ಕ್ರೀಡೆ
ಹರಪನಹಳ್ಳಿ : ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾಪಟು ಅಶೋಕ್ ಅಪಘಾತದಲ್ಲಿ ದುರ್ಮರಣ
ಸುದ್ದಿದಿನ ಡೆಸ್ಕ್ : ಇತ್ತೀಚೆಗೆ ನೇಪಾಳದ ಕಠ್ಮಾಂಡುವಿನಲ್ಲಿ ನಡೆದ ಅಂತರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕ ಗೆದ್ದಿದ್ದ ಅಶೋಕ ನಾಯಕ್ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಹರಪನಹಳ್ಳಿತಾಲ್ಲೂಕಿನ ಬಾಪೂಜಿನಗರದ ನಿವಾಸಿಯಾಗಿದ್ದು.ಹರಪನಹಳ್ಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್.ಸಿ ವಿದ್ಯಾರ್ಥಿಯಾಗಿದ್ದರು ಅಶೋಕ್ ನಾಯಕ್.
ಈ ಹಿನ್ನೆಲೆಯಲ್ಲಿ ಸಿ.ಎಂ ಕುಮಾರ ಸ್ವಾಮಿ ಅಶೋಕ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ರಾಷ್ಟ್ರೀಯ ಕಬಡ್ಡಿ ಆಟಗಾರ ಅಶೋಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದೇಸಿ ಕ್ರೀಡೆಗೆ ಹೊಸ ಸ್ಪರ್ಶ ನೀಡಿದ್ದ ಆಟಗಾರ ಇಲ್ಲವಾದ್ದರಿಂದ ಕ್ರೀಡಾ ಲೋಕ ಬಡವಾಗಿದೆ.
ಅವರ ಸಾವಿನ ಶೋಕವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.— CM of Karnataka (@CMofKarnataka) November 29, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401