Connect with us

ದಿನದ ಸುದ್ದಿ

ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು : ಐಪಿಎಸ್ ಅಧಿಕಾರಿ ಅಣ್ಣಾಮಲೈ ಭಾವನಾತ್ಮಕ ಪತ್ರ, ಮಿಸ್ ಮಾಡ್ದೆ ಓದಿ

Published

on

 

ಸ್ನೇಹಿತರೇ ಮತ್ತು ನನ್ನ ಹಿತೈಷಿಗಳೇ,

ಎಲ್ಲರಿಗೂ ನಮಸ್ಕಾರ. ನನ್ನ ರಾಜೀನಾಮೆ ಕುರಿತು ಪ್ರಕಟವಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಕೆಲವೊಂದು ವಿಜಯಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.

ಇಂದು, ಮೇ 28, 2019 ರಂದು ನಾನು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇದರ ಆಡಳಿತಾತ್ಮಕ ಪ್ರಕ್ರಿಯೆ ಮುಗಿಯಲು ಕೆಲ ಸಮಯ ತಗಲಬಹುದು. ಈ ಕುರಿತು ಚರ್ಚೆಯಾಗುತ್ತಿರುವ ಎಲ್ಲಾ ಊಹಾಪೋಹಗಳಿಗೆ ಪೂರ್ಣವಿರಾಮವಿಡಲು ನಾನೇ ಖುದ್ದು ಇದನ್ನು ಬರೆಯುತ್ತಿದ್ದೇನೆ.

6 ತಿಂಗಳ ಸುದೀರ್ಘವಾದ ಗಹನ ಚಿಂತನೆಯ ಬಳಿಕ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಕಳೆದ 9 ವರ್ಷಗಳಿಂದ ನಾನು ಈ ಸೇವೆಯಲ್ಲಿದ್ದು, ಪ್ರತಿ ಕ್ಷಣಗಳನ್ನು ‘ಖಾಕಿ’ ತತ್ವಕ್ಕೆ ಬದ್ಧವಾಗಿ ನಡೆದುಕೊಂಡು ಬಂದಿದ್ದೇನೆ. ಈ ಖಾಕಿಯಲ್ಲಿ ಸಿಗುವ ಹೆಮ್ಮೆಯ ಕ್ಷಣ ಹಾಗೂ ಸಹೋದ್ಯೋಗಿಗಳೊಂದಿಗೆ ಕಳೆದ ಕ್ಷಣಗಳು ಅವಿಸ್ಮರಣಿಯ. ಒಂದರ್ಥದಲ್ಲಿ ಪೊಲೀಸ್ ಸೇವೆಯೆಂದರೆ ದೇವರಿಗೆ ಅತೀ ಇಷ್ಟವಾದುದು ಎಂದು ನಾನು ನಂಬಿದ್ದೇನೆ. ಅತೀ ಒತ್ತಡದಲ್ಲಿ ನಿರ್ವಹಿಸುವ ಈ ಕೆಲಸದಲ್ಲಿ ಕುಂದು ಕೊರತೆಗಳು ಸಾಮಾನ್ಯ. ಅದೆಷ್ಟೋ ಕಾರ್ಯಕ್ರಮಗಳನ್ನು ನಾನು ಮಿಸ್ ಮಾಡಿದ್ದೇನೆ; ಹಲವು ಬಾರಿ ನನ್ನ ಕಷ್ಟಕಾಲದಲ್ಲಿ ನಿಂತವರ ಜೊತೆ ನನಗೆ ನಿಲ್ಲಲಿಕ್ಕಾಗಲಿಲ್ಲ, ಹಲವೊಮ್ಮೆ ಅಸಹಾಯಕತನ ಅನುಭವಿಸದ್ದೇನೆ; ಕೆಲವೊಮ್ಮೆ, ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿದ್ದೇನೆ.

ಕಳೆದ ವರ್ಷ ಕೈಲಾಶ ಮಾನಸಸರೋವರಕ್ಕೆ ನೀಡಿದ ಭೇಟಿ ನನ್ನ ಕಣ್ಣನ್ನು ತೆರೆಸಿದೆ. ಅದು, ಜೀವನದಲ್ಲಿ ಆದ್ಯತೆಯ ವಿಷಯಗಳನ್ನು ನನಗೆ ತಿಳಿಸಿಕೊಟ್ಟಿದೆ. ಮಧುಕರ್ ಶೆಟ್ಟಿ ಸರ್ ನಿಧನವು ಜೀವನದೊಳಗೆ ಮತ್ತೊಮ್ಮೆ ಆತ್ಮಾವಲೋಕನ ಮಾಡಲು ಪ್ರೇರೇಪಿಸಿದೆ.

ಎಲ್ಲಾ ಒಳ್ಳೆ ಕೆಲಸಗಳು ಒಂದು ದಿನ ಕೊನೆಯಾಗಲೇ ಬೇಕು, ಹಾಗೇಯೇ ನನ್ನ ಖಾಕಿ ದಿನಗಳೂ.. ಈ ನಿಟ್ಟಿನಲ್ಲಿ, ಹಿಂದೆನೇ ನಿರ್ಧಾರ ತೆಗೆದುಕೊಂಡಿದ್ದೆಯಾದರೂ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜೀನಾಮೆ ನೀಡಿ ಸರ್ಕಾರಕ್ಕೆ ಸಮಸ್ಯೆ ಉಂಟುಮಾಡುವುದು ಸರಿ ಎನಿಸಲಿಲ್ಲ. ನನ್ನ ರಾಜೀನಾಮೆಯಿಂದ ನಿಮಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ. ಪ್ರಾಮಾಣಿಕವಾಗಿ ಹೇಳೋದಾದರೆ, ನಾನಿದನ್ನು ಈಗ ಮಾಡಲೇಬೇಕು. ಈ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ನನ್ನ ಜೊತೆ ನಿಂತ ನನ್ನ ಆಪ್ತ ಸ್ನೇಹಿತೆ, ನನ್ನ ಮಡದಿಗೆ ಇದು ಬಹಳ ಭಾವನಾತ್ಮಕ ಸನ್ನಿವೇಶ.

ಮುಂದೇನು?

ನನ್ನ ಮುಂದಿನ ನಡೆಯೇನು ಎಂದು ತಿಳಿಯಲು ಬಯಸುವವರಿಗೆ ಹೇಳೋದಾದರೆ, ಬಹಳ ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳಲು, ನಾನೊಬ್ಬ ಸಣ್ಣ ಮನುಷ್ಯ. ನಾನು ಜೀವನದಲ್ಲಿ ಕಳೆದುಕೊಂಡಿರುವ ಸಣ್ಣ ಪುಟ್ಟ ಸಂತೋಷಗಳನ್ನು ಮತ್ತೆ ಪಡೆಯಲು ಸಮಯ ಕಳೆಯಬೇಕು. ಬೆಳೆಯುತ್ತಿರುವ ನನ್ನ ಮಗನಿಗೆ ಒಳ್ಳೆ ತಂದೆಯಾಗಬೇಕು. ಆತನಿಗೆ ನನ್ನ ಅಗತ್ಯವಿದೆ.

ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು. ನಾನೀಗ ಪೊಲೀಸ್ ಅಧಿಕಾರಿಯಲ್ಲ, ನಾನೇ ಸಾಕಿದ ಕುರಿಗಳೂ ನಾನು ಹೇಳಿದ ಮಾತನ್ನು ಕೇಳುತ್ತವೋ, ಇಲ್ಲ ಗೊತ್ತಿಲ್ಲ. ಸಿಕ್ಕಿರುವ ಅವಕಾಶಗಳ ಬಗ್ಗೆ ಮಾತನಾಡಲು ನನ್ನಂಥ ನಶ್ವರ ಮನುಷ್ಯನಿಗೆ, ಜೀವನವು ಸಿಕ್ಕಿರುವ ಒಂದು ಬಲುದೊಡ್ಡ ಅವಕಾಶ.

ನನ್ನ ವೃತ್ತಿ ಜೀವನದ ಪ್ರತಿ ಹೆಜ್ಜೆಯಲ್ಲೂ, ನ್ಯಾಯದ ಹೋರಾಟದಲ್ಲಿ ನನ್ನ ಜೊತೆ ನಿಂತ ಕಾರ್ಕಳ, ಉಡುಪಿ ಮತ್ತು ಬೆಂಗಳೂರಿನ ಜನರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಅಪೂರ್ಣವಾಗಿದ್ದ ನನ್ನನ್ನು ಪರಿಪೂರ್ಣ ಮನುಷ್ಯನಾಗಿ ರೂಪಿಸಿದ್ದು ಈ ಜನ. ನನಗೆ ವೃತ್ತಿಪಾಠವನ್ನು ಕಲಿಸಿದ ಹಿರಿಯ ಸಹದ್ಯೋಗಿಗಳ ಮಾರ್ಗದರ್ಶನ ಹಾಗೂ ವೃತ್ತಿನಿಷ್ಠರಾಗಿರುವ ಕಿರಿಯ ಸಹದ್ಯೋಗಿಗಳನ್ನು ನಾನು ಬಹಳ ಮಿಸ್ ಮಾಡುವೆ. ಹಿರಿಯ ಕಿರಿಯ ಪೇದೆಗಳನ್ನೂ ಅಷ್ಟೇ ಮಿಸ್ ಮಾಡುವೆ. ನಾನು ಅವರಿಗಾಗಿ ಜೀವಿಸಿದ್ದೇನೆ, ಅವರ ಹಕ್ಕು-ಉತ್ತಮ ಜೀವನ ಗುಣಮಟ್ಟ ಅವರಿಗೆ ಸಿಗುವಂತಾಗಲು ನಾನು ಪರಿಶ್ರಮ ಪಟ್ಟಿದ್ದೇನೆ.

ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಾನು ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ನನಗಿದೆ. ಒಂದು ವೇಳೆ ನನ್ನಿಂದ ಯಾವುದೇ ತಪ್ಪಾಗಿದ್ದರೂ, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ನಾನೂ ನಿಮ್ಮಂತೆ ಒಬ್ಬ ಮನುಷ್ಯ.

ನಾನು ನಿಮ್ಮೆಲ್ಲರನ್ನು ಮಿಸ್ ಮಾಡ್ತೇನೆ, ವಿಶೇಷವಾಗಿ ನಿಮ್ಮಲ್ಲೆರ ಪ್ರೀತಿ ಹಾಗೂ ವಿಶ್ವಾಸವನ್ನು.

ನಿಮ್ಮ ಪ್ರೀತಿಯ

ಅಣ್ಣಾಮಲೈ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ7 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ1 day ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ2 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ2 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ3 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ6 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ6 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ7 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending