್ಯವಸ್ಥೆಯು ತನ್ನ ಪಾಡಿಗೆ ತಾನಿರುತ್ತಾ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುತ್ತಾ ಸಹನಶೀಲತೆಯು ಭಾರತೀಯ ಪರಂಪರೆಯ ಬಹುದೊಡ್ಡ ಹೆಮ್ಮೆ ಎಂಬುದನ್ನೇ ಮುನ್ನೆಲೆಗೆ ತರುತ್ತದೆ. ಬದಲಾವಣೆಗೆ ಕಾಯಬೇಕು, ಸಮಸ್ಯೆಗಳಿದ್ದರೆ ಸಹಿಸಿಕೊಳ್ಳಬೇಕು, ಒಂದಲ್ಲ ಒಂದು ದಿವಸ ಅವು ಪರಿಹಾರ ಕಾಣುತ್ತವೆ, ಅದಕ್ಕಾಗಿಯೇ ನಾವು ಶ್ರಮಿಸುತ್ತಿರುವುದು ಎಂದು ಅಧಿಕಾರರೂಢ ರಾಜಕಾರಣ ನಂಬಿಸುತ್ತದೆ. ಪ್ರಶ್ನೆಗಳು, ಪ್ರತಿರೋಧದ ಅಲೆ ಶುರುವಾಗುತ್ತಿದ್ದಂತೆ ದೇವರು, ಧರ್ಮ ಮತ್ತು ನಂಬಿಕೆಗಳಿಗೆ ಸಂಬಂಧಿಸಿದ ಭಾವುಕ ಸಂಗತಿಗಳ ಸರೋವರಕ್ಕೆ ಕಲ್ಲೆಸೆದು ವೈರುಧ್ಯದ ಅಲೆಗಳನ್ನೇಳಿಸಿಬಿಡುತ್ತದೆ.ಶುದ್ಧ ತಿಳಿವಿನ ತಿಳಿನೀರಿನೊಳಗೆ ಧರ್ಮ, ಜಾತಿ, ಲಿಂಗ ಬೇಧದ ವಿವಾದದ ವಿಷವನ್ನು ಬೆರೆಸಿ ರಾಡಿ ಎಬ್ಬಿಸಿಬಿಡುತ್ತದೆ.

ಸ್ವಯಂದ್ವಂದ್ವಗಳ ಒದ್ದಾಟ

ಇದಾವುದರ ಅರಿವಿಲ್ಲದ ಮುಗ್ಧ ಜನರು ದೇವರೇ ಅವತಾರವೆತ್ತಿ ಮುಂದೊಂದು ದಿನ ತಮ್ಮ ಸಮಸ್ಯೆಗೆ ಪರಿಹಾರ ನೀಡುತ್ತಾರೆ ಅಂದುಕೊಳ್ಳುತ್ತಾ, ತಮ್ಮ ಬದುಕನ್ನು ಉದ್ಧರಿಸಿಕೊಳ್ಳುವ ಸಂವಿಧಾನಾತ್ಮಕ ಅವಕಾಶಗಳನ್ನು ನಿರಾಕರಿಸುತ್ತಾ ಅದೇ ರಾಡಿಯೊಳಗೇ ಸಿಲುಕಿ ಹೊರಬರಲಾಗದೇ ಒದ್ದಾಡುತ್ತಿರುತ್ತಾರೆ. ದೇವಾಲಯ ಪ್ರವೇಶಿಸಬೇಕೇ? ಬೇಡವೇ? ಪ್ರವೇಶಿಸದಿದ್ದರೆ ಏನಾಗುತ್ತದೆ? ಪ್ರವೇಶಿಸಿದರೆ ಏನಾಗುತ್ತದೆ? ದೇವಾಲಯ ಪ್ರವೇಶದ ಮೂಲಕವೇ ಭಾರತದ ಸಮಾನತೆಯ ಕನಸು ಸಾಕಾರಗೊಳ್ಳುವ ಮೊದಲ ಹೆಜ್ಜೆ ಶುರುವಾಗಬೇಕು? ಎಂಬ ಪ್ರಶ್ನೆಗಳನ್ನೇ ದೃಷ್ಟಿಯಲ್ಲಿರಿಸಿಕೊಂಡ ಚರ್ಚೆಗಳೇ ಪ್ರಧಾನ ಆದ್ಯತೆ ಪಡೆದುಕೊಂಡುಬಿಡುತ್ತವೆ. ದೇವಾಲಯದೊಳಗೆ ಪ್ರವೇಶ ಸರಿಯೇ ತಪ್ಪೇ? ದೇವಸ್ಥಾನದೊಳಗೆ ಪ್ರವೇಶಿಸಿ ಆಮೇಲೆ ದೇವರು ಕುಪಿತಗೊಂಡರೆ? ಈ ತರಹದ ಸ್ವಯಂದ್ವಂದ್ವಗಳೊಂದಿಗೆ ಜನರು ಒದ್ದಾಡುವ ಹಾಗೆ ವಿಚಿತ್ರ ಸನ್ನಿವೇಶ ಸೃಷ್ಟಿಯಾಗುತ್ತದೆ. ಅಂಥ ಒದ್ದಾಟವನ್ನೇ ರಾಜಕಾರಣ ತನ್ನ ಸಂಕುಚಿತ ಇರುವಿಕೆಯನ್ನು ನಿರಂತರವಾಗಿ ಚಾಲ್ತಿಯಲ್ಲಿರಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತದೆ.

