Connect with us

ಸಿನಿ ಸುದ್ದಿ

ಅತಿಲೋಕ ಸುಂದರಿ ಸಂದರ್ಶನ : ಸೆಲಬ್ರಿಟಿ ಲೋಕದ BG ಈಗ ಫುಲ್ ಬಿಝಿ..!

Published

on

ಅಂತರಾಷ್ಟ್ರೀಯ ಸೆಲೆಬ್ರಿಟಿ ಲೋಕದಲ್ಲಿ BG ಎಂಬ ಹೆಸರು ಉಲ್ಲೇಖಿಸಿದರೆ ಜನ ನಿಬ್ಬೆರಗಾಗುತ್ತಾರೆ. ಆ ಎರಡಕ್ಷರದ ಹಿಂದಿರುವ ಮಹಾ ಶಕ್ತಿಯೇ ಭವ್ಯ ಗೌಡ. ಮಾಡೆಲಿಂಗ್, ಜಾಹೀರಾತು, ಬಣ್ಣದ ಜಗತ್ತಿನಲ್ಲಿ BG ಎಂದೇ ಖ್ಯಾತರಾಗಿರುವ ಭವ್ಯ ಅವರು ಅಕ್ಷರಶಃ ಈಗ  ಬಿಝಿಯಾಗಿದ್ದಾರೆ.

ವಿಶ್ವ ಮಟ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾರತದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಹಿರಿಮೆ ಅವರದು. ಮೂಲತಃ ಮಂಡ್ಯದವರಾದ ಭವ್ಯ ಗೌಡ ಅವರು ತವರಿಗೆ ಮರಳಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಸಾಧನೆ  ಮಾಡಬೇಕೆಂಬುದು ಅವರ ಕನಸು. ಈಗಾಗಲೇ 34 ಜಾಗತಿಕ ಬ್ರ್ಯಾಂಡ್ಗಳಿಗೆ ರಾಯಭಾರಿಯಾಗಿರುವ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈ ಪರಿಯ ಫೋಟೊ ಶೂಟ್ಗಳಲ್ಲಿ ಪಾಲ್ಗೊಂಡು ಹೆಸರು ಮಾಡಿದ ವಿಶ್ವದ ಏಕೈಕ ವ್ಯಕ್ತಿ ಎಂದರೆ ಅದು ಭವ್ಯ ಗೌಡ. 2010ರಲ್ಲಿ ಯುಕೆಯಲ್ಲಿ ನಡೆದ (ಮಿಡ್ಲ್ಯಾಂಡ್ಸ್) ಮಿಸ್ ಅರ್ಥ್ ಬ್ಯೂಟಿ ಪೆಜೆಂಟ್ನಲ್ಲಿ ವಿಜೇತೆಯಾಗಿ ಹೊರಹೊಮ್ಮಿದ ಅವರು, ಗ್ರೇಟ್ ಬ್ರಿಟನ್ನ ಇತಿಹಾಸದಲ್ಲಿ ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾದ ಮೊತ್ತ ಮೊದಲ ಭಾರತೀಯರೆಂಬ ಕೀರ್ತಿಗೆ  ಭವ್ಯ ಅವರು ಪಾತ್ರರಾದರು. ಇದರ ಬೆನ್ನಿಗೇ ಅವರು ಮಿಸ್ ಇಂಗ್ಲೆಡ್ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಆಗಿ ವಿಶ್ವದ ಗಮನ ಸೆಳೆದರು.

2013ರಲ್ಲಿ ಮಿಸ್ ಕೊಲಂಬೊ ಕ್ವೀನ್ ಪಟ್ಟ ಕೂಡ ಧಕ್ಕಿಸಿಕೊಂಡ ಅವರು ಮಧುಮಗಳ ಫೋಟೊಗ್ರಫಿ (ಬ್ರೈಡಲ್ ಫೋಟೊಗ್ರಫಿ) ಮಾಡುವರ ಪಾಲಿನ ಜೀವಂತ ಗೊಂಬೆ ಎಂಬ ಅನ್ವರ್ಥನಾಮವಾಗಿ ಉಳಿದಿದ್ದಾರೆ. 2010ರಲ್ಲೇ ಇವರು ಮಿಸ್ ಕಾಮನ್ವೆಲ್ತ್ ಫೈನಲಿಸ್ಟ್ ಆಗಿಯೂ ಗಮನ ಸೆಳೆದಿದ್ದರು. ಇಂಥ ಏಳು ಪಟ್ಟಗಲನ್ನು ಅಲಂಕರಿಸಿರುವ ಅಂತರಾಷ್ಟ್ರೀಯ ಸೆಲಬ್ರಿಟಿಯೊಬ್ಬರು ಸುದ್ದಿದಿನದೊಟ್ಟಿಗೆ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. ಅವರ ಆಂತರ್ಯದ ದನಿಯನ್ನು ಹಿಡಿದಿಡುವ ಪ್ರಯತ್ನ ನಮ್ಮದು.

• ಭಾರತದ ಬಗೆಗಿನ ನಿಮ್ಮ ಕನಸುಗಳೇನು?

ಭಾರತವು 2030ರ ಹೊತ್ತಿಗೆ ಪೆಟ್ರೋಲಿಯಂ ಮುಕ್ತ ದೇಶವಾಗಿ ಹೊರಬೇಕೆಂಬುದು ನನ್ನ ಕನಸುಗಳಲ್ಲೊಂದು. ಇದಕ್ಕಾಗಿ ಕೇಂದ್ರ ಸರಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ಹೆಚ್ಚು ಪುಷ್ಠಿ ನೀಡುತ್ತಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಬೆಟೆರಾ ಎಂಬ ಈ  ಯೋಜನೆಗೆ ನಾನು ರಾಯಭಾರಿಯಾಗಿದ್ದೇನೆ. ಈ ಮೂಲಕ ದೇಶದ ಮಹೋನ್ನತ ಕನಸುಗಳಲ್ಲಿ ಒಂದು ಭಾಗವಾಗಿರುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ.

• ವಿದೇಶದಲ್ಲೇ ಹೆಚ್ಚು ಇದ್ದರೂ ಕನ್ನಡ ಪ್ರೀತಿ ಹಾಗೆ ಇದೆಯೇ?

ಕನ್ನಡ ನನ್ನ ಮನಸ್ಸಿಗೆ ಹತ್ತಿರವಾದ ಭಾಷೆ. ಏಕೆಂದರೆ ಅದು ನನ್ನ ತಾಯಿ ಸಮಾನ. ಪ್ರಪಂಚವೆಲ್ಲಾ ಗೆದ್ದು ಬರಬಹುದು ಆದರೆ, ನನ್ನ ತಾಯ್ನಾಡಿಗೆ ಏನೂ ಸಾಧನೆ ಮಾಡಲಿಲ್ಲ ಎಂದರೆ ಏನು ಪ್ರಯೋಜನ. ಕನ್ನಡದವರಾಗಿ ನಾವು ನಮ್ಮ ಮಾತೃ ಭಾಷೆ ಮಾತನಾಡಲು ಯಾವಾಗಲೂ ಹಿಂದೆ ಮುಂದೆ ನೋಡಬಾರದು. ನಾನು ಹುಟ್ಟಿದ ಈ ಮಣ್ಣಿನಲ್ಲೇ ಏನಾದರೂ ಸಾಧಿಸಿ ತೋರಿಸಬೇಕೆಂಬ ಹಂಬಲ ನನ್ನದು.

• ನೀವು ರಾಯಭಾರಿಯಾಗಿರುವ ಬ್ರ್ಯಾಂಡ್ ಉತ್ಪನ್ನಗಳ ಬಗ್ಗೆ ಹೇಳಿ

ಈವರೆಗೆ ನಾನು 34 ಬ್ರಾಂಡ್ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ. ಇಂಗ್ಲೆಂಡ್ನ ಹಲವು ಕಂಪನಿಗಳೂ ಕೂಡ ನನ್ನನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದವು. ಬಕ್, ಬ್ರೆಸ್ಟ್ ಕ್ಯಾನ್ಸರ್ ಯುನೈಟೆಡ್ ಕಿಂಗ್ಡಂ, ಕ್ರಿಶ್ಚಿಯನ್ ಆಡಿಗರ್, ಗೆಸ್, ಡಿ ಆ್ಯಡ್ ಜಿ,  ಶೀಶಾ ಗಾರ್ಡನ್, ನಿಯೋನ್ ನಿಯತಕಾಲಿಕೆ, ಏಷ್ಯನ್ ಬ್ರೈಡಲ್ ಆ್ಯಂಡ್ ಟ್ರೇನಿಂಗ್ ಅಕಾಡೆಮಿ, ಸೈಮಾ ಹೇರ್ ಆ್ಯಂಡ್ ಬ್ಯೂಟಿ, ಬ್ರಿಟೀಶ್ ರೆಡ್ ಕ್ರಾಸ್ ಇನ್ನು ಹಲವು ವಿದೇಶಿ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ.

• ನಿಮಗೆ ಖುಷಿ ಕೊಡುವ ಫೋಟೊ ಶೂಟ್ ಯಾವುದು ?

ನಾನು ಮಾಡಿರುವ ಎಲ್ಲ ಫೋಟೊ ಶೂಟ್ಗಳೂ ಖುಷಿಕೊಟ್ಟಿವೆ. ನಾನು ಕ್ಯಾಮೆರಾ ಫ್ರೆಂಡ್ಲಿ. ಯಾವ್ಯಾವ ಫೋಟೊಗಳಿಗೆ ಹೇಗೆ ಫೋಸ್ ಕೊಡಬೇಕೆಂಬುದು ಕರಗತವಾಗಿದೆ. ಹಾಗಾಗಿಯೇ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದೇನೆ. ಅಂದಹಾಗೆ  ನನ್ನ ಬ್ರೈಡಲ್ ಫೋಟೊಗಳು (ಮಧುಮಗಳ ಲುಕ್ನ ಫೋಟೊಗಳು) ಜಗತ್ಪ್ರಸಿದ್ಧಿಗಳಿಸಿವೆ. ಬ್ರೈಡಲ್ ಫೋಟೊಗ್ರಫಿಯಲ್ಲಿ ನಾನೊಂದು ವಿಷಯ ವಸ್ತುವೇ ಆಗಿದ್ದು, ನನ್ನ ಕುರಿತು ಅಧ್ಯಯನವೇ ನಡೆಯುತ್ತಿದೆ. ಕೆಲವು ಕ್ಲೈಂಟ್ಗಳು 9 ಬಾರಿ ನನ್ನ ಬಳಿಯೇ ಫೋಟೊ ಶೂಟ್ ಮಾಡಿಸಿದ ಉದಾಹರಣೆಯೂ ಇದೆ. ಕಾರಣ ನನ್ನ ವೃತ್ತಿಪರತೆ ಹಾಗೂ ಕೌಶಲ್ಯ. ಎಷ್ಟೊ ಜನರಿಗೆ ವೆಂಬ್ಲಿ ಸ್ಟೇಡಿಯಂಗೆ ಹೋಗಬೇಕೆಂಬ ಕನಸಿರುತ್ತದೆ. ನನಗೆ ಆ ಸ್ಟೇಡಿಯಂಗೆ ಕರೆಸಿ ಸನ್ಮಾನಿಸಿದರು ಇದು  ಮರೆಯಲಾಗದ ಕ್ಷಣ.

• ಮಾಡೆಲಿಂಗ್ ಕ್ಷೇತ್ರದ ಆಯ್ಕೆ ಹೇಗೆ?

ಮಾಡೆಲಿಂಗ್ ಎಂಬುದು ಈಚೆಗೆ ನನಗೆ ಬಂದ ಆಸಕ್ತಿಯಲ್ಲ. ನಾನು ಚಿಕ್ಕಂದಿನಿಂದಲೂ ಮಾಡೆಲಿಂಗ್ ಹಾಗೂ ಬಣ್ಣದ ಜಗತ್ತಿನ ಬಗ್ಗೆ ಆಕರ್ಷಿತಳಾಗಿದ್ದೆ. 9ನೇ ತರಗತಿಯಲ್ಲಿದ್ದಾಗಲೇ ರಾಂಪ್ ವಾಕ್ನ ಚಾತುರ್ಯತೆ ನನಗೆ ಲಭಿಸಿತ್ತು. ಬರುಬರುತ್ತಾ ಅದು ನನ್ನ  ವೃತ್ತಿಯಾಯಿತು. ಅದು ಇನ್ನೂ ಮುಂದಕ್ಕೆ ಹೋಗಿ ಅಂತರಾಷ್ಟ್ರೀಯ ಸೆಲಬ್ರಿಟಿಯಾಗಿ ಹೊರಹೊಮ್ಮಿದ್ದೇನೆ. ನಾನು ಈ ಸ್ಥಾನಕ್ಕೇರಿದ್ದೇನೆ ಎನ್ನುವುದಕ್ಕಿಂತ ಕನ್ನಡದ ಗೌಡತಿಯೊಬ್ಬಳು ಈ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಬಗ್ಗೆ ನನಗೇ ಹೆಮ್ಮೆಯಾಗುತ್ತದೆ.

• ಶಿಕ್ಷಣ ಮತ್ತು ಫ್ಯಾಷನ್ ಲೋಕವನ್ನು ಸರಿದೂಗಿಸಿದ್ದು ಹೇಗೆ?

ನನಗೆ ಬಣ್ಣದ ಜಗತ್ತಿನ ಬಗ್ಗೆ ಎಷ್ಟು ವ್ಯಾಮೋಹವಿತ್ತೋ ಅದೇ ರೀತಿ ಶಿಕ್ಷಣದ ಬಗ್ಗೆಯೂ ಅಷ್ಟೇ ಆಕರ್ಷಣೆ ಇತ್ತು. ಬೆಂಗಳೂರು ವಿಶ್ವ ವಿದ್ಯಾಲಯದ  ರ‌್ಯಾಂಕ್ ಹೋಲ್ಡರ್ ಆದ ನಾನು ಶಿಕ್ಷಣವನ್ನು ಎಂದಿಗೂ ನಿರ್ಲಕ್ಷಿಸಿಲ್ಲ. ಯುಕೆಯಲ್ಲಿ ಉನ್ನತ ಶಿಕ್ಷಣವನ್ನೂ ಪಡೆದೆ. ನಟನೆ ಕುರಿತು ಇನ್ನಷ್ಟು  ಅಭ್ಯಾಸ ಮಾಡುವ ನಿಟ್ಟಿನಲ್ಲಿ ಕೋರ್ಸ್ ಕೂಡ ಮುಗಿಸಿದೆ. ನಾನು ಪರಿಣತಿ ಹೊಂದಿರುವ ನಟಿ, ರಂಗಭೂಮಿಯ ಎಲ್ಲಾ ಪಟ್ಟುಗಳು ಗೊತ್ತಿವೆ. ನಾನು ಯಾವುದೇ ಕ್ಷೇತ್ರದಲ್ಲಿ ಹೆಸರು ಮಾಡಿದರೂ ಶಿಕ್ಷಣವನ್ನು ನಿರ್ಲಕ್ಷಿಸಕೂಡದು ಎಂಬುದು ಅಪ್ಪ ಹೇಳಿದ ಮಾತು. ಅದನ್ನು ಚಾಚು ತಪ್ಪದೆ ಪಾಲಿಸಿದೆ. ಅವರ ಮಾತು ನನಗೆ ವೇದವಾಖ್ಯವಾಯಿತು.

• ಕಲಬೆರಕೆ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಿದ್ದು ಹೇಗೆ?

ನಾನು ಸಾಕಿದ್ದ ಮೀನೊಂದು ಸಾವಿಗೀಡಾಯಿತು. ನಾನು ಪ್ರೀತಿಯಿಂದ ಸಾಕಿದ್ದ ಮೀನದು. ಅದರ ಬೆಲೆ ಒಂದೂವರೆ ಲಕ್ಷ ರೂಪಾಯಿ. ಪ್ರೀತಿ ಮುಂದೆ ಹಣ ದೊಡ್ಡದಲ್ಲ. ಅದಕ್ಕೆ ನಿತ್ಯವೂ ಫೀಡ್ ಮಾಡುವ ಫುಡ್ ಖಾಲಿಯಾಗಿತ್ತು. ಅದರ ಬದಲಾಗಿ ಇನ್ನೊಂದು ಫುಡ್  ಪಾಕೆಟ್ ಅನ್ನು ನನ್ನ ಶಾಲೆಯ ಸಿಬ್ಬಂದಿಯೊಬ್ಬರು ಖರೀದಿಸಿ ತಂದು ಅದಕ್ಕೆ ತಿನ್ನಿಸಿದರು. ಅದಾದ ಕೆಲವೇ ದಿನಗಳಲ್ಲಿ ಮೀನು ಸಾವಿಗೀಡಾಯಿತು. ಅದಕ್ಕೆ ಕಾರಣ ಅದು ತಿಂದಿದ್ದ ಫುಡ್. ಅವಧಿ ಮುಗಿದ ಫುಡ್ ಪೊಟ್ಟಣದ ಮೇಲೆ ದಿನಾಂಕ ಬದಲಿಸಿ ಮಾರಾಟ ಮಾಡಲಾಗಿತ್ತು. ದೇಶದಲ್ಲಿ  ಇಂಥ ಕಲಬೆರಕೆ ದಂದೆ ನಡೆಯುತ್ತಿರುವ ಬಗ್ಗೆ ಬೇಸರವಾಯಿತು. ಐ ಹೇಟ್ ಫೇಕ್ ಎಂಬ NGO ವೊಂದು ನಡೆಸಿದ ಕಲಬೆರಕೆ ಕುರಿತ ಜಾಗೃತಿಗೆ ನಾನು ರಾಯಭಾರಿಯಾದೆ. ಹೈದರಾಬಾದ್ನಲ್ಲಿ ಈ ಸಂಸ್ಥೆಯ ಕಾರ್ಯಕ್ರಮ ನಡೆಯಿತು. ನಟ ಮಹೇಶ್ ಬಾಬು ಅವರು ನನ್ನ ಜತೆ ಕಾರ‌್ಯಕ್ರಮದ ಮುಖ್ಯಸ್ಥರಾಗಿ ಪಾಲ್ಗೊಂಡಿದ್ದರು.

• ರಾಜಕಾರಣಿ ಮಗಳೆಂಬ ಪ್ರಭಾವ ನಿಮ್ಮ ಬೆಳವಣಿಗೆಗೆ ಸಹಕಾರಿಯಾಯಿತೇ?

ನಮ್ಮ ತಂದೆ ಪ್ರಭಾವಿ ರಾಜಕಾರಣಿ ಎಂಬ ಕಾರಣಕ್ಕೆ ನಾನು ರಾಜ್ಯದಲ್ಲಿ ಅಥವಾ ಈ ದೇಶದಲ್ಲಿ ಹೆಸರು ಮಾಡಬಹುದು. ವಿದೇಶದಲ್ಲಿ ಎಂಎನ್ಸಿ ಕಂಪನಿಗಳಿಗೆ ರಾಯಭಾರಿಯಾಗಬೇಕು ಎಂದರೆ ಅಲ್ಲಿ ನಮ್ಮಪ್ಪನ  ಪ್ರಭಾವ ನಡೆಯುತ್ತಾ? ಖಂಡಿತ ಇಲ್ಲ. ನಾನು ಸ್ವಲ್ಪ ಸ್ವಾಭಿಮಾನಿ ನನ್ನದೇ ಸ್ವಂತ ಕಾಲಿನ ಮೇಲೆ ನಿಲ್ಲಬೇಕೆಂಬ ಹಂಬಲ ಇದೆ. ಹಾಗಾಗಿ ನನ್ನದಲ್ಲದ ಊರಿನಲ್ಲಿ ನಾನಾಗಿ ಬೆಳೆದೆ. ಅಪ್ಪನ ಬೆಂಬಲ ಇದೆಯೇ ಹೊರತು, ಪ್ರಭಾವ ಇಲ್ಲ.

• ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಕಾಣಿಸಿಕೊಳ್ಳದೆ ನೀವು ಆ ಕ್ಷೇತ್ರವನ್ನು ಮಿಸ್ ಮಾಡಿಕೊಳ್ಳುತ್ತಿದ್ದೀರಾ?

ಖಂಡಿತ ಇಲ್ಲ. ಏಕೆಂದರೆ ಸಿನಿಮಾ ಆಫರ್ ಗಳು ನನಗೆ ಇಂದು ನಿನ್ನೆ ಬಂದದ್ದಲ್ಲ. ಸಿನಿಮಾಗಳಲ್ಲಿ ನಟಿಸಬೇಕೆಂದು ಅವಕಾಶಗಳು ಸರಣಿಯಾಗಿ ನನ್ನನ್ನು ಹುಡುಕಿಕೊಂಡು ಬಂದವು. ಆದರೆ, ನಾನು ತುಂಬ ಚೂಸಿ. ನನಗೆ ತಕ್ಕನಾದ ಕತೆ, ಒಂದು ಶಕ್ತಿಯುತ  ಪಾತ್ರವಿದ್ದರೆ ಮಾತ್ರ ಒಪ್ಪಿಕೊಳ್ಳುತ್ತೇನೆ?

• ಸದ್ಯ ಯಾವ ಆಫರ್ಗಳು ನಿಮ್ಮ ಕೈಲಿವೆ.

ನಾನು ನಾಯಕಿಯಾಗಿ ನಟಿಸುತ್ತಿರುವ ಬಾಲಿವುಡ್ ಸಿನಿಮಾ, ಚಿತ್ರೀಕರಣ ಹಂತದಲ್ಲಿದೆ. ಸಿನಿಮಾದ ಶೂಟಿಂಗ್ ಸದ್ಯ ಊಟಿಯಲ್ಲಿ ನಡೆಯುತ್ತಿದೆ.

• ರಾಜಕೀಯಕ್ಕೆ ಬರುವ ಆಸಕ್ತಿ ಇದೆಯೇ?

ಖಂಡಿತ ಇಲ್ಲ. ಜನ ಸೇವೆ ಮಾಡಲು ರಾಜಕೀಯ ಒಂದು ಕ್ಷೇತ್ರ ಹೌದು ಆದರೆ, ಅದೊಂದೇ ಕ್ಷೇತ್ರದಲ್ಲಿ ಜನ ಸೇವೆ ಮಾಡಲು ಅವಕಾಶ ಎಂದಲ್ಲ. ನಾನು ಹೊರಗಿನಿಂದಲೇ ಸೇವೆ ಮಾಡಲು ಇಚ್ಛಿಸುತ್ತೇನೆ.

• ನಿಮ್ಮ ಫಿಟ್ನೆಸ್‌ನ ಗುಟ್ಟೇನು?

ದಿನವೂ ಮೂರು ಗಂಟೆಗಳ ಕಾಲ ವರ್ಕ್ ಔಟ್ ಮಾಡುತ್ತೇನೆ. ನಿಯಮಿತ ಆಹಾರ, ಡಯೆಟ್ ಇವು ನನ್ನ ಆರೋಗ್ಯದ ಗುಟ್ಟು. ಸಣ್ಣ ಆಗಲು ಸಪ್ಲಿಮೆಂಟ್‌ಗಳನ್ನು ಸೇವಿಸುವುದಿಲ್ಲ.ನಿತ್ಯದ ಆಹಾರದಲ್ಲೇ ಕಂಟ್ರೋಲ್ ಮಾಡುತ್ತೇನೆ. ಟೆಕ್ವೆಂಡೊ, ಮಾರ್ಷಲ್ ಆರ್ಟ್ಸ್, 1300 ವರ್ಕ್ ಔಟ್‌ಗಳು ದಿನವೂ ಮಾಡುತ್ತೇನೆ. ಭರತ ನಾಟ್ಯ, ಏರೋಬಿಕ್ಸ್, ಸಾಲ್ಸಾ, ಸಂಬ ಮೊಂಬ ಮೊದಲಾದ ಡಾನ್ಸ್‌ಗಳು ನನ್ನ ಫಿಟ್‌ನೆಸ್ಟ್ ರಹಸ್ಯ. ಯೋಗದಿಂದ ನನ್ನಲ್ಲಿ ಧನಾತ್ಮಕ ಶಕ್ತಿ ತುಂಬಿದೆ. ರೋಪ್ ವ್ಯಾಯಾಮಗಳೂ ಕೂಡ ಮಾಡುತ್ತೇನೆ. ಬಾದಾಮಿ, ಗೋಡಂಬಿ ಮೊದಲಾದ ಐದು ನಟ್ಸ್‌ಗಳಿಂದ ದೇಹಕ್ಕೆ ಸಾಕಷ್ಟು ಎಣ್ಣೆ ಅಂಶ ಸಿಗುತ್ತದೆ. ಬ್ರೋಕ್ಲಿ ಗ್ರೀನ್ ಟೀ ನನ್ನ ಬದುಕನ್ನು ಬದಲಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ5 days ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ7 days ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ1 week ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ2 weeks ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ2 weeks ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ2 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

ದಿನದ ಸುದ್ದಿ2 weeks ago

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

ದಿನದ ಸುದ್ದಿ4 weeks ago

ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ...

ದಿನದ ಸುದ್ದಿ4 weeks ago

ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ...

Trending