Connect with us

ಸಿನಿ ಸುದ್ದಿ

ಅತಿಲೋಕ ಸುಂದರಿ ಸಂದರ್ಶನ : ಸೆಲಬ್ರಿಟಿ ಲೋಕದ BG ಈಗ ಫುಲ್ ಬಿಝಿ..!

Published

on

ಅಂತರಾಷ್ಟ್ರೀಯ ಸೆಲೆಬ್ರಿಟಿ ಲೋಕದಲ್ಲಿ BG ಎಂಬ ಹೆಸರು ಉಲ್ಲೇಖಿಸಿದರೆ ಜನ ನಿಬ್ಬೆರಗಾಗುತ್ತಾರೆ. ಆ ಎರಡಕ್ಷರದ ಹಿಂದಿರುವ ಮಹಾ ಶಕ್ತಿಯೇ ಭವ್ಯ ಗೌಡ. ಮಾಡೆಲಿಂಗ್, ಜಾಹೀರಾತು, ಬಣ್ಣದ ಜಗತ್ತಿನಲ್ಲಿ BG ಎಂದೇ ಖ್ಯಾತರಾಗಿರುವ ಭವ್ಯ ಅವರು ಅಕ್ಷರಶಃ ಈಗ  ಬಿಝಿಯಾಗಿದ್ದಾರೆ.

ವಿಶ್ವ ಮಟ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾರತದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಹಿರಿಮೆ ಅವರದು. ಮೂಲತಃ ಮಂಡ್ಯದವರಾದ ಭವ್ಯ ಗೌಡ ಅವರು ತವರಿಗೆ ಮರಳಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಸಾಧನೆ  ಮಾಡಬೇಕೆಂಬುದು ಅವರ ಕನಸು. ಈಗಾಗಲೇ 34 ಜಾಗತಿಕ ಬ್ರ್ಯಾಂಡ್ಗಳಿಗೆ ರಾಯಭಾರಿಯಾಗಿರುವ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈ ಪರಿಯ ಫೋಟೊ ಶೂಟ್ಗಳಲ್ಲಿ ಪಾಲ್ಗೊಂಡು ಹೆಸರು ಮಾಡಿದ ವಿಶ್ವದ ಏಕೈಕ ವ್ಯಕ್ತಿ ಎಂದರೆ ಅದು ಭವ್ಯ ಗೌಡ. 2010ರಲ್ಲಿ ಯುಕೆಯಲ್ಲಿ ನಡೆದ (ಮಿಡ್ಲ್ಯಾಂಡ್ಸ್) ಮಿಸ್ ಅರ್ಥ್ ಬ್ಯೂಟಿ ಪೆಜೆಂಟ್ನಲ್ಲಿ ವಿಜೇತೆಯಾಗಿ ಹೊರಹೊಮ್ಮಿದ ಅವರು, ಗ್ರೇಟ್ ಬ್ರಿಟನ್ನ ಇತಿಹಾಸದಲ್ಲಿ ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾದ ಮೊತ್ತ ಮೊದಲ ಭಾರತೀಯರೆಂಬ ಕೀರ್ತಿಗೆ  ಭವ್ಯ ಅವರು ಪಾತ್ರರಾದರು. ಇದರ ಬೆನ್ನಿಗೇ ಅವರು ಮಿಸ್ ಇಂಗ್ಲೆಡ್ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಆಗಿ ವಿಶ್ವದ ಗಮನ ಸೆಳೆದರು.

2013ರಲ್ಲಿ ಮಿಸ್ ಕೊಲಂಬೊ ಕ್ವೀನ್ ಪಟ್ಟ ಕೂಡ ಧಕ್ಕಿಸಿಕೊಂಡ ಅವರು ಮಧುಮಗಳ ಫೋಟೊಗ್ರಫಿ (ಬ್ರೈಡಲ್ ಫೋಟೊಗ್ರಫಿ) ಮಾಡುವರ ಪಾಲಿನ ಜೀವಂತ ಗೊಂಬೆ ಎಂಬ ಅನ್ವರ್ಥನಾಮವಾಗಿ ಉಳಿದಿದ್ದಾರೆ. 2010ರಲ್ಲೇ ಇವರು ಮಿಸ್ ಕಾಮನ್ವೆಲ್ತ್ ಫೈನಲಿಸ್ಟ್ ಆಗಿಯೂ ಗಮನ ಸೆಳೆದಿದ್ದರು. ಇಂಥ ಏಳು ಪಟ್ಟಗಲನ್ನು ಅಲಂಕರಿಸಿರುವ ಅಂತರಾಷ್ಟ್ರೀಯ ಸೆಲಬ್ರಿಟಿಯೊಬ್ಬರು ಸುದ್ದಿದಿನದೊಟ್ಟಿಗೆ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. ಅವರ ಆಂತರ್ಯದ ದನಿಯನ್ನು ಹಿಡಿದಿಡುವ ಪ್ರಯತ್ನ ನಮ್ಮದು.

• ಭಾರತದ ಬಗೆಗಿನ ನಿಮ್ಮ ಕನಸುಗಳೇನು?

ಭಾರತವು 2030ರ ಹೊತ್ತಿಗೆ ಪೆಟ್ರೋಲಿಯಂ ಮುಕ್ತ ದೇಶವಾಗಿ ಹೊರಬೇಕೆಂಬುದು ನನ್ನ ಕನಸುಗಳಲ್ಲೊಂದು. ಇದಕ್ಕಾಗಿ ಕೇಂದ್ರ ಸರಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ಹೆಚ್ಚು ಪುಷ್ಠಿ ನೀಡುತ್ತಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಬೆಟೆರಾ ಎಂಬ ಈ  ಯೋಜನೆಗೆ ನಾನು ರಾಯಭಾರಿಯಾಗಿದ್ದೇನೆ. ಈ ಮೂಲಕ ದೇಶದ ಮಹೋನ್ನತ ಕನಸುಗಳಲ್ಲಿ ಒಂದು ಭಾಗವಾಗಿರುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ.

• ವಿದೇಶದಲ್ಲೇ ಹೆಚ್ಚು ಇದ್ದರೂ ಕನ್ನಡ ಪ್ರೀತಿ ಹಾಗೆ ಇದೆಯೇ?

ಕನ್ನಡ ನನ್ನ ಮನಸ್ಸಿಗೆ ಹತ್ತಿರವಾದ ಭಾಷೆ. ಏಕೆಂದರೆ ಅದು ನನ್ನ ತಾಯಿ ಸಮಾನ. ಪ್ರಪಂಚವೆಲ್ಲಾ ಗೆದ್ದು ಬರಬಹುದು ಆದರೆ, ನನ್ನ ತಾಯ್ನಾಡಿಗೆ ಏನೂ ಸಾಧನೆ ಮಾಡಲಿಲ್ಲ ಎಂದರೆ ಏನು ಪ್ರಯೋಜನ. ಕನ್ನಡದವರಾಗಿ ನಾವು ನಮ್ಮ ಮಾತೃ ಭಾಷೆ ಮಾತನಾಡಲು ಯಾವಾಗಲೂ ಹಿಂದೆ ಮುಂದೆ ನೋಡಬಾರದು. ನಾನು ಹುಟ್ಟಿದ ಈ ಮಣ್ಣಿನಲ್ಲೇ ಏನಾದರೂ ಸಾಧಿಸಿ ತೋರಿಸಬೇಕೆಂಬ ಹಂಬಲ ನನ್ನದು.

• ನೀವು ರಾಯಭಾರಿಯಾಗಿರುವ ಬ್ರ್ಯಾಂಡ್ ಉತ್ಪನ್ನಗಳ ಬಗ್ಗೆ ಹೇಳಿ

ಈವರೆಗೆ ನಾನು 34 ಬ್ರಾಂಡ್ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ. ಇಂಗ್ಲೆಂಡ್ನ ಹಲವು ಕಂಪನಿಗಳೂ ಕೂಡ ನನ್ನನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದವು. ಬಕ್, ಬ್ರೆಸ್ಟ್ ಕ್ಯಾನ್ಸರ್ ಯುನೈಟೆಡ್ ಕಿಂಗ್ಡಂ, ಕ್ರಿಶ್ಚಿಯನ್ ಆಡಿಗರ್, ಗೆಸ್, ಡಿ ಆ್ಯಡ್ ಜಿ,  ಶೀಶಾ ಗಾರ್ಡನ್, ನಿಯೋನ್ ನಿಯತಕಾಲಿಕೆ, ಏಷ್ಯನ್ ಬ್ರೈಡಲ್ ಆ್ಯಂಡ್ ಟ್ರೇನಿಂಗ್ ಅಕಾಡೆಮಿ, ಸೈಮಾ ಹೇರ್ ಆ್ಯಂಡ್ ಬ್ಯೂಟಿ, ಬ್ರಿಟೀಶ್ ರೆಡ್ ಕ್ರಾಸ್ ಇನ್ನು ಹಲವು ವಿದೇಶಿ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ.

• ನಿಮಗೆ ಖುಷಿ ಕೊಡುವ ಫೋಟೊ ಶೂಟ್ ಯಾವುದು ?

ನಾನು ಮಾಡಿರುವ ಎಲ್ಲ ಫೋಟೊ ಶೂಟ್ಗಳೂ ಖುಷಿಕೊಟ್ಟಿವೆ. ನಾನು ಕ್ಯಾಮೆರಾ ಫ್ರೆಂಡ್ಲಿ. ಯಾವ್ಯಾವ ಫೋಟೊಗಳಿಗೆ ಹೇಗೆ ಫೋಸ್ ಕೊಡಬೇಕೆಂಬುದು ಕರಗತವಾಗಿದೆ. ಹಾಗಾಗಿಯೇ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದೇನೆ. ಅಂದಹಾಗೆ  ನನ್ನ ಬ್ರೈಡಲ್ ಫೋಟೊಗಳು (ಮಧುಮಗಳ ಲುಕ್ನ ಫೋಟೊಗಳು) ಜಗತ್ಪ್ರಸಿದ್ಧಿಗಳಿಸಿವೆ. ಬ್ರೈಡಲ್ ಫೋಟೊಗ್ರಫಿಯಲ್ಲಿ ನಾನೊಂದು ವಿಷಯ ವಸ್ತುವೇ ಆಗಿದ್ದು, ನನ್ನ ಕುರಿತು ಅಧ್ಯಯನವೇ ನಡೆಯುತ್ತಿದೆ. ಕೆಲವು ಕ್ಲೈಂಟ್ಗಳು 9 ಬಾರಿ ನನ್ನ ಬಳಿಯೇ ಫೋಟೊ ಶೂಟ್ ಮಾಡಿಸಿದ ಉದಾಹರಣೆಯೂ ಇದೆ. ಕಾರಣ ನನ್ನ ವೃತ್ತಿಪರತೆ ಹಾಗೂ ಕೌಶಲ್ಯ. ಎಷ್ಟೊ ಜನರಿಗೆ ವೆಂಬ್ಲಿ ಸ್ಟೇಡಿಯಂಗೆ ಹೋಗಬೇಕೆಂಬ ಕನಸಿರುತ್ತದೆ. ನನಗೆ ಆ ಸ್ಟೇಡಿಯಂಗೆ ಕರೆಸಿ ಸನ್ಮಾನಿಸಿದರು ಇದು  ಮರೆಯಲಾಗದ ಕ್ಷಣ.

• ಮಾಡೆಲಿಂಗ್ ಕ್ಷೇತ್ರದ ಆಯ್ಕೆ ಹೇಗೆ?

ಮಾಡೆಲಿಂಗ್ ಎಂಬುದು ಈಚೆಗೆ ನನಗೆ ಬಂದ ಆಸಕ್ತಿಯಲ್ಲ. ನಾನು ಚಿಕ್ಕಂದಿನಿಂದಲೂ ಮಾಡೆಲಿಂಗ್ ಹಾಗೂ ಬಣ್ಣದ ಜಗತ್ತಿನ ಬಗ್ಗೆ ಆಕರ್ಷಿತಳಾಗಿದ್ದೆ. 9ನೇ ತರಗತಿಯಲ್ಲಿದ್ದಾಗಲೇ ರಾಂಪ್ ವಾಕ್ನ ಚಾತುರ್ಯತೆ ನನಗೆ ಲಭಿಸಿತ್ತು. ಬರುಬರುತ್ತಾ ಅದು ನನ್ನ  ವೃತ್ತಿಯಾಯಿತು. ಅದು ಇನ್ನೂ ಮುಂದಕ್ಕೆ ಹೋಗಿ ಅಂತರಾಷ್ಟ್ರೀಯ ಸೆಲಬ್ರಿಟಿಯಾಗಿ ಹೊರಹೊಮ್ಮಿದ್ದೇನೆ. ನಾನು ಈ ಸ್ಥಾನಕ್ಕೇರಿದ್ದೇನೆ ಎನ್ನುವುದಕ್ಕಿಂತ ಕನ್ನಡದ ಗೌಡತಿಯೊಬ್ಬಳು ಈ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಬಗ್ಗೆ ನನಗೇ ಹೆಮ್ಮೆಯಾಗುತ್ತದೆ.

• ಶಿಕ್ಷಣ ಮತ್ತು ಫ್ಯಾಷನ್ ಲೋಕವನ್ನು ಸರಿದೂಗಿಸಿದ್ದು ಹೇಗೆ?

ನನಗೆ ಬಣ್ಣದ ಜಗತ್ತಿನ ಬಗ್ಗೆ ಎಷ್ಟು ವ್ಯಾಮೋಹವಿತ್ತೋ ಅದೇ ರೀತಿ ಶಿಕ್ಷಣದ ಬಗ್ಗೆಯೂ ಅಷ್ಟೇ ಆಕರ್ಷಣೆ ಇತ್ತು. ಬೆಂಗಳೂರು ವಿಶ್ವ ವಿದ್ಯಾಲಯದ  ರ‌್ಯಾಂಕ್ ಹೋಲ್ಡರ್ ಆದ ನಾನು ಶಿಕ್ಷಣವನ್ನು ಎಂದಿಗೂ ನಿರ್ಲಕ್ಷಿಸಿಲ್ಲ. ಯುಕೆಯಲ್ಲಿ ಉನ್ನತ ಶಿಕ್ಷಣವನ್ನೂ ಪಡೆದೆ. ನಟನೆ ಕುರಿತು ಇನ್ನಷ್ಟು  ಅಭ್ಯಾಸ ಮಾಡುವ ನಿಟ್ಟಿನಲ್ಲಿ ಕೋರ್ಸ್ ಕೂಡ ಮುಗಿಸಿದೆ. ನಾನು ಪರಿಣತಿ ಹೊಂದಿರುವ ನಟಿ, ರಂಗಭೂಮಿಯ ಎಲ್ಲಾ ಪಟ್ಟುಗಳು ಗೊತ್ತಿವೆ. ನಾನು ಯಾವುದೇ ಕ್ಷೇತ್ರದಲ್ಲಿ ಹೆಸರು ಮಾಡಿದರೂ ಶಿಕ್ಷಣವನ್ನು ನಿರ್ಲಕ್ಷಿಸಕೂಡದು ಎಂಬುದು ಅಪ್ಪ ಹೇಳಿದ ಮಾತು. ಅದನ್ನು ಚಾಚು ತಪ್ಪದೆ ಪಾಲಿಸಿದೆ. ಅವರ ಮಾತು ನನಗೆ ವೇದವಾಖ್ಯವಾಯಿತು.

• ಕಲಬೆರಕೆ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಿದ್ದು ಹೇಗೆ?

ನಾನು ಸಾಕಿದ್ದ ಮೀನೊಂದು ಸಾವಿಗೀಡಾಯಿತು. ನಾನು ಪ್ರೀತಿಯಿಂದ ಸಾಕಿದ್ದ ಮೀನದು. ಅದರ ಬೆಲೆ ಒಂದೂವರೆ ಲಕ್ಷ ರೂಪಾಯಿ. ಪ್ರೀತಿ ಮುಂದೆ ಹಣ ದೊಡ್ಡದಲ್ಲ. ಅದಕ್ಕೆ ನಿತ್ಯವೂ ಫೀಡ್ ಮಾಡುವ ಫುಡ್ ಖಾಲಿಯಾಗಿತ್ತು. ಅದರ ಬದಲಾಗಿ ಇನ್ನೊಂದು ಫುಡ್  ಪಾಕೆಟ್ ಅನ್ನು ನನ್ನ ಶಾಲೆಯ ಸಿಬ್ಬಂದಿಯೊಬ್ಬರು ಖರೀದಿಸಿ ತಂದು ಅದಕ್ಕೆ ತಿನ್ನಿಸಿದರು. ಅದಾದ ಕೆಲವೇ ದಿನಗಳಲ್ಲಿ ಮೀನು ಸಾವಿಗೀಡಾಯಿತು. ಅದಕ್ಕೆ ಕಾರಣ ಅದು ತಿಂದಿದ್ದ ಫುಡ್. ಅವಧಿ ಮುಗಿದ ಫುಡ್ ಪೊಟ್ಟಣದ ಮೇಲೆ ದಿನಾಂಕ ಬದಲಿಸಿ ಮಾರಾಟ ಮಾಡಲಾಗಿತ್ತು. ದೇಶದಲ್ಲಿ  ಇಂಥ ಕಲಬೆರಕೆ ದಂದೆ ನಡೆಯುತ್ತಿರುವ ಬಗ್ಗೆ ಬೇಸರವಾಯಿತು. ಐ ಹೇಟ್ ಫೇಕ್ ಎಂಬ NGO ವೊಂದು ನಡೆಸಿದ ಕಲಬೆರಕೆ ಕುರಿತ ಜಾಗೃತಿಗೆ ನಾನು ರಾಯಭಾರಿಯಾದೆ. ಹೈದರಾಬಾದ್ನಲ್ಲಿ ಈ ಸಂಸ್ಥೆಯ ಕಾರ್ಯಕ್ರಮ ನಡೆಯಿತು. ನಟ ಮಹೇಶ್ ಬಾಬು ಅವರು ನನ್ನ ಜತೆ ಕಾರ‌್ಯಕ್ರಮದ ಮುಖ್ಯಸ್ಥರಾಗಿ ಪಾಲ್ಗೊಂಡಿದ್ದರು.

• ರಾಜಕಾರಣಿ ಮಗಳೆಂಬ ಪ್ರಭಾವ ನಿಮ್ಮ ಬೆಳವಣಿಗೆಗೆ ಸಹಕಾರಿಯಾಯಿತೇ?

ನಮ್ಮ ತಂದೆ ಪ್ರಭಾವಿ ರಾಜಕಾರಣಿ ಎಂಬ ಕಾರಣಕ್ಕೆ ನಾನು ರಾಜ್ಯದಲ್ಲಿ ಅಥವಾ ಈ ದೇಶದಲ್ಲಿ ಹೆಸರು ಮಾಡಬಹುದು. ವಿದೇಶದಲ್ಲಿ ಎಂಎನ್ಸಿ ಕಂಪನಿಗಳಿಗೆ ರಾಯಭಾರಿಯಾಗಬೇಕು ಎಂದರೆ ಅಲ್ಲಿ ನಮ್ಮಪ್ಪನ  ಪ್ರಭಾವ ನಡೆಯುತ್ತಾ? ಖಂಡಿತ ಇಲ್ಲ. ನಾನು ಸ್ವಲ್ಪ ಸ್ವಾಭಿಮಾನಿ ನನ್ನದೇ ಸ್ವಂತ ಕಾಲಿನ ಮೇಲೆ ನಿಲ್ಲಬೇಕೆಂಬ ಹಂಬಲ ಇದೆ. ಹಾಗಾಗಿ ನನ್ನದಲ್ಲದ ಊರಿನಲ್ಲಿ ನಾನಾಗಿ ಬೆಳೆದೆ. ಅಪ್ಪನ ಬೆಂಬಲ ಇದೆಯೇ ಹೊರತು, ಪ್ರಭಾವ ಇಲ್ಲ.

• ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಕಾಣಿಸಿಕೊಳ್ಳದೆ ನೀವು ಆ ಕ್ಷೇತ್ರವನ್ನು ಮಿಸ್ ಮಾಡಿಕೊಳ್ಳುತ್ತಿದ್ದೀರಾ?

ಖಂಡಿತ ಇಲ್ಲ. ಏಕೆಂದರೆ ಸಿನಿಮಾ ಆಫರ್ ಗಳು ನನಗೆ ಇಂದು ನಿನ್ನೆ ಬಂದದ್ದಲ್ಲ. ಸಿನಿಮಾಗಳಲ್ಲಿ ನಟಿಸಬೇಕೆಂದು ಅವಕಾಶಗಳು ಸರಣಿಯಾಗಿ ನನ್ನನ್ನು ಹುಡುಕಿಕೊಂಡು ಬಂದವು. ಆದರೆ, ನಾನು ತುಂಬ ಚೂಸಿ. ನನಗೆ ತಕ್ಕನಾದ ಕತೆ, ಒಂದು ಶಕ್ತಿಯುತ  ಪಾತ್ರವಿದ್ದರೆ ಮಾತ್ರ ಒಪ್ಪಿಕೊಳ್ಳುತ್ತೇನೆ?

• ಸದ್ಯ ಯಾವ ಆಫರ್ಗಳು ನಿಮ್ಮ ಕೈಲಿವೆ.

ನಾನು ನಾಯಕಿಯಾಗಿ ನಟಿಸುತ್ತಿರುವ ಬಾಲಿವುಡ್ ಸಿನಿಮಾ, ಚಿತ್ರೀಕರಣ ಹಂತದಲ್ಲಿದೆ. ಸಿನಿಮಾದ ಶೂಟಿಂಗ್ ಸದ್ಯ ಊಟಿಯಲ್ಲಿ ನಡೆಯುತ್ತಿದೆ.

• ರಾಜಕೀಯಕ್ಕೆ ಬರುವ ಆಸಕ್ತಿ ಇದೆಯೇ?

ಖಂಡಿತ ಇಲ್ಲ. ಜನ ಸೇವೆ ಮಾಡಲು ರಾಜಕೀಯ ಒಂದು ಕ್ಷೇತ್ರ ಹೌದು ಆದರೆ, ಅದೊಂದೇ ಕ್ಷೇತ್ರದಲ್ಲಿ ಜನ ಸೇವೆ ಮಾಡಲು ಅವಕಾಶ ಎಂದಲ್ಲ. ನಾನು ಹೊರಗಿನಿಂದಲೇ ಸೇವೆ ಮಾಡಲು ಇಚ್ಛಿಸುತ್ತೇನೆ.

• ನಿಮ್ಮ ಫಿಟ್ನೆಸ್‌ನ ಗುಟ್ಟೇನು?

ದಿನವೂ ಮೂರು ಗಂಟೆಗಳ ಕಾಲ ವರ್ಕ್ ಔಟ್ ಮಾಡುತ್ತೇನೆ. ನಿಯಮಿತ ಆಹಾರ, ಡಯೆಟ್ ಇವು ನನ್ನ ಆರೋಗ್ಯದ ಗುಟ್ಟು. ಸಣ್ಣ ಆಗಲು ಸಪ್ಲಿಮೆಂಟ್‌ಗಳನ್ನು ಸೇವಿಸುವುದಿಲ್ಲ.ನಿತ್ಯದ ಆಹಾರದಲ್ಲೇ ಕಂಟ್ರೋಲ್ ಮಾಡುತ್ತೇನೆ. ಟೆಕ್ವೆಂಡೊ, ಮಾರ್ಷಲ್ ಆರ್ಟ್ಸ್, 1300 ವರ್ಕ್ ಔಟ್‌ಗಳು ದಿನವೂ ಮಾಡುತ್ತೇನೆ. ಭರತ ನಾಟ್ಯ, ಏರೋಬಿಕ್ಸ್, ಸಾಲ್ಸಾ, ಸಂಬ ಮೊಂಬ ಮೊದಲಾದ ಡಾನ್ಸ್‌ಗಳು ನನ್ನ ಫಿಟ್‌ನೆಸ್ಟ್ ರಹಸ್ಯ. ಯೋಗದಿಂದ ನನ್ನಲ್ಲಿ ಧನಾತ್ಮಕ ಶಕ್ತಿ ತುಂಬಿದೆ. ರೋಪ್ ವ್ಯಾಯಾಮಗಳೂ ಕೂಡ ಮಾಡುತ್ತೇನೆ. ಬಾದಾಮಿ, ಗೋಡಂಬಿ ಮೊದಲಾದ ಐದು ನಟ್ಸ್‌ಗಳಿಂದ ದೇಹಕ್ಕೆ ಸಾಕಷ್ಟು ಎಣ್ಣೆ ಅಂಶ ಸಿಗುತ್ತದೆ. ಬ್ರೋಕ್ಲಿ ಗ್ರೀನ್ ಟೀ ನನ್ನ ಬದುಕನ್ನು ಬದಲಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ2 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ3 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

ದಿನದ ಸುದ್ದಿ3 days ago

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ...

ದಿನದ ಸುದ್ದಿ4 days ago

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ದಿನದ ಸುದ್ದಿ4 days ago

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ...

ದಿನದ ಸುದ್ದಿ4 days ago

ಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು

–ಗೋವರ್ಧನ ನವಿಲೇಹಾಳು ಕರ್ನಾಟಕದ ರಾಜಕೀಯ ಆಖಾಡದಲ್ಲಿ ಏಪ್ರಿಲ್ 9, 2026ರಂದು ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳು ಕೇವಲ ಎರಡು ಸೀಟುಗಳ ಚುನಾವಣೆಯಲ್ಲ. ಇದು...

ದಿನದ ಸುದ್ದಿ2 weeks ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ2 weeks ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ3 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

Trending