Connect with us

ರಾಜಕೀಯ

ಮಾತು, ಮೌನ ಮತ್ತು ಮಿಥ್ಯಾವಾಸ್ತವ

Published

on

ಗ ಮಾತುಗಳದ್ದೇ ಆರ್ಭಟ. ಮಾತು, ಪ್ರತಿಮಾತು, ದಿಢೀರನೆ ಪ್ರತಿಕ್ರಿಯಿಸಿಬಿಡುವ ಸಿಟ್ಟು-ಸೆಡವಿನ ಪ್ರವೃತ್ತಿಗಳ ವಿಜೃಂಭಣೆ. ನಾಯಕರೆನ್ನಿಸಿಕೊಂಡು ಜನಪ್ರಿಯಗೊಂಡವರ ವಿರುದ್ಧ ಯಾರೂ ಉಸಿರೆತ್ತುವ ಹಾಗಿಲ್ಲ. ಆರಾಧನೆಯ ಗುಂಗಿನೊಳಗೆ ಪ್ರಶ್ನಿಸಿದವರನ್ನು ಸುಮ್ಮನಾಗಿಸಿಬಿಡುವ ಜಾಯಮಾನಗಳದ್ದೇ ಪ್ರಭಾವಳಿ. ಅನುಭವಕ್ಕೆ ಬಂದ ಮತ್ತು ಕಣ್ಣಮುಂದಿನ ವಾಸ್ತವಗಳನ್ನು ನೋಡಿಯೂ ನೋಡದಂತಿದ್ದು ಎಲ್ಲರ ಹಾಗೆ ಹೊಗಳುವ ಮನೋವೃತ್ತಿಯನ್ನು ಒತ್ತಾಯಪೂರ್ವಕವಾಗಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ. ಇಂಥದ್ದೊಂದು ವಾತಾವರಣವನ್ನೇ ಸಮಕಾಲೀನ ರಾಜಕಾರಣ ನಿರೀಕ್ಷಿಸುತ್ತಿದೆ. ಮಾತು ಮತ್ತು ಮೌನಗಳ ಚಾಣಾಕ್ಷಯುತ ನಿರ್ವಹಣೆಯ ಮೂಲಕ ಅದು ಹೊಸ ಪೀಳಿಗೆಯ ಯೋಚಿಸುವ ಶಕ್ತಿಯನ್ನು ಕೊಂದುಬಿಟ್ಟಿದೆ. ಅಧಿಕಾರರೂಢ ಮತ್ತು ವಿರೋಧ ಪಕ್ಷಗಳು ಯಾವುದು ವಾಸ್ತವವಲ್ಲವೋ ಅದನ್ನು ಸೃಷ್ಟಿಸಿ ಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ವಾಸ್ತವವನ್ನು ಮುಚ್ಚಿಟ್ಟು ಭಾವುಕ ಸಂಗತಿಗಳ ದಾಳಗಳನ್ನು ಎಸೆದು ಪ್ರಜಾಪ್ರಭುತ್ವದ ಅಖಾಡದ ಸಂವೈಧಾನಿಕ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿವೆ.

ಈಗ ನಮಗೆ ಎಂಥ ರಾಜಕಾರಣ ಬೇಕಾಗಿದೆ ಎಂದರೆ ನಮ್ಮ ಬದುಕು ಅದರಿಂದ ಉದ್ಧರಿಸಲ್ಪಡುವಂತಿರಬೇಕು. ಈ ನಮ್ಮ ಬದುಕಿನ ವ್ಯಾಪ್ತಿಯೊಳಗೆ ಎಲ್ಲ ಧರ್ಮಗಳವರೂ ಇರಬೇಕು. ಎಲ್ಲ ಜಾತಿಗಳವರೂ ಇರಬೇಕು. ಅವರವರ ನಂಬಿಕೆಗಳ ಭಾವಜಗತ್ತನ್ನು ಮತ್ತಷ್ಟು ಉದಾತ್ತಗೊಳಿಸುವ ಪ್ರಯತ್ನಗಳಿಗೆ ಅಲ್ಲಿ ಅವಕಾಶವಿರಬೇಕು. ಆ ಮೂಲಕ ಹೊಸ ವಿಶ್ವಾಸಾರ್ಹತೆ ಮೂಡಬೇಕು. ಅಪನಂಬಿಕೆ ಮತ್ತು ಮೂಢನಂಬಿಕೆಗಳ ಜಾಡ್ಯಗಳನ್ನು ತೊರೆಯುವ ಹೃದಯವೈಶಾಲ್ಯತೆ ನೆಲೆಗೊಳ್ಳಬೇಕು. ಹಾಗಾಗುವ ಹಾಗೆ ರಾಜಕಾರಣವು ನಾಯಕತ್ವವನ್ನು ಚಿಗುರಿಸಬೇಕು. ಮಾತಿನ ಭಾಷಿಕ ಅಬ್ಬರದ ಬದಲು ಮಿತಭಾಷಿಕ ಸೌಜನ್ಯವನ್ನು ಸೃಷ್ಟಿಸಬೇಕು.

