Connect with us

ಕ್ರೀಡೆ

ಅಂತರಾಷ್ಟ್ರೀಯ ಕಬಡ್ಡಿ ಲೀಗ್ ಆಟಗಾರರ ಆಯ್ಕೆ ಪ್ರಕ್ರಿಯೆ

Published

on

ಸುದ್ದಿದಿನ, ಬೆಂಗಳೂರು: ಪ್ರೊ ಕಬಡ್ಡಿಗೆ ಪರ‌್ಯಾಯವಾಗಿ ರೂಪುಗೊಂಡಿರುವ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್‌ನ ಆಲ್ ಇಂಡಿಯಾ ಆಯ್ಕೆ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸೇರಿದಂತೆ ಎಲ್ಲಾ ಇತರ ಜಿಲ್ಲೆಗಳಿಂದಲೂ ಆಟಗಾರರು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ ಸರ್ಕಾರಿ ಇಲಾಖೆಗಳ ಆಟಗಾರರು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ.

ಇಲ್ಲಿನ ವಿದ್ಯಾನಗರ ಕ್ರೀಡಾ ಹಾಸ್ಟೆಲ್ ಆವರಣದಲ್ಲಿ ಬುಧವಾರ ನಡೆದ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ ಆಯ್ಕೆ ಪ್ರಕ್ರಿಯೆಯಲ್ಲಿ ಸುಮಾರು 300 ಆಟಗಾರರು ಭಾಗವಹಿಸಿದ್ದರು. ಒಟ್ಟಾರೆ 200 ಆಟಗಾರರನ್ನು ಆಯ್ಕೆ ಮಾಡಲಾಗುವುದು. ಇದರಲ್ಲಿ 150 ಆಟಗಾರರು ಲೀಗ್‌ನಲ್ಲಿನ 8 ತಂಡಗಳಲ್ಲಿ ಆಟಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದ 50 ಯುವ ಆಟಗಾರರಿಗೆ ಹೆಚ್ಚಿನ ತರಬೇತಿಯನ್ನು ನೀಡಲು ನ್ಯೂ ಕಬಡ್ಡಿ ಫೆಡರೇಷನ್ ನಿರ್ಧರಿಸಿದೆ.

ಆಟಗಾರರ ಆಯ್ಕೆಯನ್ನು 3 ವಿಭಾಗಗಳಾಗಿ ವಿಂಗಡಿಸಲಾಗಿದೆ.  ‘ಎ’. ‘ಬಿ’ ಹಾಗೂ ‘ಸಿ’ ಎಂದು ೩ ವಿಭಾಗಗಳಾಗಿ ವಿಂಗಡಿಸಲಾಗಿದೆ. ಈ ವಿಭಾಗಗಳಲ್ಲಿ ಆಯ್ಕೆಯಾದ ಆಟಗಾರರಿಗೆ ಕ್ರಮವಾಗಿ 10.8ಲಕ್ಷ ಹಾಗೂ 6ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಇನ್ನೂ 50 ಯುವ ಆಟಗಾರರಿಗೆ 4.3 ಲಕ್ಷಹಾಗೂ 2 ಲಕ್ಷ ರು.ಗಳನ್ನು ನೀಡಲಾಗುತ್ತಿದೆ ಎಂದು ನ್ಯೂ ಕಬಡ್ಡಿ ಫೆಡರೇಷನ್‌ನ ಕಾರ‌್ಯದರ್ಶಿ ಪ್ರಸಾದ್ ಬಾಬು ಹೇಳಿದ್ದಾರೆ.

12 ಆಯ್ಕೆಗಾರರು

ಆಟಗಾರರ ಆಯ್ಕೆ ಸಮಿತಿಯಲ್ಲಿ 12 ಮಾಜಿ ಅಂತಾರಾಷ್ಟ್ರೀಯ ಆಟಗಾರರು ಹಾಗೂ ಅರ್ಜುನ ಪ್ರಶಸ್ತಿ ವಿಜೇತರು ಇದ್ದಾರೆ. ಆಯ್ಕೆ ಪಾರದರ್ಶಕ ವಾಗಿರಲೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆ ತಜ್ಞ ಕಬಡ್ಡಿ ಆಟಗಾರರ ಸಮ್ಮುಖದಲ್ಲಿ ಆಯ್ಕೆ ನಡೆಸಲಾಗುತ್ತಿದೆ.