ತಿರುಚಿದ ವಿವರಗಳ ವೈಭವ!

ಸರಿಯಾಗಿ ಆಲೋಚಿಸುವ ಮತ್ತು ಸರಿಯಾಗಿ ಆಲೋಚಿಸದ ಎರಡು ಗುಂಪುಗಳಲ್ಲಿ ಚಿಂತಕರು ವಿಭಜಿಸಲ್ಪಡುತ್ತಿದ್ದಾರೆ. ಸರಿಯಾಗಿ ಆಲೋಚಿಸುವ ಗುಂಪಿನೊಳಗೂ ಸರಿಯಾಗಿ ಆಲೋಚಿಸದವರೂ ಇರಬಹುದು. ಅಂಥವರು ಅತ್ಯಂತ ವಿವೇಚನಾಪೂರ್ಣವಾಗಿ ಯೋಚಿಸಿ ಪ್ರತಿಕ್ರಿಯಿಸುವವರು. ಓದಿಕೊಳ್ಳುವ, ತಿಳಿದುಕೊಳ್ಳುವ, ಇತಿಹಾಸಕ್ಕೆ ಅಪಚಾರ ಬಗೆಯದ ಸಂಯಮದ ವ್ಯಕ್ತಿತ್ವಗಳವರು ಅವರು. ಈ ಗುಂಪಿನಲ್ಲಿಯೂ ಸರಿಯಾಗಿ ಆಲೋಚಿಸದವರೂ ಸಿಗಬಹುದು. ಸರಿಯಾಗಿ ಯೋಚಿಸುವ ಮತ್ತು ಯೋಚಿಸದ ಸಮ್ಮಿಶ್ರ ಗುಂಪಿಗೆ ಪ್ರತಿಯಾಗಿ ಮತ್ತೊಂದು ಗುಂಪು ಯೋಚಿಸುವ ಸಹನೆಯನ್ನೇ ಹೊಂದಿರುವುದಿಲ್ಲ. ಯಥಾಸ್ಥಿತಿ ವಾದಗಳನ್ನೇ ಅತ್ಯಂತ ರಂಜನೀಯವಾಗಿ ಬಿಂಬಿಸುವುದರಲ್ಲಿಯೇ ಖುಷಿ ಕಾಣುವವರು ಇವರು. ತಾವೂ ಯೋಚಿಸುವುದಿಲ್ಲ, ಇನ್ನೊಬ್ಬರು ಯೋಚಿಸುವುದಕ್ಕೂ ಬಿಡುವುದಿಲ್ಲ. ಅಂಥ ಕೆಟಗರಿಯವರು. ಇಂಥ ಗುಂಪುಗಳ ವೈರುಧ್ಯಗಳನ್ನೇ ಇವತ್ತಿನ ರಾಜಕಾರಣವು ತನ್ನ ಮೂಗಿನ ನೇರಕ್ಕೆ ಬಳಸಿಕೊಂಡು ಹೊಸಪೀಳಿಗೆಯನ್ನು ದಾರಿ ತಪ್ಪಿಸುವ ತನ್ನ ಅಜೆಂಡಾವನ್ನು ಅನುಷ್ಠಾನಗೊಳಿಸುತ್ತಿದೆ. ಇತಿಹಾಸದ ಯಾವ ಗಂಧಗಾಳಿ ಗೊತ್ತಿಲ್ಲದವರ ಮುಂದೆ ತಿರುಚಿದ ವಿವರಗಳನ್ನು ಮುಂದಿಟ್ಟಾಗ ಸಹಜವಾಗಿಯೇ ಆರಾಧನಾ ಭಾವ ಹುಟ್ಟಿಕೊಳ್ಳುತ್ತದೆ.

ಚಿಂತಕರ ಅಪಹರಣ

ಈಗಿನ ವೈಚಿತ್ರ್ಯವೆಂದರೆ ಈ ಆರಾಧನೆಯ ಭಾವೋನ್ಮಾದವು ಸರಿಯಾಗಿ ಆಲೋಚಿಸಬೇಕಾದ ಚಿಂತಕರನ್ನೂ ಆವರಿಸಿಕೊಂಡಿದೆ. ತಮಗಿರುವ ಯೋಚಿಸುವ ಶಕ್ತಿಯನ್ನು ಅಧಿಕಾರದಲ್ಲಿರುವವರ ಸುಪರ್ದಿಗೆ ಒಪ್ಪಿಸಿ ಅವರು ಇಟ್ಟ ಹೆಜ್ಜೆಗಳೆಲ್ಲವೂ ಸರಿ ಎಂಬ ಮೂಢನಂಬಿಕೆಯೊಂದಿಗೆ ಇದ್ದು, ಆ ಮೌಢ್ಯವನ್ನು ವರ್ಣರಂಜಿತ ಪದಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಗುಂಪಿನಲ್ಲಿ ಈಗಾಗಲೇ ಜನಪ್ರಿಯರಾದ ಲೇಖಕರಿದ್ದಾರೆ. ಸುದಿ ಮಾಧ್ಯಮ ಪ್ರತಿನಿಧಿಸುವ ಹಿರಿಯ ಪತ್ರಕರ್ತರಿದ್ದಾರೆ. ನಟರುಗಳಿದ್ದಾರೆ. ನಟಿಯರಿದ್ದಾರೆ. ತಮ್ಮ ಪ್ರತಿಭೆಯ ಮೂಲಕ ಪಡೆದ ಜನರ ಮನ್ನಣೆಯನ್ನು ಅವರು ಅಧಿಕಾರದಲ್ಲಿರುವವರನ್ನು ಆರಾಧಿಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದೇ ಆರಾಧನಾ ಮನೋಭಾವನೆಯನ್ನು ಜನರೂ ತಾಳುವಂತೆ ಪ್ರಚೋದಿಸುತ್ತಿದ್ದಾರೆ.

ವಿತಂಡವಾದಿ ಸರಳಸೂತ್ರ

ಇಂಥ ಸಂದರ್ಭದಲ್ಲೆಲ್ಲಾ ಅವರು ಸರಳ ಸೂತ್ರವನ್ನು ಅಳವಡಿಸಿಕೊಳ್ಳುತ್ತಾರೆ. ಅಧಿಕಾರದಲ್ಲಿರುವವರನ್ನು ನೀವು ಪ್ರಶ್ನಿಸುತ್ತೀರಿ ಎಂದಾದರೆ, ಯಾರನ್ನು ಆಯ್ಕೆ ಮಾಡುತ್ತೀರಿ? ಇಂಥವರನ್ನಾ? ಎಂದು ಎಸೆದದ್ದಷ್ಟೇ ಅಲ್ಲ, ಇತಿಹಾಸದಲ್ಲಿ ಆಗಿಹೋದ ನಕಾರಾತ್ಮಕ ಸಂಗತಿಗಳನ್ನು ದೇವರು, ಧರ್ಮ ಮತ್ತು ನಂಬಿಕೆಗಳಂತಹ ವಿಷಯಗಳಿಗೆ ತಳುಕು ಹಾಕಿ ಸರಳೀಕರಿಸಿ ವಿತಂಡವಾದವನ್ನು ಮುಂದಿಡುತ್ತಾರೆ. ಟಿವಿ ಚಾನಲ್‍ಗಳ ಆ್ಯಂಕರ್‍ಗಳು, ‘ಸುದ್ದಿಮಿತ್ರರು’ ಈ ವಿತಂಡವಾದದ ಒಳಗೇ ಲಭ್ಯವಾಗುವ ವಿವರಗಳನ್ನೇ ಆಧರಿಸಿ ತಾವೇನೋ ಮಹತ್ವದ್ದನ್ನು ಸಂಶೋಧಿಸಿದ್ದೇವೆ ಎನ್ನುವಂತೆ ಮಾತನಾಡುತ್ತಾರೆ. ಈ ಬಗೆಯ ದಾರಿ ತಪ್ಪಿಸುವ ಆಟ ಬಹಳ ದಿವಸಗಳ ಕಾಲ ನಡೆಯುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿದ್ದರೂ ನಡೆದಷ್ಟು ದಿವಸ ಮಾಧ್ಯಮಗಳಿಗೆ ಲಾಭ ದಕ್ಕಿದರೆ ಸಾಕಲ್ಲವೇ ಎಂಬ ಭಂಡಧೈರ್ಯದೊಂದಿಗೆ ಇರುತ್ತಾರೆ.

ಪ್ರಶ್ನಿಸಬೇಕು, ದ್ವೇಷಿಸಬಾರದು

ಪ್ರಶ್ನಿಸಬೇಕು, ದ್ವೇಷಿಸಬಾರದು. ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದವರನ್ನು ತಾರ್ಕಿಕವಾಗಿ ಪ್ರಶ್ನಿಸಿ ಸರಿಹಾದಿಯಲ್ಲಿರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಚಿಂತಕರು ನಿರ್ವಹಿಸಬೇಕು. ಯಾರೇ ಅಧಿಕಾರಕ್ಕೆ ಬಂದರೂ ಅವರನ್ನು ಎಚ್ಚರಿಸಬೇಕು. ಜನರು ಸರಿಯಾಗಿ ಆಲೋಚಿಸುವಂತೆ ಪ್ರೇರಣೆ ನೀಡಬೇಕು. ಚಿಂತಕರು ಮುಖ್ಯವಾಗಿ ಯಾವುದೇ ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿರುವುದಿಲ್ಲ ಎಂಬ ವಿಶ್ವಾಸ ಜನರಲ್ಲಿದೆ. ಆ ವಿಶ್ವಾಸವನ್ನು ಕಳೆದುಕೊಳ್ಳಬಾರದು. ಈ ದೇಶದ ಉನ್ನತ ಹುದ್ದೆಯಿಂದ ಕೆಳಹಂತಗಳ ಆಡಳಿತಾತ್ಮಕ ಸಂಸ್ಥೆಗಳನ್ನು ಪ್ರತಿನಿಧಿಸುವ ನಾಯಕರೆನ್ನಿಸಿಕೊಂಡವರೆಲ್ಲರೂ ನಮಗೆ ಮುಖ್ಯ. ಅವರು ಆ ಹುದ್ದೆಗಳನ್ನು ಅಲಂಕರಿಸಿದ ನಂತರ ಅವರ ಹೊಣೆಗಾರಿಕೆ ಹೆಚ್ಚುತ್ತಲೇ ಇರುತ್ತದೆ ಎಂಬುದನ್ನು ಚಿಂತಕರೆನ್ನಿಸಿಕೊಂಡವರು ನೆನಪಿಸುತ್ತಲೇ ಇರಬೇಕು. ಆದರೆ, ಇಂಥ ಜವಾಬ್ದಾರಿಯನ್ನು ಕೆಲವೇ ಕೆಲವು ಬದ್ಧತೆಯುಳ್ಳವರು ನಿರ್ವಹಿಸುತ್ತಿದ್ದಾರೆ. ಉಳಿದ ಅನೇಕರು ಅಧಿಕಾರದಲ್ಲಿರುವವರ ಬಗ್ಗೆ ಅಂಧಾಭಿಮಾನ ಪ್ರದರ್ಶಿಸುತ್ತಿದ್ದಾರೆ. ಇಂಥವರನ್ನೇ ಬಳಸಿಕೊಂಡು ರಾಜಕೀಯ ಪಡೆಗಳು ತಮ್ಮ ರಹಸ್ಯ ಕಾರ್ಯಸೂಚಿಯನ್ನು ಪ್ರಯೋಗಿಸುತ್ತಿವೆ. ಚಿಂತಕರ ಆ ಪಂಥ ಮತ್ತು ಈ ಪಂಥಗಳನ್ನು ಪರಸ್ಪರ ಸಂಘರ್ಷಕ್ಕಿಳಿಸಿ ಇತಿಹಾಸದ ವ್ಯಾಪ್ತಿಯನ್ನು ಸಂಕುಚಿತಗೊಳಿಸಿ ತಮ್ಮ ಅಧಿಕಾರದಾಹದ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆ.

           –ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಕೃಪಾಂಕ ನೀಡಿಕೆ ನಿಲ್ಲಬೇಕು : ಸಿಎಂ ಸಿದ್ದರಾಮಯ್ಯ ಒತ್ತಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು. ರಾಜ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿಮೆಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇದಿಕೆ ಸಜ್ಜಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 mins ago

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ...

ದಿನದ ಸುದ್ದಿ3 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ3 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ19 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ19 hours ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ19 hours ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

ದಿನದ ಸುದ್ದಿ1 day ago

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20...

Trending