ಘಾಸಿಗೊಳ್ಳುತ್ತಿರುವ ಆಯ್ಕೆ ಹಕ್ಕು
ಹಾಗೆ ಆಗುತ್ತಿಲ್ಲ. ಸ್ವಾತಂತ್ರ್ಯಾನಂತರ ಹಲವು ದಶಕಗಳಾದರೂ ಭಾರತದ ಕನಸುಗಳ್ಯಾವುವೂ ಸಾಕಾರಗೊಳ್ಳಲಿಲ್ಲ ಮತ್ತು ಅಧಿಕಾರದಲ್ಲಿದ್ದ ಹಿಂದಿನವರು ಉದ್ದೇಶಪೂರ್ವಕವಾಗಿ ಆ ಕನಸುಗಳನ್ನು ಸಾಕಾರಗೊಳಿಸುವುದರ ಕಡೆಗೆ ಗಮನಹರಿಸಲಿಲ್ಲ ಎಂಬ ಕೊರಗುಗಳನ್ನು ಮುಂದಿಡುತ್ತಲೇ ತಮ್ಮ ಪರವಾದ ಅಲೆಯನ್ನು ಸೃಷ್ಟಿಸಿಕೊಂಡ ರಾಜಕೀಯ ಪಡೆಗಳು ಅಧಿಕಾರಕ್ಕೆ ಬಂದ ತಕ್ಷಣ ಮತ್ತದೇ ಸ್ಥಗಿತತೆಯ ಜಾಡ್ಯವನ್ನೇ ಪರಮಲಕ್ಷಣವಾಗಿಸಿಕೊಂಡಿವೆ. ಯಾವುದನ್ನು ವಿರೋಧಿಸಿ ಅಧಿಕಾರಕ್ಕೆ ಬರುತ್ತಾರೋ ಅವರೇ ತಾವು ಹಿಂದೆ ವಿರೋಧಿಸಿದ್ದ ನಡೆಯನ್ನೇ ಮರುಪ್ರತಿಷ್ಠಾಪಿಸಿಕೊಳ್ಳುವುದು ರಾಜಕಾರಣಿ, ರಾಜಕೀಯ ಪಕ್ಷಗಳ ಅಲಿಖಿತ ಕಡ್ಡಾಯ ನಿಯಮವಾಗಿಬಿಟ್ಟಿದೆಯೇನೋ ಎಂದು ಭಾಸವಾಗುತ್ತಿದೆ. ಈ ವಿಚಿತ್ರ ನಡೆಗಳು ಭಾರತದ ಪ್ರಜೆಗಳ ಆಯ್ಕೆಯ ಹಕ್ಕನ್ನು ಘಾಸಿಗೊಳಿಸಿವೆ.

ನಿರ್ಲಿಪ್ತ ಭಾವ

ಅಧಿಕಾರದಲ್ಲಿದ್ದವರನ್ನು ಪ್ರಶ್ನಿಸಬೇಕು ಎಂಬ ಮನೋಭಾವವು ವಿರೋಧ ಪಕ್ಷಗಳಿಂದ ಪ್ರಚೋದಿತವಾಗಬೇಕಿಲ್ಲ. ಮಾಧ್ಯಮಗಳ ವಿಶ್ಲೇಷಣೆಗಳನ್ನೇ ನೆಚ್ಚಿಕೊಂಡು ಪ್ರಶ್ನಿಸುವ ಅಗತ್ಯವಿಲ್ಲ. ಈ ದೇಶದ ಸಂವಿಧಾನ ಒದಗಿಸಿರುವ ಪ್ರಶ್ನಿಸುವ ಅವಕಾಶವನ್ನು ಬಳಸಿಕೊಳ್ಳುವ ವಿವೇಕ ನಮ್ಮೆಲ್ಲರದ್ದಾಗಿರಬೇಕು. ಈ ವಿವೇಕವನ್ನು ಪ್ರಖರಗೊಳಿಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಗಮನಾರ್ಹ ಪಾತ್ರನಿರ್ವಹಿಸಬೇಕು. ಪ್ರಶ್ನೆ ಕೇಳುವ ಸಾಧ್ಯತೆಗಳನ್ನು ವರ್ತಮಾನದ ರಾಜಕಾರಣ ಹೇಗೆ ಮೊಟಕುಗೊಳಿಸುತ್ತಿದೆ ಎಂದರೆ ಕಣ್ಣಮುಂದೆ ಎಷ್ಟೆಲ್ಲಾ ಊನಗಳಿದ್ದರೂ, ಸ್ವತಃ ವ್ಯವಸ್ಥೆಯ ಲೋಪಗಳ ಕಾರಣಕ್ಕಾಗಿಯೇ ನೋವು ಅನುಭವಿಸಿದರೂ ಅವುಗಳ ಬಗ್ಗೆ ಮಾತನಾಡಬಾರದು ಎಂಬ ನಿರ್ಲಿಪ್ತ ಭಾವವನ್ನೇ ನೆಚ್ಚಿಕೊಳ್ಳುವಂತೆ ಒತ್ತಡಗಳು ಸೃಷ್ಟಿಯಾಗುತ್ತಿವೆ.

ಪ್ರತಿಮೆಯ ನೆಗೆತ!

ಅಧಿಕಾರಕ್ಕೆ ಹತ್ತಿರವಾಗುವ ರಹಸ್ಯ ಕಾರ್ಯಸೂಚಿಯೊಂದಿಗೆ ರಾಜಕೀಯ ಪಡೆಗಳು ಇತಿಹಾಸದ ಮೌಲಿಕ ಸಂಸ್ಥೆಯನ್ನು ತಮ್ಮ ಹತಾರೆಗಳೊಂದಿಗೆ ಈಗಾಗಲೇ ಪ್ರವೇಶಿಸಿಬಿಟ್ಟಿವೆ. ಈಗಾಗಲೇ ಆಗಿಹೋದ ಸಂಗತಿಯೊಂದರ ವಿವರವನ್ನು ತಮ್ಮ ಉದ್ದೇಶಕ್ಕೆ ತಿರುಗಿಸಿಕೊಳ್ಳುವ ಚಾಣಾಕ್ಷ ನಡೆಗಳೊಂದಿಗೆ ಅವು ಯಶಸ್ಸು ಸಾಧಿಸುತ್ತಿವೆ. ಈಗಾಗಲೇ ಆಗಿಹೋದವರನ್ನು ಟೀಕಿಸುವ ಹುಮ್ಮಸ್ಸಿನಲ್ಲಿ ಸದ್ಯಕ್ಕೆ ಸರಿಯಾದ ಹಾದಿ ತೋರಿಸುವ ಆದರ್ಶದ ಐತಿಹಾಸಿಕ ಪರಂಪರೆಯ ಮೌಲಿಕತೆಯನ್ನು ಉದ್ದೇಶಪೂರ್ವಕವಾಗಿ ಹಿನ್ನೆಲೆಗೆ ಸರಿಸಲಾಗುತ್ತಿದೆ. ಈ ಹಿಂದಿನವರು ವಿಜೃಂಭಿಸಿದ ಪ್ರತಿಮಾ ರಾಜಕಾರಣವು ಇದೀಗ ಹೊಸದೊಂದು ನೆಗೆತ ನೆಗೆದಿದೆ ಅಷ್ಟೇ. ಯಾರ ಆದರ್ಶಗಳನ್ನು ನಾವು ಬದುಕಿನೊಳಗೆ ಅಳವಡಿಸಿಕೊಳ್ಳುತ್ತಾ ಸಾಗುವ ಬದಲು ಅವುಗಳನ್ನು ನಾಮ್‍ಕೇವಾಸ್ತೆ ಎಂಬಂತೆ ನೆನಪಿಸಿಕೊಳ್ಳುತ್ತಾ ಅವರ ಮೂರ್ತಿಗಳನ್ನು ಆರಾಧಿಸಿದೆವು. ಹಾಗೆ ಆರಾಧಿಸುವ ಹಾಗೆ ನಮ್ಮ ಮೇಲೆ ಭಾವುಕ ಪ್ರಭಾವವನ್ನು ಬೀರಲಾಯಿತು. ಈಗ ಆ ತರಹದ ಪ್ರಭಾವ ದಟ್ಟವಾಗಿ ಪ್ರತಿಮಾ ರಾಜಕಾರಣ ಹೊಸದೊಂದು ಕಾರ್ಯಸೂಚಿಯನ್ನು ಕಾರ್ಯಗತಗೊಳಿಸುವುದರ ಕಡೆಗೆ ಕಾರ್ಯೋನ್ಮುಖವಾಗಿದೆ.

ಇತಿಹಾಸ ತಿರುಚುವ ರೋಚಕ ಶೈಲಿ

ಇತಿಹಾಸವನ್ನು ಜನಪ್ರಿಯ ಶೈಲಿಯಲ್ಲಿ ತಿರುಚುವ ನಕಾರಾತ್ಮಕ ಶೈಲಿಯು ಒಂದು ಟ್ರೆಂಡ್‍ನ ರೂಪದಲ್ಲಿ ಇದೀಗ ಅಸ್ತಿತ್ವದಲ್ಲಿದೆ. ಈಗಾಗಲೇ ಆಗಿಹೋದ ಇತಿಹಾಸದಲ್ಲಿ ನಾವು ನಿಖರ ವಿವರಗಳ ಆಧಾರದಲ್ಲಿ ಮಹತ್ವದ ವ್ಯಕ್ತಿತ್ವಗಳ ಕೊಡುಗೆಗಳನ್ನು ಗ್ರಹಿಸಿಕೊಂಡಿರುತ್ತೇವೆ. ಆ ಕೊಡುಗೆಗಳು ವರ್ತಮಾನ ಮತ್ತು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ರೀತಿಯಲ್ಲಿಯೇ ಚರ್ಚಿತವಾಗಬೇಕು ಎಂಬ ಎಚ್ಚರವನ್ನೂ ಇದೇ ಇತಿಹಾಸದ ವಿವೇಚನಾತ್ಮಕ ವಿಶ್ಲೇಷಣೆಗಳು ನಮ್ಮೊಳಗೆ ನೆಲೆಗೊಳಿಸಿರುತ್ತವೆ. ರಾಜಕೀಯ ಪಡೆಗಳ ಕಾರ್ಯಸೂಚಿಗಳು ಈ ವಿವೇಚನಾತ್ಮಕ ಎಚ್ಚರದ ಪ್ರಜ್ಞೆಯನ್ನು ಒಡೆದುಬಿಡುತ್ತವೆ. ಇಲ್ಲಿಯವರೆಗೆ ಸರಿಯಾಗಿ ಗ್ರಹಿಸಿದವರ ತಲೆಮಾರಿನ ಪ್ರಜ್ಞೆಯನ್ನು ಛಿದ್ರಗೊಳಿಸಿದ್ದಲ್ಲದೇ ಹೊಸ ಪೀಳಿಗೆಯೊಳಗೂ ಅನುಮಾನಗಳನ್ನು ಬಿತ್ತಿ ಅಧಿಕಾರದ ಗಮ್ಯವನ್ನು ತಲುಪಿಕೊಳ್ಳುವ ಹುನ್ನಾರಗಳು ತೀವ್ರಗೊಳ್ಳುವ ಹಾಗೆಯೇ ಈ ಒಡೆಯುವಿಕೆಯು ಅಗಾಧವಾಗಿರುತ್ತದೆ. ಅಹಿಂಸೆಯಿಂದಲಷ್ಟೇ ಸ್ವಾತಂತ್ರ್ಯ ಹೋರಾಟಕ್ಕೆ ಯಶಸ್ಸು ದಕ್ಕಲಿಲ್ಲ, ಗಾಂಧೀಜಿಯೊಬ್ಬರಿಂದಲೇ ಎಲ್ಲವೂ ಆಗಲಿಲ್ಲ, ಹಿಂಸೆಗೆ ಪ್ರಚೋದನೆ ನೀಡಿದವರು ಇಲ್ಲದಿದ್ದರೆ ಸ್ವಾತಂತ್ರ್ಯ ದಕ್ಕುತ್ತಿರಲಿಲ್ಲ, ಸಂವಿಧಾನವನ್ನು ಈ ದೇಶದ ಆಚಾರ-ವಿಚಾರಗಳಿಗೆ ಅನುಗುಣವಾಗಿ ಬದಲಿಸಬೇಕು, ಅದರಲ್ಲಿ ಅನೇಕ ಸಮಸ್ಯೆಗಳಿವೆ, ಇಂಥವರ ಬದಲು ಇಂಥವರು ಪ್ರಧಾನಿಯಾಗಿದ್ದಿದ್ದರೆ ಈ ದೇಶದ ಚಿತ್ರಣವೇ ಬದಲಾಗಿಬಿಟ್ಟಿರುತ್ತಿತ್ತು… – ಹೀಗೆ ವಿವಿಧ ರೀತಿಗಳಲ್ಲಿ ತರಹೇವಾರಿ ವಿತಂಡವಾದಿ ದೃಷ್ಟಿಕೋನಗಳನ್ನು ಹರಿಬಿಟ್ಟು ಇತಿಹಾಸದ ಸಾಂಸ್ಥಿಕ ಮೌಲ್ಯಕ್ಕೆ ಧಕ್ಕೆಯುಂಟುಮಾಡಲಾಗುತ್ತಿದೆ.
ಭಾವುಕ ಸರೋವರಕ್ಕೆ ವಿಷ ಬೆರೆಕೆ
ಒಂದು ಕಡೆಗೆ ದೇವರು, ಧರ್ಮ, ನಂಬಿಕೆಗಳ ಕುರಿತ ಜಿಜ್ಞಾಸೆ. ಮತ್ತೊಂದು ಕಡೆಗೆ ಯಾತನೆಗಳೊಂದಿಗೇ ಬದುಕು ದೂಡುವ ಅನಿವಾರ್ಯತೆ ಎದುರಿಸುತ್ತಿರುವ ಜನರು. ಸಮಸ್ಯೆಗಳನ್ನು ನಿವಾರಿಸುವ ಮಹತ್ವದ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದ್ದ ಅಧಿಕಾರರೂಢ ಆಡಳಿತಾತ್ಮಕ ವ್ಯವಸ್ಥೆಯು ತನ್ನ ಪಾಡಿಗೆ ತಾನಿರುತ್ತಾ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುತ್ತಾ ಸಹನಶೀಲತೆಯು ಭಾರತೀಯ ಪರಂಪರೆಯ ಬಹುದೊಡ್ಡ ಹೆಮ್ಮೆ ಎಂಬುದನ್ನೇ ಮುನ್ನೆಲೆಗೆ ತರುತ್ತದೆ. ಬದಲಾವಣೆಗೆ ಕಾಯಬೇಕು, ಸಮಸ್ಯೆಗಳಿದ್ದರೆ ಸಹಿಸಿಕೊಳ್ಳಬೇಕು, ಒಂದಲ್ಲ ಒಂದು ದಿವಸ ಅವು ಪರಿಹಾರ ಕಾಣುತ್ತವೆ, ಅದಕ್ಕಾಗಿಯೇ ನಾವು ಶ್ರಮಿಸುತ್ತಿರುವುದು ಎಂದು ಅಧಿಕಾರರೂಢ ರಾಜಕಾರಣ ನಂಬಿಸುತ್ತದೆ. ಪ್ರಶ್ನೆಗಳು, ಪ್ರತಿರೋಧದ ಅಲೆ ಶುರುವಾಗುತ್ತಿದ್ದಂತೆ ದೇವರು, ಧರ್ಮ ಮತ್ತು ನಂಬಿಕೆಗಳಿಗೆ ಸಂಬಂಧಿಸಿದ ಭಾವುಕ ಸಂಗತಿಗಳ ಸರೋವರಕ್ಕೆ ಕಲ್ಲೆಸೆದು ವೈರುಧ್ಯದ ಅಲೆಗಳನ್ನೇಳಿಸಿಬಿಡುತ್ತದೆ.ಶುದ್ಧ ತಿಳಿವಿನ ತಿಳಿನೀರಿನೊಳಗೆ ಧರ್ಮ, ಜಾತಿ, ಲಿಂಗ ಬೇಧದ ವಿವಾದದ ವಿಷವನ್ನು ಬೆರೆಸಿ ರಾಡಿ ಎಬ್ಬಿಸಿಬಿಡುತ್ತದೆ.

