Connect with us

ಸಿನಿ ಸುದ್ದಿ

ಅತಿಲೋಕ ಸುಂದರಿ ಸಂದರ್ಶನ : ಸೆಲಬ್ರಿಟಿ ಲೋಕದ BG ಈಗ ಫುಲ್ ಬಿಝಿ..!

Published

on

ಅಂತರಾಷ್ಟ್ರೀಯ ಸೆಲೆಬ್ರಿಟಿ ಲೋಕದಲ್ಲಿ BG ಎಂಬ ಹೆಸರು ಉಲ್ಲೇಖಿಸಿದರೆ ಜನ ನಿಬ್ಬೆರಗಾಗುತ್ತಾರೆ. ಆ ಎರಡಕ್ಷರದ ಹಿಂದಿರುವ ಮಹಾ ಶಕ್ತಿಯೇ ಭವ್ಯ ಗೌಡ. ಮಾಡೆಲಿಂಗ್, ಜಾಹೀರಾತು, ಬಣ್ಣದ ಜಗತ್ತಿನಲ್ಲಿ BG ಎಂದೇ ಖ್ಯಾತರಾಗಿರುವ ಭವ್ಯ ಅವರು ಅಕ್ಷರಶಃ ಈಗ  ಬಿಝಿಯಾಗಿದ್ದಾರೆ.

ವಿಶ್ವ ಮಟ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾರತದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಹಿರಿಮೆ ಅವರದು. ಮೂಲತಃ ಮಂಡ್ಯದವರಾದ ಭವ್ಯ ಗೌಡ ಅವರು ತವರಿಗೆ ಮರಳಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಸಾಧನೆ  ಮಾಡಬೇಕೆಂಬುದು ಅವರ ಕನಸು. ಈಗಾಗಲೇ 34 ಜಾಗತಿಕ ಬ್ರ್ಯಾಂಡ್ಗಳಿಗೆ ರಾಯಭಾರಿಯಾಗಿರುವ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈ ಪರಿಯ ಫೋಟೊ ಶೂಟ್ಗಳಲ್ಲಿ ಪಾಲ್ಗೊಂಡು ಹೆಸರು ಮಾಡಿದ ವಿಶ್ವದ ಏಕೈಕ ವ್ಯಕ್ತಿ ಎಂದರೆ ಅದು ಭವ್ಯ ಗೌಡ. 2010ರಲ್ಲಿ ಯುಕೆಯಲ್ಲಿ ನಡೆದ (ಮಿಡ್ಲ್ಯಾಂಡ್ಸ್) ಮಿಸ್ ಅರ್ಥ್ ಬ್ಯೂಟಿ ಪೆಜೆಂಟ್ನಲ್ಲಿ ವಿಜೇತೆಯಾಗಿ ಹೊರಹೊಮ್ಮಿದ ಅವರು, ಗ್ರೇಟ್ ಬ್ರಿಟನ್ನ ಇತಿಹಾಸದಲ್ಲಿ ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾದ ಮೊತ್ತ ಮೊದಲ ಭಾರತೀಯರೆಂಬ ಕೀರ್ತಿಗೆ  ಭವ್ಯ ಅವರು ಪಾತ್ರರಾದರು. ಇದರ ಬೆನ್ನಿಗೇ ಅವರು ಮಿಸ್ ಇಂಗ್ಲೆಡ್ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಆಗಿ ವಿಶ್ವದ ಗಮನ ಸೆಳೆದರು.

2013ರಲ್ಲಿ ಮಿಸ್ ಕೊಲಂಬೊ ಕ್ವೀನ್ ಪಟ್ಟ ಕೂಡ ಧಕ್ಕಿಸಿಕೊಂಡ ಅವರು ಮಧುಮಗಳ ಫೋಟೊಗ್ರಫಿ (ಬ್ರೈಡಲ್ ಫೋಟೊಗ್ರಫಿ) ಮಾಡುವರ ಪಾಲಿನ ಜೀವಂತ ಗೊಂಬೆ ಎಂಬ ಅನ್ವರ್ಥನಾಮವಾಗಿ ಉಳಿದಿದ್ದಾರೆ. 2010ರಲ್ಲೇ ಇವರು ಮಿಸ್ ಕಾಮನ್ವೆಲ್ತ್ ಫೈನಲಿಸ್ಟ್ ಆಗಿಯೂ ಗಮನ ಸೆಳೆದಿದ್ದರು. ಇಂಥ ಏಳು ಪಟ್ಟಗಲನ್ನು ಅಲಂಕರಿಸಿರುವ ಅಂತರಾಷ್ಟ್ರೀಯ ಸೆಲಬ್ರಿಟಿಯೊಬ್ಬರು ಸುದ್ದಿದಿನದೊಟ್ಟಿಗೆ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. ಅವರ ಆಂತರ್ಯದ ದನಿಯನ್ನು ಹಿಡಿದಿಡುವ ಪ್ರಯತ್ನ ನಮ್ಮದು.

• ಭಾರತದ ಬಗೆಗಿನ ನಿಮ್ಮ ಕನಸುಗಳೇನು?

ಭಾರತವು 2030ರ ಹೊತ್ತಿಗೆ ಪೆಟ್ರೋಲಿಯಂ ಮುಕ್ತ ದೇಶವಾಗಿ ಹೊರಬೇಕೆಂಬುದು ನನ್ನ ಕನಸುಗಳಲ್ಲೊಂದು. ಇದಕ್ಕಾಗಿ ಕೇಂದ್ರ ಸರಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ಹೆಚ್ಚು ಪುಷ್ಠಿ ನೀಡುತ್ತಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಬೆಟೆರಾ ಎಂಬ ಈ  ಯೋಜನೆಗೆ ನಾನು ರಾಯಭಾರಿಯಾಗಿದ್ದೇನೆ. ಈ ಮೂಲಕ ದೇಶದ ಮಹೋನ್ನತ ಕನಸುಗಳಲ್ಲಿ ಒಂದು ಭಾಗವಾಗಿರುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ.

• ವಿದೇಶದಲ್ಲೇ ಹೆಚ್ಚು ಇದ್ದರೂ ಕನ್ನಡ ಪ್ರೀತಿ ಹಾಗೆ ಇದೆಯೇ?

ಕನ್ನಡ ನನ್ನ ಮನಸ್ಸಿಗೆ ಹತ್ತಿರವಾದ ಭಾಷೆ. ಏಕೆಂದರೆ ಅದು ನನ್ನ ತಾಯಿ ಸಮಾನ. ಪ್ರಪಂಚವೆಲ್ಲಾ ಗೆದ್ದು ಬರಬಹುದು ಆದರೆ, ನನ್ನ ತಾಯ್ನಾಡಿಗೆ ಏನೂ ಸಾಧನೆ ಮಾಡಲಿಲ್ಲ ಎಂದರೆ ಏನು ಪ್ರಯೋಜನ. ಕನ್ನಡದವರಾಗಿ ನಾವು ನಮ್ಮ ಮಾತೃ ಭಾಷೆ ಮಾತನಾಡಲು ಯಾವಾಗಲೂ ಹಿಂದೆ ಮುಂದೆ ನೋಡಬಾರದು. ನಾನು ಹುಟ್ಟಿದ ಈ ಮಣ್ಣಿನಲ್ಲೇ ಏನಾದರೂ ಸಾಧಿಸಿ ತೋರಿಸಬೇಕೆಂಬ ಹಂಬಲ ನನ್ನದು.

• ನೀವು ರಾಯಭಾರಿಯಾಗಿರುವ ಬ್ರ್ಯಾಂಡ್ ಉತ್ಪನ್ನಗಳ ಬಗ್ಗೆ ಹೇಳಿ

ಈವರೆಗೆ ನಾನು 34 ಬ್ರಾಂಡ್ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ. ಇಂಗ್ಲೆಂಡ್ನ ಹಲವು ಕಂಪನಿಗಳೂ ಕೂಡ ನನ್ನನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದವು. ಬಕ್, ಬ್ರೆಸ್ಟ್ ಕ್ಯಾನ್ಸರ್ ಯುನೈಟೆಡ್ ಕಿಂಗ್ಡಂ, ಕ್ರಿಶ್ಚಿಯನ್ ಆಡಿಗರ್, ಗೆಸ್, ಡಿ ಆ್ಯಡ್ ಜಿ,  ಶೀಶಾ ಗಾರ್ಡನ್, ನಿಯೋನ್ ನಿಯತಕಾಲಿಕೆ, ಏಷ್ಯನ್ ಬ್ರೈಡಲ್ ಆ್ಯಂಡ್ ಟ್ರೇನಿಂಗ್ ಅಕಾಡೆಮಿ, ಸೈಮಾ ಹೇರ್ ಆ್ಯಂಡ್ ಬ್ಯೂಟಿ, ಬ್ರಿಟೀಶ್ ರೆಡ್ ಕ್ರಾಸ್ ಇನ್ನು ಹಲವು ವಿದೇಶಿ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದೇನೆ.

• ನಿಮಗೆ ಖುಷಿ ಕೊಡುವ ಫೋಟೊ ಶೂಟ್ ಯಾವುದು ?

ನಾನು ಮಾಡಿರುವ ಎಲ್ಲ ಫೋಟೊ ಶೂಟ್ಗಳೂ ಖುಷಿಕೊಟ್ಟಿವೆ. ನಾನು ಕ್ಯಾಮೆರಾ ಫ್ರೆಂಡ್ಲಿ. ಯಾವ್ಯಾವ ಫೋಟೊಗಳಿಗೆ ಹೇಗೆ ಫೋಸ್ ಕೊಡಬೇಕೆಂಬುದು ಕರಗತವಾಗಿದೆ. ಹಾಗಾಗಿಯೇ 30500 ಫೋಟೊಶೂಟ್ಗಳನ್ನು ಯಶಸ್ವಿಯಾಗಿ ಮುಗಿಸಿದ್ದೇನೆ. ಅಂದಹಾಗೆ  ನನ್ನ ಬ್ರೈಡಲ್ ಫೋಟೊಗಳು (ಮಧುಮಗಳ ಲುಕ್ನ ಫೋಟೊಗಳು) ಜಗತ್ಪ್ರಸಿದ್ಧಿಗಳಿಸಿವೆ. ಬ್ರೈಡಲ್ ಫೋಟೊಗ್ರಫಿಯಲ್ಲಿ ನಾನೊಂದು ವಿಷಯ ವಸ್ತುವೇ ಆಗಿದ್ದು, ನನ್ನ ಕುರಿತು ಅಧ್ಯಯನವೇ ನಡೆಯುತ್ತಿದೆ. ಕೆಲವು ಕ್ಲೈಂಟ್ಗಳು 9 ಬಾರಿ ನನ್ನ ಬಳಿಯೇ ಫೋಟೊ ಶೂಟ್ ಮಾಡಿಸಿದ ಉದಾಹರಣೆಯೂ ಇದೆ. ಕಾರಣ ನನ್ನ ವೃತ್ತಿಪರತೆ ಹಾಗೂ ಕೌಶಲ್ಯ. ಎಷ್ಟೊ ಜನರಿಗೆ ವೆಂಬ್ಲಿ ಸ್ಟೇಡಿಯಂಗೆ ಹೋಗಬೇಕೆಂಬ ಕನಸಿರುತ್ತದೆ. ನನಗೆ ಆ ಸ್ಟೇಡಿಯಂಗೆ ಕರೆಸಿ ಸನ್ಮಾನಿಸಿದರು ಇದು  ಮರೆಯಲಾಗದ ಕ್ಷಣ.

• ಮಾಡೆಲಿಂಗ್ ಕ್ಷೇತ್ರದ ಆಯ್ಕೆ ಹೇಗೆ?

ಮಾಡೆಲಿಂಗ್ ಎಂಬುದು ಈಚೆಗೆ ನನಗೆ ಬಂದ ಆಸಕ್ತಿಯಲ್ಲ. ನಾನು ಚಿಕ್ಕಂದಿನಿಂದಲೂ ಮಾಡೆಲಿಂಗ್ ಹಾಗೂ ಬಣ್ಣದ ಜಗತ್ತಿನ ಬಗ್ಗೆ ಆಕರ್ಷಿತಳಾಗಿದ್ದೆ. 9ನೇ ತರಗತಿಯಲ್ಲಿದ್ದಾಗಲೇ ರಾಂಪ್ ವಾಕ್ನ ಚಾತುರ್ಯತೆ ನನಗೆ ಲಭಿಸಿತ್ತು. ಬರುಬರುತ್ತಾ ಅದು ನನ್ನ  ವೃತ್ತಿಯಾಯಿತು. ಅದು ಇನ್ನೂ ಮುಂದಕ್ಕೆ ಹೋಗಿ ಅಂತರಾಷ್ಟ್ರೀಯ ಸೆಲಬ್ರಿಟಿಯಾಗಿ ಹೊರಹೊಮ್ಮಿದ್ದೇನೆ. ನಾನು ಈ ಸ್ಥಾನಕ್ಕೇರಿದ್ದೇನೆ ಎನ್ನುವುದಕ್ಕಿಂತ ಕನ್ನಡದ ಗೌಡತಿಯೊಬ್ಬಳು ಈ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಬಗ್ಗೆ ನನಗೇ ಹೆಮ್ಮೆಯಾಗುತ್ತದೆ.

• ಶಿಕ್ಷಣ ಮತ್ತು ಫ್ಯಾಷನ್ ಲೋಕವನ್ನು ಸರಿದೂಗಿಸಿದ್ದು ಹೇಗೆ?

ನನಗೆ ಬಣ್ಣದ ಜಗತ್ತಿನ ಬಗ್ಗೆ ಎಷ್ಟು ವ್ಯಾಮೋಹವಿತ್ತೋ ಅದೇ ರೀತಿ ಶಿಕ್ಷಣದ ಬಗ್ಗೆಯೂ ಅಷ್ಟೇ ಆಕರ್ಷಣೆ ಇತ್ತು. ಬೆಂಗಳೂರು ವಿಶ್ವ ವಿದ್ಯಾಲಯದ  ರ‌್ಯಾಂಕ್ ಹೋಲ್ಡರ್ ಆದ ನಾನು ಶಿಕ್ಷಣವನ್ನು ಎಂದಿಗೂ ನಿರ್ಲಕ್ಷಿಸಿಲ್ಲ. ಯುಕೆಯಲ್ಲಿ ಉನ್ನತ ಶಿಕ್ಷಣವನ್ನೂ ಪಡೆದೆ. ನಟನೆ ಕುರಿತು ಇನ್ನಷ್ಟು  ಅಭ್ಯಾಸ ಮಾಡುವ ನಿಟ್ಟಿನಲ್ಲಿ ಕೋರ್ಸ್ ಕೂಡ ಮುಗಿಸಿದೆ. ನಾನು ಪರಿಣತಿ ಹೊಂದಿರುವ ನಟಿ, ರಂಗಭೂಮಿಯ ಎಲ್ಲಾ ಪಟ್ಟುಗಳು ಗೊತ್ತಿವೆ. ನಾನು ಯಾವುದೇ ಕ್ಷೇತ್ರದಲ್ಲಿ ಹೆಸರು ಮಾಡಿದರೂ ಶಿಕ್ಷಣವನ್ನು ನಿರ್ಲಕ್ಷಿಸಕೂಡದು ಎಂಬುದು ಅಪ್ಪ ಹೇಳಿದ ಮಾತು. ಅದನ್ನು ಚಾಚು ತಪ್ಪದೆ ಪಾಲಿಸಿದೆ. ಅವರ ಮಾತು ನನಗೆ ವೇದವಾಖ್ಯವಾಯಿತು.

• ಕಲಬೆರಕೆ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಿದ್ದು ಹೇಗೆ?

ನಾನು ಸಾಕಿದ್ದ ಮೀನೊಂದು ಸಾವಿಗೀಡಾಯಿತು. ನಾನು ಪ್ರೀತಿಯಿಂದ ಸಾಕಿದ್ದ ಮೀನದು. ಅದರ ಬೆಲೆ ಒಂದೂವರೆ ಲಕ್ಷ ರೂಪಾಯಿ. ಪ್ರೀತಿ ಮುಂದೆ ಹಣ ದೊಡ್ಡದಲ್ಲ. ಅದಕ್ಕೆ ನಿತ್ಯವೂ ಫೀಡ್ ಮಾಡುವ ಫುಡ್ ಖಾಲಿಯಾಗಿತ್ತು. ಅದರ ಬದಲಾಗಿ ಇನ್ನೊಂದು ಫುಡ್  ಪಾಕೆಟ್ ಅನ್ನು ನನ್ನ ಶಾಲೆಯ ಸಿಬ್ಬಂದಿಯೊಬ್ಬರು ಖರೀದಿಸಿ ತಂದು ಅದಕ್ಕೆ ತಿನ್ನಿಸಿದರು. ಅದಾದ ಕೆಲವೇ ದಿನಗಳಲ್ಲಿ ಮೀನು ಸಾವಿಗೀಡಾಯಿತು. ಅದಕ್ಕೆ ಕಾರಣ ಅದು ತಿಂದಿದ್ದ ಫುಡ್. ಅವಧಿ ಮುಗಿದ ಫುಡ್ ಪೊಟ್ಟಣದ ಮೇಲೆ ದಿನಾಂಕ ಬದಲಿಸಿ ಮಾರಾಟ ಮಾಡಲಾಗಿತ್ತು. ದೇಶದಲ್ಲಿ  ಇಂಥ ಕಲಬೆರಕೆ ದಂದೆ ನಡೆಯುತ್ತಿರುವ ಬಗ್ಗೆ ಬೇಸರವಾಯಿತು. ಐ ಹೇಟ್ ಫೇಕ್ ಎಂಬ NGO ವೊಂದು ನಡೆಸಿದ ಕಲಬೆರಕೆ ಕುರಿತ ಜಾಗೃತಿಗೆ ನಾನು ರಾಯಭಾರಿಯಾದೆ. ಹೈದರಾಬಾದ್ನಲ್ಲಿ ಈ ಸಂಸ್ಥೆಯ ಕಾರ್ಯಕ್ರಮ ನಡೆಯಿತು. ನಟ ಮಹೇಶ್ ಬಾಬು ಅವರು ನನ್ನ ಜತೆ ಕಾರ‌್ಯಕ್ರಮದ ಮುಖ್ಯಸ್ಥರಾಗಿ ಪಾಲ್ಗೊಂಡಿದ್ದರು.

• ರಾಜಕಾರಣಿ ಮಗಳೆಂಬ ಪ್ರಭಾವ ನಿಮ್ಮ ಬೆಳವಣಿಗೆಗೆ ಸಹಕಾರಿಯಾಯಿತೇ?

ನಮ್ಮ ತಂದೆ ಪ್ರಭಾವಿ ರಾಜಕಾರಣಿ ಎಂಬ ಕಾರಣಕ್ಕೆ ನಾನು ರಾಜ್ಯದಲ್ಲಿ ಅಥವಾ ಈ ದೇಶದಲ್ಲಿ ಹೆಸರು ಮಾಡಬಹುದು. ವಿದೇಶದಲ್ಲಿ ಎಂಎನ್ಸಿ ಕಂಪನಿಗಳಿಗೆ ರಾಯಭಾರಿಯಾಗಬೇಕು ಎಂದರೆ ಅಲ್ಲಿ ನಮ್ಮಪ್ಪನ  ಪ್ರಭಾವ ನಡೆಯುತ್ತಾ? ಖಂಡಿತ ಇಲ್ಲ. ನಾನು ಸ್ವಲ್ಪ ಸ್ವಾಭಿಮಾನಿ ನನ್ನದೇ ಸ್ವಂತ ಕಾಲಿನ ಮೇಲೆ ನಿಲ್ಲಬೇಕೆಂಬ ಹಂಬಲ ಇದೆ. ಹಾಗಾಗಿ ನನ್ನದಲ್ಲದ ಊರಿನಲ್ಲಿ ನಾನಾಗಿ ಬೆಳೆದೆ. ಅಪ್ಪನ ಬೆಂಬಲ ಇದೆಯೇ ಹೊರತು, ಪ್ರಭಾವ ಇಲ್ಲ.

• ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಕಾಣಿಸಿಕೊಳ್ಳದೆ ನೀವು ಆ ಕ್ಷೇತ್ರವನ್ನು ಮಿಸ್ ಮಾಡಿಕೊಳ್ಳುತ್ತಿದ್ದೀರಾ?

ಖಂಡಿತ ಇಲ್ಲ. ಏಕೆಂದರೆ ಸಿನಿಮಾ ಆಫರ್ ಗಳು ನನಗೆ ಇಂದು ನಿನ್ನೆ ಬಂದದ್ದಲ್ಲ. ಸಿನಿಮಾಗಳಲ್ಲಿ ನಟಿಸಬೇಕೆಂದು ಅವಕಾಶಗಳು ಸರಣಿಯಾಗಿ ನನ್ನನ್ನು ಹುಡುಕಿಕೊಂಡು ಬಂದವು. ಆದರೆ, ನಾನು ತುಂಬ ಚೂಸಿ. ನನಗೆ ತಕ್ಕನಾದ ಕತೆ, ಒಂದು ಶಕ್ತಿಯುತ  ಪಾತ್ರವಿದ್ದರೆ ಮಾತ್ರ ಒಪ್ಪಿಕೊಳ್ಳುತ್ತೇನೆ?

• ಸದ್ಯ ಯಾವ ಆಫರ್ಗಳು ನಿಮ್ಮ ಕೈಲಿವೆ.

ನಾನು ನಾಯಕಿಯಾಗಿ ನಟಿಸುತ್ತಿರುವ ಬಾಲಿವುಡ್ ಸಿನಿಮಾ, ಚಿತ್ರೀಕರಣ ಹಂತದಲ್ಲಿದೆ. ಸಿನಿಮಾದ ಶೂಟಿಂಗ್ ಸದ್ಯ ಊಟಿಯಲ್ಲಿ ನಡೆಯುತ್ತಿದೆ.

• ರಾಜಕೀಯಕ್ಕೆ ಬರುವ ಆಸಕ್ತಿ ಇದೆಯೇ?

ಖಂಡಿತ ಇಲ್ಲ. ಜನ ಸೇವೆ ಮಾಡಲು ರಾಜಕೀಯ ಒಂದು ಕ್ಷೇತ್ರ ಹೌದು ಆದರೆ, ಅದೊಂದೇ ಕ್ಷೇತ್ರದಲ್ಲಿ ಜನ ಸೇವೆ ಮಾಡಲು ಅವಕಾಶ ಎಂದಲ್ಲ. ನಾನು ಹೊರಗಿನಿಂದಲೇ ಸೇವೆ ಮಾಡಲು ಇಚ್ಛಿಸುತ್ತೇನೆ.

• ನಿಮ್ಮ ಫಿಟ್ನೆಸ್‌ನ ಗುಟ್ಟೇನು?

ದಿನವೂ ಮೂರು ಗಂಟೆಗಳ ಕಾಲ ವರ್ಕ್ ಔಟ್ ಮಾಡುತ್ತೇನೆ. ನಿಯಮಿತ ಆಹಾರ, ಡಯೆಟ್ ಇವು ನನ್ನ ಆರೋಗ್ಯದ ಗುಟ್ಟು. ಸಣ್ಣ ಆಗಲು ಸಪ್ಲಿಮೆಂಟ್‌ಗಳನ್ನು ಸೇವಿಸುವುದಿಲ್ಲ.ನಿತ್ಯದ ಆಹಾರದಲ್ಲೇ ಕಂಟ್ರೋಲ್ ಮಾಡುತ್ತೇನೆ. ಟೆಕ್ವೆಂಡೊ, ಮಾರ್ಷಲ್ ಆರ್ಟ್ಸ್, 1300 ವರ್ಕ್ ಔಟ್‌ಗಳು ದಿನವೂ ಮಾಡುತ್ತೇನೆ. ಭರತ ನಾಟ್ಯ, ಏರೋಬಿಕ್ಸ್, ಸಾಲ್ಸಾ, ಸಂಬ ಮೊಂಬ ಮೊದಲಾದ ಡಾನ್ಸ್‌ಗಳು ನನ್ನ ಫಿಟ್‌ನೆಸ್ಟ್ ರಹಸ್ಯ. ಯೋಗದಿಂದ ನನ್ನಲ್ಲಿ ಧನಾತ್ಮಕ ಶಕ್ತಿ ತುಂಬಿದೆ. ರೋಪ್ ವ್ಯಾಯಾಮಗಳೂ ಕೂಡ ಮಾಡುತ್ತೇನೆ. ಬಾದಾಮಿ, ಗೋಡಂಬಿ ಮೊದಲಾದ ಐದು ನಟ್ಸ್‌ಗಳಿಂದ ದೇಹಕ್ಕೆ ಸಾಕಷ್ಟು ಎಣ್ಣೆ ಅಂಶ ಸಿಗುತ್ತದೆ. ಬ್ರೋಕ್ಲಿ ಗ್ರೀನ್ ಟೀ ನನ್ನ ಬದುಕನ್ನು ಬದಲಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

Published

on

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

Published

on

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್‌ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್​​ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್​ ಈಗ ಹಲವರ ಗಮನ ಸೆಳೆದಿದೆ.

ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.

ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್​ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.

ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://instagram.com/shalu2626?igshid=YmMyMTA2M2Y=

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ದಿ ಕೇರಳ ಸ್ಟೋರಿ’ ವಿವಾದ| ಲವ್ ಜಿಹಾದ್ ಅನ್ನೋದು ಸುಳ್ಳು : ಕೇರಳ ಸಿಎಂ ಪಿಣರಾಯಿ

Published

on

ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಧ್ಯ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವಿಟ್ಟುಕೊಂಡು ತಯಾರಾಗಿರುವ ಈ ಸಿನಿಮಾದಲ್ಲಿ ಐಸಿಸ್ ವಿಚಾರವನ್ನೂ ಹೇಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್‌ಗೆ ತಡೆ ಬಿದ್ದರೂ ಅಚ್ಚರಿ ಏನಿಲ್ಲ.

ಲವ್ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.

ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆಗೆದ ಸಿನಿಮಾ ಇದು ಎಂದು ನಿರ್ದೇಶಕ ಸುದಿಪ್ಲೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,ನಟಿ ಶ್ವೇತಾ ಮೆನನ್ ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ. ಸದ್ಯ ಸಿನಿಮಾ ರಿಲೀಸ್‌ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಟ್ರೇಲರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ...

ದಿನದ ಸುದ್ದಿ11 hours ago

ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್...

ಲೈಫ್ ಸ್ಟೈಲ್19 hours ago

ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!

ಸಂಜಯ್ ಹೊಯ್ಸಳ ಕೆನ್ನಾಯಿಗಳು ಕಾಡಿನ ಬೇಟೆಗಾರ ಪ್ರಾಣಿಗಳಲ್ಲಿ ಅತ್ಯಂತ ನಿಷ್ಣಾತ, ಅತ್ಯಂತ ಯಶಸ್ವಿ ಬೇಟೆಗಾರ ಪ್ರಾಣಿಗಳು. ಅತ್ಯಂತ ಬಲಶಾಲಿ ಪ್ರಾಣಿಯಾದ ಹುಲಿಗಳ ಬೇಟೆಯ ಯಶಸ್ಸಿನ ಸರಾಸರಿಯೆ ಕೇವಲ...

ದಿನದ ಸುದ್ದಿ20 hours ago

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಬೆಳಗ್ಗೆ ವಿಶೇಷ...

ದಿನದ ಸುದ್ದಿ22 hours ago

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು. ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ...

ದಿನದ ಸುದ್ದಿ23 hours ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 5 ಮತ್ತು 6 ರಂದು...

ದಿನದ ಸುದ್ದಿ23 hours ago

ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 8 ಮತ್ತು 9 ರಂದು 25...

ದಿನದ ಸುದ್ದಿ23 hours ago

ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಜೂನ್ 5 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 5 ರಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ...

ದಿನದ ಸುದ್ದಿ2 days ago

ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನ 2 ವರ್ಷದ ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ...

ದಿನದ ಸುದ್ದಿ2 days ago

ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ

ಸುದ್ದಿದಿನ,ದಾವಣಗೆರೆ : ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು. ಈ ಶಾಲೆಯನ್ನು ನಿರ್ಮಿಸಿ...

Trending