18 ಪ್ರೊ ಕಬಡ್ಡಿ ಆಟಗಾರರು?

ಇಂಡೋ ಇಂಟರ್‌ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ರಾಜ್ಯಗಳಿಂದ 18 ಪ್ರೊ ಕಬಡ್ಡಿ ಆಟಗಾರರು ಭಾಗವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಕರ್ನಾಟಕ ರಾಜ್ಯದಿಂದ ಯಾವೊಬ್ಬ ಪ್ರೊ ಕಬಡ್ಡಿ ಆಟಗಾರರು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿಲ್ಲ. ರೈಲ್ವೇಸ್, ಪೊಲೀಸ್, ಆರ್ಮಿ ಇಲಾಖೆಯ ಕಬಡ್ಡಿ ಆಟಗಾರರು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.

ರಾಜ್ಯದಿಂದ 30 ಆಟಗಾರರು

ಕರ್ನಾಟಕ ರಾಜ್ಯದಿಂದ 30ಕ್ಕೂ ಹೆಚ್ಚು ಆಟಗಾರರು ಆಲ್ ಇಂಡಿಯಾ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಈ ಹಿಂದೆ ಮೊದಲೇ ಹೇಳಿದಂತೆ ಪ್ರತಿ ತಂಡವೊಂದರಲ್ಲಿ 5 ರಿಂದ 6 ಆಟಗಾರರು ರಾಜ್ಯದವರಾಗಿರುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ 8 ತಂಡಗಳ 18ಆಟಗಾರರ ಪೈಕಿ ಕರ್ನಾಟಕವರು 6 ಆಟಗಾರರು ಇರಲಿದ್ದಾರೆ.

3 ದಿನಗಳ ಪ್ರಕ್ರಿಯೆ

ಪ್ರೊ ಕಬಡ್ಡಿಗೆ ಪರ‌್ಯಾಯವಾಗಿ ರೂಪುಗೊಂಡಿರುವ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ 3 ದಿನಗಳ ಕಾಲ ನಡೆಯುತ್ತಿದೆ. ಮಂಗಳವಾರ ಹಾಗೂ ಬುಧವಾರ ಆಟಗಾರರ ನೋಂದಾಣಿ ಕಾರ್ಯ ನಡೆಯಿತು. ಗುರುವಾರ ಆಟಗಾರರ ಅಂತಿಮ ಆಯ್ಕೆ ನಡೆಯಲಿದೆ. ಜೊತೆಯಲ್ಲಿ ಪ್ರಾಂಚೈಸಿಗಳನ್ನು ಅಂತಿಮಗೊಳಿಸಲಾಗುತ್ತದೆ. ಪ್ರತಿ ತಂಡವು 18 ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಿದೆ.

ಪ್ರಕ್ರಿಯೆಯಲ್ಲಿ 100 ರೆಫ್ರಿಗಳು

ಸುಮಾರು 100 ಮಂದಿ ರೆಫ್ರಿಗಳು ಪಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ 27 ರೆಫ್ರಿಗಳು ಕರ್ನಾಟಕದವರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986815401

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅಭಿಮಾನಿಗಳೊಂದಿಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ‘ಸ್ಟಾರ್ ಟಾಕ್’ ಕಾರ್ಯಕ್ರಮ