ಸ್ವಯಂದ್ವಂದ್ವಗಳ ಒದ್ದಾಟ

ಇದಾವುದರ ಅರಿವಿಲ್ಲದ ಮುಗ್ಧ ಜನರು ದೇವರೇ ಅವತಾರವೆತ್ತಿ ಮುಂದೊಂದು ದಿನ ತಮ್ಮ ಸಮಸ್ಯೆಗೆ ಪರಿಹಾರ ನೀಡುತ್ತಾರೆ ಅಂದುಕೊಳ್ಳುತ್ತಾ, ತಮ್ಮ ಬದುಕನ್ನು ಉದ್ಧರಿಸಿಕೊಳ್ಳುವ ಸಂವಿಧಾನಾತ್ಮಕ ಅವಕಾಶಗಳನ್ನು ನಿರಾಕರಿಸುತ್ತಾ ಅದೇ ರಾಡಿಯೊಳಗೇ ಸಿಲುಕಿ ಹೊರಬರಲಾಗದೇ ಒದ್ದಾಡುತ್ತಿರುತ್ತಾರೆ. ದೇವಾಲಯ ಪ್ರವೇಶಿಸಬೇಕೇ? ಬೇಡವೇ? ಪ್ರವೇಶಿಸದಿದ್ದರೆ ಏನಾಗುತ್ತದೆ? ಪ್ರವೇಶಿಸಿದರೆ ಏನಾಗುತ್ತದೆ? ದೇವಾಲಯ ಪ್ರವೇಶದ ಮೂಲಕವೇ ಭಾರತದ ಸಮಾನತೆಯ ಕನಸು ಸಾಕಾರಗೊಳ್ಳುವ ಮೊದಲ ಹೆಜ್ಜೆ ಶುರುವಾಗಬೇಕು? ಎಂಬ ಪ್ರಶ್ನೆಗಳನ್ನೇ ದೃಷ್ಟಿಯಲ್ಲಿರಿಸಿಕೊಂಡ ಚರ್ಚೆಗಳೇ ಪ್ರಧಾನ ಆದ್ಯತೆ ಪಡೆದುಕೊಂಡುಬಿಡುತ್ತವೆ. ದೇವಾಲಯದೊಳಗೆ ಪ್ರವೇಶ ಸರಿಯೇ ತಪ್ಪೇ? ದೇವಸ್ಥಾನದೊಳಗೆ ಪ್ರವೇಶಿಸಿ ಆಮೇಲೆ ದೇವರು ಕುಪಿತಗೊಂಡರೆ? ಈ ತರಹದ ಸ್ವಯಂದ್ವಂದ್ವಗಳೊಂದಿಗೆ ಜನರು ಒದ್ದಾಡುವ ಹಾಗೆ ವಿಚಿತ್ರ ಸನ್ನಿವೇಶ ಸೃಷ್ಟಿಯಾಗುತ್ತದೆ. ಅಂಥ ಒದ್ದಾಟವನ್ನೇ ರಾಜಕಾರಣ ತನ್ನ ಸಂಕುಚಿತ ಇರುವಿಕೆಯನ್ನು ನಿರಂತರವಾಗಿ ಚಾಲ್ತಿಯಲ್ಲಿರಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತದೆ.

ತಿರುಚಿದ ವಿವರಗಳ ವೈಭವ!

ಸರಿಯಾಗಿ ಆಲೋಚಿಸುವ ಮತ್ತು ಸರಿಯಾಗಿ ಆಲೋಚಿಸದ ಎರಡು ಗುಂಪುಗಳಲ್ಲಿ ಚಿಂತಕರು ವಿಭಜಿಸಲ್ಪಡುತ್ತಿದ್ದಾರೆ. ಸರಿಯಾಗಿ ಆಲೋಚಿಸುವ ಗುಂಪಿನೊಳಗೂ ಸರಿಯಾಗಿ ಆಲೋಚಿಸದವರೂ ಇರಬಹುದು. ಅಂಥವರು ಅತ್ಯಂತ ವಿವೇಚನಾಪೂರ್ಣವಾಗಿ ಯೋಚಿಸಿ ಪ್ರತಿಕ್ರಿಯಿಸುವವರು. ಓದಿಕೊಳ್ಳುವ, ತಿಳಿದುಕೊಳ್ಳುವ, ಇತಿಹಾಸಕ್ಕೆ ಅಪಚಾರ ಬಗೆಯದ ಸಂಯಮದ ವ್ಯಕ್ತಿತ್ವಗಳವರು ಅವರು. ಈ ಗುಂಪಿನಲ್ಲಿಯೂ ಸರಿಯಾಗಿ ಆಲೋಚಿಸದವರೂ ಸಿಗಬಹುದು. ಸರಿಯಾಗಿ ಯೋಚಿಸುವ ಮತ್ತು ಯೋಚಿಸದ ಸಮ್ಮಿಶ್ರ ಗುಂಪಿಗೆ ಪ್ರತಿಯಾಗಿ ಮತ್ತೊಂದು ಗುಂಪು ಯೋಚಿಸುವ ಸಹನೆಯನ್ನೇ ಹೊಂದಿರುವುದಿಲ್ಲ. ಯಥಾಸ್ಥಿತಿ ವಾದಗಳನ್ನೇ ಅತ್ಯಂತ ರಂಜನೀಯವಾಗಿ ಬಿಂಬಿಸುವುದರಲ್ಲಿಯೇ ಖುಷಿ ಕಾಣುವವರು ಇವರು. ತಾವೂ ಯೋಚಿಸುವುದಿಲ್ಲ, ಇನ್ನೊಬ್ಬರು ಯೋಚಿಸುವುದಕ್ಕೂ ಬಿಡುವುದಿಲ್ಲ. ಅಂಥ ಕೆಟಗರಿಯವರು. ಇಂಥ ಗುಂಪುಗಳ ವೈರುಧ್ಯಗಳನ್ನೇ ಇವತ್ತಿನ ರಾಜಕಾರಣವು ತನ್ನ ಮೂಗಿನ ನೇರಕ್ಕೆ ಬಳಸಿಕೊಂಡು ಹೊಸಪೀಳಿಗೆಯನ್ನು ದಾರಿ ತಪ್ಪಿಸುವ ತನ್ನ ಅಜೆಂಡಾವನ್ನು ಅನುಷ್ಠಾನಗೊಳಿಸುತ್ತಿದೆ. ಇತಿಹಾಸದ ಯಾವ ಗಂಧಗಾಳಿ ಗೊತ್ತಿಲ್ಲದವರ ಮುಂದೆ ತಿರುಚಿದ ವಿವರಗಳನ್ನು ಮುಂದಿಟ್ಟಾಗ ಸಹಜವಾಗಿಯೇ ಆರಾಧನಾ ಭಾವ ಹುಟ್ಟಿಕೊಳ್ಳುತ್ತದೆ.

ಚಿಂತಕರ ಅಪಹರಣ

ಈಗಿನ ವೈಚಿತ್ರ್ಯವೆಂದರೆ ಈ ಆರಾಧನೆಯ ಭಾವೋನ್ಮಾದವು ಸರಿಯಾಗಿ ಆಲೋಚಿಸಬೇಕಾದ ಚಿಂತಕರನ್ನೂ ಆವರಿಸಿಕೊಂಡಿದೆ. ತಮಗಿರುವ ಯೋಚಿಸುವ ಶಕ್ತಿಯನ್ನು ಅಧಿಕಾರದಲ್ಲಿರುವವರ ಸುಪರ್ದಿಗೆ ಒಪ್ಪಿಸಿ ಅವರು ಇಟ್ಟ ಹೆಜ್ಜೆಗಳೆಲ್ಲವೂ ಸರಿ ಎಂಬ ಮೂಢನಂಬಿಕೆಯೊಂದಿಗೆ ಇದ್ದು, ಆ ಮೌಢ್ಯವನ್ನು ವರ್ಣರಂಜಿತ ಪದಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಗುಂಪಿನಲ್ಲಿ ಈಗಾಗಲೇ ಜನಪ್ರಿಯರಾದ ಲೇಖಕರಿದ್ದಾರೆ. ಸುದಿ ಮಾಧ್ಯಮ ಪ್ರತಿನಿಧಿಸುವ ಹಿರಿಯ ಪತ್ರಕರ್ತರಿದ್ದಾರೆ. ನಟರುಗಳಿದ್ದಾರೆ. ನಟಿಯರಿದ್ದಾರೆ. ತಮ್ಮ ಪ್ರತಿಭೆಯ ಮೂಲಕ ಪಡೆದ ಜನರ ಮನ್ನಣೆಯನ್ನು ಅವರು ಅಧಿಕಾರದಲ್ಲಿರುವವರನ್ನು ಆರಾಧಿಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದೇ ಆರಾಧನಾ ಮನೋಭಾವನೆಯನ್ನು ಜನರೂ ತಾಳುವಂತೆ ಪ್ರಚೋದಿಸುತ್ತಿದ್ದಾರೆ.

ವಿತಂಡವಾದಿ ಸರಳಸೂತ್ರ

ಇಂಥ ಸಂದರ್ಭದಲ್ಲೆಲ್ಲಾ ಅವರು ಸರಳ ಸೂತ್ರವನ್ನು ಅಳವಡಿಸಿಕೊಳ್ಳುತ್ತಾರೆ. ಅಧಿಕಾರದಲ್ಲಿರುವವರನ್ನು ನೀವು ಪ್ರಶ್ನಿಸುತ್ತೀರಿ ಎಂದಾದರೆ, ಯಾರನ್ನು ಆಯ್ಕೆ ಮಾಡುತ್ತೀರಿ? ಇಂಥವರನ್ನಾ? ಎಂದು ಎಸೆದದ್ದಷ್ಟೇ ಅಲ್ಲ, ಇತಿಹಾಸದಲ್ಲಿ ಆಗಿಹೋದ ನಕಾರಾತ್ಮಕ ಸಂಗತಿಗಳನ್ನು ದೇವರು, ಧರ್ಮ ಮತ್ತು ನಂಬಿಕೆಗಳಂತಹ ವಿಷಯಗಳಿಗೆ ತಳುಕು ಹಾಕಿ ಸರಳೀಕರಿಸಿ ವಿತಂಡವಾದವನ್ನು ಮುಂದಿಡುತ್ತಾರೆ. ಟಿವಿ ಚಾನಲ್‍ಗಳ ಆ್ಯಂಕರ್‍ಗಳು, ‘ಸುದ್ದಿಮಿತ್ರರು’ ಈ ವಿತಂಡವಾದದ ಒಳಗೇ ಲಭ್ಯವಾಗುವ ವಿವರಗಳನ್ನೇ ಆಧರಿಸಿ ತಾವೇನೋ ಮಹತ್ವದ್ದನ್ನು ಸಂಶೋಧಿಸಿದ್ದೇವೆ ಎನ್ನುವಂತೆ ಮಾತನಾಡುತ್ತಾರೆ. ಈ ಬಗೆಯ ದಾರಿ ತಪ್ಪಿಸುವ ಆಟ ಬಹಳ ದಿವಸಗಳ ಕಾಲ ನಡೆಯುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿದ್ದರೂ ನಡೆದಷ್ಟು ದಿವಸ ಮಾಧ್ಯಮಗಳಿಗೆ ಲಾಭ ದಕ್ಕಿದರೆ ಸಾಕಲ್ಲವೇ ಎಂಬ ಭಂಡಧೈರ್ಯದೊಂದಿಗೆ ಇರುತ್ತಾರೆ.

ಪ್ರಶ್ನಿಸಬೇಕು, ದ್ವೇಷಿಸಬಾರದು

ಪ್ರಶ್ನಿಸಬೇಕು, ದ್ವೇಷಿಸಬಾರದು. ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದವರನ್ನು ತಾರ್ಕಿಕವಾಗಿ ಪ್ರಶ್ನಿಸಿ ಸರಿಹಾದಿಯಲ್ಲಿರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಚಿಂತಕರು ನಿರ್ವಹಿಸಬೇಕು. ಯಾರೇ ಅಧಿಕಾರಕ್ಕೆ ಬಂದರೂ ಅವರನ್ನು ಎಚ್ಚರಿಸಬೇಕು. ಜನರು ಸರಿಯಾಗಿ ಆಲೋಚಿಸುವಂತೆ ಪ್ರೇರಣೆ ನೀಡಬೇಕು. ಚಿಂತಕರು ಮುಖ್ಯವಾಗಿ ಯಾವುದೇ ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿರುವುದಿಲ್ಲ ಎಂಬ ವಿಶ್ವಾಸ ಜನರಲ್ಲಿದೆ. ಆ ವಿಶ್ವಾಸವನ್ನು ಕಳೆದುಕೊಳ್ಳಬಾರದು. ಈ ದೇಶದ ಉನ್ನತ ಹುದ್ದೆಯಿಂದ ಕೆಳಹಂತಗಳ ಆಡಳಿತಾತ್ಮಕ ಸಂಸ್ಥೆಗಳನ್ನು ಪ್ರತಿನಿಧಿಸುವ ನಾಯಕರೆನ್ನಿಸಿಕೊಂಡವರೆಲ್ಲರೂ ನಮಗೆ ಮುಖ್ಯ. ಅವರು ಆ ಹುದ್ದೆಗಳನ್ನು ಅಲಂಕರಿಸಿದ ನಂತರ ಅವರ ಹೊಣೆಗಾರಿಕೆ ಹೆಚ್ಚುತ್ತಲೇ ಇರುತ್ತದೆ ಎಂಬುದನ್ನು ಚಿಂತಕರೆನ್ನಿಸಿಕೊಂಡವರು ನೆನಪಿಸುತ್ತಲೇ ಇರಬೇಕು. ಆದರೆ, ಇಂಥ ಜವಾಬ್ದಾರಿಯನ್ನು ಕೆಲವೇ ಕೆಲವು ಬದ್ಧತೆಯುಳ್ಳವರು ನಿರ್ವಹಿಸುತ್ತಿದ್ದಾರೆ. ಉಳಿದ ಅನೇಕರು ಅಧಿಕಾರದಲ್ಲಿರುವವರ ಬಗ್ಗೆ ಅಂಧಾಭಿಮಾನ ಪ್ರದರ್ಶಿಸುತ್ತಿದ್ದಾರೆ. ಇಂಥವರನ್ನೇ ಬಳಸಿಕೊಂಡು ರಾಜಕೀಯ ಪಡೆಗಳು ತಮ್ಮ ರಹಸ್ಯ ಕಾರ್ಯಸೂಚಿಯನ್ನು ಪ್ರಯೋಗಿಸುತ್ತಿವೆ. ಚಿಂತಕರ ಆ ಪಂಥ ಮತ್ತು ಈ ಪಂಥಗಳನ್ನು ಪರಸ್ಪರ ಸಂಘರ್ಷಕ್ಕಿಳಿಸಿ ಇತಿಹಾಸದ ವ್ಯಾಪ್ತಿಯನ್ನು ಸಂಕುಚಿತಗೊಳಿಸಿ ತಮ್ಮ ಅಧಿಕಾರದಾಹದ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆ.

           –ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

Published

on

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.

ಈ ತಿಂಗಳ 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಈ ತಿಂಗಳ 13ರಂದು ಅದಿಸೂಚನೆ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಸಲು ಜೂನ್ 20 ಕಡೆಯ ದಿನ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ. ಜೂನ್ 30ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.

ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.

ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.

18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.

ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.

ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ

Published

on

ಸುದ್ದಿದಿನ, ಬೆಂಗಳೂರು : ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ಈ ಯೋಜನೆಗಳ ಜಾರಿ ಹೇಗೆ, ಫಲಾನುಭವಿಗಳ ಆಯ್ಕೆ ಮಾನದಂಡ, ಸರ್ಕಾರದ ಮೇಲೆ ಬೀಳಬಹುದಾದ ಆರ್ಥಿಕ ಹೊರೆ ಮುಂತಾದ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ13 hours ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ21 hours ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ21 hours ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ22 hours ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ1 day ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ1 day ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

ದಿನದ ಸುದ್ದಿ2 days ago

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ2 days ago

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ ; ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ...

ದಿನದ ಸುದ್ದಿ3 days ago

ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ, ದಾವಣಗೆರೆ : ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Trending