ದಿನದ ಸುದ್ದಿ
ಕೊರೊನಾವೈರಸ್ ಮಹಾಮಾರಿ : ಇರಾನ್ ದಿಗ್ಬಂಧನ ತೆಗೆಯಲು ಆಗ್ರಹ
ಇರಾನ್ ಕೊರೊನಾವೈರಸ್ ಮಹಾಮಾರಿಯಿಂದ ಮೂರನೇ ಅತಿ ಹೆಚ್ಚು ಪೀಡಿತವಾದ ದೇಶವಾಗಿದ್ದು, ಅದರ ವಿರುದ್ಧ ಕ್ರಮಕೈಗೊಳ್ಳಲು ಅನುವಾಗುವಂತೆ ಅಮೆರಿಕ ಅದರ ಮೇಲೆ ವಿಧಿಸಿರುವ ಕಟುವಾದ ಆರ್ಥಿಕ ದಿಗ್ಬಂಧನದ ಕ್ರಮಗಳನ್ನು ಹಿಂತೆಗೆಯಬೇಕೆಂದು ಹಲವು ವಿಭಾಗಗಳಿಂದ ಆಗ್ರಹಪೂರ್ವಕ ಕರೆ ನೀಡಲಾಗುತ್ತಿದೆ. ಇರಾನ್ ನಲ್ಲಿ ಕೊರೊನಾವೈರಸ್ ಸೋಂಕು ತಗಲಿದವರ ಸಂಖ್ಯೆ (ಮಾ. 17ರ ಹೊತ್ತಿಗೆ) 16 ಸಾವಿರದಾಟಿದ್ದು ಸಾವುಗಳ ಸಂಖ್ಯೆ 1000 ಸಮೀಪಿಸಿದೆ. ಪಶ್ಚಿಮ ಏಶ್ಯಾದಲ್ಲೆ ಉತ್ತಮ ವೈದ್ಯಕೀಯ ಸೇವೆ ಹೊಂದಿರುವ ಇರಾನ್ ನ ವೈದ್ಯಕೀಯ ವ್ಯವಸ್ಥೆ ಅಮೆರಿಕದ ಆರ್ಥಿಕ ದಿಗ್ಬಂಧನದಿಂದಾಗಿ ದುರ್ಭರ ಸ್ಥಿತಿಯಲ್ಲಿದೆ.
ಅಮೆರಿಕದ ಆರ್ಥಿಕ ದಿಗ್ಬಂಧನಗಳು ಸೃಷ್ಟಿಸಿರುವ ವೈದ್ಯಕೀಯ ಸಲಕರಣೆ, ಔಷಧಿ ಇತ್ಯಾದಿಗಳ ತೀವ್ರ ಕೊರತೆಯಿಂದಾಗಿ ಇರಾನ್ ನ ವೈದ್ಯಕೀಯ ವ್ಯವಸ್ಥೆ ಸಾಮಾನ್ಯ ಸ್ಥಿತಿಯನ್ನು ಸಹ ನಿಭಾಯಿಸಲಾಗದ ದುಸ್ಥಿತಿಯಲ್ಲಿದೆ. ಕೊರೊನಾವೈರಸ್ ಸೋಂಕು ತಗಲಿದವರ ಮಹಾಪೂರದ ಅಸಾಮಾನ್ಯ ಸ್ಥಿತಿಯನ್ನು ಎದುರಿಸುವ ಸ್ಥಿತಿಯಲ್ಲಿ ಅದು ಖಂಡಿತ ಇಲ್ಲ. ಕೋಟಿಗಟ್ಟಲೆ ಮುಖಗವುಸು (ಮಾಸ್ಕ್) ಗಳನ್ನು ಅದು ತುರ್ತಾಗಿ ಆಮದು ಮಾಡಬೇಕಾಗಿದೆ. ಆದರೆ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗುತ್ತಿಲ್ಲ. ಅದು ಕೊರೊನಾವೈರಸ್ ವಿರುದ್ಧ ಹೋರಾಡುವ ಸ್ಥಿತಿಯಲ್ಲಿ ಇಲ್ಲ. ಅಮೆರಿಕ ಇಂತಹ ಪರಿಸ್ಥಿತಿಯಲ್ಲೂ ಆರ್ಥಿಕ ದಿಗ್ಬಂಧನಗಳನ್ನು ಮುಂದುವರೆಸಿರುವುದನ್ನು ಇರಾನಿನ ವಿದೇಶ ಸಚಿವ“ಮೆಡಿಕಲ್ ಭಯೋತ್ಪಾದನೆ” ಮತ್ತು “ಅನೈತಿಕ’ ಕ್ರಮ ಎಂದುಕರೆದಿದ್ದಾರೆ.
ದಿಗ್ಬಂಧನ ಔಷಧಿಗೆ ಅನ್ವಯವಾಗುವುದಿಲ್ಲ ಎಂದು ಅಮೆರಿಕ ಹೇಳುತ್ತದೆ. ಆದರೆ ವಾಸ್ತವದಲ್ಲಿ ಇರಾನಿಗೆ ಯಾವುದೇ ವೈದ್ಯಕೀಯ ನೆರವು ನೀಡುವ ಕಂಪನಿಗಳ ಅಥವಾಸ್ವಿಸ್ ಮಾನವೀಯ ಸಂಸ್ಥೆಗಳ ಮೇಲೂ ನಿರ್ಬಂಧ ಹೇರುವ ಮೂಲಕ ಔಷಧಿ ಪೂರೈಕೆಯಾಗದಂತೆ ನೋಡಿಕೊಳ್ಳುತ್ತಿದೆ. ವಿದೇಶದಲ್ಲಿರುವ ಇರಾನ್ ನ ಹಣಕಾಸು ಮೂಲಗಳನ್ನು ಬ್ಲಾಕ್ ಮಾಡುವ ಮೂಲಕ ಅದುಯಾವುದೇ ತುರ್ತು ಖರೀದಿ ಮಾಡದಂತೆ ಮಾಡಿದೆಎಂದು ಇರಾನ್ ಸರ್ಕಾರದ ಮೂಲಗಳು ತಿಳಿಸಿವೆ.
ಅಮೆರಿಕದ ಮತ್ತು ಜಗತ್ತಿನ ಎಲ್ಲೆಡೆ ಹಲವಾರು ಮಾನವೀಯ ಧೋರಣೆಯ ಎನ್.ಜಿ.ಒ ಗಳು, ಚಳುವಳಿಗಳು, ಪ್ರಗತಿಪರ ವ್ಯಕ್ತಿಗಳು ಸಂಘಟನೆಗಳು ಕೊರೊನಾವೈರಸ್ ಮಹಾಮಾರಿಯಿಂದ ಸಾವಿರಾರು ಜೀವಗಳನ್ನು ರಕ್ಷಿಸುವ ದೃಷ್ಟಿಯಿಂದ ಇರಾನ್ ಮೇಲಿನ ದಿಗ್ಬಂಧನ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿವೆ, ಮನವಿ ಮಾಡಿವೆ. ಅಧ್ಯಕ್ಷ ಟ್ರಂಪ್ ಇದಕ್ಕೆಲ್ಲ ಸ್ಪಂದಿಸುವ ವ್ಯಕ್ತಿಯಲ್ಲ ಎಂದು ಅವರಿಗೆಲ್ಲ ಗೊತ್ತಿರುವುದರಿಂದ ಅವರಲ್ಲಿ ಹಲವರು ಈಗಾಗಲೇ ವೈದ್ಯಕೀಯ ಉಪಕರಣ, ಔಷಧಿ ಮತ್ತಿತರ ಕೊರೊನಾವೈರಸ್ ಮಹಾಮಾರಿಯ ವಿರುದ್ಧ ಹೋರಾಟಕ್ಕೆ ಬೇಕಾಗುವ ಸಲಕರಣೆಗಳ ಉತ್ಪಾದಕರು ಹಂಚಿಕೆದಾರರು ಅಮೆರಿಕದ ದಿಗ್ಬಂಧನ ಧಿಕ್ಕರಿಸಿ ಇವನ್ನು ಇರಾನಿಗೆ ಕಳಿಸಲು ಮನವಿ ಮಾಡಿದ್ದಾರೆ. ಇದರ ಸುತ್ತಜಾಗತಿಕ ಚಳುವಳಿಯನ್ನು ಹರಿಯಬಿಡಲು ಪ್ರಯತ್ನಿಸುತ್ತಿದ್ದಾರೆ.
ಅಮೆರಿಕದ ದಿಗ್ಬಂಧನವನ್ನು ಧಿಕ್ಕರಿಸಿ ಚೀನಾ ಈಗಾಗಲೇ ಇರಾನಿಗೆ ವೈದ್ಯಕೀಯ ನೆರವು ಕಳಿಸುತ್ತಾ ಬಂದಿದೆ. ಅಮೆರಿಕಕ್ಕೆ ದಿಗ್ಬಂಧನವನ್ನು ಹಿಂತೆಗೆಯಬೇಕೆಂದು ಸಹ ಅದು ಆಗ್ರಹಪಡಿಸಿದೆ. ರಶ್ಯ ಸಹ ಅದೇ ಆಗ್ರಹವನ್ನು ಮಾಡಿದೆ. “ಜಾಗತಿಕ ಮಹಾಮಾರಿಯ ಸಮಯ, ಪ್ರಾದೇಶಿಕ-ರಾಜಕೀಯ ಮೇಲಾಟದಲ್ಲಿ ತೊಡಗುವ ಸಮಯವಲ್ಲ. ಅದೂ ಯಾವುದೇ ಆಧಾರವಿಲ್ಲದ ತನ್ನ ಹಿತಾಸಕ್ತಿ ಕಾಪಾಡಲು ಅಮೆರಿಕದಲ್ಲಿ ಉತ್ಪಾದಿಸಲಾದ ಆಪಾದನೆಗಳನ್ನು ಮಾಡುತ್ತಾಕೂಡುವ ಸಮಯವಲ್ಲ” ಎಂದು ರಶ್ಯದ ವಿದೇಶ ಸಚಿವಾಲಯ ಹೇಳಿದೆ. ಇರಾನಿನ ಕೊರೊನಾವೈರಸ್ ಮಹಾಮಾರಿಗೆ ಬಲಿಯಾದವರಲ್ಲಿ ಅಮೆರಿಕದ ದಿಗ್ಬಂಧನಕ್ಕೆ ಬಲಿಯಾದವರೇ ಹೆಚ್ಚು. ಅದನ್ನು ಹಿಂತೆಗೆಯದಿದ್ದರೆ ಅದರ ಬಲಿಗಳ ಸಂಖ್ಯೆ ಹೆಚ್ಚಲಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
(ಈ ವಾರದ ಜನಶಕ್ತಿ ವಾಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ.
ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು. 5 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ, 6ನೇ ಹಂತದ 58 ಕ್ಷೇತ್ರಗಳಲ್ಲಿ ಒಟ್ಟಾರೆ ಶೇಕಡ 57.70 ರಷ್ಟು ಮತದಾನವಾಗಿದೆ.
ಬಿಹಾರದಲ್ಲಿ ಶೇಕಡ 52.24, ಜಾರ್ಖಂಡ್ನಲ್ಲಿ ಶೇಕಡ 61.41, ಹರ್ಯಾಣzಲ್ಲಿ ಶೇಕಡ 55.93, ಒಡಿಶಾದಲ್ಲಿ ಶೇಕಡ 59.60, ಉತ್ತರಪ್ರದೇಶದಲ್ಲಿ 52.02 ಮತ್ತು ಪಶ್ಚಿಮಬಂಗಾಳದಲ್ಲಿ 77.99, ದೆಹಲಿಯಲ್ಲಿ 53.73 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 51.35ರಷ್ಟು ಮತದಾನವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ
ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಆದಿಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ದೂರಿನ ಬೆನ್ನಲ್ಲೇ ಆದಿಲ್ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.
ಕರೆತಂದ ಕೆಲವೇ ನಿಮಿಷದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಆದಿಲ್ ಸಾವು ಬೆನ್ನಲ್ಲೇ ರೊಚ್ಚಿಗೆದ್ದ ಜನರು, ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
- ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
- ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
- ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್ಐಎ ತಿಳಿಸಿದೆ.
- ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್ನ ಬುಸಾನನ್ ಆಂಗ್ಬಾಮ್ರುಂಗ್ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
- ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ
-
ದಿನದ ಸುದ್ದಿ6 days ago
ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ
-
ದಿನದ ಸುದ್ದಿ7 days ago
ಕವಿತೆ | ಏಜಾಕ್ಸ್ ಸಿಂದೂ ನೆಲದಲಿ ಪ್ರವೇಶಿಸಿದ ಪ್ರೇತ..!
-
ದಿನದ ಸುದ್ದಿ7 days ago
ಐದನೇ ಹಂತದ ಲೋಕಸಭಾ ಚುನಾವಣೆ; ನಾಳೆ ಮತದಾನ
-
ದಿನದ ಸುದ್ದಿ7 days ago
ಲೋಕಸಭೆ ಚುನಾವಣೆ | ಆರನೇ ಹಂತ ; ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ..?
-
ಕ್ರೀಡೆ6 days ago
ಬೆಳಗಿನ ಸುದ್ದಿ ಮುಖ್ಯಾಂಶಗಳು
-
ದಿನದ ಸುದ್ದಿ6 days ago
ಪರಿಶಿಷ್ಟ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಹೆಚ್ಚಳ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ | ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