Published

on

ಸುದ್ದಿದಿನ,ಬೆಂಗಳೂರು : ಜಗತ್ತಿನ ಅತ್ಯುನ್ನತ ಅಥ್ಲೆಟ್ ಗಳಿಂದ ಸ್ಫೂರ್ತಿ ಪಡೆದ ಕ್ರೀಡಾ ಉಡುಪುಗಳ ಬ್ರಾಂಡ್ – ಪರಿಮ್ಯಾಚ್ ಸ್ಪೋರ್ಟ್ಸ್ ಬೆಂಗಳೂರಿನ ಮಂತ್ರಿ ಸ್ಟೋರ್ ಮಾಲ್‌ನಲ್ಲಿ ಭಾನುವಾರ ಖ್ಯಾತ ಕ್ರಿಕೆಟಿಗೆ ದಿನೇಶ್ ಕಾರ್ತಿಕ ಅವರೊಂದಿಗೆ ಅಭಿಮಾನಿಗಳ ಪ್ರತ್ಯೇಕ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಪರಿಮ್ಯಾಚ್ ಸ್ಪೋರ್ಟ್ಸ್ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿರುವ ದಿನೇಶ್ ಕಾರ್ತಿಕ್ ಅವರು ಅಭಿಮಾನಿಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡರಲ್ಲದೇ ಪ್ರಶೋತ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಗೂ ಸಂವಾದ ನಡೆಸಿದರು.
ಕ್ರಿಕೆಟ್ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ದಿನೇಶ್ ಕಾರ್ತಿಕ್ ಅವರ ಅಸಾಧಾರಣ ಕೌಶಲ್ಯಗಳಿಗೆ ಖ್ಯಾತಿ ಹೊಂದಿದ್ದಾರಲ್ಲದೇ ಅದರಲ್ಲೂ ಮುಖ್ಯವಾಗಿ ಪಂದ್ಯದ ಅಂತಿಮ ಓವರ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಹೆಸರಾಗಿದ್ದಾರೆ. ಭಾರರತದ ಅಂತಾರಾಷ್ಟ್ರೀಯ ಟಿ29 ತಂಡದಲ್ಲಿ ಕಾರ್ತಿಕ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಅವರ ಅಸಾಧಾರಣ ವೇಗ ಮತ್ತು ಸ್ವಿಂಗ್‌ಗಳು ಜಗತ್ತಿನ ಕೆಲವು ಅಗ್ರ ಬ್ಯಾಟ್ಸ್‌ಮನ್‌ಗಳಿಗೆ ಸತತವಾಗಿ ಸವಾಲೆಸೆಯುತ್ತಿವೆ.

ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ ಅವರು ಮುಂಬರಲಿರುವ ಕ್ರಿಕೆಟ್ ಋತುವಿಗೆ ತಮ್ಮ ವೈಯಕ್ತಿಕ ಗುರಿಗಳ ಕುರಿತು ಒಳನೋಟಗಳನ್ನು ಹಂಚಿಕೊಂಡರು. ಅಲ್ಲದೇ ಪ್ರದರ್ಶನದ ಒತ್ತಡವನ್ನು ಯಶಸ್ವಿಯಾಗಿ ನಿಭಾಯಿಸುವುದಕ್ಕಾಗಿ ಅಶ್ಲೀಟ್‌ಗಳು ಬಳಸಿಕೊಳ್ಳುವ ಕಾರ್ಯತಂತ್ರಗಳನ್ನು ಕುರಿತು ತಿಳಿಸಿದರು.

ಚರ್ಚೆಯ ಗಮನಾರ್ಹವಾದ ಮುಖ್ಯಾಂಶ ಎಂದರೆ ಅದು ಪರಿಮ್ಯಾಚ್ ಸ್ಪೋರ್ಟ್ಸ್ನೊಂದಿಗೆ ಅವರ ಪಾಲುದಾರಿಕೆ ಕುರಿತ ಚರ್ಚೆಯಾಗಿತ್ತು. ಇದರಲ್ಲಿ ಕಾರ್ತಿಕ್ ಅವರ ಕ್ರೀಡಾ ಮಹತ್ವಾಕಾಂಕ್ಷೆಗಳಿಗೆ ಬ್ರಾಂಡ್‌ನ ಅಚಲ ಬೆಂಬಲ ಕುರಿತು ಅವರು ಒತ್ತಿ ಹೇಳಿದರು. ತಮ್ಮ ಪ್ರತ್ಯೇಕವಾದ ಸ್ಪೋರ್ಟ್ಸ್ ವೇರ್ ಶ್ರೇಣಿಯಲ್ಲಿನ ಪೊಲೊ ಶರ್ಟ್ ಅನ್ನು ಕಾರ್ತಿಕ ಹೆಮ್ಮೆಯಿಂದ ಧರಿಸಿದ್ದರು. ಈ ಶ್ರೇಣಿ ಪರಿಮ್ಯಾಚ್ ಸ್ಪೋರ್ಟ್ಸ್ ನೊಂದಿಗೆ ಜಂಟಿ ಯೋಜನೆಯಾಗಿದೆ. ಕಾರ್ತಿಕ್ ಅವರಿಗೆ ಕ್ರೀಡೆ ಕುರಿತು ಇರುವ ಅಚಲ ಭಾವೋತ್ಸಾಹ ಮತ್ತು ಅವರ ಅನನ್ಯ ಶೈಲಿಯನ್ನು ಇದು ಬಿಂಬಿಸುತ್ತದೆ.

