Connect with us

ಸಿನಿ ಸುದ್ದಿ

ಅತಿಲೋಕ ಸುಂದರಿ ಸಂದರ್ಶನ : ಸೆಲಬ್ರಿಟಿ ಲೋಕದ BG ಈಗ ಫುಲ್ ಬಿಝಿ..!

Published

on

ಅಂತರಾಷ್ಟ್ರೀಯ ಸೆಲೆಬ್ರಿಟಿ ಲೋಕದಲ್ಲಿ BG ಎಂಬ ಹೆಸರು ಉಲ್ಲೇಖಿಸಿದರೆ ಜನ ನಿಬ್ಬೆರಗಾಗುತ್ತಾರೆ. ಆ ಎರಡಕ್ಷರದ ಹಿಂದಿರುವ ಮಹಾ ಶಕ್ತಿಯೇ ಭವ್ಯ ಗೌಡ. ಮಾಡೆಲಿಂಗ್, ಜಾಹೀರಾತು, ಬಣ್ಣದ ಜಗತ್ತಿನಲ್ಲಿ BG ಎಂದೇ ಖ್ಯಾತರಾಗಿರುವ ಭವ್ಯ ಅವರು ಅಕ್ಷರಶಃ ಈಗ  ಬಿಝಿಯಾಗಿದ್ದಾರೆ.

ವಿಶ್ವ ಮಟ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾರತದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಹಿರಿಮೆ ಅವರದು. ಮೂಲತಃ ಮಂಡ್ಯದವರಾದ ಭವ್ಯ ಗೌಡ ಅವರು ತವರಿಗೆ ಮರಳಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಸಾಧನೆ  ಮಾಡಬೇಕೆಂಬುದು ಅವರ ಕನಸು. ಈಗಾಗಲೇ 34 ಜಾಗತಿಕ ಬ್ರ್ಯಾಂಡ್ಗಳಿಗೆ ರಾಯಭಾರಿಯಾಗಿರುವ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈ ಪರಿಯ ಫೋಟೊ ಶೂಟ್ಗಳಲ್ಲಿ ಪಾಲ್ಗೊಂಡು ಹೆಸರು ಮಾಡಿದ ವಿಶ್ವದ ಏಕೈಕ ವ್ಯಕ್ತಿ ಎಂದರೆ ಅದು ಭವ್ಯ ಗೌಡ. 2010ರಲ್ಲಿ ಯುಕೆಯಲ್ಲಿ ನಡೆದ (ಮಿಡ್ಲ್ಯಾಂಡ್ಸ್) ಮಿಸ್ ಅರ್ಥ್ ಬ್ಯೂಟಿ ಪೆಜೆಂಟ್ನಲ್ಲಿ ವಿಜೇತೆಯಾಗಿ ಹೊರಹೊಮ್ಮಿದ ಅವರು, ಗ್ರೇಟ್ ಬ್ರಿಟನ್ನ ಇತಿಹಾಸದಲ್ಲಿ ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾದ ಮೊತ್ತ ಮೊದಲ ಭಾರತೀಯರೆಂಬ ಕೀರ್ತಿಗೆ  ಭವ್ಯ ಅವರು ಪಾತ್ರರಾದರು. ಇದರ ಬೆನ್ನಿಗೇ ಅವರು ಮಿಸ್ ಇಂಗ್ಲೆಡ್ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಆಗಿ ವಿಶ್ವದ ಗಮನ ಸೆಳೆದರು.

2013ರಲ್ಲಿ ಮಿಸ್ ಕೊಲಂಬೊ ಕ್ವೀನ್ ಪಟ್ಟ ಕೂಡ ಧಕ್ಕಿಸಿಕೊಂಡ ಅವರು ಮಧುಮಗಳ ಫೋಟೊಗ್ರಫಿ (ಬ್ರೈಡಲ್ ಫೋಟೊಗ್ರಫಿ) ಮಾಡುವರ ಪಾಲಿನ ಜೀವಂತ ಗೊಂಬೆ ಎಂಬ ಅನ್ವರ್ಥನಾಮವಾಗಿ ಉಳಿದಿದ್ದಾರೆ. 2010ರಲ್ಲೇ ಇವರು ಮಿಸ್ ಕಾಮನ್ವೆಲ್ತ್ ಫೈನಲಿಸ್ಟ್ ಆಗಿಯೂ ಗಮನ ಸೆಳೆದಿದ್ದರು. ಇಂಥ ಏಳು ಪಟ್ಟಗಲನ್ನು ಅಲಂಕರಿಸಿರುವ ಅಂತರಾಷ್ಟ್ರೀಯ ಸೆಲಬ್ರಿಟಿಯೊಬ್ಬರು ಸುದ್ದಿದಿನದೊಟ್ಟಿಗೆ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. ಅವರ ಆಂತರ್ಯದ ದನಿಯನ್ನು ಹಿಡಿದಿಡುವ ಪ್ರಯತ್ನ ನಮ್ಮದು.

• ಭಾರತದ ಬಗೆಗಿನ ನಿಮ್ಮ ಕನಸುಗಳೇನು?

ಭಾರತವು 2030ರ ಹೊತ್ತಿಗೆ ಪೆಟ್ರೋಲಿಯಂ ಮುಕ್ತ ದೇಶವಾಗಿ ಹೊರಬೇಕೆಂಬುದು ನನ್ನ ಕನಸುಗಳಲ್ಲೊಂದು. ಇದಕ್ಕಾಗಿ ಕೇಂದ್ರ ಸರಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ಹೆಚ್ಚು ಪುಷ್ಠಿ ನೀಡುತ್ತಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಬೆಟೆರಾ ಎಂಬ ಈ  ಯೋಜನೆಗೆ ನಾನು ರಾಯಭಾರಿಯಾಗಿದ್ದೇನೆ. ಈ ಮೂಲಕ ದೇಶದ ಮಹೋನ್ನತ ಕನಸುಗಳಲ್ಲಿ ಒಂದು ಭಾಗವಾಗಿರುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ.

• ವಿದೇಶದಲ್ಲೇ ಹೆಚ್ಚು ಇದ್ದರೂ ಕನ್ನಡ ಪ್ರೀತಿ ಹಾಗೆ ಇದೆಯೇ?

ಕನ್ನಡ ನನ್ನ ಮನಸ್ಸಿಗೆ ಹತ್ತಿರವಾದ ಭಾಷೆ. ಏಕೆಂದರೆ ಅದು ನನ್ನ ತಾಯಿ ಸಮಾನ. ಪ್ರಪಂಚವೆಲ್ಲಾ ಗೆದ್ದು ಬರಬಹುದು ಆದರೆ, ನನ್ನ ತಾಯ್ನಾಡಿಗೆ ಏನೂ ಸಾಧನೆ ಮಾಡಲಿಲ್ಲ ಎಂದರೆ ಏನು ಪ್ರಯೋಜನ. ಕನ್ನಡದವರಾಗಿ ನಾವು ನಮ್ಮ ಮಾತೃ ಭಾಷೆ ಮಾತನಾಡಲು ಯಾವಾಗಲೂ ಹಿಂದೆ ಮುಂದೆ ನೋಡಬಾರದು. ನಾನು ಹುಟ್ಟಿದ ಈ ಮಣ್ಣಿನಲ್ಲೇ ಏನಾದರೂ ಸಾಧಿಸಿ ತೋರಿಸಬೇಕೆಂಬ ಹಂಬಲ ನನ್ನದು.

• ನೀವು ರಾಯಭಾರಿಯಾಗಿರುವ ಬ್ರ್ಯಾಂಡ್ ಉತ್ಪನ್ನಗಳ ಬಗ್ಗೆ ಹೇಳಿ

ಈವರೆಗೆ ನಾನು 34 ಬ್ರಾಂಡ್ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ. ಇಂಗ್ಲೆಂಡ್ನ ಹಲವು ಕಂಪನಿಗಳೂ ಕೂಡ ನನ್ನನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದವು. ಬಕ್, ಬ್ರೆಸ್ಟ್ ಕ್ಯಾನ್ಸರ್ ಯುನೈಟೆಡ್ ಕಿಂಗ್ಡಂ, ಕ್ರಿಶ್ಚಿಯನ್ ಆಡಿಗರ್, ಗೆಸ್, ಡಿ ಆ್ಯಡ್ ಜಿ,  ಶೀಶಾ ಗಾರ್ಡನ್, ನಿಯೋನ್ ನಿಯತಕಾಲಿಕೆ, ಏಷ್ಯನ್ ಬ್ರೈಡಲ್ ಆ್ಯಂಡ್ ಟ್ರೇನಿಂಗ್ ಅಕಾಡೆಮಿ, ಸೈಮಾ ಹೇರ್ ಆ್ಯಂಡ್ ಬ್ಯೂಟಿ, ಬ್ರಿಟೀಶ್ ರೆಡ್ ಕ್ರಾಸ್ ಇನ್ನು ಹಲವು ವಿದೇಶಿ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ.

• ನಿಮಗೆ ಖುಷಿ ಕೊಡುವ ಫೋಟೊ ಶೂಟ್ ಯಾವುದು ?

ನಾನು ಮಾಡಿರುವ ಎಲ್ಲ ಫೋಟೊ ಶೂಟ್ಗಳೂ ಖುಷಿಕೊಟ್ಟಿವೆ. ನಾನು ಕ್ಯಾಮೆರಾ ಫ್ರೆಂಡ್ಲಿ. ಯಾವ್ಯಾವ ಫೋಟೊಗಳಿಗೆ ಹೇಗೆ ಫೋಸ್ ಕೊಡಬೇಕೆಂಬುದು ಕರಗತವಾಗಿದೆ. ಹಾಗಾಗಿಯೇ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದೇನೆ. ಅಂದಹಾಗೆ  ನನ್ನ ಬ್ರೈಡಲ್ ಫೋಟೊಗಳು (ಮಧುಮಗಳ ಲುಕ್ನ ಫೋಟೊಗಳು) ಜಗತ್ಪ್ರಸಿದ್ಧಿಗಳಿಸಿವೆ. ಬ್ರೈಡಲ್ ಫೋಟೊಗ್ರಫಿಯಲ್ಲಿ ನಾನೊಂದು ವಿಷಯ ವಸ್ತುವೇ ಆಗಿದ್ದು, ನನ್ನ ಕುರಿತು ಅಧ್ಯಯನವೇ ನಡೆಯುತ್ತಿದೆ. ಕೆಲವು ಕ್ಲೈಂಟ್ಗಳು 9 ಬಾರಿ ನನ್ನ ಬಳಿಯೇ ಫೋಟೊ ಶೂಟ್ ಮಾಡಿಸಿದ ಉದಾಹರಣೆಯೂ ಇದೆ. ಕಾರಣ ನನ್ನ ವೃತ್ತಿಪರತೆ ಹಾಗೂ ಕೌಶಲ್ಯ. ಎಷ್ಟೊ ಜನರಿಗೆ ವೆಂಬ್ಲಿ ಸ್ಟೇಡಿಯಂಗೆ ಹೋಗಬೇಕೆಂಬ ಕನಸಿರುತ್ತದೆ. ನನಗೆ ಆ ಸ್ಟೇಡಿಯಂಗೆ ಕರೆಸಿ ಸನ್ಮಾನಿಸಿದರು ಇದು  ಮರೆಯಲಾಗದ ಕ್ಷಣ.

• ಮಾಡೆಲಿಂಗ್ ಕ್ಷೇತ್ರದ ಆಯ್ಕೆ ಹೇಗೆ?

ಮಾಡೆಲಿಂಗ್ ಎಂಬುದು ಈಚೆಗೆ ನನಗೆ ಬಂದ ಆಸಕ್ತಿಯಲ್ಲ. ನಾನು ಚಿಕ್ಕಂದಿನಿಂದಲೂ ಮಾಡೆಲಿಂಗ್ ಹಾಗೂ ಬಣ್ಣದ ಜಗತ್ತಿನ ಬಗ್ಗೆ ಆಕರ್ಷಿತಳಾಗಿದ್ದೆ. 9ನೇ ತರಗತಿಯಲ್ಲಿದ್ದಾಗಲೇ ರಾಂಪ್ ವಾಕ್ನ ಚಾತುರ್ಯತೆ ನನಗೆ ಲಭಿಸಿತ್ತು. ಬರುಬರುತ್ತಾ ಅದು ನನ್ನ  ವೃತ್ತಿಯಾಯಿತು. ಅದು ಇನ್ನೂ ಮುಂದಕ್ಕೆ ಹೋಗಿ ಅಂತರಾಷ್ಟ್ರೀಯ ಸೆಲಬ್ರಿಟಿಯಾಗಿ ಹೊರಹೊಮ್ಮಿದ್ದೇನೆ. ನಾನು ಈ ಸ್ಥಾನಕ್ಕೇರಿದ್ದೇನೆ ಎನ್ನುವುದಕ್ಕಿಂತ ಕನ್ನಡದ ಗೌಡತಿಯೊಬ್ಬಳು ಈ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಬಗ್ಗೆ ನನಗೇ ಹೆಮ್ಮೆಯಾಗುತ್ತದೆ.

• ಶಿಕ್ಷಣ ಮತ್ತು ಫ್ಯಾಷನ್ ಲೋಕವನ್ನು ಸರಿದೂಗಿಸಿದ್ದು ಹೇಗೆ?

ನನಗೆ ಬಣ್ಣದ ಜಗತ್ತಿನ ಬಗ್ಗೆ ಎಷ್ಟು ವ್ಯಾಮೋಹವಿತ್ತೋ ಅದೇ ರೀತಿ ಶಿಕ್ಷಣದ ಬಗ್ಗೆಯೂ ಅಷ್ಟೇ ಆಕರ್ಷಣೆ ಇತ್ತು. ಬೆಂಗಳೂರು ವಿಶ್ವ ವಿದ್ಯಾಲಯದ  ರ‌್ಯಾಂಕ್ ಹೋಲ್ಡರ್ ಆದ ನಾನು ಶಿಕ್ಷಣವನ್ನು ಎಂದಿಗೂ ನಿರ್ಲಕ್ಷಿಸಿಲ್ಲ. ಯುಕೆಯಲ್ಲಿ ಉನ್ನತ ಶಿಕ್ಷಣವನ್ನೂ ಪಡೆದೆ. ನಟನೆ ಕುರಿತು ಇನ್ನಷ್ಟು  ಅಭ್ಯಾಸ ಮಾಡುವ ನಿಟ್ಟಿನಲ್ಲಿ ಕೋರ್ಸ್ ಕೂಡ ಮುಗಿಸಿದೆ. ನಾನು ಪರಿಣತಿ ಹೊಂದಿರುವ ನಟಿ, ರಂಗಭೂಮಿಯ ಎಲ್ಲಾ ಪಟ್ಟುಗಳು ಗೊತ್ತಿವೆ. ನಾನು ಯಾವುದೇ ಕ್ಷೇತ್ರದಲ್ಲಿ ಹೆಸರು ಮಾಡಿದರೂ ಶಿಕ್ಷಣವನ್ನು ನಿರ್ಲಕ್ಷಿಸಕೂಡದು ಎಂಬುದು ಅಪ್ಪ ಹೇಳಿದ ಮಾತು. ಅದನ್ನು ಚಾಚು ತಪ್ಪದೆ ಪಾಲಿಸಿದೆ. ಅವರ ಮಾತು ನನಗೆ ವೇದವಾಖ್ಯವಾಯಿತು.

• ಕಲಬೆರಕೆ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಿದ್ದು ಹೇಗೆ?

ನಾನು ಸಾಕಿದ್ದ ಮೀನೊಂದು ಸಾವಿಗೀಡಾಯಿತು. ನಾನು ಪ್ರೀತಿಯಿಂದ ಸಾಕಿದ್ದ ಮೀನದು. ಅದರ ಬೆಲೆ ಒಂದೂವರೆ ಲಕ್ಷ ರೂಪಾಯಿ. ಪ್ರೀತಿ ಮುಂದೆ ಹಣ ದೊಡ್ಡದಲ್ಲ. ಅದಕ್ಕೆ ನಿತ್ಯವೂ ಫೀಡ್ ಮಾಡುವ ಫುಡ್ ಖಾಲಿಯಾಗಿತ್ತು. ಅದರ ಬದಲಾಗಿ ಇನ್ನೊಂದು ಫುಡ್  ಪಾಕೆಟ್ ಅನ್ನು ನನ್ನ ಶಾಲೆಯ ಸಿಬ್ಬಂದಿಯೊಬ್ಬರು ಖರೀದಿಸಿ ತಂದು ಅದಕ್ಕೆ ತಿನ್ನಿಸಿದರು. ಅದಾದ ಕೆಲವೇ ದಿನಗಳಲ್ಲಿ ಮೀನು ಸಾವಿಗೀಡಾಯಿತು. ಅದಕ್ಕೆ ಕಾರಣ ಅದು ತಿಂದಿದ್ದ ಫುಡ್. ಅವಧಿ ಮುಗಿದ ಫುಡ್ ಪೊಟ್ಟಣದ ಮೇಲೆ ದಿನಾಂಕ ಬದಲಿಸಿ ಮಾರಾಟ ಮಾಡಲಾಗಿತ್ತು. ದೇಶದಲ್ಲಿ  ಇಂಥ ಕಲಬೆರಕೆ ದಂದೆ ನಡೆಯುತ್ತಿರುವ ಬಗ್ಗೆ ಬೇಸರವಾಯಿತು. ಐ ಹೇಟ್ ಫೇಕ್ ಎಂಬ NGO ವೊಂದು ನಡೆಸಿದ ಕಲಬೆರಕೆ ಕುರಿತ ಜಾಗೃತಿಗೆ ನಾನು ರಾಯಭಾರಿಯಾದೆ. ಹೈದರಾಬಾದ್ನಲ್ಲಿ ಈ ಸಂಸ್ಥೆಯ ಕಾರ್ಯಕ್ರಮ ನಡೆಯಿತು. ನಟ ಮಹೇಶ್ ಬಾಬು ಅವರು ನನ್ನ ಜತೆ ಕಾರ‌್ಯಕ್ರಮದ ಮುಖ್ಯಸ್ಥರಾಗಿ ಪಾಲ್ಗೊಂಡಿದ್ದರು.

• ರಾಜಕಾರಣಿ ಮಗಳೆಂಬ ಪ್ರಭಾವ ನಿಮ್ಮ ಬೆಳವಣಿಗೆಗೆ ಸಹಕಾರಿಯಾಯಿತೇ?

ನಮ್ಮ ತಂದೆ ಪ್ರಭಾವಿ ರಾಜಕಾರಣಿ ಎಂಬ ಕಾರಣಕ್ಕೆ ನಾನು ರಾಜ್ಯದಲ್ಲಿ ಅಥವಾ ಈ ದೇಶದಲ್ಲಿ ಹೆಸರು ಮಾಡಬಹುದು. ವಿದೇಶದಲ್ಲಿ ಎಂಎನ್ಸಿ ಕಂಪನಿಗಳಿಗೆ ರಾಯಭಾರಿಯಾಗಬೇಕು ಎಂದರೆ ಅಲ್ಲಿ ನಮ್ಮಪ್ಪನ  ಪ್ರಭಾವ ನಡೆಯುತ್ತಾ? ಖಂಡಿತ ಇಲ್ಲ. ನಾನು ಸ್ವಲ್ಪ ಸ್ವಾಭಿಮಾನಿ ನನ್ನದೇ ಸ್ವಂತ ಕಾಲಿನ ಮೇಲೆ ನಿಲ್ಲಬೇಕೆಂಬ ಹಂಬಲ ಇದೆ. ಹಾಗಾಗಿ ನನ್ನದಲ್ಲದ ಊರಿನಲ್ಲಿ ನಾನಾಗಿ ಬೆಳೆದೆ. ಅಪ್ಪನ ಬೆಂಬಲ ಇದೆಯೇ ಹೊರತು, ಪ್ರಭಾವ ಇಲ್ಲ.

• ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಕಾಣಿಸಿಕೊಳ್ಳದೆ ನೀವು ಆ ಕ್ಷೇತ್ರವನ್ನು ಮಿಸ್ ಮಾಡಿಕೊಳ್ಳುತ್ತಿದ್ದೀರಾ?

ಖಂಡಿತ ಇಲ್ಲ. ಏಕೆಂದರೆ ಸಿನಿಮಾ ಆಫರ್ ಗಳು ನನಗೆ ಇಂದು ನಿನ್ನೆ ಬಂದದ್ದಲ್ಲ. ಸಿನಿಮಾಗಳಲ್ಲಿ ನಟಿಸಬೇಕೆಂದು ಅವಕಾಶಗಳು ಸರಣಿಯಾಗಿ ನನ್ನನ್ನು ಹುಡುಕಿಕೊಂಡು ಬಂದವು. ಆದರೆ, ನಾನು ತುಂಬ ಚೂಸಿ. ನನಗೆ ತಕ್ಕನಾದ ಕತೆ, ಒಂದು ಶಕ್ತಿಯುತ  ಪಾತ್ರವಿದ್ದರೆ ಮಾತ್ರ ಒಪ್ಪಿಕೊಳ್ಳುತ್ತೇನೆ?

• ಸದ್ಯ ಯಾವ ಆಫರ್ಗಳು ನಿಮ್ಮ ಕೈಲಿವೆ.

ನಾನು ನಾಯಕಿಯಾಗಿ ನಟಿಸುತ್ತಿರುವ ಬಾಲಿವುಡ್ ಸಿನಿಮಾ, ಚಿತ್ರೀಕರಣ ಹಂತದಲ್ಲಿದೆ. ಸಿನಿಮಾದ ಶೂಟಿಂಗ್ ಸದ್ಯ ಊಟಿಯಲ್ಲಿ ನಡೆಯುತ್ತಿದೆ.

• ರಾಜಕೀಯಕ್ಕೆ ಬರುವ ಆಸಕ್ತಿ ಇದೆಯೇ?

ಖಂಡಿತ ಇಲ್ಲ. ಜನ ಸೇವೆ ಮಾಡಲು ರಾಜಕೀಯ ಒಂದು ಕ್ಷೇತ್ರ ಹೌದು ಆದರೆ, ಅದೊಂದೇ ಕ್ಷೇತ್ರದಲ್ಲಿ ಜನ ಸೇವೆ ಮಾಡಲು ಅವಕಾಶ ಎಂದಲ್ಲ. ನಾನು ಹೊರಗಿನಿಂದಲೇ ಸೇವೆ ಮಾಡಲು ಇಚ್ಛಿಸುತ್ತೇನೆ.

• ನಿಮ್ಮ ಫಿಟ್ನೆಸ್‌ನ ಗುಟ್ಟೇನು?

ದಿನವೂ ಮೂರು ಗಂಟೆಗಳ ಕಾಲ ವರ್ಕ್ ಔಟ್ ಮಾಡುತ್ತೇನೆ. ನಿಯಮಿತ ಆಹಾರ, ಡಯೆಟ್ ಇವು ನನ್ನ ಆರೋಗ್ಯದ ಗುಟ್ಟು. ಸಣ್ಣ ಆಗಲು ಸಪ್ಲಿಮೆಂಟ್‌ಗಳನ್ನು ಸೇವಿಸುವುದಿಲ್ಲ.ನಿತ್ಯದ ಆಹಾರದಲ್ಲೇ ಕಂಟ್ರೋಲ್ ಮಾಡುತ್ತೇನೆ. ಟೆಕ್ವೆಂಡೊ, ಮಾರ್ಷಲ್ ಆರ್ಟ್ಸ್, 1300 ವರ್ಕ್ ಔಟ್‌ಗಳು ದಿನವೂ ಮಾಡುತ್ತೇನೆ. ಭರತ ನಾಟ್ಯ, ಏರೋಬಿಕ್ಸ್, ಸಾಲ್ಸಾ, ಸಂಬ ಮೊಂಬ ಮೊದಲಾದ ಡಾನ್ಸ್‌ಗಳು ನನ್ನ ಫಿಟ್‌ನೆಸ್ಟ್ ರಹಸ್ಯ. ಯೋಗದಿಂದ ನನ್ನಲ್ಲಿ ಧನಾತ್ಮಕ ಶಕ್ತಿ ತುಂಬಿದೆ. ರೋಪ್ ವ್ಯಾಯಾಮಗಳೂ ಕೂಡ ಮಾಡುತ್ತೇನೆ. ಬಾದಾಮಿ, ಗೋಡಂಬಿ ಮೊದಲಾದ ಐದು ನಟ್ಸ್‌ಗಳಿಂದ ದೇಹಕ್ಕೆ ಸಾಕಷ್ಟು ಎಣ್ಣೆ ಅಂಶ ಸಿಗುತ್ತದೆ. ಬ್ರೋಕ್ಲಿ ಗ್ರೀನ್ ಟೀ ನನ್ನ ಬದುಕನ್ನು ಬದಲಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ3 days ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ3 days ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ3 days ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ4 days ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ4 days ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ6 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ6 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ6 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ1 week ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

Trending