ದಿನದ ಸುದ್ದಿ
ಕೊರೊನಾವೈರಸ್ ಮಹಾಮಾರಿ : ಇರಾನ್ ದಿಗ್ಬಂಧನ ತೆಗೆಯಲು ಆಗ್ರಹ

ಇರಾನ್ ಕೊರೊನಾವೈರಸ್ ಮಹಾಮಾರಿಯಿಂದ ಮೂರನೇ ಅತಿ ಹೆಚ್ಚು ಪೀಡಿತವಾದ ದೇಶವಾಗಿದ್ದು, ಅದರ ವಿರುದ್ಧ ಕ್ರಮಕೈಗೊಳ್ಳಲು ಅನುವಾಗುವಂತೆ ಅಮೆರಿಕ ಅದರ ಮೇಲೆ ವಿಧಿಸಿರುವ ಕಟುವಾದ ಆರ್ಥಿಕ ದಿಗ್ಬಂಧನದ ಕ್ರಮಗಳನ್ನು ಹಿಂತೆಗೆಯಬೇಕೆಂದು ಹಲವು ವಿಭಾಗಗಳಿಂದ ಆಗ್ರಹಪೂರ್ವಕ ಕರೆ ನೀಡಲಾಗುತ್ತಿದೆ. ಇರಾನ್ ನಲ್ಲಿ ಕೊರೊನಾವೈರಸ್ ಸೋಂಕು ತಗಲಿದವರ ಸಂಖ್ಯೆ (ಮಾ. 17ರ ಹೊತ್ತಿಗೆ) 16 ಸಾವಿರದಾಟಿದ್ದು ಸಾವುಗಳ ಸಂಖ್ಯೆ 1000 ಸಮೀಪಿಸಿದೆ. ಪಶ್ಚಿಮ ಏಶ್ಯಾದಲ್ಲೆ ಉತ್ತಮ ವೈದ್ಯಕೀಯ ಸೇವೆ ಹೊಂದಿರುವ ಇರಾನ್ ನ ವೈದ್ಯಕೀಯ ವ್ಯವಸ್ಥೆ ಅಮೆರಿಕದ ಆರ್ಥಿಕ ದಿಗ್ಬಂಧನದಿಂದಾಗಿ ದುರ್ಭರ ಸ್ಥಿತಿಯಲ್ಲಿದೆ.
ಅಮೆರಿಕದ ಆರ್ಥಿಕ ದಿಗ್ಬಂಧನಗಳು ಸೃಷ್ಟಿಸಿರುವ ವೈದ್ಯಕೀಯ ಸಲಕರಣೆ, ಔಷಧಿ ಇತ್ಯಾದಿಗಳ ತೀವ್ರ ಕೊರತೆಯಿಂದಾಗಿ ಇರಾನ್ ನ ವೈದ್ಯಕೀಯ ವ್ಯವಸ್ಥೆ ಸಾಮಾನ್ಯ ಸ್ಥಿತಿಯನ್ನು ಸಹ ನಿಭಾಯಿಸಲಾಗದ ದುಸ್ಥಿತಿಯಲ್ಲಿದೆ. ಕೊರೊನಾವೈರಸ್ ಸೋಂಕು ತಗಲಿದವರ ಮಹಾಪೂರದ ಅಸಾಮಾನ್ಯ ಸ್ಥಿತಿಯನ್ನು ಎದುರಿಸುವ ಸ್ಥಿತಿಯಲ್ಲಿ ಅದು ಖಂಡಿತ ಇಲ್ಲ. ಕೋಟಿಗಟ್ಟಲೆ ಮುಖಗವುಸು (ಮಾಸ್ಕ್) ಗಳನ್ನು ಅದು ತುರ್ತಾಗಿ ಆಮದು ಮಾಡಬೇಕಾಗಿದೆ. ಆದರೆ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗುತ್ತಿಲ್ಲ. ಅದು ಕೊರೊನಾವೈರಸ್ ವಿರುದ್ಧ ಹೋರಾಡುವ ಸ್ಥಿತಿಯಲ್ಲಿ ಇಲ್ಲ. ಅಮೆರಿಕ ಇಂತಹ ಪರಿಸ್ಥಿತಿಯಲ್ಲೂ ಆರ್ಥಿಕ ದಿಗ್ಬಂಧನಗಳನ್ನು ಮುಂದುವರೆಸಿರುವುದನ್ನು ಇರಾನಿನ ವಿದೇಶ ಸಚಿವ“ಮೆಡಿಕಲ್ ಭಯೋತ್ಪಾದನೆ” ಮತ್ತು “ಅನೈತಿಕ’ ಕ್ರಮ ಎಂದುಕರೆದಿದ್ದಾರೆ.
ದಿಗ್ಬಂಧನ ಔಷಧಿಗೆ ಅನ್ವಯವಾಗುವುದಿಲ್ಲ ಎಂದು ಅಮೆರಿಕ ಹೇಳುತ್ತದೆ. ಆದರೆ ವಾಸ್ತವದಲ್ಲಿ ಇರಾನಿಗೆ ಯಾವುದೇ ವೈದ್ಯಕೀಯ ನೆರವು ನೀಡುವ ಕಂಪನಿಗಳ ಅಥವಾಸ್ವಿಸ್ ಮಾನವೀಯ ಸಂಸ್ಥೆಗಳ ಮೇಲೂ ನಿರ್ಬಂಧ ಹೇರುವ ಮೂಲಕ ಔಷಧಿ ಪೂರೈಕೆಯಾಗದಂತೆ ನೋಡಿಕೊಳ್ಳುತ್ತಿದೆ. ವಿದೇಶದಲ್ಲಿರುವ ಇರಾನ್ ನ ಹಣಕಾಸು ಮೂಲಗಳನ್ನು ಬ್ಲಾಕ್ ಮಾಡುವ ಮೂಲಕ ಅದುಯಾವುದೇ ತುರ್ತು ಖರೀದಿ ಮಾಡದಂತೆ ಮಾಡಿದೆಎಂದು ಇರಾನ್ ಸರ್ಕಾರದ ಮೂಲಗಳು ತಿಳಿಸಿವೆ.
ಅಮೆರಿಕದ ಮತ್ತು ಜಗತ್ತಿನ ಎಲ್ಲೆಡೆ ಹಲವಾರು ಮಾನವೀಯ ಧೋರಣೆಯ ಎನ್.ಜಿ.ಒ ಗಳು, ಚಳುವಳಿಗಳು, ಪ್ರಗತಿಪರ ವ್ಯಕ್ತಿಗಳು ಸಂಘಟನೆಗಳು ಕೊರೊನಾವೈರಸ್ ಮಹಾಮಾರಿಯಿಂದ ಸಾವಿರಾರು ಜೀವಗಳನ್ನು ರಕ್ಷಿಸುವ ದೃಷ್ಟಿಯಿಂದ ಇರಾನ್ ಮೇಲಿನ ದಿಗ್ಬಂಧನ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿವೆ, ಮನವಿ ಮಾಡಿವೆ. ಅಧ್ಯಕ್ಷ ಟ್ರಂಪ್ ಇದಕ್ಕೆಲ್ಲ ಸ್ಪಂದಿಸುವ ವ್ಯಕ್ತಿಯಲ್ಲ ಎಂದು ಅವರಿಗೆಲ್ಲ ಗೊತ್ತಿರುವುದರಿಂದ ಅವರಲ್ಲಿ ಹಲವರು ಈಗಾಗಲೇ ವೈದ್ಯಕೀಯ ಉಪಕರಣ, ಔಷಧಿ ಮತ್ತಿತರ ಕೊರೊನಾವೈರಸ್ ಮಹಾಮಾರಿಯ ವಿರುದ್ಧ ಹೋರಾಟಕ್ಕೆ ಬೇಕಾಗುವ ಸಲಕರಣೆಗಳ ಉತ್ಪಾದಕರು ಹಂಚಿಕೆದಾರರು ಅಮೆರಿಕದ ದಿಗ್ಬಂಧನ ಧಿಕ್ಕರಿಸಿ ಇವನ್ನು ಇರಾನಿಗೆ ಕಳಿಸಲು ಮನವಿ ಮಾಡಿದ್ದಾರೆ. ಇದರ ಸುತ್ತಜಾಗತಿಕ ಚಳುವಳಿಯನ್ನು ಹರಿಯಬಿಡಲು ಪ್ರಯತ್ನಿಸುತ್ತಿದ್ದಾರೆ.
ಅಮೆರಿಕದ ದಿಗ್ಬಂಧನವನ್ನು ಧಿಕ್ಕರಿಸಿ ಚೀನಾ ಈಗಾಗಲೇ ಇರಾನಿಗೆ ವೈದ್ಯಕೀಯ ನೆರವು ಕಳಿಸುತ್ತಾ ಬಂದಿದೆ. ಅಮೆರಿಕಕ್ಕೆ ದಿಗ್ಬಂಧನವನ್ನು ಹಿಂತೆಗೆಯಬೇಕೆಂದು ಸಹ ಅದು ಆಗ್ರಹಪಡಿಸಿದೆ. ರಶ್ಯ ಸಹ ಅದೇ ಆಗ್ರಹವನ್ನು ಮಾಡಿದೆ. “ಜಾಗತಿಕ ಮಹಾಮಾರಿಯ ಸಮಯ, ಪ್ರಾದೇಶಿಕ-ರಾಜಕೀಯ ಮೇಲಾಟದಲ್ಲಿ ತೊಡಗುವ ಸಮಯವಲ್ಲ. ಅದೂ ಯಾವುದೇ ಆಧಾರವಿಲ್ಲದ ತನ್ನ ಹಿತಾಸಕ್ತಿ ಕಾಪಾಡಲು ಅಮೆರಿಕದಲ್ಲಿ ಉತ್ಪಾದಿಸಲಾದ ಆಪಾದನೆಗಳನ್ನು ಮಾಡುತ್ತಾಕೂಡುವ ಸಮಯವಲ್ಲ” ಎಂದು ರಶ್ಯದ ವಿದೇಶ ಸಚಿವಾಲಯ ಹೇಳಿದೆ. ಇರಾನಿನ ಕೊರೊನಾವೈರಸ್ ಮಹಾಮಾರಿಗೆ ಬಲಿಯಾದವರಲ್ಲಿ ಅಮೆರಿಕದ ದಿಗ್ಬಂಧನಕ್ಕೆ ಬಲಿಯಾದವರೇ ಹೆಚ್ಚು. ಅದನ್ನು ಹಿಂತೆಗೆಯದಿದ್ದರೆ ಅದರ ಬಲಿಗಳ ಸಂಖ್ಯೆ ಹೆಚ್ಚಲಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
(ಈ ವಾರದ ಜನಶಕ್ತಿ ವಾಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ19 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