“ಡೇರ್ ಟು ಬಿ ಎ ಚಾಂಪಿಯನ್” ಎಂಬ ಹೊಸ ಬ್ರಾಂಡ್ ಅಭಿಯಾನಕ್ಕೆ ಸಮರ್ಪಿತವಾದ ಇತ್ತೀಚಿನ ಪರಿಮ್ಯಾಚ್ ಕ್ರೀಡಾ ಬ್ರಾಂಡ್ ವಿಡಿಯೋಗಾಗಿ ಚಿತ್ರೀಕರಣದ ಸಂದರ್ಭದಲ್ಲಿನ ತಮ್ಮ ಅನುಭವವನ್ನು ಕೂಡ ಅವರು ಹಂಚಿಕೊಂಡರು.
ಪರಿಮ್ಯಾಚ್ ಸ್ಪೋರ್ಟ್ಸ್ ಕುರಿತು : ಜಗತ್ತಿನ ಆಗ್ರಮಾನ್ಯ ಅಶ್ಲೀಟ್‌ಗಳಿಂದ ಸ್ಪೂರ್ತಿ ಪಡೆದ ಅತ್ಯುನ್ನತ ಗುಣಮಟ್ಟದ ಕ್ರೀಡಾ ಉಡುಪುಗಳ ಬ್ರಾಂಡ್ ಪರಿಮ್ಯಾಚ್ ಸ್ಪೋರ್ಟ್ಸ್ ಆಗಿದೆ.

ಪ್ರತಿ ಧೈರ್ಯಶಾಲಿ ಆಥೀಟ್‌ಗಳು ತಮ್ಮ ಗೆಲುವಿನ ಮಾರ್ಗದಲ್ಲಿ ಸಜ್ಜಾಗಿ ಇರುವಂತೆ ಇವುಗಳನ್ನು ವಿನ್ಯಾಸಗೊಳಿಸಲಾಗಿರುತ್ತದೆ. ಮೂಲವಾಗಿ ಕ್ರೀಡೆ ಕುರಿತ ಭಾವೋತ್ಸಾಹದೊಂದಿಗೆ ಪರಿಮ್ಯಾಚ್ ಸ್ಪೋರ್ಟ್ಸ್ ಪ್ರೊ-ಆನ್-ಫೀಲ್ಡ್ ಕಿಟ್‌ಗಳನ್ನು ಫುಟ್ಬಾಲ್ ಮತ್ತು ಕ್ರಿಕೆಟ್ ತಂಡಗಳಿಗಾಗಿ ಸೃಷ್ಟಿಸುತ್ತಿದೆ. ಜೊತೆಗೆ ಫ್ಯಾನ್‌ಗಳಿಗೆ ಪ್ರತಿದಿನದ ವರ್ಕ್‌ ಔಟ್ ಉಡುಪುಗಳ ಸಮಗ್ರ ಶೈಲಿಯನ್ನು ಸಾದರಪಡಿಸುತ್ತಿದೆ.

ಇದರ ಪ್ರತ್ಯೇಕ ವಿನ್ಯಾಸದೊಂದಿಗೆ ಈ ಉಡುಪುಗಳು ಗುಂಪಿನಲ್ಲಿ ಪ್ರತ್ಯೇಕವಾದ ಸ್ಥಾನ ಕಂಡುಕೊಳ್ಳುತ್ತವೆ. ಜಗತ್ತಿನ ಅಗ್ರ ಅಥ್ಲೆಟ್‌ಗಳು ಮತ್ತು ಅವರು ಕ್ರೀಡಾಂಗಣದಲ್ಲಿ ಗಳಿಸಿದ ವಿಜಯಗಳಿಂದ ಈ ಶ್ರೇಣಿ ಸ್ಫೂರ್ತಿ ಪಡೆದಿದೆ. ಕ್ರೀಡೆ ಕುರಿತಂತೆ ಭಾರತದ ಪ್ರೀತಿಯನ್ನು ವಿಸ್ತರಿಸುವ ಮತ್ತು ಅದನ್ನು ಸಂಪೂರ್ಣ ನೂತನ ಮಟ್ಟಕ್ಕೆ ತರುವ ಮಹತ್ವಾಕಾಂಕ್ಷೆಯ ಗುರಿ ಸಾಧಿಸುವ ಮಾರ್ಗದಲ್ಲಿ ಪರಿಮ್ಯಾಚ್ ಸ್ಪೋರ್ಟ್ಸ್ ಸಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪೆಪ್ಪರ್ ಇಂಟರಾಕ್ಟಿವ್ ಕಮ್ಯುನಿಕೇಷನ್ಸ್,

  • karishma@pepperinteractive.in। +91 98333 28499
    – gl janaki@pepperinteractive.in। +91 97414 10688

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ವಾಲಿಬಾಲ್ ಪಂದ್ಯಾವಳಿ | ಹೊಸದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

Published

on

ಸುದ್ದಿದಿನ, ಹೊನ್ನಾಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಪಂದ್ಯಾವಳಿಯನ್ನುಇದೇ 17-18 ರಂದು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸದುರ್ಗ ಪ್ರಥಮ ಸ್ಥಾನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ದ್ವಿತೀಯ ಸ್ಥಾನ, ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ತೃತೀಯ ಸ್ಥಾನ, ಶ್ರೀ ಶಿವಲಿಂಗೇಶ್ವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಗಿರಿ ನಾಲ್ಕನೇ ಸ್ಥಾನವನ್ನು ಪಡೆದು ಕಾಲೇಜಿಗೆ ಮತ್ತು ವಿಶ್ವ ವಿದ್ಯಾನಿಲಯಕ್ಕೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಜಿ ಧನಂಜಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ಈ ಸಮಾರಂಭದಲ್ಲಿ ಪ್ರೊ. ಡಿ ಸಿ ಪಾಟೀಲ್, ಗ್ರಂಥಪಾಲಕರಾದ ಪ್ರೊ. ಎಂ ನಾಗರಾಜ ನಾಯ್ಕ ಕ್ರೀಡಾ ಆಯೋಜಕರಾದ ಡಾ. ಹರೀಶ ಪಿ ಎಸ್, ಬೆಳ್ಳುಳ್ಳಿ ಕೊಟ್ರೇಶ, ಹೆಚ್ ವಿ ಗೀತಾ, ಅಮೂಲ್ಯ ಆರ್ ಹೆಚ್, ಡಾ. ಮಂಜುನಾಥ ಗುರು ವಿ ಜಿ ದಾವಣಗೆರೆ ವಿಶ್ವವಿದ್ಯಾನಿಲಯ ಕ್ರೀಡಾಧಿಕಾರಿಗಳಾದ ಡಾ. ವೀರಪ್ಪ ಬಿ ಹೆಚ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಡಾ. ಚಂದ್ರಶೇಖರ್ ಸಿ, ಡಾ. ರೇಖಾ ಎಂ ಆರ್, ಗಿರೀಶ್ ಎಂ ಎಸ್, ಬಾಲಚಂದ್ರಣ್ಣ ಬಿ. ಆರ್. ಕಲ್ಲೇಶಪ್ಪ ಹರೀಶ್ ಕೆ ಎಂ , ತೀರ್ಪುಗಾರರಾದ ಆಶಿಕ್ ಮತ್ತು ಕಲೀಲ್, ಇಬ್ರಾಹಿಂ ಜಾಫರ್ ಮುಖ್ಯ ಮುಖ್ಯ ತೀರ್ಪುಗಾರರಾದ ಪರಮೇಶ್ವರಪ್ಪ ಮತ್ತು ನಮ್ಮ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ1 week ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending